Navodaya Vidyalaya: ಜು.16ರಂದು ಬೆಂಗಳೂರಿನಲ್ಲಿ ನವೋದಯ ಹಳೇ ವಿದ್ಯಾರ್ಥಿಗಳ ಸಭೆ - Vistara News

ನೋಟಿಸ್ ಬೋರ್ಡ

Navodaya Vidyalaya: ಜು.16ರಂದು ಬೆಂಗಳೂರಿನಲ್ಲಿ ನವೋದಯ ಹಳೇ ವಿದ್ಯಾರ್ಥಿಗಳ ಸಭೆ

Navodaya Vidyalaya: ಬೆಂಗಳೂರಿನ ಬಾಗಲೂರಿನ ನವೋದಯ ವಿದ್ಯಾಲಯದಲ್ಲಿ ಜುಲೈ 16ರಂದು ಬೆಳಗ್ಗೆ 9ಗಂಟೆಗೆ ʼಪ್ರಾದೇಶಿಕ ಹಳೆಯ ವಿದ್ಯಾರ್ಥಿಗಳ ಸಭೆ-2023ʼ ಆಯೋಜಿಸಲಾಗಿದೆ.

VISTARANEWS.COM


on

JAWAHAR NAVODAYA VIDYALAYA at BAGALUR
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೈದರಾಬಾದ್ ವಲಯದ ನವೋದಯ ವಿದ್ಯಾಲಯ ಸಮಿತಿ (Navodaya Vidyalaya) ವತಿಯಿಂದ ನಗರದ ಹೊರವಲಯದ ಬಾಗಲೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಜುಲೈ 16ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ʼಪ್ರಾದೇಶಿಕ ಹಳೆಯ ವಿದ್ಯಾರ್ಥಿಗಳ ಸಭೆ-2023ʼ (Regional Alumni Meet-2023) ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಮಾತ್ರವಲ್ಲದೆ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪ, ಪುದುಚೇರಿ
ಅಂಡಮಾನ್ ಮತ್ತು ನಿಕೋಬಾರ್​ನ 77ಕ್ಕೂ ಹೆಚ್ಚು ಶಾಲೆಗಳ ಸಾವಿರಾರು ಹಳೇ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಹಳೇ ವಿದ್ಯಾರ್ಥಿ ವಿನಯ್‌ ಆಲಾಪ್‌ ಮಾತನಾಡಿ, ಭಾನುವಾರ ನಡೆಯಲಿರುವ ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ 6 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ 72 ಜಿಲ್ಲೆಗಳ ಸುಮಾರು 6 ಸಾವಿರ ಹಳೆಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಇದೊಂದು ಬೃಹತ್‌ ಹಳೆಯ ವಿದ್ಯಾರ್ಥಿಗಳ ಸಭೆಯಾಗಿದೆ. ಇನ್ನು ಶಾಲೆಯಲ್ಲಿ ಓದಿದ ಬೆಂಗಳೂರು ಸುತ್ತಮುತ್ತಲಿನ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Education Guide : ಎಲ್ಲರ ಶಿಕ್ಷಣಕ್ಕಾಗಿ ದೂರ ಶಿಕ್ಷಣ!

Preparing for regional alumni meeting at Bagalur
ಬಾಗಲೂರಿನ ನವೋದಯ ವಿದ್ಯಾಲಯ ಆವರಣದಲ್ಲಿ ಪ್ರಾದೇಶಿಕ ಹಳೆಯ ವಿದ್ಯಾರ್ಥಿಗಳ ಸಭೆಗಾಗಿ ಸಿದ್ಧತೆ.

ಮತ್ತೊಬ್ಬ ಹಳೇ ವಿದ್ಯಾರ್ಥಿ ದೊಡ್ಡಬಳ್ಳಾಪುರದ ಸೋಮೇಶ್‌ ನವೋದಯ ಪ್ರತಿಕ್ರಿಯಿಸಿ, ನವೋದಯ ವಿದ್ಯಾಲಯ ಕೇಂದ್ರ ಸರ್ಕಾರ ಅಧೀನದಲ್ಲಿರುವ ವಿದ್ಯಾಸಂಸ್ಥೆಯಾಗಿದೆ. ನಾವು ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಪೂರೈಸಿ ಸುಮಾರು 25 ವರ್ಷಗಳೇ ಕಳೆದರೂ ಇಂದಿಗೂ ಆಗಾಗ ಸಂಸ್ಥೆಗೆ ಆಗಮಿಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡುತ್ತೇವೆ. ಸಂಸ್ಥೆಯ ಹಳೇ ವಿದ್ಯಾರ್ಥಿಗಳು ಇಂದು ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಲೂ ಹಳೆ ವಿದ್ಯಾರ್ಥಿಗಳಿಂದ ಪ್ರತಿ ವರ್ಷ ಶಿಕ್ಷಕರಿಗೆ ಸನ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PGCET 2024: ಪಿಜಿಸಿಇಟಿ 2024ಕ್ಕೆ ಮೇ 27ರಿಂದ ಅರ್ಜಿ ಸಲ್ಲಿಕೆ ಆರಂಭ; ಪರೀಕ್ಷೆ ಯಾವಾಗ, ಇಲ್ಲಿದೆ ವೇಳಾಪಟ್ಟಿ

PGCET 2024: ಪಿಜಿಸಿಇಟಿ 2024 ಪರೀಕ್ಷೆಗೆ ಮೇ 27ರಿಂದ ಜೂನ್ 17 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಜೂನ್ 18 ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ.

VISTARANEWS.COM


on

PGCET 2024
Koo

ಬೆಂಗಳೂರು: 2024-25ನೇ ಸಾಲಿನ ಎಂಬಿಎ, ಎಂಸಿಎ, ಎಂ.ಟೆಕ್, ಎಂಇ, ಎಂ.ಆರ್ಕಿಟೆಕ್ಟರ್ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (PGCET 2024) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ದಿನಾಂಕ ನಿಗದಿ ಮಾಡಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜುಲೈ 13 ಮತ್ತು 14ರಂದು ಪಿಜಿಸಿಇಟಿ-24 ನಡೆಯಲಿದೆ.

ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಟರ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 13 ರಂದು ಹಾಗೂ ಎಂಸಿಎ ಮತ್ತು ಎಂಬಿಎ ಕೋರ್ಸ್ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ನಡೆಸಲಾಗುತ್ತದೆ. ಪಿಜಿಸಿಇಟಿ ಪರೀಕ್ಷೆಗೆ ಮೇ 27ರಿಂದ ಜೂನ್ 17 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜೂನ್ 18 ಶುಲ್ಕ ಪಾವತಿಸಲು ಕೊನೆಯ ದಿನಾಂಕವಾಗಿದೆ.

ಎಂಜಿನಿಯರಿಂಗ್ ಹಾಗೂ ಟೆಕ್ನಾಲಜಿ ವಿಭಾಗದಲ್ಲಿ ಗೇಟ್‌ (GATE) ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಮಾತ್ರ ವಿಟಿಯು, ಬೆಳಗಾವಿ ಅಡಿಯಲ್ಲಿನ ವಿವಿಧ ಎಂ.ಟೆಕ್ ಕೋರ್ಸುಗಳಿಗೆ ಪ್ರವೇಶ ಪಡೆಯಲು ಅರ್ಹರಾಗುತ್ತಾರೆ. ಗೇಟ್ ಪರೀಕ್ಷೆಯಲ್ಲಿ ಮಾನ್ಯತೆ ಅಂಕಗಳನ್ನು ಹೊಂದಿರುವವರು (Valid GATE Score) ಎಂಇ / ಎಂ.ಟೆಕ್ / ಎಂ. ಆರ್ಕ್ ಕೋರ್ಸ್‌ಗಳ ಪ್ರವೇಶಕ್ಕಾಗಿ, ಪಿಜಿಸಿಇಟಿ-2024ಕ್ಕೆ ಹಾಜರಾಗುವ ಅವಶ್ಯಕತೆ ಇರುವುದಿಲ್ಲ. ಆದರೆ ಅಂತಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ ಶುಲ್ಕವನ್ನು ಪಾವತಿಸಿ ಪ್ರವೇಶಕ್ಕೆ ಅರ್ಹರಾಗಬಹುದು. ಎಸ್‌-ಎಸ್‌ಟಿ, ಒಬಿಸಿ ಅರ್ಹತಾ ಮಾನದಂಡಗಳು ಕರ್ನಾಟಕದ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.

ಇನ್ನು ಕರ್ನಾಟಕೇತರ ಅಭ್ಯರ್ಥಿಗಳು ಎಂಬಿಎ ಮತ್ತು ಎಂಸಿಎ ಪ್ರವೇಶಕ್ಕೆ ಆಡಳಿತ ಮಂಡಳಿಯವರು ಸರ್ಕಾರಕ್ಕೆ ಬಿಟ್ಟುಕೊಡುವ ಸೀಟುಗಳನ್ನು ಮಾತ್ರ ಆಯ್ಕೆ ಮಾಡಲು ಅರ್ಹತೆ ಪಡೆಯುತ್ತಾರೆ. ಕರ್ನಾಟಕೇತರ ಅಭ್ಯರ್ಥಿಗಳಿಗೆ ಯಾವುದೇ ಮೀಸಲಾತಿಯ ಸವಲತ್ತುಗಳು ಅನ್ವಯಿಸುವುದಿಲ್ಲ. ಆದ್ದರಿಂದ ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿರುವ ಕನಿಷ್ಠ ಅಂಕಗಳನ್ನು ಪಡೆದಿದ್ದಲ್ಲಿ ಮಾತ್ರ (50%) ಅರ್ಹತೆಯನ್ನು ಪಡೆಯಬಹುದಾಗಿದೆ ಹಾಗೂ ಪ್ರವೇಶಕ್ಕಾಗಿ ನೊಂದಣಿಯನ್ನು ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ | COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಟರ್ ಕೋರ್ಸುಗಳ ಪ್ರವೇಶಕ್ಕೆ, ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಒಟ್ಟು ಕನಿಷ್ಟ ಶೇ.50 ಹಾಗೂ ಕರ್ನಾಟಕದ ಎಸ್.ಸಿ., ಎಸ್.ಟಿ., ಪ್ರವರ್ಗ-1 ರ ಅಭ್ಯರ್ಥಿಗಳು ಕನಿಷ್ಠ ಶೇ.45% ಅಂಕಗಳನ್ನು ಪಡೆದಿರಬೇಕು. CGPA / SGPA ಗ್ರೇಡ್‌ಗಳ ಮಾದರಿಯಲ್ಲಿ ನಿಗದಿಪಡಿಸಿರುವ ಅರ್ಹತಾ ಪರೀಕ್ಷೆಯ ಅಂಕಗಳು, ಅಗತ್ಯವಿರುವ ಕನಿಷ್ಠ ಅರ್ಹತಾ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಗ್ರೇಡ್‌ಗಳ ಅಂಕಗಳು ಸೂಚಿಸುತ್ತಿರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು ಎಂದು ಕೆಇಎ ಮಾಹಿತಿ ನೀಡಿದೆ.

Continue Reading

ಕರ್ನಾಟಕ

Liquor ban: ಜೂ. 1ರಿಂದ ಐದು ದಿನ ಮದ್ಯ ಮಾರಾಟ ನಿಷೇಧ; ಖರೀದಿಗೆ ಮುಗಿಬಿದ್ದ ಎಣ್ಣೆ ಪ್ರಿಯರು!

Liquor ban: ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ಬೆಂಗಳೂರು ಜಿಲ್ಲಾಡಳಿತ ಜೂನ್ ಮೊದಲನೇ ವಾರದಲ್ಲಿ ಮದ್ಯ ಮಾರಾಟವನ್ನು ಬಂದ್ ಮಾಡುವಂತೆ ಆದೇಶ ನೀಡಿದೆ.

VISTARANEWS.COM


on

Liquor ban
Koo

ಬೆಂಗಳೂರು: ಮದ್ಯಪ್ರಿಯರಿಗೆ ಕಹಿ ಸುದ್ದಿ ಹೊರಬಿದ್ದಿದೆ. ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್‌ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ರಾಜಧಾನಿಯಲ್ಲಿ ಒಂದು ವಾರದ ಕಾಲ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ. ಒಂದು ವಾರದ ಕಾಲ ಮದ್ಯದಂಗಡಿಗಳು ಕ್ಲೋಸ್‌‌ ಆಗುವ ಹಿನ್ನೆಲೆ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳು ಮುಗಿಬೀಳುತ್ತಿದ್ದಾರೆ.

ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತದೆ. ಅದೇ ರೀತಿ, ಜೂನ್ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.

ಇದನ್ನೂ ಓದಿ | D‌rinking Water: ಅಧಿಕಾರಿಗಳೇ ಹುಷಾರ್! ನೀರಿನಿಂದ ಆರೋಗ್ಯ ಕೈಕೊಟ್ರೆ ಶಿಸ್ತು ಕ್ರಮ: ಡಿಕೆಶಿ ವಾರ್ನಿಂಗ್

ಇನ್ನು ಜೂನ್ 6 ರಂದು ವಿಧಾನ ಪರಿಷತ್ತಿನ ಚುನಾವಣೆ ಮತ ಎಣಿಕೆ ಇರುವ ಕಾರಣ ಅಂದೂ ಬಾರ್ ಬಂದ್ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ಜೂನ್ ತಿಂಗಳ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ. ಹೀಗಾಗಿ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳೋಕೆ ಮುಗಿಬೀಳುತ್ತಿದ್ದಾರೆ.

ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

Excise revenue excise department went beyond the target and 15 percent more income

ಬೆಂಗಳೂರು: ಈ ಬೇಸಿಗೆಯಲ್ಲಿ ಬೇಡಿಕೆಗೆ ತಕ್ಕಂತೆ ಸರಬರಾಜು ಇಲ್ಲದ ಕಾರಣ ರಾಜ್ಯದಲ್ಲಿ ಬಿಯರ್ ಅಭಾವ (Beer Shortage) ತೀವ್ರವಾಗಿ ಕಾಡಿತ್ತು. ಅಂದರೆ ಬೇಡಿಕೆಗೆ ತಕ್ಕಂತೆ ಪೂರೈಕೆ ಸಾಧ್ಯವಾಗಿರಲಿಲ್ಲ. ಆದರೂ ರಾಜ್ಯದಲ್ಲಿ ಬಂಪರ್ ಮದ್ಯ (Excise revenue) ಮಾರಾಟವಾಗಿದೆ. ಮದ್ಯ ದರ ಏರಿಕೆಯ ನಡುವೆ ಅಬಕಾರಿ ವರಮಾನ ಶೇ. 15ರಷ್ಟು ಹೆಚ್ಚಳವಾಗಿದೆ.

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಸೃಷ್ಟಿಯಾಗಿತ್ತು ಮದ್ಯದ ಅಭಾವ

ಬೇಸಿಗೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಮಾರಾಟ ಕೂಡ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಆಗುತ್ತಿರಲಿಲ್ಲ. ಹೀಗಾಗಿ ಎರಡು ತಿಂಗಳ ಕಾಲ ಬಿಯರ್‌ ಅಭಾವ ಮುಂದುವರಿದಿತ್ತು.

ರಾಜ್ಯದಲ್ಲಿ ಬೇಸಿಗೆ ವೇಳೆ ಅಂದರೆ ಏಪ್ರಿಲ್‌, ಮೇ ವೇಳೆ ನಿತ್ಯ 11.50 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿತ್ತು. ಬೇಸಿಗೆ‌ಗೆ ಮುನ್ನ ನಿತ್ಯ 8 ಲಕ್ಷ ಲೀಟರ್ ಬಿಯರ್ ಸೇಲ್‌ ಆಗುತ್ತಿತ್ತು. ಹೀಗಾಗಿ ಬೇಸಿಗೆ ವೇಳೆ ನಿತ್ಯ ಸರಿ ಸುಮಾರು ಮೂರೂವರೆ ಲಕ್ಷ ಲೀಟರ್‌ ಬಿಯರ್‌ ಹೆಚ್ಚುವರಿಯಾಗಿ ಬೇಕಿತ್ತು. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಸಿಗುತ್ತಿರಲಿಲ್ಲ.

ಈ ವರ್ಷದ ಆರಂಭದ ತಿಂಗಳಲ್ಲಿ ಬಿಯರ್ ಮಾರಾಟ ಕುಸಿತ ಕಂಡಿತ್ತು. ಕಳೆದ ವರ್ಷದ ಬೇಸಿಗೆಗೆ ಹೋಲಿಸಿದರೆ ಈ ವರ್ಷದಲ್ಲಿ ಶೇ.30 ಮಾರಾಟ ಹೆಚ್ಚಳವಾಗಿತ್ತು. ಅಗತ್ಯ ಇರುವಷ್ಟು ಬಿಯರ್ ಸಂಗ್ರಹ ಇದೆ ಎಂದು ಅಬಕಾರಿ ಇಲಾಖೆ ಮೂಲಗಳು ಹೇಳಿದ್ದವಾದರೂ ಬೇಸಿಗೆ ತೀವ್ರ ಅಭಾವ ಉಂಟಾಗಿತ್ತು.

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡ ಬಿಯರ್‌ ಉತ್ಪಾದನೆ ಕುಸಿಯಲು ಕಾರಣವಾಗಿತ್ತು. ಇನ್ನು ಸಾರಿಗೆ ಸಮಸ್ಯೆ, ಚುನಾವಣೆ ಸಮಯದಲ್ಲಿ ಮಳಿಗೆಗಳಲ್ಲಿ ಹೆಚ್ಚುವರಿ ಮದ್ಯ, ಬಿಯರ್‌ ಸಂಗ್ರಹಣೆ ಮೇಲೆ ನಿರ್ಬಂಧ ಹೇರಿರುವುದು ಕೂಡ ಬಿಯರ್‌ ಪೂರೈಕೆ ಕುಸಿಯಲು ಕಾರಣವಾಗಿತ್ತು.

ಇದನ್ನೂ ಓದಿ: Rave party: ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ ಹೇಮಾ!

ಬಿಸಿಲಿನ ಝಳದಿಂದ ಹೊರಬರಲು ಜನರು ಹಾಟ್ ಡ್ರಿಂಕ್ಸ್‌ಗಳಿಗಿಂತ ಬೇಸಿಗೆಯಲ್ಲಿ ಬಿಯರ್ ಹೆಚ್ಚು ಕುಡಿಯುತ್ತಾರೆ. ಜತೆಗೆ ಈ ವರ್ಷ ಮಾರಾಟ ಹೆಚ್ಚಳವಾಗಲು ಲೋಕಸಭಾ ಚುನಾವಣೆಯ ಕೊಡುಗೆಯೂ ಇದೆ. ಬಿಯರ್ ಕುಡಿದರೆ ಬಿಸಿಲ ಧಗೆಯಿಂದ ಹೊರಬರಬಹುದು ಎಂದು ನಂಬಲಾಗಿದ್ದು, ಇದು ಬಿಯರ್ ಬಳಕೆ ಹೆಚ್ಚಳವಾಗಲು ಕಾರಣವಾಗಿದೆ. ಇನ್ನು ಮದ್ಯ ಮಾರಾಟದಿಂದ ಈ ವರ್ಷ ರಾಜ್ಯ ಸರ್ಕಾರ 36 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಿದೆ. ಆರಂಭದಲ್ಲಿಯೇ ಉತ್ತಮ ಮಾರಾಟ ಕಂಡು ಬಂದಿರುವುದರಿಂದ ಆದಾಯ ಹೆಚ್ಚುವ ನಿರೀಕ್ಷೆ ಇದೆ.

Continue Reading

ಬೆಂಗಳೂರು

SRISHTI 2024: ಬೆಂಗಳೂರಿನಲ್ಲಿ ಮೇ 24ರಿಂದ 26ರವರೆಗೆ ʼಸೃಷ್ಟಿ ಇನ್ನೋವೇಶನ್‌ ಎಕ್ಸ್‌ಚೇಂಜ್ʼ

SRISHTI 2024: ಬೆಂಗಳೂರಿನ ಎಟ್ರಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಆವರಣದಲ್ಲಿ ಮೇ 24ರಿಂದ 26ರವರೆಗೆ ʼಸೃಷ್ಟಿ ಇನ್ನೋವೇಶನ್‌ ಎಕ್ಸ್‌ಚೇಂಜ್ 2024ʼ ಆಯೋಜಿಸಲಾಗಿದೆ. ಕಾರ್ಯಕ್ರಮದ ಭಾಗವಾಗಿ ಸೃಷ್ಟಿ ಪ್ರದರ್ಶನ, ಸೃಷ್ಟಿ ಇನ್ನೋವೇಟರ್‌, ಸೃಷ್ಟಿ ಪರಮ್‌ ಟ್ಯಾಲೆಂಟ್‌ ಕ್ವೆಸ್ಟ್‌ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ.

VISTARANEWS.COM


on

SRISHTI 2024
Koo

ಬೆಂಗಳೂರು: ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆ, ನಾವೀನ್ಯತೆಯ ಪ್ರತಿಭೆಗೆ ವೇದಿಕೆ ಒದಗಿಸಲು ಮೇ 24ರಿಂದ 26ರವರೆಗೆ ʼಸೃಷ್ಟಿ ಇನ್ನೋವೇಶನ್‌ ಎಕ್ಸ್‌ಚೇಂಜ್ 2024ʼ (SRISHTI 2024) ಕಾರ್ಯಕ್ರಮವನ್ನು ನಗರದ ಎಟ್ರಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಆವರಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ವಿಎಸ್‌ಎಸ್‌ ಟ್ರಸ್ಟ್‌, ಎಬಿವಿಪಿ, ಯುವಕ ಸಂಘ, ಎಟ್ರಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಎಐಸಿಟಿಇ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೇ 24ರಂದು ಶುಕ್ರವಾರ ಸಂಜೆ 3.30ಕ್ಕೆ ಎಟ್ರಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಆವರಣದಲ್ಲಿ ಉದ್ಘಾಟನಾ ಸಮಾರಂಭ ನೆರವೇರಿದ್ದು, ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಉಪಾಧ್ಯಕ್ಷ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ, ಗೌರವ ಅತಿಥಿಗಳಾಗಿ ಭಾರತದ ಮರ್ಸಿಡಿಸ್-ಬೆನ್ಜ್ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಮನು ಸಾಲೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್ ವಿದ್ಯಾಶಂಕರ್, ಎಬಿವಿಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಶಿಶ್ ಚೌಹಾಣ್ ಭಾಗವಹಿಸಿದ್ದರು.

ಎಟ್ರಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಧ್ಯಕ್ಷ ಹಾಗೂ ASKB ಚಾರಿಟೇಬಲ್ ಫೌಂಡೇಶನ್ ಟ್ರಸ್ಟ್‌ನ ಟ್ರಸ್ಟಿ ಸಿ.ಎಸ್.ಸುಂದರ್ ರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇನ್ನು ಕಾರ್ಯಕ್ರಮದ ಸಮಾರೋಪ ಸಮಾರಂಭ ಮೇ 26ರಂದು ಮಧ್ಯಾಹ್ನ 3ಕ್ಕೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್, ಗೌರವ ಅತಿಥಿಗಳಾಗಿ NAAC ನಿರ್ದೇಶಕ ಪ್ರೊ. ಗಣೇಶನ್ ಕನ್ನಬೀರನ್, ಎಐಸಿಟಿಇ ಅಧ್ಯಕ್ಷ ಪ್ರೊ.ಟಿ.ಜಿ.ಸೀತಾರಾಮ್, ವಿಟಿಯು ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಎ.ಎಸ್. ಟಿ.ಎನ್.ಶ್ರೀನಿವಾಸ್‌, ಎಬಿವಿಪಿ ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿ ಎಸ್. ಬಾಲಕೃಷ್ಣ, ಎಟ್ರಿಯಾ ಎಜುಕೇಶನ್‌ನ ನಿರ್ದೇಶಕ ಕೌಶಿಕ್ ರಾಜು ಉಪಸ್ಥಿತರಿರಲಿದ್ದಾರೆ. ASKB ಚಾರಿಟೇಬಲ್ ಫೌಂಡೇಶನ್ ಟ್ರಸ್ಟ್‌ನ ಟ್ರಸ್ಟಿ ಕೆ.ನಾಗರಾಜು ಅಧ್ಯಕ್ಷತೆ ವಹಿಸಲಿದ್ದಾರೆ.

ವಿಎಸ್ಎಸ್ ಟ್ರಸ್ಟ್ ಕಾರ್ಯದರ್ಶಿ ಡಾ.ಡಿ.ಎಸ್.ಕೃಷ್ಣ, ಎಟ್ರಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಾಂಶುಪಾಲ ಡಾ. ರಾಜೇಶ್‌. ಎಸ್, ಎಬಿವಿಪಿ ಕರ್ನಾಟಕ ಉತ್ತರ ರಾಜ್ಯಾಧ್ಯಕ್ಷ ಡಾ.ಆನಂದ ಹೊಸೂರು, ರಾಜ್ಯ ಕಾರ್ಯದರ್ಶಿ ಸಚಿನ್ ಕುಳಗೇರಿ, ಯುವಕ ಸಂಘದ ಅಧ್ಯಕ್ಷ ಡಾ. ಟಿ.ವಿ. ರಾಜು, ಎಟ್ರಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಉಪ ಪ್ರಾಂಶುಪಾಲೆ ಡಾ. ನಳಿನಾಕ್ಷಿ. ಎನ್., ಎಬಿವಿಪಿ ಕರ್ನಾಟಕ ದಕ್ಷಿಣದ ಅಧ್ಯಕ್ಷ ಡಾ. ಸತೀಶ್.ಎಚ್.ಕೆ, ರಾಜ್ಯ ಕಾರ್ಯದರ್ಶಿ ಪ್ರವೀಣ್. ಎಚ್.ಕೆ ಭಾಗವಹಿಸಲಿದ್ದಾರೆ.

ಇದನ್ನೂ ಓದಿ | ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

ಸೃಷ್ಟಿ-2024 ಭಾಗವಾಗಿ ವಿವಿಧ ಕಾರ್ಯಕ್ರಮ

ʼಸೃಷ್ಟಿ 2024ʼ, ಉತ್ಸಾಹಿ ವಿದ್ಯಾರ್ಥಿಗಳು ಮತ್ತು ಉದಯೋನ್ಮುಖ ವಿಜ್ಞಾನಿಗಳನ್ನು ರಚಿಸಲು ಮತ್ತು ಮುಕ್ತ ಉದ್ಯಮಶೀಲತೆಯ ಮಾರ್ಗಗಳ ಬಗ್ಗೆ ಒಳನೋಟ ನೀಡಲು ವೇದಿಕೆ ಒದಗಿಸಲಿದೆ. ಸೃಷ್ಟಿಯು ಸಂವಹನವನ್ನು ಅಭಿವೃದ್ಧಿಪಡಿಸುವ ಮತ್ತು ಉದ್ಯಮ ಮತ್ತು ಸಂಸ್ಥೆಗಳ ನಡುವಿನ ಸಮಕಾಲೀನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನವಾಗಿದೆ. ಐಐಎಸ್ಸಿ, ಐಐಟಿ, ಎನ್ಐಟಿ ಮತ್ತು ಇತರ ಪ್ರತಿಷ್ಠಿತ ಟೆಕ್ ಸಂಸ್ಥೆಗಳ ಬೋಧಕರನ್ನು ಒಳಗೊಂಡ ತಾಂತ್ರಿಕ ಸಮಿತಿಯು, ಪರಿಶೀಲನೆಯ ನಂತರ ಪ್ರತಿವರ್ಷ ಕರ್ನಾಟಕದಾದ್ಯಂತದ ಪ್ರತಿಷ್ಠಿತ ಸಂಸ್ಥೆಗಳ ನೂರಾರು ಉತ್ಸಾಹಿ ವಿದ್ಯಾರ್ಥಿಗಳು ಪ್ರಾಜೆಕ್ಟ್ ಎಕ್ಸಿಬಿಷನ್ ಮತ್ತು ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ʼಸೃಷ್ಟಿ ಇನ್ನೋವೇಶನ್‌ ಎಕ್ಸ್‌ಚೇಂಜ್ 2024ʼ ಭಾಗವಾಗಿ ಸೃಷ್ಟಿ ಪ್ರದರ್ಶನ, ಸೃಷ್ಟಿ ಇನ್ನೋವೇಟರ್‌, ಸೃಷ್ಟಿ ಪರಮ್‌ ಟ್ಯಾಲೆಂಟ್‌ ಕ್ವೆಸ್ಟ್‌ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ.

Continue Reading

ಪ್ರಮುಖ ಸುದ್ದಿ

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

SSLC 2024 Exam 2: ಎಸ್ಎಸ್ಎಲ್‌ಸಿ ಪರೀಕ್ಷೆ-2, ಜೂನ್‌ 14ರಿಂದ 22 ರವರೆಗೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಸುತ್ತೋಲೆ ಬಿಡುಗಡೆ ಮಾಡಿದೆ.

VISTARANEWS.COM


on

SSLC 2024 Exam 2
Koo

ಬೆಂಗಳೂರು: 2024ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-2ರ (SSLC 2024 Exam 2) ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿದ್ದು, ಜೂನ್‌ 14 ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್‌.ಮಂಜುಶ್ರೀ ಸುತ್ತೋಲೆ ಹೊರಡಿಸಿದ್ದಾರೆ.

2024ರ ಎಸ್ಎಸ್ಎಲ್‌ಸಿ ಪರೀಕ್ಷೆ-2 ಅನ್ನು ಈ ಹಿಂದೆ ಜೂನ್‌ 7ರಿಂದ 14ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಸರ್ಕಾರದ ಸೂಚನೆ ಅನ್ವಯ ಪರೀಕ್ಷೆ-2ನ್ನು ಮುಂದೂಡಿ, ಜೂನ್‌ 14ರಿಂದ 22 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್ಎಸ್ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದುಕೊಂಡು ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾ ಉಪನಿರ್ದೇಶಕರು(ಆಡಳಿತ) ಸೇರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ

  • 14-06-2024 ಶುಕ್ರವಾರ: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(ಎನ್‌ಸಿಇಆರ್‌ಟಿ), ಸಂಸ್ಕೃತ.
  • 15-06-2024 ಶನಿವಾರ: ತೃತೀಯ ಭಾಷೆ – ಹಿಂದಿ (ಎನ್‌ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • 18-06-2024 ಮಂಗಳವಾರ: ಕೋರ್ ಸಬ್ಜೆಕ್ಟ್‌ -ಗಣಿತ, ಸಮಾಜ ಶಾಸ್ತ್ರ
  • 19-06-2024 ಬುಧವಾರ: ಅರ್ಥ ಶಾಸ್ತ್ರ
  • 20-06-2024 ಗುರುವಾರ: ಕೋರ್ ಸಬ್ಜೆಕ್ಟ್- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ.
  • 21-06-2024 ಶುಕ್ರವಾರ– ದ್ವಿತೀಯ ಭಾಷೆ – ಇಂಗ್ಲಿಷ್, ಕನ್ನಡ
  • 22-06-2024 ಶನಿವಾರ – ಕೋರ್ ಸಬ್ಜೆಕ್ಟ್- ಸಮಾಜ ವಿಜ್ಞಾನ

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

SSLC Exam 2024

ಬೆಂಗಳೂರು: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ (SSLC 2024 Exam 2) ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿ ರಾಜ್ಯ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಮುಂದೂಡಲಾಗಿದ್ದು, ಮೇ 29ರಿಂದ ಜೂ.6ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳು ನಡೆಯಲಿವೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ನಿರ್ದೇಶಕರು (ಪ್ರೌಢ ಶಿಕ್ಷಣ) ಆದೇಶ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ವರೆಗೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading
Advertisement
Constables
ದೇಶ18 mins ago

Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Rohit Sharma
ಕ್ರೀಡೆ25 mins ago

Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

Karnataka Rain
ಮಳೆ42 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

MS Dhoni
ಕ್ರೀಡೆ46 mins ago

M S Dhoni: ಫ್ರಾನ್ಸ್ ಮೂಲದ ಕಾರು ಕಂಪನಿಯ ಬ್ರಾಂಡ್​ ಅಂಬಾಸಿಡರ್ ಆಗಿ ನೇಮಕಗೊಂಡ ಲೆಜೆಂಡ್​ ಧೋನಿ

Karnataka Council Election
ಕರ್ನಾಟಕ60 mins ago

ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Krishna Water Dispute
ಕರ್ನಾಟಕ1 hour ago

Krishna Water Dispute: ಕೃಷ್ಣಾ ನೀರಿನ ವಿಚಾರ ಮತ್ತೆ ಮಹಾ ಕ್ಯಾತೆ; ರಾಜ್ಯಕ್ಕೆ ಹರಿದು ಬರ್ತಿದ್ದ ನೀರು ತಡೆ ಹಿಡಿದ ಮಹಾರಾಷ್ಟ್ರ!

Latest1 hour ago

Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

Actor Darshan fans against forest officials Construction of Arjuna tomb
ಸ್ಯಾಂಡಲ್ ವುಡ್1 hour ago

Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Mango Nail Art
ಫ್ಯಾಷನ್1 hour ago

Mango Nail Art: ಸಮ್ಮರ್‌ ಸೀಸನ್‌ನಲ್ಲಿ ಬಂತು ಮ್ಯಾಂಗೋ ನೇಲ್‌ ಆರ್ಟ್!

Viral News
ವೈರಲ್ ನ್ಯೂಸ್1 hour ago

Viral News: ಕಂಪನಿಯಲ್ಲಿ 1 ವರ್ಷ ವೇತನ ಸಹಿತ ರಜೆ ಪಡೆದ ಉದ್ಯೋಗಿ; ಈ ಲಕ್‌ ನಿಮ್ಮದಾಗಬೇಕೆ? ಹೀಗೆ ಮಾಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ42 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌