Road Accident : ಮಹಿಳೆಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್‌; ಕೆಳಗೆ ಬಿದ್ದವಳ ತಲೆ ಮೇಲೆ ಹರಿದ ಕಾರು - Vistara News

ಬೆಂಗಳೂರು

Road Accident : ಮಹಿಳೆಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್‌; ಕೆಳಗೆ ಬಿದ್ದವಳ ತಲೆ ಮೇಲೆ ಹರಿದ ಕಾರು

Road Accident : ಬಿಎಂಟಿಸಿ ಬಸ್‌ವೊಂದು ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದವಳ ತಲೆ ಮೇಲೆ ಕಾರೊಂದು ಹರಿದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಉಲ್ಲಾಳ ಉಪನಗರ ಕೆರೆ ಬಳಿ ಬಿಎಂಟಿಸಿಗೆ (Road Accident) ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಸ್ಕೂಟರ್‌ನಲ್ಲಿ ಬರುತ್ತಿದ್ದಾಗ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಜ್ಞಾನಭಾರತಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುವಾರ ಬೆಳಗ್ಗೆ 9.30ರ ಸುಮಾರಿಗೆ ಉಲ್ಲಾಳ ಮುಖ್ಯರಸ್ತೆ 100 ಫೀಟ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಮೋನಿಕಾ ಮೃತ ದುರ್ದೈವಿ.

ಸೊನ್ನೆನಾಹಳ್ಳಿಯ ಮಾರುತಿ ನಗರದ ನಿವಾಸಿಯಾಗಿದ್ದ ಮೋನಿಕಾ, ರಿಂಗ್ ರೋಡ್‌ನಲ್ಲಿರುವ ಷೋ ರೂಂನಲ್ಲಿ ಹೆಚ್ಆರ್ ಆಗಿ ಕೆಲಸ ಮಾಡುತ್ತಿದ್ದರು. ಗುರುವಾರ ಜ್ಯೂಪಿಟರ್ ಸ್ಕೂಟರ್‌ನಲ್ಲಿ ಬರುತ್ತಿದ್ದರು. 100 ಫೀಟ್ ರಸ್ತೆ ಕಾಮಗಾರಿ ನಡೆಯುತ್ತಿದ್ದ ಕಾರಣ ಒಂದು ಬದಿಯ ರಸ್ತೆ ಕ್ಲೋಸ್ ಆಗಿತ್ತು. ಕೇವಲ ಒಂದೇ ಬದಿಯ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಈ ವೇಳೆ ಸ್ಕೂಟರ್‌ನಲ್ಲಿ ಬರುತ್ತಿದ್ದ ಮೋನಿಕಾಗೆ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದಿದ್ದ ಮೋನಿಕಾ ತಲೆ ಮೇಲೆ ಹಿಂಬದಿಯಿಂದ ಬರುತ್ತಿದ್ದ ಕಾರಿನ ಚಕ್ರ ಹತ್ತಿದೆ. ಪರಿಣಾಮ ಮೋನಿಕಾ ತಲೆ ಛಿದ್ರಗೊಂಡಿದೆ. ಆಕೆಯ ತಲೆ ಮೇಲೆ ಕಾರು ಹತ್ತಿದ ಕಾರಣ ಮೋನಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಮೂಲದ ಮೊನಿಕಾ‌ ನಾಲ್ಕು ವರ್ಷದ ಹಿಂದೆ ಮದುವೆಯಾಗಿತ್ತು. ಪತಿ ಜತೆಗೆ ಸೊನ್ನೆನಾಹಳ್ಳಿಯ ಮಾರುತಿ ನಗರದಲ್ಲಿ ವಾಸವಾಗಿದ್ದರು.

ಈ ಕುರಿತು ಬಿಎಂಟಿಸಿ ಸ್ಪಷ್ಟನೆ ನಡೆದಿದೆ. ಉಲ್ಲಾಳ ಕೆರೆಯ ಹತ್ತಿರ ದ್ವಿಚಕ್ರ ವಾಹನ ಸವಾರರು ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ವಾಹನ ಚಲಾವಣೆ ಮಾಡಿಕೊಂಡು ಬಂದು ಎದುರಿನಿಂದ ಬರುತ್ತಿದ್ದ ಬಸ್ಸಿನ ಬಲಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ಡಿಕ್ಕಿಯ ಪರಿಣಾಮ, ಮಹಿಳೆ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಅವರು ಬಿದ್ದಾಗ, ಹಿಂಬದಿಯಿಂದ ಬರುತ್ತಿದ್ದ ಕಾರು ಅವರ ಮೇಲೆ ಹರಿದಿರುತ್ತದೆ .

ತಕ್ಷಣವೇ ಆಂಬ್ಯುಲೆನ್ಸ್ ಸ್ಥಳಕ್ಕೆ ಆಗಮಿಸಿ ಗಾಯಗೊಂಡ ಸವಾರರನ್ನು ಆಸ್ಪತ್ರೆಗೆ ಸಾಗಿಸಿದರು, ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡು, ನಂತರ ಚಿಕಿತ್ಸೆಗೊಳಗಾಗಿದ್ದಾಗ ಕೊನೆಯುಸಿರೆಳೆದಿದ್ದಾರೆ. ಈ ದುರ್ಘಟನೆ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ತಕ್ಷಣ ಮಾಹಿತಿ ನೀಡಲಾಗಿದೆ. ಸಂಸ್ಥೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Breast cancer : ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡಲೇಬೇಡಿ!

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಪಿಂಕ್‌ ಸ್ಟ್ರಾಂಗ್‌ ವಾಕಥಾನ್‌ ನಡೆಸಲಾಯಿತು. ಮಹಿಳೆಯರು ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಹೊಂದುವುದು ಅವಶ್ಯಕ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Pink Strong walkathon to raise awareness among people about breast cancer
Koo

ಬೆಂಗಳೂರು: ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್‌ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು “ಪಿಂಕ್‌ ಸ್ಟ್ರಾಂಗ್‌” ವಾಕಥಾನ್‌ನನ್ನು ಆಯೋಜಿಸಿತ್ತು. ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯಿಂದ ಪ್ರಾರಂಭಗೊಂಡ ವಾಕಥಾನ್‌ ಗೋಪಾಲನ್‌ ಮಾಲ್‌ವರೆಗೆ ಮುಕ್ತಾಯಗೊಂಡಿತು. ಸುಮಾರು 5 ಕಿ.ಮೀ ದೂರದ ಈ ವಾಕಥಾನ್‌ನಲ್ಲಿ ಸ್ತನಕ್ಯಾನ್ಸರ್‌ನಿಂದ ಗುಣಮುಖರಾದ ರೋಗಿಗಳು ಹಾಗೂ ಅವರ ಕುಟುಂಬಸ್ಥರು, ಸಾರ್ವಜನರಿಕರು ಫೋರ್ಟಿಸ್‌ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಸೇರಿದಂತೆ ಒಟ್ಟು 450 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.

Pink Strong walkathon to raise awareness among people about breast cancer
Pink Strong walkathon to raise awareness among people about breast cancer

ವಾಕಥಾನ್‌ನಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಇತ್ತೀಚೆಗೆ ಸಾಕಷ್ಟು ಮಹಿಳೆಯರನ್ನು ಬಾಧಿಸುತ್ತಿರುವ ಕಾಯಿಲೆಗಳ ಪೈಕಿ ಸ್ತನಕ್ಯಾನ್ಸರ್‌ ಕೂಡ ಒಂದು. ಹೆಣ್ಣು ಮಕ್ಕಳು, ಮಹಿಳೆಯರು ಸ್ತನಕ್ಯಾನ್ಸರ್‌ ರೋಗ ಲಕ್ಷಣದ ಬಗ್ಗೆ ಮೊದಲೇ ತಿಳಿದಿದ್ದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ. ಆದರೆ ಸಾಕಷ್ಟು ಮಹಿಳೆಯರಿಗೆ ಇದರ ಬಗ್ಗೆ ಜಾಗೃತಿಯ ಕೊರತೆ ಇದೆ. ಮೊದಲು ಸ್ತನ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಹೊಂದಿರಬೇಕು, ಫೋರ್ಟಿಸ್‌ ಆಸ್ಪತ್ರೆಯು ಸ್ತನ ಕ್ಯಾನ್ಸರ್‌ ಮಾಸದ ಭಾಗವಾಗಿ ಈ ವಾಕಥಾನ್‌ ನಡೆಸುವ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

Pink Strong walkathon to raise awareness among people about breast cancer
Pink Strong walkathon to raise awareness among people about breast cancer

ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿಯ ಹಿರಿಯ ಸಲಹೆಗಾರರಾದ ಡಾ, ಮೋನಿಕಾ ಪನ್ಸಾರಿ ಮಾತನಾಡಿ, ಸ್ತನಕ್ಯಾನ್ಸರ್‌ ಹೆಚ್ಚಾಗಿ ಕಡಿಮೆ ವಯಸ್ಸಿನ ಮಹಿಳೆಯರಲ್ಲೇ ಕಾಣಿಸುತ್ತಿದೆ, ಅಧ್ಯಯನಗಳ ಪ್ರಕಾರ ಸುಮಾರು ಶೇ.48 ರಷ್ಟು ರೋಗಿಗಳಲ್ಲಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಇರುವುದು ಆಘಾತಕಾರಿ. ಹೀಗಾಗಿ ಹೆಣ್ಣುಮಕ್ಕಳಿಂದಲೇ ಸ್ತನ ಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಿಸುತ್ತಾ ಹೋದರೆ, ಭವಿಷ್ಯದಲ್ಲಿ ಆಗುವ ಅಪಾಯವನ್ನು ತಡೆಗಟ್ಟಬಹುದು. ಸ್ತನ ಕ್ಯಾನ್ಸರ್‌ ಇರುವ ಬಗ್ಗೆ ಮಹಿಳೆಯರೇ ಸ್ವಯಂ ಪರೀಕ್ಷೆ ಮಾಡಿಕೊಳ್ಳಬಹುದು. ಒಂದು ವೇಳೆ ತಮ್ಮ ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ತಪಾಸಣೆಗೆ ಒಳಗಾಗುವುದು ಒಳ್ಳೆಯದು. ಇನ್ನು, ಮಹಿಳೆಯರು ಆರೋಗ್ಯಕರ ಜೀವನ ಶೈಲಿ ರೂಡಿಸಿಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

Continue Reading

ಬೆಂಗಳೂರು

Theft Case : ಪಿಜಿ, ಬ್ಯಾಚುಲರ್‌ ರೂಂಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ಖದೀಮರು ಲಾಕ್‌

Theft Case : ಬೆಂಗಳೂರಿನ ಪ್ರತ್ಯೇಕ ಕಡೆಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇದಿಸಿದ್ದಾರೆ. ಪಿಜಿ, ಬ್ಯಾಚುಲರ್‌ ರೂಂಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ, ಲ್ಯಾಪ್‌ ಟಾಪ್‌ ಕದಿಯುತ್ತಿದ್ದ ಹಾಗೂ ಚಿನ್ನ ಪಾಲಿಶ್‌ ನೆಪದಲ್ಲಿ ಕನ್ನ ಹಾಕಿದ ಖದೀಮರು ಲಾಕ್‌ ಹಾಕಿದ್ದಾರೆ.

VISTARANEWS.COM


on

By

Theft case
Koo

ಬೆಂಗಳೂರು: ಕ್ರೈಂಗಳು ಹೆಚ್ಚುತ್ತಿರುವ ಬೆನ್ನಲ್ಲೆ ಕಾರ್ಯಾಚರಣೆಗಿಳಿದಿದ್ದ ಬೆಂಗಳೂರು ನಗರ ಪೊಲೀಸರು ಖರ್ತನಾಕ್‌ ಕಳ್ಳರ ಹೆಡೆಮುರಿ ಕಟ್ಟಿ ಜೈಲಿಗೆ ಕಳಿಸಿದ್ದಾರೆ. ಕುಮಾರಸ್ವಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಜಿ ಕಳ್ಳರನ್ನು (Theft Case) ಬಂಧಿಸಿದ್ದಾರೆ. ಬೆಳಗ್ಗೆ ಎದ್ದು ನಾವೆಲ್ಲಾ ಕೆಲಸಕ್ಕೆ ಹೋದಂತೆ ಇವರು ಪಿಜಿಗಳಲ್ಲಿ ಕಳ್ಳತನ ಮಾಡಲು ಹೊರಡುತ್ತಿದ್ದರು. ಪಿಜಿಗಳಲ್ಲಿ ಕದಿಯಲು ಸಾಧ್ಯವಾಗದೆ ಇದ್ದರೆ ಬ್ಯಾಚುಲರ್ ರೂಂಗಳನ್ನು ಹುಡುಕುತ್ತಿದ್ದರು. ಬ್ಯಾಚುಲರ್ಸ್‌ ಪಾಟ್ ಅಥವಾ ಮ್ಯಾಟ್ ಕೆಳಗೆ ಇಡುತ್ತಿದ್ದ ಕೀಗಳನ್ನು ಗಮನಿಸಿ ಆ ರೂಂಗೆ ಕನ್ನ ಹಾಕುತ್ತಿದ್ದರು. ಹೀಗೆ ಲ್ಯಾಪ್ ಟ್ಯಾಪ್, ಮೊಬೈಲ್‌ಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ಮೂವರು ಕಳ್ಳರನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಒಟ್ಟು 23 ಲಕ್ಷ ಮೌಲ್ಯದ 28 ಮೊಬೈಲ್‌ಗಳು, 34 ಲ್ಯಾಪ್ ಟ್ಯಾಪ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಕಾರ್ ಗ್ಲಾಸ್ ಒಡೆದು ಲ್ಯಾಪ್ ಟಾಪ್ ಕದಿಯುತ್ತಿದ್ದ ಅಣ್ಣ-ತಮ್ಮ

ಇದೂ ಕೂಡ ಲ್ಯಾಪ್ ಟ್ಯಾಪ್ ಕಳ್ಳತನದ ಕೇಸ್‌ಗಳೇ . ಆದರೆ ಇವರು ಸ್ಥಳೀಯರಲ್ಲ . ಸ್ಕೂಟಿ ಮೂಲಕ ತಮಿಳುನಾಡಿನ ಸೇಲಂನಿಂದ ಬರುತ್ತಿದ್ದ ಅಣ್ಣ-ತಮ್ಮ ಲ್ಯಾಪ್ ಟ್ಯಾಪ್ ಕಳ್ಳತನ ಮಾಡಿ ನಂತರ ಅದೇ ಸ್ಕೂಟಿಯಲ್ಲಿ ಎಸ್ಕೇಪ್ ಆಗುತ್ತಿದ್ದರು. ತಮಿಳುನಾಡಿನಲ್ಲಿ ಅರ್ಧ ಬೆಲೆಗೆ ಲ್ಯಾಪ್ ಟಾಪ್ ಮಾರಾಟ ಮಾಡುತ್ತಿದ್ದರು. ಗಂಗಯ್ಯ ಹಾಗು ಸದಾನಾಯ್ಡು ಎಂಬ ಒಡಹುಟ್ಟಿದವರೇ ಕಳ್ಳರು.

ಹಿಂದೊಮ್ಮೆ ಈ ಸಹೋದರರು ಗ್ಯಾಂಗ್ ಕಟ್ಟಿಕೊಂಡು ಲ್ಯಾಪ್ ಟ್ಯಾಪ್ ಕದಿಯುತ್ತಿದ್ದರು. ಒಂದು ಬಾರಿ ಬಂಧನವಾದ ಬಳಿಕ ಆ ಗ್ಯಾಂಗ್ ಸಹವಾಸ ಬಿಟ್ಟು ಹೊರ ಬಂದು ಇಬ್ಬರೇ ಕಳ್ಳತನ ಮಾಡುತ್ತಿದ್ದರು. ಸದ್ಯ ಖಚಿತ ಮಾಹಿತಿ ಮೇರೆಗೆ ಸದಾನಾಯ್ಡುವನ್ನ ತಮಿಳುನಾಡಿನಲ್ಲಿ ಬಂಧನ ಮಾಡಲಾಗಿದ್ದು, ಗಂಗಯ್ಯನಿಗಾಗಿ ಹುಡುಕಾಟ ಮುಂದುವರೆದಿದೆ.

ಚಿನ್ನ ಪಾಲಿಶ್‌ ನೆಪದಲ್ಲಿ ಕನ್ನ

ಹಲಸೂರು ಗೇಟ್ ಪೊಲೀಸರು ಅಂಕುರ್ ಕುಮಾರ್ ಡುಂಗರ್ ವಾಲ ಎಂಬ ಆರೋಪಿಯನ್ನು ಬಂಧನ ಮಾಡಿದ್ದಾರೆ. ಈತ ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು, ಚಿನ್ನದ ಪಾಲಿಶ್ ಕೆಲಸ ಮಾಡುತ್ತಿದ್ದ. ಹಲಸೂರ ಗೇಟ್ ನಿವಾಸಿಯಾಗಿರುವ ಅಂಕುರ್ ಅಲ್ಲಿಯೇ ಇದ್ದ ಜ್ಯೂವೆಲರಿ ಶಾಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಆದರೆ ಹಣದಾಸೆಗೆ ಬಿದ್ದವನು ಚಿನ್ನದ ಗಟ್ಟಿ ಕಳ್ಳತನ ಮಾಡಲು ಮುಂದಾಗಿದ್ದ. ಈ ಹಿನ್ನೆಲೆಯಲ್ಲಿ ಚಿನ್ನದ ಅಂಗಡಿಗಳಿಗೆ ಹೋಗಿ ಚಿನ್ನವನ್ನು ಪಾಲೀಶ್ ಮಾಡಿಕೊಡುವುದಾಗಿ ಚಿನ್ನದ ಗಟ್ಟಿ ಪಡೆದು ಎಸ್ಕೇಪ್ ಆಗಿದ್ದ. ನಗರ್ತ ಪೇಟೆಯ ಚಿನ್ನದ ವ್ಯಾಪಾರಿ ನೀಡಿದ ದೂರಿನ ಅನ್ವಯವಾಗಿ ರಾಜಸ್ಥಾನಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ 10 ಲಕ್ಷ ಮೌಲ್ಯದ 387 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಕುಮಾರಸ್ವಾಮಿ , ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Huli karthik : ಬೋವಿ ಜನಾಂಗಕ್ಕೆ ಅವಮಾನ, ಹಾಸ್ಯ ನಟ ಹುಲಿ ಕಾರ್ತಿಕ್‌ ವಿರುದ್ಧ ಜಾತಿ ನಿಂದನೆ ಕೇಸ್; ಅಂದು ‘ಬಿಗ್ ಬಾಸ್’ ಇಂದು ‘ಅನುಬಂಧ’!

VISTARANEWS.COM


on

By

Casteist slur case filed against comedian Huli Karthik for insulting Bovi community
Koo

ಬೆಂಗಳೂರು: ಅಂದು ಬಿಗ್ ಬಾಸ್ ಆಯಿತು ಇಂದು ‘ಅನುಬಂಧ’ ಕಾರ್ಯಕ್ರಮದಲ್ಲಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಹಾಸ್ಯ ನಟ ಹುಲಿ ಕಾರ್ತಿಕ್‌ (Huli karthik) ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದೆ. ಸಾರ್ವಜನಿಕ ವಲಯದಲ್ಲಿದ್ದಾಗ ಪದ ಬಳಕೆ ಬಗ್ಗೆ ಎಚ್ಚರದಿಂದಿರಬೇಕು. ನಿಷೇಧಿತ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ನಟ ಹುಲಿ ಕಾರ್ತಿಕ್‌ ವಿರುದ್ಧ ದೂರು ದಾಖಲಾಗಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಆದರೂ ಆತನ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಒಂದು ಸಮುದಾಯಕ್ಕೆ ಅವಮಾನವಾಗುತ್ತದೆ ಎಂಬ ಕಾರಣಕ್ಕೆ ಈ ಹಿಂದೆ ಬಳಕೆಯಾಗುತ್ತಿದ್ದ ಕೆಲ ಶಬ್ಧಗಳನ್ನು ಕಾನೂನು ನಿಷೇಧ ಮಾಡಿದೆ. ಹೀಗಾಗಿ ಸಾರ್ವಜನಿಕ ವಲಯದಲ್ಲಿ ಆ ಪದ ಬಳಕೆ ಮಾಡುವುದು ನಿಷೇಧವಾಗಿದೆ. ಸದ್ಯ ಸ್ಯಾಂಡಲ್‌ವುಡ್‌ನ ನಟ ಹಾಗು ರಿಯಾಲಿಟಿ ಶೋಗಳಲ್ಲಿ ಭಾಗವಹಿಸುವ ಕಾರ್ತಿಕ್ ಅಲಿಯಾಸ್‌ ಹುಲಿ ಕಾರ್ತಿಕ್‌ ನಿಷೇಧಿತ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಸಂಕಷ್ಟ ಎದುರಾಗಿದೆ.

ಹಿಂದೊಮ್ಮೆ ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಕೂಡ ನಿಷೇಧಿತ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು. ನಂತರ ಅದಕ್ಕೆ ಆಕೆ ಸ್ಪಷ್ಟನೆ ಕೂಡ ನೀಡಿದ್ದರು. ಆಕೆ ಮಾತನಾಡಿದ್ದ ಕ್ಲಿಪ್ಪಿಂಗ್‌ಗಳನ್ನು ಎಫ್ ಎಸ್ ಎಲ್ ಗೂ ಕಳಿಸಲಾಗಿತ್ತು. ಸದ್ಯ ಹುಲಿ ಕಾರ್ತಿಕ್ ಸರದಿ.

ಇದನ್ನೂ ಓದಿ: Actor Darshan : ಕೊನೆಗೂ ಪೊಲೀಸರ ಕೈಸೇರಿದ ದರ್ಶನ್, ಪವಿತ್ರಾಗೌಡರ ಮೊಬೈಲ್ ರಿಪೋರ್ಟ್! ಸಿಕ್ಕಿ ಬಿಡ್ತು ಮಹತ್ವದ ಸಾಕ್ಷ್ಯ?

ಕಳೆದ ತಿಂಗಳು ಖಾಸಗಿ ಚಾನಲ್‌ನಲ್ಲಿ ಪ್ರಸಾರವಾಗಿದ್ದ ಅನುಬಂಧ ಅವಾರ್ಡ್ ಎಂಬ ಕಾರ್ಯಕ್ರಮದಲ್ಲಿ ನಡೆದ ಘಟನೆ ಇದು. ಇಲ್ಲಿ ಬೋವಿ ಜನಾಂಗಕ್ಕೆ ಅವಮಾನ ಮಾಡುವ ರೀತಿಯಲ್ಲಿ ಪದ ಬಳಕೆ ಮಾಡಲಾಗಿದೆ. ಜತೆಗೆ ಜನಾಂಗವನ್ನು ತುಚ್ಛವಾಗಿ ಕಾಣಲಾಗಿದೆ ಎಂದು, ಲೋಕೇಶ್ ಎಂಬುವವರು ದೂರು ನೀಡಿದ್ದರು. ಹೀಗೆ ಒಂದು ಜನಾಂಗವನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ನಿಷೇಧಿತ ಪದ ಬಳಕೆ ಮಾಡಲಾಗಿದೆ ಎಂದು ದೂರು ನೀಡಲಾಗಿದೆ ಎಂದು ಲೊಕೇಶ್ ಅವರ ಆರೋಪವಾಗಿದೆ.

ಇಲ್ಲಿ ಕಾರ್ತಿಕ್ ಮಾತ್ರವಲ್ಲದೆ ಸ್ಕ್ರಿಪ್ಟ್ ರೈಟರ್ , ಕಾರ್ಯಕ್ರಮ ಆಯೋಜಕ‌, ನಿರ್ಮಾಪಕ , ನಿರ್ದೇಶಕ ವಿರುದ್ಧ ಕೂಡ ದೂರು ದಾಖಲಾಗಿದೆ. ಇನ್ನು ಇದಕ್ಕೆ ಸ್ಪಷ್ಟನೆ ನೀಡಿರುವ ನಟ ಕಾರ್ತಿಕ್ , ನಾನು ಹೊಂಡ ಅಂದಿದ್ದೇ ಹೊರತು ಜನಾಂಗಕ್ಕೆ ನೋವಾಗುವ ಶಬ್ಧವನ್ನ ಬಳಕೆ ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಸದ್ಯ ಈ ವಿಡಿಯೋ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು ಸ್ಥಳ ಮಹಜರನ್ನು ಮುಗಿಸಿದ್ದಾರೆ. ಇನ್ನು ಕಾರ್ತಿಕ್ ಮೇಲೆ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Actor Darshan : ಕೊನೆಗೂ ಪೊಲೀಸರ ಕೈಸೇರಿದ ದರ್ಶನ್, ಪವಿತ್ರಾಗೌಡರ ಮೊಬೈಲ್ ರಿಪೋರ್ಟ್! ಸಿಕ್ಕಿ ಬಿಡ್ತು ಮಹತ್ವದ ಸಾಕ್ಷ್ಯ?

Actor Darshan : ರೇಣುಕಾಸ್ವಾಮಿ ಕೊಲೆ (Renukaswamy Murder case) ಸಂಬಂಧ ನಟ ದರ್ಶನ್‌ ಹಾಗೂ ಪವಿತ್ರಾಗೌಡರ ಮೊಬೈಲ್‌ಗಳನ್ನು ಹೈದರಾಬಾದ್‌ನ ಸಿಎಫ್‌ಎಸ್‌ಎಲ್‌ಗೆ ಕಳಿಸಲಾಗಿತ್ತು. ಇದೀಗ ದರ್ಶನ್, ಪವಿತ್ರಾಗೌಡರ ಮೊಬೈಲ್ ರಿಪೋರ್ಟ್ ಪೊಲೀಸರ ಕೈಸೇರಿದೆ.

VISTARANEWS.COM


on

By

actor darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (renukaswamy murder) ಪ್ರಕರಣದಲ್ಲಿ ನಟ ದರ್ಶನ್‌ (Actor darshan) ಮತ್ತು ಗ್ಯಾಂಗ್‌ ಜೈಲುಪಾಲಾಗಿದೆ. ಮೂವರು ಜಾಮೀನು ಪಡೆದು ಹೊರಬಂದಿದ್ದರೆ, ಎ2 ದರ್ಶನ್‌ ಹಾಗೂ ಎ1 ಆರೋಪಿ ಪವಿತ್ರಾಗೌಡರ ಜಾಮೀನು ಅರ್ಜಿ ವಿಚಾರಣೆಯು ಕೋರ್ಟ್‌ ಹಂತದಲ್ಲಿದೆ. ಈ ನಡುವೆ ಹೈದರಾಬಾದ್ ಸಿಎಫ್ಎಸ್ಎಲ್‌ಗೆ ಕಳಿಸಿದ್ದ ದರ್ಶನ್‌ ಹಾಗೂ ಪವಿತ್ರಾಗೌಡರ ಐಫೋನ್ ರಿಪೋರ್ಟ್ ಪೊಲೀಸರಿಗೆ ರವಾನೆ ಆಗಿದೆ.

ರೇಣುಕಾಸ್ವಾಮಿ ಕೊಲೆ ಸಂಬಂಧ ದರ್ಶನ್ ಹಾಗೂ ಪವಿತ್ರಾಗೌಡರ ಮೊಬೈಲ್ ಅನ್ನು ಪೊಲೀಸರು ಹೈದರಾಬಾದ್‌ಗೆ ರವಾನಿಸಿದ್ದರು. ಇದೀಗ ಕೊಲೆಗೆ ಸಂಬಂಧಿಸಿದ ಯಾವುದೇ ಫೋಟೊ, ವಿಡಿಯೋ ಇಲ್ಲ ಎಂಬುದು ಬೆಳಕಿಗೆ ಬಂದಿದೆ. ಕೊಲೆಗೆ ಸಂಬಂಧಿಸಿದ ಯಾವುದೇ ಫೋಟೊ, ವಿಡಿಯೋ ಇತರರಿಗೆ ಕಳಿಸಿಲ್ಲ. ಇತರೆ ಆರೋಪಿಗಳು ದರ್ಶನ್ ಮೊಬೈಲ್‌ಗೆ ಯಾವುದೇ ಫೋಟೊ ವಿಡಿಯೋ ಕಳಿಸಿಲ್ಲ ಎನ್ನಲಾಗಿದೆ. ದರ್ಶನ್ ಮೊಬೈಲ್‌ನಲ್ಲಿ ಫೋಟೊ, ವಿಡಿಯೋ ಇರಬಹುದಾ ಅಂತಾ ಸಿಎಫ್ಎಸ್ಎಲ್‌ಗೆ ಕಳುಹಿಸಿದ್ದರು‌. ಆದರೆ ಸಿಎಫ್ಎಸ್ಎಲ್ ಪರೀಕ್ಷೆ ಬಳಿಕ ಎರಡು ಮೊಬೈಲ್‌ ಫೋನ್‌ ಅನ್ನು ವಾಪಸ್ ಪಡೆದಿದ್ದಾರೆ.

ಇದನ್ನೂ ಓದಿ: Karnataka Weather : ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ದರ್ಶನ್‌ಗೆ ಇಂದು ಸಿಗುತ್ತಾ ಜಾಮೀನು

ರೇಣುಕಾಸ್ವಾಮಿ‌ (Renukaswamy Murder case) ಹತ್ಯೆ ಪ್ರಕರಣದ ಆರೋಪಿ ದರ್ಶನ್ (Actor Darshan) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಕಳೆದ ಅ.5ರಂದು ನಡೆಯಿತು. ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಸಹ ಪ್ರಬಲ ವಾದ ಮಂಡಿಸಿದ್ದರು. ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದ ಅಂಶಗಳ ನ್ಯೂನತೆಗಳನ್ನು ಹೆಕ್ಕಿ ತೆಗೆದ ವಕೀಲರು ದರ್ಶನ್ ವಿರುದ್ಧ ಪೊಲೀಸರ ಸುಳ್ಳಿನ ಕಥೆ ಕಟ್ಟಿದ್ದಾರೆ ಎಂದು ವಾದ ಮಂಡಿಸಿದ್ದರು.

ರೇಣುಕಾಸ್ವಾಮಿಯ ಮೃತದೇಹ ಜೂನ್ 9ರಂದು ಪತ್ತೆಯಾಗಿರುವುದಾಗಿ ಅಪಾರ್ಟ್‌ಮೆಂಟ್‌ನ ಸೆಕ್ಯೂರಿಟಿ ನೀಡಿರುವ ದೂರಿನಲ್ಲಿ ಸ್ಪಷ್ಟವಾಗಿದೆ. ಆದರೆ ಜೂನ್ 11ರಂದು ಮಧ್ಯಾಹ್ನ 2:45ರ ಸುಮಾರಿಗೆ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಿಸಲಾಗಿದೆ. ಮೃತನ ವಿವರ ಲಭ್ಯವಾಗಿರದಿದ್ದರಿಂದ ಮರಣೋತ್ತರ ಪರೀಕ್ಷೆ ವಿಳಂಬವಾಗಿದೆ ಎಂದು ಪೊಲೀಸರು ಕಾರಣ ನೀಡಿದ್ದಾರೆ. ಆದರೆ ಯಾವುದೇ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಲು ಮೃತನ ಐಡೆಂಟಿಟಿ ಮುಖ್ಯವಲ್ಲ ಎಂದು ಸಿಆರ್ಪಿಸಿ 174 ಸ್ಪಷ್ಟವಾಗಿ ಹೇಳಿದೆ. ಹಾಗಾದರೆ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಿಸಲು ವಿಳಂಬ ಮಾಡಿರುವುದೇಕೆ ಎಂದು ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು.

ಪಿಎಸ್ಐ ವಿನಯ್ ಆರೋಪಿ ಪ್ರದೂಷ್ ಜತೆ ನಿರಂತರ ಸಂಪರ್ಕ!

ಇನ್ನು ಕೊಲೆ ನಡೆದ ವಿಚಾರ ಕಾಮಾಕ್ಷಿಪಾಳ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವಿನಯ್‌ಗೆ ಗೊತ್ತಿತ್ತು. ಅವರ ಮೊಬೈಲ್‌ನಲ್ಲಿ ಘಟನಾ ಸ್ಥಳದ ಸಿಸಿಟಿವಿ ಹಾಗೂ ಮೃತದೇಹದ ಫೋಟೋ‌ ಪತ್ತೆಯಾಗಿದೆ.‌ ಅದನ್ನು ಆರೋಪಿ ಪ್ರದೂಷ್‌ಗೆ ಕಳಿಸಿದ್ದಾನೆ. ಹಾಗಾದರೆ ಪಿಎಸ್ಐ‌ ಫೋನ್‌ ಯಾಕೆ ಸೀಜ್ ಮಾಡಿಲ್ಲ. ಮೊಬೈಲ್ ರಿಟ್ರೀವ್ ಮಾಡಿಲ್ಲವೆಂದು ತನಿಖಾಧಿಕಾರಿಗಳ ವಿರುದ್ಧ ನಾಗೇಶ್‌ ಗುಡುಗಿದರು.

ದರ್ಶನ್ ಮನೆಯಲ್ಲಿ ಸಿಕ್ಕಿದ್ದು ವ್ಯವಹಾರಿಕ ಹಣ; ಸಾಕ್ಷಿಗಳಿಗೆ ನೀಡಲು ಇರುವುದು ಶುದ್ಧ ಸುಳ್ಳು!

ಅಲ್ಲದೆ ಜೂನ್ 18ರಂದು ದರ್ಶನ್ ಅವರ ಮನೆಯಲ್ಲಿ 37.5 ಲಕ್ಷ ರೂ ಹಣವನ್ನು ಜಪ್ತಿ ಮಾಡಿರುವ ಪೊಲೀಸರು, ಸಾಕ್ಷ್ಯ ನಾಶ ಮಾಡಲು ಪ್ರಕರಣದ ಇತರೆ ಆರೋಪಿಗಳಿಗೆ ನೀಡಲು ಹಣ ಸಂಗ್ರಹಿಸಿಟ್ಟಿರುವುದಾಗಿ ಹೇಳಿಕೆ ಪಡೆದಿರುವುದಾಗಿ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಮೋಹನ್ ರಾಜ್ ಎಂಬುವವರು ತಮ್ಮ ಮಗಳ ಆಲ್ಬಂ ಸಾಂಗ್ ಮಾಡಿಸಲು ದರ್ಶನ್ ಅವರಿಂದ ಫೆಬ್ರವರಿಯಲ್ಲಿ ಹಣ ಪಡೆದಿದ್ದರು. ಆ ಸಾಲದ ಹಣವನ್ನು ಮೇ 2ರಂದೇ ವಾಪಾಸ್ ನೀಡಿದ್ದಾರೆ. ಹಾಗಾದರೆ ದರ್ಶನ್ ಅವರು ಸಾಕ್ಷಿಗಳಿಗೆ ಕೊಡಲೆಂದೇ ಹಣ ಸಂಗ್ರಹಿಸಿಟ್ಟಿದ್ದರು ಎನ್ನಲು ಸಾಧ್ಯವೇ? ಮುಂದೆ ರೇಣುಕಾಸ್ವಾಮಿ ಎಂಬ ವ್ಯಕ್ತಿ ಬರಲಿದ್ದಾನೆ ಅವನ ಹತ್ಯೆಯಾಗಲಿದೆ. ಅದನ್ನು ಮುಚ್ಚಿಹಾಕಲು ಸಾಕ್ಷಿಗಳಿಗೆ ಹಣ ನೀಡಬೇಕಾಗುತ್ತದೆ ಎಂದು ದರ್ಶನ್ ಊಹಿಸಿರಲು ಸಾಧ್ಯವೇ ಎಂದು ತನಿಖಾಧಿಕಾರಿಗಳ ಕಾರ್ಯವೈಖರಿಯ ಕುರಿತು ಪ್ರಶ್ನೆ ಮಾಡಿದ ಹಿರಿಯ ವಕೀಲ ಸಿ.ವಿ. ನಾಗೇಶ್ ತನಿಖಾಧಿಕಾರಿಗಳ ಲೋಪದ ಬಗ್ಗೆ ಕೋರ್ಟ್ ಗಮನಕ್ಕೆ ತಂದರು.

ಸಿಆರ್ ಪಿಸಿ 161 ಹೇಳಿಕೆಗೂ 164 ಹೇಳಿಕೆಗೂ ತಾಳೆಯಿಲ್ಲ!

ಇನ್ನು ಪ್ರಕರಣದಲ್ಲಿ ಐ ವಿಟ್ನೆಸ್ ಹಾಗೂ ಕೆಲ ಸಾಕ್ಷಿಗಳ ಹೇಳಿಕೆ ದಾಖಲ ಮಾಡಲಾಗಿದೆ. ಆದರೆ ಎರಡು ಸ್ವ ಇಚ್ಚಾ ಹೇಳಿಕೆಗಳಲ್ಲಿ ಕೆಲ ಅಂಶಗಳು ವ್ಯತಿರಿಕ್ತವಾಗಿವೆ. ಪೊಲೀಸರಿಗೆ ಮಿಡ್ ನೈಟ್ ಹೇಳಿಕೆ ದಾಖಲಿಸುವ ಅಭ್ಯಾಸವಿದೆ. ಮಲಗುವಾಗ ಓದಬಹುದಾದ ಅರೇಬಿಯನ್ ನೈಟ್ಸ್ ರೀತಿ ಕಥೆಯಿದೆ. ಸಾಕ್ಷಿದಾರರಾಗಿ ನಟ ಚಿಕ್ಕಣ್ಣ ಹಾಗೂ ನವೀನ್ ಅವರು ಪೊಲೀಸರ ಮುಂದೆ ಹೇಳಿಕೆ ಹಾಗೂ ನ್ಯಾಯಾಲಯದ ಮುಂದೆ ಹೇಳಿಕೆಗಳು ವ್ಯತಿರಿಕ್ತವಾಗಿದೆ. ಶೂ ನಲ್ಲಿ ರಕ್ತದ ಗುರುತುವಿದೆ. ಆದರೆ ಯಾವ ಶೂ ಎಂದು ನಿಖರವಾಗಿ ತಿಳಿಸಿಲ್ಲ. ಪಂಚನಾಮೆ ವೇಳೆ ಇದ್ದ ರಕ್ತದ ಕಲೆಗಳು ಎಫ್ಎಸ್ಎಲ್‌ನಲ್ಲಿಲ್ಲ. ಹಾಗಾದರೆ ರಕ್ತದ ಗುರುತು ಚಾರ್ಜ್ ಶೀಟ್‌ನಲ್ಲಿ ಹೇಗೆ ಬಂತು ಪ್ರಶ್ನಿಸಿದ ಸಿವಿ ನಾಗೇಶ್, ರಿಮ್ಯಾಂಡ್ ಅರ್ಜಿಯಲ್ಲಿ ಕೆಲ ಸಾಕ್ಷಿಗಳ ಹೆಸರಿಲ್ಲ ಉಲ್ಲೇಖಿಸಿಲ್ಲ. ಕೇಳಿದರೆ, ಬೆದರಿಕೆ, ಗೌಪ್ಯತೆಯ ರೀಸನ್ ನೀಡಿದ್ದಾರೆ ಎಂದು ತಮ್ಮ ವಾದದಲ್ಲಿ ಮಂಡಿಸಿದ್ದರು.

ಕಾಲ್ ರೆಕಾರ್ಡಿಂಗ್ ಆಧಾರದ ಮೇಲೆ ಗಲ್ಲು ಶಿಕ್ಷೆ ವಿಧಿಸಲಾಗದು!

ಇನ್ನು ಪ್ರಕರಣದಲ್ಲಿ ಎ1 ಹಾಗೂ ಎ3 ಆರೋಪಿಗಳೊಂದಿಗೆ ದರ್ಶನ್ ನಿರಂತರವಾಗಿ ಫೋನ್ ಸಂಪರ್ಕದಲ್ಲಿದ್ದರು. ಫೋನ್ ಕಾಲ್‌ ಮೂಲಕವೇ ರೇಣುಕಾಸ್ವಾಮಿಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಎ1 ಆರೋಪಿ ದರ್ಶನ್‌ಗೆ ಸ್ನೇಹಿತೆ. ಪವನ್‌ ಮನಗೆಲದವನು. ಸ್ನೇಹಿತೆ, ಮನೆ ಕೆಲಸದವನ ಜತೆ ಮಾತಾಡಿದರೆ ಕೊಲೆಗೆ ಸಂಚು ರೂಪಿಸಿದಂತೆಯೇ? ಅವರು ಹಲವು ವರ್ಷಗಳಿಂದ ಮಾತನಾಡಿದ್ದಾರೆ. ಕೊಲೆಯಾದ ಒಂದೆರಡು ದಿನ ಹಿಂದೆ ಮುಂದೆ ಮಾತಾಡಿದರೆ ಸಂಶಯ ಪಡಬಹುದಿತ್ತೆಂದು. ಕಾರ್ ರೆಕಾರ್ಡ್ ಆಧಾರದ ಮೇಲೆ ಗಲ್ಲು ಶಿಕ್ಷೆ ವಿಧಿಸೋದಕ್ಕಾಗಲ್ಲ ಎಂದು ವಾದದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ರೇಣುಕಾಸ್ವಾಮಿ ಕೊಲೆಗೆ ದರ್ಶನ್ ಮತ್ತು ಟೀಂ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಕೂತು ಪ್ಲಾ‌ನ್ ಮಾಡಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ಆದರೆ, ಅಲ್ಲಿ‌ ಸೇರಿದ್ದು ಊಟಕ್ಕೆ. ಊಟ‌ ಮಾಡುತ್ತ ಮುಂದಿನ ಸಿನಿಮಾ ಬಗ್ಗೆ ಚರ್ಚೆ ಮಾಡಿದ್ವಿ ಸಾಕ್ಷಿಗಳಾಗಿ ಚೇತನ್ ,ನವೀನ್ ಹಾಗೂ ಚಿಕ್ಕಣ ಹೇಳಿಕೆ ನೀಡಿದ್ದಾರೆ. ಹೀಗಾಗಿ ಇದು ದರ್ಶನ್‌ನ ಪ್ರಕರಣದಲ್ಲಿ ಸಿಲುಕಿಸಲು ಪೊಲೀಸರ ಸೃಷ್ಟಿಸಿರುವ ಸಾಕ್ಷಿಗಳ‌ ಸುಳ್ಳಿನ ಕಥೆ. ಹೀಗಾಗಿ ಜಾಮೀನು ನೀಡಬೇಕೆಂದು ಕೋರಿ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮುಕ್ತಾಯಗೊಳಿಸಿದ್ದು, ಮುಂದಿನ ವಿಚಾರಣೆಯನ್ನ ಕೋರ್ಟ್ ಅಕ್ಟೋಬರ್ 8ಕ್ಕೆ ಮುಂದೂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Congress alliance wins in Kashmir Haryana poll survey Calculations turned upside down
ದೇಶ55 ಸೆಕೆಂಡುಗಳು ago

Jammu-Kashmir Election: ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಯ ಕಮಾಲ್, ಚೇತರಿಸಿಕೊಂಡ ಕಮಲ ಪಡೆ; ತಲೆಕೆಳಗಾಯ್ತು ಹರಿಯಾಣ ಚುನಾವಣೆ ಸಮೀಕ್ಷೆ ಲೆಕ್ಕಾಚಾರ

Pink Strong walkathon to raise awareness among people about breast cancer
ಬೆಂಗಳೂರು1 ಗಂಟೆ ago

Breast cancer : ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡಲೇಬೇಡಿ!

Road Accident
ಬೆಂಗಳೂರು2 ಗಂಟೆಗಳು ago

Road Accident : ಮಹಿಳೆಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್‌; ಕೆಳಗೆ ಬಿದ್ದವಳ ತಲೆ ಮೇಲೆ ಹರಿದ ಕಾರು

Theft case
ಬೆಂಗಳೂರು4 ಗಂಟೆಗಳು ago

Theft Case : ಪಿಜಿ, ಬ್ಯಾಚುಲರ್‌ ರೂಂಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ಖದೀಮರು ಲಾಕ್‌

Casteist slur case filed against comedian Huli Karthik for insulting Bovi community
ಬೆಂಗಳೂರು5 ಗಂಟೆಗಳು ago

Huli karthik : ಬೋವಿ ಜನಾಂಗಕ್ಕೆ ಅವಮಾನ, ಹಾಸ್ಯ ನಟ ಹುಲಿ ಕಾರ್ತಿಕ್‌ ವಿರುದ್ಧ ಜಾತಿ ನಿಂದನೆ ಕೇಸ್; ಅಂದು ‘ಬಿಗ್ ಬಾಸ್’ ಇಂದು ‘ಅನುಬಂಧ’!

actor darshan
ಬೆಂಗಳೂರು5 ಗಂಟೆಗಳು ago

Actor Darshan : ಕೊನೆಗೂ ಪೊಲೀಸರ ಕೈಸೇರಿದ ದರ್ಶನ್, ಪವಿತ್ರಾಗೌಡರ ಮೊಬೈಲ್ ರಿಪೋರ್ಟ್! ಸಿಕ್ಕಿ ಬಿಡ್ತು ಮಹತ್ವದ ಸಾಕ್ಷ್ಯ?

Karnataka Weather Forecast
ಮಳೆ11 ಗಂಟೆಗಳು ago

Karnataka Weather : ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

Dina Bhavishya
ಭವಿಷ್ಯ11 ಗಂಟೆಗಳು ago

Dina Bhavishya : ಈ ರಾಶಿಯವರು ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳನ್ನಾಡಬೇಡಿ

dasara 2024
ದಸರಾ ಸಂಭ್ರಮ24 ಗಂಟೆಗಳು ago

Dasara 2024 : ಮೈಸೂರು ದಸರಾ ಉತ್ಸವದಲ್ಲಿ ಕಣ್ಮನ ಸೆಳೆಯುತ್ತಿದೆ ಹೊಯ್ಸಳ ದೇವಾಲಯದ ಮಾದರಿ ಪ್ರದರ್ಶನ

53rd KVS National Games Kolkata Region School children win final match
ಬೆಂಗಳೂರು1 ದಿನ ago

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ; ಫೈನಲ್‌ ಮ್ಯಾಚ್‌ ಗೆದ್ದ ಕೊಲ್ಕತ್ತಾ ರೀಜನ್‌ ಶಾಲೆ ಮಕ್ಕಳು

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ5 ದಿನಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌