ಚಾಮರಾಜಪೇಟೆ ಮೈದಾನ: ಖಾಕಿ ಕಣ್ಗಾವಲು, ಕೆಎಸ್‌ಆರ್‌ಪಿ ಪಥಸಂಚಲನ - Vistara News

ಪ್ರಮುಖ ಸುದ್ದಿ

ಚಾಮರಾಜಪೇಟೆ ಮೈದಾನ: ಖಾಕಿ ಕಣ್ಗಾವಲು, ಕೆಎಸ್‌ಆರ್‌ಪಿ ಪಥಸಂಚಲನ

ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದು, ಪೊಲೀಸರು ಹಾಗೂ ಕೆಎಸ್‌ಆರ್‌ಪಿ ಪಡೆಯವರು ಶುಕ್ರವಾರ ಪಥಸಂಚನ ನಡೆಸಿದರು.

VISTARANEWS.COM


on

eidgah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿಂದೂ ಹಾಗೂ ಮುಸ್ಲಿಂ ಪರ ಸಂಘಟನೆಗಳ ನಡುವಿನ ತಿಕ್ಕಾಟ, ಸಂಘರ್ಷಕ್ಕೆ ಕಾರಣವಾಗಿರುವ ಚಾಮರಾಜಪೇಟೆಯ ಮೈದಾನದಲ್ಲಿ ಪೊಲೀಸ್‌ ಹಾಗೂ ಅರೆಸೇನಾ ಪಡೆಗಳು ಪಥಸಂಚಲನ ನಡೆಸಿದವು.

ಚಾಮರಾಜಪೇಟೆಯ ರಸ್ತೆಗಳು ಹಾಗೂ ಮೈದಾನದಲ್ಲಿ ಕೆಎಸ್ಆರ್‌ಪಿ‌ ತುಕಡಿ ಹಾಗು ಪೊಲೀಸರು ಸೇರಿ ಸುಮಾರು 600 ಸಿಬ್ಬಂದಿ ಪಥಸಂಚಲನದಲ್ಲಿ ಭಾಗಿಯಾದರು. ಡಿಸಿಪಿ ಲಕ್ಷ್ಮಣ್ ನಿಂಬರಗಿ, ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮತ್ತು ಹಿರಿಯ ಅಧಿಕಾರಿಗಳು ಏರಿಯಾ ಮ್ಯಾಪಿಂಗ್ ನಡೆಸಿದ್ದಾರೆ.

ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿಕೆ ನೀಡಿ, ಪರಿಸರದಲ್ಲಿ ಶಾಂತಿ ಕಾಪಾಡುವ ಹಾಗೂ ದುಷ್ಕೃತ್ಯಕ್ಕೆ ಮುಂದಾಗಲಿರುವ ಕಿಡಿಗೇಡಿಗಳಿಗೆ ಎಚ್ಚರ ನೀಡುವ ಉದ್ದೇಶದಿಂದ ಈ ಪರೇಡ್‌ ನಡೆಸಲಾಗಿದೆ ಎಂದರು.

ಆಗಸ್ಟ್‌ 15ರಂದು ಸೂಕ್ತ ಪೊಲೀಸ್ ಬಂದೋಬಸ್ತ್‌ನಲ್ಲಿ ಶಾಂತಿಯುತವಾಗಿ ಸರ್ಕಾರದ ಕಡೆಯಿಂದಲೇ ಇಲ್ಲಿ ಧ್ವಜಾರೋಹಣ ನಡೆಯಲಿದೆ. ಯಾವುದೇ ರೀತಿಯ ಗಲಭೆಗೆ ಆಸ್ಪದ ಇಲ್ಲ. ಕಾರ್ಯಕ್ರಮಕ್ಕೆ ಆಹ್ವಾನ ಇರುವವರಿಗೆ ಮಾತ್ರ ಅವಕಾಶ. ಎರಡು ತುಕಡಿ ಕೆಎಸ್‌ಆರ್‌ಪಿ ಸಿಬ್ಬಂದಿ ಹಾಗೂ ಪೊಲೀಸರು ಸದಾ ಇಲ್ಲಿರುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಜಮೀರ್‌ ಅಹ್ಮದ್‌ಗೆ ಹಿನ್ನಡೆ: ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯ ಸರ್ಕಾರದಿಂದಲೇ ಧ್ವಜಾರೋಹಣ

ಈದ್ಗಾ ಮೈದಾನ ಹಾಟ್‌ಸ್ಪಾಟ್‌

ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಈಗ ಈದ್ಗಾ ಮೈದಾನ ಹಾಟ್‌ಸ್ಪಾಟ್ ಎನಿಸಿದೆ. ಕಂದಾಯ ಇಲಾಖೆಯ ಸುಪರ್ದಿಗೆ ಬಂದ ಬಳಿಕ ಈದ್ಗಾ ಮೈದಾನದಲ್ಲಿ ಪ್ರಥಮ ಬಾರಿಗೆ ಸರ್ಕಾರದ ವತಿಯಿಂದ ಧ್ವಜಾರೋಹಣ ನಡೆಯಲಿದೆ. ಪ್ರತಿ ಬಾರಿ ಮಾಣಿಕ್ ಶಾ ಪರೇಡ್ ಗ್ರೌಂಡ್‌ನಲ್ಲಿ ಹೆಚ್ಚಿನ ಭದ್ರತೆ ನೀಡಲಾಗುತಿತ್ತು. ಆದರೆ ಈ ಬಾರಿ ಈದ್ಗಾ ಮೈದಾನಕ್ಕೆ ಹೆಚ್ಚಿನ ಪೊಲೀಸ್ ದಳ ನಿಯೋಜನೆ ಮಾಡಲಾಗಿದೆ‌. ಆಗಸ್ಟ್ 15ರಂದು ಹೆಚ್ಚಿನ ಭದ್ರತೆ ಬೇಕಿರುವ ಹಿನ್ನೆಲೆಯಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್‌ಗೂ ಪೊಲೀಸ್ ಇಲಾಖೆ ಮನವಿ ಮಾಡಲಿದೆ.

eidgah

ಚಾಮರಾಜಪೇಟೆ ಮೈದಾನದಲ್ಲಿ ಮುಸ್ಲಿಮರು ಹಾಗೂ ಹಿಂದೂಗಳು ಕಾರ್ಯಕ್ರಮ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಪ್ರದೇಶದ ಸೂಕ್ಷ್ಮ ಪರಿಸ್ಥಿತಿ ಅರಿತ ಪೊಲೀಸರು ಸ್ಥಳದಲ್ಲಿ ಸಾಕಷ್ಟು ಮುಂಜಾಗರೂಕತೆ ವಹಿಸಿದ್ದಾರೆ. 15 ದಿನಗಳಿಂದ ಕೆಎಸ್‌ಆರ್‌ಪಿ ತುಕಡಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿವೆ.

ಪಶ್ಚಿಮ ವಿಭಾಗದ ಪೊಲೀಸರು ಮಫ್ತಿಯಲ್ಲಿ ಮಾಹಿತಿ ಕಲೆ ಹಾಕುತ್ತಿದ್ದು, ಅಂಗಡಿ ಮುಂಗಟ್ಟು, ಬಾರ್ ಆ್ಯಂಡ್ ರೆಸ್ಟೋರೆಂಟ್, ಸಂಘಸಂಸ್ಥೆಗಳು, ಕಚೇರಿಗಳು, ಸಾರ್ವಜನಿಕ ಪ್ರದೇಶಗಳು, ಆಟೋ ಸ್ಟಾಂಡ್‌ಗಳು, ದೇವಾಲಯಗಳು ಹೀಗೆ ಹತ್ತು ಹಲವಾರು ಕಡೆ ಬಾತ್ಮಿದಾರರನ್ನು ಹೆಚ್ಚಿಸಿಕೊಂಡಿದ್ದಾರೆ. ದಿನದ 24 ಗಂಟೆಯೂ ಗಸ್ತು ನಡೆಸುತ್ತಿರುವ ಪೊಲೀಸ್ ಪಡೆ ಮೈದಾನದ ಸುತ್ತಮುತ್ತ ಜನ ಗುಂಪುಗೂಡದಂತೆ ನೋಡಿಕೊಂಡಿದ್ದಾರೆ. ಸ್ಥಳೀಯ ಮತ್ತು ಸುತ್ತಮುತ್ತಲಿನ ಪೊಲೀಸ್ ಠಾಣೆಗಳ ರೌಡಿ ಶೀಟರ್‌ಗಳ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದಾರೆ.

ಇದನ್ನೂ ಓದಿ: ಈದ್ಗಾ ಮೈದಾನ ಇನ್ನು `ಸರ್ವೇ ನಂಬರ್‌ 40-ಗುಟ್ಟಹಳ್ಳಿʼ: ಸಚಿವ ಆರ್‌. ಅಶೋಕ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Nataša Stanković: ಹಾರ್ದಿಕ್ ಪಾಂಡ್ಯ ಜತೆ ವಿಚ್ಛೇದನ?; ಅನುಮಾನಕ್ಕೆ ತೆರೆ ಎಳೆದ ಪತ್ನಿ ನತಾಶಾ

Nataša Stanković: ನತಾಶಾ ಅವರು ಪಾಂಡ್ಯ ಜತೆಗಿನ ಮದುವೆಯ ಹಲವು ಸುಂದರ ಫೋಟೊಗಳನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡು ನಮ್ಮ ಮಧ್ಯೆ ಯಾವುದೇ ಮನಸ್ತಾಪವಿಲ್ಲ ಎನ್ನುವಂತೆ ಎಲ್ಲ ಅನುಮಾನಕ್ಕೆ ತೆರೆ ಎಳೆದಿದ್ದಾರೆ.

VISTARANEWS.COM


on

Nataša Stanković
Koo

ಮುಂಬಯಿ: ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾನ್‌ಕೋವಿಕ್‌(Nataša Stanković) ಅವರ ವಿವಾಹ ಮುರಿದು ಬಿದ್ದಿದೆಯೇ?, ಈ ಜೋಡಿ ವಿಚ್ಛೇದನಕ್ಕೆ ಪಡೆಯಲಿದೆಯೇ? ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಿನಗಳ ಹಿಂದೆ ಭಾರಿ ಚರ್ಚೆಯಾಗುತ್ತಿತ್ತು. ಇದರ ಮಧ್ಯ ಈ ಜೋಡಿಯ ಸಾಮಾಜಿಕ ಜಾಲತಾಣಗಳ ಒಂದೊಂದು ಪೋಸ್ಟ್​ಗಳು ಕೂಡ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಆದರೆ, ಇದೀಗ ಈ ಜೋಡಿಯ ಮಧ್ಯೆ ಯಾವುದೇ ಬಿರುಕು ಮೂಡಿಲ್ಲ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ವಿಚ್ಛೇದನದ ಸುದ್ದಿಯ ನಡುವೆ, ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದರು. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದರು. ಈ ವೇಳೆ ನತಾಶಗೆ ಪಾಪರಾಜಿಗಳು ಪಾಂಡ್ಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ನತಾಶ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದರು.

ಇದಾಗ ಬಳಿಕ ನತಾಶಾ ಸ್ಟಾನ್‌ಕೋವಿಕ್‌ ಅವರು ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದರು. ಯೇಸು ತನ್ನ ಜಾಡನ್ನು ಹಿಂಬಾಲಿಸಿದಾಗ ಕುರಿಮರಿ ಮುಂದಾಳತ್ವ ವಹಿಸುತ್ತಿರುವ ಫೋಟೊ ಇದಾಗಿತ್ತು. ಈ ಫೋಟೊವನ್ನು ಕಂಡಾಗ ಈ ಜೋಡಿ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿತ್ತು. ಅಲ್ಲದೆ ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು ಎಂದು ವರದಿಯಾಗಿತ್ತು. ಈ ಎಲ್ಲ ಅನುಮಾನಗಳಿಗೆ ಇದೀಗ ತೆರೆಬಿದ್ದಂತಿದೆ. ಹೌದು, ನತಾಶಾ ಅವರು ಪಾಂಡ್ಯ ಜತೆಗಿನ ಮದುವೆಯ ಹಲವು ಸುಂದರ ಫೋಟೊಗಳನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡು ನಮ್ಮ ಮಧ್ಯೆ ಯಾವುದೇ ಮನಸ್ತಾಪವಿಲ್ಲ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ.

ಇದನ್ನೂ ಓದಿ Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

ಪ್ರಚಾರಕ್ಕಾಗಿ ಮಾಡಿದ್ದೇ?


ಕೆಲ ಮೂಲಗಳ ಪ್ರಕಾರ ವಿಚ್ಚೇದನದ ಸುದ್ದಿ ಪಿಆರ್‌ ತಂಡ ಮಾಡಿದ ಪಬ್ಲಿಕ್‌ ಸ್ಟಂಟ್‌ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ನತಾಶ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪಾಂಡ್ಯ ಜತೆಗಿನ ಫೋಟೊಗಳನ್ನು ಡಿಲೀಟ್​ ಮಾಡಿ ಈಗ ಹಳೆಯ ಫೋಟೋಗಳನ್ನು ರೀಸ್ಟೋರ್‌ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರು ಗರ್ಭಿಣಿ ಆಗಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು. ಪುನರ್‌ ವಿವಾಹವಾಗಿದ್ದ ಫೋಟೊವನ್ನೇ ಈಗ ನತಾಶ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವುದು.

Continue Reading

ಪ್ರಮುಖ ಸುದ್ದಿ

Tumkur Lok Sabha Constituency: ತುಮಕೂರಿನ ಅದೃಷ್ಟ ಪರೀಕ್ಷೆಯಲ್ಲಿ ಗೆಲ್ಲುವರೇ ವಿ. ಸೋಮಣ್ಣ?

Tumkur Lok Sabha Constituency: ಈ ಬಾರಿ ಬೆಂಗಳೂರಿನ ಗೋವಿಂದರಾಜನಗರದ ಮಾಜಿ ಶಾಸಕ ವಿ.ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. 2014ರ ಚುನಾವಣೆಯಲ್ಲಿ ಬಿಜೆಪಿಯಿಂದ ವಿ.ಸೋಮಣ್ಣ ವಿರುದ್ಧ ಸ್ಪರ್ಧಿಸಿದ್ದ ಎಸ್.ಪಿ.ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

VISTARANEWS.COM


on

Tumkur Lok Sabha Constituency
Koo

ತುಮಕೂರು ಲೋಕಸಭಾ ಕ್ಷೇತ್ರವು ಬೆಂಗಳೂರಿನಿಂದ 70 ಕಿ.ಮೀ ದೂರದಲ್ಲಿದೆ. ತುಮಕೂರು ನಗರವು ರೇಷ್ಮೆ ಮತ್ತು ಹತ್ತಿ, ಜೊತೆಗೆ ಹಾಲು ಮತ್ತು ಡೈರಿ ಉತ್ಪನ್ನಗಳ ಉತ್ಪಾದನೆಗೆ ಹೆಸರುವಾಸಿ. ತುಮಕೂರು ಲೋಕಸಭಾ ಕ್ಷೇತ್ರವು ಆರಂಭದಲ್ಲಿ ಮೈಸೂರು ರಾಜ್ಯದ ಭಾಗವಾಗಿತ್ತು, ಆದರೆ 1977ರ ನಂತರ ಇದನ್ನು ಕರ್ನಾಟಕಕ್ಕೆ ಸೇರಿಸಲಾಯಿತು. ಒಟ್ಟು 16 ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ 10 ಬಾರಿ ಗೆಲುವು ಸಾಧಿಸಿದ್ದರೆ, ತುಮಕೂರು ಕ್ಷೇತ್ರವನ್ನು ಬಿಜೆಪಿ 4 ಬಾರಿ ವಶಪಡಿಸಿಕೊಂಡಿದೆ. ಈ ಬಾರಿ ಬೆಂಗಳೂರಿನ ಗೋವಿಂದರಾಜನಗರದ ಮಾಜಿ ಶಾಸಕ ವಿ. ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. 2014ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎಸ್.ಪಿ.ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ತುಮಕೂರು ಲೋಕಸಭಾ ಕ್ಷೇತ್ರವನ್ನು ವಿಶೇಷವಾಗಿ ಕಾಂಗ್ರೆಸ್ ನ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಆದರೆ ಕಳೆದ ಮೂರು ದಶಕಗಳಲ್ಲಿ ಬಿಜೆಪಿ ಈ ಸ್ಥಾನವನ್ನು ನಾಲ್ಕು ಬಾರಿ ಗೆದ್ದಿದೆ. ಅಲ್ಲದೆ, 2019ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡ ಅವರೇ ಸೋತಿದ್ದರು. ಬಿಜೆಪಿಯ ಜಿ. ಎಸ್ ಬಸವರಾಜು ಅವರು ಗೆಲುವು ಕಂಡಿದ್ದರು.

ಹಿಂದಿನ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಜಿ.ಎಸ್.ಬಸವರಾಜು ಅವರು ಜೆಡಿಎಸ್​ನ ಅಭ್ಯರ್ಥಿ ಎಚ್.ಡಿ.ದೇವೇಗೌಡ ಅವರನ್ನು 13,339 ಮತಗಳ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.47.86ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಮುದ್ದಹನುಮೇಗೌಡ ಎಸ್.ಪಿ ಅವರು ಬಿಜೆಪಿಯ ಜಿ.ಎಸ್.ಬಸವರಾಜು ಅವರನ್ನು 74,041 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 39.03% ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಜಿ.ಎಸ್.ಬಸವರಾಜು ಅವರು ಜೆಡಿಎಸ್​ನ ಮುದ್ದಹನುಮೇಗೌಡ ಅವರನ್ನು 21,445 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.36.78ರಷ್ಟು ಮತಗಳನ್ನು ಪಡೆದಿತ್ತು.

ವಿಧಾನ ಸಭಾ ಕ್ಷೇತ್ರಗಳು ಎಷ್ಟಿವೆ?

ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿವೆ. ಅವುಗಳೆಂದರೆ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಗುಬ್ಬಿ ಮತ್ತು ಮಧುಗಿರಿ. ಕಾಂಗ್ರೆಸ್ 4, ಬಿಜೆಪಿ 2, ಜೆಡಿಎಸ್ 2 ಸ್ಥಾನಗಳನ್ನು ಹೊಂದಿವೆ.

ಇದನ್ನೂ ಓದಿ: Chitradurga Lok Sabha Constituency : ಚಿತ್ರದುರ್ಗ ಕ್ಷೇತ್ರವನ್ನು ಮರು ವಶಪಡಿಸಿಕೊಳ್ಳುವುದೇ ಕಾಂಗ್ರೆಸ್​?

2011 ರ ಜನಗಣತಿಯ ಪ್ರಕಾರ ತುಮಕೂರು 2678980 ಜನಸಂಖ್ಯೆಯನ್ನು ಹೊಂದಿತ್ತು. ಸರಾಸರಿ ಸಾಕ್ಷರತಾ ಪ್ರಮಾಣವು 75.14% – ಮಹಿಳೆಯರಲ್ಲಿ 67.38% ಮತ್ತು ಪುರುಷರಲ್ಲಿ 82.81% ಆಗಿತ್ತು. ಸುಮಾರು 1207608 ಗ್ರಾಮೀಣ ಮತದಾರರು ಮತದಾರರಲ್ಲಿ ಸುಮಾರು 75% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಕ್ರಮವಾಗಿ 18% ಮತ್ತು 7.4% ರಷ್ಟಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

Prajwal Revanna Case: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ, ಮತ್ತೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ರೇವಣ್ಣ ಪರ ವಕೀಲ ಗಿರೀಶ್ ಕುಮಾರ್ ಬಿ.ಎಂ. ಅರ್ಜ ಸಲ್ಲಿಸಿದ್ದಾರೆ. ಸದ್ಯ ಕೇಸ್ ಸ್ವೀಕರಿಸಿ ಕೋರ್ಟ್‌ ಎಫ್ಆರ್ ನಂಬರ್ ನೀಡಿದೆ. ಇನ್ನು ಕೇಸ್ ನಂಬರ್ ನೀಡಿದ ಬಳಿಕ ಪೀಠಕ್ಕೆ ಅರ್ಜಿ ರವಾನೆಯಾಗುತ್ತದೆ. ಸೋಮವಾರ ಬೆಳಗ್ಗೆ 11:30ಕ್ಕೆ ಭವಾನಿ ರೇವಣ್ಣ ಪರ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ | Food Poisoning : ಮೈಸೂರಲ್ಲಿ ಗೃಹ ಪ್ರವೇಶದ ಊಟ ತಿಂದ ವೃದ್ಧೆ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ

ಪ್ರಜ್ವಲ್ ರೇವಣ್ಣ (Prajwal Revanna) ಸೆಕ್ಸ್ ಸ್ಕ್ಯಾಂಡಲ್‌ಗೆ ಸಂಬಂಧಿಸಿ ಮಹಿಳೆಯೊಬ್ಬಳ ಅಪಹರಣಕ್ಕೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿಯನ್ನು (Bhavani Revanna) ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಅವರ ವಿರುದ್ಧ ಅರೆಸ್ಟ್ ವಾರಂಟ್ ಕೂಡ ಜಾರಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ ಐ ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಪ್ರಜ್ವಲ್‌ಗೂ 41a ಅಡಿ ನೊಟೀಸ್ ನೀಡಿದ್ದ ಎಸ್ಐಟಿ ಆ ಬಳಿಕ ಬಂಧಿಸಿತ್ತು. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಈಗ ಭವಾನಿ ರೇವಣ್ಣಗೂ ಅರೆಸ್ಟ್ ವಾರೆಂಟ್ ಜಾರಿ ಮಾಡುವ ಸಾಧ್ಯತೆ ಇದೆ. ತಾವೇ ಎಸ್ ಐ ಟಿ ಕಚೇರಿಗೆ ಬರುವುದಾಗಿ ಹೇಳಿದ್ದ ಭವಾನಿ ರೇವಣ್ಣ ಆ ಬಳಿಕ ಬರದೇ ತಲೆತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿ ರೇವಣ್ಣ ವಿರುದ್ಧ ಜನಾಕ್ರೋಶವೂ ಹೆಚ್ಚುತ್ತಿದೆ. ಭವಾನಿ ರೇವಣ್ಣಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಮೂರು ಜಿಲ್ಲೆ, ನಾಲ್ಕು ತಂಡ, ಸತತ ಹುಡುಕಾಟ

ಪೊಲೀಸರ ನಾಲ್ಕು ವಿಶೇಷ ತಂಡಗಳಿಂದ ಭವಾನಿ ರೇವಣ್ಣಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆಯುತ್ತಿದೆ. ಈ ತಾಂತ್ರಿಕ ತಂಡ ಭವಾನಿ ರೇವಣ್ಣ ಅವರ ಮೊಬೈಲ್ ಟ್ರ್ಯಾಕ್ ಮಾಡುತ್ತಿದೆ. ಟವರ್ ಡಂಪ್ ಲೊಕೇಷನ್, ಸಿಡಿಆರ್ ಪರಿಶೀಲನೆ ನಡೆಸುತ್ತಿದೆ.

ಎಲ್ಲವೂ ಗೊತ್ತಿದ್ದೂ ಕಣ್ಣಾ ಮುಚ್ಚಾಲೆ ಆಡ್ತಿದ್ದಾರಾ ಭವಾನಿ ರೇವಣ್ಣ?

ತನಿಖೆಗೆ ಸಹಕರಿಸ್ತೀವಿ, ನೊಟೀಸ್ ಕೊಟ್ರೆ ವಿಚಾರಣೆಗೆ ಹಾಜರಾಗ್ತೀವಿ ಎಂದಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಪತ್ನಿ ಭವಾನಿ ಈಗ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕಾರ ಆಗುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಅವರ ಮನೆಗೆ ಹೋಗಿ ಭವಾನಿ ರೇವಣ್ಣರನ್ನ ವಿಚಾರಣೆ ‌ನಡೆಸಲು ಎಸ್ ಐ ಟಿ ಮುಂದಾಗಿತ್ತು. ಆದರೆ ಮನೆಯಿಂದ ಹೊರಬಂದು ಅಜ್ಞಾತ ಸ್ಥಳದಲ್ಲಿ ಅಡಗಿಕೊಂಡಿದ್ದಾರೆ. ಎಸ್ ಐ ಟಿ ನೊಟೀಸ್ ಗೆ ಉತ್ತರವನ್ನೂ ಕೊಟ್ಟಿಲ್ಲ‌ ಸಂಬಂಧಿಕರೊಬ್ಬರ ಮನೆಯಲ್ಲಿ ತಲೆ ಮರೆಸಿಕೊಂಡಿರುವ ಸಾಧ್ಯತೆ ಇದೆ.

ಇದನ್ನೂ ಓದಿ | Prajwal Revanna Case: ಇಂದು ರಹಸ್ಯವಾಗಿ ಪುರುಷತ್ವ ಪರೀಕ್ಷೆ, ನಾಳೆ ಎಲೆಕ್ಷನ್‌ ರಿಸಲ್ಟ್:‌ ಪ್ರಜ್ವಲ್‌ಗೆ ಡಬಲ್ ಟೆ‌ನ್ಷನ್!‌

ಯಾವ ಕ್ಷಣದಲ್ಲಾದ್ರೂ ಭವಾನಿ ರೇವಣ್ಣ ವಶ

ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ಕಲೆ‌ ಹಾಕುತ್ತಿರುವ ಎಸ್ ಐ ಟಿ ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಅವರನ್ನು ಬಂಧಿಸಲು ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ತಂಡ ಸಜ್ಜಾಗಿದೆ.

Continue Reading

ಪ್ರಮುಖ ಸುದ್ದಿ

Chitradurga Lok Sabha Constituency : ಚಿತ್ರದುರ್ಗ ಕ್ಷೇತ್ರವನ್ನು ಮರು ವಶಪಡಿಸಿಕೊಳ್ಳುವುದೇ ಕಾಂಗ್ರೆಸ್​?

Chitradurga Lok Sabha Constituency : ಬಿಜೆಪಿ ಈ ಬಾರಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ನಿಂದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮೂರನೇ ಬಾರಿಗೆ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಗಣನೀಯ ಸಂಖ್ಯೆಯ ಎಸ್ಸಿ ಮತ್ತು ಎಸ್ಟಿ ಮತದಾರರಿದ್ದಾರೆ. 2019ರಲ್ಲಿ ಇಲ್ಲಿ 17.61 ಲಕ್ಷ ಮತದಾರರು ಇದ್ದರೆ 2024ರಲ್ಲಿ 18. 49 ಲಕ್ಷ ಮತದಾರರು ಕಾಣಿಸಿಕೊಂಡಿದ್ದಾರೆ.

VISTARANEWS.COM


on

Chitradurga Lok Sabha Constituency
Koo

ಚಿತ್ರದುರ್ಗ ಲೋಕಸಭೆ ಕ್ಷೇತ್ರ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮೀಸಲಾಗಿದೆ. ಇದು ಇಡೀ ಚಿತ್ರದುರ್ಗ ಜಿಲ್ಲೆ ಮತ್ತು ತುಮಕೂರು ಜಿಲ್ಲೆಯ ಕೆಲವು ಭಾಗಗಳನ್ನು ಒಳಗೊಂಡಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಮೊಳಕಾಲ್ಮೂರು (ಎಸ್ಟಿ), ಚಳ್ಳಕೆರೆ (ಎಸ್ಟಿ), ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ (ಎಸ್ಸಿ), ಶಿರಾ ಮತ್ತು ಪಾವಗಡ (ಎಸ್ಸಿ) ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಆರಂಭದಲ್ಲಿ ಮೈಸೂರು ರಾಜ್ಯದ ಭಾಗವಾಗಿತ್ತು . 1977 ರಿಂದ ಈ ಸ್ಥಾನವು ಕರ್ನಾಟಕ ರಾಜ್ಯದ ಭಾಗವಾಯಿತು.

ಚಿತ್ರದುರ್ಗ ಕ್ಷೇತ್ರದಲ್ಲಿ ಒಟ್ಟು 16 ಲೋಕಸಭಾ ಚುನಾವಣೆಗಳು ನಡೆದಿದ್ದು, ಕಾಂಗ್ರೆಸ್ 11 ಬಾರಿ ಗೆದ್ದಿದೆ. ಇದಲ್ಲದೆ, ಪ್ರಜಾ ಸೋಷಿಯಲಿಸ್ಟ್ ಪಾರ್ಟಿ, ಸ್ವತಂತ್ರ ಅಭ್ಯರ್ಥಿ , ಜನತಾದಳ ಮತ್ತು ಜೆಡಿಯು ಅಭ್ಯರ್ಥಿಗಳು ಇಲ್ಲಿ ಗೆಲುವು ದಾಖಲಿಸಿದ್ದಾರೆ. 2009 ರಲ್ಲಿ ಮೊದಲ ಬಾರಿಗೆ ಬಿಜೆಪಿ ಈ ಸ್ಥಾನದಿಂದ ಗೆದ್ದಿತ್ತು. 2019 ರಲ್ಲಿ ಮತ್ತೆ ಸ್ಥಾನ ಕಸಿದುಕೊಂಡಿತು. ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಸಾಮಾನ್ಯವಾಗಿ ಕಾಂಗ್ರೆಸ್ ನ ಸಾಂಪ್ರದಾಯಿಕ ಕ್ಷೇತ್ರವೆಂದು ಪರಿಗಣಿಸಲಾಗುತ್ತದೆ.

ಬಿಜೆಪಿ ಈ ಬಾರಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ನಿಂದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮೂರನೇ ಬಾರಿಗೆ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಗಣನೀಯ ಸಂಖ್ಯೆಯ ಎಸ್ಸಿ ಮತ್ತು ಎಸ್ಟಿ ಮತದಾರರಿದ್ದಾರೆ. 2019ರಲ್ಲಿ ಇಲ್ಲಿ 17.61 ಲಕ್ಷ ಮತದಾರರು ಇದ್ದರೆ 2024ರಲ್ಲಿ 18. 49 ಲಕ್ಷ ಮತದಾರರು ಕಾಣಿಸಿಕೊಂಡಿದ್ದಾರೆ.

ಹಿಂದಿನ ಫಲಿತಾಂಶಗಳು ಇಲ್ಲಿವೆ

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಎ .ನಾರಾಯಣಸ್ವಾಮಿ ಅವರು ಕಾಂಗ್ರೆಸ್​​ನ ಬಿ.ಎನ್.ಚಂದ್ರಪ್ಪ ಅವರನ್ನು 80,178 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ 2019 ರಲ್ಲಿ ಬಿಜೆಪಿ 50.24% ಮತಗಳನ್ನು ಹೊಂದಿತ್ತು.

ಇದನ್ನೂ ಓದಿ:Udupi-Chikmagalur Lok Sabha constituency: ಬದಲಾವಣೆ ನಡುವೆ ಯಾರಿಗೆ ಮಣೆ ಹಾಕಲಿದ್ದಾರೆ ಉಡುಪಿ ಕ್ಷೇತ್ರದ ಮತದಾರರು?

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿ.ಎನ್.ಚಂದ್ರಪ್ಪ ಅವರು ಬಿಜೆಪಿಯ ಜನಾರ್ಧನ ಸ್ವಾಮಿ ಅವರನ್ನು 1,01,291 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 42.64% ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಜನಾರ್ದನ ಸ್ವಾಮಿ ಅವರು ಕಾಂಗ್ರೆಸ್​​ನ ಡಾ.ಬಿ.ತಿಪ್ಪೇಸ್ವಾಮಿ ಅವರನ್ನು 1,35,571 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.44.35ರಷ್ಟು ಮತಗಳನ್ನು ಪಡೆದಿತ್ತು.

2011ರ ಜನಗಣತಿಯ ಅಂಕಿಅಂಶಗಳ ಪ್ರಕಾರ ಜಿಲ್ಲೆಯ ಜನಸಂಖ್ಯೆ 1659456. ಸರಾಸರಿ ಸಾಕ್ಷರತಾ ಪ್ರಮಾಣವು 73.71% – ಮಹಿಳೆಯರಲ್ಲಿ 65.88% ಮತ್ತು ಪುರುಷರಲ್ಲಿ 81.37% ಆಗಿತ್ತು. ಸಂಸತ್ತಿನಲ್ಲಿ ಎಸ್ಸಿ ಮತದಾರರು ಸುಮಾರು 23.7% ರಷ್ಟಿದ್ದರೆ, ಎಸ್ಟಿ ಮತದಾರರು 16.8% ರಷ್ಟಿದ್ದಾರೆ. ಗ್ರಾಮೀಣ ಮತದಾರರು ಮತದಾರರಲ್ಲಿ ಸುಮಾರು 80% ರಷ್ಟಿದ್ದಾರೆ. ಈ ಕ್ಷೇತ್ರದಲ್ಲಿ ಮತದಾರರ ಲಿಂಗ ಅನುಪಾತ (1000 ಪುರುಷ ಮತದಾರರಿಗೆ ಮಹಿಳಾ ಮತದಾರರ ಸಂಖ್ಯೆ) 2024 ರಲ್ಲಿ 1,006, 2019 ರಲ್ಲಿ ಇದು 979, 2014 ರಲ್ಲಿ 966 ಮತ್ತು 2009 ರಲ್ಲಿ 967 ಆಗಿತ್ತು.

Continue Reading
Advertisement
Nataša Stanković
ಕ್ರೀಡೆ5 mins ago

Nataša Stanković: ಹಾರ್ದಿಕ್ ಪಾಂಡ್ಯ ಜತೆ ವಿಚ್ಛೇದನ?; ಅನುಮಾನಕ್ಕೆ ತೆರೆ ಎಳೆದ ಪತ್ನಿ ನತಾಶಾ

Drowns in Lake
ಕರ್ನಾಟಕ14 mins ago

Drowns in Lake: ಕೆರೆಯಲ್ಲಿ ಮುಳುಗಿ ಯುವಕ ಸಾವು; ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Vijayanagara SP Shriharibabu drives to blood donation camp in Hosapete
ಆರೋಗ್ಯ14 mins ago

Vijayanagara News: ಹೊಸಪೇಟೆಯಲ್ಲಿ ರಕ್ತದಾನ ಶಿಬಿರಕ್ಕೆ ಎಸ್ಪಿ ಶ್ರೀಹರಿಬಾಬು ಚಾಲನೆ

Mantralaya Sri Subudhendra Theertha Swamiji ashirvachan
ಮೈಸೂರು16 mins ago

Mysore News: ಶಾಸ್ತ್ರ ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ

Tumkur Lok Sabha Constituency
ಪ್ರಮುಖ ಸುದ್ದಿ30 mins ago

Tumkur Lok Sabha Constituency: ತುಮಕೂರಿನ ಅದೃಷ್ಟ ಪರೀಕ್ಷೆಯಲ್ಲಿ ಗೆಲ್ಲುವರೇ ವಿ. ಸೋಮಣ್ಣ?

Prajwal Revanna Case
ಕರ್ನಾಟಕ43 mins ago

Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

Road Accident
ಶಿವಮೊಗ್ಗ44 mins ago

Road Accident : ಎದುರಿಗೆ ಬಂದ ಬೈಕ್‌ ತಪ್ಪಿಸಲು ಹೋಗಿ ಮಹಿಳೆಗೆ ಗುದ್ದಿದ ಕಾರು; ಎಗರಿ ಬಿದ್ದವಳು ಸ್ಥಳದಲ್ಲೇ ಸಾವು

Anant-Radhika Bash legendary singer Andrea Bocelli performs
ಬಾಲಿವುಡ್45 mins ago

Anant-Radhika Bash: ಪ್ರಿ ವೆಡ್ಡಿಂಗ್‌ನಲ್ಲಿ ಮಿಂಚಿದ ರಾಧಿಕಾ ಮರ್ಚಂಟ್‌; ಸಂಗೀತ ಪ್ರದರ್ಶನಕ್ಕೆ ಮನಸೋತ ಅತಿಥಿಗಳು!

PM Narendra Modi
ರಾಜಕೀಯ50 mins ago

PM Narendra Modi: ವಿಕಸಿತ ಭಾರತಕ್ಕೆ ಭದ್ರ ಅಡಿಪಾಯ; ದೇಶದ ಜನತೆಗೆ ಮೋದಿ ಭಾವುಕ ಪತ್ರ

Election Commission of india
ದೇಶ52 mins ago

Election Commission of India: “64 ಕೋಟಿ ಜನರಿಂದ ಮತದಾನ; ವಿಶ್ವದಾಖಲೆ ಬರೆದ ಭಾರತ”- ಚು.ಆಯೋಗ ಶ್ಲಾಘನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌