Road Accident: ಅತಿವೇಗದಿಂದ ಡಿವೈಡರ್‌ಗೆ ಗುದ್ದಿದ ಕಾರು, ಪ್ರಯಾಣಿಕ ಸಾವು - Vistara News

ಬೆಂಗಳೂರು

Road Accident: ಅತಿವೇಗದಿಂದ ಡಿವೈಡರ್‌ಗೆ ಗುದ್ದಿದ ಕಾರು, ಪ್ರಯಾಣಿಕ ಸಾವು

ಯಲಹಂಕ ಏರ್‌ಫೋರ್ಸ್ ಸ್ಟೇಷನ್ ಬಳಿ ಈ ಭೀಕರ ಅಪಘಾತ ನಡೆದಿದೆ. ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ.

VISTARANEWS.COM


on

road accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯಲಹಂಕ ಬಳಿ ಭೀಕರ ಅಪಘಾತ (road accident) ಸಂಭವಿಸಿದೆ. ಅತಿವೇಗದಿಂದ ಬಂದು ಡಿವೈಡರ್‌ಗೆ ಗುದ್ದಿದ ಪರಿಣಾಮ ಕಾರು ಛಿದ್ರಗೊಂಡಿದ್ದು, ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಪ್ರಯಾಣಿಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಯಲಹಂಕ ಏರ್‌ಫೋರ್ಸ್ ಸ್ಟೇಷನ್ ಬಳಿ ಈ ಭೀಕರ ಅಪಘಾತ ನಡೆದಿದೆ. ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. Ka 41b 9203 ನಂಬರಿನ ಕಾರು ಇದಾಗಿದ್ದು, ಚಾಲಕ ಹಾಗೂ ಪ್ರಯಾಣಿಕರ ವಿವರಗಳನ್ನು ಕಲೆಹಾಕಲಾಗುತ್ತಿದೆ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ತಪ್ಪಿದ ಭಾರಿ‌ ಅನಾಹುತ, ಮೂವರು ಪಾರು

ಬೆಂಗಳೂರು: ಬೆಂಗಳೂರಿನ ಚಾಲುಕ್ಯ ಸರ್ಕಲ್‌ನ ಸಿಂದಿ ಹೈಸ್ಕೂಲ್ ಬಳಿ ನಡೆದ ಕಾರು ಅಪಘಾತವೊಂದರಲ್ಲಿ ಪವಾಡಸದೃಶ ರೀತಿಯಲ್ಲಿ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೊಳಗಾಗಿದೆ. ಕಾರಿನಲ್ಲಿದ್ದ ಏರ್‌ಬ್ಯಾಗ್ ಓಪನ್ ಆಗಿದ್ದು, ಪ್ರಯಾಣಿಕರು ಗಾಯಗಳಿಲ್ಲದೆ ಪಾರಾದರು.

ಬ್ರೇಕ್‌ ಫೇಲ್‌, ತಪ್ಪಿದ ಅನಾಹುತ

ಬೆಂಗಳೂರು: ಬ್ರೇಕ್ ಫೇಲ್ಯೂರ್ ಆದ ಪರಿಣಾಮ ಕಂಟೇನರ್ ಲಾರಿಯೊಂದು ಮನೆ ಕಾಂಪೌಂಡ್‌ಗೆ ಗುದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಇಟ್ಟಮಡು ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಒಂದು ಕಾರಿಗೆ ಹಾನಿಯಾಗಿದೆ. ಬನಶಂಕರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Road Accident: ರಾ.ಹೆ-48ರಲ್ಲಿ ಸರಣಿ ಅಪಘಾತ; ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿ ನಾಲ್ವರಿಗೆ ಗಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Bangalore Rain: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ‌ಯಲ್ಲಿ ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ ಇದೆ.

VISTARANEWS.COM


on

Bangalore rain
Koo

ಬೆಂಗಳೂರು: ರಾಜಧಾನಿಯ ವಿವಿಧೆಡೆ ಶನಿವಾರ ಸಂಜೆ ಭರ್ಜರಿ ಮಳೆ (Bangalore Rain) ಸುರಿದಿದ್ದು, ಹಲವೆಡೆ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ನಗರದ ಹೊರವಲಯದ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ವೀರಸಂದ್ರ ಸಿಗ್ನಲ್ ಬಳಿ ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಯಿತು. ಇನ್ನು ನಗರದ ಕೆಲವು ಕಡೆ ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪ್ರತಿ ಬಾರಿ ಮಳೆ ಬಂದಾಗ ಹೆದ್ದಾರಿ ಕೆರೆಯಂತಾಗುತ್ತದೆ. ಮಳೆಯ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ರಸ್ತೆ ಜಲಾವೃತವಾಗುತ್ತದೆ. ಹೆದ್ದಾರಿಯಲ್ಲಿ ನಾಲ್ಕೈದು ಅಡಿಗಳಷ್ಟು ಮಳೆ ನೀರು ನಿಂತಿದ್ದರಿಂದ ಹೆದ್ದಾರಿಯ ಅವ್ಯವಸ್ಥೆಯಿಂದ ಹಲವು ವಾಹನಗಳು ಕೆಟ್ಟುನಿಂತಿವೆ. ಇನ್ನು ಜಲಾವೃತವಾದ ರಸ್ತೆಯಲ್ಲಿ ವಾಹನಗಳು ಸಂಚರಿಸಲಾಗದೆ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇನ್ನು ಸಿಲಿಕಾನ್ ಸಿಟಿಯ ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ವಿಜಯನಗರ, ಶಿವಾಜಿನಗರ, ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿ ನಗರ, ಕೋರಮಂಗಲ, ಎಂ.ಜಿ. ರಸ್ತೆ, ಕಬ್ಬನ್ ಪಾರ್ಕ್ ಸೇರಿ ನಗರದ ಹಲವೆಡೆ ಭರ್ಜರಿ ಮಳೆಯಾಗಿದೆ. ಪಾದಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಿದರು.

ಕೆಲಸ ಕಾರ್ಯ ಮುಗಿಸಿಕೊಂಡು ಮನೆಗಳಿಗೆ ತೆರಳುತ್ತಿದ್ದ ವೇಳೆ ಭಾರಿ ಮಳೆ ಬಿದ್ದಿದ್ದರಿಂದ ವಾಹನ ಸವಾರರು ಬಸ್ ನಿಲ್ದಾಣಗಳು, ಕಟ್ಟಡಗಳ ಬಳಿ ನಿಂತು ಆಶ್ರಯ ಪಡೆದರು. ಮಳೆ ನೀರಿನಿಂದ ಸಹಕಾರ ನಗರದ ಜಿ ಬ್ಲಾಕ್ ರಸ್ತೆಗಳು ಹಳ್ಳದಂತಾಗಿ ಬದಲಾಗಿದ್ದವು. ಇನ್ನು ಕೆಎಸ್ ಗಾರ್ಡನ್‌ನಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಪರದಾಡಿದರು.

ಸಂಜೆ ಸುರಿದ ಮಳೆಯಿಂದ ಯಲಚೇನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿ ಪರದಾಡಿದರು. ಮಳೆ ಬಂದರೆ ಇಲ್ಲಿನ ಜನ ಭಯದಲ್ಲೇ ದಿನ ಕಳೆಯುವ ಸ್ಥಿತಿ ಇದೆ. ಇನ್ನು ಮನೆಯ ಮುಂದೆ ಅಧಿಕಾರಿಗಳು ಗುಂಡಿ ತೆಗೆದು ಮುಚ್ಚದ ಹಿನ್ನೆಲೆಯಲ್ಲಿ ವಾಹನ ಸವಾರನೊಬ್ಬ ಬಿದ್ದು ಗಾಯಗೊಂಡಿದ್ದಾರೆ.

ಯಲಹಂಕದಲ್ಲಿ ಧರೆಗುರುಳಿದ ಮರ

ಮಳೆಯಿಂದಾಗಿ ಯಲಹಂಕ ವಲಯದಲ್ಲಿನ ಜಕ್ಕೂರು ಬಳಿ ಮರ ಧರೆಗುರುಳಿದ್ದು, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಸ್ಥಳಕ್ಕೆ ಭೇಟಿ ನೀಡಿ ಕೂಡಲೆ ಮರ ತೆರವುಗೊಳಿಸಲು ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಂದಿನ ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ‌ಯಲ್ಲಿ ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಕೇರಳ ಪ್ರವೇಶಿಸಿರುವ ಮುಂಗಾರು, ನಂತರ ಕರ್ನಾಟಕಕ್ಕೆ ಪ್ರವೇಶಿಸಲಿದೆ. ಈ ಬಾರಿ ಅವಧಿಗೂ ಮೊದಲೇ ಮುಂಗಾರು ಪ್ರವೇಶ ಮಾಡುತ್ತಿದೆ. ಕಳೆದ ವರ್ಷ ಜೂನ್ 15 ರಿಂದ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಹೀಗಾಗಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ | Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

ಇನ್ನು ರಾಜ್ಯದಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಹವಮಾನ ಇಲಾಖೆ‌ ಅಲರ್ಟ್‌ ನೀಡಿದ್ದುಮ ಬೆಂಗಳೂರಿನಲ್ಲಿ ಇಂದಿನಿಂದ ಐದು ದಿನ ಮಳೆ ಇರಲಿದೆ. ಗುಡುಗು – ಮಿಂಚು ಸಹಿತ ಬೀರುಗಾಳಿ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದೆ.

Continue Reading

ದೇಶ

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Exit Poll 2024: ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Exit Poll 2024
Koo

ಬೆಂಗಳೂರು: ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶನಿವಾರ ರಾತ್ರಿ ಮಾಧ್ಯಮಗಳು, ಎಕ್ಸಿಟ್ ಪೋಲ್ ಸಮೀಕ್ಷೆಗಳ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಗರಿಷ್ಠ 8 ಸ್ಥಾನಗಳು ಸಿಗಬಹುದು ಎಂದು ಬಹುತೇಕ ಸಮೀಕ್ಷೆಗಳು ಹೇಳಿರುವ ಹಿನ್ನೆಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ.

ಇದನ್ನೂ ಓದಿ: Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿ ನಾವ್ಯಾರು ಎಕ್ಸಿಟ್ ಪೋಲ್ ನಂಬುವುದಿಲ್ಲ ಎಂದು ಹೇಳಿದ್ದಾರೆ. ಇದು ಗ್ರೌಂಡ್ ರಿಯಾಲಿಟಿಯಿಂದ ದೂರ ಇದೆ ಎಂದೇ ನಂಬುತ್ತೇವೆ ಎಂದು ನುಡಿದಿದ್ದಾರೆ. ಸಮೀಕ್ಷೆಗಳಲ್ಲಿ ಕೇವಲ ಐದಾರು ಸೀಟುಗಳನ್ನು ಮಾತ್ರ ಕೊಟ್ಟಿದ್ದಾರೆ. ಆದರೆ, ಜೂ 4ರಂದು ವಾಸ್ತವ ಗೊತ್ತಾಗಲಿದೆ. ಫಲಿತಾಂಶದಲ್ಲಿ ಕಾಂಗ್ರೆಸ್​ ಡಬಲ್​ ಡಿಜಿಟ್ ದಾಟಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಸಮೀಕ್ಷೆ ಹೇಗಿದೆ?

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಫಲಿತಾಂಶ ಬಿಜೆಪಿಗೆ 2019ರ ಚುನಾವಣೆಯಷ್ಟು ಪೂರಕವಾಗಿಲ್ಲ (Exit Poll 2024 ) ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿವೆ. ಈ ಬಾರಿ ಕರ್ನಾಟಕದಲ್ಲಿ 18 ಸೀಟುಗಳು ಬಿಜೆಪಿಗೆ ದೊರೆಯಲಿದ್ದು, 8 ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ ಎಂದು ಪೋಲ್​​ ಸ್ಟಾಟ್ ಹೇಳಿದೆ. ಜೆಡಿಎಸ್​​ ರೀತಿ ಸ್ಪರ್ಧಿಸಿರುವ ಒಟ್ಟು 3ರಲ್ಲಿ ಎರಡು ಸ್ಥಾನಗಳನ್ನು ಜೆಡಿಎಸ್​ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ. ದೇಶಾದ್ಯಂತ ಬಿಜಪಿಗೆ ಹಿಂದಿಗಿಂತ ಹೆಚ್ಚು ಸೀಟುಗಳು ಸಿಗಲಿವೆ ಎಂಬ ಟ್ರೆಂಡ್ ಇರುವ ಹೊರತಾಗಿಯೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಬಿಜೆಪಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ತಲಾ ಒಂದು ಸ್ಥಾನವನ್ನು ಹಂಚಿಕೊಂಡಿತ್ತು. ಪಕ್ಷೇತರರಾದ ಸುಮಲತಾ ಅವರು ಮಂಡ್ಯ ಕ್ಷೇತ್ರದಲ್ಲಿ ಗೆದ್ದಿದ್ದರು.

ವಿಸ್ತಾರ ನ್ಯೂಸ್​- COPS ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿಗೆ 18ರಿಂದ-22 ಸ್ಥಾನಗಳು ದೊರಕಿದೆ, ಕಾಂಗ್ರೆಸ್​ಗೆ 08ರಿಂದ 10 ಸ್ಥಾನಗಳು ಲಭಿಸಲಿವೆ. ಜೆಡಿಎಸ್​ಗೆ 2ರಿಂದ 3 ಸ್ಥಾನ ಸಿಗುವುದು ಎಂದು ಹೇಳಲಾಗಿದೆ. ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ರಿಂದ 22, ಕಾಂಗ್ರೆಸ್ 3ರಿಂದ 5 ಮತ್ತು ಜೆಡಿಎಸ್ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ . ಇಂಡಿಯಾ ಟುಡೆ ಪ್ರಕಾರ ಕರ್ನಾಟದಲ್ಲಿ ಬಿಜೆಪಿಗೆ 23ರಿಂದ 25 ಹಾಗೂ ಕಾಂಗ್ರೆಸ್​ಗೆ 04ರಿಂದ 05 ಹಾಗೂ ಜೆಡಿಎಸ್​ಗೆ 1ರಿಂದ 3ಸ್ಥಾನ ಸಿಗಲಿದೆ ಎಂದು ಅಂದಾಜಿಸಿದೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಕರ್ನಾಟಕದಲ್ಲಿ ಹೀಗಿದೆ ಚುನಾವಣಾ ಫಲಿತಾಂಶ ಸಮೀಕ್ಷೆ

  • ವಿಸ್ತಾರ-COPS: ಬಿಜೆಪಿ 18-20, ಕಾಂಗ್ರೆಸ್‌ 8-10, ಜೆಡಿಎಸ್‌ 2-3
  • ಜನ್ ಕೀ ಬಾತ್: ಬಿಜೆಪಿ 17-23, ಕಾಂಗ್ರೆಸ್ 4-8, ಜೆಡಿಎಸ್ 1-2
  • ಝೀ ನ್ಯೂಸ್: ಬಿಜೆಪಿ 18-22, ಕಾಂಗ್ರೆಸ್ 4-6, ಜೆಡಿಎಸ್ 1-3
  • CNN ನ್ಯೂಸ್ 18: ಬಿಜೆಪಿ 21-23, ಕಾಂಗ್ರೆಸ್ 3-7, ಜೆಡಿಎಸ್ 2-3
  • ಪೋಲ್‌ಸ್ಟ್ರಾಟ್‌: ಬಿಜೆಪಿ 18, ಕಾಂಗ್ರೆಸ್-08, ಜೆಡಿಎಸ್-02 ಸ್ಥಾನ
  • ಇಂಡಿಯಾ ಟಿವಿ: ಬಿಜೆಪಿ 18-22, ಕಾಂಗ್ರೆಸ್‌ 4-8, ಜೆಡಿಎಸ್‌ 1-3
  • ಸಿ-ವೋಟರ್: ಬಿಜೆಪಿ 21-22, ಕಾಂಗ್ರೆಸ್ 3-5, ಜೆಡಿಎಸ್ 1-3
  • ಇಂಡಿಯಾ ಟುಡೇ: ಬಿಜೆಪಿ 20-22, ಕಾಂಗ್ರೆಸ್ 3-5, ಜೆಡಿಎಸ್ 2-3
  • ಪೋಲ್ ಆಫ್ ಪೋಲ್: ಬಿಜೆಪಿ-20, ಕಾಂಗ್ರೆಸ್-6, ಜೆಡಿಎಸ್-2
  • ಟೈಮ್ಸ್ ನೌ: ಬಿಜೆಪಿ 21-25, ಕಾಂಗ್ರೆಸ್ 3-7, ಜೆಡಿಎಸ್ 1-2
  • ಇಂಡಿಯಾ ನ್ಯೂಝ್: ಬಿಜೆಪಿ-21, ಕಾಂಗ್ರೆಸ್-5, ಜೆಡಿಎಸ್-2
  • ನ್ಯೂಸ್ ನೇಷನ್: ಬಿಜೆಪಿ-16, ಕಾಂಗ್ರೆಸ್-10, ಜೆಡಿಎಸ್-02
  • ನ್ಯೂಸ್ 24-ಟುಡೇಸ್ ಚಾಣಕ್ಯ: ಬಿಜೆಪಿ-ಜೆಡಿಎಸ್ 24, ಕಾಂಗ್ರೆಸ್-4

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮದ ಇಬ್ಬರು ಅಧಿಕಾರಿಗಳಿಗೆ 6 ದಿನ ಎಸ್‌ಐಟಿ ಕಸ್ಟಡಿ

Valmiki Corporation Scam: ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಲಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣದಲ್ಲಿ (Valmiki Corporation Scam) ಬಂಧನವಾಗಿರುವ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಅವರನ್ನು 6 ದಿನ ಎಸ್ಐಟಿ ಕಸ್ಟಡಿಗೆ ನೀಡಿ ನಗರದ 1ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಪ್ರಕರಣದಲ್ಲಿ ಹಣ ದುರುಪಯೋಗ ಆರೋಪ ಕೇಳಿಬಂದಿದ್ದರಿಂದ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಹೀಗಾಗಿ ತನಿಖೆ ಆರಂಭಿಸಿದ್ದ ಎಸ್‌ಐಟಿ, ಶುಕ್ರವಾರ ಇಬ್ಬರು ಅಧಿಕಾರಿಗಳನ್ನು ಬಂಧಿಸಿತ್ತು. ಇಂದು ಆರೋಪಿಗಳನ್ನು ವಿಚಾರಣೆಗಾಗಿ 1ನೇ ಎಸಿಎಂಎಂ ಕೋರ್ಟ್ ಹಾಜರುಪಡಿಸಲಾಗಿತ್ತು. ಆದ್ದರಿಂದ ಆರೋಪಿಗಳನ್ನು ವಿಚಾರಣೆಗಾಗಿ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು.

ಇದನ್ನೂ ಓದಿ | Pralhad Joshi: ವಾಲ್ಮೀಕಿ ನಿಗಮದ ಹಗರಣ; ಸಚಿವ ನಾಗೇಂದ್ರರನ್ನು ಬಂಧಿಸಿ, ಸಿಬಿಐ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

Continue Reading

ಕರ್ನಾಟಕ

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್ ಹ್ಯಾನ್ಸೆನ್‌ಗೆ ಸೆಲ್ಕೋ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

Selco India: ಸಾಮಾಜಿಕ ಉದ್ಯಮವಾಗಿರುವ ಸೆಲ್ಕೋ ಸಂಸ್ಥೆಯು (Selco India) ಕೊಡಮಾಡುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಸೌರವಿದ್ಯುತ್ ಪ್ರವರ್ತಕ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಬೆಂಗಳೂರು ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ ಕುಮಾರ್‌, ಪ್ರಶಸ್ತಿ ಪ್ರದಾನ ಮಾಡಿದರು.

VISTARANEWS.COM


on

Selco India SELCO Suryamitra Annual Award to Richard Hansen of America
Koo

ಬೆಂಗಳೂರು: ಸಾಮಾಜಿಕ ಉದ್ಯಮವಾಗಿರುವ ಸೆಲ್ಕೋ ಸಂಸ್ಥೆಯು (Selco India) ಕೊಡಮಾಡುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಸೌರವಿದ್ಯುತ್ ಪ್ರವರ್ತಕ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ ಕುಮಾರ್‌ ಅವರು, ರಿಚರ್ಡ್ ಹ್ಯಾನ್ಸೆನ್ ಅವರಿಗೆ ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿದರು.

ಇದನ್ನೂ ಓದಿ: Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳಲು ಇಂದೇ ಸಕಾಲ, ಬಂಗಾರದ ಬೆಲೆಯಲ್ಲಿ ಇಳಿಕೆ

ಕಾರ್ಯಕ್ರಮದಲ್ಲಿ ಸೆಲ್ಕೋ ಫೌಂಡೇಷನ್‌ನ ಸಹ ನಿರ್ದೇಶಕಿ ರಚಿತಾ ಮಿಶ್ರಾ, ಮುಖ್ಯ ಹಣಕಾಸು ಅಧಿಕಾರಿ ವಿ.ಕೆ. ಜೋಬಿ, ಕ್ರೆಡೆಲ್‌ನ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ, ಸೆಲ್ಕೋ ಫೌಂಡೇಷನ್‌ನ ಸಿಇಒ ಡಾ. ಹರೀಶ್‌ ಹಂದೆ, ಸೆಲ್ಕೋ ಇಂಡಿಯಾದ ನಿರ್ದೇಶಕರಾದ ಎಲಿನಾ ಕ್ಯಾಸಲೋರಿ, ಥಾಮಸ್‌ ಪುಲ್ಲೆಂಕೇವ್‌, ಸಿಇಒ ಮೋಹನ್‌ ಭಾಸ್ಕರ್‌ ಹೆಗಡೆ ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Stray dogs attack in Shira 4 children one woman injured
ಪ್ರಮುಖ ಸುದ್ದಿ3 hours ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ4 hours ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ4 hours ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ4 hours ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ5 hours ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Exit Poll 2024
ಪ್ರಮುಖ ಸುದ್ದಿ6 hours ago

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Bangalore rain
ಪ್ರಮುಖ ಸುದ್ದಿ6 hours ago

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Dinesh Karthik
ಪ್ರಮುಖ ಸುದ್ದಿ6 hours ago

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Exit Poll
ಪ್ರಮುಖ ಸುದ್ದಿ6 hours ago

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024
ದೇಶ7 hours ago

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು11 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌