Site icon Vistara News

Road Accident: ರಾಜಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋದ ಬೈಕ್‌ ಸವಾರ

road accident bike

ಬೆಂಗಳೂರು: ವೇಗವಾಗಿ ಬೈಕ್‌ ಚಲಾಯಿಸಿದ (Bike Rider) ಸವಾರರೊಬ್ಬರು ರಾಜಕಾಲುವೆ (Rajakaluve) ಪಾಲಾದ ಘಟನೆ (Road Accident) ಕೆಂಗೇರಿಯಲ್ಲಿ (Kengeri) ನಡೆದಿದೆ. ಮೋರಿಗೆ ಬಿದ್ದು ನಾಪತ್ತೆಯಾಗಿರುವ ಬೈಕ್ ಸವಾರನನ್ನು ಬ್ಯಾಟರಾಯನಪುರದ ಹೇಮಂತ ಕುಮಾರ್ (27) ಎಂದು ಗುರುತಿಸಲಾಗಿದೆ.

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ರಾತ್ರಿ ಸುಮಾರು 10:30ಕ್ಕೆ ಈ ದುರ್ಘಟನೆ ನಡೆದಿದೆ. ಜ್ಞಾನ ಭಾರತಿ ಮೆಟ್ರೋ ಸ್ಟೆಷನ್ ಬಳಿ ವೇಗವಾಗಿ ಬೈಕ್‌ ಚಲಾಯಿಸಿದ್ದರಿಂದ, ಬೈಕ್‌ ಡಿವೈಡರ್‌ಗೆ ಗುದ್ದಿದ ಪರಿಣಾಮ ಸವಾರ ಚಿಮ್ಮಿ ರಾಜಕಾಲುವೆ ಒಳಗೆ ಬಿದ್ದಿದ್ದಾರೆ. ಸಣ್ಣದಾಗಿ ಮಳೆ ಬರುತ್ತಿದ್ದುದರಿಂದ ಡಿವೈಡರ್‌ ಗುರುತಿಸಲು ಸಾಧ್ಯವಾಗಿರಲಿಕ್ಕಿಲ್ಲ.

ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿಯನ್ನು ಕರೆಸಿ ಕಾರ್ಯಾಚರಣೆ ನಡೆಸಲಾಯಿತಾದರೂ, ಸವಾರನ ಪತ್ತೆಯಾಗಲಿಲ್ಲ. ರಾಜಕಾಲುವೆಯಲ್ಲಿ ಸುಮಾರು 4 ಅಡಿ ನೀರು ತುಂಬಿದ್ದು, ಈ ನೀರಿನಲ್ಲಿ ವ್ಯಕ್ತಿ ಕೊಚ್ಚಿ ಹೋಗಲು ಸಾಧ್ಯವೇ ಎಂಬ ಅನುಮಾನವೂ ಮೂಡಿದೆ. ಕಾರ್ಯಾಚರಣೆ ನೋಡಲು ಜನ ನಿಂತ ಪರಿಣಾಮ ರಾತ್ರಿ ಮೈಸೂರು ರೋಡ್‌ನಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ರಾತ್ರಿ ಶೋಧ ಸ್ಥಗಿತಗೊಂಡಿದ್ದು, ಬೆಳಗ್ಗೆ ಮತ್ತೆ ಪುನರಾರಂಭಗೊಂಡಿದೆ.

ಪ್ರೀತಿಸುವ ನಾಟಕವಾಡಿ ಕೈಕೊಟ್ಟ ಯುವಕನಿಗೆ ಚಳಿ ಬಿಡಿಸಿದ ಗರ್ಭಿಣಿ

ಚಿಕ್ಕಬಳ್ಳಾಪುರ: ಪ್ರಿಯಕರನೊಬ್ಬ ಪ್ರೀತಿಸುವ ನಾಟಕವಾಡಿ ಏಳು ತಿಂಗಳ ಗರ್ಭಿಣಿ ಮಾಡಿ ಕೈಕೊಟ್ಟಿರುವ (Lovers Fighting) ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿ ನಡೆದಿದೆ. ನಡುರಸ್ತೆಯಲ್ಲೇ ಪ್ರೇಮಿಗಳು ರಂಪಾಟ ನಡೆಸಿದ್ದು, ಬಳಿಕ ಪರಿಸ್ಥಿತಿ ಹೊಡೆದಾಟ ಬಡೆದಾಟಕ್ಕೂ (Cheating Case) ಹೋಗಿದೆ. ಬಾಗೇಪಲ್ಲಿ ತಾಲೂಕಿನ ಮಲ್ಲಸಂದ್ರ ಗ್ರಾಮದ ನಿವಾಸಿಗಳಾದ ಸೂರ್ಯಪ್ರಕಾಶ್‌, ಗಗನ ಎಂಬುವವರ ರಂಪಾಟವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಸೂರ್ಯಪ್ರಕಾಶ ಹಾಗೂ ಗಗನ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಗಗನ ಯಾವಾಗ ಮದುವೆ ವಿಷಯ ಪ್ರಸ್ತಾಪ ಮಾಡಿದ್ದಳೋ ಆಗ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದ. ಸೂರ್ಯಪ್ರಕಾಶ್ ಮದುವೆಯನ್ನು ನಿರಾಕರಿಸಿದಾಗ ಆತನ ವಿರುದ್ಧ ಗಗನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ದೂರು ದಾಖಲಾಗುತ್ತಿದ್ದಂತೆ ಸೂರ್ಯ ಪ್ರಕಾಶ್‌ ಪೋಷಕರು ಮದುವೆ ಮಾಡಿಸುವುದಾಗಿ ನಂಬಿಸಿ ಬೇಲ್ ಪೇಪರ್ ಮೇಲೆ ಸಹಿ ಮಾಡಿಸಿಕೊಂಡಿದ್ದರು. ಬೇಲ್ ಪಡೆದ ಬಳಿಕ ಪ್ರಿಯಕರನ ಪೋಷಕರು ಉಲ್ಟಾ ಹೊಡೆದಿದ್ದರು. ಇದರಿಂದ ರೋಸಿ ಹೋದ ಗಗನ ಮದುವೆಯಾಗುವಂತೆ ಸೂರ್ಯನನ್ನು ನಡುಬೀದಿಯಲ್ಲಿ ನಿಲ್ಲಿಸಿದ್ದಳು. ಪ್ರೇಮಿಗಳ ನಡುವಿನ ಮಾತಿನ ಚಕಮಕಿ ಹಾಗೂ ಪರಸ್ಪರ ಹೊಡೆದಾಟ ಬಡೆದಾಟವನ್ನು ಸ್ಥಳೀಯರು ವಿಡಿಯೊ ಮಾಡಿಕೊಂಡಿದ್ದರು.

ಠಾಣೆ ಮೆಟ್ಟಿಲೇರಿದ್ದ ಯುವತಿ

ಪ್ರೀತಿ ಹೆಸರಲ್ಲಿ ತನ್ನನ್ನು ಗರ್ಭಿಣಿ (Pregnant) ಮಾಡಿ ವಂಚಿಸಿ (Fraud Case) ಪ್ರಿಯಕರ ಪರಾರಿಯಾಗಿದ್ದಾನೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಗಗನ ಪೊಲೀಸರಿಗೆ ದೂರು ನೀಡಿದ್ದಳು. ಇದೀಗ ಆಕೆ ಗರ್ಭಿಣಿ ಆಗಿದ್ದು, ಪ್ರಿಯಕರನನ್ನು ಹುಡುಕಿ ಕೊಡುವಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಕಾಲೇಜಿನಲ್ಲಿ ಓದುವಾಗಲೇ ಈ ಜೋಡಿ ಪರಸ್ಪರ ಪ್ರೀತಿಸಿದ್ದರು. ತನ್ನನ್ನು ವಿವಾಹ ಆಗುವುದಾಗಿ ನಂಬಿಸಿ ತನ್ನನ್ನು ಬಳಸಿಕೊಂಡಿದ್ದು, ಇದೀಗ ತಾನು ಗರ್ಭಿಣಿಯಾಗಿದ್ದೇನೆ. ಆತನನ್ನು ಹುಡುಕಿಕೊಡಿ ಎಂದು ಗಗನ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನೂ ದಾಖಲಿಸಿದ್ದಳು. ಆದರೆ ಹೀಗೆ ಪೊಲೀಸರಿಗೆ ಲಾಕ್‌ ಆಗಿದ್ದ ಸೂರ್ಯ ಮದುವೆ ಆಗುವುದಾಗಿ ಹೇಳಿ ಮತ್ತೆ ಕೈಕೊಟ್ಟಿದ್ದಾನೆ.

ಇದನ್ನೂ ಓದಿ: Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

Exit mobile version