Site icon Vistara News

Railway news: ಪ್ರಯಾಣಿಕರ ಗಮನಕ್ಕೆ; ಸುರಕ್ಷತಾ ಕಾಮಗಾರಿ ಹಿನ್ನೆಲೆ ಈ ರೈಲುಗಳ ಓಡಾಟ ಸ್ಥಗಿತ

Job Alert

Job Alert

ಡಾ. ಮಂಜುನಾಥ ಕನಮಡಿ
ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ
ನೈರುತ್ಯ ರೈಲ್ವೆ, ಹುಬ್ಬಳ್ಳಿ

ಬೆಂಗಳೂರು ವಿಭಾಗದ (railway news) ಪೆನುಕೊಂಡ-ಮಕ್ಕಾಜಿಪಲ್ಲಿ ನಿಲ್ದಾಣಗಳ ನಡುವೆ ಇಂಜಿನಿಯರಿಂಗ್ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಹಿನ್ನಲೆಯಲ್ಲಿ ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು ಮತ್ತು ಬದಲಾದ ಮಾರ್ಗದ ಮೂಲಕ ಸಂಚರಿಸಲಾಗುತ್ತದೆ. ಅವುಗಳು ಈ ಕೆಳಗಿನಂತಿವೆ:

ಭಾಗಶಃ ರದ್ದು

ರೈಲು ಸಂಖ್ಯೆ 06515 ಕೆಎಸ್ಆರ್ ಬೆಂಗಳೂರು-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ಮೆಮು ವಿಶೇಷ ರೈಲು ಸೆಪ್ಟೆಂಬರ್ 5, 10, 11 ಮತ್ತು 12, 2024 ರಂದು ಹಿಂದೂಪುರ-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಹಿಂದೂಪುರದಲ್ಲಿ ಕೊನೆಗೊಳ್ಳುತ್ತದೆ.

ರೈಲು ಸಂಖ್ಯೆ 06516 ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಸೆಪ್ಟೆಂಬರ್ 5, 10, 11 ಮತ್ತು 12, 2024 ರಂದು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಹಿಂದೂಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ನಿಲ್ದಾಣದ ಬದಲು ಹಿಂದೂಪುರದಿಂದ ನಿಗದಿತ ನಿರ್ಗಮನ ಸಮಯದಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ.

ರೈಲು ಸಂಖ್ಯೆ 07693 ಗುಂತಕಲ್-ಹಿಂದೂಪುರ ಡೆಮು ವಿಶೇಷ ರೈಲು ಸೆಪ್ಟೆಂಬರ್ 9 ರಿಂದ 11, 2024 ರವರೆಗೆ ಧರ್ಮಾವರಂ-ಹಿಂದೂಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಧರ್ಮಾವರಂನಲ್ಲಿ ಕೊನೆಗೊಳ್ಳುತ್ತದೆ.

ರೈಲು ಸಂಖ್ಯೆ 07694 ಹಿಂದೂಪುರ-ಗುಂತಕಲ್ ಡೆಮು ವಿಶೇಷ ರೈಲು ಸೆಪ್ಟೆಂಬರ್ 10 ರಿಂದ 12, 2024 ರವರೆಗೆ ಹಿಂದೂಪುರ ನಿಲ್ದಾಣದ ಬದಲು ಧರ್ಮಾವರಂನಿಂದ ನಿಗದಿತ ನಿರ್ಗಮನ ಸಮಯದಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಹೀಗಾಗಿ ಹಿಂದೂಪುರ-ಧರ್ಮಾವರಂ ನಿಲ್ದಾಣಗಳ ನಡುವೆ ರದ್ದುಗೊಂಡಿರುತ್ತದೆ.

railway

ರೈಲುಗಳ ಮಾರ್ಗ ಬದಲಾವಣೆ

ಸೆಪ್ಟೆಂಬರ್ 5 ಮತ್ತು 12, 2024ರಂದು ಪ್ರಾರಂಭವಾಗುವ ರೈಲು ಸಂಖ್ಯೆ 20703 ಕಾಚಿಗುಡ-ಯಶವಂತಪುರ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಶವಂತಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ಸೆಪ್ಟೆಂಬರ್ 5 ಮತ್ತು 12, 2024ರಂದು ಪ್ರಾರಂಭವಾಗುವ ರೈಲು ಸಂಖ್ಯೆ 22231 ಕಲಬುರಗಿ-ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಅನಂತಪುರ, ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ಸೆಪ್ಟೆಂಬರ್ 9, 2024ರಂದು ಹೊರಡುವ ರೈಲು ಸಂಖ್ಯೆ 12976 ಜೈಪುರ-ಮೈಸೂರು ಎಕ್ಸ್ ಪ್ರೆಸ್ ರೈಲು ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಹಿಂದೂಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ಸೆಪ್ಟೆಂಬರ್ 10 ಮತ್ತು 11, 2024ರಂದು ಹೊರಡುವ ರೈಲು ಸಂಖ್ಯೆ 16572 ಬೀದರ್-ಯಶವಂತಪುರ ಎಕ್ಸ್ ಪ್ರೆಸ್ ರೈಲು ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಹಿಂದೂಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ಸೆಪ್ಟೆಂಬರ್ 10 ಮತ್ತು 11, 2024ರಂದು ಹೊರಡುವ ರೈಲು ಸಂಖ್ಯೆ 16593 ಕೆಎಸ್ಆರ್ ಬೆಂಗಳೂರು-ನಾಂದೇಡ್ ಎಕ್ಸ್ ಪ್ರೆಸ್ ರೈಲು ಪೆನುಕೊಂಡ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ & ಧರ್ಮಾವರಂ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

Exit mobile version