Police Alert | ಅಂಡರ್‌ ಪಾಸ್‌ಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ ಎಂಬ ಆದೇಶ ವಾಪಸ್‌ಗೆ ಒತ್ತಾಯ - Vistara News

ಕ್ರೈಂ

Police Alert | ಅಂಡರ್‌ ಪಾಸ್‌ಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ ಎಂಬ ಆದೇಶ ವಾಪಸ್‌ಗೆ ಒತ್ತಾಯ

ಅಂಡರ್‌ಪಾಸ್‌ಗಳಲ್ಲಿ ವಾಹನ ನಿಲ್ಲಿಸಿದರೆ ಕೇಸ್‌ ಹಾಕಲಾಗುವುದು ಎಂಬ ಟ್ರಾಫಿಕ್‌ ಪೊಲೀಸ್‌(Police Alert) ಆಯುಕ್ತರ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.

VISTARANEWS.COM


on

Police Alert
ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿದ ಕರ್ನಾಟಕ ಸ್ಟೇಟ್‌ ಮೊಟರಿಸ್ಟ್ಸ್‌ ಅಸೋಸಿಯೇಶನ್‌ ಸದಸ್ಯರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಳೆ ಬಂದಾಗ ನಗರದ ಕೆಳಸೇತುವೆ(ಅಂಡರ್‌ಪಾಸ್‌)ಗಳಲ್ಲಿ ವಾಹನ ನಿಲ್ಲಿಸಿದರೆ ವಾಹನ ಸವಾರರಿಗೆ ಇನ್ನು ಮುಂದೆ ದಂಡ ಬೀಳಲಿದೆ ಎಂದು ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ. ರವಿಕಾಂತೇಗೌಡ (Police Alert) ಹೇಳಿಕೆ ನೀಡಿದ್ದರು. ಈಗ ಇದೇ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ. ಸೂಚನೆ ಹಿಂಪಡೆಯಬೇಕೆಂಬ ಕೂಗು ಕೇಳಿ ಬಂದಿದೆ.

ಕೆಳಸೇತುವೆಗಳಲ್ಲಿ ವಾಹನ ನಿಲ್ಲಿಸುವುರಿಂದ ಉಂಟಾಗುವ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ನಿಯಂತ್ರಿಸಲು ಬೆಂಗಳೂರು ಟ್ರಾಫಿಕ್‌ ಪೊಲೀಸ್ (Police Alert) ಕಠಿಣ ಕ್ರಮ ಕೈಗೊಂಡಿತ್ತು. ಅಂಡರ್‌ಪಾಸ್‌ಗಳಲ್ಲಿ ಅಪಘಾತಗಳಾಗುವುದನ್ನು ತಪ್ಪಿಸಲು ನಗರದ ವಿಂಡ್ಸನ್ ಮ್ಯಾನರ್ ಬ್ರಿಡ್ಜ್, ನಾಯಂಡಹಳ್ಳಿ ಬ್ರಿಡ್ಜ್ ಅಂಡರ್ ಪಾಸ್ ಸೇರಿ ನಗರದ ಕೆಳಸೇತುವೆಗಳಲ್ಲಿ ವಾಹನ ನಿಲ್ಲಿಸಿದರೆ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇಲಾಖೆಯ ಕ್ರಮಕ್ಕೆ ಕರ್ನಾಟಕ ವಾಹನಿಗರ ಸಂಘ ವಿರೋಧ ವ್ಯಕ್ತಪಡಿಸಿದ್ದು, ಸೂಚನೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದೆ. ವಾಹನ ಸವಾರರ ಮೇಲೆ ಈ ರೀತಿಯ ಕ್ರಮ ಕೈಗೊಳ್ಳುವ ಮೊದಲು ಗುಂಡಿಭರಿತ ರಸ್ತೆಗಳನ್ನು ಸರಿಪಡಿಸಬೇಕು. ರಸ್ತೆಯಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಆಗ ಜನರೇ ಅಂಡರ್‌ಪಾಸ್‌ಗಳಲ್ಲಿ ವಾಹನ ನಿಲ್ಲಿಸದೇ ಜೀವಂತವಾಗಿ ಮನೆ ತಲಪಬಹುದು ಎಂದು ಕರ್ನಾಟಕ ಮೊಟರಿಸ್ಟ್ಸ್ಅಸೋಸಿಯೇಶನ್‌ನ ರಾಘವೇಂದ್ರ ತಿಳಿಸಿದ್ದಾರೆ.

ನಗರದ ರಸ್ತೆಗಳಲ್ಲಿ ಡಾಂಬರ್‌ಗಿಂತ ಗುಂಡಿಗಳೇ ಹೆಚ್ಚಾಗಿದೆ. ಜತೆಗೆ ಮಳೆ ಬಂದಾಗ ನೀರು ರಸ್ತೆಯಲ್ಲಿ ನಿಲ್ಲುತ್ತದೆ. ನೀರು ನಿಂತಾಗ ಗುಂಡಿಗಳು ಎಲ್ಲಿದೆ ಎಂಬುದೇ ಸವಾರರಿಗೆ ಕಾಣುವುದಿಲ್ಲ. ದ್ವಿಚಕ್ರ ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ಓಡಿಸಬೇಕು ಎಂದು ಕಿಡಿಕಾರಿದರು.

ಇದನ್ನೂ ಓದಿ | Police Alert | ಬೆಂಗಳೂರಿನ ಅಂಡರ್‌ಪಾಸ್‌ಗಳಲ್ಲಿ ವಾಹನ ನಿಲ್ಲಿಸಿದರೆ ಇನ್ನು ಬೀಳಲಿದೆ ಕೇಸ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Chitradurga News: ಚಿತ್ರದುರ್ಗದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ

Chitradurga News: ಚಿತ್ರದುರ್ಗದ ಕೆಳಗೋಟೆಯ ತಿಪ್ಪೇರುದ್ರಸ್ವಾಮಿ ಮಠದಲ್ಲಿ ಅನುಮಾನಸ್ಪದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆಯಾಗಿವೆ.

VISTARANEWS.COM


on

Murder Case
Koo

ಚಿತ್ರದುರ್ಗ: ನೀರಿನ‌ ತೊಟ್ಟಿ ಪಕ್ಕ ಅನುಮಾನಸ್ಪದವಾಗಿ ತಾಯಿ-ಮಗಳ ಶವ ಪತ್ತೆಯಾಗಿರುವ ಘಟನೆ ಚಿತ್ರದುರ್ಗದ (Chitradurga News) ಕೆಳಗೋಟೆಯ ತಿಪ್ಪೇರುದ್ರಸ್ವಾಮಿ ಮಠದಲ್ಲಿ ನಡೆದಿದ್ದು, ಶವಗಳನ್ನು ಕಂಡು ತಂದೆ-ಮಗ ಗಾಬರಿಯಾಗಿದ್ದಾರೆ. ನೀರಿನಲ್ಲಿ ಮುಳುಗಿ ತಾಯಿ, ಮಗಳು ಪ್ರಾಣಬಿಟ್ಟರಾ ಅಥವಾ ಕೊಲೆ ಮಾಡಲಾಗಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.

ಕೆಳಗೋಟೆ ನಿವಾಸಿ ಸುರೇಶ್ ಎಂಬುವವರ ಪತ್ನಿ ಗೀತಾ(42), ಮಗಳು ಪ್ರಿಯಾಂಕಾ(20) ಮೃತರು, ನಗರದ ಕೆಳಗೋಟೆ ತಿಪ್ಪೇರುದ್ರಸ್ವಾಮಿ ಮಠದ ತೊಟ್ಟಿ ಪಕ್ಕ ಮೃತರ ಶವಗಳು ಪತ್ತೆಯಾಗಿವೆ. ನೀರಿನಲ್ಲಿ ಮುಳುಗಿ ತಾಯಿ-ಮಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ಕೂಡ ವ್ಯಕ್ತವಾಗಿವೆ. ಸ್ಥಳಕ್ಕೆ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಇದನ್ನೂ ಓದಿ | Physical Abuse : ಇವನೆಂಥ ಗಂಡ! ಕಾಲ್‌ ಗರ್ಲ್‌ ಕರೆಸಿ ಪತ್ನಿ ಮುಂದೆಯೇ ಅಸಭ್ಯ ವರ್ತನೆ

ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

Theft Case in Bengaluru

ಬೆಂಗಳೂರು: ಬೈಯ್ಯಪ್ಪನಹಳ್ಳಿ ಪೊಲೀಸರು ನಟೋರಿಯಸ್ ಬೈಕ್ ಕಳ್ಳನನ್ನು (Theft Case) ಬಂಧಿಸಿದ್ದಾರೆ. ದೀಪಕ್ ಅಲಿಯಾಸ್‌ ದೀಪು ಬಂಧಿತ ಆರೋಪಿಯಾಗಿದ್ದಾನೆ. ದೀಪಕ್‌ ಸ್ವಿಗ್ಗಿ ಡೆಲಿವರಿ ಬಾಯ್ (Swiggy Boy) ಆಗಿ ಕೆಲಸ ಮಾಡುತ್ತಿದ್ದ. ಈತನ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಸುಮಾರು 14 ಪ್ರಕರಣ ದಾಖಲಾಗಿವೆ.

ಬೆಳಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ. ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಬೈಕ್‌ ಮಾರಾಟಕ್ಕೂ ಮೊದಲು ದಾಖಲಾತಿಯನ್ನೆಲ್ಲ ನಂತರ ಕೊಡುತ್ತೇನೆ ಎಂದು ಯಮಾರಿಸಿ, ಕಡಿಮೆ ಬೆಲೆಗೆ ಬೈಕ್ ಮಾರುತ್ತಿದ್ದ.

23 ವರ್ಷದ ದೀಪಕ್ ತನ್ನ 18ನೇ ವಯಸ್ಸಿನಲ್ಲೇ ಹತ್ತಕ್ಕೂ ಹೆಚ್ಚು ಗಾಡಿಗಳನ್ನು ಕದ್ದು ರಿಮ್ಯಾಂಡ್ ಹೋಮ್‌ ಸೇರಿದ್ದ. ಇಲ್ಲಿಂದ ಹೊರಬಂದ ದೀಪಕ್‌ ಹೊಸ ಜೀವನ ಕಟ್ಟಿಲಿಲ್ಲ, ಬದಲಿಗೆ ಈ ದಾರಿಯಲ್ಲಿ ಮತ್ತಷ್ಟು ಪಳಗಿ ನಟೋರಿಯಸ್‌ ಆಗಿದ್ದ. ದುಡಿಮೆ ಈತನಿಗೆ ಪಾರ್ಟ್ ಟೈಂ ಕೆಲಸವಾದರೆ, ಕದಿಯುವುದನ್ನೂ ಪ್ರವೃತ್ತಿ ಮಾಡಿಕೊಂಡಿದ್ದ.

ಬೆಂಗಳೂರಿನ ಬನಶಂಕರಿ ನಿವಾಸಿಯಾದ ದೀಪಕ್‌ಗೆ ತಂದೆ ಇಲ್ಲ. ತಾಯಿ ಇದ್ದರೂ ಅವರನ್ನು ಈತ ನೋಡಿಕೊಳ್ಳುತ್ತಿರಲಿಲ್ಲ. ದೀಪಕ್‌ ಹೆಚ್ಚು ಮಾವನ ಆಸರೆಯಲ್ಲೆ ಬೆಳೆದಿದ್ದ. ದೀಪಕ್ ಮಾವ ಮಂಜುನಾಥ್ ಅವರು ಬಿಜಿಎಸ್ ಮಠದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ನಂತರ ಅಮೇರಿಕಾದಲ್ಲಿರುವ ಬಿಜಿಎಸ್‌ನ ಬ್ರಾಂಚ್‌ಗೆ ಶಿಫ್ಟಾಗಿದ್ದರು. ಇದಾದ ಬಳಿಕವೇ ದೀಪಕ್ ದಾರಿ ತಪ್ಪಿದ್ದ. ಮೊದಲ ಬಾರಿ ಜೆಪಿ ನಗರದಲ್ಲಿ ರಾಬರಿ ಮಾಡಿ ರಿಮ್ಯಾಂಡ್ ಹೋಂ ಸೇರಿದ್ದ. ಒಮ್ಮೆ ಕಳ್ಳತನದ ರುಚಿ ಸವಿದ ನಂತರ ಇದನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದ. ಸುಮಾರು 73ಕ್ಕೂ ಹೆಚ್ಚು ಬೈಕ್ ಹಾಗೂ ಟಾಟಾ ಏಸ್ ಗಾಡಿ ಕದ್ದಿರುವುದು ಬೆಳಕಿಗೆ ಬಂದಿದೆ.

ಅಷ್ಟೆ ಅಲ್ಲದೆ ವಿದ್ಯಾರಣ್ಯಪುರದಲ್ಲಿ ಮನೆ ಕಳ್ಳತನ ಮಾಡಿ ಜೈಲು ಸೇರಿದವನು 15 ದಿನಗಳ ಹಿಂದಷ್ಟೇ ಹೊರ ಬಂದಿದ್ದ. ಜೈಲಿನಲ್ಲಿದ್ದಾಗ ರಘು ಅಲಿಯಾಸ್‌ ಪೆಪ್ಸಿ ಎಂಬಾತ ಪರಿಚಯವಾಗಿದ್ದ. ಕಳ್ಳತನಕ್ಕೆ ಒಂದಷ್ಟು ಮನೆಗಳನ್ನು ಹುಡುಕು ಎಂದಿದ್ದ ಎನ್ನಲಾಗಿದೆ. ಅದರಂತೆ ಈತ ಬನಶಂಕರಿಯಲ್ಲಿ ಮೂರ್ನಾಲ್ಕು ಮನೆಗಳನ್ನೂ ಹುಡುಕಿಕೊಟ್ಟಿದ್ದನಂತೆ. ಇನ್ನು ಈತ ಫುಲ್ ಟೈಂ ಕಳ್ಳನಾಗಿದ್ದು, ಸ್ವಿಗ್ಗಿ ಡೆಲಿವರಿ ಬಾಯ್‌ ಆಗಿ ಆಗಾಗ ಕೆಲಸ ಮಾಡುತ್ತಿದ್ದ. ಸ್ವಿಗ್ಗಿ ಡೆಲಿವರಿ ಮಾಡುತ್ತಾ ಮನೆಗಳನ್ನು ಹಾಗು ಬೈಕ್‌ಗಳನ್ನು ಗುರುತಿಸಿ, ರಾತ್ರಿ ವೇಳೆ ಕದಿಯುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ .‌

ಇದನ್ನೂ ಓದಿ | Robbery case : ಎಎಸ್‌ಐ ಬೈಕ್‌ ಎಗರಿಸಿ ಹೆದ್ದಾರಿಯಲ್ಲಿ ರಾಬರಿ; ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌

ಸದ್ಯ ಬೈಯ್ಯಪ್ಪನಹಳ್ಳಿ ಪೊಲೀಸರು ಈ ಖತರ್ನಾಕ್‌ ಕಳ್ಳನಿಂದ ಮೂರು ಲಕ್ಷ ಮೌಲ್ಯದ ಐದು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Continue Reading

ಬೆಂಗಳೂರು

Physical Abuse : ಇವನೆಂಥ ಗಂಡ! ಕಾಲ್‌ ಗರ್ಲ್‌ ಕರೆಸಿ ಪತ್ನಿ ಮುಂದೆಯೇ ಅಸಭ್ಯ ವರ್ತನೆ

Physical Abuse : ಅಶ್ಲೀಲ ವಿಡಿಯೋ ತೋರಿ ಅದೇ ರೀತಿ ಸೆಕ್ಸ್‌ ಮಾಡುವಂತೆ 2ನೇ ಪತಿ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಠಾಣೆ ಮೆಟ್ಟಿಲೇರಿದ್ದಾರೆ. ಮನೆಗೆ ಕಾಲ್‌ ಗರ್ಲ್‌ನ ಕರೆಸಿಕೊಂಡು ನನ್ನ ಎದುರು ಅಸಭ್ಯವಾಗಿ ವರ್ತಿಸುತ್ತಾನೆ. ಇತ್ತ ಅತ್ತೆ-ಮಾವ ಜತೆಯಾಗಿ ಸೇರಿಕೊಂಡು ಹಿಂಸೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

VISTARANEWS.COM


on

By

Physical Abuse From husband
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಿಕೃತ ಮನಸ್ಥಿತಿಯ ಪತಿಯೊಬ್ಬ ಲೈಂಗಿಕ ಕಿರುಕುಳ (Physical Abuse) ನೀಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್‌ ದೂರು ನೀಡಿದ್ದಾರೆ. ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಮಾದರಿಯಲ್ಲಿ ಸಂಭೋಗಕ್ಕೆ ಒತ್ತಾಯ ಮಾಡುತ್ತಿದ್ದಾನೆ. ಕಾಲ್‌ ಗರ್ಲ್ಸ್‌ಗಳನ್ನು ಮನೆಗೆ ಕರೆಸಿಕೊಂಡು, ತನ್ನ ಎದುರು ಅಸಭ್ಯವಾಗಿ ವರ್ತಿಸುತ್ತಾನೆ. ಇದರಿಂದ ಮಾನಸಿಕವಾಗಿ ಕಿರುಕುಳವಾಗುತ್ತಿದೆ ಎಂದು ನೊಂದ ಮಹಿಳೆಯೊಬ್ಬರು ಬಸವನಗುಡಿ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಸಂತ್ರಸ್ತೆ (28) ದೂರಿನನ್ವಯ ಪತಿ ವಿಘ್ನೇಶ್ವರನ್‌ (36), ಅತ್ತೆ ವಿಜಯಲಕ್ಷ್ಮೀ (60), ಮಾವ ಕಲೈ ಸೇಲ್ವನ್‌ (63), ನಾದಿನಿ ಪ್ರಿಯದರ್ಶಿನಿ (30) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಸಂತ್ರಸ್ತೆಗೆ ಈ ಹಿಂದೆಯೇ ಮದುವೆಯಾಗಿತ್ತು. ಆದರೆ, ಆ ಮದುವೆ ಇಷ್ಟವಾಗದೆ ಪತಿಯನ್ನು ತೊರೆದು ಹೈದರಾಬಾದ್‌ಗೆ ತೆರಳಿ ನೆಲೆಸಿದ್ದರು. ವೃತ್ತಿಯಲ್ಲಿ ಕಾಸ್ಮಟಾಲೋಜಿಸ್ಟ್‌ ಆಗಿದ್ದ ಮಹಿಳೆ ಕೆಲ ವರ್ಷಗಳ ಹಿಂದೆ ಚೆನ್ನೈ ಮೂಲದ ವಿಘ್ನೇಶ್ಚರನ್‌ ಪರಿಚಯವಾಗಿತ್ತು. ಗೆಳತನವು ಪ್ರೀತಿಗೆ ತಿರುಗಿ, ಮದುವೆ ಹಂತಕ್ಕೆ ತಲುಪಿತ್ತು.

ಇದನ್ನೂ ಓದಿ: Road Rage : ನಿಲ್ಲದ ರೋಡ್‌ ರೇಜ್; ನಿವೃತ್ತ ಬ್ರಿಗೇಡಿಯರ್ ಕಾರು ಅಡ್ಡಗಟ್ಟಿ ಬೆಲ್ಟ್‌ನಿಂದ ಹೊಡೆದು ಹಲ್ಲೆ

ಆಗ ವಿಘ್ನೇಶ್ವರನ್‌ ಮುಂದೆ ನಿಂತು ಸಂತ್ರಸ್ತೆಗೆ ಮೊದಲ ಪತಿಯಿಂದ ಡಿವೋರ್ಸ್‌ ಕೊಡಿಸಿದ್ದ. ಬಳಿಕ ಇಬ್ಬರ ಕುಟುಂಬಗಳ ಒಪ್ಪಿಗೆ ಪಡೆದು ಸಂತ್ರಸ್ತೆ ಹಾಗೂ ವಿಘ್ನೇಶ್ವರನ್ 2018ರಲ್ಲಿ ತಿರುಪತಿಯಲ್ಲಿ ಮದುವೆಯಾಗಿದ್ದಾರೆ. ಆರಂಭದಲ್ಲಿ ವಿಘ್ನೇಶ್ವರನ್‌ ಸಂತ್ರಸ್ತೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ.

ಆದರೆ ಬರಬರುತ್ತಾ ವಿಘ್ನೇಶ್ವರನ್‌ ನಡವಳಿಕೆ ವಿಕೃತಕ್ಕೆ ತಿರುಗಿತ್ತು. ಇತ್ತ ವಿಘ್ನೇಶ್ವರನ್‌ ಪೋಷಕರು ಆಗಾಗ ಮನೆಗೆ ಬಂದು ವಿನಾಕಾರಣ ಜಗಳ ತೆಗೆದು, ಚಾಡಿ ಹೇಳಿ ಹೋಗುತ್ತಿದ್ದರು. ಈ ನಡುವೆ ಸಂತ್ರಸ್ತೆಗೆ ಒಂದು ಗಂಡು ಮಗುವಾಗಿದ್ದು, ನಮ್ಮಿಬ್ಬರನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಮೊದಲ ಪತಿಯ ವಿಚಾರ ಪ್ರಸ್ತಾಪಿಸಿ ನಿಂದಿಸುವುದು, ಹೀಯಾಳಿಸುತ್ತಿದ್ದರು. ನಾದಿನಿ ಪ್ರಿಯಾದರ್ಶಿನಿ ನನ್ನ ಹಾಗೂ ಮಗುವಿಗೆ ಕೊಲೆ ಬೆದರಿಕೆ ಹಾಕಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪತಿ ವಿಘ್ನೇಶ್ವರನ್‌ ಅಶ್ಲೀಲ ವಿಡಿಯೋಗಳನ್ನು ತೋರಿಸಿ, ಆ ಮಾದರಿಯಲ್ಲಿ ಸೆಕ್ಸ್‌ ಮಾಡುವಂತೆ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿನಾಕಾರಣ ಜಗಳ ತೆಗೆದು ಹಲವು ಬಾರಿ ಹಲ್ಲೆ ಮಾಡಿದ್ದಾನೆ. 2023ರಲ್ಲಿ ಹೈದರಾಬಾದ್‌ನಿಂದ ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆತಂದಿದ್ದಾನೆ. ಇಲ್ಲಿಯೂ ಆತ ಸರಿಯಾಗಿ ನೋಡಿಕೊಳ್ಳದೆ ಕಿರಕುಳ ಮುಂದುವರೆಸಿದ್ದಾನಂತೆ. ಮನೆಗೆ ಕಾಲ್‌ ಗರ್ಲ್‌ಗಳನ್ನು ಕರೆಸಿಕೊಂಡು ಸಂತ್ರಸ್ತೆಯ ಎದುರು ಅಸಭ್ಯವಾಗಿ ವರ್ತಿಸಿ ಮಾನಸಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹಿಂದೆ ಪೊಲೀಸರಿಗೆ ದೂರು ನೀಡಿದ್ದಾಗ ಇನ್ನು ಮುಂದೆ ಹೀಗೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದ.

ಇದೀಗ ಮತ್ತೆ ನನಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಸದ್ಯ ಅತ್ತೆ, ಮಾವ, ನಾದಿನಿಯೂ ಸಹ ಹಿಂಸೆ ನೀಡುತ್ತಿದ್ದಾರೆ. ಸಂತ್ರಸ್ತೆ ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Rage : ನಿಲ್ಲದ ರೋಡ್‌ ರೇಜ್; ನಿವೃತ್ತ ಬ್ರಿಗೇಡಿಯರ್ ಕಾರು ಅಡ್ಡಗಟ್ಟಿ ಬೆಲ್ಟ್‌ನಿಂದ ಹೊಡೆದು ಹಲ್ಲೆ

Road Rage : ಬೆಂಗಳೂರಲ್ಲಿ ರೋಡ್ ರೇಜ್ ಪ್ರಕರಣಗಳು ಕಂಟ್ರೋಲ್‌ಗೆ ಸಿಗದಂತಾಗಿದೆ. ಇಲ್ಲಿಯವರೆಗೆ ಸಾರ್ವಜನಿಕರ ಮೇಲೆ ದರ್ಪ ತೋರಿಸುತ್ತಿದ್ದವರು, ಈಗ ಮಾಜಿ ಯೋಧರ ಮೇಲೆ ಹಲ್ಲೆ ನಡೆಸಿದ್ದಾರೆ. ಸುಖಾಸುಮ್ಮನೆ ಹಲ್ಲೆ ಮಾಡಿ ಕಿರಿಕ್‌ ಮಾಡಿದ ಕಿಡಿಗೇಡಿಗಳ ಮೇಲೆ ಕೇಸ್‌ ದಾಖಲಾಗಿದ್ದು, ಪೊಲೀಸರು ಹುಡುಕಾಟ ಶುರುಮಾಡಿದ್ದಾರೆ.

VISTARANEWS.COM


on

By

Road Rage in Bengaluru
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೋಡ್ ರೇಜ್ (Road Rage) ಕೇಸ್‌ಗಳು ಹೆಚ್ಚಾಗುತ್ತಿವೆ. ಪೊಲೀಸರ ಯಾವ ವಾರ್ನಿಂಗ್‌ಗಳು ಕೂಡ ವರ್ಕೌಟ್‌ ಆಗುತ್ತಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಬೆಂಗಳೂರಿನ ಬಿಇಎಲ್ ರಸ್ತೆಯಲ್ಲಿ ನಿವೃತ್ತ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ.

ಕಾರಿನಲ್ಲಿ ಹೋಗುತ್ತಿದ್ದ ರವಿ ಮುನಿಸ್ವಾಮಿಗೆ ಕಿಡಿಗೇಡಿಗಳು ಅಡ್ಡ ಹಾಕಿದ್ದಾರೆ. ಏನೆಂದು ಕೇಳಲು ರವಿ ಅವರು ಕಾರಿನ ಗ್ಲಾಸ್ ಇಳಿಸಿದ್ದಾರೆ. ಆಗ ಗಾಡಿ ಕೀ ಕಿತ್ತುಕೊಂಡು, ಅವಾಚ್ಯ ಶಬ್ಧಗಳಿಂದ ನಿಂದಿಸಿ ನಿವೃತ್ತ ಯೋಧನನ್ನು ಕಾರಿನಿಂದ ಹೊರಗೆಳೆದಿದ್ದಾರೆ. ಅಷ್ಟೆ ಅಲ್ಲದೆ ಮೂವರು ಸುತ್ತುವರಿದು ಬೆಲ್ಟ್ ಹಾಗೂ ಕೈಗಳಿಂದ ಹಲ್ಲೆ ನಡೆಸಿದ್ದಾರೆ.

ರವಿ ಮುನಿಸ್ವಾಮಿಯವರೇ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದಂತೆ ಅವರು ಹಲ್ಲೆ ನಡೆಸುತ್ತಿದ್ದ ವೇಳೆ ತನಗೆ ವಯಸಾದ ಕಾರಣ ನಾನು ಅಸಹಾಯಕನಾಗಿದ್ದೆ ಎಂದು ಹೇಳಿಕೊಂಡಿದ್ದಾರೆ. ಘಟನೆ ವೇಳೆ ಎದೆ ಭಾಗ, ಕೈ ಬೆರಳಿಗೆ ಗಾಯವಾಗಿದೆ. ಅಷ್ಟೆ ಅಲ್ಲದೆ ಆರೋಪಿಗಳು ಹಲ್ಲೆ ನಡೆಸಿ ಮೊಬೈಲ್‌ ಅನ್ನು ಒಡೆದು ಹಾಕಿದ್ದಾರೆಂದು ಆರೋಪಿಸಿದ್ದಾರೆ.

ರವಿ ಮುನಿಸ್ವಾಮಿ ನಿವೃತ್ತ ಬ್ರಿಗೇಡಿಯರ್ ಹಾಗೂ ಕಳೆದ ಬಾರಿ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಸದ್ಯ ಸದಾಶಿವನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Robbery case : ಎಎಸ್‌ಐ ಬೈಕ್‌ ಎಗರಿಸಿ ಹೆದ್ದಾರಿಯಲ್ಲಿ ರಾಬರಿ; ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌

ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

ಬೆಂಗಳೂರು: ಬೆಂಗಳೂರಲ್ಲಿ ಆಟೋ ಮೀಟರ್‌ಗೆ ಪ್ರಯಾಣಿಕರೊಬ್ಬರು (Auto Fare) ಬೆಚ್ಚಿ ಬಿದ್ದಿದ್ದಾರೆ. ಅಲಾಮ್ ಸುಲ್ತಾನ್ ಎಂಬಾತ ಮೆಜೆಸ್ಟಿಕ್‌ನಿಂದ ಆಟೋ ಹಿಡಿದು ಲಾಲ್ ಬಾಗ್‌ಗೆ ಬಂದು ಇಳಿದಿದ್ದರು. ಈ ವೇಳೆ ಆಟೋ ಮೀಟರ್‌ ಚಾರ್ಜ್‌ ಕಂಡು ಶಾಕ್‌ ಆಗಿದ್ದರು.

ಯಾಕಂದರೆ ಮೆಜೆಸ್ಟಿಕ್‌ನಿಂದ ಲಾಲ್‌ಬಾಗ್‌ 5 ರಿಂದ 6 ಕಿ.ಮೀ ಅಷ್ಟೇ ಅಂತರವಿದ್ದು, ಆಟೋ ಚಾರ್ಜ್‌ 400 ರೂಪಾಯಿ ತೋರಿಸಿತ್ತು. ಅಂದರೆ ಸೆಕೆಂಡ್‌ಗೆ 5 ರೂಪಾಯಿನಂತೆ ಮೀಟರ್ ಚಾರ್ಜ್‌ ಆಗಿತ್ತು. ಆಟೋ ಚಾಲಕನಿಗೆ ಅಲಾಮ್‌ ಇದನ್ನೂ ಪ್ರಶ್ನಿಸಿದ್ದಕ್ಕೆ 400 ರೂಪಾಯಿ ಆದರೂ ಡಬಲ್ ಮೀಟರ್ ಚಾರ್ಚ್ ಕೊಡಬೇಕೆಂದು ಡಿಮ್ಯಾಂಡ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲಾಮ್ ಸುಲ್ತಾನ್ ಈ ಬಗ್ಗೆ ಫೋಟೊ ಸಮೇತ ಪೊಲೀಸರಿಗೆ ಪೋಸ್ಟ್ ಮಾಡಿ ದೂರು ನೀಡಿದ್ದಾರೆ. ಇನ್ನೂ ಹೆಚ್ಚುವರಿ ಹಣ ಕೊಡದ ಹಿನ್ನೆಲೆಯಲ್ಲಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವ ಆರೋಪವೂ ಕೇಳಿ ಬಂದಿದೆ.

ಇದನ್ನೂ ಓದಿ: Theft Case : ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

ಟಿನ್‌ ಫ್ಯಾಕ್ಟರಿಯಿಂದ ಉಬರ್ ಆಟೋ ಹತ್ತಿದವನಿಗೆ 1 ಕೋಟಿ ರೂ. ಚಾರ್ಜ್‌

ಬೆಂಗಳೂರು: ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ಆ ವ್ಯಕ್ತಿ ತುರ್ತು ಕೆಲಸಕ್ಕೆಂದು ಉಬರ್‌ ಆಟೋ (Uber Auto) ಬುಕ್‌ ಮಾಡಿದ್ದರು. ಟಿನ್‌ ಫ್ಯಾಕ್ಟರಿಯಿಂದ ಆಟೋ ಹತ್ತಿ ಕೋರಮಂಗಲಕ್ಕೆ ಇಳಿದ ಪ್ರಯಾಣಿಕ (Uber Auto Fare) ತಬ್ಬಿಬ್ಬಾಗಿದ್ದರು. ಯಾಕೆಂದರೆ ಟಿನ್‌ ಫ್ಯಾಕ್ಟರಿಯಿಂದ ಕೋರಮಂಗಲಕ್ಕೆ ಜಸ್ಟ್‌ 15 ಕಿ.ಮೀ ದೂರದ ಪ್ರಯಾಣಕ್ಕೆ ಆಟೋ ಚಾರ್ಜ್‌ 500-1000 ರೂ. ಅಲ್ಲ ಬದಲಿಗೆ 1 ಕೋಟಿ ರೂ. (Uber Auto Fare) ತೋರಿಸಿತ್ತು.

ಆ್ಯಪ್ ಆಧಾರಿತ ಉಬರ್‌ ಆಟೋ ಬುಕ್‌ ಮಾಡಿ ಪ್ರಯಾಣಿಸಿದ ಆಂಧ್ರ ಪ್ರಯಾಣಿಕ ನಿಜಕ್ಕೂ ಕಕ್ಕಾಬಿಕ್ಕಿಯಾಗಿದ್ದರು. ಕೆಲಸ ನಿಮಿತ್ತ ಹೊರಹೋಗಲು ಉಬರ್ ಆಟೋ ಬುಕ್‌ ಮಾಡಿ ಟಿನ್‌ಫ್ಯಾಕ್ಟರಿಯಿಂದ ಆಟೋ ಹತ್ತಿ ಕೋರಮಂಗಲದಲ್ಲಿ ಬಂದು ಇಳಿದಿದ್ದರು. ಆಟೋ ಚಾರ್ಜ್‌ ಕೊಡೊಣಾ ಎಂದು ಪಾಕೆಟ್‌ನಿಂದ ಪರ್ಸ್‌ ತೆಗೆದು ಮೊಬೈಲ್‌ ನೋಡಿದಾಗ ಶಾಕ್‌ವೊಂದು ಕಾದಿತ್ತು.

Uber auto fare
ಪ್ರಯಾಣಿಕನಿಗೆ ಶಾಕ್‌

ಉಬರ್‌ ಆ್ಯಪ್‌ನಲ್ಲಿ ತೋರಿಸಿದ ಆಟೋ ಚಾರ್ಜ್‌ ನೋಡಿ, ಒಂದು ಕ್ಷಣ ತಲೆ ತಿರುಗುವಂತೆ ಮಾಡಿತ್ತು. ಯಾಕಂದರೆ ಟಿನ್‌ ಫ್ಯಾಕ್ಟರಿಯಿಂದ ಕೋರಮಂಗಲಗೆ 1,03,11,055 ರೂ. ಆಟೋ ಚಾರ್ಜ್ ತೋರಿತ್ತು. 207 ರೂ. ಆಗಿದ್ದ ಜಾಗದಲ್ಲಿ ಕೋಟಿ ರೂ. ನೋಡುತ್ತಿದ್ದಂತೆ ಬೆಚ್ಚಿಬಿದ್ದಿದ್ದ.

ಸದ್ಯ ಕೋಟಿ ರೂ. ಆಟೋ ಚಾರ್ಜ್‌ ತೋರಿಸುತ್ತಿದ್ದ ಉಬರ್ ಆ್ಯಪ್‌ನ ವಿಡಿಯೊ ಮಾಡಿ ಪ್ರಯಾಣಿಕ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇಂತಹ ಆ್ಯಪ್ ಆಧಾರಿತ ಆಟೋಗಳನ್ನು ಬಳಕೆ ಮಾಡದಂತೆ ಮನವಿ ಮಾಡಿದ್ದಾರೆ. ಕೂಡಲೇ ಇಂತಹ ಆ್ಯಪ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪ್ರಯಾಣಿಕರಿಂದ ಕಂಪೆನಿಗಳು ಹೇಗೆಲ್ಲ ಸುಲಿಗೆ ಮಾಡುತ್ತವೆ. 100-200ಪ್ರಯಾಣದ ಶುಲ್ಕಕ್ಕೆ 1 ಕೋಟಿ ರೂ. ತೋರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Robbery case : ಎಎಸ್‌ಐ ಬೈಕ್‌ ಎಗರಿಸಿ ಹೆದ್ದಾರಿಯಲ್ಲಿ ರಾಬರಿ; ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌

Robbery case : ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯ ಎಎಸ್‌ಐ ನಾಗರಾಜ್‌ರ ಬೈಕ್‌ ಕದ್ದು, ಅದರಲ್ಲೇ ದರೋಡೆ ಮಾಡುತ್ತಿದ್ದ ಗ್ಯಾಂಗ್‌ವೊಂದು ಅರೆಸ್ಟ್‌ ಆಗಿದೆ. ರಾತ್ರಿಯಾದರೆ ಹೆದ್ದಾರಿಗೆ ಬರುತ್ತಿದ್ದ ಈ ದರೋಡೆಕೋರರು ವಾಹನವನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದರು.

VISTARANEWS.COM


on

By

Robbery Case In Bengaluru
Koo

ಬೆಂಗಳೂರು: ಅದೊಂದು ರಾಬರಿ ಗ್ಯಾಂಗ್‌ (Robbery case) ಕಾಟಕ್ಕೆ ಹೆದ್ದಾರಿ ಸವಾರರು ಅಕ್ಷರಶಃ ಹೆದರಿದ್ದರು. ಹೆದ್ದಾರಿಯಲ್ಲಿ ಓಡಾಡುವ ವಾಹನಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ದರೋಡೆಕೋರರು ಕೃತ್ಯ ಎಸಗಿ ಕ್ಷಣಾರ್ಧದಲ್ಲಿ ಎಸ್ಕೇಪ್ ಆಗುತ್ತಿದ್ದರು. ಅದರಲ್ಲೂ ಪೊಲೀಸ್‌ ಗಾಡಿಯನ್ನೇ ಕದ್ದು, ಅದರಲ್ಲೇ ರಾಬರಿ ಮಾಡುತ್ತಿದ್ದ ಕಿರಾತಕರನ್ನು ಬಂಧಿಸಿದ್ದಾರೆ.

ಕಳೆದ ಮಾ. 31ರ ಮಧ್ಯರಾತ್ರಿ ದಾಬಸ್ ಪೇಟೆ ಬಳಿ ರಾಬರಿಯೊಂದು ನಡೆದಿತ್ತು. ಮಧ್ಯರಾತ್ರಿ 1-30ರ ಸುಮಾರಿಗೆ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕ್ಯಾಂಟರ್‌ ವಾಹನಕ್ಕೆ ಅಡ್ಡ ಹಾಕಿದ್ದರು. ಚಾಲಕನಿಗೆ ಚಾಕುವಿನಿಂದ ಇರಿದು, ಆತನ ಬಳಿ ಇದ್ದ ಮೊಬೈಲ್ ಕಸಿದುಕೊಂಡಿದ್ದರು. ನಂತರ ಗೂಗಲ್ ಪೇ, ಫೋನ್ ಪೇನ್‌ ಮೂಲಕ ಹಣವನ್ನೆಲ್ಲಾ ದೋಚಿದ್ದರು.

ಈ ಸಂಬಂಧ ಚಾಲಕ ದೂರು ನೀಡಿದ್ದ. ಪ್ರಕರಣ ದಾಖಲಿಸಿಕೊಂಡ ಬೆನ್ನಲ್ಲೆ ಪೊಲೀಸರು ವಿಶೇಷ ತಂಡವನ್ನು ರಚಿಸಿ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಗ್ಯಾಂಗ್‌ ಬೇರೆ ಕೇಸ್‌ಗಳಲ್ಲೂ ಭಾಗಿಯಾಗಿರುವ ವಿಚಾರ ತಿಳಿದುಬಂದಿದೆ. ಕಾಮಾಕ್ಷಿಪಾಳ್ಯ ಎಎಸ್‌ಐ ನಾಗರಾಜ್ ಅವರ ಬೈಕ್‌ ಕದ್ದು, ಅದರಲ್ಲೇ ರಾಬರಿ ಮಾಡಿರುವ ವಿಚಾರ ಕೂಡ ಬೆಳಕಿಗೆ ಬಂದಿದೆ. ಕಳೆದ ತಿಂಗಳ 28ರಂದು ಎಎಸ್‌ಐ ನಾಗರಾಜ್‌ ಅವರ ಬೈಕ್‌ ಕಳ್ಳತನವಾಗಿತ್ತು. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೇ ಬೈಕ್‌ ಬಳಸಿ ಹೆದ್ದಾರಿಯಲ್ಲಿ ರಾಬರಿ ಮಾಡಿರುವುದು ಬೆಳಕಿಗೆ ಬಂದಿದೆ.

ಸದ್ಯ ರಾಬರಿ ಗ್ಯಾಂಗ್‌ ಅನ್ನು ಪತ್ತೆ ಹಚ್ಚಿರುವ ದಾಬಸ್ ಪೇಟೆ ಪೊಲೀಸರು ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಸುಹೇಲ್, ಆದಿ, ವಿಜಯ್, ಧನುಷ್ ಸೇರಿ ಒಟ್ಟು ಆರು ಜನರ ಗ್ಯಾಂಗ್ ಪೊಲೀಸ್‌ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ ಬೈಕ್‌ ಸೇರಿ 6 ಮೊಬೈಲ್‌ಗಳು, ಮೂರುವರೆ ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Lok Sabha Election 2024 : ಜಯನಗರದಲ್ಲಿ ಸೀಜ್‌ ಆದ ಕೋಟ್ಯಂತರ ಹಣ; ಇಬ್ಬರ ವಿರುದ್ಧ ಎಫ್‌ಐಆರ್‌

ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

ಬೆಂಗಳೂರು: ಬೈಯ್ಯಪ್ಪನಹಳ್ಳಿ ಪೊಲೀಸರು ನಟೋರಿಯಸ್ ಬೈಕ್ ಕಳ್ಳನನ್ನು (Theft Case) ಬಂಧಿಸಿದ್ದಾರೆ. ದೀಪಕ್ ಅಲಿಯಾಸ್‌ ದೀಪು ಬಂಧಿತ ಆರೋಪಿಯಾಗಿದ್ದಾನೆ. ದೀಪಕ್‌ ಸ್ವಿಗ್ಗಿ ಡೆಲಿವರಿ ಬಾಯ್ (Swiggy Boy) ಆಗಿ ಕೆಲಸ ಮಾಡುತ್ತಿದ್ದ. ಈತನ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಸುಮಾರು 14 ಪ್ರಕರಣ ದಾಖಲಾಗಿವೆ.

ಬೆಳಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ ಬೈಕ್ ಕದಿಯುತ್ತಿದ್ದ. ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಬೈಕ್‌ ಮಾರಾಟಕ್ಕೂ ಮೊದಲು ದಾಖಲಾತಿಯನ್ನೆಲ್ಲ ನಂತರ ಕೊಡುತ್ತೇನೆ ಎಂದು ಯಮಾರಿಸಿ, ಕಡಿಮೆ ಬೆಲೆಗೆ ಬೈಕ್ ಮಾರುತ್ತಿದ್ದ.

ಸದ್ಯ ಬೈಯ್ಯಪ್ಪನಹಳ್ಳಿ ಪೊಲೀಸರು ಈ ಖತರ್ನಾಕ್‌ ಕಳ್ಳನಿಂದ ಮೂರು ಲಕ್ಷ ಮೌಲ್ಯದ ಐದು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Road Accident : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತಕ್ಕೆ ಮೂವರು ಬಲಿ, ಮತ್ತೋರ್ವ ಗಂಭೀರ

ಬುಲೆಟ್‌ ಬೈಕ್‌ ಕದಿಯಲು ಕಳ್ಳನ ಒದ್ದಾಟ

ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್‌ ಬೈಕ್ ಕಳ್ಳತನಕ್ಕೆ ಕಳ್ಳನೊಬ್ಬ ವಿಫಲ ಯತ್ನ ನಡೆಸಿದ್ದಾನೆ. ಬುಲೆಟ್ ಬೈಕ್‌ನ ಹ್ಯಾಂಡಲ್ ಲಾಕ್‌ ಕಾಲಿನಿಂದ ಒದ್ದು ಮುರಿಯಲು ಯತ್ನಿಸಿದ್ದಾನೆ. ಬೈಕ್ ಕದಿಯಲು ಕಳ್ಳನ ಒದ್ದಾಟವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಏಪ್ರಿಲ್‌ 14ರ ಮಧ್ಯರಾತ್ರಿ 2:25ರ ಸುಮಾರಿಗೆ ಕಳ್ಳನೊಬ್ಬ ಬೆಂಗಳೂರಿನ ಜೆ.ಪಿ ನಗರದ ಮನೆ ಬಳಿ ಬಂದಿದ್ದ. ಒಂದೆರಡು ನಿಮಿಷ ಬುಲೆಟ್‌ ಬೈಕ್‌ ಅನ್ನೇ ನೋಡುತ್ತಾ, ಜತೆಗೆ ಧರಿಸಿದ್ದ ಟೀ ಶರ್ಟ್‌ನಲ್ಲೇ ಮುಖವನ್ನು ಮುಚ್ಚಿಕೊಂಡಿದ್ದ. ನಂತರ ಬುಲೆಟ್‌ ಬೈಕ್‌ ಏರಿ ಕುಳಿತು ಅತ್ತಿಂದಿತ್ತ ಕಣ್ಣಾಡಿಸಿ ಕಾಲಿನಿಂದ ಒದ್ದು ಹ್ಯಾಂಡಲ್‌ ಮುರಿಯಲು ಯತ್ನಿಸಿದ್ದಾನೆ. ಹೀಗೆ ನಾಲ್ಕೈದು ಬಾರಿ ಪ್ರಯತ್ನಿಸಿದ ನಂತರ ಮತ್ತ ಮನೆ ಮುಂದೆಯೇ ಬೈಕ್‌ ನಿಲ್ಲಿಸಿ, ಬಂದ ದಾರಿಗೆ ಸುಂಕವಿಲ್ಲ ಎಂದು ತಿಳಿದು ಹೊರಟು ಹೋಗಿದ್ದಾನೆ. ಸದ್ಯ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
UPSC Results 2023
ದೇಶ14 mins ago

ವಿಸ್ತಾರ ಸಂಪಾದಕೀಯ: ಯುಪಿಎಸ್‌ಸಿ ಸಾಧಕರ ಕತೆಗಳು ಇತರರಿಗೆ ಸ್ಫೂರ್ತಿಯಾಗಲಿ

Ram Navami
ಪ್ರಮುಖ ಸುದ್ದಿ23 mins ago

Ram Navami : ಇಂದು ದೇಶಾದ್ಯಂತ ರಾಮ ನವಮಿ ಸಂಭ್ರಮ; ಏನು ಈ ದಿನದ ಮಹತ್ವ?

State Administrative Reforms Commission Chairman R V Deshpande statement
ಉತ್ತರ ಕನ್ನಡ38 mins ago

Lok Sabha Election 2024: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ: ಆರ್.ವಿ.ದೇಶಪಾಂಡೆ

IPL 2024
ಪ್ರಮುಖ ಸುದ್ದಿ42 mins ago

IPL 2024 : ಬಟ್ಲರ್ ಮುಂದೆ ಮಂಕಾದ ನರೈನ್​; ಕೆಕೆಆರ್ ವಿರುದ್ಧ ಆರ್​​ಆರ್​ಗೆ 2 ವಿಕೆಟ್ ಜಯ

Murder Case
ಕರ್ನಾಟಕ55 mins ago

Chitradurga News: ಚಿತ್ರದುರ್ಗದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ

amith shah
ದೇಶ1 hour ago

Amit Shah: ಶೀಘ್ರದಲ್ಲೇ ಭಾರತ ನಕ್ಸಲ್‌ ಮುಕ್ತವಾಗಲಿದೆ; ಅಮಿತ್ ಶಾ

Nitin Gadkari
ದೇಶ2 hours ago

Nitin Gadkari : ನಾಗ್ಪುರ ಕ್ಷೇತ್ರಕ್ಕೆ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ ನಿತಿನ್ ಗಡ್ಕರಿ

UPSC Results 2023
ಕರ್ನಾಟಕ2 hours ago

UPSC Results 2023: ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದ ಶಾಂತಪ್ಪ ಕುರುಬರ; ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿಕೊಂಡ ಸಾಧಕ!

Dalip Singh Majithia
ಪ್ರಮುಖ ಸುದ್ದಿ2 hours ago

Dalip Singh Majithia : 2ನೇ ಮಹಾಯುದ್ಧದಲ್ಲಿ ಸೇವೆ ಸಲ್ಲಿಸಿದ ಐಎಎಫ್ ಯೋಧ 103 ನೇ ವಯಸ್ಸಿನಲ್ಲಿ ನಿಧನ

Ayodhya Ram Mandir
ದೇಶ2 hours ago

Ayodhya Ram Mandir: ನಾಳೆ ಅಯೋಧ್ಯೆ ಶ್ರೀರಾಮನಿಗೆ ಸೂರ್ಯ ತಿಲಕ; ಮನೆಯಲ್ಲೇ ಕೂತು ಹೀಗೆ ಕಣ್ತುಂಬಿಕೊಳ್ಳಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ20 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20242 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ5 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20246 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌