PSI Exam : ಅಕ್ಟೋಬರ್‌ 3ರಂದು ಪಿಎಸ್‌ಐ ಪರೀಕ್ಷೆ ; ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ - Vistara News

ಬೆಂಗಳೂರು

PSI Exam : ಅಕ್ಟೋಬರ್‌ 3ರಂದು ಪಿಎಸ್‌ಐ ಪರೀಕ್ಷೆ ; ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ

PSI Exam : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅ.3ಕ್ಕೆ ಪಿಎಸ್ಐ ಪರೀಕ್ಷೆ ನಡೆಯಲಿದ್ದು, ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಅರ್ಧ ತಾಸು‌ ಮೊದಲೇ ಪರೀಕ್ಷಾ ಕೇಂದ್ರದೊಳಗೆ‌ ಇರಬೇಕು. ಒಮ್ಮೆ ಒಳಗೆ ಹೋದರೆ ಎರಡೂ ಪತ್ರಿಕೆ ಮುಗಿದ ನಂತರವೇ ಹೊರಕ್ಕೆ ಬರಬೇಕು.

VISTARANEWS.COM


on

PSI Exam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಹುನಿರೀಕ್ಷಿತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (402) ಹುದ್ದೆಗಳ (PSI Exam) ನೇಮಕಾತಿಗೆ ಅಕ್ಟೋಬರ್ 3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿದ್ಧತೆಗಳನ್ನು ಮಾಡಿಕೊಂಡಿದೆ. ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ ಮತ್ತು ದಾವಣಗೆರೆ ನಗರಗಳ ಒಟ್ಟು 163 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 21,875 ಮಂದಿ ಸೇರಿದಂತೆ ಒಟ್ಟು 66,990 ಮಂದಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ‌ ಮೊದಲು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಕಡ್ಡಾಯವಾಗಿ ಇರಬೇಕು. ಹೀಗಾಗಿ ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು‌‌ ಎಚ್ಚರಿಸಿದ್ದಾರೆ.

ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕ್ಯಾಮರಾ ಅಳವಡಿಸಿದ್ದು, ವೆಬ್ ಕಾಸ್ಟಿಂಗ್ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ಕೇಂದ್ರದಲ್ಲೂ ಜಾಮರ್ ಅಳವಡಿಸಲು ಕ್ರಮ ತೆಗೆದುಕೊಂಡಿದ್ದು, ಆಸುಪಾಸಿನಲ್ಲಿ ಬ್ಲೂಟೂತ್‌ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು ಕಾರ್ಯನಿರ್ವಹಿಸದಂತೆ ಮಾಡಲಾಗಿದೆ.

ಕಮಾಂಡ್ ಸೆಂಟರ್:

ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಿದ್ದು, ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಆಗುವ ಬೆಳವಣಿಗೆಗಳನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ ಎಂದು ಅವರು ವಿವರಿಸಿದರು.

ಪ್ರಶ್ನೆ ಪತ್ರಿಕೆ ಸ್ವೀಕಾರ ಮತ್ತು ಅದರ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ. ಅಲ್ಲದೆ, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅಲ್ಲೇ ಅದನ್ನು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜತೆಗೂ ಆನ್ ಲೈನ್ ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಹೀಗೆ ಮಾಡುವುದರಿಂದ ಯಾರದೊ ಹೆಸರಿನಲ್ಲಿ ಇನ್ಯಾರೊ ಪರೀಕ್ಷೆ ಬರೆಯುವುದನ್ನು ತಡೆಯಬಹುದು ಎಂದು ಹೇಳಿದರು. ಬೇರೆ ಜಿಲ್ಲೆಗಳ ವಿಶೇಷ ವೀಕ್ಷಕರನ್ನೂ ನಿಯೋಜಿಸಿದ್ದು, ಅವರು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲಿದ್ದಾರೆ.

ಇಎನ್‌ಟಿ ವೈದ್ಯರ ನಿಯೋಜನೆ

ಹಿಂದೆಲ್ಲ ಪರೀಕ್ಷೆ ನಡೆದಾಗ ಕಿವಿಯೊಳಗೆ ಅತಿ ಸೂಕ್ಷ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ಇಟ್ಟುಕೊಂಡು ಬಂದು ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿರುವ‌ ಹಿನ್ನೆಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಒಬ್ಬ‌ ಇಎನ್‌ಟಿ ವೈದ್ಯರನ್ನು ನಿಯೋಜಿಸಿದ್ದು, ಅವರು ಕೂಡ ನಿಗಾ ಇಡಲಿದ್ದಾರೆ.

ವಿಡಿಯೊ ಕಾನ್ಫರೆನ್ಸ್:

ಪರೀಕ್ಷೆ ನಡೆಯುವ ಆರೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೊ ಸಂವಾದ‌ ನಡೆಸಿ ಬಿಗಿ ಕ್ರಮಗಳ ಬಗ್ಗೆ ವಿವರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Pai International: ಪೈ ವತಿಯಿಂದ ಮೆಗಾ ಮಾನ್ಸೂನ್‌ ಮೇಳ; ಲಕ್ಕಿ ಡ್ರಾ ವಿಜೇತರ ಆಯ್ಕೆ, ಬಹುಮಾನ ಗೆದ್ದವರ ಪಟ್ಟಿ ಬಿಡುಗಡೆ

Pai International: ಪೈ ಇಂಟರ್‌ನ್ಯಾಷನಲ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ತನ್ನ ಮೆಗಾ ಮಾನ್ಸೂನ್‌ ಮೇಳ ಲಕ್ಕಿ ಡ್ರಾ ವಿಜೇತರ ಆಯ್ಕೆ ಮಾಡಿದ್ದು, ಬಹುಮಾನ ಗೆದ್ದವರ ಪಟ್ಟಿ ಬಿಡುಗಡೆ ಮಾಡಿದೆ.

VISTARANEWS.COM


on

By

Pai International Electronics Limited continues its tradition of conducting the most Genuine Lucky Draw function transparently
Koo

ಬೆಂಗಳೂರು: ಪೈ ಇಂಟರ್‌ನ್ಯಾಷನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ತನ್ನ ಸಂಪ್ರದಾಯವನ್ನು ಮುಂದುವರಿಸಿದೆ. ಪೈ ಇಂಟರ್‌ನ್ಯಾಷನಲ್‌ ವತಿಯಿಂದ (Pai International)ಸೆಪ್ಟೆಂಬರ್‌ 29ರಂದು ಮೆಗಾ ಮಾನ್ಸೂನ್ ಮೇಳ ಲಕ್ಕಿ ಡ್ರಾ ಕಾರ್ಯಕ್ರಮ ಬೆಂಗಳೂರಿನ ಕೂಡ್ಲು ಗೇಟ್‌ನಲ್ಲಿರುವ ಪೈ ಸೆಂಟ್ರಲ್ ವೇರ್‌ಹೌಸ್‌ನಲ್ಲಿ ನಡೆಯಿತು.

Pai International Electronics Limited continues its tradition of conducting the most Genuine Lucky Draw function transparently
Pai International Electronics Limited continues its tradition of conducting the most Genuine Lucky Draw function transparently

ಪೈ ಶೋ ರೂಮ್‌ಗಳಲ್ಲಿ ಕಳೆದ ಜೂನ್ 4 ರಿಂದ ಸೆಪ್ಟೆಂಬರ್‌ 23ರ ವರೆಗೆ ಶಾಪಿಂಗ್ ಮಾಡಿದ ಗ್ರಾಹಕರಿಗೆ ಕೂಪನ್‌ಗಳನ್ನು ನೀಡಲಾಗಿತ್ತು. ಒಟ್ಟಾರೆ 24,83,381 ಕೂಪನ್‌ಗಳನ್ನು ವಿತರಿಸಲಾಗಿತ್ತು. ಇದರಲ್ಲಿ 63,030 ಮಂದಿಗೆ ಲಕ್ಕಿ ಡ್ರಾ ಮೂಲಕ ಬಹುಮಾನ ನೀಡಲಾಗುತ್ತದೆ. ಕೂಪನ್‌ಗಳನ್ನು ಪಡೆದುಕೊಂಡಿರುವ ಗ್ರಾಹಕರು ತಮಗೆ ಸಮೀಪ ಇರುವ ಪೈ ಶೋ ರೂಮ್‌ನಲ್ಲಿ ವಿಜೇತರ ಹೆಸರನ್ನು ಪರಿಶೀಲಿಸಬಹುದಾಗಿದೆ. ಪೈ ಇಂಟರ್‌ನ್ಯಾಶನಲ್‌ನ ವೆಬ್‌ಸೈಟ್‌ಗೆ ಭೇಟಿ ನೀಡಿಯೂ ಪರಿಶೀಲನೆ ನಡೆಸಬಹುದಾಗಿದೆ.

Pai International Electronics Limited continues its tradition of conducting the most Genuine Lucky Draw function transparently
Pai International Electronics Limited continues its tradition of conducting the most Genuine Lucky Draw function transparently

ಲಕ್ಕಿ ಡ್ರಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪೈ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ರಾಜ್‌ಕುಮಾರ್ ಪೈ ಮತ್ತು ನಿರ್ದೇಶಕ ರಾಹುಲ್‌ ಪೈ “ಎಲೆಕ್ಟ್ರಾನಿಕ್ಸ್ ಉಪಕರಣಗಳು, ಮೊಬೈಲ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ವಿಶ್ವಾಸಾರ್ಹ ಮತ್ತು ಪ್ರಮುಖ ಬ್ರ್ಯಾಂಡ್ ಆಗಿ ಪೈ ಇಂಟರ್‌ನ್ಯಾಷನಲ್‌ ಜನರ ಮನೆ ಮಾತಾಗಿದೆ. ಪೂರ್ಣ ಪ್ರಮಾಣದ ಶೋರೂಮ್‌ಗಳು ಕರ್ನಾಟಕ ಮತ್ತು ತೆಲಂಗಾಣದಾದ್ಯಂತ ಹರಡಿಕೊಂಡಿವೆ. ಮೆಗಾ ಮಾನ್ಸೂನ್ ಮೇಳ ಲಕ್ಕಿ ಡ್ರಾ ಸಮಾರಂಭವನ್ನು ಪ್ರತಿ ಬಾರಿಯಂತೆ ಈ ಬಾರಿಯೂ ಸಹ ನಡೆಸಿಲಾಗಿದೆ. ಲಕ್ಕಿ ಕೂಪನ್ ಡ್ರಾವನ್ನು ನಡೆಸುವಾಗ ಪಾರದರ್ಶಕತೆ ಕಾಪಾಡಿಕೊಳ್ಳಲಾಗಿದ್ದು, ಬಹುಮಾನ ವಿತರಣೆ ಮಾಡಲಾಗುವುದು,” ಎಂದರು.

Pai International Electronics Limited continues its tradition of conducting the most Genuine Lucky Draw function transparently
Pai International Electronics Limited continues its tradition of conducting the most Genuine Lucky Draw function transparently

ಇಲ್ಲಿಯವರೆಗೆ ಪೈ ಇಂಟರ್ನ್ಯಾಷನಲ್ 340 ಕಾರುಗಳು, 330 ಬೈಕ್‌ಗಳು, 179.88 ಕೋಟಿ ಪೈ ಲಾಯಲ್ಟಿ ಪಾಯಿಂಟ್ಸ್, ಪೈ ಮಳಿಗೆಗಳಲ್ಲಿ 25.34 ಕೋಟಿ ಉಚಿತ ಶಾಪಿಂಗ್, 4.15 ಕೋಟಿ ನಗದು ಬಹುಮಾನ, 7.32 ಕೋಟಿ ಚಿನ್ನದ ನಾಣ್ಯಗಳನ್ನು ತನ್ನ ಗ್ರಾಹಕರಿಗೆ ವಿತರಿಸಿದೆ. ಇಲ್ಲಿಯವರೆಗೆ ಸಾವಿರಾರು ಎಲ್ಸಿಡಿಗಳು, ಎಲ್ಇಡಿಗಳು / ರೆಫ್ರಿಜರೇಟರ್ಗಳು / ವಾಷಿಂಗ್ ಮೆಷಿನ್ಗಳು / ಟಿವಿಗಳು / ಮೈಕ್ರೋವೇವ್ ಓವನ್ಗಳು / ಮೊಬೈಲ್ ಫೋನ್ಗಳು / ಡಿವಿಡಿ ಪ್ಲೇಯರ್ಗಳು / ಇಂಡಕ್ಷನ್ ಕುಕ್ಕರ್ಗಳು ಮತ್ತು ಲಕ್ಷಾಂತರ ಇತರ ಸಣ್ಣ ಬಹುಮಾನಗಳ ಜತೆಗೆ ಪ್ರಮುಖ ಬಹುಮಾನಗಳಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Theft Case : ಬೆಂಗಳೂರಿನಲ್ಲಿ ಒಂಟಿ ಮನೆಗಳನ್ನು ಟಾರ್ಗೆಟ್‌ ಮಾಡುತ್ತಿದ್ದ ಜಂಗ್ಲಿ ಗ್ಯಾಂಗ್‌ ಅರೆಸ್ಟ್‌

Theft Case : ಬೆಂಗಳೂರಿನಲ್ಲಿ ಒಂಟಿ ಮನೆಗಳನ್ನು ಟಾರ್ಗೆಟ್‌ ಮಾಡುತ್ತಿದ್ದ ಜಂಗ್ಲಿ ಗ್ಯಾಂಗ್‌ ಅನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

VISTARANEWS.COM


on

By

Theft case
Koo

ಬೆಂಗಳೂರು: ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಕಿಕೊಂಡು ಬಂದು ಕ್ಷಣಾರ್ಧದಲ್ಲಿ ಬೀಗ ಹೊಡೆದು ಸಿಕ್ಕ ಸಿಕ್ಕ ವಸ್ತುಗಳನ್ನ ಕದ್ದು ಮನೆಗಳವು (Theft Case ) ಮಾಡಿಕೊಂಡು ಎಸ್ಕೇಪ್ ಆಗುತ್ತಿದ್ದ ಬೆಂಗಳೂರಿನ ಕುಖ್ಯಾತ ಮನೆಗಳ್ಳ ಜಂಗ್ಲಿ ಆ್ಯಂಡ್ ಗ್ಯಾಂಗ್ ಅರೆಸ್ಟ್ ಆಗಿದೆ. ಬೆಂಗಳೂರಿನ ಆರ್.ಆರ್. ನಗರ ಪೊಲೀಸರು ಜೈದೀಪು ಅಲಿಯಾಸ್ ಜಂಗ್ಲಿ, ಚಂದನ್ @ ಗುಂಡ, ಸತೀಶ್ @ಬುಡ್ಡ, ದೀಪಕ್ @ದೀಪು ಮತ್ತು ಮಿಥುನ್ @ ಮಿಲ್ಕಿ ಬಂಧಿತ ಆರೋಪಿಗಳಾಗಿದ್ದಾರೆ.

Theft case
Theft case

ಬಂಧಿತರಿಂದ 10.18 ಲಕ್ಷ ರೂ. ಮೌಲ್ಯದ 103 ಗ್ರಾಂ ಚಿನ್ನ, 2 ಕೆ.ಜಿ.ಗೂ ಅಧಿಕ ಬೆಳ್ಳಿ, ಮೂರು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಮನೆಗಳವು ಮಾಡಲಿಕ್ಕೆಂದೆ ಬೈಕ್ ಕಳ್ಳತನ ಮಾಡುತ್ತಿದ್ದರು. ಕದ್ದ ಬೈಕ್‌ಗಳಲ್ಲಿ ರೌಂಡ್ಸ್ ಹಾಕಿ ಒಂಟಿ ಮನೆಗಳನ್ನು ಗುರುತಿಸಿ ಕೈಚಳಕ ತೋರಿಸುತ್ತಿದ್ದರು. ಅದರಂತೆ ಕಳೆದ ಸೆಪ್ಟೆಂಬರ್ 17ರಂದು ಆರ್.ಆರ್.ನಗರದ ಗಟ್ಟಿಗೇರೆ ನಿವಾಸದಲ್ಲಿ ಚಂದ್ರಶೇಖರ ಎಂಬುವರ ಮನೆಗೆ ಕನ್ನಹಾಕಿದ್ದರು. ಆರೋಪಿಗಳ ಸಂಪೂರ್ಣ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬೆಂಗಳೂರಿನ ಕುಖ್ಯಾತ ಕಳ್ಳ ಎಸ್ಕೇಪ್ ಕಾರ್ತಿಕ್‌ನ ಶಿಷ್ಯನೇ ಈ ಜೈದೀಪು. ಇದೀಗ ಈ ಜಂಗ್ಲಿ ಗ್ಯಾಂಗ್‌ ಅರೆಸ್ಟ್‌ ಆಗಿದೆ.

ಚಿನ್ನು ಕದ್ದು ಸ್ನೇಹಿತರಿಗೆ ಮಾರಾಟ

ಚಿನ್ನಾಭರಣ ಕದ್ದು ತಮ್ಮ ಸ್ನೇಹಿತರಿಗೆ ಮಾರಾಟ ಮಾಡುತ್ತಿದ್ದ ಕಳ್ಳರ ಬಂಧನವಾಗಿದೆ. ವಿಲ್ಲಾಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ಖದೀಮರು ಹಿಂದಿನ ಬಾಗಿಲಿನಿಂದ ಎಂಟ್ರಿ ಕೊಟ್ಟು ಚಿನ್ನಾಭರಣ ಕಳ್ಳತನ ಮಾಡುತ್ತಿದ್ದರು. ರಾಮ್ ಕುಮಾರ್(23), ಇಸೈರಾಜ್ (27) ಬಂಧಿತ ಆರೋಪಿಗಳು. ಎಲ್ಲಾ ಮನೆಯಲ್ಲಿ ಮಲಗಿರುವ ಸಮಯದಲ್ಲೇ ಖದೀಮರು ಕನ್ನ ಹಾಕುತ್ತಿದ್ದರು. ಬೆಂಗಳೂರಿನ ಬಾಗಲೂರು ವ್ಯಾಪ್ತಿಯ ಕಣ್ಣೂರುಹಳ್ಳಿಯ ವಿಲ್ಲಾದಲ್ಲಿ ಕಳ್ಳರು ಕೈಚಳಕ ತೋರಿದ್ದರು.

ವಿಲ್ಲಾ ಮಾಲೀಕ ರಮೇಶ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದ ಬಾಗಲೂರು ಪೊಲೀಸರು, ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇಬ್ಬರು ಆರೋಪಿಗಳ 252 ಗ್ರಾಂ ಚಿನ್ನಾಭರಣ ಕದ್ದು ಒಂದು ತಿಂಗಳ ಬಳಿಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದರು. ಸಿಸಿಟಿವಿ, ಟವರ್ ಲೊಕೇಶನ್ ಟ್ರ್ಯಾಕ್ ಮಾಡಿ ಬಂಧಿಸಲಾಗಿದೆ. ಬಂಧನದ ಬಳಿಕ ಈ ಹಿಂದೆ ಕಳ್ಳತನ ಮಾಡಿದ್ದ ಮತ್ತೊಂದು ಪ್ರಕರಣವು ಬೆಳಕಿಗೆ ಬಂದಿದೆ. ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಇದೇ ಮಾದರಿಯಲ್ಲಿ ಕಳ್ಳತನ ಮಾಡಿದ್ದರು. ಬಂಧಿತರಿಂದ ಒಟ್ಟು 30 ಲಕ್ಷ ಮೌಲ್ಯದ 437 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಉಂಡ ಮನೆಗೆ ಕನ್ನ ಹಾಕಿದ್ದ ಖದೀಮ ಬಂಧನ

ಬೆಂಗಳೂರಿನಲ್ಲಿ ಉಂಡ ಮನೆಗೆ ಕನ್ನ ಹಾಕಿದ್ದ ಖತರ್ನಾಕ್ ಖದೀಮನ ಬಂಧನವಾಗಿದೆ. ಸಿದ್ದಾಪುರ ಪೊಲೀಸರಿಂದ ಚಿಕ್ಕಬಳ್ಳಾಪುರ ಮೂಲದ ನಾರಾಯಣಸ್ವಾಮಿ (33) ಎಂಬ ಆರೋಪಿ ಬಂಧನವಾಗಿದೆ. ಸಿದ್ದಾಪುರ ಠಾಣಾ ವ್ಯಾಪ್ತಿಯ ಯರ್ರಿಸ್ವಾಮಿ ಎಂಬ ಚಾಟೆಡ್ ಅಕೌಂಟ್ ಕಚೇರಿ ಹಣ ಕಳವು ಮಾಡಿದ್ದ. ಯರ್ರಿಸ್ವಾಮಿ ಬಳಿ ಕಾರ್ ಡ್ರೈವರ್ ಕಮ್ ಸೆಕ್ಯುರಿಟಿಯಾಗಿ ಕೆಲಸ ಮಾಡುತ್ತಿದ್ದ. ಅದೇ ಕಚೇರಿಯಲ್ಲಿ ನಾರಾಯಣಸ್ವಾಮಿ ಹೆಂಡತಿ ಸಹ ಕೆಲಸ ಮಾಡುತ್ತಿದ್ದಳು. ಯರ್ರಿಸ್ವಾಮಿ ಹಣ ಇಟ್ಟಿದ್ದ ಬಗ್ಗೆ ತಿಳಿದು ಸುಮಾರು 10.95 ಲಕ್ಷ ಹಣ ಎಗರಿಸಿದ್ದ. ಹಣ ಕದ್ದು ಕಾರ್ ಖರೀದಿ ಮಾಡಿ ಟ್ರಿಪ್ ಹೊಡೆಯುತ್ತಿದ್ದ.

ಕದ್ದ ಹಣದಲ್ಲಿ ವಿವೊ ಮೊಬೈಲ್ , ಚಿನ್ನದ ಸರ ಹಾಗೂ ಬ್ರಾಸ್ಲೆಟ್ , ಫಾಸ್ಟ್ರಾಕ್ ವಾಚ್ ಹಾಗೂ ಕಾರು ಖರೀದಿ ಮಾಡಿದ್ದ. ಕದ್ದ ಹಣದಲ್ಲೇ ಒಳ ಉಡುಪಿನಿಂದ ಹಿಡಿದು ಅಡಿಯಿಂದ ಮುಡಿವರೆಗೂ ಎಲ್ಲವನ್ನೂ ಖರೀದಿ ಮಾಡಿದ್ದ. ಈ ಕುರಿತು ಯರ್ರಿಸ್ವಾಮಿ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸಿಸಿಟಿವಿ ಪರಿಶೀಲನೆ ವೇಳೆ ನಾರಾಯಣಸ್ವಾಮಿ ಡಸ್ಟ್ ಬಿನ್ ಕವರ್‌ನಲ್ಲಿ ಹಣ ಕದ್ದು ಹೋಗುವುದು ಗೊತ್ತಾಗಿತ್ತು. ಪ್ರಕರಣ ದಾಖಲಿಸಿ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಮ್ ಮಾಲೀಕ ಕೊಟ್ಟ ಮಾಹಿತಿ ಮೇರೆಗೆ ಆರೋಪಿ ಬಂಧನವಾಗಿದೆ. ಬಂಧಿತನಿಂದ ಚೈನ್ , ಬ್ರಾಸ್ಲೆಟ್ , ವಿವೊ ಮೊಬೈಲ್ , ಕಾರು, ಫಾಸ್ಟ್ರಾಕ್ ವಾಚ್ ಹಾಗೂ 3.5 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Theft Case : ಮನೆಗೆಲಸದವರ ಮಾತು ಕದ್ದು ಕೇಳಿಸಿಕೊಂಡ; ಕೆ.ಜಿ ಗಟ್ಟಲೆ ಚಿನ್ನ ದೋಚಿದ್ದು, 12 ಗಂಟೆಯಲ್ಲೇ ಸಿಕ್ಕಾಕೊಂಡ!

Theft Case : ಮನೆಗೆಲಸದವರ ಮಾತು ಕದ್ದು ಕೇಳಿಸಿಕೊಂಡ ಚಾಲಾಕಿ ಕಳ್ಳನೊಬ್ಬ ಕೆ.ಜಿ ಗಟ್ಟಲೆ ಚಿನ್ನ ದೋಚಿ, ಕೃತ್ಯದ 12 ಗಂಟೆಯಲ್ಲೇ ಗ್ಯಾಂಗ್‌ ಪೂರ್ತಿ ಸಿಕ್ಕಿಹಾಕಿಕೊಂಡಿದ್ದಾರೆ.

VISTARANEWS.COM


on

By

Thief arrested for stealing gold in Bengaluru
Koo

ಬೆಂಗಳೂರು: ಮನೆಕೆಲಸದವರ ಮಾತನ್ನು ಕದ್ದು (Theft Case) ಕೇಳಿ ಹೀಗೂ ಕಳ್ಳತನದ ಪ್ಲ್ಯಾನ್ ಮಾಡಬಹುದಾ? ಇಂತಹದೊಂದು ಘಟನೆಗೆ ಬೆಂಗಳೂರಿನಲ್ಲಿ ನಡೆದಿದೆ. ಮನೆ ಕೆಲಸದವರ ಮಾತನ್ನು ಕದ್ದು ಕೇಳಿಸಿಕೊಂಡ ಖದೀಮ ಕೆ.ಜಿ ಗಟ್ಟಲೆ ಚಿನ್ನ ದೋಚಿದವನು, ಕೃತ್ಯ ನಡೆದ 12 ಗಂಟೆಯಲ್ಲೇ ಸಿಕ್ಕಿಕೊಂಡಿದ್ದಾನೆ. ಸಿನಿಮಾ ಸ್ಟೈಲ್‌ನಲ್ಲೇ ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧಿಯಾಗಿದ್ದಾನೆ. ಸನ್ಯಾಸಿ ನಂದೀಶ್ ಬಂಧಿತ ಆರೋಪಿ.

ದೇವಸ್ಥಾನಕ್ಕೆ ಹೋಗುವವರ ಮನೆ ಟಾರ್ಗೆಟ್ ಮಾಡುತ್ತಿದ್ದವನು ದೇವಸ್ಥಾನವೊಂದರಲ್ಲೇ ಸಿಕ್ಕಿಬಿದ್ದಿದ್ದಾನೆ. ರಾಯರ ದರ್ಶನಕ್ಕೆ ಹೋದವರ ಮನೆ ಕಳ್ಳತನ ಮಾಡಿ, ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಲು ಹೊರಟಿದ್ದ. ಒಂದೂವರೆ ಕೆ.ಜಿ ಚಿನ್ನ ಕದ್ದಿದ್ದ ಖತರ್ನಾಕ್ ಕಳ್ಳನ ಗ್ಯಾಂಗ್‌ ಅನ್ನು ಸುಬ್ರಮಣ್ಯ ನಗರ ಪೊಲೀಸರು ಬಂಧಿಸಿದ್ದಾರೆ. ಮನೆಗೆಲಸದವರ ಮಾತನ್ನ ಕದ್ದು ಕೇಳಿಸಿಕೊಂಡವನು ಕಳ್ಳತನಕ್ಕೆ ಇಳಿದಿದ್ದ. ಖತರ್ನಾಕ್ ಪ್ಲ್ಯಾನ್ ಮಾಡಿಯೂ 12 ಗಂಟೆಯೊಳಗೆ ಪೊಲೀಸರ ಅತಿಥಿಯಾಗಿದ್ದಾನೆ. ಸನ್ಯಾಸಿ ನಂದೀಶ್, ನಂದೀಶ್ ಪ್ರತಾಪ್ ಬಂಧಿತ ಆರೋಪಿಗಳು. ಆರೋಪಿ ಹನುಮೇಗೌಡ ಎಂಬಾತ ಎಸ್ಕೇಪ್ ಅಗಿದ್ದು ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮನೆಯವರು ಮಂತ್ರಾಲಯಕ್ಕೆ ಹೋಗುತ್ತಿದ್ದಾರೆ ಎಂದು ಕೆಲಸದವರು ಮಾತಾಡಿದ್ದರು. ಇದನ್ನ ಪಕ್ಕದಲ್ಲೇ ನಿಂತು ಸನ್ಯಾಸಿ ಮಠ ನಂದೀಶ ಕೇಳಿಕೊಂಡಿದ್ದ. ಈ ವಿಚಾರವನ್ನು ತನ್ನ ಸ್ನೇಹಿತರಿಗೆ ಹೇಳಿ ಕಳ್ಳತನಕ್ಕೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದ. ಮನೆಯವರು ಮಂತ್ರಾಲಯಕ್ಕೆ ಹೊರಡುತ್ತಿದ್ದಂತೆ ಮನೆ ಬಳಿ ಕಾದು ಕುಳಿತಿದ್ದ ಈ ಕಿಡಿಗೇಡಿಗಳು, ಮನೆಯ ಹಿಂಬದಿ ಕಿಟಕಿಯನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ ಮನೆಗೆ ಎಂಟ್ರಿ ಕೊಟ್ಟಿದ್ದರು.

ಮನೆಯಲ್ಲಿದ್ದ 1ಕೆ.ಜಿ 800 ಗ್ರಾಂ ಚಿನ್ನ ಎಗರಿಸಿ ಕಾಲ್ಕಿತ್ತಿದ್ದರು. ಕದ್ದ ಎಲ್ಲ ಚಿನ್ನವನ್ನು ಕೂಡ ರೂಮಿನಲ್ಲೇ ಸನ್ಯಾಸಿ ಮಠ ನಂದೀಶ ಇಟ್ಟಿದ್ದ . ಇತ್ತ ಮನೆ ಮಾಲೀಕರು ಮಂತ್ರಾಲಯದಿಂದ ವಾಪಸು ಬಂದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಿಸಿಟಿವಿ ಆಧಾರಿಸಿ ಆರೋಪಿಗಳ ಜಾಡು ಹಿಡಿದಿದ್ದ ಪೊಲೀಸರು, ಧರ್ಮಸ್ಥಳ ದರ್ಶನ ಮುಗಿಸಿ ವಾಪಸ್‌ ಬರುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1ಕೆಜಿ 800 ಗ್ರಾಂ ಚಿನ್ನ ಸೇರಿ 18 ಸಾವಿರ ನಗದು ವಶಕ್ಕೆ ಪಡೆದು, ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ.

ಜಂಗ್ಲಿ ಗ್ಯಾಂಗ್‌ ಅರೆಸ್ಟ್‌

ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಕಿಕೊಂಡು ಬಂದು ಕ್ಷಣಾರ್ಧದಲ್ಲಿ ಬೀಗ ಹೊಡೆದು ಸಿಕ್ಕ ಸಿಕ್ಕ ವಸ್ತುಗಳನ್ನ ಕದ್ದು ಮನೆಗಳವು ಮಾಡಿಕೊಂಡು ಎಸ್ಕೇಪ್ ಆಗುತ್ತಿದ್ದ ಬೆಂಗಳೂರಿನ ಕುಖ್ಯಾತ ಮನೆಗಳ್ಳ ಜಂಗ್ಲಿ ಆ್ಯಂಡ್ ಗ್ಯಾಂಗ್ ಅರೆಸ್ಟ್ ಆಗಿದೆ. ಬೆಂಗಳೂರಿನ ಆರ್.ಆರ್. ನಗರ ಪೊಲೀಸರು ಜೈದೀಪು ಅಲಿಯಾಸ್ ಜಂಗ್ಲಿ, ಚಂದನ್ @ ಗುಂಡ, ಸತೀಶ್ @ಬುಡ್ಡ, ದೀಪಕ್ @ದೀಪು ಮತ್ತು ಮಿಥುನ್ @ ಮಿಲ್ಕಿ ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ 10.18 ಲಕ್ಷ ರೂ. ಮೌಲ್ಯದ 103 ಗ್ರಾಂ ಚಿನ್ನ, 2 ಕೆ.ಜಿ.ಗೂ ಅಧಿಕ ಬೆಳ್ಳಿ, ಮೂರು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಮನೆಗಳವು ಮಾಡಲಿಕ್ಕೆಂದೆ ಬೈಕ್ ಕಳ್ಳತನ ಮಾಡುತ್ತಿದ್ದರು. ಕದ್ದ ಬೈಕ್‌ಗಳಲ್ಲಿ ರೌಂಡ್ಸ್ ಹಾಕಿ ಒಂಟಿ ಮನೆಗಳನ್ನು ಗುರುತಿಸಿ ಕೈಚಳಕ ತೋರಿಸುತ್ತಿದ್ದರು. ಅದರಂತೆ ಕಳೆದ ಸೆಪ್ಟೆಂಬರ್ 17ರಂದು ಆರ್.ಆರ್.ನಗರದ ಗಟ್ಟಿಗೇರೆ ನಿವಾಸದಲ್ಲಿ ಚಂದ್ರಶೇಖರ ಎಂಬುವರ ಮನೆಗೆ ಕನ್ನಹಾಕಿದ್ದರು. ಆರೋಪಿಗಳ ಸಂಪೂರ್ಣ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬೆಂಗಳೂರಿನ ಕುಖ್ಯಾತ ಕಳ್ಳ ಎಸ್ಕೇಪ್ ಕಾರ್ತಿಕ್‌ನ ಶಿಷ್ಯನೇ ಈ ಜೈದೀಪು. ಇದೀಗ ಈ ಜಂಗ್ಲಿ ಗ್ಯಾಂಗ್‌ ಅರೆಸ್ಟ್‌ ಆಗಿದೆ.

ಇದನ್ನೂ ಓದಿ: Accident Case : ದಾವಣಗೆರೆಯಲ್ಲಿ ದುರಂತ; ಬಿಸಿ ನೀರು ಹಾಗೂ ಬಿಸಿ ಸಾಂಬಾರ್‌ ಬಿದ್ದು ಪ್ರತ್ಯೇಕ ಕಡೆ ಇಬ್ಬರು ಮಕ್ಕಳು ಸಾವು

ಚಿನ್ನ ಕದ್ದು ಸ್ನೇಹಿತರಿಗೆ ಮಾರಾಟ

ಚಿನ್ನಾಭರಣ ಕದ್ದು ತಮ್ಮ ಸ್ನೇಹಿತರಿಗೆ ಮಾರಾಟ ಮಾಡುತ್ತಿದ್ದ ಕಳ್ಳರ ಬಂಧನವಾಗಿದೆ. ವಿಲ್ಲಾಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ಖದೀಮರು ಹಿಂದಿನ ಬಾಗಿಲಿನಿಂದ ಎಂಟ್ರಿ ಕೊಟ್ಟು ಚಿನ್ನಾಭರಣ ಕಳ್ಳತನ ಮಾಡುತ್ತಿದ್ದರು. ರಾಮ್ ಕುಮಾರ್(23), ಇಸೈರಾಜ್ (27) ಬಂಧಿತ ಆರೋಪಿಗಳು. ಎಲ್ಲಾ ಮನೆಯಲ್ಲಿ ಮಲಗಿರುವ ಸಮಯದಲ್ಲೇ ಖದೀಮರು ಕನ್ನ ಹಾಕುತ್ತಿದ್ದರು. ಬೆಂಗಳೂರಿನ ಬಾಗಲೂರು ವ್ಯಾಪ್ತಿಯ ಕಣ್ಣೂರುಹಳ್ಳಿಯ ವಿಲ್ಲಾದಲ್ಲಿ ಕಳ್ಳರು ಕೈಚಳಕ ತೋರಿದ್ದರು.

ವಿಲ್ಲಾ ಮಾಲೀಕ ರಮೇಶ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದ ಬಾಗಲೂರು ಪೊಲೀಸರು, ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇಬ್ಬರು ಆರೋಪಿಗಳ 252 ಗ್ರಾಂ ಚಿನ್ನಾಭರಣ ಕದ್ದು ಒಂದು ತಿಂಗಳ ಬಳಿಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದರು. ಸಿಸಿಟಿವಿ, ಟವರ್ ಲೊಕೇಶನ್ ಟ್ರ್ಯಾಕ್ ಮಾಡಿ ಬಂಧಿಸಲಾಗಿದೆ. ಬಂಧನದ ಬಳಿಕ ಈ ಹಿಂದೆ ಕಳ್ಳತನ ಮಾಡಿದ್ದ ಮತ್ತೊಂದು ಪ್ರಕರಣವು ಬೆಳಕಿಗೆ ಬಂದಿದೆ. ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಇದೇ ಮಾದರಿಯಲ್ಲಿ ಕಳ್ಳತನ ಮಾಡಿದ್ದರು. ಬಂಧಿತರಿಂದ ಒಟ್ಟು 30 ಲಕ್ಷ ಮೌಲ್ಯದ 437 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಉಂಡ ಮನೆಗೆ ಕನ್ನ ಹಾಕಿದ್ದ ಖದೀಮ ಬಂಧನ

ಬೆಂಗಳೂರಿನಲ್ಲಿ ಉಂಡ ಮನೆಗೆ ಕನ್ನ ಹಾಕಿದ್ದ ಖತರ್ನಾಕ್ ಖದೀಮನ ಬಂಧನವಾಗಿದೆ. ಸಿದ್ದಾಪುರ ಪೊಲೀಸರಿಂದ ಚಿಕ್ಕಬಳ್ಳಾಪುರ ಮೂಲದ ನಾರಾಯಣಸ್ವಾಮಿ (33) ಎಂಬ ಆರೋಪಿ ಬಂಧನವಾಗಿದೆ. ಸಿದ್ದಾಪುರ ಠಾಣಾ ವ್ಯಾಪ್ತಿಯ ಯರ್ರಿಸ್ವಾಮಿ ಎಂಬ ಚಾಟೆಡ್ ಅಕೌಂಟ್ ಕಚೇರಿ ಹಣ ಕಳವು ಮಾಡಿದ್ದ. ಯರ್ರಿಸ್ವಾಮಿ ಬಳಿ ಕಾರ್ ಡ್ರೈವರ್ ಕಮ್ ಸೆಕ್ಯುರಿಟಿಯಾಗಿ ಕೆಲಸ ಮಾಡುತ್ತಿದ್ದ. ಅದೇ ಕಚೇರಿಯಲ್ಲಿ ನಾರಾಯಣಸ್ವಾಮಿ ಹೆಂಡತಿ ಸಹ ಕೆಲಸ ಮಾಡುತ್ತಿದ್ದಳು. ಯರ್ರಿಸ್ವಾಮಿ ಹಣ ಇಟ್ಟಿದ್ದ ಬಗ್ಗೆ ತಿಳಿದು ಸುಮಾರು 10.95 ಲಕ್ಷ ಹಣ ಎಗರಿಸಿದ್ದ. ಹಣ ಕದ್ದು ಕಾರ್ ಖರೀದಿ ಮಾಡಿ ಟ್ರಿಪ್ ಹೊಡೆಯುತ್ತಿದ್ದ.

ಕದ್ದ ಹಣದಲ್ಲಿ ವಿವೊ ಮೊಬೈಲ್ , ಚಿನ್ನದ ಸರ ಹಾಗೂ ಬ್ರಾಸ್ಲೆಟ್ , ಫಾಸ್ಟ್ರಾಕ್ ವಾಚ್ ಹಾಗೂ ಕಾರು ಖರೀದಿ ಮಾಡಿದ್ದ. ಕದ್ದ ಹಣದಲ್ಲೇ ಒಳ ಉಡುಪಿನಿಂದ ಹಿಡಿದು ಅಡಿಯಿಂದ ಮುಡಿವರೆಗೂ ಎಲ್ಲವನ್ನೂ ಖರೀದಿ ಮಾಡಿದ್ದ. ಈ ಕುರಿತು ಯರ್ರಿಸ್ವಾಮಿ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸಿಸಿಟಿವಿ ಪರಿಶೀಲನೆ ವೇಳೆ ನಾರಾಯಣಸ್ವಾಮಿ ಡಸ್ಟ್ ಬಿನ್ ಕವರ್‌ನಲ್ಲಿ ಹಣ ಕದ್ದು ಹೋಗುವುದು ಗೊತ್ತಾಗಿತ್ತು. ಪ್ರಕರಣ ದಾಖಲಿಸಿ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಮ್ ಮಾಲೀಕ ಕೊಟ್ಟ ಮಾಹಿತಿ ಮೇರೆಗೆ ಆರೋಪಿ ಬಂಧನವಾಗಿದೆ. ಬಂಧಿತನಿಂದ ಚೈನ್ , ಬ್ರಾಸ್ಲೆಟ್ , ವಿವೊ ಮೊಬೈಲ್ , ಕಾರು, ಫಾಸ್ಟ್ರಾಕ್ ವಾಚ್ ಹಾಗೂ 3.5 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ.

ಸಿನಿಮಾ ಸ್ಟೈಲ್‌ನಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅಂದರ್

ಗ್ರಾಹಕರ ಆತ್ಮತೃಪ್ತಿಯೇ ಈ ಖತರ್ನಾಕ್ ಕಳ್ಳರು ಟಾರ್ಗೆಟ್ ಮಾಡುತ್ತಿದ್ದರು. ಕಸ್ಟಮರ್‌ಗಳಿಂದ ಆರ್ಡರ್ ಪಡೆದು ನಂತರ ಯಾವ ಬೈಕ್ ಬೇಕೋ ಅದೇ ಬೈಕ್ ಕಳ್ಳತನ ಮಾಡುತ್ತಿದ್ದರು. ಬೆಂಗಳೂರಿನಲ್ಲಿ ಖತರ್ನಾಕ್ ಬೈಕ್ ಕಳ್ಳ ಶಬಾಜ್ ಖಾನ್ ಹಾಗೂ ಓಂ ಇಬ್ಬರು ಬಂಧಿತ ಆರೋಪಿಗಳು. ಒಮ್ಮೆ ಬೈಕ್ ಕದ್ದು ಆನ್‌ಲೈನ್ ನಲ್ಲಿ ಮಾರಾಟ ಮಾಡಿದ್ದರು. ನಂತರ ಆನ್‌ಲೈನ್‌ನಲ್ಲಿ ಕಸ್ಟಮರ್‌ಗಳು ಒಬ್ಬರ ಮೂಲಕ ಮತ್ತೊಬ್ಬರ ಪರಿಚಯವಾಗಿತ್ತು.

15 ರಿಂದ 20 ಸಾವಿರಕ್ಕೆ ಬೈಕ್ ಮಾರಾಟ ಮಾಡುತ್ತಿದ್ದರು. ಮಾರಾಟದ ವೇಳೆ ಯಾರಿಗಾದರೂ ಕಡಿಮೆ ಬೆಲೆಗೆ ಯಾವ ಬೈಕ್ ಬೇಕಾದರೂ ಕೊಡುತ್ತಿವಿ ಎಂದು ಹೇಳುತ್ತಿದ್ದರು. ಕಸ್ಟಮರ್ ಸಿಕ್ಕಾಗ ನಿಮಗೆ ಯಾವ ಮಾದರಿಯ, ಯಾವ ಮಾಡೆಲ್‌ನ ಯಾವ ಕಂಪನಿಯ ಬೈಕ್ ಬೇಕೆಂದು ಮಾಹಿತಿ ಪಡೆಯುತ್ತಿದ್ದರು. ಬೈಕ್ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. ಕದ್ದ ಹಣದಿಂದ ವಿಲಾಸಿ ಜೀವನ ನಡೆಸುತ್ತಿದ್ದರು. ಬಂಧಿತರಿಂದ ಒಟ್ಟು 12.5 ಲಕ್ಷ ಮೌಲ್ಯದ 13 ಬೈಕ್ ವಶಕ್ಕೆ ಪಡೆಯಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Rain : ಮಳೆ-ಗಾಳಿ ಜತೆಗೆ ಸಿಡಿಲು ಬಡಿದು ಇಬ್ಬರು ಸಾವು; ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿ

Karnataka Weather Forecast : ಮಳೆ-ಗಾಳಿ (Karnataka Rain) ಜತೆಗೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಸಿಡಿಲು ಬಡಿದು ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿಯಾಗಿದೆ.

VISTARANEWS.COM


on

By

Karnataka Rain
Koo

ಚಿಕ್ಕೋಡಿ: ಸಿಡಿಲು ಬಡಿದು ರೈತರೊಬ್ಬರು (Karnataka Rain) ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಭೀಮಪ್ಪ ಭಾಳಪ್ಪ ಮಂಗಳೂರ (56) ಮೃತ ದುರ್ದೈವಿ. ದನ ಕಾಯುತ್ತಿದ್ದ ಭೀಮಪ್ಪ ಭಾಳಪ್ಪ ಮನೆಗೆ ತೆರಳುವಾಗ ಸೋಮವಾರ ಸಂಜೆ ಹೊತ್ತಿಗೆ ಮಳೆ- ಗಾಳಿ ಜತೆಗೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸುರ ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿಯಾಗಿದೆ. ಹೊಸೂರು ಗ್ರಾಮದ 1008 ಪಾರ್ಶ್ವನಾಥ ಜೈನ ಮಂದಿರಕ್ಕೆ ಹಾನಿಯಾಗಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಸಿಡಿಲಿನ ಅಬ್ಬರವು ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಎರಡು ದಿನಗಳಿಂದ ಹುಕ್ಕೇರಿ ಬಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಹುಕ್ಕೇರಿ, ಚಿಕ್ಕೋಡಿ, ನಿಪ್ಪಾಣಿ ತಾಲೂಕಗಳ ವಿವಿಧೆಡೆ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ಮಳೆಯಿಂದ ರಸ್ತೆ ಮೇಲೆ ನೀರು ಹರಿದಿದೆ. ವರುಣನ ಆರ್ಭಟಕ್ಕೆ ಪ್ರಯಾಣಿಕರ ಪರದಾಡಿದರು. ಇತ್ತ ಮಳೆಯಿಂದ ಹಿಂಗಾರು ಬಿತ್ತನೆಗೆ ಸಜ್ಜಾದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಗಾಳಿ- ಮಳೆಗೆ ಹಾರಿ ಹೋದ ಕಾರ್ಖಾನೆಯ ಚಾವಣಿ

ಹಾವೇರಿ ಜಿಲ್ಲೆಯಲ್ಲಿ ತಡ ರಾತ್ರಿ ಸುರಿದ ಗಾಳಿ- ಮಳೆಗೆ ಕಾರ್ಖಾನೆಯ ಚಾವಣಿ ಹಾರಿಹೋಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಸನೀಲ್ ಎನ್ನುವವರಿಗೆ ಸೇರಿದ ಕಾರ್ಖಾನೆಯಲ್ಲಿದ್ದ ಮಷಿನ್ ಹಾಗು ಕಟ್ಟಡಕ್ಕೆ ಹಾನಿಯಾಗಿದೆ. ಜೋರಾಗಿ ಬೀಸಿದ ಗಾಳಿಗೆ ಚಾವಣಿ ಹಾರಿ ಹೋಗಿದೆ.

ರಾಯಚೂರಿನಲ್ಲೂ ಸಿಡಿಲು ಬಡಿದು ವ್ಯಕ್ತಿ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟಿದ್ದಾರೆ. ದುರಗಪ್ಪ (35) ಮೃತ ದುರ್ದೈವಿ. ರಾಯಚೂರಿನ ಲಿಂಗಸ್ಗೂರು ತಾಲ್ಲೂಕಿನ ಹಂಚಿನಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗ್ರೇಡ್ -2 ತಹಶಿಲ್ದಾರ್ ಶಂಶಾಲಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲೂ ಅಬ್ಬರಿಸಿದ್ದ ಮಳೆ

ಕಾಫಿನಾಡ ಮಲೆನಾಡು ಭಾಗದಲ್ಲಿ ಸೋಮವಾರ ಸಂಜೆ ಮಳೆ ಅಬ್ಬರ ಜೋರಾಗಿತ್ತು. ಆಲಿಕಲ್ಲು ಮಳೆಗೆ ಮಲೆನಾಡಿಗರು ಹೈರಾಣಾದರು. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದಲ್ಲಿ ಭಾರೀ ಆಲಿಕಲ್ಲು ಮಳೆಯಾಗಿತ್ತು. ಹಸಿರ ಹುಲ್ಲಿನ ರಾಶಿ ಮೇಲೆ ಆಲಿಕಲ್ಲು ಹರಡಿದಂತೆ ಸುರಿದಿದೆ. ಅಕ್ಟೋಬರ್‌ನಲ್ಲಿ ಆಲಿಕಲ್ಲು ಮಳೆ ಕಂಡು ಮಲೆನಾಡಿಗರು ಕಂಗಲಾಗಿದ್ದು, ಕಾಫಿ ಬೆಳೆಗೆ ಹಾನಿಯಾಗುವ ಆತಂಕ ಇದೆ.

ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಸೇತುವೆ ಜಲಾವೃತಗೊಂಡಿತ್ತು. ಕಳಸ-ಬಾಳೆಹೊನ್ನೂರು ರಾಜ್ಯ ಹೆದ್ದಾರಿ ಬಂದ್ ಆಗಿತ್ತು. ಹೊರನಾಡು ಮಾರ್ಗದಲ್ಲಿ ಕಿ.ಮೀ. ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ, ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವು ಬಂದ್ ಆಗಿತ್ತು. ಸೇತುವೆ ಮೇಲೆ 2 ಅಡಿ ಎತ್ತರದಲ್ಲಿ ನೀರು ಹರಿಯುತ್ತಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pai International Electronics Limited continues its tradition of conducting the most Genuine Lucky Draw function transparently
ಬೆಂಗಳೂರು2 ನಿಮಿಷಗಳು ago

Pai International: ಪೈ ವತಿಯಿಂದ ಮೆಗಾ ಮಾನ್ಸೂನ್‌ ಮೇಳ; ಲಕ್ಕಿ ಡ್ರಾ ವಿಜೇತರ ಆಯ್ಕೆ, ಬಹುಮಾನ ಗೆದ್ದವರ ಪಟ್ಟಿ ಬಿಡುಗಡೆ

PSI Exam
ಬೆಂಗಳೂರು1 ಗಂಟೆ ago

PSI Exam : ಅಕ್ಟೋಬರ್‌ 3ರಂದು ಪಿಎಸ್‌ಐ ಪರೀಕ್ಷೆ ; ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ

Theft case
ಬೆಂಗಳೂರು3 ಗಂಟೆಗಳು ago

Theft Case : ಬೆಂಗಳೂರಿನಲ್ಲಿ ಒಂಟಿ ಮನೆಗಳನ್ನು ಟಾರ್ಗೆಟ್‌ ಮಾಡುತ್ತಿದ್ದ ಜಂಗ್ಲಿ ಗ್ಯಾಂಗ್‌ ಅರೆಸ್ಟ್‌

Thief arrested for stealing gold in Bengaluru
ಬೆಂಗಳೂರು3 ಗಂಟೆಗಳು ago

Theft Case : ಮನೆಗೆಲಸದವರ ಮಾತು ಕದ್ದು ಕೇಳಿಸಿಕೊಂಡ; ಕೆ.ಜಿ ಗಟ್ಟಲೆ ಚಿನ್ನ ದೋಚಿದ್ದು, 12 ಗಂಟೆಯಲ್ಲೇ ಸಿಕ್ಕಾಕೊಂಡ!

Two children die after hot water and hot sambar fall on them
ದಾವಣಗೆರೆ5 ಗಂಟೆಗಳು ago

Accident Case : ದಾವಣಗೆರೆಯಲ್ಲಿ ದುರಂತ; ಬಿಸಿ ನೀರು ಹಾಗೂ ಬಿಸಿ ಸಾಂಬಾರ್‌ ಬಿದ್ದು ಪ್ರತ್ಯೇಕ ಕಡೆ ಇಬ್ಬರು ಮಕ್ಕಳು ಸಾವು

Physical Abuse
ಕಲಬುರಗಿ6 ಗಂಟೆಗಳು ago

Physical Abuse : ಇನ್ಸ್ಟಾಗ್ರಾಮ್ ಲವ್‌; ಮದುವೆ ಆಗೋಣ ಬಾ ಎಂದವನು ಲಾಡ್ಜ್‌ಗೆ ಕರೆದೊಯ್ದು ಕೈಕೊಟ್ಟ ಪೊಲೀಸ್‌ ಪೇದೆ!

Karnataka Rain
ಪ್ರಮುಖ ಸುದ್ದಿ6 ಗಂಟೆಗಳು ago

Karnataka Rain : ಮಳೆ-ಗಾಳಿ ಜತೆಗೆ ಸಿಡಿಲು ಬಡಿದು ಇಬ್ಬರು ಸಾವು; ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿ

Actor Govinda
ಬಾಲಿವುಡ್7 ಗಂಟೆಗಳು ago

Actor Govinda : ಬಾಲಿವುಡ್​ ನಟ ಗೋವಿಂದ ಕಾಲಿಗೆ ಗುಂಡೇಟು! ಮುಂಬೈ ಆಸ್ಪತ್ರೆಗೆ ದಾಖಲು

Superstar Rajinikanth is unwell Family members admitted to hospital in the middle of the night
ಸಿನಿಮಾ8 ಗಂಟೆಗಳು ago

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

Karnataka Weather Forecast
ಮಳೆ13 ಗಂಟೆಗಳು ago

Karnataka Weather : ಭಾರಿ ಮಳೆ ಹಿನ್ನೆಲೆ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌