Road Accident: ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು - Vistara News

ಬೆಂಗಳೂರು

Road Accident: ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

ಅತಿವೇಗವಾಗಿ ಬೈಕ್‌ನಲ್ಲಿ ಬಂದ ಯುವಕ ನಿಂತಿದ್ದ ಕಸದ ಲಾರಿಗೆ ಡಿಕ್ಕಿ ಹೊಡೆದು (Road Accident) ಸಾವಿಗೀಡಾಗಿದ್ದಾನೆ.

VISTARANEWS.COM


on

bbmp lorry
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಸ್ತೆ ಬದಿಯಲ್ಲಿ ಪಾರ್ಕ್ ಮಾಡಿದ್ದ ಬಿಬಿಎಂಪಿ ಕಸದ ಲಾರಿಗೆ ಅತಿ ವೇಗವಾಗಿ ಬೈಕ್‌ನಲ್ಲಿ ಬಂದು ಗುದ್ದಿದ ಪರಿಣಾಮ (Road Accident) ಯುವಕನೊಬ್ಬ ಮೃತಪಟ್ಟಿದ್ದಾನೆ.

ಬನಶಂಕರಿ ಮಾರ್ಗದಿಂದ ಸೌತ್ ಎಂಡ್ ಸರ್ಕಲ್ ಕಡೆ ಬೈಕ್‌ನಲ್ಲಿ ಹೊರಟಿದ್ದ ಯುವಕ ಯಶವಂತ್, ನಿಂತಿದ್ದ ಬಿಬಿಎಂಪಿ ಕಸದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ರಸ್ತೆ ಖಾಲಿಯಿದ್ದ ಕಾರಣ ಅತಿವೇಗವಾಗಿ ಬೈಕ್‌ನಲ್ಲಿ ಬರುತ್ತಿದ್ದ ಎನ್ನಲಾಗಿದೆ. ಯುವಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ತಡರಾತ್ರಿ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌, ಲಾರಿಯ ಹಿಂಬದಿಯಲ್ಲಿ ಅರ್ಧದಷ್ಟು ಒಳಗೆ ಹೋಗಿ ಸಿಲುಕಿಕೊಂಡಿದೆ. ಯುವಕ ಬೈಕ್ ಸಮೇತ ಲಾರಿಯೊಳಗೆ ಸಿಲುಕಿಕೊಂಡಿದ್ದ. ಮೃತದೇಹ ಹೊರಗೆ ತೆಗೆಯಲು ಪೊಲೀಸರು ನಾಲ್ಕೈದು ಗಂಟೆ ಹರಸಾಹಸ ಪಟ್ಟರು.

ಹಿಟ್ ಆ್ಯಂಡ್ ರನ್‌ಗೆ ಬೈಕ್ ಸವಾರ ಬಲಿ

ರಾಜಧಾನಿಯಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರರೊಬ್ಬರು ಬಲಿಯಾಗಿದ್ದಾರೆ. ಕೆಂಗೇರಿ ಸಮೀಪದ ಗಾಣಕಲ್ ರಸ್ತೆಯಲ್ಲಿ ದುರ್ಘಟನೆ ನಡೆದಿದೆ. ಅಜಯ್ ಕುಮಾರ್ ಮೃತ ಬೈಕ್ ಸವಾರ.

ಚಿಕ್ಕೇಗೌಡನಪಾಳ್ಯ ಕಡೆಯಿಂದ ಉತ್ತರಹಳ್ಳಿ ರಸ್ತೆ ಕಡೆಗೆ ವೇಗವಾಗಿ ತೆರಳುತಿದ್ದ ಕಾರ್, ಈ ವೇಳೆ ಮುಂದೆ ಬರುತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಸಂಪೂರ್ಣ ಜಖಂ ಆಗಿದ್ದು, ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಸ್ಥಳದಿಂದ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. KA53MH9090 ಸಂಖ್ಯೆಯ ಕಾರ್ ಚಾಲಕ ಹಿಟ್ ಆ್ಯಂಡ್ ರನ್ ಮಾಡಿದ್ದು, ಸಿಸಿಟಿವಿಯಲ್ಲಿ ದಾಖಲಾಗಿದೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಕಾರು ಚಾಲಕನ ಪತ್ತೆಗಾಗಿ ಶೋಧ ನಡೆಯುತ್ತಿದೆ.

ಇದನ್ನೂ ಓದಿ: Road Accident : ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸವಾರರು ದಾರುಣ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Satish Jarkiholi: ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗುವುದು ತಪ್ಪು; ಎಚ್‌ಡಿಕೆ ಪರ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್!

Satish Jarkiholi: ಮಂಡ್ಯದಲ್ಲಿ ಅಧಿಕಾರಿಗಳು ಜನತಾ ದರ್ಶನಕ್ಕೆ ಯಾಕೆ ಹೋಗಿಲ್ಲವೋ ಗೊತ್ತಿಲ್ಲ. ಯಾರು ಆದೇಶ ಮಾಡಿದ್ದಾರೋ ತಿಳಿಯದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

VISTARANEWS.COM


on

Koo

ಬೆಂಗಳೂರು: ಮಂಡ್ಯದಲ್ಲಿ ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಶುಕ್ರವಾರ ಬೆಳಗ್ಗೆ ಆರೋಪಿದ್ದರು. ಈ ವಿಚಾರದಲ್ಲಿ ಇದೀಗ ಎಚ್‌ಡಿಕೆ ಪರ ಬ್ಯಾಟ್‌ ಬೀಸಿರುವ ಸಚಿವ ಸತೀಶ್ ಜಾರಕಿಹೊಳಿ (satish jarkiholi) ಅವರು, ಕೇಂದ್ರ ಸಚಿವ ಹಾಗೂ ಸಂಸದರು ಸಭೆ ಕರೆದರೆ ಅಧಿಕಾರಿಗಳು ಹೋಗಬೇಕಾಗುತ್ತದೆ. ಅಧಿಕಾರಿಗಳು ಹೋಗದಿರುವುದು ತಪ್ಪಾಗುತ್ತದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಎಂಪಿ ಜಗದೀಶ್ ಶೆಟ್ಟರ್ ಸಭೆ ಕರೆದಾಗ ಡಿಸಿ, ಎಸ್‌ಪಿ ಅಧಿಕಾರಿಗಳು ಹೋಗಿದ್ದರು. ಮಂಡ್ಯದಲ್ಲಿ ಯಾಕೆ ಅಧಿಕಾರಿಗಳು ಹೋಗಿಲ್ಲ ಅಂತ ಗೊತ್ತಿಲ್ಲ. ಯಾರು ಆದೇಶ ಮಾಡಿದ್ದಾರೋ ಗೊತ್ತಿಲ್ಲ. ಸಂಸದರು ಕರೆದ ಸಭೆಗೆ ಅಧಿಕಾರಿಗಳು ಗೈರಾಗುವುದು ತಪ್ಪು ಎಂದು ಅಭಿಪ್ರಾಯ ತಿಳಿಸಿದ್ದಾರೆ.

ಇದನ್ನೂ ಓದಿ | Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

ಎಚ್‌ಡಿಕೆ ಏನು ಹೇಳಿದ್ದರು?

ಮಂಡ್ಯ: ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ನೆನ್ನೆ ಕ್ಯಾಬಿನೆಟ್‌ ಸಭೆಯಲ್ಲಿ ಒಂದು ಸುತ್ತೋಲೆ ಹೊರಡಿದ್ದಾರೆ. ಮುಖ್ಯಮಂತ್ರಿ, ಸಚಿವರಿಗೆಷ್ಟೇ ಜನತಾ ದರ್ಶನಕ್ಕೆ ಅವಕಾಶವಿದೆ ಎಂದಿದ್ದಾರೆ. ಅಧಿಕಾರಿಗಳಿಗೆ ಈಗಾಗಲೇ ಆ ಕುರಿತು ಸೂಚನೆ‌ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದರು.

ಈ ಸರ್ಕಾರದವರು ಚುನಾವಣೆಗೆ ಮುಂಚೆ ರಾಮನಗರದಲ್ಲಿ ಹೇಗೆ ನಡೆದುಕೊಂಡರು? ಡಿ.ಕೆ.ಸುರೇಶ್ ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು. ಜನಸ್ಪಂದನ ಹೆಸರಲ್ಲಿ ಅಧಿಕಾರಿಗಳನ್ನು ಹಳ್ಳಿಹಳ್ಳಿ‌ ತಿರುಗಿಸಿದರು. ಉಸ್ತುವಾರಿ ಸಚಿವರು ಮಾಡಬೇಕಾದ ಸಭೆಗಳನ್ನು ಮಾಡಿದರು. ಅದಕ್ಕೆ ಅನುಮತಿ ಕೊಟ್ಟವರು ಯಾರು, ಯಾವ ರೂಲ್ಸ್ ಇತ್ತು ಎಂದು ಪ್ರಶ್ನಿಸಿದ್ದರು.

ಇವತ್ತು ಕೇಂದ್ರದ ಒಬ್ಬ ಮಂತ್ರಿ, ಜನರ ಅಹವಾಲು ಸ್ವೀಕರಿಸಲು ಬಂದಿದ್ದೇನೆ. ಹೊಸ ನಿಯಾಮವಳಿ ಮೂಲಕ ತಡೆಯಲು ಮುಂದಾಗಿದ್ದಾರೆ. ಇದರಿಂದ ಅವರಿಗೆ ಏನು ದೊರಕಲ್ಲ ಎಂದು ಕಿಡಿಕಾರಿದ್ದರು.

ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

ಮೈಸೂರು: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ (MUDA Scam) ಬಯಲಿಗೆ ಬಂದಿದೆ. ಇಲ್ಲವಾದರೆ ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮಂಡ್ಯದಲ್ಲಿ (Mandya News) ಇಂದು ಜನತಾದರ್ಶನ (Janata Darshana) ನಡೆಸಿದ ಎಚ್‌ಡಿಕೆ, ಅದಕ್ಕೂ ಮುನ್ನ ದೇವಾಲಯ ಭೇಟಿ ನೀಡುವ ಸಂದರ್ಭದಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದರು. ʼನನ್ನ ಜನತಾ ದರ್ಶನ ಕಾರ್ಯಕ್ರಮ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲʼ ಎಂದು ಗುಡುಗಿದರು.

ಮುಡಾ ಹಗರಣ ಬಯಲು ಹಿಂದೆ, ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ ಅಷ್ಟೇ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗಿನಿಂದ ಕುಮ್ಮಕ್ಕು ಕೊಡುತ್ತಿದ್ದಾರೆ. ಈಗ ಸಿಡಿ ಫ್ಯಾಕ್ಟರಿ ಕ್ಲೋಸ್ ಆಗಿದೆ, ಮುಡಾ ವಿಚಾರ ಶುರುವಾಗಿದೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಸಿಎಂ ತಾವು ಕಳೆದುಕೊಂಡ ಸೈಟಿಗೆ 62 ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ. ಇವರಿಗೆ ಬಡವರ ಕಷ್ಟ ಗೊತ್ತಿದೆಯಾ? ಹಾಗೆ ಕೇಳುವ ಸಿಎಂ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ಇತರ ರೈತರಿಗೂ ಹಾಗೇ ಪರಿಹಾರ ಕೊಡಿಸಲಿ. ಕೊಡಿಸ್ತಾರಾ? ಎಂದು ಅವರು ಸವಾಲು ಹಾಕಿದರು.

ನನ್ನ ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಜನತಾ ದರ್ಶನದ ಬಗ್ಗೆಯೇ ಸಚಿವ ಸಂಪುಟದ ಸಭೆ ಕರೆದು ಚರ್ಚೆ ಮಾಡಿದ್ದಾರೆ. ನೀವು ಅಧಿಕಾರಿಗಳನ್ನು ಇದರಿಂದ ದೂರು ಇಡಬಹುದು. ಆದರೆ ಜನರನ್ನು ನನ್ನಿಂದ ದೂರ ಮಾಡಲು ಸಾಧ್ಯವಿಲ್ಲ. ಈ ಹಿಂದೆ ಬೆಂಗಳೂರು ಗ್ರಾಮಂತರದ ಸಂಸದರು ಈ ರೀತಿ ಸಭೆ ಮಾಡಿದ್ದಾಗ ಏನು ಮಾಡ್ತಿದ್ರಿ? ಚುನಾವಣೆಗೆ ಬಂದು ಜನ ಸ್ಪಂದನ ಕಾರ್ಯಕ್ರಮ ಮಾಡಿದಾಗ ಎಲ್ಲಿ ಹೋಗಿದ್ರು? ಈಗ ಜನತಾ ದರ್ಶನ ತಪ್ಪಿಸಲು ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಜನತಾ ದರ್ಶನ ನಿಲ್ಲಿಸಲು ಸಾಧ್ಯವಿಲ್ಲ ಎಂದು ಅವರು ನುಡಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

ಇದಕ್ಕೂ ಮುನ್ನ ಅವರು ಮಂಡ್ಯ ಕಾಳಿಕಾಂಬ ದೇವಾಲಯಕ್ಕೆ ಭೇಟಿ ನೀಡಿದರು. ಅಲ್ಲಿ ದೇವಾಲಯದ ಮುಂದೆ ಬಿಜೆಪಿ ನಾಯಕರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಲ್ವ ಮರಕ್ಕೆ ಕಟ್ಟಿದ್ದ ಗೆಲುವಿನ ಗಂಟು ಬಿಚ್ಚಿ ದೇವಿಗೆ ಪೂಜೆ ಸಲ್ಲಿಸಿದರು. ಚುನಾವಣೆ ವೇಳೆ ಕುಮಾರಸ್ವಾಮಿ ಗೆಲುವಿಗಾಗಿ ಪ್ರಾರ್ಥಿಸಿ ಕಾರ್ಯಕರ್ತರು ಈ ಹರಕೆ ಕಟ್ಟಿದ್ದರು. ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಕೆ ಬಳಿಕ ಅಂಬೇಡ್ಕರ್ ಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಾವಿರಾರು ಮಂದಿ ಮುಂಜಾನೆಯಿಂದಲೇ ಕೇಂದ್ರ ಸಚಿವರ ಜನತಾ ದರ್ಶನಕ್ಕಾಗಿ ಆಗಮಿಸಿದ್ದಾರೆ.

Continue Reading

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

Bengaluru News: ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆಯ 20ನೇ ವರ್ಷದ ಸಂಭ್ರಮೋತ್ಸವದ ಅಂಗವಾಗಿ ಜುಲೈ 6 ಮತ್ತು 7 ರಂದು ‘ನಾದ ನೃತ್ಯಾನುಭವʼ ವಿಶೇಷ ಗಾಯನ, ವಾದನ ಮತ್ತು ನೃತ್ಯ ಕಾರ್ಯಕ್ರಮ ಆಯೋಜಿಸಿದೆ.

VISTARANEWS.COM


on

natana Tarangini 20th anniversary celebration on July 6 and 7 in Bengaluru
Koo

ಬೆಂಗಳೂರು: ನಗರದ ಕುಮಾರಸ್ವಾಮಿ ಬಡಾವಣೆಯ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆಯ 20ನೇ ವರ್ಷದ ಸಂಭ್ರಮೋತ್ಸವದ ಅಂಗವಾಗಿ ಜುಲೈ 6 ಮತ್ತು 7 ರಂದು ‘ನಾದ ನೃತ್ಯಾನುಭವʼ ವಿಶೇಷ ಗಾಯನ, ವಾದನ ಮತ್ತು ನೃತ್ಯ ಕಾರ್ಯಕ್ರಮ (Bengaluru News) ಆಯೋಜಿಸಿದೆ.

ಬೆಂಗಳೂರಿನ ಜಯನಗರ 8ನೇ ಬಡಾವಣೆಯ ಶ್ರೀ ಜಯರಾಮ ಸೇವಾ ಮಂಡಳಿ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ನಟನ ತರಂಗಿಣಿ ಅಕಾಡೆಮಿಯ 5ನೇ ವಾರ್ಷಿಕೋತ್ಸವವೂ ಸಂಗಮಗೊಂಡಿದೆ. ಜು. 6ರ ಶನಿವಾರ ಮಧ್ಯಾಹ್ನ 2.30ಕ್ಕೆ ನಟನ ತರಂಗಣಿ ವಿದ್ಯಾರ್ಥಿಗಳಿಂದ ಗಾಯನ ಮತ್ತು ವಾದ್ಯ ಸಂಗೀತ ಕಾರ್ಯಕ್ರಮದ ಮೂಲಕ ವಾರ್ಷಿಕೋತ್ಸವ ಆರಂಭವಾಗಲಿದೆ.

ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

ಸಂಜೆ 5ಕ್ಕೆ ನಡೆಯುವ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಡುಪಿಯ ರಂಜನಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಪ್ರೊ. ಅರವಿಂದ ಹೆಬ್ಬಾರ್, ಶಿವಮೊಗ್ಗದ ಸಂಗೀತ ಕಾರ್ಯಕ್ರಮಗಳ ಸಂಘಟಕ ಸುಬ್ರಹ್ಮಣ್ಯ ಶಾಸ್ತ್ರಿ, ಚೆನ್ನೈನ ದಾಸಪ್ರಕಾಶ್ ಕುಟುಂಬದ ಕೆ. ಗಂಗಾ ಪ್ರಸಾದ್, ಪುತ್ತೂರಿನ ಕರ್ನಾಟಕ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಶ್ರೀಹರಿ ಭಾಗವಹಿಸಲಿದ್ದಾರೆ.

ಶ್ರೀನಿವಾಸ್‌ಗೆ ನಾದಶ್ರೀ ಪ್ರಶಸ್ತಿ ಪ್ರದಾನ

ಬೆಂಗಳೂರಿನ ಮೃದಂಗ ಮತ್ತು ತಬಲಾ ತಯಾರಕ ವಿದ್ವಾನ್ ಶ್ರೀನಿವಾಸ ಅನಂತ ರಾಮಯ್ಯ ಅವರಿಗೆ ‘ನಾದ ಶ್ರೀʼ ಪ್ರಶಸ್ತಿ ನೀಡಿ, ಸನ್ಮಾನಿಸಲಾಗುವುದು. ಸಂಜೆ 5:30ಕ್ಕೆ ನಟನ ತರಂಗಣಿ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಶೇಷ ನೃತ್ಯ ಪ್ರದರ್ಶನವಿದೆ. ಮೃದಂಗ ಪಕ್ಕವಾದ್ಯದಲ್ಲಿ ವಿದ್ವಾನ್ ಕೆ.ಕೆ. ಭಾನುಪ್ರಕಾಶ್ ಸಹಕಾರ ನೀಡಲಿದ್ದಾರೆ. ಸಂಜೆ 7.30 ಕ್ಕೆ ವಿಶೇಷ ನೃತ್ಯ ಪ್ರಸ್ತುತಿಯಲ್ಲಿ ಚೆನ್ನೈನ ಖ್ಯಾತ ಕಲಾವಿದೆ ವಿದುಷಿ ದಿವ್ಯಾ ವೇಣುಗೋಪಾಲ್ ಭರತನಾಟ್ಯ ಜರುಗಲಿದೆ.

ವಿದ್ಯಾರ್ಥಿಗಳಿಂದ ವಾದ್ಯ ವೈಭವ

ಜುಲೈ 7 ರ ಮಧ್ಯಾಹ್ನ 2 ಗಂಟೆಗೆ ನಟನ ತರಂಗಿಣಿ ಸಂಸ್ಥೆ ವಿದ್ಯಾರ್ಥಿಗಳಿಂದ ಗಾಯನ ಮತ್ತು ವಾದ್ಯ ನೆರವೇರಲಿದೆ. ಸಂಜೆ 6ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಜ್ಯೋತಿಷ್ಯ ಶಾಸ್ತ್ರಜ್ಞ, ಬೇಕಲ್ ಗೋಕುಲಂ ಗೋಶಾಲೆ ಸಂಸ್ಥಾಪಕ ವಿಷ್ಣು ಪ್ರಸಾದ ಹೆಬ್ಬಾರ್ ಮತ್ತು ನಾಗರತ್ನಾ ಹೆಬ್ಬಾರ್, ಬೆಂಗಳೂರಿನ ರಾಮಸೇವಾ ಮಂಡಳಿ ಕಾರ್ಯನಿರ್ವಾಹಕ ಅಭಿಜಿತ್ ವಾದಿರಾಜ್, ಉಡುಪಿಯ ಹಿರಿಯ ಸಂಗೀತ ತಜ್ಞ, ಸಂಯೋಜಕ, ರಂಜನಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಅರವಿಂದ ಹೆಬ್ಬಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಟನ ತರಂಗಿಣಿ ಸಂಸ್ಥಾಪಕ ಅಧ್ಯಕ್ಷೆ ಡಾ. ವೈ.ಜಿ. ಪರಿಮಳಾ, ಕಾರ್ಯದರ್ಶಿಗಳಾದ ವಿದ್ವಾನ್ ನಿಕ್ಷಿತ್ ಪುತ್ತೂರು ಮತ್ತು ವಿದುಷಿ ವೈ. ಜಿ. ಶ್ರೀ ಲತಾ ಉಪಸ್ಥಿತರಿರಲಿದ್ದಾರೆ.

ಸುಬ್ರಹ್ಮಣ್ಯ ಶಾಸ್ತ್ರಿಗೆ ಕಲಾಶ್ರಯ ಪ್ರಶಸ್ತಿ

ಶಿವಮೊಗ್ಗದ ಹಿರಿಯ ಸಂಗೀತ ಸಂಘಟಕ, ಕಲಾ ಪ್ರೇಮಿ ಸುಬ್ರಹ್ಮಣ್ಯ ಶಾಸ್ತ್ರಿ ಅವರಿಗೆ ಇದೇ ವೇದಿಕೆಯಲ್ಲಿ ‘ಕಲಾಶ್ರಯʼ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ನಂತರ ನಡೆಯಲಿರುವ ದ್ವಂದ್ವ ಗಾಯನದಲ್ಲಿ ಲತಾಂಗಿ ಸಹೋದರಿಯರು ಎಂದೇ ಖ್ಯಾತರಾದ ಅರ್ಚನಾ ಮತ್ತು ಸಮನ್ವಿ ಕರ್ನಾಟಕ ಶಾಸ್ತ್ರೀಯ ಸಂಗೀತ ಸುಧೆ ಹರಿಸಲಿದ್ದಾರೆ. ಪಕ್ಕವಾದ್ಯದಲ್ಲಿ ವಿದುಷಿ ಸಿ.ವಿ. ಶ್ರುತಿ (ಪಿಟೀಲು), ವಿದ್ವಾನ್ ಆನೂರು ಅನಂತ ಕೃಷ್ಣ ಶರ್ಮ(ಮೃದಂಗ), ವಿದುಷಿ ಸುಕನ್ಯಾ ರಾಮಗೋಪಾಲ್ (ಘಟಂ) ಮತ್ತು ವಿದ್ವಾನ್ ಪಯ್ಯನೂರ್ ಗೋವಿಂದ ಪ್ರಸಾದ್ (ಮೋರ್ಸಿಂಗ್) ಸಾಥ್ ನೀಡಲಿರುವುದು ವಿಶೇಷ. ಕಲಾರಸಿಕರು ಭಾಗವಹಿಸುವಂತೆ ಸಂಗೀತ ಮತ್ತು ನೃತ್ಯ ‘ಉಭಯ ಕಲಾ ವಿದುಷಿʼ ವೈ.ಜಿ. ಶ್ರೀಲತಾ ಕೋರಿದ್ದಾದ್ದಾರೆ.

ಇದನ್ನೂ ಓದಿ: Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

ಸಂಗೀತ ಶಿಕ್ಷಣ ವ್ಯಕ್ತಿತ್ವಕ್ಕೆ ಸಂಸ್ಕಾರ ರೂಢಿಸಿ ಬದುಕನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ಮನಸ್ಸಿನ ಕಲಾತ್ಮಕ ಭಾಗವನ್ನು ವ್ಯಕ್ತಪಡಿಸಲು ಅನುವು ಮಾಡಿಕೊಡುತ್ತದೆ. ವ್ಯಕ್ತಿಯ ಭಾವನಾತ್ಮಕ, ಬೌದ್ಧಿಕ ಮತ್ತು ಆಧ್ಯಾತ್ಮಿಕ ಯೋಗಕ್ಷೇಮದ ನಡುವೆ ಸಮತೋಲನವನ್ನು ತರುತ್ತದೆ. ಸಂಗೀತ ಕಲಿಕೆ ಒಂದು ಸೌಹಾರ್ದ ಮತ್ತು ಸುಂದರ ಸಮಾಜದ ಬೆಳವಣಿಗೆಗೆ ಅತ್ಯಗತ್ಯ. ನಾನು ನಟನ ತರಂಗಿಣಿ-ಕಲಾ ಶಾಲೆಯನ್ನು ಪ್ರಾರಂಭಿಸಲು ಇದೇ ಸ್ಫೂರ್ತಿ. 20 ವರ್ಷದಿಂದ ಭಗವಂತನ ಸೇವೆ ಎಂದೇ ಭಾವಿಸಿ ಸಾವಿರಾರು ಮಕ್ಕಳಿಗೆ ಬೋಧನೆ ಮಾಡಿದ್ದೇನೆ. ಈ ಕೈಂಕರ್ಯ ನನಗೆ ಧನ್ಯತೆ ನೀಡಿದೆ.

-ವಿದುಷಿ ವೈ.ಜಿ. ಪರಿಮಳ, ನಟನ ತರಂಗಿಣಿ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆ.

Continue Reading

ಬೆಂಗಳೂರು

HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್

HDFC Life: ಭಾರತದಲ್ಲಿನ ಪ್ರಮುಖ ಜೀವ ವಿಮಾ ಸಂಸ್ಥೆಯಾಗಿರುವ ಎಚ್‌ಡಿಎಫ್‌ಸಿ ಲೈಫ್, ಗ್ರೇಟ್ ಪ್ಲೇಸ್ ಟು ವರ್ಕ್‌ ಸಂಸ್ಥೆಯಿಂದ 2024ರಲ್ಲಿ ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ ಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟಿದೆ. ಕಂಪನಿಯು ಒಟ್ಟಾರೆಯಾಗಿ 11ನೇ ಸ್ಥಾನವನ್ನು ಪಡೆದಿದೆ ಮತ್ತು ‘ಜೀವ ವಿಮೆಯಲ್ಲಿ ಉದ್ಯಮದಲ್ಲಿಯೇ ಅತ್ಯುತ್ತಮ ಕಂಪನಿ’ ಎಂದು ಗೌರವಿಸಲ್ಪಟ್ಟಿದೆ.

VISTARANEWS.COM


on

HDFC Life certified as one of Indias Best Companies to Work For in 2024
Koo

ಬೆಂಗಳೂರು: ಭಾರತದಲ್ಲಿನ ಪ್ರಮುಖ ಜೀವ ವಿಮಾ ಸಂಸ್ಥೆಯಾಗಿರುವ ಎಚ್‌ಡಿಎಫ್‌ಸಿ ಲೈಫ್ (HDFC Life), ಗ್ರೇಟ್ ಪ್ಲೇಸ್ ಟು ವರ್ಕ್‌ ಸಂಸ್ಥೆಯಿಂದ 2024ರಲ್ಲಿ ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ ಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟಿದೆ. ಕಂಪನಿಯು ಒಟ್ಟಾರೆಯಾಗಿ 11ನೇ ಸ್ಥಾನವನ್ನು ಪಡೆದಿದೆ ಮತ್ತು ‘ಜೀವ ವಿಮೆಯಲ್ಲಿ ಉದ್ಯಮದಲ್ಲಿಯೇ ಅತ್ಯುತ್ತಮ ಕಂಪನಿ’ ಎಂದು ಗೌರವಿಸಲ್ಪಟ್ಟಿದೆ. ಕಂಪನಿಯು ದಶಕದ ಕಾಲ ಮನ್ನಣೆಯನ್ನು ಪಡೆದಿದ್ದು, ಪ್ರತಿಷ್ಠಿತ ಸಂಸ್ಥೆಗಳ ಪಟ್ಟಿಯಲ್ಲಿ ಸೇರಿಕೊಂಡಿದೆ.

ಭಾರತದ ಮೊದಲ ಖಾಸಗಿ ಜೀವ ವಿಮಾದಾರರಲ್ಲಿ ಒಬ್ಬರಾದ ಎಚ್‌ಡಿಎಫ್‌ಸಿ ಲೈಫ್ 32,000 ಉದ್ಯೋಗಿಗಳನ್ನು ಹೊಂದಿದೆ. ಉತ್ಕೃಷ್ಟತೆ, ಜನರ ತೊಡಗಿಸಿಕೊಳ್ಳುವಿಕೆ, ಸಮಗ್ರತೆ, ಗ್ರಾಹಕ ಕೇಂದ್ರಿತತೆ ಮತ್ತು ಸಹಯೋಗದ ಮೌಲ್ಯಗಳ ಮೇಲೆ ಸ್ಥಾಪಿಸಲಾಗಿರುವ ಈ ಸಂಸ್ಥೆಯು ಸಾಂಸ್ಥಿಕ ಸಂಸ್ಕೃತಿಯನ್ನು ಎತ್ತಿಹಿಡಿಯುತ್ತದೆ.

ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

ಈ ಪ್ರಮಾಣೀಕರಣವು ಕಂಪನಿಯ ಮೌಲ್ಯಾಧರಿತ ಸಂಸ್ಕೃತಿಯನ್ನು ಮತ್ತು ಎಲ್ಲಾ ಪಾಲುದಾರರಿಗೆ ಮೌಲ್ಯವನ್ನು ತಲುಪಿಸುವ ಕಂಪನಿಯ ಬದ್ಧತೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

ಈ ಕುರಿತು ಎಚ್‌ಡಿಎಫ್‌ಸಿ ಲೈಫ್‌ನ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ವಿಭಾಷ್ ನಾಯಕ್ ಮಾತನಾಡಿ, “2024ರಲ್ಲಿ ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ ಗಳಲ್ಲಿ ಒಂದು ಮತ್ತು ‘ಜೀವ ವಿಮೆಯಲ್ಲಿ ಉದ್ಯಮದಲ್ಲಿಯೇ ಅತ್ಯುತ್ತಮ ಕಂಪನಿ’ ಎಂದು ಗುರುತಿಸಿಕೊಳ್ಳಲು ನಮಗೆ ಹೆಮ್ಮೆ ಇದೆ. ನಮ್ಮ ತಂಡಗಳ ಶ್ರದ್ಧೆ ಮತ್ತು ಬದ್ಧತೆ ನಮ್ಮ ಯಶಸ್ಸಿಗೆ ಕಾರಣವಾಗಿದೆ. ನಾವು ಅವರ ಬೆಳವಣಿಗೆಗೆ ಮತ್ತು ಅವರ ಯೋಗಕ್ಷೇಮ ನೋಡಿಕೊಳ್ಳಲು ಬದ್ಧರಾಗಿದ್ದೇವೆ. ಎಲ್ಲಾ ಭಾರತೀಯರಿಗೆ ಆರ್ಥಿಕ ಭದ್ರತೆ ಒದಗಿಸಲು ನಾವು ಶ್ರಮಿಸುತ್ತಿದ್ದೇವೆ ಮತ್ತು 2047ರ ವೇಳೆಗೆ ‘ಎಲ್ಲರಿಗೂ ವಿಮೆ’ ಎಂಬ ನಮ್ಮ ಗುರಿಯನ್ನು ಸಾಧಿಸುವತ್ತ ಗಮನಹರಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

Prajwal Revanna Case: ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನೋಟೀಸ್ ನೀಡಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನೋಟೀಸ್ ನೀಡಿ, 2 ವಾರಗಳ ಕಾಲ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.

ಸರ್ಕಾರದ ಪರ ಎಸ್‌ಪಿಸಿ ಜಗದೀಶ್ ಹಾಜರಾಗಿದ್ದರು. ಪ್ರಜ್ವಲ್ ರೇವಣ್ಣ ಪರ ವಕೀಲರು, ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್‌ಗೆ ಮನವಿ ಮಾಡಿದರು. ಇದಕ್ಕೆ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಉತ್ತರಿಸಿ, 2 ವಾರಗಳ ಕಾಲ ವಿಚಾರಣೆ ಮುಂದೂಡಿದರು.

ಇದನ್ನೂ ಓದಿ | Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

Prajwal Revanna Case: ಪ್ರಜ್ವಲ್‌ಗೆ ʼಆʼ ಸಾಮರ್ಥ್ಯ ಇದೆ: ವೈದ್ಯಕೀಯ ವರದಿ ರಿವೀಲ್

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಪುರುಷತ್ವ ಪರೀಕ್ಷೆಯ (virilism test) ವರದಿಯು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಕೈ ಸೇರಿದ್ದು, ಮಹಿಳೆಯರೊಂದಿಗೆ ಲೈಂಗಿಕ ಸಂಪರ್ಕ ಸಾಧಿಸಲು ಅವರು ಸಮರ್ಥರಿದ್ದಾರೆ ಎಂಬ ಅಂಶ ದೃಢಪಟ್ಟಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್‌ ಅವರ ಪುರುಷತ್ವ ಪರೀಕ್ಷಾ ವರದಿ ಎಸ್‌ಐಟಿ ಅಧಿಕಾರಿಗಳಿಗೆ ಲಭಿಸಿದ್ದು, ಅದು ಸಹ ಪ್ರಜ್ವಲ್‌ ವಿರುದ್ಧದ ಸಾಕ್ಷ್ಯವಾಗಲಿದೆ. ಕೆಲವು ದಿನಗಳ ಹಿಂದೆ ಬೌರಿಂಗ್‌ ಆಸ್ಪತ್ರೆಯಲ್ಲಿ ಅವರನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಪದೇ ಪದೆ ಪುರುಷತ್ವ ಪರೀಕ್ಷೆಗೆ ಒಳಪಡಿಸುತ್ತಿರುವುದರಿಂದ ಮುಜುಗರವಾಗುತ್ತಿದೆ ಎಂದು ಈ ಹಿಂದೆ ನ್ಯಾಯಾಲಯದ ಮುಂದೆ ಪ್ರಜ್ವಲ್‌ ಅಳಲು ತೋಡಿಕೊಂಡಿದ್ದರು. ಧ್ವನಿ ಪರೀಕ್ಷೆ ಹಾಗೂ ಇನ್ನಿತರ ಪರೀಕ್ಷೆಗಳ ವರದಿ ಎಫ್‌ಎಸ್‌ಎಲ್‌ನಿಂದ ಬರಬೇಕಿದೆ. ಈ ವರದಿಗಳು ಪೂರಕವಾಗಿದ್ದರೆ ಅವುಗಳು ಕೂಡ ಪ್ರಜ್ವಲ್‌ ವಿರುದ್ಧದ ಪ್ರಬಲ ಸಾಕ್ಷ್ಯಗಳಾಗಲಿವೆ.

ಪ್ರಜ್ವಲ್‌ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಲ್ಲಿ ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ದೂರುದಾರ ಮಹಿಳೆಯರ ಕುರಿತು ತನಿಖಾಧಿಕಾರಿಗಳು ಪ್ರಶ್ನಿಸಿದಾಗ ʼನನಗೇನೂ ಗೊತ್ತಿಲ್ಲ’ ಎಂದು ತಿಳಿಸಿದ್ದರು. ಇತ್ತೀಚೆಗೆ ಪ್ರಜ್ವಲ್‌ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆಯ ಬಗ್ಗೆ ವಿಚಾರಿಸಿದಾಗ, ʼನನಗೆ ಅವರು ಯಾರೆಂಬುದೇ ಗೊತ್ತಿಲ್ಲ’ ಎಂದು ಪ್ರಜ್ವಲ್‌ ಹೇಳಿದ್ದಾರೆನ್ನಲಾಗಿದೆ.

ಈ ನಡುವೆ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಪ್ರಜ್ವಲ್‌ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಈ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಹಾಗಾಗಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ದಾಖಲಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಲಾಗಿದೆ. ಈ ಅರ್ಜಿಗಳ ವಿಚಾರಣೆ ಶುಕ್ರವಾರ ಮಧ್ಯಾಹ್ನ 2.30ಕ್ಕೆ ನಿಗದಿಯಾಗಿದೆ.

ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌

ಪ್ರಜ್ವಲ್ ರೇವಣ್ಣ , (Prajwal Revanna case) ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ (HIV Test) ಮಾಡಿಸಿಕೊಳ್ಳುತ್ತಿದ್ದರು ಎಂಬ ಸಂಗತಿ ಇದೀಗ ಬಯಲಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಸದ್ಯಕ್ಕೆ ಪ್ರಜ್ವಲ್ ಮೇಲೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಅದರಲ್ಲಿ ಈ ಎಚ್‌ಐವಿ ಟೆಸ್ಟ್ ವಿಚಾರವೂ ಒಂದು. ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ದೂರು ಪ್ರಜ್ವಲ್ ಮೇಲಿದೆ. ಇದರಿಂದ ಎಚ್‌ಐವಿ ಬರಬಹುದು ಎಂಬ ಆತಂಕದಿಂದಲೇ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

ಹಲವು ಮಹಿಳೆಯರ ಜೊತೆ ಪ್ರಜ್ವಲ್ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಎಂಬ ಆರೋಪಕ್ಕೆ ಈ ಸಂಗತಿ ಪುಷ್ಟಿ ನೀಡಿದ್ದು, ಇದನ್ನು ಪ್ರಜ್ವಲ್‌ಗೆ ವಿರೋಧ ಸಾಕ್ಷ್ಯವಾಗಿ ಬಳಸಿಕೊಳ್ಳಲು ಎಸ್‌ಐಟಿ ಮುಂದಾಗಿದೆ. ಇದು ಪ್ರಜ್ವಲ್ ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿದ್ದಕ್ಕೆ ದಾಖಲೆಗಳಲ್ಲಿ ಒಂದಾಗಲಿದೆ.

Continue Reading
Advertisement
ಕರ್ನಾಟಕ4 mins ago

Satish Jarkiholi: ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗುವುದು ತಪ್ಪು; ಎಚ್‌ಡಿಕೆ ಪರ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್!

Kangana Ranaut Madhavan's Hilarious Reaction To Double-Meaning
ಬಾಲಿವುಡ್4 mins ago

Kangana Ranaut: ನಿಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಇದೆಯಾ ಎಂದು ಕಂಗನಾಗೆ ಡಬಲ್‌ ಮೀನಿಂಗ್‌ ಪ್ರಶ್ನೆ;ಬಿದ್ದು ಬಿದ್ದು ನಕ್ಕ ಆರ್ ಮಾಧವನ್!

Lovers Fighting
ಚಿಕ್ಕಬಳ್ಳಾಪುರ5 mins ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Defence Production
ದೇಶ11 mins ago

Defence Production: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮನಿರ್ಭರ; ರಕ್ಷಣಾ ಉತ್ಪಾದನೆ ದಾಖಲೆಯ ಶೇ.16ರಷ್ಟು ಏರಿಕೆ

Georgina Rodriguez
ಕ್ರೀಡೆ30 mins ago

Georgina Rodriguez : ಬಿಕಿನಿ ದಿನದಂದು ಬಗೆಬಗೆಯ ಬಿಕಿನಿಗಳಲ್ಲಿ ಮೈಮಾಟ ತೋರಿಸಿದ ಕ್ರಿಸ್ಟಿಯಾನೊ ರೊನಾಲ್ಡೊ ಪ್ರೇಯಸಿ ಜಾರ್ಜಿಯಾ ರೋಡ್ರಿಗಸ್​

Stock Market
ವಾಣಿಜ್ಯ36 mins ago

Stock Market: 1 ಲಕ್ಷ ಪಾಯಿಂಟ್‌ ಮೈಲಿಗಲ್ಲಿನತ್ತ ಸೆನ್ಸೆಕ್ಸ್‌; ಅಂಕಿ-ಅಂಶ ಹೇಳೋದೇನು?

Virat Kohli's Phone Wallpaper
ಕ್ರೀಡೆ36 mins ago

Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

natana Tarangini 20th anniversary celebration on July 6 and 7 in Bengaluru
ಕರ್ನಾಟಕ45 mins ago

Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

HDFC Life certified as one of Indias Best Companies to Work For in 2024
ಬೆಂಗಳೂರು47 mins ago

HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್

Baby Death
Latest51 mins ago

Baby Death: ಹೋಮ್‌ ವರ್ಕ್‌ ಮಾಡುತ್ತಿದ್ದ ಬಾಲಕಿಗೆ ಸಾವಾಗಿ ಕಾಡಿದ ಪೆನ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lovers Fighting
ಚಿಕ್ಕಬಳ್ಳಾಪುರ5 mins ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

karnataka rain
ಮಳೆ3 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ4 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು5 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು6 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ10 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ24 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ1 day ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

ಟ್ರೆಂಡಿಂಗ್‌