Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ; ಚಿತ್ರ ನಿರ್ದೇಶಕ ನಾಗಶೇಖರ್‌ - Vistara News

ಬೆಂಗಳೂರು

Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ; ಚಿತ್ರ ನಿರ್ದೇಶಕ ನಾಗಶೇಖರ್‌

Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡು ಮಹಿಳೆಗೆ ಗುದ್‌ ಬಿಟ್ಟೆ ಎಂದು ಚಿತ್ರ ನಿರ್ದೇಶಕ ನಾಗಶೇಖರ್‌ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

VISTARANEWS.COM


on

I lost control of my eyes while driving the car Film director Nagashekhar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿನ್ನೆ ಶುಕ್ರವಾರ ಚಿತ್ರ ನಿರ್ದೇಶಕ ನಾಗಶೇಖರ್ (Nagashekar) ಕಾರು (Road Accident) ಅಪಘಾತವಾಗಿತ್ತು. ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ ಸಂಭವಿಸಿತ್ತು. ರಭಸವಾಗಿ ಬಂದ ಕಾರು ಮರಕ್ಕೆ ಗುದ್ದಿತ್ತು. ಇತ್ತ ಫುಟ್‌ಪಾತ್‌ ಮೇಲೆ ನಿಂತಿದ್ದ ಮಹಿಳೆಗೂ ಕಾರು ಡಿಕ್ಕಿ ಹೊಡೆದಿತ್ತು.

ಈ ಸಂಬಂಧ ಜ್ಞಾನಭಾರತಿ ಸಂಚಾರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಹೇಳಿಕೆ ನೀಡಿರುವ ನಾಗಶೇಖರ್, ಕಾರು ಓಡಿಸಿಕೊಂಡು ಬರುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ. ಬಳಿಕ ಕಾರನ್ನು ಫುಟ್‌ಪಾತ್‌ ಮೇಲೆ ಹತ್ತಿಸಿದೆ . ಫುಟ್‌ಪಾತ್ ಮೇಲೆ ನಿಂತಿದ್ದ ಲಕ್ಷ್ಮಿ ಎಂಬ ಮಹಿಳೆಗೆ ಸಣ್ಣ-ಪುಟ್ಟ ಗಾಯವಾಗಿದೆ. ನಾನೇ ಮಹಿಳೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದೇನೆ. ಆ ಮಹಿಳೆ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.

ಸದ್ಯ ಅಪಘಾತದ ಸಂಬಂಧ ಸಂಚಾರಿ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ. ಸೆಲ್ಪ್ ಆಕ್ಸಿಡೆಂಟ್ ಹಿನ್ನೆಲೆಯಲ್ಲಿ ಇನ್ಸೂರೆನ್ಸ್ ಕ್ಲೈಮ್ ಮಾಡಲು ಒಂದು ಮೆಮೋ ಕಾಪಿ ಕೊಡುವುದಾಗಿ ಪೊಲೀಸರು ತಿಳಿಸಿದ್ದಾರೆ. ಇನ್ನೂ ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ರೈಲ್ವೆ ಟ್ರ್ಯಾಕ್‌ಮ್ಯಾನ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

ರೈಲ್ವೆ ಟ್ರ್ಯಾಕ್‌ಮ್ಯಾನ್ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ವೆಲ್ಡಿಂಗ್ ಬಿಟ್ಟಿದ್ದ ಹಳಿಯಲ್ಲಿ ಬರುತ್ತಿದ್ದ ರೈಲು ನಿಲ್ಲಿಸಿ ದುರಂತ ತಪ್ಪಿಸಿದ್ದಾರೆ. ಉತ್ತರಕನ್ನಡದ ಕುಮಟಾ ಹೊನ್ನಾವರದ ಕೊಂಕಣ ರೈಲ್ವೇ ಮಾರ್ಗದಲ್ಲಿ ಘಟನೆ ನಡೆದಿದೆ. ಮಹಾದೇವ್ ರೈಲು ದುರಂತ ತಪ್ಪಿಸಿದ ಟ್ರ್ಯಾಕ್‌ಮ್ಯಾನ್ ಆಗಿದ್ದಾರೆ.

Road Accident
Road Accident

ಬೆಳಗ್ಗೆ 5 ಗಂಟೆಗೆ ತಿರುವನಂತಪುರದಿಂದ ನವದೆಹಲಿಗೆ ರಾಜಧಾನಿ ಎಕ್ಸಪ್ರೆಸ್ ರೈಲು ಹೊರಟಿತ್ತು. ಇದೇ ವೇಳೆ ಕುಮಟಾ ಸಮೀಪ ಹಳಿಯಲ್ಲಿ ವೆಲ್ಡಿಂಗ್ ಬಿಟ್ಟಿದ್ದನ್ನು ಮಹಾದೇವ ಗಮನಿಸಿದ್ದರು. ಹೊನ್ನಾವರ ಸ್ಟೇಷನ್ ಮಾಸ್ಟರ್‌ಗೆ ಕರೆಮಾಡಿ ರೈಲು ನಿಲ್ಲಿಸಲು ಮಾಹಿತಿ ನೀಡಿದ್ದರು. ರೈಲು ನಿಲ್ದಾಣ ದಾಟಿದ್ದರಿಂದ ಹಳಿಯಲ್ಲಿ 500 ಮೀಟರ್ ಓಡಿ ರೈಲಿಗೆ ಕೆಂಪು ಬಾವುಟ ತೋರಿಸಿ ನಿಲ್ಲಿಸಿದ್ದಾರೆ. ಟ್ರ್ಯಾಕ್‌ಮ್ಯಾನ್ ಸಮಯಪ್ರಜ್ಞೆಯಿಂದ ದುರಂತವೊಂದು ತಪ್ಪಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident : ಗಣೇಶ ಹಬ್ಬದ ದಿನವೇ ಡೆಡ್ಲಿ ಆ್ಯಕ್ಸಿಡೆಂಟ್ಸ್‌; ಐವರು ಸ್ಥಳದಲ್ಲೇ ಸಾವು

Road Accident : ಗಣೇಶ ಹಬ್ಬದ ದಿನವೇ ಪ್ರತ್ಯೇಕ ಕಡೆಗಳಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಬ್ಬದ ಸಂಭ್ರಮದಲ್ಲಿ ಇರಬೇಕಾದ ಕುಟುಂಬಗಳಲ್ಲಿ ಈಗ ಸೂತಕ ಛಾಯೆ ಆವರಿಸಿದೆ.

VISTARANEWS.COM


on

By

Deadly accidents on the day of Ganesh festival Five killed on the spot
Koo

ಬೆಂಗಳೂರು: ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಆಟೋ ಚಾಲಕ ದುರ್ಮರಣ ಹೊಂದಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಸಂಚಾರ ಠಾಣಾ ವ್ಯಾಪ್ತಿಯ ಮುದ್ದಿನಪಾಳ್ಯದಲ್ಲಿ ಘಟನೆ ನಡೆದಿದೆ. ಕಿರಣ್ (32) ಮೃತ ದುರ್ದೈವಿ. ನಿನ್ನೆ ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಕಾರೊಂದು ಮುದ್ದಿನಪಾಳ್ಯ ಕಡೆಯಿಂದ ದೀಪಾ ಕಾಂಪ್ಲೆಕ್ಸ್ ಕಡೆಗೆ ತೆರಳುತ್ತಿತ್ತು.

ಈ ವೇಳೆ ಎದುರಿಗೆ ಬರುತ್ತಿದ್ದ ಆಟೋಗೆ ಕಾರು ಡಿಕ್ಕಿಯಾಗಿದೆ. ಘಟನೆಯಿಂದ ಆಟೋ ಚಾಲಕ ಮತ್ತು ಪ್ರಯಾಣಿಕನಿಗೆ ಗಾಯವಾಗಿತ್ತು. ಕೂಡಲೇ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಧ್ಯರಾತ್ರಿ ಆಟೋ ಚಾಲಕ ಕಿರಣ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕ ಗುರು ರಾಘವೇಂದ್ರ ಎಂಬಾತ ವಿರುದ್ಧ ಪ್ರಕರಣ ದಾಖಲಾಗಿದೆ.

ನಿಂತಿದ್ದ ಟ್ರ್ಯಾಕ್ಟರ್ ಬೈಕ್ ಡಿಕ್ಕಿ; ಬಸ್‌ ಹರಿದು ಸವಾರರಿಬ್ಬರು ದುರ್ಮರಣ

ನಿಂತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬಂದ ಬೈಕ್‌ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಮರೇಶ್ ಬಸಯ್ಯ ಬೆನಕನಾಳಮಠ (21), ಶರಣಬಸಯ್ಯ ಬಸಯ್ಯ ಬೆನಕನಾಳಮಠ (16) ಮೃತ ದುರ್ದೈವಿ.

ಮೃತ ಅಮರೇಶ್ ಮತ್ತು ಬಸಯ್ಯ ಇಬ್ಬರು ಅಣ್ಣ -ತಮ್ಮಂದಿರು. ‌ ಮೂಲತಃ ಇಳಕಲ್ಲ ನಗರ ನಿವಾಸಿಯಾಗಿದ್ದಾರೆ. ಪಲ್ಸರ್ ಬೈಕ್ ಮೂಲಕ ಬಾಗಲಕೋಟೆಯಿಂದ ಇಳಕಲ್ಲಗೆ ತೆರಳುತ್ತಿದ್ದರು. ಇತ್ತ ಡಿಸೇಲ್ ಖಾಲಿ ಆಗಿದ್ದರಿಂದ ರಸ್ತೆ ಪಕ್ಕ ಟ್ರ್ಯಾಕ್ಟರ್‌ಗೆ ನಿಲ್ಲಿಸಲಾಗಿತ್ತು. ನಿಂತಿದ್ದ ಟ್ರ್ಯಾಕ್ಟರ್‌ ಹಿಂಬದಿಗೆ ಬೈಕ್‌ ಡಿಕ್ಕಿ ಹೊಡೆದಿದೆ.

ಬೈಕ್‌ನಿಂದ ಕೆಳಗೆ ಬಿದ್ದವರ ಮೇಲೆ ಚಲಿಸುತ್ತಿದ್ದ ಬಸ್ ಅಡಿಗೆ ಸಿಲುಕಿ ಸಹೋದರರು ಮೃತಪಟ್ಟಿದ್ದಾರೆ. ಅಮಿನಗಡ ಹೊರವಲಯದ ರಾಜ್ಯ ಹೆದ್ದಾರಿ 20 ರಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅಮಿನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಅಮಿನಗಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ರಸ್ತೆ ದಾಟುತ್ತಿದ್ದ ಮಹಿಳೆಗೆ ಆಟೋ ರಿಕ್ಷಾ ಡಿಕ್ಕಿ

ರಸ್ತೆ ದಾಟುತ್ತಿದ್ದ ಮಹಿಳೆಗೆ ಆಟೋವೊಂದು ಡಿಕ್ಕಿ ಹೊಡೆದಿದೆ. ಮಂಗಳೂರಿನ ಕಿನ್ನಿಗೋಳಿಯ ರಾಮನಗರ ಬಳಿ ಅಪಘಾತ ನಡೆದಿದೆ. ಅಪಘಾತದಲ್ಲಿ ರಾಜರತ್ನಪುರ ನಿವಾಸಿ ಚೇತನ (35) ಗಂಭೀರ ಗಾಯಗೊಂಡಿದ್ದಾರೆ. ಟ್ಯೂಶನ್‌ಗೆ ತೆರಳಿದ್ದ ಮಗಳನ್ನು ಕರೆ ತರುವಾಗ ಏಕಾಏಕಿ ರಸ್ತೆ ದಾಟಲು ಮುಂದಾಗಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಪಲ್ಟಿ ಹೊಡೆದ ಆಟೋ ಎತ್ತಿದ ನಂತರ ತಾಯಿಯನ್ನು ಮಗಳು ಮೇಲಕ್ಕೆತ್ತಿದ್ದಾಳೆ. ಆಟೋ ಚಾಲಕ, ಪ್ರಯಾಣಿಕ ಸೇರಿ ಸ್ಥಳದಲ್ಲಿದ್ದವರಿಗೂ ಸಣ್ಣ ಪುಟ್ಟ ಗಾಯವಾಗಿದೆ. ಆಟೋ ಕಟೀಲಿನಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.

ಟಾಟಾ ಏಸ್ ಆಟೋ ಪಲ್ಟಿ, ಸ್ಥಳದಲ್ಲೇ ಇಬ್ಬರ ಸಾವು

ಹಬ್ಬಕ್ಕೆ ಗಣಪತಿ ಮೂರ್ತಿ ತರಲು ಹೋಗುತ್ತಿದ್ದಾಗ ಟಾಟಾ ಏಸ್‌ ಆಟೋ ಪಲ್ಟಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಟೋದಲ್ಲಿ 9 ಯುವಕರು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ .ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಘಟನೆ ನಡೆದಿದೆ.
ಶ್ರೀಧರ್ (20), ಧನುಷ್ (20) ಮೃತ ಯುವಕರು.

ಇವರಿಬ್ಬರ ತಲೆಗೆ ಗಂಭೀರ ಗಾಯವಾಗಿತ್ತು, ಹೀಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೂವರು ಯುವಕರಿಗೆ ಹೆಚ್ಚಿನ ಗಾಯವಾಗಿದ್ದು, ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಹಾಗೂ ಗಾಯಾಳುಗಳೆಲ್ಲಾ ಲಿಂಗದಹಳ್ಳಿ ನಿವಾಸಿಗಳಾಗಿದ್ದಾರೆ. ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ. ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ; ಚಿತ್ರ ನಿರ್ದೇಶಕ ನಾಗಶೇಖರ್‌

ಗಣೇಶ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಲಾರಿ ಮಧ್ಯೆ ಅಪಘಾತ

ಗಣೇಶ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಲಾರಿ ಮಧ್ಯೆ ಅಪಘಾತ ನಡೆದಿದೆ. ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬಂದು ಲಾರಿಯೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊಪ್ಪಳ ತಾಲೂಕಿನ ಕೋಳೂರು ಕ್ರಾಸ್ ಬಳಿ ಅಪಘಾತ ನಡೆದಿದೆ. ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮಕ್ಕೆ ತೆರಳುವಾಗ ಅಪಘಾತ ನಡೆದಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಡುಗಿಯರಿಗಾಗಿ ವ್ಹೀಲಿಂಗ್‌ ಮಾಡುತ್ತಿದ್ದವರು ಅರೆಸ್ಟ್‌

ಬೈಕ್‌ ವ್ಹೀಲಿಂಗ್‌ ಮಾಡುತ್ತಾ ಇನ್ಸ್ಟಾಗ್ರಾಂನಲ್ಲಿ ರೀಲ್ಸ್‌ ಅಪ್ಲೋಡ್ ಮಾಡುತ್ತೀರಾ?ಹಾಗಿದ್ದರೆ ಹುಷಾರಾಗಿರಿ. ಯಾಕೆಂದರೆ ಹುಡುಗೀಯರನ್ನು ಪಟಾಯಿಸಲು ಬಸ್‌ಗಳ ಹಿಂದೆ ವ್ಹೀಲಿಂಗ್‌ ಮಾಡಿ ಫೋಸ್ ಕೊಟ್ಟ ಪುಂಡರು ಅರೆಸ್ಟ್ ಆಗಿದ್ದಾರೆ. ತೌಫೀಕ್‌ ,ಅಸ್ಮಲ್ ,‌ಮುಜಾಯಿದ್ ಬಂಧಿತರು.

ಆರೋಪಿಗಳಿಂದ ಎರಡು ಬೈಕ್ ವಶಕ್ಕೆ ಪಡೆಯಲಾಗಿದೆ. ಕಳೆದ ತಿಂಗಳು ವ್ಹೀಲಿಂಗ್‌ ಶೂರರ ಪುಂಡಾಟಿಕೆ ಬಗ್ಗೆ ವಿಸ್ತಾರ ನ್ಯೂಸ್ ವರದಿ ಮಾಡಿತ್ತು. ವಿಸ್ತಾರ ನ್ಯೂಸ್ ವರದಿ ಬೆನ್ನಲ್ಲೇ ಎಚ್ಚೆತ್ತ ಚಿಕ್ಕಬಳ್ಳಾಪುರ ಪೊಲೀಸರು, ವ್ಹೀಲಿಂಗ್‌ ಶೂರರ ಸೋಷಿಯಲ್ ಮೀಡಿಯಾಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ಬಾಗೇಪಲ್ಲಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಇಂದಿನಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಟ

Karnataka Weather Forecast : ರಾಜ್ಯಾದ್ಯಂತ ಸೆ.6ರಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ (Rain News) ಸಕ್ರಿಯಗೊಂಡಿದೆ. ಈ ದಿನ ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಗಾಳಿಯೊಂದಿಗೆ ಮಳೆ ಅಬ್ಬರ

ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಒಳನಾಡಿನ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿ.ಸೆ ಮತ್ತು 20 ಡಿ.ಸೆ ಇರಲಿದೆ.

ಭಾನುವಾರವೂ ಭಾರಿ ಮಳೆ ಎಚ್ಚರಿಕೆ

ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಹಾಗೂ ಗಾಳಿ ಬೀಸಲಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan: ನಟ ದರ್ಶನ್‌ನನ್ನು ಬಂಧಿಸುವಾಗ ಪೊಲೀಸರಿಗೆ ದಾರಿ ತಪ್ಪಿಸಿದ್ದ ಹೋಟೆಲ್‌ ಸಿಬ್ಬಂದಿ!

Actor Darshan: ಪೊಲೀಸರು ಬಂಧಿಸಲು ಹೋದಾಗ ದರ್ಶನ್ ಇದ್ದ ರೂಮ್ ನಂಬರ್ ಹೇಳದೇ ಹೋಟೆಲ್‌ ಸಿಬ್ಬಂದಿ ಸತಾಯಿಸಿದ್ದರು ಎನ್ನಲಾಗಿದೆ. ಪೊಲೀಸರಿಗೆ ದಾರಿ ತಪ್ಪಿಸಿದ್ದರು.

VISTARANEWS.COM


on

By

Hotel staff misleads police while arresting actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಂಧಿಸುವಾಗ (Actor Darshan) ನಾನಾ ಸಮಸ್ಯೆಯನ್ನು ಎದುರಿಸಬೇಕಾಯಿತು. ಪೊಲೀಸರು ಬಂಧಿಸಲು ಹೋದಾಗ ದರ್ಶನ್ ಇದ್ದ ರೂಮ್ ನಂಬರ್ ಹೇಳದೇ ಹೋಟೆಲ್‌ ಸಿಬ್ಬಂದಿ ಸತಾಯಿಸಿದ್ದರು ಎನ್ನಲಾಗಿದೆ. ಹೋಟೆಲ್‌ನಲ್ಲಿ ಕೆಲಕಾಲ ಕಾದಿದ್ದ ಪೊಲೀಸರಿಗೆ, ದಿಢೀರನೆ ಮೂವರು ಬಾಡಿ ಗಾರ್ಡ್ಸ್ ಬಂದಿದ್ದರು. ಪೊಲೀಸರನ್ನು ಕಂಡು ತುರಾತುರಿಯಲ್ಲಿ ದರ್ಶನ್ ಕಾರಿನಲ್ಲಿ ಹೋಗುತ್ತಿದ್ದ ಬಾಡಿ ಗಾರ್ಡ್ಸ್‌ ಅಡ್ಡ ಹಾಕಿ ಮೊಬೈಲ್ ಪಡೆದಿದ್ದರು. ದರ್ಶನ್ ರೂಂ ತೋರಿಸುವಂತೆ ಬಾಡಿ ಗಾರ್ಡ್ಸ್‌ಗೆ ಪೊಲೀಸರು ಗದರಿಸಿದ್ದರು.

ಬಳಿಕ ರೂಮ್ ತೋರಿಸಲು ಕರೆದುಕೊಂಡು ಹೋಗಿದ್ದರು. ಮತ್ತೊಂದು ಕೀ ಬಳಸಿ ದರ್ಶನ್ ಇದ್ದ ರೂಮ್ ಓಪನ್ ಮಾಡಿದ್ದರು. ಈ ವೇಳೆ ರೂಮಿನಲ್ಲಿ ಸ್ನಾನ ಮಾಡುತ್ತಿದ್ದ ನಟ ದರ್ಶನ್ ಎರಡೇ ನಿಮಿಷದಲ್ಲಿ ಬಾತ್ ರೂಮ್‌ನಿಂದ ಹೊರ ಬಂದಿದ್ದರು. ಪೊಲೀಸರು ನಮ್ಮ ಜತೆಗೆ ಬರಬೇಕು ಎಂದಾಗ ಬಟ್ಟೆ ಹಾಕಿಕೊಂಡು ಬರುತ್ತೇನೆ ಸಾರ್ ಎಂದಿದ್ದರು. ಬಳಿಕ ದರ್ಶನ್‌ನನ್ನು ಎಸಿಪಿ ಚಂದನ್ ಹಾಗೂ ಇನ್‌ಸ್ಪೆಕ್ಟರ್‌ ಗಿರೀಶ್ ನಾಯ್ಕ್ ಪೊಲೀಸ್ ಜೀಪ್ ಹತ್ತಿಸಿಕೊಂಡು ಬೆಂಗಳೂರಿಗೆ ಕರೆತಂದಿದ್ದರು.

ಇದನ್ನೂ ಓದಿ:

ಏಳು ಸಂಪುಟಗಳಾಗಿ ವಿಂಗಡಿಸಿ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ
ಸಂಪುಟ -1
ಚಾರ್ಜ್ ಶೀಟ್ ಮತ್ತು ಪೂರಕವಾದ ದಾಖಲೆಗಳು
ಸಂಪುಟ-2
ತನಿಖಾ ಕಾಲದಲ್ಲಿ ಸಂಗ್ರಹಿಸಲಾದ ಸಿಡಿಆರ್ ಡೇಟಾ
ಸಂಪುಟ 3
ತನಿಖಾ ಕಾಲದಲ್ಲಿ ಆರೋಪಿಗಳಿಂದ ವಶಪಡಿಸಿಕೊಂಡ ಮಾಲು ಪಟ್ಟಿ ಮತ್ತು ಮಹಜರು ದಾಖಲೆ
ಸಂಪುಟ 3ಎ
ಮಾಲುಪಟ್ಟಿ ಮತ್ತು ಪಂಚನಾಮೆ ರಿಟ್ರೀವ್ ಪಂಚನಾಮೆಗಳು
ಸಂಪುಟ 4
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ಹೇಳಿಕೆ ಸಿಆರ್ ಪಿಸಿ 161 ಹಾಗೂ 164 ಹೇಳಿಕೆಗಳು
ಸಂಪುಟ 5
ತನಿಖಾ ಕಾಲದಲ್ಲಿ ಸಂಗ್ರಹಿಸಿದ ದಾಖಲೆಗಳು
ಸಂಪುಟ 5ಎ
ತನಿಖಾ ಕಾಲದಲ್ಲಿ ಸಂಗ್ರಹಿಸಿದ ಡಿಜಿಟಲ್ ಮತ್ತು ಟೆಕ್ನಿಕಲ್ ದಾಖಲೆಗಳು
ಸಂಪುಟ 6
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ, ವೈದ್ಯರ ಅಭಿಪ್ರಾಯ ಮತ್ತು ತಜ್ಞರ ವರದಿ
ಸಂಪುಟ 7
ಆರೋಪಿಗಳು ಬಳಸುತ್ತಿದ್ದ ಮೊಬೈಲ್ ರಿಟ್ರೀವ್ ವರದಿ, ಡೇಟಾ ವರದಿ, ಡೇಟಾ ಅನಾಲಿಸಿಸ್ ವರದಿ ಹಾಗೂ ಸ್ವಇಚ್ಚೆ ಹೇಳಿಕೆಗಳು

ವಿಚಾರಣೆ ವೇಳೆ ಕಣ್ಣೀರು ಹಾಕುತ್ತಿದ್ದ ಪವಿತ್ರಾಗೌಡ

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಸಿಲುಕಿದ ಪವಿತ್ರ ಗೌಡ ಪೊಲೀಸ್ ಕಸ್ಟಡಿಯಲ್ಲಿದ್ದಾಗ ದಿನನಿತ್ಯ ಕಣ್ಣೀರು ಹಾಕುತ್ತಿದ್ದರು ಎನ್ನಲಾಗಿದೆ. ಪೊಲೀಸರ ಮುಂದೆ ಕೈ ಕಟ್ಟಿ ನಿಲುತ್ತಿದ್ದ ಪವಿತ್ರಾಗೌಡ ಅಳುತ್ತಲೇ ಘಟನೆ ಬಗ್ಗೆ ಹೇಳುತ್ತಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan : ರೇಣುಕಾಸ್ವಾಮಿಯ ಪ್ಯಾಂಟ್‌ ಬಿಚ್ಚಿಸಿ ಮರ್ಮಾಂಗಕ್ಕೆ ‌ಒದ್ದಿದ್ದರಾ ದರ್ಶನ್! ಚಾರ್ಜ್‌ಶೀಟ್‌ನಲ್ಲಿ ಕ್ರೌರ್ಯದ ಅನಾವರಣ

Actor Darshan : ಚಾರ್ಜ್‌ಶೀಟ್‌ನಲ್ಲಿ ದರ್ಶನ್‌ ಕ್ರೌರ್ಯದ ಅನಾವರಣವಾಗಿದೆ. ರೇಣುಕಾಸ್ವಾಮಿಯ ಪ್ಯಾಂಟ್‌ ಬಿಚ್ಚಿಸಿ ಮರ್ಮಾಂಗಕ್ಕೆ ‌ಒದ್ದಿದ್ದರಿಂದಲೇ ಪ್ರಾಣಹಾರಿ ಹೋಯ್ತಾ? ಇಷ್ಟಕ್ಕೂ ದರ್ಶನ್‌ ಸಿಟ್ಟು ಏನೆಲ್ಲ ಮಾಡಿಬಿಡುತ್ತಾ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Darshan Brutality revealed in chargesheet
Koo

ಬೆಂಗಳೂರು: ಡಿ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ಮೇಲೆ ದರ್ಶನ್ (Actor darshan) ಕೆಂಡಾಮಂಡಲ ಆಗಲು ಕಾರಣವೇನು ಗೊತ್ತಾ? ಅಷ್ಟಕ್ಕೂ ರೇಣುಕಾಸ್ವಾಮಿ ಪವಿತ್ರಗೌಡಗೆ ಏನೇನ್ ಸಂದೇಶಗಳನ್ನು ಕಳುಹಿಸಿದ್ದ. ಆ ಚಾಟಿಂಗ್‌ ಡಿಟೈಲ್ಸ್‌ ಇಲ್ಲಿದೆ.

ದರ್ಶನ್ ಕೋಪಕ್ಕೆ ಕಾರಣವಾಗಿದ್ದು ಎರಡು ಅಶ್ಲೀಲ ವಿಡಿಯೊ, ಒಂದು ಫೋಟೊ. ರೇಣುಕಾಸ್ವಾಮಿ ಪವಿತ್ರಗೌಡ ಫೋಟೊ ಕಂಡು ನಾನು ನಿನ್ನನ್ನ ಅನುಭವಿಸಬೇಕೆಂದು ಮೆಸೇಜ್ ಮಾಡಿದ್ದ. ಮೆಸೇಜ್ ಹಿಂದೆಯೆ ಎರಡು ಅಶ್ಲೀಲ ವಿಡಿಯೊ ಕಳಿಸಿ, ಅಶ್ಲೀಲವಾದ ಸಂದೇಶಗಳ ರವಾನಿಸಿದ್ದ. ಇದಾದ ಬಳಿಕ ರೇಣುಕಾಸ್ವಾಮಿ ತನ್ನ ಮರ್ಮಾಂಗದ ಫೋಟೊವನ್ನು ಪವಿತ್ರಾಗೌಡಗೆ ಕಳಿಸಿದ್ದ.

ಇದೆಲ್ಲವನ್ನೂ ನೋಡಿದ ದರ್ಶನ್‌ಗೆ ತನ್ನೊಳಗೆ ಇದ್ದ ಮೃಗತ್ವ ಹೊರಬಂದಿತ್ತು. ಕೊಳಕು ಭಾಷೆಯಿಂದ ನಿಂದಿಸಿ ರೇಣುಕಾಸ್ವಾಮಿಗೆ ಹಲ್ಲೆ ಮಾಡಿ ಏನೋ ಸೂ.. ಮಗನೇ, ನನ್ನ ಹೆಂಡತಿಗೆ ಕೆಟ್ಟ ಮೆಸೇಜ್ ಮಾಡುತ್ತೀಯಾ? ಎಷ್ಟೋ ಧೈರ್ಯ ನಿಂಗೆ ಎಂದು ಕಾಲಿಂದ ಎದೆ ಭಾಗಕ್ಕೆ ಒದ್ದಿದ್ದ. ಬಳಿಕ ಏಯ್ ಪವನ್ ಇವನ ಪ್ಯಾಂಟ್ ಬಿಚ್ಚೋ ಎಂದ ದರ್ಶನ್‌, ಮರ್ಮಾಂಗಕ್ಕೆ ಒದ್ದಿದ್ದ. ಜಾರ್ಜ್‌ಶೀಟ್‌ನಲ್ಲಿ ದರ್ಶನ್ ಮಿತಿ ಮೀರಿದ ಕ್ರೌರ್ಯದ ಅನಾವರಣವಾಗಿದೆ.

ಪವಿತ್ರಾ ಮೊಬೈಲ್‌ನಲ್ಲಿ ಏನೆಲ್ಲ ಇತ್ತು?

ಐಫೋನ್‌ 15 ಪ್ರೋ ಮ್ಯಾಕ್ಸ್‌ ಬಳಸುತ್ತಿದ್ದ ಪವಿತ್ರಾ ಮನೋಜ್‌ ಹೆಸರಿನಲ್ಲಿ ಸಿಮ್‌ ಇತ್ತು. ದರ್ಶನ್ ಹೆಸರನ್ನು “D” ಎಂದು ಸೇವ್ ಮಾಡಿದ್ದರೆ, ಎ3 ಪವನ್ ಹೆಸರನ್ನು ಪವನ್ ನ್ಯೂ ಎಂದು ಸೇವ್ ಮಾಡಿದ್ದರು. ನಂದೀಶ್‌ ಹೆಸರನ್ನು ನಂದಿ ಪವನ್‌, ಧನರಾಜ್ ಹೆಸರನ್ನು ರಾಜು, ವಿನಯ್‌ ಹೆಸರನ್ನ ವಿನಯ್‌ ಹಾಗೂ ನಾಗರಾಜ್ ಹೆಸರನ್ನು ನಾಗು ಮೈಸೂರು, ಲಕ್ಷ್ಮಣ್‌ ಹೆಸರನ್ನು ಲಕ್ಷ್ಮಣ್‌ ಡಿ ಹಾಗೂ ಆಪ್ತ ಗೆಳತಿ ಸಮತಾಳನ್ನು ಸ್ಯಾಮ್‌ ಹೆಸರಲ್ಲಿ ಸೇವ್ ಮಾಡಿದ್ದಾರೆ. ಪವಿತ್ರಾ ಮೊಬೈಲ್‌ನಲ್ಲಿ ಪ್ರಕರಣ ಸಂಬಂಧ 65 ಫೋಟೊಗಳು ಪತ್ತೆಯಾಗಿವೆ. 17 ಸ್ಕೀನ್‌‌ ಶಾಟ್‌ಗಳು, ರೇಣುಕಾ ಕಳಿಸಿದ್ದ 20 ಅಶ್ಲೀಲ ಸಂದೇಶಗಳ ಸ್ಕ್ರೀನ್‌ಶಾಟ್‌ ಇವೆ.

ನಟ ದರ್ಶನ್‌ ಬಳಸುತ್ತಿದ್ದ ಐಫೋನ್‌ 15 ಪ್ರೋನಲ್ಲಿ ಗೆಳತಿ ಹೆಸರನ್ನು 3 ಹೆಸರಲ್ಲಿ ಸೇವ್ ಮಾಡಿದ್ದರು. PAVI, PAVIIII, PVITRA GOWDA ಹೆಸರಲ್ಲಿ ಸೇವ್‌ ಮಾಡಿ ಪವಿತ್ರ ಜತೆ ಚಾಟಿಂಗ್‌ ನಡೆಸಿದ್ದಾರೆ. ಡಿಲೀಟ್‌ ಆಗಿದ್ದ ವಾಟ್ಟಾಪ್‌ ಕಾಲ್ ರಿಟ್ರೀವ್‌ ವೇಳೆ ಪತ್ತೆಯಾಗಿದೆ. ವಿನಯ್ ಜತೆ ಚಾಟಿಂಗ್‌, ಮ್ಯಾನೇಜರ್‌ ನಾಗರಾಜ್ ಜತೆ ವಾಟ್ಸಾಪ್‌ ಕಾಲ್ ಸಂಭಾಷಣೆ ಇದೆ. ಜೂನ್‌ 8ರಿಂದ 11ರವೆರಗೂ 32 ಬಾರಿ ವಾಟ್ಸಾಪ್ ಕಾಲ್ ಮಾಡಲಾಗಿದ್ದು, ಪ್ರದೋಶ್‌ ಜತೆ 10 ಬಾರಿ ವಾಟ್ಸಾಪ್‌‌‌ ಕಾಲ್‌ನಲ್ಲಿ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: Actor Darshan:ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸರೆಂಡರ್‌ ಆಗು ಎಂದಾಗ ದರ್ಶನ್‌ ಅಭಿಮಾನಿ ರಾಘವೇಂದ್ರ ನಿರಾಕರಿಸಿದ್ದೇಕೆ?

ವಿನಯ್‌ ಮೊಬೈಲ್‌ನಲ್ಲಿ ಪವಿತ್ರಾಳ ಹೆಸರು ಡಿ ಬಾಸ್‌ ವೈಫ್‌ ಎಂದು ಸೇವ್‌

ಇನ್ನು ವಿನಯ್‌ ಮೊಬೈಲ್‌ನಲ್ಲಿ ಪವಿತ್ರಾ ಗೌಡ ಫೋನ್‌ ನಂಬರ್‌ ಅನ್ನು ಡಿ-ಬಾಸ್‌ ವೈಫ್‌ ಎಂದು ಸೇವ್‌ ಆಗಿದೆ. ಪ್ರದೂಷ್‌, ಪವನ್‌ ಜತೆ 42 ಬಾರಿ ವಾಟ್ಸಾಪ್‌ ಕಾಲ್‌ ಸಂಭಾಷಣೆ ನಡೆದಿದೆ. ಪ್ರಕರಣ ಸಂಬಂಧ 10 ಫೋಟೊಗಳು ರಿಟ್ರೀವ್‌ನಲ್ಲಿ ಪತ್ತೆಯಾಗಿದೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಲ್ಲಿ ಹಿಂಬಾಲಿಸಿ ತೆಗೆದ ಫೋಟೊ, ಪಟ್ಟಣಗೆರೆ ಶೆಡ್‌‌ಗೆ ಕರೆತಂದಾಗ, ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿರುವ ಫೋಟೊ ಸಿಕ್ಕಿದೆ. ಜತೆಗೆ ರೇಣುಕಾಸ್ವಾಮಿ ಶವವನ್ನು ಸುಮನಹಳ್ಳಿ ರಾಜಕಾಲುವೆ ಬಳಿ ಬಿಸಾಡಿರುವ ಫೋಟೊ ಲಭ್ಯವಾಗಿದೆ.

ದೀಪಕ್‌ ಮೊಬೈಲ್‌ನಲ್ಲಿ ಅಡಗಿದ್ದ ರಹಸ್ಯ

ದೀಪಕ್‌ ಮೊಬೈಲ್‌ನಲ್ಲಿ 30 ನಿಮಿಷದ ಆಡಿಯೊ ಸಂಭಾಷಣೆ ಪತ್ತೆಯಾಗಿದೆ. ರೇಣುಕಾಸ್ವಾಮಿ ಕೊಲೆಗೆ ಸಂಬಂಧಿಸಿದಂತೆ ನಡೆಸಿರುವ ಮಾತುಕತೆ ಇದಾಗಿದೆ. ಸ್ವಾಮಿ ಕೊಲೆಗೆ ಸಂಬಂಧಿಸಿದಂತೆ 5 ಆಡಿಯೋ ಸಂಭಾಷಣೆ ಪತ್ತೆಯಾಗಿದೆ. ಜತೆಗೆ ಮತ್ತೊಬ್ಬ ಆರೋಪಿ ಅನುಕುಮಾರ್‌ ಮೊಬೈಲ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ 2 ವಿಡಿಯೊ ಸಿಕ್ಕಿದೆ. ಆರೋಪಿ ಪ್ರದೂಷ್‌ ಜತೆ ನಡೆಸಿರುವ ಚಾಟಿಂಗ್‌ ಸಿಕ್ಕಿದೆ. ಅನುಕುಮಾರ್‌ ಹಾಗೂ ರಾಘವೇಂದ್ರ ಪತ್ನಿ ಸಹನಾ ಜತೆ ನಡೆಸಿರುವ ಸಂಭಾಷಣೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Deadly accidents on the day of Ganesh festival Five killed on the spot
ಕ್ರೈಂ5 mins ago

Road Accident : ಗಣೇಶ ಹಬ್ಬದ ದಿನವೇ ಡೆಡ್ಲಿ ಆ್ಯಕ್ಸಿಡೆಂಟ್ಸ್‌; ಐವರು ಸ್ಥಳದಲ್ಲೇ ಸಾವು

I lost control of my eyes while driving the car Film director Nagashekhar
ಬೆಂಗಳೂರು2 hours ago

Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ; ಚಿತ್ರ ನಿರ್ದೇಶಕ ನಾಗಶೇಖರ್‌

her husband was having an illicit relationship Suicide by setting herself on fire
ಬೆಂಗಳೂರು ಗ್ರಾಮಾಂತರ2 hours ago

Self Harming : ಪತಿಯ ಅನೈತಿಕ ಸಂಬಂಧಕ್ಕೆ ಪತ್ನಿ ಬಲಿ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Karnataka weather Forecast
ಮಳೆ10 hours ago

Karnataka Weather : ರಾಜ್ಯಾದ್ಯಂತ ಇಂದಿನಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಟ

Dina bhavishya
ಭವಿಷ್ಯ10 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Hotel staff misleads police while arresting actor Darshan
ಸ್ಯಾಂಡಲ್ ವುಡ್24 hours ago

Actor Darshan: ನಟ ದರ್ಶನ್‌ನನ್ನು ಬಂಧಿಸುವಾಗ ಪೊಲೀಸರಿಗೆ ದಾರಿ ತಪ್ಪಿಸಿದ್ದ ಹೋಟೆಲ್‌ ಸಿಬ್ಬಂದಿ!

Darshan Brutality revealed in chargesheet
ಸ್ಯಾಂಡಲ್ ವುಡ್1 day ago

Actor Darshan : ರೇಣುಕಾಸ್ವಾಮಿಯ ಪ್ಯಾಂಟ್‌ ಬಿಚ್ಚಿಸಿ ಮರ್ಮಾಂಗಕ್ಕೆ ‌ಒದ್ದಿದ್ದರಾ ದರ್ಶನ್! ಚಾರ್ಜ್‌ಶೀಟ್‌ನಲ್ಲಿ ಕ್ರೌರ್ಯದ ಅನಾವರಣ

Why did Darshans fan Raghavendra refuse to surrender
ಸ್ಯಾಂಡಲ್ ವುಡ್1 day ago

Actor Darshan:ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸರೆಂಡರ್‌ ಆಗು ಎಂದಾಗ ದರ್ಶನ್‌ ಅಭಿಮಾನಿ ರಾಘವೇಂದ್ರ ನಿರಾಕರಿಸಿದ್ದೇಕೆ?

actor darshan
ಸ್ಯಾಂಡಲ್ ವುಡ್1 day ago

Actor Darshan : ದರ್ಶನ್‌ ಕೊಟ್ಟ ಮೂರೇ ಹೊಡೆತಕ್ಕೆ ಜೀವ ಬಿಟ್ಟಿದ್ದ ರೇಣುಕಾಸ್ವಾಮಿ!; ಆ 45 ನಿಮಿಷ ಶೆಡ್‌ನಲ್ಲಿ ನಡೆದಿದ್ದೇನು?

Haryana Naxal caught by police after coming to see girlfriend in Bengaluru
ಬೆಂಗಳೂರು1 day ago

Naxal arrested‌ : ಬೆಂಗಳೂರಿನಲ್ಲಿ ಗರ್ಲ್‌ ಫ್ರೆಂಡ್‌ ನೋಡಲು ಬಂದು ಸಿಕ್ಕಿಬಿದ್ದ ಹರಿಯಾಣದ ನಕ್ಸಲ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 week ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 week ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌