Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ - Vistara News

ಬೆಂಗಳೂರು

Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

Road Accident : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸವಾರ ಮೃತಪಟ್ಟರೆ, ಶಿವಮೊಗ್ಗದಲ್ಲಿ ವೃದ್ಧೆಯೊಬ್ಬರು ವಿದ್ಯುತ್‌ ಪ್ರವಹಿಸಿ ಸ್ಥಳದಲ್ಲೇ ಜೀವ ಬಿಟ್ಟಿದ್ದಾರೆ.

VISTARANEWS.COM


on

Bike rider in deadly accident Elderly woman dies of electric shock
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ (Road Accident) ಬೈಕ್‌ ಸವಾರ ಸ್ಪಾಟ್‌ ಡೆತ್‌ ಆಗಿದ್ದಾನೆ. ಬೆಂಗಳೂರಿನ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ನಲ್ಲೂರು ಹಳ್ಳಿ ಮುಖ್ಯರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೂರು ದಿನದ ಹಿಂದೆ ನಡೆದ ಅಪಘಾತ ತಡವಾಗಿ ಬೆಳಕಿಗೆ ಬಂದಿದೆ.

ನಲ್ಲೂರು ಹಳ್ಳಿಯ ನಿವಾಸಿಯಾಗಿದ್ದ 19 ವರ್ಷದ ಯುವಕ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಸ್ಕೂಟರ್‌ನಲ್ಲಿ ವೇಗವಾಗಿ ಬರುತ್ತಿದ್ದ ಯುವಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಗುದ್ದಿದ್ದಾನೆ. ಬಳಿಕ ಕಂಟ್ರೊಲ್ ಕಳೆದುಕೊಂಡ ಸವಾರ ವಾಟರ್ ಟ್ಯಾಂಕರ್ ಚಕ್ರಕ್ಕೆ ಸಿಲುಕಿದ್ದಾನೆ.

ಟ್ಯಾಂಕರ್ ಚಕ್ರ ಹರಿದು ಗಂಭೀರ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಸ್ಥಳೀಯರು ಸೇರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾನೆ. ಘಟನೆ ಸಂಬಂಧ ವೈಟ್ ಫೀಲ್ಡ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

ವಿದ್ಯುತ್‌ ಪ್ರವಹಿಸಿ ವೃದ್ಧೆ ಸಾವು

ಶಿವಮೊಗ್ಗ : ವಿದ್ಯುತ್ ತಗುಲಿ ವೃದ್ಧೆ ದಾರುಣವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನಪೇಟೆಯ ಮಲ್ಲಾಪುರದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ದೈವಿ. ಭಾನುವಾರ ಬೆಳಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಒದ್ದಾಡಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ರಿಪ್ಪನಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Bike rider in deadly accident Elderly woman dies of electric shock
Bike rider in deadly accident Elderly woman dies of electric shock

ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಲಾರಿ!

ದಾವಣಗೆರೆಯ ಕುರ್ಕಿ ಗ್ರಾಮದ ಮನೆಯೊಂದರ ಒಳಗೆಯೇ ಲಾರಿ ನುಗ್ಗಿದೆ. ಮಧ್ಯರಾತ್ರಿ 12 ಗಂಟೆಗೆ ಬೀರೂರು ಸಮ್ಮಸಗಿ ರಸ್ತೆಯಲ್ಲಿ ಚಲಿಸುತ್ತಿದ್ದ ಗೂಡ್ ಶೆಡ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದೆ. ಹಾಲುವರ್ತಿ ರಾಮಣ್ಣ ಹಾಗು ಜಯಪ್ಪನ ಕುಟುಂಬ ಸದಸ್ಯರು ಮನೆಯಲ್ಲಿದ್ದ ವೇಳೆ ಲಾರಿ ನುಗ್ಗಿದೆ. ಮನೆಯ ಚಾವಣಿಗೆ ತಾಗಿ ಹಠಾತ್‌ ಲಾರಿ ನಿಂತಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಂಬಾಗಿಲಿಗೆ ಲಾರಿ ಮುಖ ಮಾಡಿ ನಿಂತಿದ್ದರಿಂದ ಮನೆಯಿಂದ ಹೊರಬರಲಾಗದೇ‌ ಒಳಗಿದ್ದವರು ಪರದಾಡಿದರು. ಗ್ರಾಮಸ್ಥರ ನೆರವಿನಿಂದ ಏಣಿ ಮೂಲಕ ಹೊರಬಂದರು. ಲಾರಿ ‌ನುಗ್ಗಿದ ರಭಸಕ್ಕೆ ಮನೆ ಮುಂದೆ ಲೈಟ್ ಕಂಬಗಳು ಜಖಂಗೊಂಡಿದೆ. ರಾಜ್ಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ನಡೆಸಿದ್ದಾರೆ ಎಂದು ಗ್ರಾಮಸ್ಥರು ಪ್ರತಿಭಟ‌ನೆ ನಡೆಸಿದರು. ಸ್ಥಳಕ್ಕೆ ಹದಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಪರಿಚಿತ ವಾಹನ ಡಿಕ್ಕಿ ಸವಾರ ಸಾವು

ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈರಣ್ಣ (35) ಮೃತ ದುರ್ದೈವಿ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಮಿಡಿಗೇಶಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

Rain News : ಪಕ್ಕದ ವಿಜಯವಾಡದಲ್ಲಿ ಮಳೆಯು ಅಬ್ಬರಿಸುತ್ತಿದೆ. ಕಲಬುರಗಿ, ಯಾದಗಿರಿಯಲ್ಲೂ ಮಳೆಯಾಗುತ್ತಿದ್ದು ಅವಾಂತರವೇ ಸೃಷ್ಟಿಯಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡು, ಮನೆಯೊಳಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು.

VISTARANEWS.COM


on

By

Rain News
Koo

ಕೋಲಾರ: ಆಂಧ್ರಪ್ರದೇಶದ ವಿಜಯವಾಡದಲ್ಲಿ (Rain News) ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಗಳೆಲ್ಲ ಜಲಾವೃತಗೊಂಡಿದೆ. ವ್ಯಾಪಕ ಮಳೆಯಿಂದ ರಸ್ತೆಗಳಲ್ಲಿ ರಭಸವಾಗಿ ನೀರು ತುಂಬಿ ಹರಿಯುತ್ತಿದ್ದು, ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ. ಕೂಡಲೇ ಸ್ಥಳದಲ್ಲಿದ್ದವರು ಹಗ್ಗ ಕೊಟ್ಟು ಯುವಕನನ್ನು ಬಚವ್‌ ಮಾಡಿದ್ದಾರೆ.

ಕೆಲ ಗಂಟೆಗಳ ಕಾಲ ದ್ವಿಚಕ್ರ ವಾಹನಗಳು ರಸ್ತೆಗೆ ಬರದಂತೆ, ಜನರು ರಸ್ತೆಗಿಳಿಯದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ನಗರದ ಎಲ್ಲಾ ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಓಡಿಸದಂತೆ ಪೊಲೀಸರು ಆದೇಶಿಸಿದ್ದು, ರಾಷ್ಟ್ರೀಯ ಹೆದ್ದಾರಿಗಳಿಂದ ಸರ್ವಿಸ್ ರಸ್ತೆಗಳಲ್ಲಿ ವಾಹನಗಳು ಓಡಾಡುತ್ತಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಮೊಣಕಾಲಿನಷ್ಟು ನೀರು ನಿಂತು ಅವಾಂತರವೇ ಸೃಷ್ಟಿಯಾಗಿದೆ.

ನಗರ ಪ್ರವೇಶಿಸುವ ಎಲ್ಲ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಪೂರ್ವಾನುಮತಿ ಇಲ್ಲದೆ ನಗರದೊಳಗೆ ಬೆಂಗಾವಲು ವಾಹನಗಳನ್ನು ಬಿಡದಂತೆ ಸೂಚನೆ ನೀಡಲಾಗಿದೆ. ಮೊಘಲ್ ರಾಜ್ ಪುರಂನಲ್ಲಿ ಬಂಡೆಗಳು ಮುರಿದು ಬಿದ್ದಿವೆ. ಪ್ರಮುಖ ಬೀದಿಗಳಲ್ಲಿ ಅಗ್ನಿಶಾಮಕ ವಾಹನಗಳ ಮೂಲಕ ನೀರು ತೆಗೆಯುವ ಪ್ರಯತ್ನ ಮಾಡುತ್ತಿದೆ. ಹಳೇ ಪೇಟೆಯಲ್ಲಿನ ಹೊರಹರಿವಿನ ಚರಂಡಿ ತುಂಬಿ ಹರಿಯುತ್ತಿರುವುದರಿಂದ ಮನೆಗಳಿಗೆ ನೀರು ನುಗ್ಗಿದೆ. ನಿಡಮನೂರಿನಿಂದ ಟ್ಯಾಂಕ್ಸಾಳದವರೆಗಿನ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಮುಳುಗಡೆಯಾಗಿದೆ.

ಇದನ್ನೂ ಓದಿ: Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

ಕಲಬುರಗಿಯಲ್ಲಿ ಮಳೆ ಅಬ್ಬರಕ್ಕೆ ಜನರು ಕಂಗಾಲು

ಇತ್ತ ಕಲಬುರಗಿಯಲ್ಲಿ ರಾತ್ರಿಯಿಡಿ ಸುರಿದ ಧಾರಾಕರ ಮಳೆಗೆ ಸೇಡಂ ತಾಲೂಕಿನ ಹೊಸಳ್ಳಿ ಗ್ರಾಮ ಸಂಪರ್ಕ ಕಡಿತಗೊಂಡಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಹಲವು ಭಾಗದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಪಿಡಿಎ ಕಾಲೇಜು ಬಳಿ ಇರುವ 10ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿತ್ತು.

ಚಿಂಚೊಳ್ಳಿ ತಾಲೂಕಿನಾದ್ಯಂತವು ವರ್ಷಧಾರೆಯಿಂದಾಗಿ ಚಂದ್ರಂಪಳ್ಳಿ ಜಲಾಶಯ ತುಂಬಿ ಹರಿಯುತ್ತಿದೆ. ಚಂದ್ರಂಪಳ್ಳಿ ಜಲಾಶಯದಿಂದ ನೀರು ಬಿಡುಗಡೆಯಿಂದಾಗಿ ಮಿರಿಯಾಣ ಹಾಗೂ ತೆಲಂಗಾಣದ ತಾಂಡೂರು ರಸ್ತೆ ಜಲಾವೃತಗೊಂಡು, ಸಂಪರ್ಕ ಕಡಿತಗೊಂಡಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗಾವ್ ಗ್ರಾಮಕ್ಕೆ ಜಲದಿಗ್ಬಂಧನ ಹಾಕಲಾಗಿದೆ.

ಮಳೆಯ ಆರ್ಭಟಕ್ಕೆ ಹಲವು ಹಳ್ಳಕೊಳ್ಳಗಳು ಭರ್ತಿಯಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ‌ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಇರುವ ಚಿಕ್ಕನಿಂಗದಳ್ಳಿ ಗ್ರಾಮದ ಕೆರೆಭರ್ತಿಯಾಗಿದೆ. ಕುಂಚಾವರಂ ವನ್ಯಜೀವಿ ಧಾಮದ ಕೆರೆ ತುಂಬಿ ಹರಿಯುತ್ತಿದೆ. ಇನ್ನು ತುಂಬಿ ಹರಿಯುತ್ತಿರುವ ಕಾಗಿಣ ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿ ಪ್ರಮಾಣ ಹೆಚ್ಚುತ್ತಿದೆ. ತುಂಬಿ ಹರಿಯುತ್ತಿರುವ ನದಿ ದಡದಲ್ಲೆ ಚಾಲಕರು ಲಾರಿ ತೊಳೆಯುತ್ತಿರುವ ದೃಶ್ಯ ಕಂಡು ಬಂತು. ಮುಂಜಾಗ್ರತಾ ಕ್ರಮವಾಗಿ ಸೇತುವೆ ಬಳಿ ಪೋಲಿಸ್ ಭದ್ರತೆ ವಹಿಸಲಾಗಿದೆ.

ಕಲಬುರಗಿ ಸುರಿಯುತ್ತಿರುವ ಭಾರಿ ಮಳೆಗೆ ಬೋಗಾವತಿ ನದಿ ತುಂಬಿ ಹರಿದಿದೆ. ಪರಿಣಾಮ ಚಿಂಚೋಳಿ ತಾಲ್ಲೂಕಿನ ಪೋಲಕಪಳ್ಳಿ, ಗಂಗನಪಳ್ಳಿ ಗ್ರಾಮದ ಸೇತುವೆ ಜಲಾವೃತವಾಗಿದೆ. ಸೇತುವೆ ಜಲಾವೃತ ಪರಿಣಾಮ ಪೋಲಕಪಳ್ಳಿ, ಗಂಗನಪಳ್ಳಿ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ ಬೋಗಾವತಿ ನದಿ ನೀರಿನ ಅರ್ಭಟಕ್ಕೆ ಗಂಗನಪಳ್ಳಿ ಗ್ರಾಮದ ಗಂಗಾ ಮಾತೆ ದೇವಿಯ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಚಿಂಚೋಳಿ ತಾಲ್ಲೂಕಿನ ತಾಜಲಾಪೂರ, ಗಾರಂಪಳ್ಳಿ, ಗರಗಪಳ್ಳಿ, ಇರಕಪಳ್ಳಿ ಸೇತುವೆಗಳು ಜಲಾವೃತ. ವಿವಿಧ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

ಯಾದಗಿರಿಯಲ್ಲಿ ಮನೆಯೊಳಗೆ ನುಗ್ಗಿದ ನೀರು

ಯಾದಗಿರಿ ಜಿಲ್ಲೆಯಲ್ಲಿ ನಿನ್ನೆ ಶನಿವಾರ ರಾತ್ರಿಯಿಂದ ಸುರಿದ ವರುಣನ ಅಬ್ಬರಕ್ಕೆ ಮನೆಯೊಳಗೆ ನೀರು ನುಗ್ಗಿದೆ. ನೀರು ಹೊರಹಾಕಲು ದೋರನಹಳ್ಳಿ ಗ್ರಾಮದ ಜನರು ಸಂಕಷ್ಟ ಎದುರಿಸಿದರು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಮಾಪಮ್ಮಳ ಮನೆಯಲ್ಲಿ ನವಜಾತ ಶಿಶುವೊಂದಿಗೆ ಬಾಣಂತಿ ಪರದಾಡಿದರು. ಅದೆ ರೀತಿ ಪಗಲಾಪುರನ ತಾತ್ಕಾಲಿಕ ಸೇತುವೆ ಜಲಾವೃತವಾಗಿದೆ. ಸೇತುವೆ ಹಾಳಾದ ಹಿನ್ನಲೆ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು. ಮಳೆ ಅಬ್ಬರದಿಂದ ತಾತ್ಕಾಲಿಕ ಪಗಲಾಪುರ ಸೇತುವೆಯೂ ಜಲಾವೃತ ಸಂಪರ್ಕ ಕಡಿತಗೊಂಡಿದೆ. ಯಾದಗಿರಿ ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆ ಅಬ್ಬರಕ್ಕೆ ವಂಕಸಂಬ್ರದ ರಸ್ತೆ ಜಲಾವೃತಗೊಂಡಿದೆ. ವಂಕಸಂಬ್ರದಿಂದ ತೋರಣತಿಪ್ಪಗೆ ಸಂಪರ್ಕದ ರಸ್ತೆಯಲ್ಲಿ ಉಕ್ಕಿ ಹರಿಯುವ ನೀರಿನಲ್ಲೇ ಜನರು ಓಡಾಡುವಂತಾಗಿದೆ. ಮತ್ತೊಂದೆಡೆ ಮನೆ ಗೋಡೆಗಳು ಕುಸಿದ ಬಿದ್ದಿದೆ. ನಿರಂತರ ಮಳೆಯಿಂದ ಬೊರಬಂಡಾ ಗ್ರಾಮದ ಎರಡು ಮನೆಗೋಡೆಗಳು ಕುಸಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಜೈಲು ಸಿಬ್ಬಂದಿ ಬ್ಯಾರಕ್‌ಗೆ ಹೋಗಿ ಅಂದರೆ ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ದರಂತೆ.

VISTARANEWS.COM


on

By

Do you know when Darshan got royalty in Central Jail
Koo

ಬೆಂಗಳೂರು: ಸೆಂಟ್ರಲ್‌ ಜೈಲಿನಲ್ಲಿ ನಟ ದರ್ಶನ್‌ (Actor Darshan) ಫೋಟೊ ವೈರಲ್‌ ಆಗಿದ್ದೆ ತಡ ಈಗ ಒಂದೊಂದೆ ವಿಚಾರಗಳು ಹೊರಬರುತ್ತಿವೆ. ಇಷ್ಟಕ್ಕೂ ಜೈಲು ಸೇರಿದ್ದ ನಟ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಜೈಲುಪಾಲಾದ ಮೂರೇ ದಿನ ಸಾಮಾನ್ಯ ಕೈದಿಯಂತಿದ್ದ ದರ್ಶನ್, ಬಳಿಕ ನಾಲ್ಕನೇ ದಿನದಿಂದ ರಾಜಾತಥ್ಯ ಸಿಗುತಿತ್ತಂತೆ. ಇನ್ನು ಜೈಲು ಸಿಬ್ಬಂದಿ ನಿಮ್ಮ ಬ್ಯಾರಕ್‌ಗೆ ತೆರಳಿ ಎಂದು ಸೂಚಿಸುತ್ತಿದ್ದರಂತೆ. ಈ ವೇಳೆ ಫಿಲ್ಮಿ ಸ್ಟೈಲ್‌ನಲ್ಲೇ ದರ್ಶನ್‌ ಆವಾಜ್ ಹಾಕಿ ‘ಬಿಸ್ಕತ್ ಹಾಕಿಲ್ವಾ’ ಸುಮ್ಮನಿರು ಅಂತಿದ್ದರಂತೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಒಂದೊಂದೆ ಸತ್ಯ ಹೊರಗೆ ಬರುತ್ತಿದೆ.

ಬದಲಾದ ಬೆಂಗಳೂರು ಸೆಂಟ್ರೆಲ್‌ ಜೈಲ್‌ ಚಿತ್ರಣ

ಬೆಂಗಳೂರು: ದರ್ಶನ್ ಸಿಗರೇಟ್‌ ಸೇದುವ ಫೋಟೊ ವೈರಲ್ ಆದ ಬಳಿಕ ಪರಪ್ಪನ ಅಗ್ರಹಾರ ಜೈಲಿನ ಚಿತ್ರಣವೇ ಬದಲಾಗಿದೆ. ಒಂದೆಡೆ ಜೈಲು ಸಿಬ್ಬಂದಿ ಪ್ರತಿಭಟಿಸುತ್ತಿದ್ದರೆ, ಮತ್ತೊಂದೆಡೆ ಕೈದಿಗಳಿಂದಲೂ ಧರಣಿ ನಡೆದಿದೆ ಎನ್ನಲಾಗಿದೆ. ನಮಗೆ ಬೀಡಿ, ಸಿಗರೇಟ್ ಸಿಗುತ್ತಿಲ್ಲ. ನಮ್ಗೆ ಇರೋದಕ್ಕೆ ಆಗುತ್ತಿಲ್ಲ ಎಂದು ನಿನ್ನೆ ಶನಿವಾರ ಪ್ರತಿಭಟಿಸಿದ್ದಾರೆ. ಫೋಟೊ ವೈರಲ್ ಬಳಿಕ ಜೈಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಬೀಡಿ, ಸಿಗರೇಟ್ ಸಂಪೂರ್ಣ ಬಂದ್ ಆಗಿದೆ.

ಇದನ್ನೂ ಓದಿ: Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

ಹಿಂಡಲಗಾ ಜೈಲಿನಲ್ಲಿ ಸಿಗರೇಟ್‌ಗಾಗಿ ಕೈದಿಗಳಿಂದಲ್ಲೂ ಡಿಮ್ಯಾಂಡ್‌

ಬೆಂಗಳೂರು ಜೈಲಲ್ಲಿ ದರ್ಶನ್ ಸಿಗರೇಟ್ ಸೇದಿದ ಎಫೆಕ್ಟ್ ಇತರ ಕೈದಿಗಳಿಂದಲೂ ಡಿಮ್ಯಾಂಡ್ ಬಂದಿದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೈದಿಗಳ ವಿಶೇಷ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆದಿದೆ. ಬೀಡಿ, ಸಿಗರೇಟ್, ತಂಬಾಕು ಕೊಡುವವರಗೆ ನಾವು ತಿಂಡಿ ತಿನ್ನಲ್ಲ ಎನ್ನುತ್ತಿದ್ದಂತೆ. ಬೆಳಗಿನ ಉಪಹಾರ ಮಾಡದೆ ಪ್ರೊಟ್ಟೆಸ್ಟ್‌ ಮಾಡುತ್ತಿದ್ದರಂತೆ. ಇದೀಗ ಈ ಬೇಡಿಕೆ ಜೈಲಧಿಕಾರಿಗಳಿಗೆ ತಲೆ ನೋವಾಗಿದೆ. ಸದ್ಯ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಜೈಲಾಧಿಕಾರಿಗಳು ಇದ್ದಾರೆ. ಬೀಡಿ ಸಿಗರೇಟ್ ನೀಡದಿದ್ದರೆ ಮಧ್ಯಾಹ್ನ ಊಟವನ್ನೂ ಮಾಡಲ್ಲ ಎಂದು ಬೆದರಿಕೆ ಹಾಕುತ್ತಿದ್ದರಂತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಳ್ಳಾರಿ

Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

Actor Darshan : ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಅಲ್ಲಿನ ವ್ಯವಸ್ಥೆ ಸರಿ ಹೋಗುತ್ತಿಲ್ವಾಂತೆ. ಹೀಗಾಗಿ ಆರೋಗ್ಯದ ನೆಪವೊಡ್ಡಿ ಬಳ್ಳಾರಿಯಿಂದ ಮತ್ತೆ ಬೆಂಗಳೂರಿಗೆ ಶಿಫ್ಟ್‌ ಆಗಲು ಯೋಚಿಸುತ್ತಿದ್ದರಂತೆ.

VISTARANEWS.COM


on

By

Actor Darshan shifted back to Bengaluru from Ballari
Koo

ಬಳ್ಳಾರಿ/ಬೆಂಗಳೂರು: ನಟ ದರ್ಶನ್‌ ಬಳ್ಳಾರಿಯಿಂದ ಮತ್ತೆ ಬೆಂಗಳೂರು ಜೈಲಿಗೆ (Actor Darshan) ಶಿಫ್ಟ್ ಆಗ್ತಾರಾ ಇಂತಹದೊಂದು ಸುದ್ದಿ ಹರಿದಾಡುತ್ತಿದೆ. ದರ್ಶನ್‌ಗೆ ಬಳ್ಳಾರಿಯಲ್ಲಿ ‌ನಿಜ ಜೈಲಿನ ದರ್ಶನವಾಗುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ಆರಾಮಾಗಿದ್ದ ದರ್ಶನ್‌ಗೆ ಬಳ್ಳಾರಿಯಲ್ಲಿ ಇರಲಾಗುತ್ತಿಲ್ವಂತೆ. ನಿನ್ನೆ ಪತ್ನಿ ಭೇಟಿಯ ವೇಳೆ ಬಳ್ಳಾರಿ ಜೈಲಿನ ಸಂಕಷ್ಟ ಹೇಳಿಕೊಂಡರಂತೆ. ಬೆನ್ನು ನೋವು, ಕೈ ನೋವು ಇರುವುದರಿಂದ ಇಂಡಿಯನ್ ಟಾಯ್ಲೆಟ್ ಸಮಸ್ಯೆ ಆಗುತ್ತಿದೆ. ಒಂದು ಕಡೆಗೆ ನೋವು, ಜೈಲ್‌ನ ವ್ಯವಸ್ಥೆ ನನಗೆ ಸರಿ ಹೋಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಆರೋಗ್ಯ, ತಾಂತ್ರಿಕ ತೊಂದರೆ ನೆಪವೊಡ್ಡಿ ವಕೀಲರ ಮೂಲಕ ಬೆಂಗಳೂರಿಗೆ ಶಿಫ್ಟ್ ಆಗಲು ಪ್ಲ್ಯಾನ್‌ ನಡೆದಿದೆ ಎನ್ನಲಾಗಿದೆ. ವಕೀಲರ ಮೂಲಕ ಕೋರ್ಟ್‌ಗೆ ಮನವಿ ಸಲ್ಲಿಸಲು ತಯಾರಿ ನಡೆಸಿದ್ದಾರೆ. ಈ ಹಿಂದೆ ಕೋರ್ಟ್‌ನಲ್ಲಿ ಮನೆಯೂಟ ಕೇಳಿದಾಗ ನಿರಾಕರಣೆ ಮಾಡಿತ್ತು. ಇದೇ ವಾರದಲ್ಲಿ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗುವ ಸಾಧ್ಯತೆ ಇದೆ. ಇದರ ಮಧ್ಯೆ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲು ಕೋರ್ಟ್‌ ಒಪ್ಪಿಗೆ ನೀಡುತ್ತಾ? ಎಂಬ ಪ್ರಶ್ನೆ ಉದ್ಭವಿಸಿದೆ.

ಬೆಂಗಳೂರಿಗೆ ಶಿಫ್ಟ್ ಆಗಬೇಕು ಅಂದರೆ ದರ್ಶನ್‌ಗೆ ಮೇಜರ್ ಸಮಸ್ಯೆ ಇರಬೇಕು. ಅದರಲ್ಲೂ ಹಾರ್ಟ್ ಸಮಸ್ಯೆ, ಕಿಡ್ನಿ ಸಂಬಂಧಿಸಿದ ಗಂಭೀರ ಸಮಸ್ಯೆ ಇರಬೇಕು. ಆಗ ಮಾತ್ರ ಯಾವುದೇ ಕೈದಿಯನ್ನು ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆ ಇರುತ್ತೆ. ಆದರೆ ದರ್ಶನ್ ಅವರಿಗೆ ಸ್ಪೈನಲ್ ಕಾರ್ಡ್, ಎಡಗೈ ಮೂಳೆ ನೋವು ಮಾತ್ರ ಇದೆ. ಇದು ಜೈಲ್ ರೂಲ್ಸ್ ಪ್ರಕಾರ ಮೇಜರ್ ಸಮಸ್ಯೆ ಅಲ್ಲ ಎನ್ನಲಾಗುತ್ತಿದೆ.

ಚಾರ್ಜ್ ಶೀಟ್ ಸಲ್ಲಿಕೆ ಆದ ಬಳಿಕ ಬೇಲ್‌ಗೆ ಅರ್ಜಿ ಹಾಕುವ ಸಾಧ್ಯತೆ ಇದೆ. ಬೇಲ್‌ಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದರಿಂದ ಜೈಲ್ ಟು ಜೈಲ್ ಶಿಫ್ಟ್ ಮಾಡುವುದು ಅನುಮಾನವಿದೆ. ದರ್ಶನ್‌ಗೆ ಈಗಿರುವ ಸಮಸ್ಯೆಗೆ ಚಿಕಿತ್ಸೆ ನೀಡಲು ಜೈಲಲ್ಲೇ ನುರಿತ ವೈದ್ಯರಿದ್ದಾರೆ. ಕಿಡ್ನಿ ಸಮಸ್ಯೆ, ಹಾರ್ಟ್ ಸಮಸ್ಯೆ ಇದ್ದರೆ ಜೈಲಿನಲ್ಲೇ ಟ್ರೀಟ್ಮೆಂಟ್‌ಗೆ ಬಳ್ಳಾರಿಯಲ್ಲೇ ಖಾಸಗಿ ವೈದ್ಯರಿದ್ದಾರೆ. ಬಳ್ಳಾರಿಯಲ್ಲೂ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳು ಇದ್ದಾವೆ ಅಲ್ಲಿ ಚಿಕಿತ್ಸೆ ನೀಡೋದಕ್ಕೆ ಅವಕಾಶ ಇದೆ. ಗಂಭೀರ ಸಮಸ್ಯೆಗೆ ಬಳ್ಳಾರಿಯಲ್ಲಿನ ಚಿಕಿತ್ಸೆ ಕೊಡಲು ಆಗದೇ ಹೋದರೆ ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.

ಪತ್ನಿ ಭೇಟಿ ನಂತರ ಕಣ್ತುಂಬ ನಿದ್ದೆ ಮಾಡಿದ ದಾಸ

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಮೂರನೇ ರಾತ್ರಿ ಕಳೆದಿರುವ ಕೊಲೆ ಆರೋಪಿ ದರ್ಶನ್ ಭಾನುವಾರ ಬೆಳಗ್ಗೆ ಎದ್ದು ವಾಕಿಂಗ್ ಮಾಡಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಿಗೆ ಬಂದಾಗಿನಿಂದ ಇದೇ ಮೊದಲ ಬಾರಿಗೆ ಬೆಳಗ್ಗೆ ವಾಕಿಂಗ್ ಮಾಡಿದ್ದು, ಎರಡು ರಾತ್ರಿ ನಿದ್ದೆ ಇಲ್ಲದೇ ಒದ್ದಾಡಿದ್ದರು. ನಿನ್ನೆ ಶನಿವಾರ ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿ ಹೋದ ಬೆನ್ನಲ್ಲೇ ನಿರಾಳರಾಗಿರುವ ದರ್ಶನ್ ರಾತ್ರಿ ಚೆನ್ನಾಗಿ ನಿದ್ದೆ ಮಾಡಿದ್ದರಂತೆ. ಪತ್ನಿ ವಿಜಯಲಕ್ಷ್ಮಿ ಮೈಸೂರು ಚಾಮುಂಡೇಶ್ವರಿ ದೇವಿಯ ಕುಂಕುಮ, ಅಕ್ಷತೆ, ಪ್ರಸಾದ ತಂದು ಕೊಟ್ಟಿದ್ದರು. ಸುದೀರ್ಘ ಅರ್ಧ ಗಂಟೆ ದರ್ಶನ್ ಜತೆ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದರು. ಪತ್ನಿ ಬಂದು ಹೋದ ಬೆನ್ನಲ್ಲೇ ಇಂದು ಫುಲ್ ಆಕ್ಟೀವ್ ಆಗಿದ್ದಾರೆ.

ಇದನ್ನೂ ಓದಿ: Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ?

ಸೆಂಟ್ರಲ್‌ ಜೈಲಿನಲ್ಲಿ ನಟ ದರ್ಶನ್‌ ಫೋಟೊ ವೈರಲ್‌ ಆಗಿದ್ದೆ ತಡ ಈಗ ಒಂದೊಂದೆ ವಿಚಾರಗಳು ಹೊರಬರುತ್ತಿವೆ. ಇಷ್ಟಕ್ಕೂ ಜೈಲು ಸೇರಿದ್ದ ನಟ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಜೈಲುಪಾಲಾದ ಮೂರೇ ದಿನ ಸಾಮಾನ್ಯ ಕೈದಿಯಂತಿದ್ದ ದರ್ಶನ್, ಬಳಿಕ ನಾಲ್ಕನೇ ದಿನದಿಂದ ರಾಜಾತಥ್ಯ ಸಿಗುತಿತ್ತಂತೆ. ಇನ್ನು ಜೈಲು ಸಿಬ್ಬಂದಿ ನಿಮ್ಮ ಬ್ಯಾರಕ್‌ಗೆ ತೆರಳಿ ಎಂದು ಸೂಚಿಸುತ್ತಿದ್ದರಂತೆ. ಈ ವೇಳೆ ಫಿಲ್ಮಿ ಸ್ಟೈಲ್‌ನಲ್ಲೇ ದರ್ಶನ್‌ ಆವಾಜ್ ಹಾಕಿ ‘ಬಿಸ್ಕತ್ ಹಾಕಿಲ್ವಾ’ ಸುಮ್ಮನಿರು ಅಂತಿದ್ದರಂತೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಒಂದೊಂದೆ ಸತ್ಯ ಹೊರಗೆ ಬರುತ್ತಿದೆ.

ಬದಲಾದ ಬೆಂಗಳೂರು ಸೆಂಟ್ರೆಲ್‌ ಜೈಲ್‌ ಚಿತ್ರಣ

ಬೆಂಗಳೂರು: ದರ್ಶನ್ ಸಿಗರೇಟ್‌ ಸೇದುವ ಫೋಟೊ ವೈರಲ್ ಆದ ಬಳಿಕ ಪರಪ್ಪನ ಅಗ್ರಹಾರ ಜೈಲಿನ ಚಿತ್ರಣವೇ ಬದಲಾಗಿದೆ. ಒಂದೆಡೆ ಜೈಲು ಸಿಬ್ಬಂದಿ ಪ್ರತಿಭಟಿಸುತ್ತಿದ್ದರೆ, ಮತ್ತೊಂದೆಡೆ ಕೈದಿಗಳಿಂದಲೂ ಧರಣಿ ನಡೆದಿದೆ ಎನ್ನಲಾಗಿದೆ. ನಮಗೆ ಬೀಡಿ, ಸಿಗರೇಟ್ ಸಿಗುತ್ತಿಲ್ಲ. ನಮ್ಗೆ ಇರೋದಕ್ಕೆ ಆಗುತ್ತಿಲ್ಲ ಎಂದು ನಿನ್ನೆ ಶನಿವಾರ ಪ್ರತಿಭಟಿಸಿದ್ದಾರೆ. ಫೋಟೊ ವೈರಲ್ ಬಳಿಕ ಜೈಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಬೀಡಿ, ಸಿಗರೇಟ್ ಸಂಪೂರ್ಣ ಬಂದ್ ಆಗಿದೆ.

ಹಿಂಡಲಗಾ ಜೈಲಿನಲ್ಲಿ ಸಿಗರೇಟ್‌ಗಾಗಿ ಕೈದಿಗಳಿಂದಲ್ಲೂ ಡಿಮ್ಯಾಂಡ್‌

ಬೆಂಗಳೂರು ಜೈಲಲ್ಲಿ ದರ್ಶನ್ ಸಿಗರೇಟ್ ಸೇದಿದ ಎಫೆಕ್ಟ್ ಇತರ ಕೈದಿಗಳಿಂದಲೂ ಡಿಮ್ಯಾಂಡ್ ಬಂದಿದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೈದಿಗಳ ವಿಶೇಷ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆದಿದೆ. ಬೀಡಿ, ಸಿಗರೇಟ್, ತಂಬಾಕು ಕೊಡುವವರಗೆ ನಾವು ತಿಂಡಿ ತಿನ್ನಲ್ಲ ಎನ್ನುತ್ತಿದ್ದಂತೆ. ಬೆಳಗಿನ ಉಪಹಾರ ಮಾಡದೆ ಪ್ರೊಟ್ಟೆಸ್ಟ್‌ ಮಾಡುತ್ತಿದ್ದರಂತೆ. ಇದೀಗ ಈ ಬೇಡಿಕೆ ಜೈಲಧಿಕಾರಿಗಳಿಗೆ ತಲೆ ನೋವಾಗಿದೆ. ಸದ್ಯ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಜೈಲಾಧಿಕಾರಿಗಳು ಇದ್ದಾರೆ. ಬೀಡಿ ಸಿಗರೇಟ್ ನೀಡದಿದ್ದರೆ ಮಧ್ಯಾಹ್ನ ಊಟವನ್ನೂ ಮಾಡಲ್ಲ ಎಂದು ಬೆದರಿಕೆ ಹಾಕುತ್ತಿದ್ದರಂತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆ ಎಚ್ಚರಿಕೆ

Karnataka Weather Forecast : ಭಾನುವಾರ 17 ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಪ್ರತ್ಯೇಕವಾಗಿ (Heavy Rain News) ಭಾರಿ ಮಳೆಯಾಗಲಿದೆ. ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯೊಂದಿಗೆ, ಕೆಲವೆಡೆ ಚದುರಿದಂತೆ ಅತಿ ಲಘುವಾಗಿ ಮಳೆಯಾಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲೂ ವರುಣ (Karnataka Weather Forecast) ಅಬ್ಬರಿಸಲಿದ್ದಾನೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಭಾರೀ ಮಳೆಯಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಗದಗ , ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಜಿಲ್ಲೆಯಾದ್ಯಂತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ.

ಇದನ್ನೂ ಓದಿ: Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸಲಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಾಗೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ರಾಯಚೂರು ಹಾಗೂ ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಮೂರು ದಿನ ಮೀನುಗಾರರಿಗೆ ಎಚ್ಚರಿಕೆಯನ್ನು ಕೊಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rain News
ಮಳೆ37 seconds ago

Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

Bike rider in deadly accident Elderly woman dies of electric shock
ಬೆಂಗಳೂರು38 mins ago

Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

Girl commits suicide after being fed up with rumours of love
ಮಂಡ್ಯ1 hour ago

Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Do you know when Darshan got royalty in Central Jail
ಸಿನಿಮಾ2 hours ago

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor Darshan shifted back to Bengaluru from Ballari
ಬಳ್ಳಾರಿ2 hours ago

Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

police Firing
ಕಲಬುರಗಿ3 hours ago

Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

karnataka weather Forecast
ಮಳೆ9 hours ago

Karnataka Weather : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

Rishab Shetty And NTR
ಸಿನಿಮಾ17 hours ago

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

UPSC
ಪ್ರಮುಖ ಸುದ್ದಿ18 hours ago

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್24 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌