Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್ - Vistara News

ಬೆಂಗಳೂರು

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Road Accident : ವೇಗವಾಗಿ ಬಂದ ಆಂಬ್ಯುಲೆನ್ಸ್‌ವೊಂದು ನಿಂತಿದ್ದ ಕಾರಿಗೆ ಗುದ್ದಿದೆ. ಈ ವೇಳೆ ಚಾಲಕ ಗಾಬರಿಯಲ್ಲಿ ಬ್ರೇಕ್‌ ತುಳಿಯುವ ಬದಲು ಮತ್ತೆ ಎಕ್ಸಿಲೇಟರ್ ತುಳಿದು ಸರಣಿ ಅಪಘಾತಕ್ಕೆ ಮಾಡಿದ್ದಾನೆ. ಅದೃಷ್ಟವಶಾತ್‌ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

Road Accident in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಆಂಬ್ಯುಲೆನ್ಸ್‌ ಚಾಲಕನ (Ambulance driver) ಎಡವಟ್ಟಿನಿಂದ ಸರಣಿ ಅಪಘಾತ (Road Accident) ಸಂಭವಿಸಿದೆ. ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ. ಶುಕ್ರವಾರ ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಘಟನೆ ನಡೆದಿದೆ. ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.

ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ಆಂಬ್ಯುಲೆನ್ಸ್‌ ಚಾಲಕ ಸುಮಂತ್‌ ಎಂಬಾತ ಮಾರ್ಕೆಟ್‌ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬರುತ್ತಿದ್ದ. ಈ ವೇಳೆ ನಿಯಂತ್ರಣ ಸಿಗದೆ ಪಾರ್ಕಿಂಗ್‌ ಸ್ಥಳದಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ.

ಸರಣಿ ಅಪಘಾತಕ್ಕೆ ಟೆಕ್ಷನ್‌ ಆದ ಚಾಲಕ ಬ್ರೇಕ್ ತುಳಿಯುವ ಬದಲು ಎಕ್ಸಿಲೇಟರ್ ತುಳಿದು ಮತ್ತೆ ಅವಾಂತರ ಸೃಷ್ಟಿಸಿದ್ದಾನೆ. ಈ ವೇಳೆ ಕಾರುಗಳಿಗೆ ಗುದ್ದಿದ ಪರಿಣಾಮ ಸಂಪೂರ್ಣ ಜಖಂಗೊಂಡಿವೆ. ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಂಬ್ಯುಲೆನ್ಸ್ ಚಾಲಕ ಸುಮಂತ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

ಕಲಬುರಗಿ: ಬೆಳಗಿನ ಜಾವ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಬೈಕ್‌ ಸವಾರ ದಾರುಣವಾಗಿ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಢೋಗಿ ನಾಲಾ ಬಳಿ‌ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಬೈಕ್ ಸವಾರ ಅರ್ಜುನ್ ಎಂಬಾತ ಮೃತಪಟ್ಟಿದ್ದಾರೆ. ಅರ್ಜುನ್‌ ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ನಿವಾಸಿಯಾಗಿದ್ದಾರೆ. ಅರ್ಜುನ್‌ ತಮ್ಮ ಪತ್ನಿ ಜತೆಗೆ ಬೆಳಗಿನ ಜಾವ ಪುಣೆಯಿಂದ ಯಾದಗಿರಿ ಕಡೆ ಬೈಕ್ ಮೇಲೆ ಹೊರಟಿದ್ದರು.

ಈ ವೇಳೆ ವೇಗವಾಗಿ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್‌ನಿಂದ ಎಗರಿ ಬಿದ್ದಾಗ ಅರ್ಜುನ್‌ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಜತೆಯಲ್ಲಿದ್ದ ಅರ್ಜುನ್‌ ಪತ್ನಿಗೂ ಗಾಯವಾಗಿದ್ದು, ಪತಿ ಒದ್ದಾಡಿ ಸಾವನ್ನಪ್ಪಿದ್ದು ಕಂಡು ಆಘಾತಕ್ಕೆ ಒಳಗಾಗಿದ್ದರು.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ನರೋಣಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಹಾಗೂ ಪುಡಿ ಪುಡಿಯಾಗಿದ್ದ ಬೈಕ್‌ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

Anjali Nimbalkar: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ನೆರವಾದ ಅಂಜಲಿ ನಿಂಬಾಳ್ಕರ್

ಕಾರವಾರ: ಅಪಘಾತದಲ್ಲಿ (Road Accident) ಗಾಯಗೊಂಡು ರಸ್ತೆ ಬದಿ ನರಳುತ್ತ ಬಿದ್ದಿದ್ದ ಯುವಕನನ್ನು ತಮ್ಮದೇ ಕಾರಿನಲ್ಲಿ ಉತ್ತರ ಕನ್ನಡ ಲೋಕಸಭೆ ಚುನಾವಣಾ ಅಭ್ಯರ್ಥಿ (Uttara Kannada lok sabha election candidate) ಅಂಜಲಿ ನಿಂಬಾಳ್ಕರ್‌ (Anjali Nimbalkar) ಆಸ್ಪತ್ರೆಗೆ ಸಾಗಿಸಿ ಮಾನವೀಯತೆ (Humanity) ಮೆರೆದಿದ್ದಾರೆ.

ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಯಲ್ಲಾಪುರ- ಶಿರಸಿ ನಡುವೆ ಪ್ರಯಣಿಸುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಯುವಕನನ್ನು ಗಮನಿಸಿದ್ದರು. ವಿನಾಯಕ್ ಶೆಟ್ಟರ್ ಎಂಬ ಯುವಕ ಬೈಕ್‌ ಸ್ಕಿಡ್‌ ಆಗಿ ಬಿದ್ದು ಗಾಯಗೊಂಡಿದ್ದರು.

ಹಳಿಯಾಳದಿಂದ ಶಿರಸಿಗೆ ಹೋಗುವಾಗ ಯುವಕನನ್ನು ಗಮನಿಸಿದ ಅಂಜಲಿ ನಿಂಬಾಳ್ಕರ್, ಕಾರು ನಿಲ್ಲಿಸಿ ಗಾಯಗೊಂಡವನನ್ನು ಪರಿಶೀಲಿಸಿದರು. ಸ್ವತಃ ವೈದ್ಯೆಯಾಗಿರುವ ಡಾ.ಅಂಜಲಿ ನಿಂಬಾಳ್ಕರ್ ಸೂಕ್ತ ಪ್ರಥಮ ಉಪಚಾರ ನೀಡಿ ತಕ್ಷಣ ಯುವಕನನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕರೆತಂದರು. ಆಸ್ಪತ್ರೆಯಲ್ಲೂ ಚಿಕಿತ್ಸೆ ವೇಳೆ ಸಿಬ್ಬಂದಿಯೊಂದಿಗಿದ್ದು ನೆರವು ನೀಡಿದರು. ಶಿರಸಿಯ ಪಂಡಿತ್ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಬಿಜೆಪಿಯ ಭದ್ರಕೋಟೆಯನ್ನು ಒಡೆಯುವೆ: ಅಂಜಲಿ

ಅಂಕೋಲಾ: ಜಾತಿ- ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಬಿಜೆಪಿಗರು ಉತ್ತರ ಕನ್ನಡದ ಹೆಸರು ಕೆಡಿಸಿರುವುದನ್ನು ಸರಿಪಡಿಸಲು ನಮಗೆ ಈ ಬಾರಿ ಉತ್ತಮ ಅವಕಾಶವಿದೆ. ನಾನು ಈ ಜಿಲ್ಲೆಯವಳಲ್ಲ ಎನ್ನುವ ಬಿಜೆಪಿಗರು ಕೂಡ ನನ್ನ ಕ್ಷೇತ್ರಕ್ಕೆ ಪ್ರಚಾರಕ್ಕೆ ಬರಲೇಬೇಕು. ಬಹುಶಃ ಅವರಿಗೆ ಖಾನಾಪುರ ಬ್ಲಾಕ್ ಎಲ್ಲಿದೆ ಎನ್ನುವುದೂ ಗೊತ್ತಿರಲಿಕ್ಕಿಲ್ಲ. ಯಾಕೆಂದರೆ ಅಲ್ಲಿಗೆ ಅವರು ಬರುವುದೇ ಅಪರೂಪ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (Uttara Kannada News) ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ವ್ಯಂಗ್ಯವಾಡಿದರು.

ಅಂಕೋಲಾದ ನಾಡವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ 30 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ ಎಂದು ಹೇಳುತ್ತಾರೆ. ಆದರೆ ಈಗ ಪ್ರತಿ ಕಾರ್ಯಕರ್ತರೂ “ನಾನೇ ಅಂಜಲಿ ನಿಂಬಾಳ್ಕರ್ʼ ಎಂಬಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಈ ಭದ್ರಕೋಟೆಯನ್ನು ಒಡೆಯಲು ಹೆಚ್ಚೇನೂ ಶ್ರಮ ಬೇಕಿಲ್ಲವೆಂದೆನಿಸುತ್ತಿದೆ. ರಾಜಕೀಯ ನನಗೆ ಹೊಸದಲ್ಲ. ಖಾನಾಪುರದಲ್ಲಿ ಕೇವಲ ಮಹಿಳೆಯರಿಗಾಗಿ ಎಂಸಿಎಚ್ ಆಸ್ಪತ್ರೆ ಕಟ್ಟಿದ್ದೇನೆ. ಕಾಡುಪ್ರದೇಶದಲ್ಲಿ ಅಂಥದ್ದೊಂದು ಆಸ್ಪತ್ರೆ ಕಟ್ಟಿಸಬೇಕೆಂಬುದು ನನ್ನ ಕನಸಾಗಿತ್ತು. ಬಿಜೆಪಿ ಸರ್ಕಾರವಿದ್ದರೂ ಅಂಥ ದೊಡ್ಡ ಆಸ್ಪತ್ರೆ ಕಟ್ಟಿ ತೋರಿಸಿದ್ದೀನಿ. ಜಿಲ್ಲೆಯಲ್ಲೂ ಸುಸಜ್ಜಿತ ಆಸ್ಪತ್ರೆ ಆಗಬೇಕೆಂಬ ಆಸೆ ಇಲ್ಲಿಯ ಜನರದ್ದಿದೆ. ಅದನ್ನು ಮಾಡಲು ಪ್ರಯತ್ನಿಸೋಣʼʼ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

VISTARANEWS.COM


on

ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸಚಿವ ಖಾತೆ ಹಂಚಿಕೆಯ ನಂತರ ರಾಮಲಿಂಗಾರೆಡ್ಡಿ ರಾಜೀನಾಮೆ, ಮುನಿಯಪ್ಪ ಅಸಮಾಧಾನ ಬಹಿರಂಗಗೊಂಡಿದ್ದು, ಈ ಕುರಿತು ಮೊದಲ ಬಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಮಲಿಂಗಾ ರೆಡ್ಡಿ ಅವರಿಗೆ ನಾವು ಮಾತು ಕೊಟ್ಟಿದ್ದು ನಿಜ. ಅವರು ಹಿರಿಯ ನಾಯಕರು. ಬೆಂಗಳೂರಿನ ಅಭಿವೃದ್ಧಿ ಜವಾಬ್ದಾರಿ ನೀಡುವ ಕುರಿತು ಚರ್ಚೆ ನಡೆದಿತ್ತು. ಆದರೆ ಹೈಕಮಾಂಡ್ ತೀರ್ಮಾನ ಮಾಡಿದೆ. ಅದನ್ನು ಮೀರಿ ನಾವು ಏನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.

“ರಾಮಲಿಂಗಾ ರೆಡ್ಡಿ ಅವರು ಸದ್ಯ ಹೊರಗಡೆ ಇದ್ದಾರೆ. ಅವರು ಬಂದ ಬಳಿಕ ಖುದ್ದಾಗಿ ನಾನೇ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಈ ವಿಚಾರವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಪ್ರಯತ್ನಿಸುತ್ತೇನೆ” ಎಂದರು.

ಇನ್ನು ಕೆ.ಹೆಚ್‌. ಮುನಿಯಪ್ಪ ಅವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿ, ಅವರ ಜೊತೆಯೂ ಮಾತಾಡಿದ್ದೇನೆ. ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ನಿರ್ವಹಿಸುತ್ತೇನೆಂದು ಅವರು ಹೇಳಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

Continue Reading

Latest

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

VISTARANEWS.COM


on

ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್‌ ಗಾಂಧಿ ಅವರೊಂದಿಗೆ ವಿಧಾನಸೌಧಕ್ಕೆ ಆಗಮಿಸಿ, ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ.

ಎರಡನೇ ಅಭ್ಯರ್ಥಿಯಾಗಿ ಪವನ್‌ ಖೇರಾ ಹಾಗೂ ಮೂರನೇ ಅಭ್ಯರ್ಥಿಯಾಗಿ ಮನ್ಸೂರ್‌ ಆಲಿ ಖಾನ್‌ ನಾಳೆ ಜೂನ್‌ 6 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

Continue Reading

Latest

ಲೋಕಭವನದಲ್ಲಿ ಡಿಕೆಶಿ ಪಟ್ಟಾಭಿಷೇಕಕ್ಕೆ ಭರ್ಜರಿ ಸಿದ್ಧತೆ

VISTARANEWS.COM


on

ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಕಾರ್ಯಕ್ರಮದ ವೇದಿಕೆಯನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಸಂಪ್ರದಾಯ ಮತ್ತು ಆಧುನಿಕ ವ್ಯವಸ್ಥೆಗಳ ಸಮನ್ವಯಕ್ಕೆ ಒತ್ತು ನೀಡಲಾಗಿದೆ.

ಈ ಬಾರಿ ಪ್ರಮಾಣ ವಚನ ಸಮಾರಂಭದಲ್ಲಿ ಹೊಸ ಸಂಪ್ರದಾಯಕ್ಕೆ ಚಾಲನೆ ನೀಡಲು ಸಿದ್ಧತೆ ನಡೆಸಲಾಗಿದೆ. ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ಪೂರ್ವಾಭಿಮುಖವಾಗಿ ನಿಂತು ಪ್ರಮಾಣ ವಚನ ಸ್ವೀಕರಿಸಲಿದ್ದು, ಅದಕ್ಕೆ ಅನುಕೂಲವಾಗುವಂತೆ ವೇದಿಕೆಯ ವಿನ್ಯಾಸ ರೂಪಿಸಲಾಗಿದೆ. ಜ್ಯೋತಿಷಿಗಳ ಸಲಹೆ ಹಾಗೂ ಶುಭ ಮುಹೂರ್ತದ ಆಧಾರದ ಮೇಲೆ ವೇದಿಕೆ ಮತ್ತು ಆಸನ ವ್ಯವಸ್ಥೆಗಳನ್ನು ಸಿದ್ಧಪಡಿಸಲಾಗಿದೆ ಎನ್ನಲಾಗಿದೆ.

ಪದಗ್ರಹಣ ವೇದಿಕೆಯ ಮೇಲೆ ಸುಮಾರು 20 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಗಣ್ಯರು ಮತ್ತು ವಿಶೇಷ ಆಹ್ವಾನಿತರಿಗೆ ಪ್ರತ್ಯೇಕ ಆಸನಗಳನ್ನು ಕಲ್ಪಿಸಲಾಗಿದೆ. ಸ್ವಾಮೀಜಿಗಳಿಗಾಗಿ ವೇದಿಕೆಯ ಸಮೀಪ ಸ್ವಲ್ಪ ಎತ್ತರದ ಪ್ರತ್ಯೇಕ ಆಸನ ವ್ಯವಸ್ಥೆಯೂ ಮಾಡಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳ ಅನುಕೂಲಕ್ಕಾಗಿ ಗ್ಲಾಸ್ ಹೌಸ್ ಆವರಣದಲ್ಲಿ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಒಟ್ಟು 3,500 ಜನರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ, ಕಾರ್ಯಕ್ರಮವನ್ನು ಎಲ್ಲರೂ ವೀಕ್ಷಿಸಲು ಲೋಕಭವನದ ಒಳಭಾಗದಲ್ಲಿ ಆರು ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ.

ಈ ಸಮಾರಂಭಕ್ಕಾಗಿ 2 ಸಾವಿರಕ್ಕೂ ಹೆಚ್ಚು ವಿಐಪಿ ಪಾಸ್‌ಗಳನ್ನು ವಿತರಿಸಲಾಗಿದ್ದು, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಭದ್ರತೆ ಹಾಗೂ ಪ್ರವೇಶ ವ್ಯವಸ್ಥೆಗಳನ್ನು ಕೂಡ ಕಟ್ಟುನಿಟ್ಟಾಗಿ ರೂಪಿಸಲಾಗಿದೆ.

ಇನ್ನು ಲೋಕಭವನದ ಮುಖ್ಯ ಪ್ರವೇಶ ದ್ವಾರವನ್ನು ಅದ್ಧೂರಿಯಾಗಿ ಅಲಂಕರಿಸಲಾಗಿದ್ದು, ದ್ವಾರದ ಮುಂಭಾಗದಲ್ಲಿ ಬೃಹತ್ ಕಮಾನು ನಿರ್ಮಿಸಲಾಗಿದೆ. ಕಮಾನಿಗೆ ಬಣ್ಣ ಬಣ್ಣದ ವಸ್ತ್ರಗಳು ಹಾಗೂ ವಿವಿಧ ಬಗೆಯ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ವಿಶೇಷ ಮೆರಗನ್ನು ತಂದಿದೆ. .

ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.

Continue Reading

Latest

ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ರಾಹುಲ್ ಗಾಂಧಿಗೆ ಆಹ್ವಾನ

VISTARANEWS.COM


on

ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.

ನಾಳೆ ಜೂನ್‌ 3 ರಂದು ಸಂಜೆ 4:05ಕ್ಕೆ ಬೆಂಗಳೂರಿನ ಲೋಕಭವನದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರಲಿದ್ದಾರೆ.

ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಾಳೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ ಸೇರಿದಂತೆ ಪಕ್ಷದ ಹಲವು ರಾಷ್ಟ್ರೀಯ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಹಾಗೂ ಖರ್ಗೆ ಅವರಿಗೆ ಈಗಾಗಲೇ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.

Continue Reading
Advertisement
Latest4 hours ago

ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

Latest7 hours ago

ಸಿಇಟಿ ಫಲಿತಾಂಶ ಪ್ರಕಟ

ಅವಿಭಾಗೀಕೃತ8 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ಕಗ್ಗಂಟಿಗೆ ತೆರೆ? ಸುರ್ಜೇವಾಲಾ ಮಾತುಕತೆ ಯಶಸ್ವಿ?

Latest1 day ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest1 day ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest1 day ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest1 day ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest1 day ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest1 day ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest1 day ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌