Site icon Vistara News

Road Accident : ಓವರ್‌ಟೇಕ್‌ ಧಾವಂತದಲ್ಲಿ ಟಿಪ್ಪರ್‌ಗೆ ಡಿಕ್ಕಿ; ನಡುರಸ್ತೆಯಲ್ಲಿ ಶವವಾದ ಕಾಲೇಜು ವಿದ್ಯಾರ್ಥಿ

Road accident bike hits Tipper

ಬೆಂಗಳೂರು: ಕಾಲೇಜು ವಿದ್ಯಾರ್ಥಿಯೊಬ್ಬ (College Student) ಬೈಕ್‌ನಲ್ಲಿ ಟಿಪ್ಪರ್ ಲಾರಿಯನ್ನು ಓವರ್ ಟೇಕ್ (Overtaking tipper lorry) ಮಾಡುವ ಧಾವಂತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್‌ ಟಿಪ್ಪರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಲಿಖಿತ್ (22) ಎಂಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ (Road Accident).

ಉಲ್ಲಾಳ ಸಮೀಪದ ಕೆಎಲ್ ಇ ಲಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಲಿಖಿತ್‌ ಸ್ನೇಹಿತರ ಜತೆ ಬೈಕ್‌ಗಳಲ್ಲಿ ತೆರಳಿದ್ದ. ಉಲ್ಲಾಳ ಕೆರೆ ಕಟ್ಟೆ ಮೇಲೆ ಸಾಗುತ್ತಿದ್ದಾಗ ಎದುರಿನಿಂದ ಒಂದು ಟಿಪ್ಪರ್‌ ಸಾಗುತ್ತಿದ್ದ. ಅದನ್ನು ಓವರ್‌ ಟೇಕ್‌ ಮಾಡಲು ಮುಂದಾದ ವೇಳೆ ಬೈಕ್‌ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಬಳಿಕ ಬೈಕ್‌ ಎಗರಿಬಿದ್ದು, ಲಿಖಿತ್‌ ನೆಲಕ್ಕೆ ಅಪ್ಪಳಿಸಿ ಪ್ರಾಣ ಕಳೆದುಕೊಂಡಿದ್ದಾನೆ. ಹಿಂಬದಿ ಸವಾರನಾಗಿದ್ದ ಜ್ಞಾನೇಶ್‌ಗೆ ಗಂಭೀರ ಗಾಯವಾಗಿದೆ. ಲಿಖಿತ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಕೆಂಗೇರಿ‌ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident : ಬೆಂಗಳೂರಲ್ಲಿ ಭೀಕರ ಅಪಘಾತ; ಇಬ್ಬರು ಸವಾರರು ಮೃತ್ಯು

ಎತ್ತಿನ ಗಾಡಿಗೆ ಬೈಕ್‌ ಡಿಕ್ಕಿ: ಯುವಕನ ತಲೆಯೇ ಕಟ್‌!

ಗದಗ: ದೊಡ್ಡ ವಾಹನ ಡಿಕ್ಕಿ ಹೊಡೆದು ಬೈಕ್‌ ಸವಾರರು ಭಯಾನಕವಾಗಿ ಮೃತಪಡುವುದನ್ನು ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಅಪಘಾತದಲ್ಲಿ ಎತ್ತಿನ ಬಂಡಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ, ಮಾತ್ರವಲ್ಲ ಸವಾರನ ರುಂಡವೇ ಕತ್ತರಿಸಲ್ಪಟ್ಟು ದೂರಕ್ಕೆ ಎಸೆಯಲ್ಪಟ್ಟಿದೆ.

ಗದಗ ಜಿಲ್ಲೆ ನರಗುಂದ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ರೋಣ ತಾಲೂಕಿನ ಯಾವಗಲ್ ಗ್ರಾಮದ ರುದ್ರಗೌಡ ಪೊಲೀಸ್ ಪಾಟೀಲ್ (28) ಮೃತಪಟ್ಟವರು.

ಕೆಲವು ಮಂದಿ ಎತ್ತಿನ ಗಾಡಿ ಮೂಲಕ ಸವದತ್ತಿ ಯಲ್ಲಮ್ಮ ದೇವರ ದರ್ಶನಕ್ಕೆ ಹೋಗುತ್ತಿದ್ದರು. ಆಗ ನರಗುಂದ ಪಟ್ಟಣದಿಂದ ಯಾವಗಲ್ ಗ್ರಾಮಕ್ಕೆ ಯುವಕನೊಬ್ಬ ಬೈಕ್‌ನಲ್ಲಿ ಹೋಗುತ್ತಿದ್ದ. ಈ ವೇಳೆ, ಬೈಕ್‌ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎತ್ತಿನಗಾಡಿ ರಾಂಗ್‌ ಸೈಡಿನಲ್ಲಿ ಸಾಗಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ದೂರಲಾಗಿದೆ. ಘಟನೆಯಲ್ಲಿ ಗಾಯಗೊಂಡ ಇಬ್ಬರು ಎತ್ತಿನಗಾಡಿಯಲ್ಲಿ ಪ್ರಯಾಣಿಸುತ್ತಿದ್ದವರು.

Exit mobile version