ವಿಜ್ಞಾನಿಗಳು ಸಾಮಾಜಿಕ ಮಾರ್ಗವನ್ನು ಅನುಸರಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ - Vistara News

ತಂತ್ರಜ್ಞಾನ

ವಿಜ್ಞಾನಿಗಳು ಸಾಮಾಜಿಕ ಮಾರ್ಗವನ್ನು ಅನುಸರಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ

ಅಬ್ದುಲ್‌ ಕಲಾಂ ಅವರು ತಂತ್ರಜ್ಞಾನವನ್ನು ಸಾಮಾಜಿಕ ಒಳಗೊಳ್ಳುವಿಕೆಗೆ ಬಳಸಿದರು. ವಿಜ್ಞಾನವು ಅಭಿವೃದ್ಧಿಯಲ್ಲಿ ಬಹಳ ಬದಲಾವಣೆ ತರಬಲ್ಲದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

VISTARANEWS.COM


on

President draupadi murmu 1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಜ್ಞಾನಿಗಳು ತಮ್ಮ ಸಂಶೋಧನೆ ಹಾಗೂ ಪರಿಶ್ರಮಗಳ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸುವ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರೆ ನೀಡಿದ್ದಾರೆ.

ಎಚ್‍ಎಎಲ್‍ನ ಏರೋಸ್ಪೇಸ್ ವಿಭಾಗದಲ್ಲಿ ಇಂಟಿಗ್ರೇಟೆಡ್ ಕ್ರಯೋಜೆನಿಕ್ ಇಂಜಿನ್ ಮ್ಯಾನುಫ್ಯಾಕ್ಚರಿಂಗ್ ಫೆಸಿಲಿಟಿ (ಐಎಮ್‍ಎಫ್) ಹಾಗೂ ಏರೋಸ್ಪೇಸ್ ವಿಭಾಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಬ್ದುಲ್‌ ಕಲಾಂ ಅವರು ತಂತ್ರಜ್ಞಾನವನ್ನು ಸಾಮಾಜಿಕ ಒಳಗೊಳ್ಳುವಿಕೆಗೆ ಬಳಸಿದರು. ವಿಜ್ಞಾನವು ಅಭಿವೃದ್ಧಿಯಲ್ಲಿ ಬಹಳ ಬದಲಾವಣೆ ತರಬಲ್ಲದು. ದೇಶೀಯವಾಗಿ ಅಭಿವೃದ್ಧಿಪಡಿಸುವ ತಂತ್ರಜ್ಞಾನಕ್ಕೆ ನಮ್ಮ ವಿಜ್ಞಾನಿಗಳ, ತಂತ್ರಜ್ಞಾನಿಗಳ ಶ್ರಮದ ಅವಶ್ಯಕತೆಯಿದೆ. ನಮ್ಮ ದೇಶದ ವಿಜ್ಞಾನಿಗಳು ಸಾಮಾಜಿಕ ಮಾರ್ಗವನ್ನು ಅನುಸರಿಸಲು ಕರೆ ನೀಡುತ್ತೇನೆ ಎಂದರು.

ಕೊರೊನಾ ಸಮಯದಲ್ಲಿ ವೈದ್ಯರು ಹಾಗೂ ವಿಜ್ಞಾನಿಗಳ ಶ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸಬೇಕಿದೆ ಎಂದ ರಾಷ್ಟ್ರಪತಿ, ಕೇವಲ ಸಾಂಪಸ್ರದಾಯಿಕ ಮಾತ್ರವಲ್ಲ, ಭವಿಷ್ಯದ ಸವಾಲುಗಳಿಗೂ ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರವೂ ಸಂಶೋಧನೆ ಮತ್ತು ಅಭಿವೃದ್ಧಿಗೆ ಸಾಕಷ್ಟು ಒತ್ತು ನೀಡುತ್ತಿದೆ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಭಾರತಕ್ಕೆ ಬಾಹ್ಯಾಕಾಶವನ್ನು ಜಯಿಸಲು ವಿಪುಲ ಅವಕಾಶಗಳಿವೆ. ಭವಿಷ್ಯದ ಪೀಳಿಗೆ ಆರೋಗ್ಯಕರ ಜೀವನ ನಡೆಸಲು ಅನುವಾಗುವಂತೆ ಸಂಶೋಧನೆಗಳಾಗಬೇಕು ಎಂದರು.

ರಾಜ್ಯದಲ್ಲಿ ಏರೋಸ್ಪೇಸ್ , ಆರ್.ಅಂಡ್ ಡಿ, ರಕ್ಷಣಾ ನೀತಿಗಳು ಜಾರಿಯಲ್ಲಿದ್ದು, ಸರ್ಕಾರದ ವತಿಯಿಂದ ಈ ಎಲ್ಲಾ ಸಂಶೋಧನೆ ಗಳಿಗೆ ಅಗತ್ಯ ಸಹಕಾರವನ್ನು ನೀಡಲಿದೆ.ಕರ್ನಾಟಕ ಹೊಸ ವಿಜ್ಞಾನ, ಆವಿಷ್ಕಾರ ಹಾಗೂ ಹೊಸ ಪಥದತ್ತ ನಡೆಯುತ್ತಿದೆ. ನಮ್ಮ ಸರ್ಕಾರದ ಘೋಷವಾಕ್ಯವೂ ‘ನವ ಭಾರತಕ್ಕಾಗಿ ನವ ಕರ್ನಾಟಕ’ ಎಂದಿದೆ ಎಂದರು.

ಬೆಂಗಳೂರು ಬಾಹ್ಯಾಕಾಶ ತಂತ್ರಜ್ಞಾನದ ಹಬ್ಪ
ನಾವು ಇಂದು ನೂರಾರು ಉಪಗ್ರಹಗಳನ್ನು ಬ್ಯಾಹ್ಯಾಕಾಶಕ್ಕೆ ಹಾರಿಸಿದ್ದೇವೆ. ಈಗ ನಾವು ವಾಣಿಜ್ಯ ಉಪಗ್ರಹಗಳನ್ನು ಹಾರಿಸುವ ಘಟ್ಟಕ್ಕೆ ಬಂದಿದ್ದೇವೆ. ಕಳೆದ 4-5 ದಶಕಗಳಿಂದ ಕ್ರಯೋಜೆನಿಕ್ ಇಂಜಿನ್ ಪ್ರಪಂಚದಲ್ಲಿ ಚರ್ಚೆಯಾಗುತ್ತಿರುವ ವಿಷಯ ಎಂದು ಬೊಮ್ಮಾಯಿ ಹೇಳಿದರು.

ಕೆಲವೇ ದೇಶಗಳಲ್ಲಿ ಇದರ ಅಭಿವೃದ್ದಿ ಸಾಧ್ಯವಾಗಿದೆ. ಬಾಹ್ಯಾಕಾಶ ತಂತ್ರಜ್ಞಾನ ಕೆಲವೇ ದೇಶಗಳಲ್ಲಿದ್ದುದರಿಂದ ಅದರ ಅಭಿವೃದ್ಧಿಯೂ 4-5 ದೇಶಗಳಿಗೆ ಸೀಮಿತವಾಗಿಯೇ ಇತ್ತು. ಕ್ರಯೋಜೆನಿಮ್ ಇಂಜಿನ್‌ಗೆ ಬಳಸುವ ಸಾಮಾಗ್ರಿಗಳ ಬಗ್ಗೆ ಮುಖ್ಯವಾಗಿ ಚರ್ಚೆಯಾಗುತ್ತಿತ್ತು. ಅದರ ಸಂಶೋಧನೆಯೇ ಒಂದು ಸಾಧನೆ. ನಂತರದಲ್ಲಿ ಇಂಧನವನ್ನು ಹಾಕುವ ಸಾಧನವನ್ನು ಕಂಡುಹಿಡಿಯಲಾಗಿದೆ. ಇಂಧನದ ಸ್ಥಿರತೆಯನ್ನು ನಿರ್ವಹಿಸಬೇಕು ಎಂದರು.

ಇಸ್ರೋ ಮತ್ತು ಹೆಚ್.ಎ.ಎಲ್ ಎರಡರ ಸಂಯೋಜನೆಯಿಂದಾಗಿ ದೇಶದ ಬಾಹ್ಯಾಕಾಶದ ನಗರವೆಂದು ಬೆಂಗಳೂರನ್ನು ಪರಿಗಣಿಸಲಾಗಿದೆ. ಶೇ.65 ರಷ್ಟು ಏರೋಸ್ಪೇಸ್ ಭಾಗಳನ್ನು ಬೆಂಗಳೂರಿನಿಂದ ರಪ್ತು ಮಾಡಲಾಗುತ್ತಿದೆ. ಶೇ 60 ರಷ್ಟು ರಕ್ಷಣಾ ಸಾಮಾಗ್ರಿಗಳನ್ನು ಇಲ್ಲಿ ಉತ್ಪಾದಿಸಲಾಗುತ್ತಿದೆ. ಶೇ 25 ರಷ್ಟಿ ಏರೋಸ್ಪೇಸ್ ಭಾಗಗಳು ಬೆಂಗಳೂರಿನಲ್ಲಿ ಉತ್ಪಾದನೆ ಯಾಗುತ್ತಿದೆ. ಆದ್ದರಿಂದ ಬೆಂಗಳೂರು ಬಾಹ್ಯಾಕಾಶ ತಂತ್ರಜ್ಞಾನದ ತಾಯಿ ಹಾಗೂ ಹಬ್ ಎಂದು ಖ್ಯಾತಿ ಪಡೆದಿದೆ ಎಂದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪವಾರ್, ಹೆಚ್.ಎ. ಎಲ್ ಅಧ್ಯಕ್ಷ ಅನಂತಕೃಷ್ಣ, ಇಸ್ರೋ ಅಧ್ಯಕ್ಷ ಸೋಮನಾಥ್, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ | ಯುವಜನತೆ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಳೆಯಬೇಕು: IIIT ಕ್ಯಾಂಪಸ್‌ ಉದ್ಘಾಟಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ತಂತ್ರಜ್ಞಾನ

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Bomber Drone: ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

VISTARANEWS.COM


on

bomber drone
Koo

ಬೆಂಗಳೂರು: ಭಾರತದ ಮೊತ್ತ ಮೊದಲ ಸ್ವದೇಶಿ ತಂತ್ರಜ್ಞಾನದ ಬಾಂಬರ್‌ ಡ್ರೋನ್‌ (Indigenous Bomber Drone) ಬೆಂಗಳೂರಿನಲ್ಲಿ ಅನಾವರಣಗೊಂಡಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಅನಾವರಣಗೊಂಡಿರುವ ಈ ಬಾಂಬರ್‌ ಡ್ರೋನ್‌ ಅನ್ನು ʼಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಟೆಕ್ನಾಲಜೀಸ್ʼ ಸಂಸ್ಥೆ ನಿರ್ಮಾಣ ಮಾಡಿದೆ. ಇದಕ್ಕೆ FWD-200B UAV ಎಂದು ಹೆಸರಿಡಲಾಗಿದೆ.

ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

FWD-200B UAV ಎಂದು ತಾಮತ್ರಿಕವಾಗಿ ಕರೆಯಲಾಗುವ ಈ ಡ್ರೋನ್ ವಿಮಾನವನ್ನು ಇಂದು ಎಲೆಕ್ಟ್ರಾನಿಕ ಸಿಟಿಯಲ್ಲಿ ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಸಂಸ್ಥೆ ಅನಾವರಣ ಮಾಡಿದೆ. ರಕ್ಷಣಾ ಕ್ಷೇತ್ರದಲ್ಲಿ ವಿದೇಶಗಳ ಮೇಲಿನ ಅವಲಂಬನೆಗೆ ಬ್ರೇಕ್ ಹಾಕಲು ಸ್ವದೇಶಿ ಡ್ರೋನ್ ವಿಮಾನ‌ ತಯಾರಿಸಲಾಗಿದೆ. ಇದರೊಂದಿಗೆ ಸುಧಾರಿತ ಮಾನವರಹಿತ ಯುದ್ಧ ಡ್ರೋನ್ ಹೊಂದಿದ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಲಿದೆ. ಇದರ ಆರಂಬಿಕ ಟೆಸ್ಟ್‌ಗಳು ಆಗಿದ್ದು, ಅಡ್ವಾನ್ಸ್‌ಡ್‌ ಪರೀಕ್ಷೆಗಳು ಇನ್ನೆರಡು ತಿಂಗಳಲ್ಲಿ ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಇದರ ಉದ್ಘಾಟನೆ ಮಾಡಿಸುವ ಚಿಂತನೆಯನ್ನು ಸುಹಾಸ್ ಹಂಚಿಕೊಂಡಿದ್ದಾರೆ.

bomber drone flying vedge ceo suhas

ಭಾರತದಲ್ಲಿ ಸದ್ಯ ದಾಳಿ ಡ್ರೋನ್‌ಗಳು ಲಭ್ಯವಿಲ್ಲ. ಇರಾನ್‌ ಹಾಗೂ ರಷ್ಯಾಗಳು ಇದನ್ನು ಈಗಾಗಲೇ ಬಳಸುತ್ತಿವೆ. ಇಸ್ರೇಲ್‌ ಮೇಲೆ ದಾಳಿ ಮಾಡಲು ಕೂಡ ಪ್ಯಾಲೆಸ್ತೀನಿನ ಬಂಡುಕೋರರು ಸಣ್ಣ ಗಾತ್ರದ ಇಂಥದೇ ಡ್ರೋನ್‌ಗಳನ್ನು ಬಳಸಿದ್ದರು. ಈ ಬಗೆಯ ಡ್ರೋನ್‌ಗಳು ಆಧುನಿಕ ಯುದ್ಧದ ವೈಖರಿಯನ್ನೇ ಬದಲಿಸಲಿವೆ. ಕ್ಷಿಪಣಿಗಳು ದುಬಾರಿಯಾಗಿದ್ದು, ಅದಕ್ಕಿಂತ ಡ್ರೋನ್‌ಗಳು ಅಗ್ಗವಾಗಿವೆ. FWD-200B UAV ಸುಮಾರು 200 ಕಿಲೋದಷ್ಟು ಪೇಲೋಡ್‌ ಅನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.

ಭಾರತ ಈಗ ಅಮೆರಿಕದ ಪ್ರಿಡೇಟರ್ ಡ್ರೋನ್‌ಗಳನ್ನು (Predator Drone) ತರಿಸುತ್ತಿದೆ. ಆದರೆ ಇದು 250 ಕೋಟಿಗಳಷ್ಟು ದುಬಾರಿಯಾಗಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ದೇಶೀಯವಾಗಿ ತಯಾರಾದ FWD-200B ಭಾರತದಲ್ಲಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಕೇವಲ 25ಯಿಂದ 50 ಕೋಟಿ ವೆಚ್ಚದಲ್ಲಿ ತಯಾರಾಗಲಿದೆ. ಭಾರತವನ್ನು ಜಾಗತಿಕ ಡ್ರೋನ್ ಉತ್ಪಾದನೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿಸುವ ಗುರಿ ತಮ್ಮದು. ಇನ್ನು ಎರಡು ತಿಂಗಳಲ್ಲಿ ಇದು ಭಾರತದ ಮಿಲಿಟರಿಯನ್ನು ಸೇರುವ ಆಶಯ ಇದೆ. ಈ ಮೂಲಕ ನಮ್ಮ ರಾಷ್ಟ್ರದ ವಾಯು ರಕ್ಷಣಾ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಸಂಸ್ಥೆ ಮುಂದಾಗಿದೆ ಎಂದು ಸುಹಾಸ್‌ ತಿಳಿಸಿದ್ದಾರೆ.

ಇದನ್ನೂ ಓದಿ: Tejas Aircraft: ಸ್ವದೇಶಿ ʼತೇಜಸ್ʼ ವಿಮಾನದಲ್ಲಿ ಮೋದಿ ಹಾರಾಟ: ಪಾಕಿಸ್ತಾನ, ಚೀನಾಗೆ ನಡುಕ!

Continue Reading

ತಂತ್ರಜ್ಞಾನ

ಸ್ಯಾಮ್‌ಸಂಗ್‌ನ ‘ಫ್ಯಾಬ್ ಗ್ರಾಬ್ ಫೆಸ್ಟ್’: ಸ್ಮಾರ್ಟ್‌ಫೋನ್‌, ಟಿವಿ, ಲ್ಯಾಪ್‌ಟಾಪ್‌, ಡಿಜಿಟಲ್ ಉಪಕರಣಗಳ ಮೇಲೆ ಅದ್ಭುತ ಆಫರ್

Samsung: ಸ್ಯಾಮ್‌ಸಂಗ್ ತನ್ನ ಅತಿದೊಡ್ಡ ಬೇಸಿಗೆ ಮಾರಾಟ ಮೇಳವಾದ ‘ಫ್ಯಾಬ್ ಗ್ರಾಬ್ ಫೆಸ್ಟ್’ (Fab Grab Fest) ಅನ್ನು ಘೋಷಿಸಿದೆ. ಈ ಫೆಸ್ಟ್ ಮೂಲಕ ಕಂಪನಿಯು Samsung.com, ಸ್ಯಾಮ್‌ಸಂಗ್ ಶಾಪ್ ಆ್ಯಪ್ ಹಾಗೂ ಸ್ಯಾಮ್‌ಸಂಗ್ ಎಕ್ಸ್‌ಕ್ಲೂಸಿವ್ ಮಳಿಗೆಗಳಲ್ಲಿ ವ್ಯಾಪಕ ಶ್ರೇಣಿಯ ಉತ್ಪನ್ನಗಳ ಮೇಲೆ ಅದ್ಭುತ ಆಫರ್‌ಗಳು ಮತ್ತು ಅತ್ಯಾಕರ್ಷಕ ಕ್ಯಾಶ್‌ಬ್ಯಾಕ್‌ಗಳನ್ನು ನೀಡುತ್ತದೆ.

VISTARANEWS.COM


on

Samsung
Koo

ಬೆಂಗಳೂರು: ಭಾರತದ ಅತಿ ದೊಡ್ಡ ಗ್ರಾಹಕ ಸ್ನೇಹಿ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ (Samsung) ತನ್ನ ಅತಿದೊಡ್ಡ ಬೇಸಿಗೆ ಮಾರಾಟ ಮೇಳವಾದ ‘ಫ್ಯಾಬ್ ಗ್ರಾಬ್ ಫೆಸ್ಟ್’ (Fab Grab Fest) ಅನ್ನು ಘೋಷಿಸಿದೆ. ಈ ಫೆಸ್ಟ್ ಮೂಲಕ ಕಂಪನಿಯು Samsung.com, ಸ್ಯಾಮ್‌ಸಂಗ್ ಶಾಪ್ ಆ್ಯಪ್ ಹಾಗೂ ಸ್ಯಾಮ್‌ಸಂಗ್ ಎಕ್ಸ್‌ಕ್ಲೂಸಿವ್ ಮಳಿಗೆಗಳಲ್ಲಿ ವ್ಯಾಪಕ ಶ್ರೇಣಿಯ ಉತ್ಪನ್ನಗಳ ಮೇಲೆ ಅದ್ಭುತ ಆಫರ್‌ಗಳು ಮತ್ತು ಅತ್ಯಾಕರ್ಷಕ ಕ್ಯಾಶ್‌ಬ್ಯಾಕ್‌ಗಳನ್ನು ನೀಡುತ್ತದೆ.

‘ಫ್ಯಾಬ್ ಗ್ರಾಬ್ ಫೆಸ್ಟ್’ ಸಮಯದಲ್ಲಿ, ಗ್ರಾಹಕರು ಗ್ಯಾಲಕ್ಸಿ ಎಸ್ ಸರಣಿ, ಗ್ಯಾಲಕ್ಸಿ ಝಡ್ ಸರಣಿ ಮತ್ತು ಗ್ಯಾಲಕ್ಸಿ ಎ ಸರಣಿಯ ಸ್ಮಾರ್ಟ್‌ಫೋನ್‌ಗಳ ಆಯ್ದ ಮಾದರಿಗಳ ಮೇಲೆ 64%ವರೆಗೆ ರಿಯಾಯಿತಿ ಪಡೆಯಬಹುದು. ಗ್ಯಾಲಕ್ಸಿ ಟ್ಯಾಬ್ಲೆಟ್‌ಗಳ ಆಯ್ಕೆ ಮಾಡೆಲ್‌ಗಳು, ಆಕ್ಸೆಸರೀಸ್ ಮತ್ತು ವೇರೇಬಲ್ಸ್ ಉತ್ಪನ್ನಗಳ ಮೇಲೆ 77%ರಷ್ಟು ರಿಯಾಯಿತಿ ಲಭ್ಯ. ಗ್ಯಾಲಕ್ಸಿ ಬುಕ್4 ಸರಣಿಯ ಲ್ಯಾಪ್‌ಟಾಪ್‌ಗಳ ಆಯ್ದ ಮಾದರಿಗಳ ಖರೀದಿಯ ಮೇಲೆ ಗ್ರಾಹಕರು 24%ವರೆಗೆ ರಿಯಾಯಿತಿಗಳನ್ನು ಪಡೆಯಬಹುದು.

ಪ್ರಮುಖ ನಿಯೋ-ಕ್ಯೂಎಲ್‌ಇಡಿ 8ಕೆ, ನಿಯೋ ಕ್ಯೂಎಲ್‌ಇಡಿ, ಒಎಲ್‌ಇಡಿ, ದಿ ಫ್ರೇಮ್ ಟಿವಿಗಳು ಮತ್ತು ಕ್ರಿಸ್ಟಲ್ ಯುಹೆಚ್‌ಡಿ ಸರಣಿಯಂತಹ ಸ್ಯಾಮ್‌ಸಂಗ್ ಟಿವಿಗಳ ಆಯ್ಕೆ ಮಾಡೆಲ್‌ಗಳು 43%ರಷ್ಟು ರಿಯಾಯಿತಿಯಲ್ಲಿ ಲಭ್ಯವಿರುತ್ತವೆ. ನಿಯೋ ಕ್ಯೂಎಲ್ಇಡಿ 8ಕೆ, ನಿಯೋ ಕ್ಯೂಎಲ್ಇಡಿ ಮತ್ತು ಓಎಲ್ಇಡಿ ಟಿವಿಗಳ ಆಯ್ದ ಮಾಡೆಲ್‌ಗಳ ಖರೀದಿಯ ಮೇಲೆ ಗ್ರಾಹಕರು 20,000 ರೂ.ವರೆಗೆ ಬ್ಯಾಂಕ್ ಕ್ಯಾಶ್‌ಬ್ಯಾಕ್ ಪಡೆಯಬಹುದು. ಇದೆಲ್ಲದರ ಜತೆಗೆ ಗ್ರಾಹಕರು ಎಲ್ಲ ಟಿವಿಗಳ ಖರೀದಿಯಲ್ಲಿ 5,000 ರೂ.ವರೆಗೆ ಎಕ್ಸ್‌ಚೇಂಜ್‌ ಬೋನಸ್‌ನಂತೆ ಪ್ರಯೋಜನಗಳನ್ನು ಪಡೆಯಬಹುದು.

‘ಫ್ಯಾಬ್ ಗ್ರಾಬ್ ಫೆಸ್ಟ್’ 2024ರಲ್ಲಿ ರೆಫ್ರಿಜರೇಟರ್‌ಗಳು, ವಾಷಿಂಗ್ ಮೆಷಿನ್‌ಗಳು, ಮೈಕ್ರೋವೇವ್‌ಗಳು, ಮಾನಿಟರ್‌ಗಳು ಮತ್ತು ಏರ್ ಕಂಡಿಷನರ್‌ಗಳಂತಹ ಡಿಜಿಟಲ್ ಉಪಕರಣಗಳನ್ನು ಕಡಿಮೆ ಬೆಲೆ ಮತ್ತು ಹೆಚ್ಚು ರಿಯಾಯಿತಿಯಲ್ಲಿ ಪಡೆಯಬಹುದು.

ನಮ್ಮ ‘ಹೆಚ್ಚು ಖರೀದಿಸಿ ಹೆಚ್ಚು ಉಳಿಸಿ’ ವೇದಿಕೆಯನ್ನು ಬಳಸಿಕೊಂಡು ಗ್ರಾಹಕರು Samsung.com ಅಥವಾ ಸ್ಯಾಮ್ ಸಂಗ್ ಶಾಪ್ ಆ್ಯಪ್ ಮೂಲಕ ಎರಡು ಅಥವಾ ಹೆಚ್ಚಿನ ಉತ್ಪನ್ನಗಳ ಖರೀದಿಸಿದರೆ ಹೆಚ್ಚುವರಿ 5% ಉಳಿತಾಯ ಮಾಡಬಹುದಾಗಿದೆ. ‘ಹೆಚ್ಚು ಖರೀದಿಸಿ ಹೆಚ್ಚು ಉಳಿಸಿ’ ಪ್ಲಾಟ್‌ಫಾರ್ಮ್ ಗ್ರಾಹಕರಿಗೆ ಸ್ಯಾಮ್‌ಸಂಗ್ ಉತ್ಪನ್ನಗಳ ಮೇಲೆ ಹೆಚ್ಚು ಆಫರ್ ಗಳನ್ನು ಪಡೆಯುವ ಅವಕಾಶ ಒದಗಿಸುತ್ತದೆ.

ಖುಷಿಯ ವಿಚಾರ ಇನ್ನೂ ಇದೆ. ಈ ವೇಳೆಯಲ್ಲಿ ಗ್ರಾಹಕರು ಸೈಡ್-ಬೈ-ಸೈಡ್ ರೆಫ್ರಿಜರೇಟರ್‌ಗಳು, ಚಂದದ ಫ್ರೆಂಚ್-ಡೋರ್ ರೆಫ್ರಿಜರೇಟರ್‌ಗಳು ಮತ್ತು ಫ್ರಾಸ್ಟ್ ಫ್ರೀ ರೆಫ್ರಿಜರೇಟರ್‌ಗಳಂತಹ ವ್ಯಾಪಕ ಶ್ರೇಣಿಯ ಪ್ರೀಮಿಯಂ ಉಪಕರಣಗಳ ಮೇಲೆ 48%ವರೆಗೆ ರಿಯಾಯಿತಿ ಪಡೆಯಬಹುದು. ಬೀಸ್ಪೋಕ್ ಎಐ ಪ್ಯಾಕೇಜ್‌ನ ಮೂರು ಅಥವಾ ಅದಕ್ಕಿಂತ ಹೆಚ್ಚಿನ ಆಯ್ದ ಉತ್ಪನ್ನಗಳನ್ನು ಖರೀದಿಸುವ ಮೂಲಕ ಗ್ರಾಹಕರು ತಮ್ಮ ಅಡುಗೆ ಮನೆಯನ್ನು ಅದ್ಭುತವಾಗಿ ರೂಪಾಂತರಿಸಬಹುದು ಮತ್ತು ಅದಕ್ಕಾಗಿ ಹೆಚ್ಚುವರಿ 10% ರಿಯಾಯಿತಿಯನ್ನು ಪಡೆಯಬಹುದು.

ವಾಷಿಂಗ್ ಮೆಷಿನ್‌ಗಳ ಆಯ್ದ ಮಾದರಿಗಳು 50%ವರೆಗಿನ ರಿಯಾಯಿತಿಯಲ್ಲಿ ಲಭ್ಯ. ಸಂಪೂರ್ಣ ಅಟೋಮ್ಯಾಟಿಕ್ ಫ್ರಂಟ್ ಲೋಡಿಂಗ್ ಮತ್ತು ಸಂಪೂರ್ಣ ಅಟೋಮ್ಯಾಟಿಕ್ ಟಾಪ್ ಲೋಡಿಂಗ್ ಯಂತ್ರಗಳ ಡಿಜಿಟಲ್ ಇನ್ವರ್ಟರ್ ಮೋಟಾರ್‌ಗೆ 20-ವರ್ಷದ ವಾರಂಟಿ ಲಭ್ಯವಿರುತ್ತದೆ. ಈ ಉತ್ಪನ್ನಗಳ ಸುಲಭ ಖರೀದಿಗೆ ಕೈಗೆಟುಕುವ ಇಎಂಐ ಆಯ್ಕೆ ಕೂಡ ಲಭ್ಯವಿದ್ದು, ಸಂಪೂರ್ಣ ಅಟೋಮ್ಯಾಟಿಕ್ ಫ್ರಂಟ್ ಲೋಡಿಂಗ್‌ ವಾಷಿಂಗ್ ಮೆಷಿನ್ ಕೇವಲ 1,490 ರೂ., ಸಂಪೂರ್ಣ ಅಟೋಮ್ಯಾಟಿಕ್ ಟಾಪ್ ಲೋಡಿಂಗ್‌ 990 ರೂ. ಮತ್ತು ಸೆಮಿ- ಅಟೋಮ್ಯಾಟಿಕ್ ವಾಷಿಂಗ್ ಮೆಷಿನ್‌ 756 ರೂ. ಇಎಂಐಗೆ ಲಭ್ಯ.

ಈ ಕುರಿತು ಮಾತನಾಡಿರುವ ಸ್ಯಾಮ್‌ಸಂಗ್ ಇಂಡಿಯಾದ ಡಿ2ಸಿ ಬಿಸಿನೆಸ್‌ನ ಉಪಾಧ್ಯಕ್ಷ ಸುಮಿತ್ ವಾಲಿಯಾ, “Samsung.com ಮತ್ತು ಸ್ಯಾಮ್ ಸಂಗ್ ಮಳಿಗೆಗಳಲ್ಲಿ ಬಹು ನಿರೀಕ್ಷಿತ ಬೇಸಿಗೆ ಮಾರಾಟ ಮೇಳ ಆರಂಭಿಸಿದ್ದೇವೆ. ಫ್ಯಾಬ್ ಗ್ರಾಬ್ ಫೆಸ್ಟ್ ಮೂಲಕ ನಾವು ನಮ್ಮ ಗ್ರಾಹಕರಿಗೆ ಉತ್ತಮ ಆಫರ್‌ಗಳು ಮತ್ತು ರಿಯಾಯಿತಿಗಳನ್ನು ನೀಡುತ್ತಿದ್ದೇವೆ. ಈ ಫ್ಯಾಬ್ ಗ್ರಾಬ್ ಫೆಸ್ಟ್‌ನಲ್ಲಿ ಹೆಚ್ಚು ಖರೀದಿಸಿ ಹೆಚ್ಚು ಉಳಿಸಿ ಎಂಬ ಯೋಜನೆ ಅಳವಡಿಕೆಯ ಮೂಲಕ ಸ್ಯಾಮ್‌ಸಂಗ್ ಶ್ರೇಣಿಗಳ ಹೆಚ್ಚು ಉತ್ಪನ್ನಗಳನ್ನು ಖರೀದಿಸುವ ನಮ್ಮ ಗ್ರಾಹಕರಿಗೆ ಹೆಚ್ಚುವರಿ 5% ರಿಯಾಯಿತಿಯನ್ನೂ ನೀಡಲಿದ್ದೇವೆ. ಗ್ರಾಹಕರ ಸಂತಸವನ್ನು ಹೆಚ್ಚಿಸುವ ಜತೆಗೆ, ಆಯ್ದ ಮಾಡೆಲ್‌ಗಳನ್ನು ನಾವು ಅದೇ ದಿನ ಡೆಲಿವರಿ ನೀಡಲಿದ್ದೇವೆ” ಎಂದು ಹೇಳಿದರು.

ಮಾನಿಟರ್‌ಗಳ ಆಯ್ದ ಮಾದರಿಗಳು 61%ವರೆಗಿನ ರಿಯಾಯಿತಿಯಲ್ಲಿ ಲಭ್ಯ. ಗ್ರಾಹಕರು ಸ್ಮಾರ್ಟ್ ಮತ್ತು ಗೇಮಿಂಗ್ ಮಾನಿಟರ್‌ಗಳ ಆಯ್ದ ಮಾದರಿಗಳ ಖರೀದಿಯ ಮೇಲೆ ಉಚಿತ ವಾಲ್ ಮೌಂಟ್ ಅನ್ನು ಕೂಡ ಪಡೆಯಬಹುದು. ಸ್ಯಾಮ್ ಸಂಗ್ ತನ್ನ ಎಲ್ಲ ಮಾನಿಟರ್‌ಗಳ ಮೇಲೆ 3 ವರ್ಷಗಳ ವಾರಂಟಿ ಮತ್ತು 20% ಬ್ಯಾಂಕ್ ಕ್ಯಾಶ್‌ಬ್ಯಾಕ್ (10,000 ರೂ.ವರೆಗೆ) ನೀಡುತ್ತದೆ.

ಕನ್ವರ್ಟಿಬಲ್ ಮತ್ತು ವಿಂಡ್ ಫ್ರೀTM ಏಸಿಗಳ ಆಯ್ದ ಮಾದರಿಗಳು 47%ವರೆಗಿನ ರಿಯಾಯಿತಿಯಲ್ಲಿ ಲಭ್ಯವಿರುತ್ತದೆ. ಎರಡು ಅಥವಾ ಹೆಚ್ಚು ವಿಂಡ್ ಫ್ರೀTM ಏಸಿ ಮಾದರಿಗಳನ್ನು ಖರೀದಿಸುವಾಗ ಗ್ರಾಹಕರು ಹೆಚ್ಚುವರಿ 10% ರಿಯಾಯಿತಿಯನ್ನು ಪಡೆಯಬಹುದು. ವಿಶೇಷವೆಂದರೆ, ಪಿಸಿಬಿ ವಿಭಾಗದಲ್ಲಿ ಈ ಮಾದರಿಗಳು ವಿಸ್ತೃತ ವಾರಂಟಿಯೊಂದಿಗೆ ಬರುತ್ತವೆ. 1-ವರ್ಷದ ಸ್ಟಾಂಡರ್ಡ್ ವಾರಂಟಿ ಜೊತೆಗೆ ಹೆಚ್ಚುವರಿ 4-ವರ್ಷದ ವಿಸ್ತೃತ ವಾರಂಟಿಯನ್ನು ಗ್ರಾಹಕರು ಪಡೆಯಬಹುದು.

ಅತ್ಯಾಕರ್ಷಕ ಬ್ಯಾಂಕ್ ಕೊಡುಗೆಗಳು ಕೂಡ ಲಭ್ಯವಿದೆ. ಗ್ರಾಹಕರು ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಇತರ ಪ್ರಮುಖ ಸಂಸ್ಥೆಗಳ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿದರೆ ಗರಿಷ್ಠ 25,000 ರೂ.ವರೆಗಿನ ಕ್ಯಾಶ್‌ಬ್ಯಾಕ್‌ ಪಡೆಯಬಹುದು ಮತ್ತು ಆ ಮೂಲಕ 22.5%ವರೆಗೆ ಉಳಿತಾಯವನ್ನು ಅನುಭವಿಸಬಹುದು.

ಟ್ಯಾಬ್ಲೆಟ್‌ಗಳು, ಆಕ್ಸೆಸರೀಸ್ ಮತ್ತು ವೇರೇಬಲ್ಸ್(ಧರಿಸಬಹುದಾದ ಉತ್ಪನ್ನಗಳು)ಗಳ ಆಯ್ದ ಮಾದರಿಗಳ ಮೇಲೆ 77%ವರೆಗೆ ರಿಯಾಯಿತಿ
ಗ್ಯಾಲಕ್ಸಿ ಎಸ್ ಸರಣಿ, ಝಡ್ ಸರಣಿ ಮತ್ತು ಎ ಸರಣಿಯ ಸ್ಮಾರ್ಟ್‌ಫೋನ್‌ಗಳ ಆಯ್ದ ಮಾದರಿಗಳ ಮೇಲೆ 64%ವರೆಗೆ ರಿಯಾಯಿತಿ
ಆಯ್ದ ರೆಫ್ರಿಜರೇಟರ್‌ಗಳು ಸೇರಿದಂತೆ ಡಿಜಿಟಲ್ ಉಪಕರಣಗಳ ಮೇಲೆ 48% ವರೆಗೆ ರಿಯಾಯಿತಿ ಮತ್ತು ಆಯ್ದ ಕನ್ವರ್ಟಿಬಲ್ ಮತ್ತು ವಿಂಡ್‌ಫ್ರೀTM ಏಸಿಗಳ ಮೇಲೆ 47%ವರೆಗೆ ರಿಯಾಯಿತಿ
ನಿಯೋ ಕ್ಯೂಎಲ್ಇಡಿ 8ಕೆ, ನಿಯೋ ಕ್ಯೂಎಲ್ಇಡಿ, ಕ್ಯೂಎಲ್ಇಡಿ, ಓಎಲ್ಇಡಿ ಮತ್ತು 4ಕೆ ಯುಎಚ್‌ಡಿ ಟಿವಿಗಳ ಆಯ್ದ ಮಾದರಿಗಳ ಮೇಲೆ 43%ವರೆಗೆ ರಿಯಾಯಿತಿ

ಇದನ್ನೂ ಓದಿ: Samsung AI TV: ಏಪ್ರಿಲ್ 17ರಂದು ಸ್ಯಾಮ್‌ಸಂಗ್‌ನ ಎಐ ಟಿವಿಗಳ ಹೊಸ ಶ್ರೇಣಿ ಬಿಡುಗಡೆ

Continue Reading

ದೇಶ

Vande Bharat Metro: ಮೊದಲ ವಂದೇ ಭಾರತ್‌ ಮೆಟ್ರೋ ಸಂಚಾರಕ್ಕೆ ಸಿದ್ಧ; ಇಲ್ಲಿದೆ ವಿಡಿಯೊ

Vande Bharat Metro: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸದ್ಯ ಭಾರತದಲ್ಲಿ ಸಂಪರ್ಕ ಕ್ರಾಂತಿಯನ್ನೇ ಉಂಟು ಮಾಡಿದೆ. ಇದೀಗ ವಂದೇ ಭಾರತ್‌ ಮೆಟ್ರೋ ಸರದಿ. ಹೌದು ದೇಶೀಯವಾಗಿ ನಿರ್ಮಿಸಲಾಗುತ್ತಿರುವ ವಂದೇ ಭಾರತ್‌ ಮೆಟ್ರೋದ ಬೋಗಿಗಳನ್ನು ಪಂಜಾಬ್‌ನ ಕಪುರ್ಥಾಲಾ ದ ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ನಿರ್ಮಿಸಲಾಗುತ್ತಿದೆ. ಜುಲೈಯಲ್ಲಿ ಈ ಮೆಟ್ರೋಸ ಪರೀಕ್ಷಾರ್ಥ ಸಂಚಾರ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಈ ಮೆಟ್ರೋದ ವಿಡಿಯೊ ಹೊರ ಬಿಡಲಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮೆಟ್ರೋ ಹೇಗಿದೆ? ನೀವೂ ನೋಡಿ.

VISTARANEWS.COM


on

Vande Bharat Metro
Koo

ನವದೆಹಲಿ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು-ಇದು ಸದ್ಯ ಭಾರತದಲ್ಲಿ ಸಂಪರ್ಕ ಕ್ರಾಂತಿಯನ್ನೇ ಉಂಟು ಮಾಡಿದೆ. ಆರಂಭವಾಗಿ ಕೆಲವೇ ದಿನಗಳಲ್ಲಿ ಜನ ಮನ ಗೆದ್ದಿದೆ. ಇದೇ ಯಶಸ್ಸಿನಿಂದ ಸ್ಫೂರ್ತಿ ಪಡೆದು ವಂದೇ ಭಾರತ್‌ ಮೆಟ್ರೋ (Vande Bharat Metro) ಸಿದ್ಧಪಡಿಸಲಾಗುತ್ತಿದ್ದು, ಜುಲೈ ವೇಳೆಗೆ ಪರೀಕ್ಷಾರ್ಥ ಓಡಾಟ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪಂಜಾಬ್‌ನ ಕಪುರ್ಥಾಲಾ (Punjab’s Kapurthala)ದ ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ವಂದೇ ಭಾರತ್ ಮೆಟ್ರೋದ ಬೋಗಿಗಳನ್ನು ನಿರ್ಮಿಸಲಾಗುತ್ತದೆ. ಸದ್ಯ ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಗಮನ ಸೆಳೆಯುತ್ತಿದೆ (Viral Video).

ಮೊದಲ ಹಂತದಲ್ಲಿ 50 ವಂದೇ ಭಾರತ್ ಮೆಟ್ರೋ ರೈಲುಗಳನ್ನು ನಿರ್ಮಾಣ ಮಾಡಲಾಗುತ್ತದೆ ಮತ್ತು ಕ್ರಮೇಣ ಸಂಖ್ಯೆಯನ್ನು 400ಕ್ಕೆ ಏರಿಸಲಾಗುವುದು ಎಂದು ರೈಲ್ವೆ ಮೂಲಗಳು ತಿಳಿಸಿವೆ. ಭಾರತದಲ್ಲೇ ನಿರ್ಮಾಣವಾಗುತ್ತಿರುವ ಮೆಟ್ರೋ ರೈಲು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಇದು ದೊಡ್ಡ ನಗರಗಳಲ್ಲಿ ಮೆಟ್ರೋ ಸೇವೆಯನ್ನು ವಿಸ್ತರಣೆ ಮಾಡಲು ಸಹಾಯ ಮಾಡಲಿದೆ. ಅಲ್ಲದ ಮಹಾನಗರಗಳ ಅಕ್ಕಪಕ್ಕದ ನಗರಗಳಿಗೂ ಮೆಟ್ರೋ ಸೇವೆ ವಿಸ್ತರಿಸುವ ಯೋಜನೆಗೆ ಇದು ಉತ್ತೇಜನ ನೀಡಲಿದೆ.

ವಂದೇ ಭಾರತ್ ಮೆಟ್ರೋ 100 ಕಿ.ಮೀ.ನಿಂದ 250 ಕಿ.ಮೀ.ವರೆಗೆ ಪ್ರಯಾಣಿಸುವ ಸಾಮರ್ಥ್ಯ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಇದು 12 ಬೋಗಿಗಳನ್ನು ಹೊಂದಿದೆ. ಬೇಕಾದರೆ 16 ಬೋಗಿಗಳವರೆಗೆ ವಿಸ್ತರಿಸಬಹುದು ಎಂದು ಅವರು ಹೇಳಿದ್ದಾರೆ.

ಇರಲಿದೆ ಹಲವು ವೈಶಿಷ್ಟ್ಯ

ವಂದೇ ಭಾರತ್‌ ಮೆಟ್ರೋ ಅಸ್ತಿತ್ವದಲ್ಲಿರುವ ಹಳಿಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಲಕ್ನೋ-ಕಾನ್ಪುರ, ಆಗ್ರಾ-ಮಥುರಾ ಮತ್ತು ತಿರುಪತಿ-ಚೆನ್ನೈನಂತಹ ಮಾರ್ಗಗಳಲ್ಲಿ ಸಂಚರಿಸಲಿದೆ. ಇದು ವಿಶಾಲವಾದ ಒಳಾಂಗಣ ಮತ್ತು ದೊಡ್ಡ ಸ್ವಯಂಚಾಲಿತ ಬಾಗಿಲುಗಳನ್ನು ಹೊಂದಿದೆ. ಜತೆಗೆ ಪ್ರಸ್ತುತ ಚಾಲನೆಯಲ್ಲಿರುವ ಮೆಟ್ರೋ ರೈಲುಗಳಲ್ಲಿ ಲಭ್ಯವಿಲ್ಲದ ಹಲವಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ.‌ ಅಧಿಕಾರಿಗಳು ಈ ವರ್ಷವೇ ರೈಲು ಓಡಾಟ ಆರಂಭಿಸಲು ಸಾಧ್ಯವಾಗಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2019ರಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಪ್ರಾರಂಭವಾದಾಗಿನಿಂದ ಭಾರತದ ಸೆಮಿ-ಹೈಸ್ಪೀಡ್ ರೈಲು ಪ್ರಯಾಣದಲ್ಲಿ ಹಲವು ಸುಧಾರಣೆ ಕಂಡು ಬಂದಿದೆ. ಸದ್ಯ ವಂದೇ ಭಾರತ್‌ ಮೆಟ್ರೋ ಕೂಡ ಈ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ ಎನ್ನುವ ನಿರೀಕ್ಷೆ ಇದೆ.

ಇದನ್ನೂ ಓದಿ: PM Narendra Modi: ಬೆಂಗಳೂರು- ಕಲಬುರಗಿ, ಮೈಸೂರು- ಚೆನ್ನೈ ಸೇರಿ 10 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಪ್ರಯಾಣಿಕರ ಸುರಕ್ಷತೆಗೆ ಒತ್ತು ನೀಡಲು ಪ್ರಧಾನಿ ಸೂಚನೆ

ರೈಲು ಪ್ರಯಾಣದಲ್ಲಿನ ಸುರಕ್ಷತೆಯನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 2014ರಿಂದ ಹಲವಾರು ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ರೈಲ್ವೆ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಸುರಕ್ಷತೆಗೆ ಸಂಬಂಧಿಸಿದ ಕೆಲಸಗಳಿಗಾಗಿ ಮೀಸಲಾದ ನಿಧಿಯನ್ನು ರಚಿಸುವುದು, ಮಾನವರಹಿತ ಲೆವೆಲ್ ಕ್ರಾಸಿಂಗ್‌ಗಳನ್ನು ತೆಗೆದು ಹಾಕುವುದು, ಹಳಿಗಳ ನವೀಕರಣಕ್ಕೆ ಹೆಚ್ಚಿನ ಒತ್ತು ನೀಡುವುದು ಮತ್ತು ಸುರಕ್ಷಿತ ಪ್ರಯಾಣಿಕರ ಬೋಗಿಗಳ ಟ್ರ್ಯಾಕ್ ರೋಲ್ ಔಟ್ ಅನ್ನು ಹೆಚ್ಚಿನ ವೇಗದಲ್ಲಿ ಆಧುನೀಕರಿಸುವುದು ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ.

Continue Reading

ತಂತ್ರಜ್ಞಾನ

High-tech Gadget: ಸೆಕೆಗೆ ಎಸಿ, ಫ್ಯಾನ್‌, ಕೂಲರ್‌ ಸಾಕಾಗ್ತಿಲ್ವಾ..? ಹಾಗಿದ್ರೆ ಇಲ್ಲಿದೆ ನೋಡಿ ಹೈಟೆಕ್‌ ಗ್ಯಾಜೆಟ್‌

High-tech Gadget:ಸೋನಿ ಸಂಸ್ಥೆ ಸೆಕೆಗೆಂದೇ ಹೈಟೆಕ್‌ ಗ್ಯಾಜೆಟ್‌ವೊಂದನ್ನು ಅನಾವರಣಗೊಳಿಸಿದೆ. ಫ್ಯೂಚರಿಸ್ಟಿಕ್‌ ಬಾಡಿ ಏರ್‌ ಕಂಡೀಷನರ್‌ಎಂಬ ಹೈಟೆಕ್‌ ಗ್ಯಾಜೆಟ್‌ವೊಂದನ್ನು ಪರಿಚಯಿಸಲಾಗಿದ್ದು, ಇದನ್ನು ನಿಮ್ಮ ಶರ್ಟ್‌ನ ಹಿಂಭಾಗದಲ್ಲಿ ಸಿಕ್ಕಿಸಬಹುದಾಗಿದೆ. ಈ ನವೀನ ತಂತ್ರಜ್ಞಾನವು ಬೇಸಿಗೆಯಲ್ಲಿ ಬಿಸಿಲಿನ ಬೇಗೆಯಿಂದ ತಪ್ಪಿಸಿ ದೇಹವನ್ನು ತಂಪಾಗಿರಿಸುತ್ತದೆ.

VISTARANEWS.COM


on

High-tec Gadget
Koo

ನವದೆಹಲಿ: ಜನ ಬಿಸಿಲ ಬೇಗೆ ತತ್ತರಿಸಿ ಹೋಗಿದ್ದಾರೆ. ಎಲ್ಲಿ ಹೋರೂ ಬರೀ ಸೆಕೆ…ಸೆಕೆ..ಈ ಸೆಕೆಗೆ ಎಸಿ, ಪ್ಯಾನ್‌, ಕೂಲರ್‌ ಇದ್ಯಾವುದೂ ಸಾಕೇ ಆಗ್ತಿಲ್ಲ. ಹೀಗಿರುವಾಗಿ ಸೋನಿ ಸಂಸ್ಥೆ(Sony) ಸೆಕೆಗೆಂದೇ ಹೈಟೆಕ್‌ ಗ್ಯಾಜೆಟ್‌(high-tech gadget)ವೊಂದನ್ನು ಅನಾವರಣಗೊಳಿಸಿದೆ. ಫ್ಯೂಚರಿಸ್ಟಿಕ್‌ ಬಾಡಿ ಏರ್‌ ಕಂಡೀಷನರ್‌(futuristic body air conditioner) ಎಂಬ ಹೈಟೆಕ್‌ ಗ್ಯಾಜೆಟ್‌ವೊಂದನ್ನು ಪರಿಚಯಿಸಲಾಗಿದ್ದು, ಇದನ್ನು ನಿಮ್ಮ ಶರ್ಟ್‌ನ ಹಿಂಭಾಗದಲ್ಲಿ ಸಿಕ್ಕಿಸಬಹುದಾಗಿದೆ. ಈ ನವೀನ ತಂತ್ರಜ್ಞಾನವು ಬೇಸಿಗೆಯಲ್ಲಿ ಬಿಸಿಲಿನ ಬೇಗೆಯಿಂದ ತಪ್ಪಿಸಿ ದೇಹವನ್ನು ತಂಪಾಗಿರಿಸುತ್ತದೆ.

ರಿಯೋನ್‌ ಪಾಕೆಟ್‌ 5ಎಂದು ಕರೆಯಲ್ಪಡುವ ಈ ಥರ್ಮೋ ಸಾಧನ ಕಿಟ್ ಅನ್ನು ಏಪ್ರಿಲ್ 23 ರಂದು ಬಿಡುಗಡೆ ಮಾಡಲಾಗಿದೆ. ಸಾಧನವನ್ನು ಜನ ಸುಭವಾಗಿ ಧರಿಸಬಹುದಾಗಿದ್ದು, ಇದೊಂದು ಹವಾಮಾನ ನಿಯಂತ್ರಣ ವ್ಯವಸ್ಥೆಯಾಗಿದೆ. ಒಟ್ಟಿನಲ್ಲಿ ಹೇಳಬೇಕೆಂದರೆ ಅದನ್ನು ಧರಿಸಿದರೆ ಎಸಿಯಂಥ ಅನುಭವ ಆಗುತ್ತದೆ. ನಿಮ್ಮ ಕತ್ತಿನ ಹಿಂಭಾಗದಲ್ಲಿ ಧರಿಸಬಹುದಾದ ಈ ನವೀನ ಸಾಧನವು ಎಸಿಯಂತೆ ಕಾರ್ಯನಿರ್ವಹಿಸುತ್ತದೆ. ರಿಯಾನ್ ಪಾಕೆಟ್ 5 ಬೇಸಿಗೆಯಲ್ಲಿ ಐದು ಕೂಲಿಂಗ್ ಹಂತಗಳನ್ನು ಮತ್ತು ತಂಪಾದ ಪರಿಸರಕ್ಕೆ ನಾಲ್ಕು ವಾರ್ಮಿಂಗ್ ಹಂತಗಳನ್ನು ನೀಡುತ್ತದೆ. ಇದು ಕಿಕ್ಕಿರಿದ ರೈಲುಗಳಿಂದ ಹಿಡಿದು ಏರ್‌ಪ್ಲೇನ್ ಕ್ಯಾಬಿನ್‌ಗಳವರೆಗೆ ವಿವಿಧ ಸನ್ನಿವೇಶಗಳಿಗೆ ಹೊಂದಿಕೊಳ್ಳುವಂತ ಸಾಧನ. ಈ ಸಣ್ಣ ಸಾಧನ ರಿಮೋಟ್ ಕಂಟ್ರೋಲರ್‌ನಂತೆ ಕಾರ್ಯನಿರ್ವಹಿಸುತ್ತದೆ, ನಿಮ್ಮ ಸುತ್ತಮುತ್ತಲಿನ ತಾಪಮಾನದ ಸ್ಥಿತಿಗೆ ತಕ್ಕಂತೆ ತನ್ನ ಹಂತಗಳನ್ನು ಸೆಟ್‌ ಮಾಡಿಕೊಂಡು ಇದು ಕಾರ್ಯ ನಿರ್ವಹಿಸುತ್ತದೆ. ಇನ್ನು Reon Pocket 5 ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತದೆ, ಕೇವಲ ನಿಮ್ಮ ದೇಹದ ಉಷ್ಣತೆಯ ಮೇಲೆ ಕೇಂದ್ರೀಕರಿಸುತ್ತದೆ.

ಮೊಬೈಲ್‌ನಿಂದಲೂ ಆಪರೇಟ್‌ ಸಾಧ್ಯ:

ಇನ್ನು ರಿಯಾನ್ ಪಾಕೆಟ್ 5ಅನ್ನು ಮೊಬೈಲ್‌ನಿಂದ ಆಪರೇಟ್‌ ಮಾಡಬಹುದೇ ಎಂದು ಕೇಳಿದರೆ, ಹೌದು ಅದೂ ಸಾಧ್ಯವಿದೆ. ರಿಯಾನ್ ಪಾಕೆಟ್ 5 ಅನ್ನು ಹೊಸ ರಿಯಾನ್ ಪಾಕೆಟ್ ಅಪ್ಲಿಕೇಶನ್ ಮೂಲಕ ನಿಯಂತ್ರಿಸಬಹುದು, ಇದು iOS ಮತ್ತು Android ಫೋನಗಲ್ಲಿ ಲಭ್ಯವಿದೆ. ಈ ಅಪ್ಲಿಕೇಶನ್ ಬ್ಲೂಟೂತ್ ಮೂಲಕ ಐದು ಕೂಲಿಂಗ್ ಮತ್ತು ನಾಲ್ಕು ವಾರ್ಮಿಂಗ್ ಮಟ್ಟವನ್ನು ಸರಿಹೊಂದಿಸಲು ನಿಮಗೆ ಅನುಕೂಲ ಮಾಡಿಕೊಡುತ್ತದೆ. ಟೆಕ್ ರಾಡಾರ್ ಪ್ರಕಾರ, Reon ಪಾಕೆಟ್ 5 ಒಂದು ಬಾರಿ ಚಾರ್ಜ್‌ ಮಾಡಿದರೆ ಬರೋಬ್ಬರಿ 17 ಗಂಟೆಗಳ ಬ್ಯಾಟರಿ ಅವಧಿಯನ್ನು ಹೊಂದಿದೆ.

ಸೋನಿಯ ಈ ಹೊಸ ಗ್ಯಾಜೆಟ್‌ ಸಂಪೂರ್ಣವಾಗಿ ಹೊಸದಲ್ಲ. ರಿಯಾನ್ ಪಾಕೆಟ್ ಸರಣಿಯು 2019 ರಲ್ಲಿ ಜಪಾನ್‌ನಲ್ಲಿ ಪ್ರಾರಂಭವಾಯಿತು, ನಂತರದ ಆವೃತ್ತಿಗಳು ಹಾಂಗ್ ಕಾಂಗ್‌ನಂತಹ ಏಷ್ಯಾದ ಮಾರುಕಟ್ಟೆಗಳಲ್ಲಿ ಯಶಸ್ಸನ್ನು ಕಂಡುಕೊಂಡವು. ರಿಯಾನ್ ಪಾಕೆಟ್ 5, ಆದಾಗ್ಯೂ, ಜಾಗತಿಕ ವಿಸ್ತರಣೆಯನ್ನು ಗುರುತಿಸುತ್ತದೆ, UK ಮಾರುಕಟ್ಟೆಯಲ್ಲೂ ಇದು ಚಾಲ್ತಿಯಲ್ಲಿದೆ.

ಇದನ್ನೂ ಓದಿ:Viral Video: ಕತ್ತಿಯಿಂದ ಐವರ ಮೇಲೆ ಡೆಡ್ಲಿ ಅಟ್ಯಾಕ್‌; ದಾಳಿಕೋರನ ಅರೆಸ್ಟ್‌ ವಿಡಿಯೋ ಫುಲ್‌ ವೈರಲ್‌

ಎಲ್ಲಿ ಲಭ್ಯ, ಬೆಲೆ ಎಷ್ಟು?

Reon ಪಾಕೆಟ್ 5 ಗಾಗಿ ಪ್ರೀ ಆರ್ಡರ್‌ಗಳು ಈಗ ಸೋನಿಯ ವೆಬ್‌ಸೈಟ್‌ನಲ್ಲಿ ಆರಂಭವಾಗಿದೆ. ಇದರ ಬೆಲೆ 139 ಪೌಂಡ್‌ಗಳು (ಸುಮಾರು $170 USD ಅಥವಾ AU$260). ಈ ಪ್ರೀ-ಆರ್ಡರ್‌ಗಳ ಶಿಪ್ಪಿಂಗ್ ಮೇ 15 ರಂದು ಪ್ರಾರಂಭವಾಗುತ್ತದೆ. ಮೂಲ ಪ್ಯಾಕೇಜ್, “Reon 5T,” ಸಾಧನವು ಸ್ವತಃ, ರಿಯಾನ್ ಪಾಕೆಟ್ ಟ್ಯಾಗ್ ಮತ್ತು ಬಿಳಿ ನೆಕ್‌ಬ್ಯಾಂಡ್ ಅನ್ನು ಒಳಗೊಂಡಿದೆ. ಹೊಸ REON POCKET 5 ಮೇ 2024 ರಿಂದ ಸಿಂಗಾಪುರದಲ್ಲಿ ಲಭ್ಯವಿರುತ್ತದೆ ಮತ್ತು ನಂತರದ ದಿನಾಂಕದಲ್ಲಿ ಮಲೇಷ್ಯಾ, ಥೈಲ್ಯಾಂಡ್ ಮತ್ತು ವಿಯೆಟ್ನಾಂನಲ್ಲಿ ಲಭ್ಯವಿರಲಿದೆ.

Continue Reading
Advertisement
World Laughter Day
ಆರೋಗ್ಯ20 mins ago

World Laughter Day 2024: ಇಂದು ವಿಶ್ವ ನಗುವಿನ ದಿನ; ನಗುನಗುತ ಬಾಳೋಣ

Dina Bhavishya
ಭವಿಷ್ಯ20 mins ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

HD Revanna
ಕರ್ನಾಟಕ5 hours ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ5 hours ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ5 hours ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ6 hours ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ6 hours ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ6 hours ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ6 hours ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ7 hours ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ20 mins ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌