Site icon Vistara News

Robbery Case: ನಗರದಲ್ಲಿ ಬೀಡು ಬಿಟ್ಟಿದೆ ತುಪ್ಪ ಕಳ್ಳತನ ಮಾಡೋ ಗ್ಯಾಂಗ್; ನಂದಿನಿ ಪಾರ್ಲರ್‌, ಸೂಪರ್ ಮಾರ್ಕೆಟ್‌ ಇವರ ಟಾರ್ಗೆಟ್‌

Robbery Case

Robbery Case

ಬೆಂಗಳೂರು: ನಗರದಲ್ಲಿ ಹೊಸ ರೀತಿಯ ಕಳ್ಳತನ ಆರಂಭವಾಗಿದೆ. ಇದೀಗ ಕಳ್ಳರು ತುಪ್ಪವನ್ನೇ ಟಾರ್ಗೆಟ್‌ ಮಾಡಿ ಕಾರ್ಯ ಪ್ರವೃತ್ತರಾಗಿದ್ದಾರೆ. ನಂದಿನಿ ಪಾರ್ಲರ್‌ಗಳು, ಸೂಪರ್ ಮಾರ್ಕೆಟ್‌ಗಳೇ ಇವರ ಮುಖ್ಯ ಗುರಿ. ಅದಕ್ಕೆ ಇತ್ತೀಚಿನ ಉದಾಹರಣೆ ಎಂಬಂತೆ ಅನ್ನಪೂರ್ಣೇಶ್ವರಿ ನಗರದಲ್ಲಿ 15 ಲೀಟರ್ ತುಪ್ಪ ಎಗರಿಸಿ ಕಳ್ಳರು ಪರಾರಿಯಾಗಿದ್ದಾರೆ. ತುಪ್ಪ ಕಳವು ಮಾಡುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ (Robbery Case).

ಒಬ್ಬರೇ ಇರುವ ಅಂಗಡಿಗಳನ್ನ ಟಾರ್ಗೆಟ್‌ ಮಾಡುವ ಕಳ್ಳರು ಕೆಜಿಗಟ್ಟಲೇ ತುಪ್ಪ ಖರೀದಿಸುವ ನೆಪದಲ್ಲಿ ಆಗಮಿಸುತ್ತಾರೆ. ವಳಿಕ ಮತ್ತೊಂದು ವಸ್ತು ಕೇಳಿ ಮಾಲೀಕರು ಅತ್ತ ತಿರುಗುವಷ್ಟರಲ್ಲಿ ತಂದಿಟ್ಟ ತುಪ್ಪವನ್ನು ಎತ್ತಿಕೊಂಡು ಪರಾರಿಯಾತ್ತಾರೆ. ಕಳೆದ ಒಂದು ತಿಂಗಳ ಹಿಂದೆ ಇದೇ ರೀತಿ ನಂದಿನಿ ಪಾರ್ಲರ್‌ ಒಂದರಿಂದ 15 ಕೆಜಿ ತುಪ್ಪ ಖರೀದಿಸಿ ಖದೀಮರು ಪಾರಾರಿಯಾಗಿದ್ದರು.

ಅಂದು ಕೆಂಗೇರಿ ಕೊಮ್ಮಘಟ್ಟ ನಂದಿನಿ ಪಾರ್ಲರ್‌ನಲ್ಲಿ ಕೈಚಳಕ ತೋರಿದ್ದ ಕಳ್ಳರು ಪೇಡ ಖರೀದಿ ನೆಪದಲ್ಲಿ ತುಪ್ಪ ಕದ್ದೊಯ್ದಿದ್ದರು. ಇದೀಗ ಅದೇ ರೀತಿಯಲ್ಲಿ ಅನ್ನಪೂರ್ಣೇಶ್ವರಿ ನಗರದಲ್ಲಿ ಕಳ್ಳರು ಕೈ ಚಳಕ ತೋರಿದ್ದಾರೆ. ಅನ್ನಪೂರ್ಣೇಶ್ವರಿ ನಗರದ ಪೇರ್ ಪ್ರೈಸ್ ಎಂಬ ಸೂಪರ್ ಮಾರ್ಕೇಟ್‌ನಲ್ಲಿ ಈ ಘಟನೆ ನಡೆದಿದೆ. ಇಲ್ಲಿಂದಲೂ 15 ಲೀಟರ್ ತುಪ್ಪ ಖರೀದಿಸಿದ ಇಬ್ಬರು ಆರೋಪಿಗಳು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿ ಟಿವೆ ಕ್ಯಾ,ಮೆರಾದಲ್ಲಿ ಸೆರೆಯಾಗಿದೆ.

ಕಾರಿಗೆ ಬೈಕ್ ಅಡ್ಡ ಹಾಕಿ ಬಾನೆಟ್‌ಗೆ ಒದ್ದ ಬೈಕ್ ಸವಾರ

ಬೆಂಗಳೂರು: ದಾರಿ ಬಿಡುವ ಸಂದರ್ಭದಲ್ಲಿ ಬೈಕ್‌ ಮತ್ತು ಕಾರು ಚಾಲಕನ ಮಧ್ಯೆ ಜಗಳ ನಡೆದಿರುವ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಮೂಲಕ ನಗರದಲ್ಲಿ ನಡೆಯುತ್ತಿರುವ ರೋಡ್ ರೇಜ್‌ಗೆ ಮತ್ತೊಂದು ಘಟನೆ ಸೇರ್ಪಡೆಯಾದಂತಾಗಿದೆ.

ಜಕ್ಕೂರಿನಲ್ಲಿ ಯೂ ಟರ್ನ್ ಮಾಡುವ ವೇಳೆ ಕಾರು ಚಾಲಕ ಪ್ರವೀಣ್ ಹಾಗೂ ದ್ವಿಚಕ್ರ ವಾಹನ ಸವಾರನ ನಡುವೆ ಕಿರಿಕ್ ನಡೆದಿದೆ. ಈ ವೇಳೆ ಕಾರನ್ನು ಅಡ್ಡ ಹಾಕಿ ಕಾರ್‌ನ ಬಾನೆಟ್‌ಗೆ ಒದ್ದು ಬೈಕ್‌ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಫಾಲೋ ಮಾಡಿಕೊಂಡು ಬಂದಿದ್ದ ದ್ವಿಚಕ್ರ ವಾಹನ ಸವಾರ ಶ್ರೀರಾಮಪುರ ವಿಲೇಜ್ ಬಳಿಯೂ ಕಿರಿಕ್‌ ಮಾಡಿದ್ದಾನೆ. ಕಾರ್ ಡ್ಯಾಷ್ ಕ್ಯಾಮ್‌ ಬೈಕ್‌ ಸವಾರನ ಕೃತ್ಯ ಸೆರೆಯಾಗಿದೆ.

ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

ಬೆಂಗಳೂರು: ರಾಜಧಾನಿ ಬೆಂಗಳೂರಿ‌ನಲ್ಲಿ (Bengaluru News) ಭಯಂಕರ ಕೊಲೆ (Bengaluru Murder) ಪ್ರಕರಣವನ್ನು ಸಂಪಿಗೇಹಳ್ಳಿ ಪೊಲೀಸರು ಬಯಲು ಮಾಡಿದ್ದಾರೆ. ಮನೆಗೆ ಬಂದಿದ್ದ ವ್ಯಕ್ತಿಗೆ ಜಾಕ್‌ ರಾಡ್‌ನಿಂದ ಹೊಡೆದು ಕೊಂದು, ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದಿದ್ದಾನೆ. ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಈ ಕೃತ್ಯ ನಡೆದಿದೆ. ಕೆ.ವಿ.ಶ್ರೀನಾಥ್ (34) ಕೊಲೆಯಾದವನು. ಮಾಧವ ರಾವ್ ಎಂಬಾತ ಕೊಲೆ ಆರೋಪಿ.

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

Exit mobile version