Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ - Vistara News

ಬೆಂಗಳೂರು

Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

Road Accident : ಬೆಂಗಳೂರಿನಲ್ಲಿ ಶರವೇಗದಲ್ಲಿ ಬಂದ ಕಾರೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತವು ಸೆರೆಯಾಗಿದ್ದು, ಎದೆ ಝಲ್ ಎನ್ನುತ್ತೆ.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಬ್ಬಾ.. ಬೆಂಗಳೂರಿನ ಸರ್ಜಾಪುರದಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ವೊಂದು (Road Accident) ಸಂಭವಿಸಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶರವೇಗದಲ್ಲಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರ ಗಾಳಿಗೆ ತೂರಿ ಹಾರಿ ಬಿದ್ದಿದ್ದಾನೆ.

ಕಾರು ಬೈಕ್‌ಗೆ ಡಿಕ್ಕಿಯಾದರೂ ಪವಾಡ ಸದೃಶ್ಯ ರೀತಿ ಬೈಕ್‌ ಸವಾರ ಬಚಾವಾಗಿದ್ದಾನೆ. ಅದೃಷ್ಟವಶಾತ್ ಸವಾರ ಸಣ್ಣ-ಪುಟ್ಟ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ.

ಕಾರು ಡಿಕ್ಕಿಯಾದ ರಭಸಕ್ಕೆ ಸವಾರ ಬೈಕ್ ಸಮೇತ ರಸ್ತೆಗೆ ಹಾರಿ ಬಿದ್ದರೆ, ಧರಿಸಿದ್ದ ಹೆಲ್ಮೆಟ್ ಒಂದು ಕಡೆ ಎಗರಿ ಬಿದ್ದಿದೆ. ಅಪಘಾತದ ದೃಶ್ಯ ಮುಂದಿದ್ದ ಕಾರೊಂದರ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆಗಸ್ಟ್‌ 15ರ ಬೆಳಗ್ಗೆ 7:50 ರ ಸುಮಾರಿಗೆ ಸರ್ಜಾಪುರ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೈಕ್‌ ಸಂಪೂರ್ಣ ಜಖಂಗೊಂಡಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

ಗೂಡ್ಸ್‌ ವಾಹನ ಡಿಕ್ಕಿಗೆ ಮಹಿಳೆ ಸಾವು

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ಭಾನುವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

ಸತ್ಯಪ್ರೇಮ ಎಂಬುವವರು ಮೃತ ದುರ್ದೈವಿ. ಸತ್ಯಪ್ರೇಮ ಅವರು ತಮ್ಮ ಪತಿ ಜತೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಕಾರ್ಪೊರೇಷನ್ ಬಸ್ ನಿಲ್ದಾಣದ ಬಳಿ ಹಿಂದಿನಿಂದ ಬಂದ ಐಷರ್ ವಾಹನ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸತ್ಯಪ್ರೇಮಾರ ತಲೆಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸತ್ಯಪ್ರೇಮಾರ ಪತಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಿಯಂತ್ರಣ ತಪ್ಪಿದ ಕಾರು, 17 ಬೈಕ್‌ಗಳು ಜಖಂ

ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಿಂತಿದ್ದ ಬೈಕ್‌ಗಳ ಮೇಲೆ ನುಗ್ಗಿದೆ. ಪರಿಣಾಮ ಹದಿನೇಳು ಬೈಕ್‌ಗಳು ಜಖಂಗೊಂಡಿವೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ, ಕೆಂಕೆರೆಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ.

ಧಾರಾಕಾರ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಸವಾರರು ಬೈಕ್‌ಗಳನ್ನು ನಿಲ್ಲಿಸಿ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ಅತಿ ವೇಗವಾಗಿ ಚಲಿಸುತ್ತಿದ್ದ ಫಾರ್ಚೂನರ್ ಕಾರು, ಮಳೆಯಿಂದ ರಸ್ತೆ ಕಾಣದೆ ನಿಯಂತ್ರಣ ತಪ್ಪಿ ಬೈಕ್‌ಗಳ ಮೇಲೆ ನುಗ್ಗಿದೆ. ಬೈಕ್‌ಗಳ ಮೇಲೆ‌ ನುಗ್ಗಿ ಬಳಿಕ ಬಸ್‌ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದು ಕಾರು ನಿಂತಿದೆ.

ಕಾರು ಗುದ್ದಿದ ರಭಸಕ್ಕೆ ಗೋಡೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಓರ್ವನಿಗೆ ಗಾಯವಾಗಿದ್ದು, ಅದೃಷ್ಟವಶಾತ್ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಿಲ್ದಾಣದಲ್ಲಿ ಬೈಕ್ ಸವಾರರು ನಿಂತಿದ್ದರಿಂದ ಎಲ್ಲರ ಜೀವ ಉಳಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Heart Attack: ಪತ್ರಿಕಾಗೋಷ್ಠಿಯಲ್ಲಿ ಸಿಎಂ ಪರ ಮಾತನಾಡುತ್ತಿದ್ದಾಗಲೇ ಹೃದಯಾಘಾತವಾಗಿ ಕುಸಿದ ವ್ಯಕ್ತಿ

Heart Attack: ಕೋಲಾರ ಕುರುಬರ ಸಂಘದ ವತಿಯಿಂದ ನಡೆದ ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಮುಖಂಡರಾದ ರವೀಂದ್ರ ಎಂಬ ವ್ಯಕ್ತಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಆ ಕ್ಷಣದಲ್ಲಿ ಹೃದಯಾಘಾತ ಸಂಭವಿಸಿದೆ.

VISTARANEWS.COM


on

heart attack in press meet
Koo

ಬೆಂಗಳೂರು: ರಾಜಧಾನಿಯ ಪ್ರೆಸ್‌ ಕ್ಲಬ್‌ನಲ್ಲಿ (Press Club) ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ (Press meet), ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ (Heart Attack) ಕುಸಿದು ಬಿದ್ದರು.

ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ಅನುಮತಿ ನೀಡಿದ ರಾಜ್ಯಪಾಲರ (Governor Thawar chand gehlot) ನಡೆಯನ್ನು ವಿರೋಧಿಸಿ ಪತ್ರಿಕಾಗೋಷ್ಠಿ ನಡೆದಿತ್ತು. ಕೋಲಾರ ಕುರುಬರ ಸಂಘದ ವತಿಯಿಂದ ನಡೆದ ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಮುಖಂಡರಾದ ರವೀಂದ್ರ ಎಂಬ ವ್ಯಕ್ತಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಆ ಕ್ಷಣದಲ್ಲಿ ಹೃದಯಾಘಾತ ಸಂಭವಿಸಿದೆ. ಮಾತಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದ ರವೀಂದ್ರ ಅವರನ್ನು ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ನನ್ನ ಹೋರಾಟದ ಜೋಶ್‌ ಜಾಸ್ತಿಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಿಜೆಪಿ- ಜೆಡಿಎಸ್‌ ಸುಳ್ಳು ದೂರುಗಳ ಮೂಲಕ ನನ್ನನ್ನು ಹಣಿಯುವುದಕ್ಕೆ ಮುಂದಾಗಿವೆ. ನಾನು ರಾಜಕೀಯ ಜೀವನದಲ್ಲಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದು, ಮುಂದೆಯೂ ಮಾಡುತ್ತೇನೆ. ಇಂಥ ಹೋರಾಟದ ಸಂದರ್ಭದಲ್ಲಿ ನನ್ನ ಜೋಶ್‌ ಜಾಸ್ತಿಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದು ಹಾಗೂ ರಾಜೀನಾಮೆಗೆ ಬಿಜೆಪಿ ಆಗ್ರಹದ ಕುರಿತು ಅವರು ಮಾಧ್ಯಮಗಳ ಮುಂದೆ ಮಾತನಾಡಿದರು. ನಾನು ಡಲ್ ಆಗಿಲ್ಲ. ಬಹಳ‌ ಆಕ್ಟೀವ್ ಆಗಿಯೇ ಇದ್ದೇನೆ. ನಾನು ಬಡವರ ಪರ ಇದ್ದೇನೆ, ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇನೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯನನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ನಾನು, ನನ್ನ‌ ರಾಜಕೀಯ ಜೀವನ ತೆರೆದ ಪುಸ್ತಕ. ನಿನ್ನೆಗೆ ನಾನು ಮಂತ್ರಿಯಾಗಿಯೇ ನಲುವತ್ತು ವರ್ಷಗಳಾದವು. ಯಾವತ್ತೂ ತಪ್ಪು ಮಾಡಿಲ್ಲ, ಮಾಡೋದೂ ಇಲ್ಲ. ನನ್ನಲ್ಲಿ ಒಂದು ಕಪ್ಪು ಚುಕ್ಕಿಯೂ ಇಲ್ಲ. ನನ್ನ ಜೀವನದಲ್ಲಿ ಮಸಿ ಬಳಿಯಬೇಕು ಅಂತ ಇದನ್ನೆಲ್ಲ ಮಾಡುತ್ತಿದ್ದಾರೆ. ಬಿಜೆಪಿ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದೆ ಎಂದು ಅವರು ಆಪಾದಿಸಿದರು.

ಸುಳ್ಳು ಆಪಾದನೆ, ಕೇಸ್‌ ಇತ್ಯಾದಿಗಳ ಬಗ್ಗೆ ರಾಜಕೀಯವಾಗಿಯೂ ಹೋರಾಡುತ್ತೇನೆ; ಕಾನೂನಾತ್ಮಕವಾಗಿಯೂ ಹೋರಾಡುತ್ತೇನೆ. ರಾಜ್ಯಪಾಲರ ಆದೇಶ ಪ್ರಶ್ನೆ ಮಾಡಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದೇವೆ. ತಡೆಯಾಜ್ಞೆ ಕೊಡಿ ಅಂತ ಕೇಳಿದ್ದೇವೆ. ನನ್ನ ಪರವಾಗಿ ವಾದಿಸಲು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಬರ್ತಾ ಇದ್ದಾರೆ. ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.

ಪ್ರಸ್ತುತ ರಾಜ್ಯಪಾಲರ ಅನುಮತಿ ರದ್ದುಗೊಳಿಸಲು ಕೋರಿ ಸಿಎಂ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನದ 163ನೇ ವಿಧಿಯಂತೆ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಅನುಮತಿಗೆ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರು ವಾದಿಸಿದ್ದಾರೆ.

ಇದನ್ನೂ ಓದಿ: MUDA Case: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ; ರಾಜಭವನ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರು

Continue Reading

ರಾಜಕೀಯ

CLP Meeting: ಆ.22ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

CLP Meeting: ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂ. 334, ಸಮ್ಮೇಳನ ಸಭಾಂಗಣದಲ್ಲಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

VISTARANEWS.COM


on

CLP Meeting
Koo

ಬೆಂಗಳೂರು: ರಾಜ್ಯಪಾರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಲ್ಲಿ ತಲ್ಲಣ ಶುರುವಾಗಿದೆ. ಹೀಗಾಗಿ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ ಅವರು ಆ.28ರಂದು ಸಂಜೆ 4 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂ. 334, ಸಮ್ಮೇಳನ ಸಭಾಂಗಣದಲ್ಲಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ (CLP Meeting)ಯನ್ನು ಕರೆದಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು, ವಿಧಾನ ಪರಿಷತ್ತಿನ ಸಭಾ ನಾಯಕರಾದ ಎನ್.ಎಸ್. ಭೋಸರಾಜು ರವರು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರುಗಳು ಉಪಸ್ಥಿತರಿರುತ್ತಾರೆ. ಆದ್ದರಿಂದ ಎಲ್ಲಾ ಸದಸ್ಯರು ತಪ್ಪದೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬೇಕೆಂದು ಕಾರ್ಯದರ್ಶಿ ಅಲ್ಲಮಪ್ರಭು ಹೇಳಿದ್ದಾರೆ.

ಇದನ್ನೂ ಓದಿ | ಇದನ್ನೂ ಓದಿ: CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

ನಾನು ಡಲ್‌ ಆಗಿಲ್ಲ, ನನ್ನ ಹೋರಾಟದ ಜೋಶ್‌ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಿಜೆಪಿ- ಜೆಡಿಎಸ್‌ ಸುಳ್ಳು ದೂರುಗಳ ಮೂಲಕ ನನ್ನನ್ನು ಹಣಿಯುವುದಕ್ಕೆ ಮುಂದಾಗಿವೆ. ನಾನು ರಾಜಕೀಯ ಜೀವನದಲ್ಲಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದು, ಮುಂದೆಯೂ ಮಾಡುತ್ತೇನೆ. ಇಂಥ ಹೋರಾಟದ ಸಂದರ್ಭದಲ್ಲಿ ನನ್ನ ಜೋಶ್‌ ಜಾಸ್ತಿಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಮುಡಾ ಪ್ರಕರಣದಲ್ಲಿ (MUDA case, MUDA scam) ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದು ಹಾಗೂ ರಾಜೀನಾಮೆಗೆ ಬಿಜೆಪಿ ಆಗ್ರಹದ ಕುರಿತು ಅವರು ಮಾಧ್ಯಮಗಳ ಮುಂದೆ ಮಾತನಾಡಿದರು. ನಾನು ಡಲ್ ಆಗಿಲ್ಲ. ಬಹಳ‌ ಆಕ್ಟೀವ್ ಆಗಿಯೇ ಇದ್ದೇನೆ. ನಾನು ಬಡವರ ಪರ ಇದ್ದೇನೆ, ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇನೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯನನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ನಾನು, ನನ್ನ‌ ರಾಜಕೀಯ ಜೀವನ ತೆರೆದ ಪುಸ್ತಕ. ನಿನ್ನೆಗೆ ನಾನು ಮಂತ್ರಿಯಾಗಿಯೇ ನಲುವತ್ತು ವರ್ಷಗಳಾದವು. ಯಾವತ್ತೂ ತಪ್ಪು ಮಾಡಿಲ್ಲ, ಮಾಡೋದೂ ಇಲ್ಲ. ನನ್ನಲ್ಲಿ ಒಂದು ಕಪ್ಪು ಚುಕ್ಕಿಯೂ ಇಲ್ಲ. ನನ್ನ ಜೀವನದಲ್ಲಿ ಮಸಿ ಬಳಿಯಬೇಕು ಅಂತ ಇದನ್ನೆಲ್ಲ ಮಾಡುತ್ತಿದ್ದಾರೆ. ಬಿಜೆಪಿ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದೆ ಎಂದು ಅವರು ಆಪಾದಿಸಿದರು.

ಸುಳ್ಳು ಆಪಾದನೆ, ಕೇಸ್‌ ಇತ್ಯಾದಿಗಳ ಬಗ್ಗೆ ರಾಜಕೀಯವಾಗಿಯೂ ಹೋರಾಡುತ್ತೇನೆ; ಕಾನೂನಾತ್ಮಕವಾಗಿಯೂ ಹೋರಾಡುತ್ತೇನೆ. ರಾಜ್ಯಪಾಲರ ಆದೇಶ ಪ್ರಶ್ನೆ ಮಾಡಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದೇವೆ. ತಡೆಯಾಜ್ಞೆ ಕೊಡಿ ಅಂತ ಕೇಳಿದ್ದೇವೆ. ನನ್ನ ಪರವಾಗಿ ವಾದಿಸಲು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಬರ್ತಾ ಇದ್ದಾರೆ. ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.

Continue Reading

ಪ್ರಮುಖ ಸುದ್ದಿ

BJP-JDS Protest: ಭಂಡತನ ಬಿಟ್ಟು ರಾಜೀನಾಮೆ ಕೊಡಿ; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ-ಜೆಡಿಎಸ್‌ ನಾಯಕರ ಆಗ್ರಹ

BJP-JDS Protest: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರನ್ನು ಬೆಂಬಲಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ, ಜೆಡಿಎಸ್‌ನಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

BJP-JDS Protest
Koo

ಬೆಂಗಳೂರು: ಮುಡಾ ಹಗರಣದಲ್ಲಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು, ಸಂಸದರು ನಗರದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ (BJP-JDS Protest) ನಡೆಸಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್‌.ಅಶೊಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಈ ವೇಳೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಬಿಜೆಪಿ-ಜೆಡಿಎಸ್ ಎರಡೂ ಪಕ್ಷ ಒಂದಾಗಿ ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸಿಕೊಂಡು ಬರುತ್ತಿವೆ. ನಮ್ಮ ಹೋರಾಟ ತಾರ್ಕಿಕ ಅಂತ್ಯಕ್ಕೆ ಬಂದಿದೆ. ಸಿಎಂ ಮೇಲೆ ವಿರುದ್ಧ ಅನೇಕ ಭ್ರಷ್ಟಾಚಾರ ಹಗರಣ ಆರೋಪಗಳು ಕೇಳಿ ಬಂದಿವೆ. ಸಿಎಂ‌ ವಿರುದ್ಧ ಸಾಕಷ್ಟು ದಾಖಲೆಗಳನ್ನು ಸಲ್ಲಿಸಿದ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಆದರೆ, ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡೋದು ಬಿಟ್ಟು, ಬೆಂಬಲಿಗರು ಹಾಗೂ ಹೈಕಮಾಂಡ್ ಜೊತೆ ಸೇರಿ ಗೂಂಡಾಗಿರಿ ಮಾಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ರಾಜ್ಯಪಾಲರ ಮೇಲೆ ದಬ್ಬಾಳಿಕೆ ಮಾಡೋದು ಬಿಟ್ಟು, ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಬೆಂಗಳೂರು-ಮೈಸೂರು ಪಾದಯಾತ್ರೆ ವೇಳೆ ಈಗಾಗಲೇ ಮಾತನಾಡಿದ್ದೇವೆ. ತಮ್ಮ ಬೆಂಬಲಕ್ಕೆ ಸಚಿವರು, ಶಾಸಕರು ನಿಲ್ಲುತ್ತಾರೆ ಎನ್ನೋ ಭಂಡತನ ಬಿಡಿ. ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರ ಬನ್ನಿ ಎಂದು ಒತ್ತಾಯಿಸಿದರು.

ನೀವು ನ್ಯಾಯಾಲಯದಲ್ಲಿ ಹೋರಾಟ ಮಾಡಿ, ನಾವು ಬೇಡ ಅನ್ನಲ್ಲ. ಕಾನೂನಾತ್ಮಕವಾಗಿ ಏನೇ ಹೋರಾಟ ಮಾಡಿ, ಆದರೆ, ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ. ನಿಮ್ಮ ಮುಖವಾಡ ಕಳಚಿದೆ, ರಾಜ್ಯದ ಜನ ನೋಡುತ್ತಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತೊಲಗಿ ಎಂದು ಆಗ್ರಹಿಸಿದರು.

ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಸಿದ್ದರಾಮಯ್ಯ ಅವರೇ ನಿಮ್ಮ ನೇತೃತ್ವದಲ್ಲಿ ಇಷ್ಟೊಂದು ಲೂಟಿ ಆಗುತ್ತಿದೆ ಎಂದು ಜನ ಕೇಳುತ್ತಿದ್ದಾರೆ. ನಾವು ನಿಲುವಳಿ ಸೂಚನೆ ಮಂಡನೆ ಮಾಡಿದ್ದೆವು, ನಾವೇನು ನಿಮಗೆ ಬಹುಮತ ಇಲ್ಲ ಅಂತ ಕೇಳಿರಲಿಲ್ಲ. ಬಹುಮತ ತೆಗೆದುಕೊಂಡು ಏನು ಮಾಡುತ್ತೀರಿ. ಕಾನೂನಾತ್ಮಕವಾಗಿ ನಾವು ಮೊದಲ ಪ್ರಶ್ನೆ ಕೇಳಿದ್ದೆವು, ತಪ್ಪು ಮಾಡಿಲ್ಲ ಅಂತ ಎಳೆಎಳೆಯಾಗಿ ಹೇಳಲು ಇದ್ದ ಅವಕಾಶ ಇತ್ತು. ಅದು ಬಿಟ್ಟು ಹೇಳಿಕೆ ಕೊಡದೆ ಓಡಿಹೋದಿರಿ. ಸರ್ಕಾರದ ಅಧಿಕಾರ ಬಳಸಿಕೊಂಡು, ನಮಗಿಂತ ಮೊದಲು ಹೋಗಿ ಭಾಷಣ ಮಾಡಿದ್ದೀರಲ್ಲ ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದರೆ ನೀವೇ ನೇರ ಹೊಣೆ. ರಾಷ್ಟ್ರಪತಿ ಆಡಳಿತ ಈಗಲೇ ಬರಲಿ, ಪೊಲೀಸರ ಕೈ ಕಟ್ಟಿದ್ದೀರಿ, ಬಿಜೆಪಿ-ಜೆಡಿಎಸ್ ಮಾತ್ರವಲ್ಲ, ರಾಜ್ಯದ ಎಲ್ಲಾ ಜನ ಕೂಗುತ್ತಿದ್ದಾರೆ. ಮಾಧ್ಯಮದಲ್ಲಿ ಎಲ್ಲಾ ದಾಖಲೆಗಳನ್ನು ತೋರಿಸುತ್ತಿದ್ದಾರೆ. ಪ್ರಾಸಿಕ್ಯೂಷನ್ ಅನುಮತಿ ಕೇಳಿರೋದು ಯಾರು? ಟಿ.ಜೆ ಅಬ್ರಹಾಂ, ಒಬ್ಬ ಅಲ್ಪಸಂಖ್ಯಾತ. ಸ್ನೇಹಮಯಿ ಕೃಷ್ಣಾ, ಪ್ರದೀಪ್ ಅವರು ಇದ್ದಾರೆ. ಕಾಗೆ ಬೆಳ್ಳಗಿದೆಯಾ, ಕಪ್ಪಗಿದೆಯಾ ಎಂದು ತೀರ್ಮಾನ ಮಾಡುವುದು ಬಿಜೆಪಿ ಅಲ್ಲ, ನ್ಯಾಯಾಲಯ ಎಂದು ಹೇಳಿದರು.

ಯಡಿಯೂರಪ್ಪ ಅವರ ವಿರುದ್ಧ ಪ್ರಾಸಿಕ್ಯೂಷನ್ ಕೊಟ್ಟಾಗ ಹಬ್ಬ ಮಾಡಿದ್ದಿರಿ, ಈಗ ಗಲಾಟೆ ಮಾಡುತ್ತೀರಾ? ಒಂದೇ ಸರ್ಕಾರ, ಒಂದೇ ಮಂತ್ರಿ ಮಂಡಲ, ಒಂದೇ ಕ್ಯಾಬಿನೆಟ್. ಎರಡು ನೀತಿ, ದ್ವಂದ್ವ ಯಾಕೆ? ನಾಗೇಂದ್ರಗೆ ಒಂದು ಕಾನೂನು, ಸಿದ್ದರಾಮಯ್ಯಗೆ ಒಂದು ಕಾನೂನಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

ಪ್ರತಿಭಟನೆಯಲ್ಲಿ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಸದಾನಂದಗೌಡ, ಜೆಡಿಎಸ್ ವಿಧಾನಪರಿಷತ್ ಸದಸ್ಯ ಶರವಣ, ತಿಪ್ಪೇಸ್ವಾಮಿ, ಎಂಎಲ್‌ಎ ನಾಡಗೌಡ, ಸಂಸದರಾದ ಪಿ.ಸಿ ಮೋಹನ್, ಲೆಹರ್ ಸಿಂಗ್, ಎಂಟಿಬಿ ನಾಗರಾಜ್, ಅಶ್ವತ್ಥ್‌ ನಾರಾಯಣ್‌ ಮತ್ತಿತರರು ಭಾಗವಹಿಸಿದ್ದರು.

Continue Reading

ಪ್ರಮುಖ ಸುದ್ದಿ

MUDA Case: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ; ರಾಜಭವನ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರು

MUDA Case: ರಾಜ್ಯಪಾಲರ ವಿರುದ್ಧ ಬೀದಿಗಿಳಿದಿದ್ದು, ರಾಜಧಾನಿಯಲ್ಲಿ ರಾಜಭವನ ಮುತ್ತಿಗೆಗೆ ಕೈ ಕಾರ್ಯಕರ್ತರು ಯತ್ನಿಸಿದರು. ರಾಜ್ಯಪಾಲರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನಕ್ಕೆ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ʼಗವರ್ನರ್ ಗೋ ಬ್ಯಾಕ್‌ʼ ಎಂದು ಕೈ ಕಾರ್ಯಕರ್ತರು ಘೋಷಣೆ ಕೂಗಿದರು.

VISTARANEWS.COM


on

muda case congress protest
Koo

ಬೆಂಗಳೂರು: ‌ಮುಡಾ ಹಗರಣ (MUDA Scam, MUDA case) ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governor Thawar Chand gehlot) ಅವರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ (Congress protest) ಇಂದು ಹಮ್ಮಿಕೊಂಡಿರುವ ರಾಜ್ಯವ್ಯಾಪಿ ಬೃಹತ್‌ ಪ್ರತಿಭಟನೆಗೆ ವೇಗ ದೊರೆತಿದೆ. ಮುಂಜಾನೆಯಿಂದ ಕಾಂಗ್ರೆಸ್‌ ಕಾರ್ಯಕರ್ತರು ಎಲ್ಲೆಡೆ ಜಮಾಯಿಸಿ ರಾಜ್ಯಪಾಲರಿಗೆ ಧಿಕ್ಕಾರ ಕೂಗಿದರು. ರಾಜಧಾನಿಯಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್‌ ನಾಯಕರು ಭಾಗವಹಿಸಿ ಧರಣಿ ಪ್ರತಿಭಟನೆ ನಡೆಸಿದರು.

ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಡಿಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್, ದಿನೇಶ್ ಗುಂಡೂರಾವ್, ಬಿಕೆ ಹರಿಪ್ರಸಾದ್, ಯುಬಿ ವೆಂಕಟೇಶ್, ಸಲೀಂ ಅಹ್ಮದ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು, ಕೆಪಿಸಿಸಿ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಮೂರು ಕೆಎಸ್‌ಆರ್‌ಪಿ ತುಕಡಿ, 100 ಮಹಿಳಾ ಪೊಲೀಸ್, 10 ಪಿಎಸ್‌ಐ, 5 ಪಿಐಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಬೆಳ್ಳಂಬೆಳಗ್ಗೆಯೇ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಿಳಿದಿದ್ದಾರೆ. ರಾಜ್ಯಪಾಲರ ವಿರುದ್ಧ ಬೀದಿಗಿಳಿದಿದ್ದು, ರಾಜಧಾನಿಯಲ್ಲಿ ರಾಜಭವನ ಮುತ್ತಿಗೆಗೆ ಕೈ ಕಾರ್ಯಕರ್ತರು ಯತ್ನಿಸಿದರು. ರಾಜ್ಯಪಾಲರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನಕ್ಕೆ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ʼಗವರ್ನರ್ ಗೋ ಬ್ಯಾಕ್‌ʼ ಎಂದು ಕೈ ಕಾರ್ಯಕರ್ತರು ಘೋಷಣೆ ಕೂಗಿದರು.

ʼಷಡ್ಯಂತ್ರಕ್ಕೆ ಸವಾಲ್ʼ ಎಂಬ ಹೆಸರಿನಲ್ಲಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ ಆಯೋಜಿಸಿದ್ದು, ರಾಜ್ಯಪಾಲರ, ಬಿಜೆಪಿ- ಜೆಡಿಎಸ್ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಜಿಲ್ಲಾ ಕೇಂದ್ರಗಳಲ್ಲಿ ಆಯೋಜನೆ ಮಾಡಿದೆ. ಕನಿಷ್ಠ ಅರ್ಧ ಕಿಲೋಮೀಟರ್ ಪಾದಯಾತ್ರೆ ಮೂಲಕ ಪ್ರೊಟೆಸ್ಟ್ ಮಾಡಲಿದೆ. ಪ್ರತಿಭಟನೆ ಬಳಿಕ ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ಆಯಾ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಿದೆ. ರಾಜ್ಯಪಾಲರು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್‌ ಆಕ್ಷೇಪಿಸಿದೆ.

ತನಿಖೆಗೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಕೋರಿದ ಸಿಎಂ, ಇಂದು ಮಧ್ಯಾಹ್ನ ವಿಚಾರಣೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ ಆರಂಭಿಸಲು ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಾಸಿಕ್ಯೂಶನ್‌ಗೆ ಅವರು ತಡೆಯಾಜ್ಞೆ ಕೋರಿದ್ದು, ಅರ್ಜಿಯ ವಿಚಾರಣೆ ಮಧ್ಯಾಹ್ನ 2.30ಕ್ಕೆ ನಡೆಯಲಿದೆ.

ಪ್ರಾಸಿಕ್ಯೂಶನ್‌ಗೆ ತಡೆ ಕೋರಿ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಪೀಠದ ಮುಂದೆ ಸಿಎಂ ಪರ ವಕೀಲ ಶತಭೀಷ್ ಶಿವಣ್ಣ ಅವರಿಂದ ಅರ್ಜಿ ಸಲ್ಲಿಕೆಯಾಯಿತು. ತ್ವರಿತವಾಗಿ ಅರ್ಜಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿಕೊಂಡರು. ನ್ಯಾಯಮೂರ್ತಿಗಳು ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿದರು.

ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಸಿದ್ದರಾಮಯ್ಯ ಅವರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನದ 163ನೇ ವಿಧಿಯಂತೆ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಅನುಮತಿಗೆ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿದರು.

ತುರ್ತು ವಿಚಾರಣೆಯ ಅಗತ್ಯವಿದೆ. ಕೇವಿಯಟ್ ಸಲ್ಲಿಸಿದವರಿಗೆ ಮಾಹಿತಿ ನೀಡಲಾಗಿದೆ. ರಾಜ್ಯಪಾಲರ ಕಚೇರಿಗೂ ಅರ್ಜಿಯ ಪ್ರತಿ ಸಲ್ಲಿಸಲಾಗಿದೆ ಎಂದು ವಕೀಲರು ತಿಳಿಸಿದರು. ಮಧ್ಯಾಹ್ನ 2.30ಕ್ಕೆ ವಿಚಾರಣೆ ನಿಗದಿಪಡಿಸಲು ಹೈಕೋರ್ಟ್ ಒಪ್ಪಿಗೆ ನೀಡಿತು.

ಇದನ್ನೂ ಓದಿ: CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

Continue Reading
Advertisement
heart attack in press meet
ಬೆಂಗಳೂರು6 mins ago

Heart Attack: ಪತ್ರಿಕಾಗೋಷ್ಠಿಯಲ್ಲಿ ಸಿಎಂ ಪರ ಮಾತನಾಡುತ್ತಿದ್ದಾಗಲೇ ಹೃದಯಾಘಾತವಾಗಿ ಕುಸಿದ ವ್ಯಕ್ತಿ

Sonal shared an emotional post remembering Darshan on the day of Raksha Bandhan
ಸ್ಯಾಂಡಲ್ ವುಡ್18 mins ago

Sonal Monteiro: ರಕ್ಷಾ ಬಂಧನದ ದಿನ ದರ್ಶನ್ ನೆನೆದು ಭಾವುಕ ಪೋಸ್ಟ್‌ ಹಂಚಿಕೊಂಡ ಸೋನಲ್‌!

Kolkata Doctor Murder case
ದೇಶ49 mins ago

Kolkata Doctor Murder case: ಮಮತಾ ಬ್ಯಾನರ್ಜಿ ಹತ್ಯೆಗೆ ಪ್ರಚೋದಿಸಿ ಪೋಸ್ಟ್‌- ವಿದ್ಯಾರ್ಥಿನಿ ಅರೆಸ್ಟ್‌

CLP Meeting
ರಾಜಕೀಯ1 hour ago

CLP Meeting: ಆ.22ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Sexual Abuse
Latest1 hour ago

Sexual Abuse: ಸಿರಾಜ್‌ ಅಹ್ಮದ್‌ ಎಂಬಾತನ ಕಿರುಕುಳ; ಕುತ್ತಿಗೆಗೆ ಇರಿದುಕೊಂಡು ಸಾಯಲೆತ್ನಿಸಿದ ಬಾಲಕಿ; ಆತಂಕಕಾರಿ ವಿಡಿಯೊ

cm siddaramaiah 12
ಪ್ರಮುಖ ಸುದ್ದಿ1 hour ago

CM Siddaramaiah: ನಾನು ಡಲ್‌ ಆಗಿಲ್ಲ, ನನ್ನ ಹೋರಾಟದ ಜೋಶ್‌ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

Viral Video
Latest2 hours ago

Viral Video: ವೈದ್ಯರ ಎದುರೇ ಹೃದಯಾಘಾತದಿಂದ ಸಾವು; ಆಘಾತಕಾರಿ ವಿಡಿಯೊ

Lohegaon airport
ದೇಶ2 hours ago

Lohegaon airport: ಏರ್‌ಪೋರ್ಟ್‌ನಲ್ಲಿ ಮಹಿಳೆಯ ರಂಪಾಟ- CISF ಕಾನ್‌ಸ್ಟೆಬಲ್‌ ಕೈಗೆ ಕಚ್ಚಿ ಕಪಾಳಮೋಕ್ಷ, ಪ್ರಯಾಣಿಕರ ಮೇಲೂ ಹಲ್ಲೆ

murder case
ಚಿಕ್ಕಬಳ್ಳಾಪುರ2 hours ago

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

BJP-JDS Protest
ಪ್ರಮುಖ ಸುದ್ದಿ2 hours ago

BJP-JDS Protest: ಭಂಡತನ ಬಿಟ್ಟು ರಾಜೀನಾಮೆ ಕೊಡಿ; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ-ಜೆಡಿಎಸ್‌ ನಾಯಕರ ಆಗ್ರಹ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌