Police extortion: ಪಾರ್ಕ್‌ನಲ್ಲಿ ಕುಳಿತಿದ್ದ ಯುವತಿಯ ಸುಲಿಗೆ ಮಾಡಿದ ಪೊಲೀಸಪ್ಪ - Vistara News

ಕ್ರೈಂ

Police extortion: ಪಾರ್ಕ್‌ನಲ್ಲಿ ಕುಳಿತಿದ್ದ ಯುವತಿಯ ಸುಲಿಗೆ ಮಾಡಿದ ಪೊಲೀಸಪ್ಪ

ರಾಜಧಾನಿಯ ಸಂಪಿಗೆಹಳ್ಳಿ, ಆಡುಗೋಡಿ ಪೊಲೀಸರಿಂದ ಸಾರ್ವಜನಿಕರ ಸುಲಿಗೆ ಪ್ರಕರಣ ಮಾಸುವ ಮುನ್ನ ಮತ್ತೊಂದು ಘಟನೆ ನಡೆದಿದೆ. ಪಾರ್ಕ್‌ನಲ್ಲಿ ಕುಳಿತಿದ್ದ ಯುವತಿಯಿಂದ ಪೊಲೀಸನೊಬ್ಬ ಸುಲಿಗೆ ಮಾಡಿದ್ದಾನೆ.

VISTARANEWS.COM


on

Police extortion
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯ ಸಂಪಿಗೆಹಳ್ಳಿ, ಆಡುಗೋಡಿ ಪೊಲೀಸರಿಂದ ಸಾರ್ವಜನಿಕರ ಸುಲಿಗೆ ಪ್ರಕರಣ ಮಾಸುವ ಮುನ್ನ ಮತ್ತೊಂದು ಘಟನೆ ನಡೆದಿದೆ. ಪಾರ್ಕ್‌ನಲ್ಲಿ ಕುಳಿತಿದ್ದ ಯುವತಿಯಿಂದ ಪೊಲೀಸನೊಬ್ಬ ಸುಲಿಗೆ ಮಾಡಿದ್ದಾನೆ.

ಯುವತಿ ಬಳಿ ಒಂದು ಸಾವಿರ ರೂಪಾಯಿ ಸುಲಿಗೆ ಮಾಡಿರುವ ಬಗ್ಗೆ ಟ್ವಿಟರ್‌ನಲ್ಲಿ ಯುವತಿ ಅಳಲು ತೋಡಿಕೊಂಡಿದ್ದಾರೆ. ಇದು ಜನವರಿ 29ರಂದು ನಡೆದಿರುವ ಘಟನೆ. ವೈಟ್‌ಫೀಲ್ಡ್ ವಿಭಾಗದ ಕುಂದನಹಳ್ಳಿ ಲೇಕ್ ಪಾರ್ಕ್‌ನಲ್ಲಿ ಘಟನೆ ನಡೆದಿದೆ. ಅರ್ಷ ಲತೀಫ್‌ ಹಾಗೂ ಆಕೆಯ ಗೆಳೆಯ ಕುಂದನಹಳ್ಳಿ ಲೇಕ್ ಪಾರ್ಕ್ ಕುಳಿತಿದ್ದರು. ಈ ವೇಳೆ ಸ್ಥಳಕ್ಕೆ ಬಂದು ಯುವತಿ ಹಾಗೂ ಆಕೆಯ ಗೆಳೆಯನ ಪೋಟೋವನ್ನು ಪೊಲೀಸಪ್ಪ ಕ್ಲಿಕ್ಕಿಸಿದ್ದ.

Police extortion
#image_title

ನಂತರ ಸ್ಥಳದಲ್ಲೇ ವಿಚಾರಣೆ ಮಾಡಿ ಸ್ಟೇಷನ್‌ಗೆ ಬರುವಂತೆ ಹೆದರಿಸಿದ್ದ. ಪಾರ್ಕ್‌ನಲ್ಲಿ ಕುಳಿತುಕೊಳ್ಳಲು ಪರ್ಮಿಷನ್ ಬೇಕು. ಠಾಣೆಗೆ ಬಂದ್ರೆ ಹಿರಿಯ ಅಧಿಕಾರಿಗಳಿಗೆ ಉತ್ತರಿಸಬೇಕಾಗುತ್ತೆ. ಇಲ್ಲೇ ಆದರೆ ಸಾವಿರ ರೂ. ಫೈನ್ ಕಟ್ಟುವಂತೆ ಹೇಳಿದ್ದ. ಯುವತಿ ಹಾಗೂ ಆಕೆಯ ಗೆಳೆಯ ಹೆದರಿ 1000 ರೂಪಾಯಿ ದುಡ್ಡು ಕೊಟ್ಟಿದ್ದರು. ಘಟನೆಯಿಂದ ಬೇಸತ್ತ ಅರ್ಷ ಲತೀಫ್‌ ಪೊಲೀಸರ ನಡವಳಿಕೆ ಕುರಿತು ಟ್ವಿಟರ್‌ನಲ್ಲಿ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Hoysala Police Corruption | ಮಧ್ಯರಾತ್ರಿ ಪಾರ್ಟಿ ಮುಗಿಸಿ ಬರುತ್ತಿದ್ದ ದಂಪತಿಯನ್ನು ತಡೆದು ಹಣ ಸುಲಿಗೆ, ಇಬ್ಬರು ಹೊಯ್ಸಳ ಪೊಲೀಸರು ಮನೆಗೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಶಾಸಕ ಹರೀಶ್ ಪೂಂಜಾರನ್ನು ಅರೆಸ್ಟ್‌ ಮಾಡದೇ ವಾಪಸ್‌ ಹೋದ ಪೊಲೀಸರು!

Harish Poonja: ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಶಾಸಕ ಹರೀಶ್‌ ಪೂಂಜಾ ಅವರು ಬೆದರಿಕೆಯನ್ನು ಹಾಕಿದ್ದರು. ಈ ಸಂಬಂಧ ವಿಡಿಯೊಗಳು ಎಲ್ಲೆಡೆ ವೈರಲ್‌ ಆಗಿದ್ದವು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಇದೀಗ ಪೊಲೀಸರು ಬುಧವಾರ ಮಧ್ಯಾಹ್ನ ಶಾಸಕರ ನಿವಾಸಕ್ಕೆ ಆಗಮಿಸಿ ಬಂಧಿಸಲು ಮುಂದಾಗಿದ್ದರು. ಆದರೆ, ಬಿಜೆಪಿ ಕಾರ್ಯಕರ್ತರು, ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ಅಲ್ಲಿಂದ ತೆರಳಿದ್ದಾರೆ.

VISTARANEWS.COM


on

Harish Poonja case Belthangady BJP MLA Harish Poonja arrested for taunting police
Koo

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿರುವ ಬೆನ್ನಲ್ಲೇ ಅವರನ್ನು ಬಂಧಿಸಲು ಪೊಲೀಸರು ನಡೆಸಿದ ಪ್ರಹಸನ ವಿಫಲವಾಗಿದೆ. ಮಧ್ಯಾಹ್ನದಿಂದ ಅವರ ಮನೆಯಲ್ಲಿ ಠಿಕಾಣಿ ಹೂಡಿದ್ದ ಪೊಲೀಸರು, ಕೊನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ರಾತ್ರಿ 7.15ರ ಸುಮಾರಿಗೆ ವಾಪಸಾಗಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ (Illegal quarrying) ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ಮನೆಯಲ್ಲಿ ಬುಧವಾರ ಹೈಡ್ರಾಮಾವೇ ನಡೆಯಿತು.

ಈ ಸಂಬಂಧ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿತ್ತಿಲದಲ್ಲಿರುವ ಶಾಸಕ ಹರೀಶ್ ಪೂಂಜಾ ಮನೆಗೆ ಬುಧವಾರ (ಮೇ 22) ಮಧ್ಯಾಹ್ನದ ವೇಳೆಗೆ ಪೊಲೀಸರು ಆಗಮಿಸಿದ್ದರು. ಸರ್ಕಲ್ ಇನ್ಸ್‌ಪೆಕ್ಟರ್‌ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ಆಗಮಿಸಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಧಾವಿಸಿ, ಆಕ್ರೋಶವನ್ನು ಹೊರಹಾಕಿದರು.

Harish Poonja case Belthangady BJP MLA Harish Poonja arrested for taunting police

ಮನೆ ಮುಂದೆ ಹೈಡ್ರಾಮಾ

ಹರೀಶ್ ಪೂಂಜ ಬಂಧನಕ್ಕೆ ಪೊಲೀಸರು ಬಂದಿದ್ದರಿಂದ ಗರ್ಡಡಿ ಹರೀಶ್ ಪೂಂಜ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿತು. ಪೊಲೀಸರ ಜತೆ ವಕೀಲರ ತಂಡದಿಂದ ಮಾತುಕತೆ ನಡೆಸಲಾಯಿತು. ಈ ವೇಳೆ ನಿರಂತರವಾಗಿ ಚರ್ಚೆ ನಡೆದಿದ್ದು, ಪೊಲೀಸ್‌ ಕ್ರಮ ತಪ್ಪು ಎಂದು ವಕೀಲರು ವಾದಿಸಿದರು. ಈ ವೇಳೆ ಮನೆಯ ಹೊರಗಡೆ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದರು. ಅಲ್ಲದೆ, ಪೊಲೀಸರು ಹಾಗೂ ಕಾರ್ಯಕರ್ತರ ನಡುವಿನ ಹೈ ಡ್ರಾಮಾಕ್ಕೆ ಪೂಂಜ ನಿವಾಸವು ಸಾಕ್ಷಿಯಾಯಿತು. ಇನ್ನು ಪೂಂಜಾ ನಿವಾಸದತ್ತ ಸಂಸದ ನಳಿನ್ ಕುಮಾರ್ ಕಟೀಲ್, ಬ್ರಿಜೇಶ್ ಚೌಟ ದೌಡಾಯಿಸಿದರು. ರಾಜ್ಯ ಸರ್ಕಾರದ ನಡೆಯನ್ನು ಅವರು ತೀವ್ರವಾಗಿ ಖಂಡಿಸಿದರು. ಬಂಧನ ಮಾಡಿದ್ದೇ ಆದಲ್ಲಿ ಮಂಗಳೂರು ಬಂದ್‌ ಮಾಡುವ ಎಚ್ಚರಿಕೆಯನ್ನು ನೀಡಿದರು.

ನೋಟಿಸ್ ಇಲ್ಲದೇ ಅರೆಸ್ಟ್ ಮಾಡುವುದು ಅಪರಾಧ

ಈ ವೇಳೆ ಶಾಸಕ ಹರೀಶ್ ಪೂಂಜಾ ಪರ ವಕೀಲ ಶಂಭು ಶಂಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ವಿಚಾರಣೆಗೆ ಕರೆದುಕೊಂಡು ಹೋಗಲು ಬಂದಿದ್ದಾಗಿ ಪೊಲೀಸರು ಹೇಳಿದ್ದಾರೆ. ನಿಯಮ ಪ್ರಕಾರ ಆ ಕ್ರಮ ಇಲ್ಲ. ಪೊಲೀಸರು ಮನೆಗೆ ಒಳಗೆ ಕುಳಿತಿದ್ದಾರೆ. ನೋಟಿಸ್ ಈವರೆಗೆ ಕೊಟ್ಟಿಲ್ಲ. ಶಾಸಕರು ಅವರ ಕೆಲಸ ಮಾಡದ ಹಾಗೆ ಮಾಡಿದ್ದಾರೆ. ಮನೆಯಲ್ಲಿಯೇ ಕೂಡಿ ಹಾಕಿದ ಹಾಗೆ ಮಾಡಿದ್ದಾರೆ. ಒತ್ತಡಕ್ಕೆ ಮಣಿದು ಪೊಲೀಸರು ಇಲ್ಲಿಯೇ ಕುಳಿತಿದ್ದಾರೆ. ನೋಟಿಸ್ ಇಲ್ಲದೆ ಅರೆಸ್ಟ್ ಮಾಡುವುದು ಅಪರಾಧ ಎಂದು ಹೇಳಿದ್ದಾರೆ.

ಯಾವುದೇ ನೋಟಿಸ್ ನೀಡದೆ, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆಯುವಂತಿಲ್ಲ. ಅದು ಕಾನೂನು ಬಾಹಿರವಾಗುತ್ತದೆ. ಅಲ್ಲದೆ, ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. ಅದರಲ್ಲಿ ಕೆಲವು ಸೆಕ್ಷನ್ ನಾನ್ ಬೇಲಬಲ್ ಸೆಕ್ಷನ್‌ಗಳಿವೆ. ಸುಪ್ರೀಂ ಕೋರ್ಟ್‌ನ ಈ ಹಿಂದಿನ ಆದೇಶದ ಪ್ರಕಾರ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗುವ ಪ್ರಕರಣಗಳಲ್ಲಿ ಬಂಧನ ಅನಿವಾರ್ಯವಲ್ಲ. ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಬಂಧನ ಮಾಡಲು ಅವಕಾಶವಿರುತ್ತದೆ. ಆದರೆ, ಎಲ್ಲ ಪ್ರಕರಣಗಳಲ್ಲೂ ಬಂಧನ ಅಗತ್ಯವಿಲ್ಲ. ವಿಚಾರಣೆಗೆ ಕರೆಯಲು ಪೇದೆಯ ಮೂಲಕ ನೋಟಿಸ್ ನೀಡಬಹುದು. ಆದರೆ ಹಿರಿಯ ಅಧಿಕಾರಿಗಳು ಬರುವ ಅಗತ್ಯತೆ ಏನಿದೆ? ಇದು ಶಾಸಕ ಪೂಂಜಾ ವಿರುದ್ಧ ಟಾರ್ಗೆಟ್ ಮಾಡಿ ಬಂಧಿಸುವ ಹುನ್ನಾರ ಆಗಿದೆ. ನೋಟಿಸ್ ನೀಡಲು ಕೇಳಿದ್ದೇವೆ. ಈ ವರೆಗೂ ನೋಟಿಸ್ ನೀಡಿಲ್ಲ ಎಂದು ವಕೀಲ ಶಂಭು ಶಂಕರ್ ಆಪಾದಿಸಿದರು.

Harish Poonja case Belthangady BJP MLA Harish Poonja arrested for taunting police

ವಿಡಿಯೊ ಸ್ಟೇಟಸ್‌ಗೆ ಹಾಕಿದ್ದ ಪೋಲಿಸ್‌ನನ್ನು ಆಚೆ ಕಳಿಸಿದ ಶಾಸಕ!

ಈ ವೇಳೆ ಪೊಲೀಸ್ ಠಾಣೆ ನಿಮ್ಮ ಅಪ್ಪಂದ ಎಂದು ಶಾಸಕ ಹರೀಶ್ ಪೂಂಜಾ ಅವಾಜ್‌ ಹಾಕುತ್ತಿದ್ದ ದೃಶ್ಯವನ್ನು ವಿಡಿಯೊ ಮಾಡಿ ಮೊಬೈಲ್‌ನಲ್ಲಿ ಸ್ಟೇಟಸ್‌ ಹಾಕಲಾಗಿದ್ದ ಪೊಲೀಸ್‌ ಸಿಬ್ಬಂದಿ ಆನಂದ್‌ ಅವರು ಶಾಸಕರ ಮನೆಗೆ ಬಂದರು. ಅವರನ್ನು ನೋಡಿ ಕೆರಳಿದ ಶಾಸಕ ಹರೀಶ್‌ ಪೂಂಜಾ, ಆನಂದ್‌ಗೆ ಮನೆಯಿಂದ ಹೊರಗೆ ಹೋಗು ಎಂದು ಸೂಚಿಸಿದರು. ಅಲ್ಲಿಯೇ ಇದ್ದ ಹಿರಿಯ ಅಧಿಕಾರಿಗಳತ್ತ ತಿರುಗಿ, ಇವನನ್ನು ಹೊರಗೆ ಕಳುಹಿಸಿ, ಜನ ಇದ್ದಾರೆ. ಗಲಾಟೆ ಮಾಡ್ತಾರೆ ಅಂತಾ ಅಧಿಕಾರಿಗಳಿಗೆ ಹೇಳಿದರು. ಬಳಿಕ ಸೆಕ್ಯುರಿಟಿ ಕೊಟ್ಟು ಅಲ್ಲಿಂದ ಆನಂದ್ ಅವರನ್ನು ಪೊಲೀಸರು ಕರೆದೊಯ್ದರು.

ಹರೀಶ್ ಪೂಂಜಾಗೆ ನೋಟಿಸ್ ಜಾರಿ

ಶಾಸಕ ಹರೀಶ್ ಪೂಂಜಾ ಅವರಿಗೆ ಇನ್ನೂ ನೋಟಿಸ್‌ ಕೊಟ್ಟಿಲ್ಲ ಎಂದು ಅವರ ಪರ ವಕೀಲರು ಆರೋಪ ಮಾಡಿದ ಬೆನ್ನಲ್ಲೇ ವಿಟ್ಲ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ ಮತ್ತು ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಅವರು ನೋಟಿಸ್ ಜಾರಿ ಮಾಡಿದ್ದಾರೆ. ತನಿಖಾಧಿಕಾರಿಗಳ ಜತೆ ಠಾಣೆಗೆ ಬರಲು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಹೀಗಾಗಿ ರಾತ್ರಿವರೆಗೂ ಬಂಧನಕ್ಕಾಗಿ ಪೊಲೀಸರು ಕಾದರು. ಈ ವೇಳೆ ಶಾಸಕರ ಮನೆಗೆ ಹೆಚ್ಚಿನ ಪೊಲೀಸರನ್ನು ಕರೆಸಿಕೊಳ್ಳಲಾಯಿತು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಮುಖಂಡರು ಇನ್ನಷ್ಟು ರೋಷಗೊಂಡರು. ಅಂತಿಮವಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಮೂಲಕ ಸೂಚಿಸಿ ಪೊಲೀಸರು ಅಲ್ಲಿಂದ ತೆರಳಿದರು.

ಏನಿದು ಕೇಸ್‌?

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬುವವರನ್ನು ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ | Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

Continue Reading

ಕ್ರೈಂ

Jayashree Gurannavar: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅನಾರೋಗ್ಯದಿಂದ ನಿಧನ

Jayashree Gurannavar: ಉತ್ತರ ಕರ್ನಾಟಕ ಭಾಗದಲ್ಲಿ ರೈತ ಪರ ಹೋರಾಟ ಮಾಡುತ್ತಾ ಗುರುತಿಸಿಕೊಂಡಿದ್ದ ಜಯಶ್ರೀ ಗುರನ್ನವರ್ ಅವರು, ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟದ ಮೂಲಕ ಗಮನ ಸೆಳೆದಿದ್ದರು.

VISTARANEWS.COM


on

Jayashree Gurannavar
Koo

ಬೆಳಗಾವಿ: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್(40) ಅವರು ಅನಾರೋಗ್ಯದಿಂದ ಬುಧವಾರ ನಿಧನರಾದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರೈತ ಹೋರಾಟಗಾರ್ತಿ(Jayashree Gurannavar), ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಉತ್ತರ ಕರ್ನಾಟಕ ಭಾಗದಲ್ಲಿ ರೈತ ಪರ ಹೋರಾಟ ಮಾಡುತ್ತಾ ಗುರುತಿಸಿಕೊಂಡಿದ್ದ ಜಯಶ್ರೀ ಅವರು, ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟದ ಮೂಲಕ ಗಮನ ಸೆಳೆದಿದ್ದರು. ಇವರಿಗೆ ಒಬ್ಬ ಮಗ ಇದ್ದಾನೆ.

ಇದನ್ನೂ ಓದಿ | Gas Leak deaths: ಮುಚ್ಚಿದ ಮನೆಯಲ್ಲಿ ಗ್ಯಾಸ್‌ ಸೋರಿಕೆ, ನಿದ್ರೆಯಲ್ಲೇ ಚಿರನಿದ್ರೆಗೆ ಜಾರಿದ 4 ಮಂದಿ

ಕಬ್ಬಿನ ಬಾಕಿ ಬಿಲ್‌ಗಾಗಿ ಸುವರ್ಣ ಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗುವ ಮೂಲಕ ಸರ್ಕಾರದ ಗಮನ ಸೆಳೆಯಲು ದೊಡ್ಡ ಮಟ್ಟದ ಹೋರಾಟ ಮಾಡಿದ್ದರು. ಈ ವೇಳೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಜಯಶ್ರೀ ಕುರಿತು ಹಗುರವಾಗಿ ಮಾತನಾಡಿ ಟೀಕೆಗೆ ಒಳಗಾಗಿದ್ದರು. ಬಳಿಕ ಜಯಶ್ರೀ ಅವರು ರಾಜ್ಯಾದ್ಯಂತ ಸಂಚಾರ ಮಾಡಿ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಯಲ್ಲಿ ರೈತ ಸಂಘಟನೆಯಲ್ಲಿ ಸೇರ್ಪಡೆ ಮಾಡಲು ಶ್ರಮಿಸಿದ್ದರು.

ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಇನ್ನಿಲ್ಲ

Iqbal Ahmed Saradgi

ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) (EX MP Iqbal Ahmed Saradgi) ಮಂಗಳವಾರ ತಡರಾತ್ರಿ ನಿಧನ ಹೊಂದಿದ್ದಾರೆ. ಇವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge) ಹಾಗೂ ಮಾಜಿ ಸಿಎಂ ದಿ. ಧರ್ಮ ಸಿಂಗ್ (Dharm Singh) ಪರಮಾಪ್ತರಲ್ಲಿ ಒಬ್ಬರಾಗಿದ್ದರು.

ಕಲಬುರಗಿ (kalaburagi) ನಗರದಲ್ಲಿ 1944 ಜೂನ್ 5ರಂದು ಜನಿಸಿದ ಸರಡಗಿ, ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಬಿಎಎಲ್ಎಲ್‌ಬಿ ಪದವಿ ಪಡೆದು, ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ಗುಲ್ಬರ್ಗ ಸಾಮಾನ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಪಡೆದು ಸ್ಪರ್ಧಿಸಿ ಎರಡು ಬಾರಿ ಆಯ್ಕೆಯಾಗಿದ್ದರು. ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಕೇಂದ್ರ ಹಜ್‌ ಸಮಿತಿ, ವಕ್ಫ್‌ ಮಂಡಳಿಗಳ ಸದಸ್ಯರೂ ಆಗಿದ್ದರು, ಕಳೆದ ಎರಡು ವರ್ಷದಿಂದ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.

ಇದನ್ನೂ ಓದಿ | Murder Case: ಯುವತಿ ಪ್ರಬುದ್ಧ ಸಾವು ಆತ್ಮಹತ್ಯೆಯಲ್ಲ, ಕೊಲೆ: ತಾಯಿ ದೂರು

ಕಳೆದ ಹಲವು ತಿಂಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದಷ್ಟೆ ಕಲಬುರಗಿಗೆ ಮರಳಿ ತಂದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಪುತ್ರ ಇರ್ಫಾನ್ ಅಹ್ಮದ್ ಸರಡಗಿ, ಪುತ್ರಿ ಡಾ.ಜಹೇರಾ ಸರಡಗಿ ಅವರನ್ನು ಅಗಲಿದ್ದಾರೆ.

Continue Reading

ರಾಜಕೀಯ

Harish Poonja: ಶಾಸಕ ಹರೀಶ್‌ ಪೂಂಜಾರನ್ನು ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ಗುಡುಗಿದ ವಿಜಯೇಂದ್ರ

Harish Poonja: ನಮ್ಮ ಶಾಸಕರಾದ ಹರೀಶ್‌ ಪೂಂಜಾ ಅವರು ಉದ್ವೇಗದಿಂದ ಮಾತನಾಡಿದ್ದಾರೆ. ಅದು ಸರಿಯಲ್ಲ ಅಂತ ಶಾಸಕರಿಗೂ ಅನ್ನಿಸಿದೆ. ಒಬ್ಬ ಜನಪ್ರತಿನಿಧಿಯನ್ನು ಅರೆಸ್ಟ್ ಮಾಡುತ್ತಾರೆಂದಾದರೆ ಮುಂದೆ ಆಗುವ ಅನಾಹುತಗಳಿಗೆ ಸರ್ಕಾರವೇ ಜವಾಬ್ದಾರಿ ಆಗಬೇಕಾಗುತ್ತದೆ. ದಕ್ಷಿಣ ಕನ್ನಡ ಈಗ ಶಾಂತಿಯುತವಾಗಿದೆ. ನಮ್ಮ ಶಾಸಕರ ಮೇಲೆ ಕ್ರಮ ಕೈಗೊಳ್ಳುವುದನ್ನು ಕೂಡಲೇ ಕೈಬಿಡಬೇಕು. ಒಂದು ವೇಳೆ ಅವರನ್ನು ಬಂಧಿಸಿದರೆ ಮುಂದಾಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಎಚ್ಚರಿಕೆಯನ್ನು ನೀಡಿದ್ದಾರೆ.

VISTARANEWS.COM


on

Harish Poonja Govt responsible for disaster if MLA Harish Poonja is arrested says BY Vijayendra
Koo

ಬೆಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿರುವ ಬೆನ್ನಲ್ಲೇ ಅವರನ್ನು ಬಂಧಿಸಲು ಪೊಲೀಸರು ಮುಂದಾಗಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಒಂದು ವೇಳೆ ಅವರನ್ನು ಬಂಧಿಸಿದರೆ ಮುಂದಾಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಸತ್ಯ ಮರೆಮಾಚುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಿ, ನಮ್ಮ ಆಕ್ಷೇಪ ಇಲ್ಲ. ಆದರೆ, ಅದರಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಶಶಿರಾಜ್ ಹೆಸರನ್ನು ಸೇರಿಸಿರುವುದು ಸರಿಯಲ್ಲ. ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಅವನ ಹೆಸರು ಸೇರಿಸಿದ್ದಕ್ಕೆ ನಮ್ಮ ಶಾಸಕರು ಠಾಣೆಗೆ ಹೋಗಿದ್ದಾರೆ. ನಮ್ಮ ಕಾರ್ಯಕರ್ತರ ಪರವಾಗಿ ಠಾಣೆಗೆ ಹೋಗಿ ಶಕ್ತಿ ತುಂಬುವ ಕೆಲಸವನ್ನು ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಇದೆ ಎಂಬ ಕಾರಣಕ್ಕೆ ಪ್ರತಿಭಟನೆಗೆ ಅವಕಾಶ ಕೊಟ್ಟಿಲ್ಲ. ಆಡಳಿತ ಪಕ್ಷವು ಬಿಜೆಪಿ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉದ್ವೇಗದಿಂದ ಮಾತನಾಡಿದ್ದಾರೆ

ನಮ್ಮ ಶಾಸಕರಾದ ಹರೀಶ್‌ ಪೂಂಜಾ ಅವರು ಉದ್ವೇಗದಿಂದ ಮಾತನಾಡಿದ್ದಾರೆ. ಅದು ಸರಿಯಲ್ಲ ಅಂತ ಶಾಸಕರಿಗೂ ಅನ್ನಿಸಿದೆ. ಒಬ್ಬ ಜನಪ್ರತಿನಿಧಿಯನ್ನು ಅರೆಸ್ಟ್ ಮಾಡುತ್ತಾರೆಂದಾದರೆ ಮುಂದೆ ಆಗುವ ಅನಾಹುತಗಳಿಗೆ ಸರ್ಕಾರವೇ ಜವಾಬ್ದಾರಿ ಆಗಬೇಕಾಗುತ್ತದೆ. ದಕ್ಷಿಣ ಕನ್ನಡ ಈಗ ಶಾಂತಿಯುತವಾಗಿದೆ. ನಮ್ಮ ಶಾಸಕರ ಮೇಲೆ ಕ್ರಮ ಕೈಗೊಳ್ಳುವುದನ್ನು ಕೂಡಲೇ ಕೈಬಿಡಬೇಕು ಎಂದು ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು.

ಇದನ್ನೂ ಓದಿ: Prajwal Revanna Case: ನಿಖಿಲ್ ಎಲ್ಲಿದ್ದೀಯಪ್ಪಾ ಎಂದಿದ್ದಾಯ್ತು, ಈಗ ಪ್ರಜ್ವಲ್ ಎಲ್ಲಿದ್ದೀಯಪ್ಪಾ ಎನ್ನುತ್ತಿದ್ದಾರೆ ಬ್ರದರ್ ಸ್ವಾಮಿಗಳು!

ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ

ಸರ್ಕಾರ ಹಾಗೂ ಗೃಹ ಸಚಿವರಿಗೆ ಮಾಧ್ಯಮಗಳ ಮೂಲಕ ಒತ್ತಾಯ ಮಾಡುತ್ತೇನೆ. ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್ ಎಂದು ಕೂಗಿದವನನ್ನು ಬಂಧಿಸಲು ಹಿಂದೆ ಮುಂದೆ ನೋಡುತ್ತೀರಿ. ಆದರೆ, ಜನಪ್ರತಿನಿಧಿಯನ್ನು ಇಂತಹ ವಿಚಾರಗಳಲ್ಲಿ ಬಂಧನ ಮಾಡಲು ಮುಂದೆ ಬರುತ್ತೀರಿ. ಜನಪ್ರತಿನಿಧಿಯನ್ನು ಬಂಧಿಸುವ ಕ್ರಮ ಯಾವುದೇ ಕಾರಣಕ್ಕೂ ಸರಿಯಲ್ಲ. ರಾಜಕಾರಣಿಗಳ ಒತ್ತಡದಿಂದ ಬಂಧನ ಮಾಡೋದು ಸರಿಯಲ್ಲ. ಶಾಸಕರು ಉದ್ವೇಗದಲ್ಲಿ ಮಾತನಾಡಿದ್ದರಲ್ಲಿ ದುರುದ್ದೇಶ ಇಲ್ಲ. ನಾನು ಕೂಡ ಶಾಸಕರ ಜತೆ ಮಾತನಾಡಿದ್ದೇನೆ. ಈ ರೀತಿ ಮಾತನಾಡಿದ್ದು ಸರಿಯಲ್ಲ ಎಂದು ಹೇಳಿದ್ದೇನೆ. ಅದಕ್ಕವರು ತಾವು ಆಡಿದ ಮಾತುಗಳ ಹಿಂದೆ ಯಾವುದೇ ದುರುದ್ದೇಶ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸರ್ಕಾರ ಈಗ ಏನು ಮಾಡುತ್ತದೆಯೋ ಎಂಬುದನ್ನು ನೋಡುತ್ತೇನೆ. ಸರ್ಕಾರ ತಪ್ಪು ತಿದ್ದಿಕೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ. ಆಗುವ ಅನಾಹುತಗಳಿಗೆ ಸರ್ಕಾರವೇ ಕಾರಣವಾಗಬೇಕಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಎಚ್ಚರಿಕೆ ನೀಡಿದರು.

ಪೊಲೀಸರಿಗೆ ಧಮ್ಕಿ ಕೇಸ್‌; ಶಾಸಕ ಹರೀಶ್ ಪೂಂಜಾ ಅರೆಸ್ಟ್‌ ಆಗ್ತಾರಾ? ಮನೆ ಮುಂದೆ ಹೈಡ್ರಾಮಾ!

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿರುವ ಬೆನ್ನಲ್ಲೇ ಅವರನ್ನು ಅರೆಸ್ಟ್‌ ಮಾಡಲು ಮನೆಗೆ ಪೊಲೀಸರು ಬಂದಿದ್ದಾರೆ. ಆದರೆ, ತಮ್ಮ ರೂಮಿನಲ್ಲೇ ಇರುವ ಹರೀಶ್‌ ಪೂಂಜಾ ಅವರು ಇನ್ನೂ ಹೊರಗೆ ಬಂದಿಲ್ಲ. ಈ ನಡುವೆ ಸ್ಥಳಕ್ಕೆ ಲಾಯರ್‌ಗಳು, ಬಿಜೆಪಿ ಕಾರ್ಯಕರ್ತರು ಬಂದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಹೈಡ್ರಾಮಾಕ್ಕೆ ಕಾರಣವಾಯಿತು.

ಅಕ್ರಮ ಕಲ್ಲು ಗಣಿಗಾರಿಕೆ (Illegal quarrying) ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಸಂಬಂಧ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿತ್ತಿಲದಲ್ಲಿರುವ ಶಾಸಕ ಹರೀಶ್ ಪೂಂಜಾ ಮನೆಗೆ ಬುಧವಾರ (ಮೇ 22) ಮಧ್ಯಾಹ್ನದ ವೇಳೆಗೆ ಪೊಲೀಸರು ಆಗಮಿಸಿದ್ದರು. ಸರ್ಕಲ್ ಇನ್ಸ್‌ಪೆಕ್ಟರ್‌ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ಆಗಮಿಸಿತ್ತು.

Harish Poonja case Belthangady BJP MLA Harish Poonja arrested for taunting police

ಶಾಸಕರ ಮನೆ ಮುಂದೆ ಸೇರಿದ ನೂರಾರು ಬಿಜೆಪಿ ಕಾರ್ಯಕರ್ತರು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮನೆಗೆ ಪೊಲೀಸರು ಆಗಮಿಸಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಧಾವಿಸಿದ್ದಾರೆ. ಅಲ್ಲದೆ, ಇನ್ನೂ ಹಲವರು ಅತ್ತ ಆಗಮಿಸಿ ಆಕ್ರೋಶವನ್ನು ಹೊರಹಾಕಿದ್ದಾರೆ.

ಮನೆ ಮುಂದೆ ಹೈಡ್ರಾಮಾ

ಹರೀಶ್ ಪೂಂಜ ಬಂಧನಕ್ಕೆ ಪೊಲೀಸರು ಬಂದಿದ್ದರಿಂದ ಗರ್ಡಡಿ ಹರೀಶ್ ಪೂಂಜ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿದೆ. ಪೊಲೀಸರ ಜತೆ ವಕೀಲರ ತಂಡದಿಂದ ಮಾತುಕತೆ ನಡೆಸಲಾಯಿತು. ಈ ವೇಳೆ ನಿರಂತರವಾಗಿ ಚರ್ಚೆ ನಡೆಸಲಾಯಿತು. ಮನೆಯ ಹೊರಗಡೆ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದರು. ಅಲ್ಲದೆ, ಪೊಲೀಸರು ಹಾಗು ಕಾರ್ಯಕರ್ತರ ನಡುವಿನ ಹೈ ಡ್ರಾಮಾಕ್ಕೆ ಪೂಂಜ ನಿವಾಸವು ಸಾಕ್ಷಿಯಾಯಿತು. ಇನ್ನು ಪೂಂಜಾ ನಿವಾಸದತ್ತ ಸಂಸದ ನಳಿನ್ ಕುಮಾರ್ ಕಟೀಲ್, ಬ್ರಿಜೇಶ್ ಚೌಟ ದೌಡಾಯಿಸಿದರು.

ನೋಟಿಸ್ ಇಲ್ಲದೇ ಅರೆಸ್ಟ್ ಮಾಡುವುದು ಅಪರಾಧ

ಈ ವೇಳೆ ಶಾಸಕ ಹರೀಶ್ ಪೂಂಜಾ ಪರ ವಕೀಲ ಶಂಭು ಶಂಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ವಿಚಾರಣೆಗೆ ಕರೆದುಕೊಂಡು ಹೋಗಲು ಬಂದಿದ್ದಾಗಿ ಪೊಲೀಸರು ಹೇಳಿದ್ದಾರೆ. ನಿಯಮ ಪ್ರಕಾರ ಆ ಕ್ರಮ ಇಲ್ಲ. ಪೊಲೀಸರು ಮನೆಗೆ ಒಳಗೆ ಕುಳಿತಿದ್ದಾರೆ. ನೋಟಿಸ್ ಈವರೆಗೆ ಕೊಟ್ಟಿಲ್ಲ. ಶಾಸಕರು ಅವರ ಕೆಲಸ ಮಾಡದ ಹಾಗೆ ಮಾಡಿದ್ದಾರೆ. ಮನೆಯಲ್ಲಿಯೇ ಕೂಡಿ ಹಾಕಿದ ಹಾಗೆ ಮಾಡಿದ್ದಾರೆ. ಒತ್ತಡಕ್ಕೆ ಮಣಿದು ಪೊಲೀಸರು ಇಲ್ಲಿಯೇ ಕುಳಿತಿದ್ದಾರೆ. ನೋಟಿಸ್ ಇಲ್ಲದೆ ಅರೆಸ್ಟ್ ಮಾಡುವುದು ಅಪರಾಧ ಎಂದು ಹೇಳಿದ್ದಾರೆ.

ಯಾವುದೇ ನೋಟಿಸ್ ನೀಡದೆ, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆಯುವಂತಿಲ್ಲ. ಅದು ಕಾನೂನು ಬಾಹಿರವಾಗುತ್ತದೆ. ಅಲ್ಲದೆ, ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. ಅದರಲ್ಲಿ ಕೆಲವು ಸೆಕ್ಷನ್ ನಾನ್ ಬೇಲಬಲ್ ಸೆಕ್ಷನ್‌ಗಳಿವೆ. ಸುಪ್ರೀಂ ಕೋರ್ಟ್‌ನ ಈ ಹಿಂದಿನ ಆದೇಶದ ಪ್ರಕಾರ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗುವ ಪ್ರಕರಣಗಳಲ್ಲಿ ಬಂಧನ ಅನಿವಾರ್ಯವಲ್ಲ. ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಬಂಧನ ಮಾಡಲು ಅವಕಾಶವಿರುತ್ತದೆ. ಆದರೆ, ಎಲ್ಲ ಪ್ರಕರಣಗಳಲ್ಲೂ ಬಂಧನ ಅಗತ್ಯವಿಲ್ಲ. ವಿಚಾರಣೆಗೆ ಕರೆಯಲು ಪೇದೆಯ ಮೂಲಕ ನೋಟಿಸ್ ನೀಡಬಹುದು. ಆದರೆ ಹಿರಿಯ ಅಧಿಕಾರಿಗಳು ಬರುವ ಅಗತ್ಯತೆ ಏನಿದೆ? ಇದು ಶಾಸಕ ಪೂಂಜಾ ವಿರುದ್ಧ ಟಾರ್ಗೆಟ್ ಮಾಡಿ ಬಂಧಿಸುವ ಹುನ್ನಾರ ಆಗಿದೆ. ನೋಟಿಸ್ ನೀಡಲು ಕೇಳಿದ್ದೇವೆ. ಈ ವರೆಗೂ ನೋಟಿಸ್ ನೀಡಿಲ್ಲ ಎಂದು ವಕೀಲ ಶಂಭು ಶಂಕರ್ ಆಪಾದಿಸಿದರು.

Harish Poonja case Belthangady BJP MLA Harish Poonja arrested for taunting police

ಏನಿದು ಕೇಸ್‌?

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬುವವರನ್ನು ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ | Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

Continue Reading

ದಕ್ಷಿಣ ಕನ್ನಡ

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಶಾಸಕ ಹರೀಶ್ ಪೂಂಜಾ ಅರೆಸ್ಟ್‌ ಆಗ್ತಾರಾ? ಮನೆ ಮುಂದೆ ಹೈಡ್ರಾಮಾ!

Harish Poonja: ಅಕ್ರಮ ಕಲ್ಲು ಗಣಿಗಾರಿಕೆ (Illegal quarrying) ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಸಂಬಂಧ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿತ್ತಿಲದಲ್ಲಿರುವ ಶಾಸಕ ಹರೀಶ್ ಪೂಂಜಾ ಮನೆಗೆ ಬುಧವಾರ (ಮೇ 22) ಮಧ್ಯಾಹ್ನದ ವೇಳೆಗೆ ಪೊಲೀಸರು ಆಗಮಿಸಿದ್ದರು. ಸರ್ಕಲ್ ಇನ್ಸ್‌ಪೆಕ್ಟರ್‌ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ಆಗಮಿಸಿದೆ. ಆದರೆ, ನೋಟಿಸ್‌ ನೀಡದೆ ಬಂಧನಕ್ಕೆ ಮುಂದಾಗಲಾಗಿದೆ ಎಂದು ಶಾಸಕರ ಪರ ವಕೀಲರು ಆರೋಪ ಮಾಡಿದ್ದಾರೆ. ಇದು ಕಾನೂನು ಪ್ರಕಾರ ಅಪರಾಧ ಎಂದು ಹೇಳಿದ್ದಾರೆ.

VISTARANEWS.COM


on

Harish Poonja case Will MLA Harish Poonja be arrested in taunting case with police
Koo

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿರುವ ಬೆನ್ನಲ್ಲೇ ಅವರನ್ನು ಅರೆಸ್ಟ್‌ ಮಾಡಲು ಮನೆಗೆ ಪೊಲೀಸರು ಬಂದಿದ್ದಾರೆ. ಆದರೆ, ತಮ್ಮ ರೂಮಿನಲ್ಲೇ ಇರುವ ಹರೀಶ್‌ ಪೂಂಜಾ ಅವರು ಇನ್ನೂ ಹೊರಗೆ ಬಂದಿಲ್ಲ. ಈ ನಡುವೆ ಸ್ಥಳಕ್ಕೆ ಲಾಯರ್‌ಗಳು, ಬಿಜೆಪಿ ಕಾರ್ಯಕರ್ತರು ಬಂದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಹೈಡ್ರಾಮಾಕ್ಕೆ ಕಾರಣವಾಯಿತು.

ಅಕ್ರಮ ಕಲ್ಲು ಗಣಿಗಾರಿಕೆ (Illegal quarrying) ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಸಂಬಂಧ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿತ್ತಿಲದಲ್ಲಿರುವ ಶಾಸಕ ಹರೀಶ್ ಪೂಂಜಾ ಮನೆಗೆ ಬುಧವಾರ (ಮೇ 22) ಮಧ್ಯಾಹ್ನದ ವೇಳೆಗೆ ಪೊಲೀಸರು ಆಗಮಿಸಿದ್ದರು. ಸರ್ಕಲ್ ಇನ್ಸ್‌ಪೆಕ್ಟರ್‌ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ಆಗಮಿಸಿತ್ತು.

Harish Poonja case Belthangady BJP MLA Harish Poonja arrested for taunting police

ಶಾಸಕರ ಮನೆ ಮುಂದೆ ಸೇರಿದ ನೂರಾರು ಬಿಜೆಪಿ ಕಾರ್ಯಕರ್ತರು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮನೆಗೆ ಪೊಲೀಸರು ಆಗಮಿಸಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಧಾವಿಸಿದ್ದಾರೆ. ಅಲ್ಲದೆ, ಇನ್ನೂ ಹಲವರು ಅತ್ತ ಆಗಮಿಸಿ ಆಕ್ರೋಶವನ್ನು ಹೊರಹಾಕಿದ್ದಾರೆ.

ಮನೆ ಮುಂದೆ ಹೈಡ್ರಾಮಾ

ಹರೀಶ್ ಪೂಂಜ ಬಂಧನಕ್ಕೆ ಪೊಲೀಸರು ಬಂದಿದ್ದರಿಂದ ಗರ್ಡಡಿ ಹರೀಶ್ ಪೂಂಜ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿದೆ. ಪೊಲೀಸರ ಜತೆ ವಕೀಲರ ತಂಡದಿಂದ ಮಾತುಕತೆ ನಡೆಸಲಾಯಿತು. ಈ ವೇಳೆ ನಿರಂತರವಾಗಿ ಚರ್ಚೆ ನಡೆಸಲಾಯಿತು. ಮನೆಯ ಹೊರಗಡೆ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದರು. ಅಲ್ಲದೆ, ಪೊಲೀಸರು ಹಾಗು ಕಾರ್ಯಕರ್ತರ ನಡುವಿನ ಹೈ ಡ್ರಾಮಾಕ್ಕೆ ಪೂಂಜ ನಿವಾಸವು ಸಾಕ್ಷಿಯಾಯಿತು. ಇನ್ನು ಪೂಂಜಾ ನಿವಾಸದತ್ತ ಸಂಸದ ನಳಿನ್ ಕುಮಾರ್ ಕಟೀಲ್, ಬ್ರಿಜೇಶ್ ಚೌಟ ದೌಡಾಯಿಸಿದರು.

ನೋಟಿಸ್ ಇಲ್ಲದೇ ಅರೆಸ್ಟ್ ಮಾಡುವುದು ಅಪರಾಧ

ಈ ವೇಳೆ ಶಾಸಕ ಹರೀಶ್ ಪೂಂಜಾ ಪರ ವಕೀಲ ಶಂಭು ಶಂಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ವಿಚಾರಣೆಗೆ ಕರೆದುಕೊಂಡು ಹೋಗಲು ಬಂದಿದ್ದಾಗಿ ಪೊಲೀಸರು ಹೇಳಿದ್ದಾರೆ. ನಿಯಮ ಪ್ರಕಾರ ಆ ಕ್ರಮ ಇಲ್ಲ. ಪೊಲೀಸರು ಮನೆಗೆ ಒಳಗೆ ಕುಳಿತಿದ್ದಾರೆ. ನೋಟಿಸ್ ಈವರೆಗೆ ಕೊಟ್ಟಿಲ್ಲ. ಶಾಸಕರು ಅವರ ಕೆಲಸ ಮಾಡದ ಹಾಗೆ ಮಾಡಿದ್ದಾರೆ. ಮನೆಯಲ್ಲಿಯೇ ಕೂಡಿ ಹಾಕಿದ ಹಾಗೆ ಮಾಡಿದ್ದಾರೆ. ಒತ್ತಡಕ್ಕೆ ಮಣಿದು ಪೊಲೀಸರು ಇಲ್ಲಿಯೇ ಕುಳಿತಿದ್ದಾರೆ. ನೋಟಿಸ್ ಇಲ್ಲದೆ ಅರೆಸ್ಟ್ ಮಾಡುವುದು ಅಪರಾಧ ಎಂದು ಹೇಳಿದ್ದಾರೆ.

ಯಾವುದೇ ನೋಟಿಸ್ ನೀಡದೆ, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆಯುವಂತಿಲ್ಲ. ಅದು ಕಾನೂನು ಬಾಹಿರವಾಗುತ್ತದೆ. ಅಲ್ಲದೆ, ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. ಅದರಲ್ಲಿ ಕೆಲವು ಸೆಕ್ಷನ್ ನಾನ್ ಬೇಲಬಲ್ ಸೆಕ್ಷನ್‌ಗಳಿವೆ. ಸುಪ್ರೀಂ ಕೋರ್ಟ್‌ನ ಈ ಹಿಂದಿನ ಆದೇಶದ ಪ್ರಕಾರ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗುವ ಪ್ರಕರಣಗಳಲ್ಲಿ ಬಂಧನ ಅನಿವಾರ್ಯವಲ್ಲ. ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಬಂಧನ ಮಾಡಲು ಅವಕಾಶವಿರುತ್ತದೆ. ಆದರೆ, ಎಲ್ಲ ಪ್ರಕರಣಗಳಲ್ಲೂ ಬಂಧನ ಅಗತ್ಯವಿಲ್ಲ. ವಿಚಾರಣೆಗೆ ಕರೆಯಲು ಪೇದೆಯ ಮೂಲಕ ನೋಟಿಸ್ ನೀಡಬಹುದು. ಆದರೆ ಹಿರಿಯ ಅಧಿಕಾರಿಗಳು ಬರುವ ಅಗತ್ಯತೆ ಏನಿದೆ? ಇದು ಶಾಸಕ ಪೂಂಜಾ ವಿರುದ್ಧ ಟಾರ್ಗೆಟ್ ಮಾಡಿ ಬಂಧಿಸುವ ಹುನ್ನಾರ ಆಗಿದೆ. ನೋಟಿಸ್ ನೀಡಲು ಕೇಳಿದ್ದೇವೆ. ಈ ವರೆಗೂ ನೋಟಿಸ್ ನೀಡಿಲ್ಲ ಎಂದು ವಕೀಲ ಶಂಭು ಶಂಕರ್ ಆಪಾದಿಸಿದರು.

Harish Poonja case Belthangady BJP MLA Harish Poonja arrested for taunting police

ಏನಿದು ಕೇಸ್‌?

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬುವವರನ್ನು ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ | Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

Continue Reading
Advertisement
Virat kohli
ಕ್ರೀಡೆ7 mins ago

Virat kohli : ಐಪಿಎಲ್​ನಲ್ಲಿ 8000 ರನ್ ಬಾರಿಸಿ ದಾಖಲೆ ಬರೆದ ಕೊಹ್ಲಿ

Harish Poonja case Belthangady BJP MLA Harish Poonja arrested for taunting police
ರಾಜಕೀಯ26 mins ago

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಶಾಸಕ ಹರೀಶ್ ಪೂಂಜಾರನ್ನು ಅರೆಸ್ಟ್‌ ಮಾಡದೇ ವಾಪಸ್‌ ಹೋದ ಪೊಲೀಸರು!

MLC Election South West Graduate Constituency bjp Candidate Dr Dhananjaya Sarji pressmeet
ರಾಜಕೀಯ30 mins ago

MLC Election: ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವೆ: ಡಾ. ಧನಂಜಯ ಸರ್ಜಿ

Fodder Bank inauguration at kasaba
ತುಮಕೂರು31 mins ago

Tumkur News: ಮೇವು ಬ್ಯಾಂಕ್ ಸದುಪಯೋಗಪಡಿಸಿಕೊಳ್ಳಿ: ತಹಸೀಲ್ದಾರ್ ಮಂಜುನಾಥ್

YIPP co founder Nikhil Kamath
ಕರ್ನಾಟಕ33 mins ago

Bengaluru News: ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮುಂದಾದ ವೈಐಪಿಪಿ ಸಹ ಸಂಸ್ಥಾಪಕ ನಿಖಿಲ್ ಕಾಮತ್

Virat Kohli
ಪ್ರಮುಖ ಸುದ್ದಿ40 mins ago

Virat kohli : ಕೊಹ್ಲಿಗೆ ಭಯೋತ್ಪಾದಕರ ಬೆದರಿಕೆ ಸುದ್ದಿ; ಸ್ಪಷ್ಟನೆ ನೀಡಿದ ಗುಜರಾತ್​ ಕ್ರಿಕೆಟ್​​ ಸಂಸ್ಥೆ

Jayashree Gurannavar
ಕ್ರೈಂ59 mins ago

Jayashree Gurannavar: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅನಾರೋಗ್ಯದಿಂದ ನಿಧನ

CGI Technology In Film
ಸಿನಿಮಾ60 mins ago

CGI Technology In Film: ʼವೆಸ್ಟ್‌ವರ್ಲ್ಡ್‌ʼನಿಂದ ʼಅವತಾರ್‌ʼ ಚಿತ್ರದವರೆಗೆ ಸಿಜಿಐ ತಂತ್ರಜ್ಞಾನದ ರೋಚಕ ಹಾದಿ! ವಿಡಿಯೊಗಳಿವೆ

Bus Siege Andhra Pradesh bus seized in Gadag and 49 tourists in trouble
ಗದಗ1 hour ago

Bus seized: ಆಂಧ್ರ ಸಿಎಂ ಕ್ಷೇತ್ರದ ಪ್ರವಾಸಿಗರು ಗದಗಿನಲ್ಲಿ ಲಾಕ್‌; ಇಡೀ ರಾತ್ರಿ ಆರ್‌ಟಿಒ ಕಚೇರಿಯಲ್ಲಿ ಕಳೆದ 49 ಮಂದಿ!

Shah Rukh Khan
ಪ್ರಮುಖ ಸುದ್ದಿ1 hour ago

Shah Rukh Khan : ಶಾರುಖ್​ ಖಾನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ14 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ6 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌