ಬೆಂಗಳೂರಿನ ಈ ಕಂಪನಿಯಲ್ಲಿ ನೀವು ಮಧ್ಯಾಹ್ನವೂ ನಿದ್ರಿಸಬಹುದು - Vistara News

ಆರೋಗ್ಯ

ಬೆಂಗಳೂರಿನ ಈ ಕಂಪನಿಯಲ್ಲಿ ನೀವು ಮಧ್ಯಾಹ್ನವೂ ನಿದ್ರಿಸಬಹುದು

ಮಧ್ಯಾಹ್ನದ ಹೊತ್ತು ನಿದ್ರೆ ಮಾಡುವ ಅವಕಾಶ ನೀಡಿದರೆ ಯಾರಿಗೆ ತಾನೇ ತಸವಾಗುವುದಿಲ್ಲ? ಆಫೀಸಿನ ಅವಧಿಯಲ್ಲೂ ಮಧ್ಯಾಹ್ನ ನಿದ್ರಿಸುವ ಆಸೆಯಿದ್ದರೆ ಈ ಕಂಪನಿ ಸೇರಿಕೊಳ್ಳಿ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಧ್ಯಾಹ್ನದ ಹೊತ್ತು ನಿದ್ರೆ ಮಾಡುವ ಅವಕಾಶ ನೀಡಿದರೆ ಯಾರಿಗೆ ತಾನೇ ಸಂತಸವಾಗುವುದಿಲ್ಲ? ಈಗ ಇದೇ ಕಾರಣಕ್ಕೆ ʼವೇಕ್‌ಫಿಟ್‌ ಸೊಲ್ಯಷನ್ಸ್‌ʼ ಎಂಬ ಬೆಂಗಳೂರಿನ ಸ್ಟಾರ್ಟ್‌ಅಪ್‌ ಸಂಸ್ಥೆಯ ಊದ್ಯೋಗಿಗಳು ಸಂತಸಪಡುವಂತಾಗಿದೆ. ಈ ಸ್ಟಾರ್ಟ್‌ಅಪ್‌ ಸಂಸ್ಥೆಯಲ್ಲಿ ಉದ್ಯೋಗಿಗಳು ಮಧ್ಯಾಹ್ನ ಅರ್ಧಗಂಟೆಗಳ ಕಾಲ ನಿದ್ರಿಸಲು ಅವಕಾಶ ಮಾಡಿಕೊಟ್ಟಿದೆ. ಮಧ್ಯಾಹ್ನ 2 ರಿಂದ 2:30ರವರೆಗೆ ಮಲಗಿ ಅರ್ಧಗಂಟೆ ನಿದ್ರಿಸಬಹುದು.

ʼವೇಕ್‌ಫಿಟ್‌ ಸೊಲ್ಯಷನ್ಸ್‌ʼನ ಮುಖ್ಯಸ್ಥರು ಈ ಅವಕಾಶ ಕಲ್ಪಿಸಲಾಗಿದೆ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ. ʼರೈಟ್‌ ಟು ನ್ಯಾಪ್‌ʼ ಎಂಬ ಹೆಸರಿನಡಿಯಲ್ಲಿ ಈ ವಿಭಿನ್ನ ಸೌಲಭ್ಯ ಕಲ್ಪಿಸಿದೆ. ಈ ಬಗ್ಗೆ ಸಂಸ್ಥೆಯ ಉದ್ಯಮಿಗಳಿಗೆ ನೀಡಿದ ಸೂಚನೆಯಲ್ಲಿ ʼಕಳೆದ ಆರು ವರುಷಗಳಿಂದ ನಮ್ಮದು ಹಾಸಿಗೆ ತಯಾರಿಕ ಸಂಸ್ಥೆಯಾಗಿದೆ. ನಿದ್ರೆಗೆ ಸಂಬಂಧಿಸಿದ ಈ ಕಂಪನಿ, ಇಲ್ಲಿನ ಉದ್ಯೋಗಿಗಳ ನಿದ್ರೆಗೆ ನ್ಯಾಯ ಒದಗಿಸುವ ಕಾರ್ಯಕ್ಕೆ ಮುಂದಾಗಿದೆ. ಎಲ್ಲಾ ಕೆಲಸಗಾರರಿಗೂ ಮಧ್ಯಾಹ್ನದ ವೇಳೆ ವಿಶ್ರಾಂತಿ ಮಾಡಲು ಸಣ್ಣ ನಿದ್ರೆ ಪಡೆಯಲು ಸಮಯ ನಿಗದಿಪಡಿಸಿದೆʼ ಎಂದು ತಿಳಿಸಲಾಗಿದೆ.

ನಿದ್ರೆ ಎಷ್ಟು ಮುಖ್ಯ?

ಇತ್ತೀಚೆಗೆ ಕೊರೋನಾ ಸಂದರ್ಭದಿಂದಲೂ ಎಲ್ಲಾ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಿ ಅಭ್ಯಾಸವಾಗಿದೆ. ಈಗ ಕೊರೋನಾ ಪ್ರಕರಣ ಕಡಿಮೆಯಾಗಿತ್ತಿರುವ ಕಾರಣದಿಂದ ಮತ್ತೆ ಆಫೀಸಿಗೆ ಹೋಗುವ ಪರಿಸ್ಥಿತಿ ಎದುರಾಗಿದೆ.

ಮನೆಯಿಂದಲೇ ಕೆಲಸ ಮಾಡುತ್ತಿದ್ದಾಗ ಸ್ವತಾಂತ್ರ್ಯ ಜಾಸ್ತಿಯಿತ್ತು. ಮಧ್ಯಾಹ್ನ ಬಿಸಿ ಬಿಸಿ ಊಟ ಮಾಡಿ, ಒಂದು ಅರ್ಧ ಗಂಟೆ ಹಾಯಾಗಿ ಮಲಗಬಹುದಾದ ವಾತಾವರಣ ಮನೆಯಲ್ಲಿತ್ತು. ಆದರೆ ಈಗ ಅವೆಲ್ಲಾ ಕಡಿಮೆಯಾಗುತ್ತಿದೆ. ಈ ನಡುವೆ ಸ್ಟಾರ್ಟ್‌ಅಪ್‌ ಕಂಪನಿಗಳು ಈ ರೀತಿಯ ಆಫೀಸ್‌ ಅವಧಿಯಲ್ಲಿ ನಿದ್ರಿಸುವ ಅವಕಾಶ ನೀಡಿದ್ದು ಉದ್ಯೋಗಿಗಳಿಗೆ ಸಂತಸ ಉಂಟುಮಾಡಿದೆ.

ಅನೇಕರು ಮಧ್ಯಾಹ್ಣದ ವಿಶ್ರಾಂತಿಯನ್ನು ಅಲಕ್ಷ್ಯ ಮಾಡುತ್ತಾರೆ. ಆದರೆ, ಇತ್ತೀಚೆಗೆ ನಾಸಾ ನಡೆಸಿದ ಒಂದು ಅಧ್ಯಯನದ ಪ್ರಕಾರ 26 ನಿಮಿಷದ ಒಂದು ಅಲ್ಪಾವಧಿ ನಿದ್ರೆ ತುಂಬಾ ಮುಖ್ಯ ಎಂದು ವರದಿ ಮಾಡಿದೆ. ಈ ಅಲ್ಪಾವಧಿ ನಿದ್ರೆಯನ್ನು ಬೆಕ್ಕಿನ ನಿದ್ರೆಯೆಂದೂ ಕರೆಯಲಾಗಿದೆ. ಅಲ್ಲದೆ, ಈ ನಿದ್ರೆ ಕೆಲಸವನ್ನು ಮಾಡುವ ಸಾಮರ್ಥ್ಯವನ್ನು 33%ರಷ್ಟು ಹೆಚ್ಚಿಸುತ್ತದೆ ಎಂದು ತಿಳಿಸಿದೆ.

ಕಂಪನಿಯ ಈ ನಿರ್ಧಾರದ ಬಗ್ಗೆ ಅನೇಕರು ʼಇದು ಒಳ್ಳೆಯ ತೀರ್ಮಾನʼ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಹೆಚ್ಚೆಚ್ಚು ಸ್ತ್ರೀಯರನ್ನು ಕೊಲ್ಲುತ್ತಿದೆ ಹಾರ್ಟ್‌ಫೇಲ್, ಈಗಲೇ ಎಚ್ಚೆತ್ತುಕೊಳ್ಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Liquid Nitrogen : ಕಾಟನ್ ಕ್ಯಾಂಡಿ ಬಳಿಕ ಕರ್ನಾಟಕದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ

Liquid Nitrogen: ಆರೋಗ್ಯಕ್ಕೆ ಕುತ್ತು ತರುವ ಕಾಟನ್‌ ಕ್ಯಾಂಡಿ, ಗೋಬಿ ಮಂಚೂರಿ ಬ್ಯಾನ್‌ ಬಳಿಕ ಇದೀಗ ಆಹಾರದಲ್ಲಿ ಲಿಕ್ವಿಡ್‌ ನೈಟ್ರೋಜನ್‌ ಬಳಕೆಯನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಆದೇಶವನ್ನು ಹೊರಡಿಸಿದೆ. ಆ ಪ್ರಕಾರ ಯಾರಾದರೂ ಲಿಕ್ವಿಡ್‌ ನೈಟ್ರೋಜನ್‌ ಬಳಸಿದ್ರೆ ಜೀವಾವಧಿ ಶಿಕ್ಷೆಯೊಂದಿಗೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

VISTARANEWS.COM


on

By

LIQUID NITROGEN
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ (Liquid Nitrogen) ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. ಲಿಕ್ವಿಡ್ ನೈಟ್ರೋಜನ್‌ನ ಒಂದು ತುತ್ತು ಜೀವಕ್ಕೆ ಕುತ್ತು ತರಬಹುದು. ಹೀಗಾಗಿ ಕಲರ್ ಕಾಟನ್‌ ಕ್ಯಾಂಡಿ, ಗೋಬಿ ಮಂಚೂರಿ ಬಳಿಕ ಇದೀಗ ರಾಜ್ಯದಲ್ಲಿ ಆಹಾರದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆಯನ್ನು ಬ್ಯಾನ್ ಮಾಡಲಾಗಿದೆ.

ಕೆಲವು ರೆಸ್ಟೋರಂಟ್‌ಗಳಲ್ಲಿ ಫುಡ್‌ ಪ್ರಿಯರನ್ನು ಆಕರ್ಷಿಸಲೆಂದೇ ತರಹೇವಾರಿ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಇತ್ತೀಚೆಗಂತೂ ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಹೆಚ್ಚಾಗುತ್ತಿದೆ. ಜನರು ತಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಅಪಾಯದ ಬಾಗಿಲು ತಟ್ಟುತ್ತಿದ್ದಾರೆ. ಲಿಕ್ವಿಡ್ ನೈಟ್ರೋಜನ್ ಮೂಲಕ ಸ್ಮೋಕ್‌ ಐಸ್‌ಕ್ರೀಂ, ಸ್ಮೋಕ್‌ ಬಿಸ್ಕತ್ತು, ಬಿಯರ್‌ನಲ್ಲಿ ಬಳಸಲಾಗುತ್ತಿದ್ದು,ಇದು ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದೆ. ಹೀಗಾಗಿ ಲಿಕ್ವಿಡ್ ನೈಟ್ರೋಜನ್ ಬಳಸಿದ ಆಹಾರ ಸೇವಿಸುವ ಮುನ್ನ ಎಚ್ಚರವಾಗಿರಿ.

ಈ ಸ್ಮೋಕಿಂಗ್ ಲಿಕ್ವಿಡ್ ನೈಟ್ರೋಜನ್ ಸೇವನೆಯಿಂದ ಅಂಗಾಂಗಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಮುಖ್ಯವಾಗಿ ಲಿಕ್ವಿಡ್‌ ನೈಟ್ರೋಜನ್‌ ಸೇವನೆಯಿಂದ ಕರಳು, ಗಂಟಲುಗಳಲ್ಲಿ ಹುಣ್ಣಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿರ್ಬಂಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶ ಹೊರಡಿಸಿದೆ. ಲಿಕ್ವಿಡ್ ನೈಟ್ರೋಜನ್ ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈಗಾಗಲೇ ಪಕ್ಕದ ತಮಿಳುನಾಡಲ್ಲಿ ಬಿಸ್ಕತ್‌ ಮತ್ತು ಐಸ್‌ಕ್ರೀಮ್‌ನಂತಹ ಆಹಾರ ಪದಾರ್ಥಗಳ ಜತೆ ಲಿಕ್ವಿಡ್‌ ನೈಟ್ರೋಜನ್‌ ನೇರ ಬಳಕೆಯನ್ನು ನಿಷೇಧಿಸಿದೆ. ಇದೀಗ ಕರ್ನಾಟಕದಲ್ಲೂ ಲಿಕ್ವಿಡ್‌ ನೈಟ್ರೋಜನ್‌ ಬಳಕೆಯನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Cotton Candy Ban : ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ಬ್ಯಾನ್‌, ಗೋಬಿ ಮಂಚೂರಿಗೂ ಡೇಂಜರ್‌

ಈ ಲಿಕ್ವಿಡ್‌ ನೈಟ್ರೋಜನ್‌ ಅಥವಾ ದ್ರವ ಸಾರಜನಕವನ್ನು ಔಷಧ ಮತ್ತು ರಾಸಾಯನಿಕ ಕಂಪನಿಗಳು ತಮ್ಮ ಉತ್ಪನ್ನಗಳನ್ನು 40 ಡಿಗ್ರಿ ಸೆಂಟಿಗ್ರೇಡ್‌ನಷ್ಟು ತಂಪಾಗಿಸಲು ಬಳಸುತ್ತವೆ. ಅಲ್ಲದೆ, ಫ್ರೀಜ್‌ ಮಾಡುವ ಹಲವು ವಿಧಾನಗಳಲ್ಲಿ ಬಳಸುತ್ತಾರೆ. ಈ ಲಿಕ್ವಿಡ್‌ ನೈಟ್ರೋಜನ್‌ ಸುರಿದರೆ ಥಟ್ಟನೆ ಹಿಗ್ಗಿ ಬಿಳಿಯ ಹೊಗೆಯಂತೆ ಆವಿಯಾಗಿ ಬಿಡುತ್ತದೆ.

ಇನ್ನೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ-2006 ಪ್ರಕಾರ ಲಿಕ್ವಿಡ್‌ ನೈಟ್ರೋಜನ್‌ ಆಹಾರದಲ್ಲಿ ಬಳಸಬಾರದು ಎಂಬುದು ಈ ಮೊದಲಿನಿಂದಲೂ ಇದೆ. ಆದರೂ ಕೆಲವರು ಜನರನ್ನು ಆಕರ್ಷಿಸಲು, ಹೊಸ ಮೆನುವಿಗಾಗಿ ಇದನ್ನು ಬಳಸುತ್ತಿದ್ದಾರೆ. ಇದು ಆರೋಗ್ಯಕ್ಕೆ ಹಾನಿಕಾರಕ. ಇದನ್ನು ಬಳಸುವವರ ವಿರುದ್ಧ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಆದೇಶದಲ್ಲಿ ಏನಿದೆ?

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011ರಡಿ ಲಿಕ್ವಿಡ್‌ ನೈಟ್ರೋಜನ್‌ ಅನ್ನು ಡೈರಿ ಆಧಾರಿತ ಸಿಹಿತಿಂಡಿಗಳು -ಐಸ್ ಕ್ರೀಮ್‌ನಲ್ಲಿ ಘನೀಕರಣ ಮತ್ತು ಕೂಲಿಂಗ್ (Contact Freezing and Cooling Agent en Dairy- based desserts -Ice Cream) ಗಳ ತಯಾರಿಕೆಯ ಸಮಯದಲ್ಲಿ ಮಾತ್ರ ಬಳಸಲು ಅನುಮತಿ ಇದೆ. ಆದರೆ ಸ್ಮೋಕಿಂಗ್‌ ಬಿಸ್ಕತ್‌, ಡೆಸರ್ಟ್‌ ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ ಉಪಯೋಗಿಸಲು ಅನುಮತಿ ಇಲ್ಲ. ಈ ಲಿಕ್ವಿಡ್‌ ನೈಟ್ರೋಜನ್‌ ಬಳಸಿದ ಆಹಾರ ತಿಂದರೆ ಜೀರ್ಣಾಂಗದ ಭಾಗಗಳಿಗೆ ಹಾನಿಯುಂಟಾಗುತ್ತದೆ.

LIQUID-NITROGEN

ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಲಿಕ್ವಿಡ್‌ ನೈಟ್ರೋಜನ್‌ ಅನ್ನು ತಿನಿಸುಗಳಿಗೆ ಉಪಯೋಗಿಸುವುದನ್ನು ನಿರ್ಬಂಧಿಸಿ ಆದೇಶಿಸಲಾಗಿದೆ. ಉಲ್ಲಂಘನೆಯ ಪ್ರಕರಣಗಳು ಕಂಡು ಬಂದರೆ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಕೇಸ್‌ ದಾಖಲಿಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

World Asthma Day: ಅಸ್ತಮಾದಿಂದ ಪಾರಾಗಲು ಈ ಸಂಗತಿ ತಿಳಿದುಕೊಂಡಿರಿ

ವಿಶ್ವದಲ್ಲಿ 260 ದಶಲಕ್ಷ ಮಂದಿ ಅಸ್ತಮಾ ತೊಂದರೆಯಿಂದ ಬಳಲುತ್ತಿದ್ದಾರೆ. ಪ್ರತಿ ವರ್ಷ 4.5 ಲಕ್ಷ ಮಂದಿ ಈ ಸಮಸ್ಯೆಯಿಂದ ಸಾವಿಗೀಡಾಗುತ್ತಿದ್ದಾರೆ. ಇವುಗಳಲ್ಲಿ ಹೆಚ್ಚಿನ ಪ್ರಕರಣಗಳಲ್ಲಿ ಸಾವನ್ನು ತಡೆಯುವ ಸಾಧ್ಯತೆ ಇರುತ್ತದೆ. ಹಾಗಾಗಿ ಅಸ್ತಮಾ ಬಗ್ಗೆ ಅರಿವು ಹೊಂದುವುದು ಮತ್ತು ತಡೆಯಲು ಮುನ್ನೆಚ್ಚರಿಕೆ (World Asthma Day) ತೆಗೆದುಕೊಳ್ಳುವುದು ಅಗತ್ಯ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

World Asthma Day
Koo

ಯಾವುದೇ ವಯಸ್ಸಿನವರನ್ನು ಕಾಡಬಹುದಾದ ದೀರ್ಘಕಾಲೀನ ರೋಗಗಳಲ್ಲಿ ಅಸ್ತಮಾ ಸಹ ಒಂದು. ಶ್ವಾಸಕೋಶದಲ್ಲಿನ ಗಾಳಿ ಕೊಳವೆಗಳು ಮತ್ತದರ ಕೋಶಗಳು ಊದಿಕೊಂಡು ಉಸಿರಾಟಕ್ಕೆ ತೊಂದರೆಯಾಗುವ ಅವಸ್ಥೆಯಿದು. ಇದರಿಂದಾಗಿ ಉಬ್ಬಸ, ಉಸಿರಾಟದ ತೊಂದರೆ, ಎದೆ ಬಿಗಿಯುವುದು, ನೆಗಡಿ, ಕೆಮ್ಮು, ವಿಪರೀತ ಕಫ, ಅಲರ್ಜಿ ಇತ್ಯಾದಿ ಸಮಸ್ಯೆಗಳು ಕಾಡಿಸುತ್ತವೆ. ಹಗಲಿನಲ್ಲಿ ಕಡಿಮೆ ಇದ್ದು ರಾತ್ರಿ ಸಮಯದಲ್ಲಿ ಈ ಸಮಸ್ಯೆಯ ತೀವ್ರತೆ ಹೆಚ್ಚಬಹುದು. ಈ ರೋಗದ ಬಗ್ಗೆ ಜಾಗೃತಿ ಹೆಚ್ಚಿಸುವ ಉದ್ದೇಶದಿಂದ ಮೇ ತಿಂಗಳ ಮೊದಲ ಮಂಗಳವಾರವನ್ನು (ಈ ಬಾರಿ ಮೇ 7ರಂದು) ವಿಶ್ವ ಅಸ್ತಮಾ ಜಾಗೃತಿ ದಿನವನ್ನಾಗಿ (World Asthma Day) ಆಚರಿಸಲಾಗುತ್ತದೆ.

Young Woman Having Asthma Attack at Home

ಜಾಗತಿಕವಾಗಿ ವಾಯು ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿಶ್ವದೆಲ್ಲೆಡೆ ಅಸ್ತಮಾ ಚಿಕಿತ್ಸೆಯನ್ನು ಉತ್ತಮಗೊಳಿಸುವುದು ಈ ಜಾಗೃತಿ ದಿನದ ಉದ್ದೇಶಗಳಲ್ಲಿ ಒಂದು. ಈ ವರ್ಷ ಮೇ 7ರಂದು ಆಚರಿಸಲಾಗುವ ಈ ದಿನಂದು, ಶ್ವಾಸನಾಳಗಳಿಗೆ ತೀವ್ರ ತೊಂದರೆ ನೀಡುವ ಈ ರೋಗದಿಂದ ನರಳುತ್ತಿರುವವರಿಗೆ ಕಾಳಜಿ, ಚಿಕಿತ್ಸೆ ಮತ್ತು ನೆರವು ನೀಡುವ ಬಗ್ಗೆ ಎಲ್ಲೆಡೆ ಅರಿವು ಮೂಡಿಸುವುದು ಮಹತ್ವದ್ದೆನಿಸಿದೆ. ಈ ವರ್ಷದ ಘೋಷವಾಕ್ಯ- “ಅಸ್ತಮಾ ಕುರಿತ ಅರಿವು ಸಬಲಗೊಳಿಸುತ್ತದೆ” ಮೊದಲ ಬಾರಿಗೆ 1993ರಲ್ಲಿ ವಿಶ್ವ ಅಸ್ತಮಾ ದಿನವನ್ನು ಘೋಷಿಸುವ ಸಂದರ್ಭದಲ್ಲಿ 35 ದೇಶಗಳು ಭಾಗವಹಿಸಿದ್ದವು. ಸಾಮಾನ್ಯವಾಗಿ ಅಸ್ತಮಾ ಕಾಡುವುದು ಚಳಿಗಾಲದಲ್ಲಿ ಹೆಚ್ಚು. ಹಾಗೆಂದು ವರ್ಷದ ಉಳಿದ ದಿನಗಳಲ್ಲಿ ತೊಂದರೆ ಕೊಡಬಾರದೆಂದೇನೂ ಇಲ್ಲ. ಮಳೆಗಾಲದಲ್ಲಿ ಮೋಡ ಕವಿದ ಸ್ಥಿತಿ ಇದ್ದಾಗ ಉಸಿರಾಡುವುದು ಕಷ್ಟವಾಗಬಹುದು. ಬೇಸಿಗೆಯಲ್ಲಿ ಶುಷ್ಕತೆ ಹೆಚ್ಚಾದಾಗ ವಾತಾರವಣದಲ್ಲಿ ಧೂಳಿನ ಕಣಗಳು ತೀವ್ರವಾಗಿ, ಅಸ್ತಮಾ ತೊಂದರೆ ಕೊಡುವ ಸಾಧ್ಯತೆಯಿದೆ. ಒಬ್ಬರಿಂದೊಬ್ಬರಿಗೆ ಹರಡದೆ ಇರುವ ರೋಗಗಳ ಪೈಕಿ ತೀವ್ರವಾಗಿ ಬಾಧಿಸುವ ರೋಗಗಳಲ್ಲಿ ಅಸ್ತಮಾ ಸಹ ಒಂದು. ವಿಶ್ವದಲ್ಲಿ 260 ದಶಲಕ್ಷ ಮಂದಿ ಈ ತೊಂದರೆಯಿಂದ ಬಳಲುತ್ತಿದ್ದಾರೆ. ಪ್ರತಿ ವರ್ಷ 4.5 ಲಕ್ಷ ಮಂದಿ ಈ ಸಮಸ್ಯೆಯಿಂದ ಸಾವಿಗೀಡಾಗುತ್ತಿದ್ದಾರೆ. ಇವುಗಳಲ್ಲಿ ಹೆಚ್ಚಿನ ಪ್ರಕರಣಗಳಲ್ಲಿ ಸಾವನ್ನು ತಡೆಯುವ ಸಾಧ್ಯತೆ ಇರುತ್ತದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ, ಸರಿಯಾದ ಪ್ರಮಾಣದಲ್ಲಿ ಸ್ಟೆರಾಯ್ಡ್‌ ಇನ್‌ಹೇಲರ್‌ಗಳ ಬಳಕೆ, ಶ್ವಾಸಕೋಶಗಳ ಆರೋಗ್ಯದ ದೇಖರೇಖಿ- ಇಂಥ ಹಲವು ವಿಷಯಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಕಾಳಜಿ ವಹಿಸದಿರುವುದು ಇದಕ್ಕೆ ಕಾರಣವಾಗುತ್ತದೆ.

ಇದನ್ನೂ ಓದಿ: No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

ರಾತ್ರಿ ಹೆಚ್ಚಬಹುದು

ಕೆಲವರಿಗೆ ಹಗಲಿಗೆ ಈ ತೊಂದರೆ ಕಡಿಮೆ ಇದ್ದು, ರಾತ್ರಿಗೆ ತೀವ್ರಗೊಳ್ಳಬಹುದು. ಹೀಗಾಗುವುದಕ್ಕೂ ಹಲವಾರು ಕಾರಣಗಳಿವೆ. ಒಂದು ಕಾರಣವೆಂದರೆ, ದೇಹದ ಸರ್ಕೇಡಿಯನ್‌ ಲಯ. ಅಂದರೆ ಹಗಲು ಕಳೆದು ರಾತ್ರಿ ಆವರಿಸುತ್ತಿದ್ದಂತೆ ದೇಹದ ನೈಸರ್ಗಿಕ ಗಡಿಯಾರವೂ ಬದಲಾಗುತ್ತದೆ. ಹೀಗೆ ಬದಲಾಗುವ ಸರ್ಕೇಡಿಯನ್‌ ಲಯದಿಂದಾಗಿ ಶ್ವಾಸನಾಳಗಳಲ್ಲಿ ಉರಿಯೂತ ಹೆಚ್ಚಬಹುದು. ಇನ್ನೊಂದು ಕಾರಣವೆಂದರೆ, ಮಲಗುವ ಭಂಗಿ. ನೆಲಕ್ಕೆ ಸಮಾಂನಾಂತರವಾಗಿ ಮಲಗಿದಾಗ ಶ್ವಾನನಾಳಗಳಲ್ಲಿ ಕಫ ಕಟ್ಟುವುದು ಹೆಚ್ಚುತ್ತದೆ. ಹಾಗಾಗಿ ಪೂರ್ಣ ಮಲಗುವ ಬದಲು ಹಿಂದೆ ಮಲಗಿದಂಥ ಭಂಗಿಯಲ್ಲಿ ಉಸಿರಾಟ ಕೊಂಚ ಸರಾಗವಾಗುತ್ತದೆ.

Woman Using an Asthma Inhaler

ಇನ್ನಷ್ಟು ಕಾರಣಗಳು

ಹುಳಿತೇಗಿನ ಸಮಸ್ಯೆಯಿದ್ದರೆ ಉಸಿರಾಟದ ತೊಂದರೆಯೂ ಕಾಣಬಹುದು. ಅದರಲ್ಲೂ ಜಿಇಆರ್‌ಡಿ (GERD) ನಂಥ ಕಿರಿಕಿರಿಗಳಿದ್ದರೆ ರಾತ್ರಿಯಲ್ಲಿ ಅಸ್ತಮಾ ತೊಂದರೆ ಕೊಡುವುದು ಸ್ವಲ್ಪ ಹೆಚ್ಚೆ. ಜೊತೆಗೆ, ಮನೆಯ ಒಳ-ಹೊರಗಿನ ವಾತಾವರಣ ಆದಷ್ಟು ಶುಚಿಯಾಗಿ ಇರುವಂತೆ ನೋಡಿಕೊಳ್ಳಿ. ಇದರಿಂದ ಅಲರ್ಜಿಯ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಬಹುದು. ಹೊಗೆ, ಧೂಳು, ಫಂಗಸ್, ಪರಾಗಗಳು ಇತ್ಯಾದಿಗಳು ಆದಷ್ಟು ದೂರವೇ ಇದ್ದಾರೆ ಕ್ಷೇಮ. ಹಾಸಿಗೆ ಬಟ್ಟೆಗಳನ್ನು ಆಗಾಗ ಬದಲಿಸಿ. ಅಲರ್ಜಿ ತರುವಂಥ ಆಹಾರಗಳನ್ನು ಮುಟ್ಟದಿರುವುದು ಕ್ಷೇಮ. ಸೋಂಕುಗಳಿಂದ ದೂರ ಇರುವುದಕ್ಕೆ ಶಕ್ತಿಯುತ ಆಹಾರ ಸೇವನೆ ಅಗತ್ಯ. ಇಡೀ ದೇಹದ ಆರೋಗ್ಯ, ಅದರಲ್ಲೂ ಶ್ವಾಸಕೋಶಗಳು ಚೆನ್ನಾಗಿರಬೇಕೆಂದರೆ, ನಿಯಮಿತವಾದ ವ್ಯಾಯಾಮ ಬೇಕು. ಯಾವುದೇ ಕಾಲದಲ್ಲೂ ಅಸ್ತಮಾ ಕಾಣಿಸಿಕೊಳ್ಳಬಹುದು. ಹಾಗಾಗಿ ಅಗತ್ಯ ಔಷಧಗಳನ್ನು ತಪ್ಪದೆ ಇರಿಸಿಕೊಳ್ಳಬೇಕು. ಇನ್ಹೇಲರ್ ಮುಂತಾದವುಗಳನ್ನು ತಂಪಾದ ಸ್ಥಳದಲ್ಲಿ ಇರಿಸುವುದು ಅಗತ್ಯ. ಕಾಲಕಾಲಕ್ಕೆ ಪೀಕ್ ಪ್ಲೊ ಮೀಟರ್ ನಿಂದ ಶ್ವಾಸಕೋಶದ ಸ್ಥಿತಿಗತಿಯ ಬಗ್ಗೆ ತಪಾಸಣೆ ಮಾಡಿಕೊಳ್ಳಿ. ಈ ರೋಗದ ನಿಯಂತ್ರಣಕ್ಕೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸುವುದು ಮತ್ತು ಉರಿಯೂತದ ಕಾರಣ ಅರ್ಥ ಮಾಡಿಕೊಳ್ಳುವುದು ಮಹತ್ವದ್ದು.

Continue Reading

ಆಹಾರ/ಅಡುಗೆ

Summer Food Tips: ಬೇಸಿಗೆಯಲ್ಲಿ ನಮ್ಮ ದೇಹವನ್ನು ತಂಪಾಗಿರಿಸುವ ಸರಳ ಆಹಾರಗಳಿವು!

ಹೊರಗೆ ಕಾಲಿಟ್ಟರೆ ಸಾಕು, ಸ್ನಾನ ಮಾಡಿದಂತೆ ಬೆವರಿನಿಂದಲೇ ತೊಯ್ದು ಹೋಗುವ ಮಂದಿ ಬಿಸಿಲನ್ನು ನೋಡಿ ಉಸ್ಸಪ್ಪ ಎನ್ನುತ್ತಿದ್ದಾರೆ. ಇಂತಹ ಬಿಸಿಲಿನ ವಿರುದ್ಧ ನಮ್ಮ ದೇಹವನ್ನು ಶಕ್ತವನ್ನಾಗಿ ಮಾಡಲು, ದೇಹವನ್ನು ತಂಪಾಗಿರಿಸಲು ಸೂಕ್ತ ಆಹಾರ ಸೇವನೆಯೂ ಮುಖ್ಯ. ಯಾವೆಲ್ಲ ಸರಳ ಆಹಾರಕ್ರಮ ನಮ್ಮ ದೇಹವನ್ನು ತಂಪಾಗಿರಿಸುತ್ತದೆ ಎಂಬುದನ್ನು ನೋಡೋಣ. ಈ ಆಹಾರ ಸೇವನೆಯಿಂದ ಬೇಸಿಗೆಯಲ್ಲಿ ನೀವು ಅಸಿಡಿಟಿ, ತಲೆಸುತ್ತು, ನಿತ್ರಾಣ, ನಿದ್ರಾಹೀನತೆ, ಹಸಿವಿನ ಕೊರತೆಯಂತಹ (summer food tips) ಸಮಸ್ಯೆಗಳಿಂದಲೂ ಪಾರಾಗಬಹುದು.

VISTARANEWS.COM


on

Summer Food Tips
Koo

ಬಹಳಷ್ಟು ಮಂದಿಯ ಬಾಯಿಯಲ್ಲಿ ಈಗ ಬರುವ ಮಾತು ಒಂದೇ: ಏನು ಸೆಖೆಯಪ್ಪಾ ಈ ಬಾರಿ! ಸೂರ್ಯ ಉದಯಿಸಿದ ಕೆಲವೇ ಗಂಟೆಗಳಲ್ಲಿ ಧಗಧಗಿಸಿ ಉರಿದು ಈ ಬಾರಿಯ ಬಿಸಿಲನ್ನು ಇನ್ನಷ್ಟು ತೀವ್ರಗೊಳಿಸಿದ್ದು ಸುಳ್ಳಲ್ಲ. ಬೆಂಗಳೂರಿಗರೂ ಕೂಡ ಈ ಬಾರಿಯ ಸೆಖೆಯಿಂದ ತತ್ತರಿಸಿ ಹೋಗಿದ್ದಾರೆ. ಹೊರಗೆ ಕಾಲಿಟ್ಟರೆ ಸಾಕು, ಸ್ನಾನ ಮಾಡಿದಂತೆ ಬೆವರಿನಿಂದಲೇ ತೊಯ್ದು ಹೋಗುವ ಮಂದಿ ಬಿಸಿಲನ್ನು ನೋಡಿ ಉಸ್ಸಪ್ಪ ಎನ್ನುತ್ತಿದ್ದಾರೆ. ಇಂತಹ ಬಿಸಿಲಿನ ವಿರುದ್ಧ ನಮ್ಮ ದೇಹವನ್ನು ಶಕ್ತವನ್ನಾಗಿ ಮಾಡಲು, ದೇಹವನ್ನು ತಂಪಾಗಿರಿಸಲು ಸೂಕ್ತ ಆಹಾರ (summer food tips) ಸೇವನೆಯೂ ಕೂಡ ಮುಖ್ಯ. ಹಾಗೆ ನೋಡಿದರೆ ನಾವು ಸಾಂಪ್ರದಾಯಿಕ ಶೈಲಿಯತ್ತ ಮುಖ ಮಾಡಿದರೆ ನಮ್ಮ ಪೂರ್ವಜರು, ಹಿರಿಯರು, ಋತುಮಾನಕ್ಕೆ ಅನುಗುಣವಾಗಿ ಆಹಾರವನ್ನು ತೆಗೆದುಕೊಳ್ಳುವ ಬಗೆಯನ್ನು ನಮಗೆ ದಾಟಿಸಿದ್ದಾರೆ. ಆದರೆ ಬಹಳಷ್ಟು ಬಾರಿ ಅವರ ಅಂತಹ ಸಂದೇಶವನ್ನು ನಾವು ನಿರಾಕರಿಸಿ ನಮ್ಮದೇ ಹಾದಿಯಲ್ಲಿ ಸಾಗಿದ್ದೂ ಕೂಡ ಇಂತಹ ಸಮಸ್ಯೆಗಳಿಗೆ ಕಾರಣವೇನೋ ಅನ್ನಬಹುದು. ನಾವು ಎಸಿ ಸ್ವಿಚ್‌ ಆನ್‌ ಮಾಡಿ ದೇಹವನ್ನು ಹೊರಗಿನಿಂದ ತಂಪಾಗಿಸಬಹುದು ನಿಜವೇ ಆಗಿದ್ದರೂ, ಒಳಗಿನಿಂದ ದೇಹವನ್ನು ತಂಪಾಗಿರಿಸಲು ಕೆಲವು ಆಹಾರ ಸೇವನೆಯ ಮೊರೆ ಹೋಗಲೇಬೇಕು. ಬನ್ನಿ, ಯಾವೆಲ್ಲ ಸರಳ ಆಹಾರಕ್ರಮ ನಮ್ಮ ದೇಹವನ್ನು ತಂಪಾಗಿರಿಸುತ್ತದೆ ಎಂಬುದನ್ನು ನೋಡೋಣ. ಈ ಆಹಾರ ಸೇವನೆಯಿಂದ ಬೇಸಿಗೆಯಲ್ಲಿ ನೀವು ಅಸಿಡಿಟಿ, ತಲೆಸುತ್ತು, ನಿತ್ರಾಣ, ನಿದ್ರಾಹೀನತೆ, ಹಸಿವಿನ ಕೊರತೆಯಂತ ಸಮಸ್ಯೆಗಳ ವಿರುದ್ಧ ಹೋರಾಡಿ ಫಲವನ್ನೂ ಕಾಣಬಹುದು.

Citrus fruits

ಸ್ಥಳೀಯ ಹಣ್ಣುಗಳು

ಬೆಳಗ್ಗಿನ ತಿಂಡಿಯ ನಂತರ ಮಧ್ಯಾಹ್ನದೂಟದ ಮೊದಲು ಏನಾದರೂ ಸ್ನ್ಯಾಕ್ಸ್‌ ತಿನ್ನುವ ಅಭ್ಯಾಸ ನಿಮಗಿದೆ ಎಂದಾದಲ್ಲಿ ಬೇಸಿಗೆಯಲ್ಲಿ ನಿಮ್ಮ ಸ್ಥಳೀಯ ಹಣ್ಣುಗಳನ್ನು ತಿನ್ನಲು ಮರೆಯಬೇಡಿ. ಸ್ಥಳೀಯವಾಗಿ ಸಿಗುವ, ಬೇಸಿಗೆಯಲ್ಲಿ ಮಾತ್ರ ಲಭ್ಯವಿರುವ ಹಣ್ಣುಗಳನ್ನು ಹೊಟ್ಟೆಗಿಳಿಸಿದರೆ ನಿಮ್ಮ ದೇಹ ತಂಪಾಗುತ್ತದೆ. ಬಿಸಿಲಿನಲ್ಲಿ ಓಡಾಡಿದರೂ ದೇಹಕ್ಕೆ ಶಕ್ತಿ ಸಾಮರ್ಥ್ಯ ಬರುತ್ತದೆ. ನಿತ್ರಾಣಗೊಳ್ಳುವ, ತಲೆಸುತ್ತಿ ಬವಳಿ ಬೀಳುವಂಥ ಸಮಸ್ಯೆಗಳು ನಿಮ್ಮನ್ನು ಕಾಡದು. ಉದಾಹರಣೆಗೆ, ತಾಳೆಹಣ್ಣು ಅಥವಾ ತಾಟಿನಿಂಗು, ಕಲ್ಲಂಗಡಿ ಹಣ್ಣು, ಖರ್‌ಬೂಜ, ಸೌತೆಕಾಯಿ ಇತ್ಯಾದಿಗಳ ಸೇವನೆ ಚೈತನ್ಯ ನೀಡುತ್ತದೆ. ಯಾವುದೇ ರಸಭರಿತವಾಗಿರುವ ಹಣ್ಣು ನೀವು ತಿನ್ನಬಹುದು. ಇವು ನಿಮ್ಮ ದೇಹವನ್ನು ಅಷ್ಟೇ ಅಲ್ಲ, ಮನಸ್ಸನ್ನೂ ತಂಪಾಗಿಯೇ ಇರಿಸುತ್ತದೆ. ಯಾವಾಗಲೂ ತಾಜಾ ಆಗಿರಿಸಲು ಸಹಾಯ ಮಾಡುತ್ತದೆ.

Health Benefits Of Curd Rice

ಮೊಸರನ್ನ

ಬಹಳಷ್ಟು ಮಂದಿ ಬೇಸಿಗೆಯಲ್ಲಿ ಹಸಿವನ್ನೇ ಕಳೆದುಕೊಳ್ಳುತ್ತಾರೆ. ಏನಾದರೂ ಕುಡಿದರೆ ಸಾಕು, ತಿನ್ನುವ ಮನಸ್ಸಾಗುವುದೇ ಇಲ್ಲ ಎನ್ನುತ್ತಾರೆ. ಬೇಸಿಗೆಯ ಬಿಸಿಲಿಗೆ ಇದು ಸಹಜ ಕೂಡಾ. ಆದರೆ, ಇಂತಹ ಸಂದರ್ಭ ಬೇಸಿಗೆಯಲ್ಲಿ ನಿಮಗೆ ಒಳ್ಳೆಯದನ್ನೇ ಬಯಸುವ ಅತ್ಯುತ್ತಮ ಮಧ್ಯಾಹ್ನದೂಟ ಎಂದರೆ ಅದು ಮೊಸರನ್ನ. ಮೊಸರನ್ನಕ್ಕೆ ಒಂದಿಷ್ಟು ಉಪ್ಪಿನಕಾಯಿ, ಹಪ್ಪಳ ಸೇರಿಸಿಕೊಂಡು ತಿಂದರೆ ಸ್ವರ್ಗಸುಖ. ಇದಲ್ಲವಾದರೆ ಗಂಜಿ ಉಪ್ಪಿನಕಾಯಿಯ ಊಟವಾದರೂ ಸರಿ, ಒಡನೆಯೇ ದೇಹಕ್ಕೆ ಶಕ್ತಿ ಚೈತನ್ಯವನ್ನು ನೀಡುತ್ತದೆ. ಹೊಟ್ಟೆಯನ್ನು ತಂಪಾಗಿರಿಸುತ್ತದೆ. ಮೊಸರನ್ನ ಒಳ್ಳೆಯ ಪ್ರೊಬಯಾಟಿಕ್‌ ಕೂಡಾ ಆಗಿರುವುದರಿಂದ ಇದು ಉತ್ತಮ ಅನುಭವ ನೀಡುತ್ತದೆ. ಹೊಟ್ಟೆಗೆ ಆರಾಮದಾಯಕ ಆಹಾರದ ಅನುಭವ ನೀಡುತ್ತದೆ.

ಇದನ್ನೂ ಓದಿ: Summer Health Tips: ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

ಗುಲ್ಕಂಡ್‌ ನೀರು

ಬೇಸಿಗೆಯಲ್ಲಿ ಅಸಿಡಿಟಿ, ಹೊಟ್ಟೆಯಲ್ಲಿ ಬೆಂಕಿ ಬಿದ್ದಂತೆ ಉರಿ ಇತ್ಯಾದಿ ಸಮಸ್ಯೆಗಳು ಕಾಣಿಸುತ್ತಿದ್ದರೆ ಹಾಗೂ ನಿಮ್ಮ ನಿದ್ರೆಯ ಗುಣಮಟ್ಟ, ಕಣ್ಣು ಊದಿದಂತಾಗುವುದು, ಕೈಕಾಲು ಜೋಮು ಹಿಡಿದಂತಾಗುವುದು, ಅಲ್ಲಲ್ಲಿ ನೋವು, ಉರಿಯೂತ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಬೇಕೆಂದರೆ ಒಂದು ಚಮಚ ಗುಲ್ಕಂಡ್‌ ಅನ್ನು ನೀರಿನಲ್ಲಿ ಬೆರೆಸಿ ಮಲಗುವ ಮುನ್ನ ಕುಡಿಯಿರಿ. ಈ ಗುಲಾಬಿಯ ದಳದ ಡ್ರಿಂಕ್‌ ನಿಮ್ಮ ಈ ಸಮಸ್ಯೆಗಳಿಂದ ಬಚಾವು ಮಾಡುವುದಷ್ಟೇ ಅಲ್ಲ, ಒಂದು ರಿಲ್ಯಾಕ್ಸ್‌ ಅನುಭವವನ್ನೂ ನೀಡುತ್ತದೆ.

Continue Reading

ಲೈಫ್‌ಸ್ಟೈಲ್

Weight Loss Tips Kannada: ಈ ಐದರಲ್ಲಿ ಒಂದು ಜ್ಯೂಸ್‌ ಕುಡಿಯುತ್ತಿದ್ದರೂ ಸಾಕು, ನಿಮ್ಮ ದೇಹ ತೂಕ ಇಳಿಯುತ್ತದೆ!

ಒಮ್ಮೆ ಹೆಚ್ಚಾದ ತೂಕವನ್ನು ನಿಯಂತ್ರಿಸುವುದು ಬಹು ಕಷ್ಟ. ಆದರೆ ನಿತ್ಯ ಈ ಐದು ಪಾನೀಯಗಳನ್ನು ಸೇವಿಸುವುದರಿಂದ ಉತ್ತಮ ಆರೋಗ್ಯದೊಂದಿಗೆ ದೇಹದ ತೂಕ ನಷ್ಟವನ್ನು (Weight Loss Tips Kannada) ಸುಲಭವಾಗಿ ಮಾಡಬಹುದು. ತೂಕ ಇಳಿಸುವ ಸುಲಭ ವಿಧಾನಗಳ ಪರಿಚಯ ಇಲ್ಲಿದೆ.

VISTARANEWS.COM


on

By

Weight Loss Tips kannada
Koo

ದೇಹದ ತೂಕವನ್ನು ಸಮತೋಲನದಲ್ಲಿ ಇರಿಸುವುದು ಸುಲಭದ ಕೆಲಸವೇನಲ್ಲ. ಅದಕ್ಕಾಗಿ ನಾವು ತಿನ್ನುವ ಆಹಾರ (food), ನಿತ್ಯದ ದೈಹಿಕ ಚಟುವಟಿಕೆ (exercise) ಕೂಡ ಕಾರಣವಾಗುತ್ತದೆ. ಒಮ್ಮೆ ತೂಕ ಹೆಚ್ಚಾದರೆ ಅದನ್ನು ಇಳಿಸುವುದು ಸುಲಭದ ಪ್ರಕ್ರಿಯೆಯಲ್ಲ. ದೇಹದ ತೂಕ ಹೆಚ್ಚಳವು ಸಾಮಾನ್ಯವಾಗಿ ಆತಂಕ ಉಂಟು ಮಾಡುತ್ತದೆ. ಆದರೆ ಸರಿಯಾದ ಆಹಾರ ಮತ್ತು ದೈಹಿಕ ಚಟುವಟಿಕೆಯಿಂದ ದೇಹದ ತೂಕವನ್ನು ನಿಯಂತ್ರಿಸಿ (Weight Loss Tips Kannada) ಮತ್ತೆ ಹಿಂದಿನಂತೆ ಸ್ಮಾರ್ಟ್ ಆಂಡ್ ಸ್ಲಿಮ್ (smart and slim) ಆಗಲು ಸಾಧ್ಯವಿದೆ.

ತೂಕ ಇಳಿಸುವ ಪ್ರಕ್ರಿಯೆಯಲ್ಲಿ ಒಂದು ಆಹಾರದ ಸಲಹೆಯನ್ನು ನಿತ್ಯ ಪಾಲಿಸಿದರೆ ಆರೋಗ್ಯವಾಗಿಯೂ ಇರಬಹುದು ಮತ್ತು ದೇಹದ ತೂಕವನ್ನು ಸಮತೋಲನದಲ್ಲಿಯೂ ಇರಿಸಬಹುದು. ನಿತ್ಯವೂ ಬೆಳಗ್ಗೆ ಖಾಲಿ ಹೊಟ್ಟೆಗೆ ಕೆಲವು ಫ್ರೆಶ್ ಜ್ಯೂಸ್‌ಗಳನ್ನು ಕುಡಿಯುವುದರಿಂದ ದೇಹಕ್ಕೆ ಬೇಕಾದ ಫೈಬರ್, ಖನಿಜಾಂಶ ಮತ್ತು ವಿಟಮಿನ್‌ ಗಳನ್ನು ಪಡೆಯಬಹುದು. ಅಲ್ಲದೇ ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಿ ಆರೋಗ್ಯವನ್ನು ಸುಸ್ಥಿತಿಯಲ್ಲಿ ಇಡುತ್ತದೆ. ದೇಹದ ತೂಕ ಇಳಿಸಬೇಕು ಎನ್ನುವ ಯೋಜನೆ ಇದ್ದರೆ ನಿತ್ಯವೂ ಕುಡಿಯಬೇಕಾದ ಕೆಲವು ಅದ್ಭುತ ಜ್ಯೂಸ್‌ ಗಳಿವೆ.


ಕೊತ್ತಂಬರಿ ನೀರು

ಖಾಲಿ ಹೊಟ್ಟೆಯಲ್ಲಿ ಬೆಳಗ್ಗೆ ಒಂದು ಲೋಟ ಕೊತ್ತಂಬರಿ ಸೊಪ್ಪಿನ ನೀರನ್ನು ಸೇವಿಸಿ. ಕೊತ್ತಂಬರಿ ನೈಸರ್ಗಿಕ ಮೂತ್ರವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ, ದೇಹದಲ್ಲಿ ನೀರಿನ ಧಾರಣವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಯಕೃತ್ತಿನ ಆರೋಗ್ಯ ಮತ್ತು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಚಯಾಪಚಯವನ್ನು ಧನಾತ್ಮಕವಾಗಿ ವೃದ್ಧಿಸುತ್ತದೆ.


ನಿಂಬೆ ನೀರು

ತೂಕ ನಷ್ಟ ಮಾಡಬೇಕು ಎಂದು ಬಯಸುವವರು ನಿಂಬೆ ನೀರಿನ ಬಗ್ಗೆ ಸಾಕಷ್ಟು ಕೇಳಿರುತ್ತಾರೆ. ಆದರೆ ಬಹುತೇಕ ಮಂದಿ ಪ್ರಯೋಗ ಮಾಡಿರುವುದಿಲ್ಲ. ಮಾಡಿದ್ದರೂ ಒಂದೆರಡು ದಿನ ಮಾಡಿ ಸುಮ್ಮನಾಗಿರುತ್ತಾರೆ. ನಿಂಬೆ ನೀರು ತೂಕವನ್ನು ಅತ್ಯಂತ ವೇಗವಾಗಿ ನಷ್ಟ ಮಾಡುತ್ತದೆ. ಇದು ದೇಹದಲ್ಲಿ ಚಯಾಪಚಯ ಕ್ರಿಯೆಯನ್ನು ವೃದ್ಧಿಸುತ್ತದೆ.


ನೆಲ್ಲಿಕಾಯಿ ಜ್ಯೂಸ್

ನೆಲ್ಲಿಕಾಯಿ ಚಯಾಪಚಯವನ್ನು ಉತ್ತೇಜಿಸಲು ಮತ್ತು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ತ್ವರಿತವಾಗಿ ತೂಕವನ್ನು ಕಳೆದುಕೊಳ್ಳಲು ಬಯಸುವವರು ಆರೋಗ್ಯಕರ ಚಯಾಪಚಯವನ್ನು ಹೊಂದಿರುವುದು ಅಗತ್ಯ. ನೈಸರ್ಗಿಕ ಸಕ್ಕರೆಯ ರೂಪದಲ್ಲಿ ಒಂದು ಹನಿ ಜೇನುತುಪ್ಪವನ್ನು ಸೇರಿಸಿ ಸೇವಿಸಿದರೆ ಅದು ದಿನವಿಡೀ ನಮ್ಮನ್ನು ಶಕ್ತಿಯುತವಾಗಿರಿಸುತ್ತದೆ.


ಹಾಗಲಕಾಯಿ ಜ್ಯೂಸ್

ಹಾಗಲಕಾಯಿಯ ರಸವು ತೂಕ ನಷ್ಟಕ್ಕೆ ಉತ್ತಮವಾದ ಕೊಬ್ಬನ್ನು ಸುಡುವ ರಸಗಳಲ್ಲಿ ಒಂದಾಗಿದೆ. ಹಾಗಲಕಾಯಿ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವುದರಿಂದ ಚಯಾಪಚಯ ಕ್ರಿಯೆಯಲ್ಲಿ ಸುಧಾರಣೆಯಾಗುತ್ತದೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ತೂಕವನ್ನು ಕಳೆದುಕೊಳ್ಳಲು ಸಾಕಷ್ಟು ಪ್ರಯೋಜನಕಾರಿಯಾಗಿದೆ.


ಇದನ್ನೂ ಓದಿ: Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

ಸೌತೆಕಾಯಿ ಜ್ಯೂಸ್

ನೀರು ಸಮೃದ್ಧವಾಗಿರುವ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಸೌತೆಕಾಯಿ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಅದ್ಭುತವಾದ ಆಹಾರ. ಇದರಲ್ಲಿರುವ ಅತಿಯಾದ ನೀರು ಮತ್ತು ನಾರಿನಂಶವು ನಿಮ್ಮನ್ನುದೀರ್ಘಕಾಲದವರೆಗೆ ಹಸಿವನ್ನು ತಡೆಯಲು ಸಹಾಯ ಮಾಡುತ್ತದೆ. ಇದರಿಂದಾಗಿ ಅನಗತ್ಯ ಕಡುಬಯಕೆಗಳನ್ನು ನಿಯಂತ್ರಿಸಿ ದೇಹದ ತೂಕ ನಿರ್ವಹಣೆ ಮಾಡಬಹುದು.

Continue Reading
Advertisement
Prajwal Revanna Case Who is behind pen drive mastermind Karthik HD Kumaraswamy Question
ರಾಜಕೀಯ40 mins ago

Prajwal Revanna Case: ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಲ್ಲಿದ್ದಾನೆ? ಅವನನ್ನೇಕೆ ಹಿಡಿಯಲಿಲ್ಲ? ಎಚ್‌ಡಿಕೆ ಪ್ರಶ್ನೆ

Lok Sabha election 2024
ದೇಶ49 mins ago

Lok Sabha Election 2024: ನಟ ಶೇಖರ್‌ ಸುಮನ್‌, ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

Prajwal Revanna Case Kumaraswamy demands DK Shivakumar dismissal behind pen drive conspiracy
ರಾಜಕೀಯ1 hour ago

Prajwal Revanna Case: ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವಕಪ್​ಗೆ ಪ್ರಕಟಗೊಂಡ ಎಲ್ಲ ತಂಡಗಳ ಆಟಗಾರರ ಪಟ್ಟಿ

Theft Case In Bengaluru
ಬೆಂಗಳೂರು1 hour ago

Theft Case : ಹಬ್ಬಕ್ಕೆ ಊರಿಗೆ ಹೋದ ಅಕ್ಕನ ಮನೆಗೆ ಕನ್ನ; ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿದ ತಂಗಿ!

Sunita Williams
ತಂತ್ರಜ್ಞಾನ1 hour ago

Sunita Williams: ಸುನೀತಾ ವಿಲಿಯಮ್ಸ್‌ ಮೂರನೇ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ; ಹೊಸ ದಿನಾಂಕ ಶೀಘ್ರ ಘೋಷಣೆ

Money Guide
ಮನಿ ಗೈಡ್2 hours ago

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌ ಮತ್ತು ಸುಕನ್ಯಾ ಸಮೃದ್ಧಿ; ಇವುಗಳ ಪ್ರಯೋಜನ ಏನೇನು?

Prajwal Revanna Case HD Revanna gets bail today court asked if there was a chance Hearing adjourned till tomorrow
ಕ್ರೈಂ2 hours ago

Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

Rahul Gandhi
ದೇಶ2 hours ago

Rahul Gandhi: ಮೇಲ್ವರ್ಗದವರಿಂದಾಗಿ ಪರೀಕ್ಷೆಗಳಲ್ಲಿ ದಲಿತರು ಫೇಲ್‌; ರಾಹುಲ್‌ ಗಾಂಧಿ ಹೊಸ ವಿವಾದ

5 Day Work in Banks
ವಾಣಿಜ್ಯ2 hours ago

5 Days Work in Banks: ಬ್ಯಾಂಕ್‌ಗಳು ವಾರದಲ್ಲಿ ಐದೇ ದಿನ ಓಪನ್‌ ಇರಲಿವೆ; ಪರ್ಯಾಯ ವ್ಯವಸ್ಥೆಗೆ ಸಜ್ಜಾಗಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ19 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ20 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ20 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌