Inspector Death: ಮತ್ತೊಬ್ಬ ಪೊಲೀಸ್‌ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ, ಎರಡು ತಿಂಗಳ ಹಿಂದೆ ಟ್ರಾನ್ಸ್‌ಫರ್‌ ಆಗಿದ್ದ ಸಿಸಿಬಿ ಎಸ್‌ಐ - Vistara News

ಬೆಂಗಳೂರು

Inspector Death: ಮತ್ತೊಬ್ಬ ಪೊಲೀಸ್‌ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ, ಎರಡು ತಿಂಗಳ ಹಿಂದೆ ಟ್ರಾನ್ಸ್‌ಫರ್‌ ಆಗಿದ್ದ ಸಿಸಿಬಿ ಎಸ್‌ಐ

Inspector Death: ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಹಾಕಿಕೊಂಡು ತಿಮ್ಮೇಗೌಡ ಸಾವಿಗೆ ಶರಣಾಗಿದ್ದಾರೆ. ಈ ಹಿಂದೆ ಕುಂಬಳಗೋಡಿನ ಇನ್‌ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಎರಡು ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ತಮ್ಮ ತೋಟದ ಜಾಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ.

VISTARANEWS.COM


on

police inspector death thimmegowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್‌ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ (police inspector death) ಮಾಡಿಕೊಂಡಿದ್ದಾರೆ. ಎರಡು ತಿಂಗಳ ಹಿಂದೆ ಸಿಸಿಬಿಗೆ (CCB) ಟ್ರಾನ್ಸ್‌ಫರ್‌ (Tarnsfer) ಆಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ತಿಮ್ಮೇಗೌಡ (Thimmegowda) ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಬಿಡದಿಯಲ್ಲಿ ಆತ್ಮಹತ್ಯೆಗೆ (Self harming) ಶರಣಾಗಿದ್ದಾರೆ.

ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಹಾಕಿಕೊಂಡು ತಿಮ್ಮೇಗೌಡ ಸಾವಿಗೆ ಶರಣಾಗಿದ್ದಾರೆ. ಈ ಹಿಂದೆ ಕುಂಬಳಗೋಡಿನ ಇನ್‌ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಎರಡು ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ತಮ್ಮ ತೋಟದ ಜಾಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ.

1998ರ ರೂರಲ್ ಬ್ಯಾಚ್ ಇನ್ಸ್‌ಪೆಕ್ಟರ್ ತಿಮ್ಮೇಗೌಡ, ಚನ್ನಪಟ್ಟಣದ ಹಳ್ಳಿಯೊಂದರ ನಿವಾಸಿ. ಗ್ರಾಮೀಣ ಕೃಪಾಂಕದಲ್ಲಿ ಆಯ್ಕೆಯಾಗಿದ್ದ ತಿಮ್ಮೇಗೌಡ ವಿಧಾನಸಭೆ ಚುನಾವಣೆ ವೇಳೆಗೆ ಬಿಡದಿಯಿಂದ ಅತ್ತಿಬೆಲೆಗೆ ವರ್ಗಾವಣೆಯಾಗಿದ್ದರು. 2023ರ ಸೆಪ್ಟೆಂಬರ್‌ನಲ್ಲಿ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ನಡೆದ ಬಳಿಕ ಆ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದರು. ನಂತರ ಕುಂಬಳಗೋಡು ಠಾಣೆಗೆ ವರ್ಗಾವಣೆಯಾಗಿದ್ದು, ಇತ್ತೀಚೆಗೆ ಸಿಸಿಬಿಗೆ ವರ್ಗಾವಣೆಯಾಗಿತ್ತು.

ಯಾದಗಿರಿಯಲ್ಲಿ ಪಿಎಸ್‌ಐ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ರಾಜ್ಯ ಸರ್ಕಾರಕ್ಕೆ ಮುಜುಗರ ಸೃಷ್ಟಿಸುವ ಬೆನ್ನಲ್ಲೇ ಇನ್ನೊಬ್ಬ ಎಸ್‌ಐ ಆತ್ಮಹತ್ಯೆ ಪ್ರಕರಣ ನಡೆದಿದೆ. ಪಿಎಸ್‌ಐ ಪರಶುರಾಮ್ ಅವರ ಟ್ರಾನ್ಸ್‌ಫರ್‌ಗಾಗಿ ಲಂಚ ಕೇಳಿದ ಸ್ಥಳೀಯ ಶಾಸಕ ಹಾಗೂ ಆತನ ಪುತ್ರನ ಮೇಲೆ ದೂರು ದಾಖಲಾಗಿದೆ.

ಉಸಿರಾಟದ ತೊಂದರೆಯಿಂದ ಯೋಧ ಸಾವು

ಬಾಗಲಕೋಟೆ: ಉಸಿರಾಟದ ತೊಂದರೆಯಿಂದ‌ ಚಿಕಿತ್ಸೆ ಫಲಿಸದೇ ಬಾಗಲಕೋಟೆಯ (Bagalakote news) ಯೋಧರೊಬ್ಬರು ರಾಜಸ್ಥಾನದಲ್ಲಿ (Soldier Death) ಸಾವಿಗೀಡಾಗಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ಖಜ್ಜಿಡೋಣಿ ಗ್ರಾಮದ ನಿವಾಸಿ ಹನುಮಂತ ಬಸಪ್ಪ ತಳವಾರ (32) ಮೃತ ಯೋಧ.

12 ವರ್ಷದಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಹನುಮಂತ, ಉಸಿರಾಟದ ತೊಂದರೆಯಿಂದ ರಾಜಸ್ಥಾನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಹನುಮಂತ ತಳವಾರ ಮೃತಪಟ್ಟಿದ್ದಾರೆ. ಅವರು ರಾಜಸ್ಥಾನದ ಜೋಧಪುರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೃತ ಯೋಧ ತಂದೆ, ಪತ್ನಿ ವಿಜಯಲಕ್ಷ್ಮಿ, ಪುಟ್ಟ ಮಗಳು, ಮಗ, ಸಹೋದರರನ್ನು ಅಗಲಿದ್ದಾರೆ. ಹುತಾತ್ಮ ಯೋಧನ ಗ್ರಾಮ ಹಾಗೂ ಮನೆಯಲ್ಲಿ ಶೋಕದ ವಾತಾವರಣ ನೆಲೆಸಿದ್ದು, ಇವತ್ತು ಮಧ್ಯಾಹ್ನ ನಂತರ ಯೋಧನ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸಲಿದೆ.

ಬೆಂಗಳೂರಿನಲ್ಲಿ ವಿದೇಶಿ ಪ್ರಜೆ ಆತ್ಮಹತ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bangalore crime) ವಿದೇಶಿ ಪ್ರಜೆಯ (Foreigner) ಶವ (Body) ಕೊಳೆತ ಸ್ಥಿತಿಯಲ್ಲಿ (UDR Case) ಪತ್ತೆಯಾಗಿದೆ. ಯುಕೆ ಮೂಲದ ಪ್ರಜೆ ಗೇವಿನ್ ಜೇಮ್ಸ್ ಯಂಗ್ (59) ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಶಂಕೆ ಇದೆ.

ಕೋರಮಂಗಲ 7ನೇ ಬ್ಲಾಕ್‌ಲ್ಲಿ ಘಟನೆ ನಡೆದಿದೆ. ಮೃತ ಜೇಮ್ಸ್‌ ಡೆತ್ ನೋಟ್ ಬರೆದಿಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಜುಲೈ 1ರಂದು ಬೆಂಗಳೂರಿಗೆ ಬಂದಿದ್ದ ಜೇಮ್ಸ್ ಯಂಗ್, ಆಪ್ ಮೂಲಕ ಕೋರಮಂಗಲದಲ್ಲಿ ಮನೆ ಬಾಡಿಗೆಗೆ ಪಡೆದಿದ್ದ. ಜನಾರ್ದನ್ ಎಂಬವರ ಮನೆಯಲ್ಲಿ ಬಾಡಿಗೆಗೆ ಇದ್ದ. ಶೆಫ್ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದ.

ಜೇಮ್ಸ್‌ ಹೆಂಡತಿಯಿಂದ ಡೈವೋರ್ಸ್‌ ಕೂಡ ಪಡೆದಿದ್ದು, ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಅನಾರೋಗ್ಯದಿಂದ ಕೂಡ ಬಳಲುತ್ತಿದ್ದ ಜೇಮ್ಸ್‌ಗೆ ಬಿಪಿ, ಶುಗರ್ ಕೂಡ ಇತ್ತು. ಶುಗರ್ ಹಿನ್ನೆಲೆಯಲ್ಲಿ ಮಾತ್ರೆ ಹಾಗೂ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದ. ಓವರ್ ಡೋಸ್ ಟ್ಯಾಬ್ಲೆಟ್ ಹಾಗೂ ಇನ್ಸುಲಿನ್ ತಗೆದುಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅನುಮಾನಿಸಲಾಗಿದೆ.

ಕಳೆದ ತಿಂಗಳ 27ರಂದು ಮನೆ ಓನರ್‌ಗೆ ಕರೆ ಮಾಡಿದ್ದ ಜೇಮ್ಸ್, ಆಗಸ್ಟ್ 1ರವರೆಗೂ ನನ್ನನ್ನು ಡಿಸ್ಟರ್ಬ್‌ ಮಾಡಬೇಡಿ ಎಂದು ಹೇಳಿದ್ದ. ಶನಿವಾರ ಮನೆ ಮಾಲೀಕ ಎಷ್ಟೇ ಕರೆ ಮಾಡಿದರೂ ಜೇಮ್ಸ್ ಸ್ವೀಕರಿಸಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮನೆ ಬಳಿ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಕೂಡಲೇ ಕೋರಮಂಗಲ ಪೊಲೀಸರಿಗೆ ಮನೆ ಮಾಲೀಕ ಜನಾರ್ದನ್ ಮಾಹಿತಿ ನೀಡಿದ್ದಾರೆ. ಕೋರಮಂಗಲ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಾವಿನ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರು, ಈ ಬಗ್ಗೆ ಎಫ್ಆರ್‌ಆರ್‌ಓಗೆ ಮಾಹಿತಿ ನೀಡಿದ್ದಾರೆ. ಕೋರಮಂಗಲ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Nursing Student Dies: 6ನೇ ಮಹಡಿಯಿಂದ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಸಾವು

Nursing Student Dies: ಬೆಂಗಳೂರು ಹೊರವಲಯದ ಧನ್ವಂತರಿ ಕಾಲೇಜಿನ ವಿದ್ಯಾರ್ಥಿನಿ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾಳೆ. ಈ ಸಂಬಂಧ ಸೋಲದೇವಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

Nursing student dies
Koo

ಬೆಂಗಳೂರು: 6ನೇ ಮಹಡಿಯಿಂದ ಆಯತಪ್ಪಿ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ (Nursing Student Dies) ನಗರದ ಹೊರವಲಯದ ಸೋಲದೇವಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅತುಲ್ಯ ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿನಿ.

ಧನ್ವಂತರಿ ಕಾಲೇಜಿನಲ್ಲಿ ಯುವತಿ ನರ್ಸಿಂಗ್ ಓದುತ್ತಿದ್ದಳು. ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ನರ್ಸಿಂಗ್ ಕೋರ್ಸ್‌ಗೆ ಸೇರಿಕೊಂಡಿದ್ದಳು. ಆರನೇ ಮಹಡಿಯಲ್ಲಿ ಇರುವಾಗ ಯುವತಿ ಕಾಲು ಜಾರಿ ಕೆಳಗಡೆ ಬಿದ್ದು ಮೃತಪಟ್ಟಿದ್ದಾಳೆ. ಭಾನುವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸೋಲದೇವಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Murder Case : ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೈ-ಕಾಲು ಬಿಗಿದು, ಕಲ್ಲು ಕಟ್ಟಿ ಕೆರೆಗೆ ಎಸೆದ ಹಂತಕರು

Drowned in water : ಆಟವಾಡುತ್ತಾ ಕಾಲುವೆಗೆ ಕಾಲು ಜಾರಿ ಬಿದ್ದು 4 ವರ್ಷದ ಬಾಲಕ ಸಾವು

Drowned in water
Drowned in water

ಚಿಕ್ಕೋಡಿ: ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಬಾಲಕನೊರ್ವ ಮೃತಪಟ್ಟಿರುವ ದಾರುಣ (Drowned in water) ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೋಡಕುರಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅರುಣ ಖದ್ದಿ (4) ಮೃತ ದುರ್ದೈವಿ. ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಆಟವಾಡಲು ಹೋದ ಅರುಣ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಬಿಡಲಾಗಿತ್ತು. ಕಾಲುವೆಗೆ ಬಿದ್ದಾಗ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಸಾವು; ಬೈಕ್‌ ಅಪಘಾತದಲ್ಲಿ ಸವಾರರಿಬ್ಬರು ಮೃತ್ಯು

ದಾವಣಗೆರೆಯಲ್ಲಿ ವಿದ್ಯುತ್ ತಗುಲಿ ವ್ಯಕ್ತಿ ಸಾವು

ವಿದ್ಯುತ್‌ ತಗುಲಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಡರನಾಯಕನಹಳ್ಳಿಯ ಡಿ ಎಸ್ ಸುರೇಶ್ (40) ಮೃತ ದುರ್ದೈವಿ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಡರನಾಯಕನಹಳ್ಳಿಯಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿ ಪಂಪ್ ಸೆಟ್ ಚಾಲನೆ ಮಾಡುವಾಗ ಈ ಘಟನೆ ನಡೆದಿದೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

Continue Reading

ಬೆಂಗಳೂರು

Road Accident: ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಸಾವು; ಬೈಕ್‌ ಅಪಘಾತದಲ್ಲಿ ಸವಾರರಿಬ್ಬರು ಮೃತ್ಯು

Road Accident: ಬೆಂಗಳೂರಿನಲ್ಲಿ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಮೃತಪಟ್ಟರೆ, ಇತ್ತ ಮೈಸೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬೈಕ್‌ ಸವಾರರಿಬ್ಬರು ಅಪಘಾತದಲ್ಲಿ ಮೃತ್ಯುವಾಗಿದ್ದಾರೆ.

VISTARANEWS.COM


on

By

Road Accident
Koo

ಬೆಂಗಳೂರು/ಕೊಡಗು: ಬೆಂಗಳೂರಿನ ಚಿಕ್ಕಬಾಣವಾರ ಸಮೀಪದ ಬ್ಯಾಲಕೆರೆ ರಸ್ತೆಯಲ್ಲಿ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್‌ರೊಬ್ಬರು ದಾರುಣವಾಗಿ (Road Accident) ಮೃತಪಟ್ಟಿದ್ದಾರೆ. ಲಾರಿ ಕ್ಲೀನರ್‌ ರಾಮನಂದ್ ಸಿಂಗ್ (42) ಮೃತ ದುರ್ದೈವಿ.

ಲಾರಿ ರಿವರ್ಸ್ ತೆಗೆಯಬೇಕಾದರೆ ಈ ದುರ್ಘಟನೆ ನಡೆದಿದೆ. ಸದ್ಯ ಲಾರಿ ಹಾಗೂ ಚಾಲಕನನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಚಿಕ್ಕಬಾಣವಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Road Accident : ಬಲ ತಿರುವು ಪಡೆಯುವಾಗ ಬೈಕ್‌ ಸವಾರನ ಮೇಲೆ ಹರಿದ ಕೆಎಸ್‌ಆರ್‌ಟಿಸಿ ಬಸ್‌; ಸಿಸಿ ಕ್ಯಾಮೆರಾದಲ್ಲಿ ಅಪಘಾತ ಸೆರೆ

ಧರ್ಮಸ್ಥಳಕ್ಕೆ ಹೊರಟಿದ್ದ ಯುವಕರು ಬೈಕ್‌ ಅಪಘಾತದಲ್ಲಿ ಸಾವು

ಕೊಡಗು: ಕೊಡಗಿನ ಮಡಿಕೇರಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 275ರ ಕೊಯನಾಡು ಬಳಿ ಬೈಕ್ ಅಪಘಾತ ಸಂಭವಿಸಿದೆ. ಮೈಸೂರು ಮೂಲದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ರಾಯಲ್‌ ಎನ್‌ಫೀಲ್ಡ್‌ ಬೈಕ್‌ನಲ್ಲಿ ವೇಗವಾಗಿ ಬಂದ ಸವಾರರು ನಿಯಂತ್ರಣ ತಪ್ಪಿ ಮೋರಿಗೆ ಗುದ್ದಿದ್ದಾರೆ.

ಗುದ್ದಿದ ರಭಸಕ್ಕೆ ಬೈಕ್‌ನಿಂದ ಹಾರಿ ಬಿದ್ದಿದ್ದಾರೆ. ಗಂಭೀರ ಗಾಯಗೊಂಡು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮವಾರ ಬೆಳಗ್ಗೆ ಸ್ಥಳೀಯರು ನೋಡಿದಾಗ ಅಪಘಾತ ಪ್ರಕರಣ ಬೆಳಕಿಗೆ ಬಂದಿದೆ. ಮೋರಿ ಬಳಿ ಬೈಕ್ ಮತ್ತು ಎರಡು ಮೃತದೇಹಗಳು ಪತ್ತೆಯಾಗಿವೆ.

ಮೈಸೂರಿನ ಪವನ್ ಮತ್ತು ಮನೋಜ್ ಮೃತ ದುರ್ದೈವಿಗಳು. ಬೈಕ್‌ ಮೂಲಕ ಮೈಸೂರಿನಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದರು. ಆದರೆ ಬೈಕ್‌ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Road Accident : ಬಲ ತಿರುವು ಪಡೆಯುವಾಗ ಬೈಕ್‌ ಸವಾರನ ಮೇಲೆ ಹರಿದ ಕೆಎಸ್‌ಆರ್‌ಟಿಸಿ ಬಸ್‌; ಸಿಸಿ ಕ್ಯಾಮೆರಾದಲ್ಲಿ ಅಪಘಾತ ಸೆರೆ

Road Accident : ಯಮರೂಪಿಯಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಬೈಕ್‌ ಸವಾರನ ಪ್ರಾಣವನ್ನೇ ತೆಗೆದಿದೆ. ತಿರುವು ಪಡೆಯುವಾಗ ಎದುರಿಗೆ ಬಂದ ಬಸ್‌ ಡಿಕ್ಕಿ ಹೊಡೆದಿದೆ.

VISTARANEWS.COM


on

By

Road Accident
Koo

ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ಗೆ (KSRTC Bus) ಸಿಲುಕಿ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ತುಮಕೂರು ನಗರದ ಶಿವಕುಮಾರ್ ಸ್ವಾಮೀಜಿ ವೃತ್ತದಲ್ಲಿ ಅಪಘಾತ (Road Accident) ಸಂಭವಿಸಿದೆ. ತುಮಕೂರು ನಗರದ ಚೇತನ ಬಡಾವಣೆ ನಿವಾಸಿ ಚಂದ್ರಶೇಖರ್ (49) ಮೃತ ದುರ್ದೈವಿ.

ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಂದ್ರಶೇಖರ್‌ ಬೈಕ್‌ನಲ್ಲಿ ಬಟವಾಡಿ ಕಡೆಯಿಂದ ಮಹಾತ್ಮ ಗಾಂಧಿ ಸ್ಟೇಡಿಯಂ ಕಡೆಗೆ ಹೋಗುತ್ತಿದ್ದರು. ಬಲ ತಿರುವು ಪಡೆದು ಮುಂದೆ ಹೋಗಬೇಕು ಎನ್ನುವಾಗ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸಮೇತ ಕೆಳಗೆ ಬಿದ್ದ ಚಂದ್ರಶೇಖರ್‌ ಅವರ ಮೇಲೆ ಬಸ್‌ ಹರಿದಿದೆ. ಬಸ್‌ ನಡಿ ಸಿಲುಕಿ ಗಂಭೀರ ಗಾಯಗೊಂಡಿದ್ದ ಚಂದ್ರಶೇಖರ್‌ ಅವರನ್ನು ಸ್ಥಳೀಯರು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ತುಮಕೂರಿನ ಎನ್‌ಇಪಿಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Electrocution: ಡಿಜೆ ವಾಹನಕ್ಕೆ ಹೈಟೆನ್ಷನ್‌ ವಿದ್ಯುತ್‌ ತಂತಿ ತಗುಲಿ ಆಘಾತ; 8 ಮಂದಿ ಭಕ್ತರ ಸಾವು

ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಸಾವು

ಬೆಂಗಳೂರಿನ ಚಿಕ್ಕಬಾಣವಾರ ಸಮೀಪದ ಬ್ಯಾಲಕೆರೆ ರಸ್ತೆಯಲ್ಲಿ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್‌ರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಲಾರಿ ಕ್ಲೀನರ್‌ ರಾಮನಂದ್ ಸಿಂಗ್ (42) ಮೃತ ದುರ್ದೈವಿ.

ಲಾರಿ ರಿವರ್ಸ್ ತೆಗೆಯಬೇಕಾದರೆ ಈ ದುರ್ಘಟನೆ ನಡೆದಿದೆ. ಸದ್ಯ ಲಾರಿ ಹಾಗೂ ಚಾಲಕನನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

CM Siddaramaiah: ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌? ಇಂದು ರಾಜ್ಯಪಾಲರಿಂದ ನಿರ್ಧಾರ

CM Siddaramaiah: ತನಿಖೆಗೆ ಅನುಮತಿ ಕೊಟ್ಟರೆ ಸಿಎಂ ಸಿದ್ದರಾಮಯ್ಯನವರಿಗೆ ಕಾನೂನು ಕಂಟಕ ಶುರುವಾಗಲಿದೆ. ಪ್ರಾಸಿಕ್ಯೂಶನ್‌ಗೆ ಅನುಮತಿ ಸಿಕ್ಕ ಬೆನ್ನಲ್ಲೇ ಅಬ್ರಾಹಂ ಖಾಸಗಿ ದೂರು ದಾಖಲಿಸಲಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ಇಲ್ಲವೇ ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಬಹುದು.

VISTARANEWS.COM


on

thawar chand gehlot cm siddaramaiah Governor versus state
Koo

ಬೆಂಗಳೂರು: ಒಂದು ಕಡೆ ಪ್ರತಿಪಕ್ಷಗಳಿಂದ ʼಮೈಸೂರು ಚಲೋʼ (Mysore Chalo) ಪಾದಯಾತ್ರೆ (BJP-JDS Padayatra) ಮೂರನೇ ದಿನ ಪ್ರವೇಶಿಸುತ್ತಿದೆ. ಇನ್ನೊಂದೆಡೆ, ಒಂದು ವಾರದಿಂದ ದೆಹಲಿಯಲ್ಲಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Givernor Thavar Chand Gehlot) ಇಂದು ಬೆಂಗಳೂರಿಗೆ ಮರಳಿದ್ದು, ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಶನ್‌ಗೆ (Procecution) ನೀಡಲಾದ ಮನವಿಯ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಈಗಾಗಲೇ ಅನುಮತಿ ಕೇಳಿದ್ದಾರೆ. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಒಂದು ವಾರದಿಂದ ದೆಹಲಿಯಲ್ಲಿದ್ದು, ರಾಜ್ಯಪಾಲರುಗಳ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರು. ಹೀಗಾಗಿ ಯಾವುದೇ ತೀರ್ಮಾನ ತೆಗೆದುಕೊಂಡಿರಲಿಲ್ಲ.

ಇಂದು ರಾಜ್ಯಪಾಲರು ರಾಜ್ಯಕ್ಕೆ ವಾಪಸು ಆಗಿದ್ದಾರೆ. ರಾಜ್ಯ ಸರ್ಕಾರ ಕಳುಹಿಸಿರುವ ಕ್ಯಾಬಿನೆಟ್ ನಿರ್ಧಾರವನ್ನು ರಾಜ್ಯಪಾಲರು ಪರಿಶೀಲನೆ ಮಾಡಲಿದ್ದಾರೆ. ಸಿಎಂಗೆ ಕಳಿಸಿರುವ ನೋಟೀಸ್‌ ಅನ್ನು ವಾಪಸ್‌ ಪಡೆಯುವಂತೆ ರಾಜ್ಯಪಾಲರಿಗೆ ಕ್ಯಾಬಿನೆಟ್‌ ಮನವಿ ಮಾಡಿದೆ. ಇದು ಪ್ರಾಸಿಕ್ಯೂಷನ್‌ಗೆ ಅರ್ಹ ಪ್ರಕರಣವೇ ಅಲ್ಲವೇ ಎಂದು ತೀರ್ಮಾನ ತೆಗೆದುಕೊಳ್ಳುವ ಹಾಗೂ ಕಾನೂನು ಸಲಹೆ ಬೇಕಿದ್ದರೆ ಮತ್ತೊಮ್ಮೆ ವಕೀಲರ ಜತೆ ರಾಜ್ಯಪಾಲರು ಚರ್ಚೆ ನಡೆಸುವ ಸಂಭವ ಇದೆ.

ತನಿಖೆಗೆ ಅನುಮತಿ ಕೊಟ್ಟರೆ ಸಿಎಂ ಸಿದ್ದರಾಮಯ್ಯನವರಿಗೆ ಕಾನೂನು ಕಂಟಕ ಶುರುವಾಗಲಿದೆ. ಪ್ರಾಸಿಕ್ಯೂಶನ್‌ಗೆ ಅನುಮತಿ ಸಿಕ್ಕ ಬೆನ್ನಲ್ಲೇ ಅಬ್ರಾಹಂ ಖಾಸಗಿ ದೂರು ದಾಖಲಿಸಲಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ಇಲ್ಲವೇ ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಬಹುದು. ಬಳಿಕ ಪ್ರಕರಣ ಸ್ವೀಕರಿಸುವ ಇಲ್ಲವೇ ತಿರಸ್ಕರಿಸುವ ಬಗ್ಗೆ ನ್ಯಾಯಾಲಯದಲ್ಲಿ ವಾದ ಹಾಗೂ ಪ್ರತಿವಾದ ನಡೆಯಲಿದೆ.

ಕೋರ್ಟ್ ಖಾಸಗಿ ದೂರನ್ನು ಸ್ವೀಕರಿಸಿದರೆ ಸಿಎಂಗೆ ಬಂಧನದ ಭೀತಿಯೂ ಶುರುವಾಗಬಹುದು. ತನಿಖೆಗೆ ಆದೇಶ ನೀಡಿದರೆ ರಾಜೀನಾಮೆಗೆ ಒತ್ತಡ ಇನ್ನಷ್ಟು ಹೆಚ್ಚಲಿದೆ. ಪ್ರತಿಪಕ್ಷಗಳ ಜೊತೆಗೆ, ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಸ್ವಪಕ್ಷೀಯರು ಕೂಡ ಒಳ ಏಟು ಶುರು ಮಾಡಬಹುದು. ಸ್ವಪಕ್ಷದಲ್ಲೂ ಸಿಎಂ ರಾಜೀನಾಮೆಗೆ ಬೇಡಿಕೆ ಕೇಳಿಬರಬಹುದು. ಹೀಗಾಗಿ ರಾಜ್ಯ ರಾಜಕೀಯ ಇನ್ನಷ್ಟು ತಲ್ಲಣ ಸೃಷ್ಟಿಸಲಿದೆ.

ಸಿಎಂ ಮುಂದೆ ಇರೋ ಆಯ್ಕೆಗಳೇನು?

ಪ್ರಾಸಿಕ್ಯೂಶನ್‌ಗೆ ಅನುಮತಿ ಸಿಕ್ಕರೆ ಸಿಎಂ ಕಾನೂನು ಹೋರಾಟ ಮಾಡುವುದು ಅನಿವಾರ್ಯ. ತನಿಖೆಗೆ ಅನುಮತಿ ಕೊಟ್ಟಿರುವುದನ್ನು ಹೈಕೋರ್ಟ್‌ನಲ್ಲಿ ರಿಟ್ ಮೂಲಕ ಪ್ರಶ್ನಿಸಬಹುದು. ಜತೆಗೆ ಅಬ್ರಹಾಂ ಸಲ್ಲಿಸಿರುವ ದೂರು ರದ್ದು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ರಾಜ್ಯಪಾಲರ ನಡೆ ಪ್ರಶ್ನೆ ಮಾಡಿ ಸಂವಿಧಾನ ಪೀಠಕ್ಕೂ ಹೋಗಬಹುದು. ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಅವಕಾಶ ಇರುವುದರಿಂದ ಸುಪ್ರೀಂ ಕೋರ್ಟ್‌ಗೆ ನೇರವಾಗಿ ಹೋಗುವುದು ಅನುಮಾನ.

ಕಾಂಗ್ರೆಸ್‌ ಒಗ್ಗಟ್ಟಿನಿಂದ ಹೋರಾಡಲಿದೆ: ಕೆಸಿ ವೇಣುಗೋಪಾಲ್

ಬೆಂಗಳೂರು: ಬಿಜೆಪಿ–ಜೆಡಿಎಸ್‌ ಪಕ್ಷಗಳ (BJP-JDS Padayatra) ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ ಎಂದು ತಿಳಿಸಿದರು.

2018ರಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ ಕೇಂದ್ರ ನಾಯಕತ್ವದ ಪಿತೂರಿಯಿಂದ. ಅದೇ ರೀತಿಯ ಸ್ಪಷ್ಟ ಉದ್ದೇಶದಿಂದ ಈಗಲೂ ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ.
ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.‌

ಇದನ್ನೂ ಓದಿ | MB Patil: ಕುಮಾರಸ್ವಾಮಿಯದು ಅವಕಾಶವಾದಿ ಮೈತ್ರಿ ಎಂದ ಎಂ.ಬಿ. ಪಾಟೀಲ್

Continue Reading
Advertisement
Viral Video
Latest5 mins ago

Viral Video: ಯುವತಿ ಜತೆ ಡ್ಯಾನ್ಸ್ ಮಾಡ್ತಾ ಮಾಡ್ತಾ ಪ್ರಾಣಬಿಟ್ಟ ಯುವಕ; ಆಘಾತಕಾರಿ ವಿಡಿಯೊ

Physical Abuse
ವಿಜಯಪುರ17 mins ago

Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

Sex Racket
Latest20 mins ago

Sex Racket: ಹೋಟೆಲ್‍ನಲ್ಲಿ ಸೆಕ್ಸ್ ದಂಧೆ ಪತ್ತೆ; ನಗ್ನ ಸ್ಥಿತಿಯಲ್ಲಿದ್ದ 10 ಜೋಡಿಗಳು ಪೊಲೀಸ್‌ ಬಲೆಗೆ!

Duniya Vijay- Ganesh To Combined together make Movie in future
ಸ್ಯಾಂಡಲ್ ವುಡ್22 mins ago

Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

Cloudburst
ದೇಶ23 mins ago

Cloudburst: ಮೇಘಸ್ಫೋಟದಿಂದ ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ; 40ಕ್ಕೂ ಹೆಚ್ಚು ಮಂದಿ ನಾಪತ್ತೆ

Viral Video
Latest28 mins ago

Viral Video: ಅಳುತ್ತಿರುವ ಹುಡುಗನನ್ನು ಸಮಾಧಾನಪಡಿಸಿದ ನಾಯಿ ಮರಿ! ಆನಂದ್‌ ಮಹೀಂದ್ರಾ ಹಂಚಿಕೊಂಡ ವಿಡಿಯೊ ಇದು

Valmiki Corporation Scam
ಪ್ರಮುಖ ಸುದ್ದಿ37 mins ago

Valmiki Corporation scam: ವಾಲ್ಮೀಕಿ ನಿಗಮ ಹಗರಣ; ಕೋರ್ಟ್‌ಗೆ 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎಸ್‌ಐಟಿ

Indian stock market
ಪ್ರಮುಖ ಸುದ್ದಿ38 mins ago

Stock Market News: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ, ರೂ.17.03 ಲಕ್ಷ ಕೋಟಿ ನಷ್ಟ

Kannada New Movie idu enta lokavayya movie Kannada ananth nag
ಸಿನಿಮಾ57 mins ago

Kannada New Movie: ʻಇದು ಎಂಥಾ ಲೋಕವಯ್ಯʼ ಸಿನಿಮಾ ಬಿಡುಗಡೆಗೆ ಸಜ್ಜು; ತಂಡಕ್ಕೆ ನಟ ಅನಂತ್ ನಾಗ್ ಸಾಥ್‌!

Nursing student dies
ಕರ್ನಾಟಕ1 hour ago

Nursing Student Dies: 6ನೇ ಮಹಡಿಯಿಂದ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌