Self Harming : ಪತಿ ಅಗಲಿಕೆಯ ನೋವು; ಖಿನ್ನತೆಗೊಳಗಾದ ತಾಯಿ ಮತ್ತು ಮಗ ಆತ್ಮಹತ್ಯೆ - Vistara News

ಬೆಂಗಳೂರು

Self Harming : ಪತಿ ಅಗಲಿಕೆಯ ನೋವು; ಖಿನ್ನತೆಗೊಳಗಾದ ತಾಯಿ ಮತ್ತು ಮಗ ಆತ್ಮಹತ್ಯೆ

Self Harming : ಮನೆ ಯಜಮಾನನ ಸಾವಿನಿಂದ ಕಂಗಲಾದ ತಾಯಿ-ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ.

VISTARANEWS.COM


on

Self Harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಯಲಹಂಕದ ಆರ್‌ಎನ್‌ಜೆಡ್ ಅಪಾರ್ಟ್‌ಮೆಂಟ್‌ನಲ್ಲಿ ತಾಯಿ ಮತ್ತು ಮಗ ಇಬ್ಬರು ಆತ್ಮಹತ್ಯೆ (Self Harming)ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಭಾರ್ಗವ್ ಪುಲಿವರ್ತ (13), ತಾಯಿ ರಮ್ಯಾ (40) ಮೃತ ದುರ್ದೈವಿಗಳು.

ಮೂಲತಃ ಆಂಧ್ರ ಪ್ರದೇಶದ ರಮ್ಯಾ ಶ್ರೀಧರ್ ಎಂಬುವವರನ್ನು ಪ್ರೀತಿಸಿ, ಅಂತರ್ಜಾತಿ ವಿವಾಹವಾಗಿದ್ದರು. ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಶ್ರೀಧರ್ ಪುಲಿವರ್ತ ಮೂರು ತಿಂಗಳ ಹಿಂದೆ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದರು. ಫ್ಲ್ಯಾಟ್ ಬಾಡಿಗೆ 45 ಸಾವಿರ, ಮಕ್ಕಳಿಬ್ಬರ ಶಾಲೆ ಫೀಸ್, ಮನೆ ನಿರ್ವಹಣೆ ಖರ್ಚು ಅಂತ ತಿಂಗಳಿಗೆ ಲಕ್ಷ ಲಕ್ಷ ಹಣ ಬೇಕಿತ್ತು. ಇತ್ತ ಹಣ ಹೊಂದಿಸುವುದು ರಮ್ಯಾಳಿಗೆ ಆಗುತ್ತಿರಲಿಲ್ಲ. ಇದೇ ಕಾರಣಕ್ಕೆ ಖಿನ್ನತೆಗೊಳಗಾಗಿದ್ದರು. ಪತಿ ಸತ್ತ ನಂತರ ತಾವು ಸಾಯೋದಾಗಿ ರಮ್ಯಾ ಹಾಗೂ ಮಗ ಭಾರ್ಗವ್ ಹೇಳಿ ಕೊಂಡಿದ್ದರಂತೆ.

ರಮ್ಯಾಳಿಗೆ 19 ವರ್ಷದ ಮಗಳು ಇದ್ದು, ಆಕೆ ಪಿಜಿಯಲ್ಲಿದ್ದುಕೊಂಡು ಓದುತ್ತಿದ್ದಾಳೆ. ಕಳೆದ 9ರ ರಾತ್ರಿ ಮಗಳ ಜತೆಗೆ ಮಾತನಾಡಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಸಾವಿನ ನಂತರ ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ಕುಟುಂಬವು ಕುಗ್ಗಿ ಹೋಗಿತ್ತು.

ಇದನ್ನೂ ಓದಿ: Murder case : ಪ್ರೀತಿ ವಿಷ್ಯಕ್ಕೆ ಯುವಕನಿಗೆ ಬೆಂಕಿ ಹಚ್ಚಿ ಕೊಂದವರ ವಿರುದ್ಧ ಚಾಜ್೯ ಶೀಟ್ ಸಲ್ಲಿಕೆ

ಮೊದಲು ಮಗ ಆತ್ಮಹತ್ಯೆ ಮಾಡಿಕೊಂಡ ಬಳಿಕ ರಮ್ಯಾ ನೇಣಿನ ಕುಣಿಕೆಯಿಂದ ಬಿಡಿಸಿ ಬೆಡ್ ಮೇಲೆ ಮಲಗಿಸಿದ್ದಾರೆ. ನಂತರ ತಾವು ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಸತ್ತು ನಾಲ್ಕು ದಿನದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ಪೊಲೀಸ್‌, ಡಾಕ್ಟರ್‌ ಮತ್ತು ಮಗಳಿಗೆ ಪತ್ರ ಬರೆದು ನೇಣಿಗೆ ಶರಣಾಗಿದ್ದಾರೆ.

ಎರಡ್ಮೂರು ದಿನದಿಂದ ಮನೆಯಿಂದ ಫೋನ್‌ ಬಾರದ ಹಿನ್ನೆಲೆಯಲ್ಲಿ ನಿನ್ನೆ ಶುಕ್ರವಾರ ಮಗಳು ಪಿಜಿಯಿಂದ ಮನೆಗೆ ಬಂದಿದ್ದಾಳೆ. ಮನೆ ಬಾಗಿಲು ಎಷ್ಟೇ ತಟ್ಟಿದ್ದರು ತೆರೆಯದೇ ಇದ್ದಾಗ, ತನ್ನ ಬಳಿ ಇದ್ದ ಇನ್ನೊಂದು ಕೀಯಿಂದ ಮನೆಯ ಬಾಗಿಲು ತೆಗೆದಿದ್ದಾಳೆ. ಆಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ರಣಭೀಕರ ಮಳೆಗೆ ಶಿರೂರು ಬಳಿ ಗುಡ್ಡ ಕುಸಿತ; ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

Karnataka Rain : ರಣಭೀಕರ ಮಳೆಗೆ ಶಿರೂರು ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಹಾಸನದಲ್ಲಿ ತೆಂಗಿನ ಮರ ಬಿದ್ದು ಮನೆ ಜಖಂಗೊಂಡು ವಿದ್ಯುತ್ ಸಂಪರ್ಕ ಕಡಿತಗೊಂಡರೆ, ಹಾಸನ, ಶಿವಮೊಗ್ಗದಲ್ಲಿ ಕಲ್ಲುಹಳ್ಳ ಸೇತುವೆಯ ತಡೆಗೋಡೆ ಕುಸಿದು ಬಿದ್ದಿದೆ.

VISTARANEWS.COM


on

By

Karnataka Rain
Koo

ಉತ್ತರಕನ್ನಡ ಉತ್ತರಕನ್ನಡದಲ್ಲಿ ರಣಭೀಕರ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿದೆ. ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಗುಡ್ಡ ಕುಸಿದಿದೆ. 5ಕ್ಕೂ ಹೆಚ್ಚು ಮಂದಿ ಗುಡ್ಡದ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ.

ಒಂದೇ ಕುಟಂಬದ ಐವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಲಕ್ಷ್ಮಣ ನಾಯ್ಕ(47), ಶಾಂತಿ ನಾಯ್ಕ(36), ರೋಶನ(11), ಅವಂತಿಕಾ(6), ಜಗನ್ನಾಥ(55) ಎಂಬುವವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಐಆರ್‌ಬಿ ಕಂಪೆನಿಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

Karnataka Rain

5 ಮಂದಿ ಕುಟುಂಬ ವಾಸವಿದ್ದ ಅಂಗಡಿ ಮೇಲೆ ಗುಡ್ಡ ಕುಸಿದಿದ್ದು, ಗ್ರಾಹಕರು ಸೇರಿ ಮನೆಯವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಧಾರಾಕಾರ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಗುಡ್ಡ ಸಡಿಲಗೊಂಡಿತ್ತು. ಗಂಗಾವಳಿ ನದಿಗೆ ಹೊಂದಿಕೊಂಡಿರುವ ಶಿರೂರು ಪ್ರದೇಶ ಇದಾಗಿದ್ದು, ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲಾ-ಕುಮಟಾ ನಡುವೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

karnataka Rain

ಗುಡ್ಡ ಕುಸಿದ ರಭಸಕ್ಕೆ ನದಿಗೆ ಬಿದ್ದ ಗ್ಯಾಸ್ ಟ್ಯಾಂಕರ್

ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದ ರಭಸಕ್ಕೆ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದೆ. ಶಿರೂರಿನ ಬೊಮ್ಮಯ್ಯ ದೇವಸ್ಥಾನದ ಬಳಿ ಗುಡ್ದ ಕುಸಿದ ಪರಿಣಾಮ ಟೀ ಸ್ಟಾಲ್ ಸೇರಿ ಹಲವು ಅಂಗಡಿಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಒಂದೇ ಕುಟುಂಬದ ಐವರು ಸೇರಿ ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಸ್ಥಳಕ್ಕೆ ಅಂಕೋಲಾ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ಎನ್‌ಹೆಚ್‌ಎಐ ಆಂಬ್ಯುಲೆನ್ಸ್ ದೌಡಾಯಿಸಿದೆ.

ಇದನ್ನೂ ಓದಿ: Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

karnataka Rain

ಹಾಸನದಲ್ಲಿ ಮರ ಬಿದ್ದು ಮನೆ ಜಖಂ, ವಿದ್ಯುತ್ ಸಂಪರ್ಕ ಕಡಿತ

ಭಾರಿ ಮಳೆ- ಗಾಳಿಗೆ ತೆಂಗಿನ ಮರವೊಂದು ಮನೆ ಮೇಲೆ, ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಪರಿಣಾಮ ಮನೆ ಸಂಪೂರ್ಣ ಜಖಂಗೊಂಡರೆ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ. ಮಾಜಿ ಶಾಸಕ ದಿ.ವೈ.ಎನ್.ರುದ್ರೇಶ್‌ಗೌಡರಿಗೆ ಸೇರಿದ ಮನೆ ಹಾನಿಯಾಗಿದೆ. ವಿದ್ಯುತ್ ಇಲ್ಲದ ನಿವಾಸಿಗಳು ಪರದಾಡುತ್ತಿದ್ದಾರೆ. ಕೂಡಲೇ ಮರ ತೆರವುಗೊಳಿಸಿ ವಿದ್ಯುತ್ ಪೂರೈಕೆ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.

karnataka rain

ಶಿವಮೊಗ್ಗದಲ್ಲಿ ಕಲ್ಲುಹಳ್ಳ ಸೇತುವೆ ತಡೆಗೋಡೆ ಕುಸಿತ

ಶಿವಮೊಗ್ಗದ ಹೊಸನಗರ ಸಮೀಪ ಇರುವ ಕಲ್ಲುಹಳ್ಳ ಸೇತುವೆಯ ತಡೆಗೋಡೆ ಕುಸಿತಗೊಂಡಿದ್ದು, ಬಾರಿ ಅನಾಹುತವೊಂದು ತಪ್ಪಿದೆ. ರಾಣಿಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ 766 c ಸೇರಿದ ತಡೆಗೋಡೆ ಕುಸಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಡಿಯಲ್ಲಿ ಸುಮಾರು 5 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣ ಮಾಡಲಾಗಿತ್ತು. ಲೋಕಾರ್ಪಣೆಗೊಳ್ಳುವ ಮೊದಲೇ ಸೇತುವೆಯ ತಡೆಗೋಡೆ ಕುಸಿದಿದೆ. ಇದೇ ರೀತಿ ಮಳೆ ಮುಂದುವರೆದಲ್ಲಿ ಇನ್ನಷ್ಟು ಭಾಗ ಕುಸಿಯುವ ಭೀತಿ ಇದೆ.

ಹಾಸನದಲ್ಲೂ ಮಳೆ ಅಬ್ಬರಕ್ಕೆ ತಡೆಗೋಡೆ ಕುಸಿತ

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆ ಗೋಡೆ ಕುಸಿದಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯ ತಡೆಗೋಡೆ ಸಂಪೂರ್ಣ ಕುಸಿದಿದ್ದು, ಒಂದು ಬದಿಯ ರಸ್ತೆ ಸಂಚಾರ ಬಂದ್ ಆಗುವ ಆತಂಕ ಇದೆ. ಸಕಲೇಶಪುರ ತಾಲೂಕಿನ ಗುಲಗಳಲೆ ಗ್ರಾಮದ, ರಾಟೆಮನೆ ಸಮೀಪ ಘಟನೆ ನಡೆದಿದೆ.

Karnataka Rain

ಸುಮಾರು 40 ಅಡಿಯಷ್ಟು ಎತ್ತರಕ್ಕೆ ನಿರ್ಮಿಸಿದ್ದ ತಡೆಗೋಡೆಯು ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಕುಸಿದು ಬಿದ್ದಿದೆ. ವಾಹನ ಸಂಚಾರ ಹೆಚ್ಚಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಂಕ್ರೀಟ್ ರಸ್ತೆ ಬಿರುಕು ಬಿಡುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

Karnataka Assembly Live: ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಈ ಚರ್ಚೆ ಮುಂದುವರಿಯಲಿದೆ. ಬಿಜೆಪಿಯ ಸಿಟಿ ರವಿ, ಸುನೀಲ್‌ ಕುಮಾರ್‌, ಯತ್ನಾಳ್ ಮುಂತಾದವರು ಈ ಚರ್ಚೆಯನ್ನು ಮುನ್ನಡೆಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುವ ನಿರೀಕ್ಷೆ ಇದೆ. ನಿನ್ನೆ ಆಶೋಕ್ ಮಾತನಾಡುವಾಗಲೇ ಈ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು.

VISTARANEWS.COM


on

karnataka assembly live
Koo

ಬೆಂಗಳೂರು: ವಿಧಾನ ಮಂಡಲ ಮಳೆಗಾಲದ ಅಧಿವೇಶನ (Karnataka Assembly Live, Karnataka Assembly monsoon session) ಇಂದು ಇನ್ನಷ್ಟು ರಂಗೇರಲಿದೆ. ವಾಲ್ಮೀಕಿ ನಿಗಮದ ಅವ್ಯವಹಾರ (Valmiki corporation Scam) ಪ್ರಕರಣದ ಕುರಿತು ನಿನ್ನೆ ವಿಧಾನಸಭೆ ಕಲಾಪದಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ವಿಪಕ್ಷ ನಾಯಕ ಆರ್. ಆಶೋಕ್ (R Ashok) ಅವರು ಈ ಚರ್ಚೆಯನ್ನು ಮುನ್ನಡೆಸಿದ್ದರು. ಇಂದು ಅದು ಮುಂದುವರಿಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕೂಡ ಇದಕ್ಕೆ ಉತ್ತರ ನೀಡಲಿದ್ದಾರೆ.

ನಿನ್ನೆ ಮಾತನಾಡಿದ ಆರ್.‌ ಅಶೋಕ್‌, ಸರ್ಕಾರದ ತಪ್ಪು ನಡೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ಹೈಕಮಾಂಡ್‌ಗೆ ಕಪ್ಪಕಾಣಿಕೆ ಸಲ್ಲಿಸಲು ನಿಗಮದ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದಿದ್ದ ಅಶೋಕ್‌, 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದರು. ಈ ಹಣ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಹೇಗೆ ವಿನಿಯೋಗವಾಗಬೇಕಿತ್ತು, ಹೇಗೆ ಅಕ್ರಮವಾಗಿದೆ ಎಂಬುದನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದರು. ಆ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.

ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಈ ಚರ್ಚೆ ಮುಂದುವರಿಯಲಿದೆ. ಬಿಜೆಪಿಯ ಸಿಟಿ ರವಿ, ಸುನೀಲ್‌ ಕುಮಾರ್‌, ಯತ್ನಾಳ್ ಮುಂತಾದವರು ಈ ಚರ್ಚೆಯನ್ನು ಮುನ್ನಡೆಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುವ ನಿರೀಕ್ಷೆ ಇದೆ. ನಿನ್ನೆ ಆಶೋಕ್ ಮಾತನಾಡುವಾಗಲೇ ಈ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು. ʼನಿಮ್ಮ ವಾದವನ್ನ ಸಮಾಧಾನವಾಗಿ ಕೇಳ್ತೀನಿ. ನಾನು ಉತ್ತರ ಕೊಡುವಾಗಲೂ ಅಷ್ಟೇ ಸಮಾಧಾನದಿಂದ ಕೇಳಬೇಕುʼ ಎಂದಿದ್ದರು.

ʼ187 ಕೋಟಿ ಅಲ್ಲ ಅದು ಬರೀ 87 ಕೋಟಿ ಮಾತ್ರ ವರ್ಗಾವಣೆ ಆಗಿರುವುದು. ಹಣ ಎಲ್ಲಿಯವರೆಗೂ ಸರ್ಕಾರದ ಸುಪರ್ದಿಯಲ್ಲಿರುತ್ತೆ, ಬಳಿಕ ಆ ಹಣ ಯಾರಿಗೆ ಹೋಗುತ್ತೆ ಈ ಬಗ್ಗೆ ಸಂಪೂರ್ಣ ಮಾಹಿತಿ ಕೊಡ್ತೀನಿ. ಇದರಲ್ಲಿ ಯಾರ ಪಾತ್ರ ಎಷ್ಟಿದೆ. ಈ ಹಿಂದೆ ಹೇಗೆ ವ್ಯವಹಾರ ನಡೆದಿದೆ ಅದೆಲ್ಲವನ್ನ ಸಂಪೂರ್ಣವಾಗಿ ಕೊಡ್ತೀನಿʼ ಎಂದು ಹೇಳಿದ್ದರು. ಎಂದರೆ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಪ್ರಕರಣಗಳನ್ನೂ ಸಿಎಂ ಪ್ರಸ್ತಾವಿಸುವುದು ಖಚಿತವಾಗಿದೆ.

ಇದರಿಂದ ಸದನದಲ್ಲಿ ಇಂದು ಏಟು ಎದಿರೇಟು ಖಚಿತವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತ ಪಕ್ಷ ಸದದ್ಯರು ಸಾಥ್‌ ನೀಡಲಿದ್ದು, ವಿಪಕ್ಷ ಶಾಸಕರು ಕೆರಳಿ ಪ್ರತಿಭಟನೆ ನಡೆಸುವುದೂ ಬಹುತೇಕ ಖಚಿತವಾಗಿದೆ. ಸ್ಪೀಕರ್‌ ಯು.ಟಿ ಖಾದರ್‌ ಅವರು ಶಾಂತಚಿತ್ತರಾಗಿಯೇ ಸದನದ ಕಲಾಪವನ್ನು ನಿರ್ವಹಿಸುತ್ತಿದ್ದರೂ, ಹಲವು ಬಾರಿ ಶಾಸಕರ ವರ್ತನೆ ಅವರಿಗೂ ಸವಾಲಾಗುತ್ತಿದೆ.

ನಿನ್ನೆ ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ನೂತನ ದ್ವಾರವನ್ನು ಸಿಎಂ ಉದ್ಘಾಟಿಸಿದ್ದರು. ವಿಧಾನಸಭೆಯ ಸಭಾಂಗಣವನ್ನು ಇನ್ನಷ್ಟು ಸುಂದರವಾಗಿ ವಿನ್ಯಾಸಗೊಳಿಸಲಾಗಿದ್ದು, ಇದಕ್ಕೆ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕಲಾಪ ಆರಂಭದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಲಾಯಿತು. ನಂತರ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಮಂಡಿಸಲಾಯಿತು.

ಇದನ್ನೂ ಓದಿ: Assembly Session: ಅಧಿವೇಶನದಲ್ಲಿ ಹಗರಣಗಳ ಸದ್ದು; ಮೊದಲ ದಿನವೇ ಮುಗಿಬಿದ್ದ ವಿಪಕ್ಷ ನಾಯಕರು, ಹೆದರಲ್ಲ ಎಂದ ಸಿಎಂ!

Continue Reading

ಕ್ರೈಂ

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Horrible Murder Case: ನೀಚರು ಮೊದಲಿಗೆ ಶೆಡ್ ಹೊರಗಿನಿಂದ ಲಾಕ್ ಮಾಡಿ, ಶೆಡ್ ಪಕ್ಕದಲ್ಲಿದ್ದ ಸಿಂಟ್ಯಾಕ್ಸ್‌ಗೆ ಸುಮಾರು 100 ಲೀಟರ್ ಪೆಟ್ರೋಲ್ ಸುರಿದಿದ್ದಾರೆ. 2 ಎಚ್‌ಪಿ ಮೆಷಿನ್‌ನಿಂದ ಶೆಡ್ ಸುತ್ತ ಪೆಟ್ರೋಲ್ ಹೊಡೆದು ಬೆಂಕಿ ಹಚ್ಚಿರುವ ಶಂಕೆ ಇದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಶೆಡ್ ಸುಟ್ಟು ಕರಕಲಾಗಿದೆ.

VISTARANEWS.COM


on

murder case set fire bagalakote
Koo

ಬಾಗಲಕೋಟೆ: ಪಾತಕಿಗಳು ಶೆಡ್‌ನ ಬಾಗಿಲು ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಕೊಟ್ಟ (set fire) ಪರಿಣಾಮ ಒಂದೇ ಕುಟುಂಬದ ಇಬ್ಬರು ಸಜೀವವಾಗಿ (Burn to death) ಸುಟ್ಟುಹೋಗಿದ್ದಾರೆ. ಇನ್ನೂ ಇಬ್ಬರು ಸುಟ್ಟ ಗಾಯಗಳೊಂದಿಗೆ ಸಾವು ಬದುಕಿನ ನಡುವೆ ಸೆಣಸಾಡುತ್ತಿದ್ದಾರೆ. ಈ ಭಯಾನಕ ಹತ್ಯಾಕಾಂಡ ಪ್ರಕರಣ (Horrible Murder Case) ಬಾಗಲಕೋಟೆ (Bagalakote news) ಜಿಲ್ಲೆ ಮುಧೋಳ (Mudhol news) ತಾಲ್ಲೂಕಿನ ಬೆಳಗಲಿಯಲ್ಲಿ ನಡೆದಿದೆ.

ಬೆಳಗಲಿ ಪಟ್ಟಣದ ತೋಟದ ಮನೆಯಲ್ಲಿ ಈ ಘೋರ ಕೃತ್ಯ ಎಸಗಲಾಗಿದೆ. ಕುಟುಂಬ ಸಮೇತ ಸುಟ್ಟು ಹಾಕುವ ಉದ್ದೇಶದಿಂದಲೇ ದುಷ್ಟರು ತಡರಾತ್ರಿ ತಗಡಿನ ಶೆಡ್‌ನ ಬಾಗಿಲು ಹೊರಗಿನಿಂದ ಲಾಕ್‌ ಮಾಡಿ, ಪೆಟ್ರೋಲ್ ಸುರಿದು ಶೆಡ್‌ಗೆ ಬೆಂಕಿ ಹಚ್ಚಿದ್ದಾರೆ. ದುರಂತದಲ್ಲಿ ಜೈಬಾನ್ ಪೆಂಡಾರಿ (60), ಶಭಾನಾ ಪೆಂಡಾರಿ (22) ಸಾವಿಗೀಡಾಗಿದ್ದಾರೆ. ದಸ್ತಗೀರ್ ಸಾಬ್ ಪೆಂಡಾರಿ (60), ಶುಭನ್ ಪೆಂಡಾರಿ (26) ತೀವ್ರವಾಗಿ ಸುಟ್ಟ ಗಾಯಗಳೊಂದಿಗೆ ಮುಧೋಳ ತಾಲ್ಲೂಕಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಅಮರನಾಥ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಡರಾತ್ರಿ 2:30ರ ಸುಮಾರಿಗೆ ಈ ಬರ್ಬರ ಕೃತ್ಯ ಎಸಗಲಾಗಿದೆ. ನೀಚರು ಮೊದಲಿಗೆ ಶೆಡ್ ಹೊರಗಿನಿಂದ ಲಾಕ್ ಮಾಡಿ, ಶೆಡ್ ಪಕ್ಕದಲ್ಲಿದ್ದ ಸಿಂಟ್ಯಾಕ್ಸ್‌ಗೆ ಸುಮಾರು 100 ಲೀಟರ್ ಪೆಟ್ರೋಲ್ ಸುರಿದಿದ್ದಾರೆ. 2 ಎಚ್‌ಪಿ ಮೆಷಿನ್‌ನಿಂದ ಶೆಡ್ ಸುತ್ತ ಪೆಟ್ರೋಲ್ ಹೊಡೆದು ಬೆಂಕಿ ಹಚ್ಚಿರುವ ಶಂಕೆ ಇದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಶೆಡ್ ಸುಟ್ಟು ಕರಕಲಾಗಿದೆ.

ಮೃತರು ಹಾಗೂ ಗಾಯಾಳುಗಳು ಒಂದೇ ಕುಟುಂಬದವರು. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪರಿಚಿತರೇ ಕೃತ್ಯ ಎಸಗಿರುವ ಶಂಕೆ ಇದೆ. ಕುಟುಂಬದ ಬಗೆಗೆ ವೈಯಕ್ತಿಕ ದ್ವೇಷ ಹೊಂದಿದ್ದವರು, ಕುಟುಂಬವನ್ನು ಸ್ಥಳದಿಂದ ಒಕ್ಕಲೆಬ್ಬಿಸಲು ಬಯಸಿದವರು, ಕೌಟುಂಬಿಕ ದ್ವೇಷ ಹಾಗೂ ಜಮೀನು ವ್ಯಾಜ್ಯ ಹೊಂದಿದವರನ್ನು ಪ್ರಶ್ನಿಸಲಾಗುತ್ತಿದೆ.

ಬೆಂಗಳೂರಲ್ಲಿ ಹಾಡಹಗಲೇ‌‌ ಪುಂಡಾಟ, 15 ಮಂದಿಯಿಂದ ಯುವಕನ ಮೇಲೆ ಹಲ್ಲೆ

ಬೆಂಗಳೂರು: ಬೆಂಗಳೂರಿನ ಬೀದಿಯಲ್ಲಿ ಹಾಡಹಗಲೇ ನಡೆದ ರಾಜಾರೋಷ ಹಲ್ಲೆಯೊಂದರ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಮಾಡಿ ಸೋಶಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಇದು ಮೆಟ್ರೋ ನಗರದ ಮಾನ ತೆಗೆಯುತ್ತಿದೆ. ವಿದ್ಯಾರಣ್ಯಪುರದಲ್ಲಿ ಘಟನೆ ನಡೆದಿದೆ.

15 ಜನ ಪುಂಡರು ಒಬ್ಬ ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಿಸಿಟಿವಿಯಲ್ಲೂ ಯುವಕನ ಮೇಲಿನ ಹಲ್ಲೆಯ ದೃಶ್ಯ ಸೆರೆಯಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ನರಸೀಪುರ ಬಳಿ ನಡೆದ ಘಟನೆಯಿದು. ಹಲ್ಲೆಗೊಳಗಾದವನು ಹಾಗೂ ಹಲ್ಲೆ ಮಾಡಿದವರ ಕುರಿತ ವಿವರಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

ಹಲ್ಲೆಯಿಂದ‌ ಯುವಕನ‌ ಮುಖ ಮತ್ತು ಮೂಗಿನ‌ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಮತ್ತು ಈಶಾನ್ಯ ಡಿಸಿಪಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಲಾಗಿದೆ. ʼಬಿಎನ್‌ಎಸ್ 109 ಅಂದರೆ ಕೊಲೆ‌ ಯತ್ನ?ʼ ಎಂದು ಉಲ್ಲೇಖಿಸಿ ಪೋಸ್ಟ್‌ ಮಾಡಲಾಗಿದೆ.

ಇದನ್ನೂ ಓದಿ: Crime News: ಶಾಕಿಂಗ್‌; 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕರು

Continue Reading

ಪ್ರಮುಖ ಸುದ್ದಿ

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮತ್ತೊಬ್ಬನ ಬಂಧನ; ಛತ್ತೀಸ್‌ಗಢದಲ್ಲೂ ವಂಚಿಸಿದ್ದ!

Valmiki Corporation Scam: ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಜೊತೆ ಸತತ ಸಂಪರ್ಕದಲ್ಲಿದ್ದ ಈ ಆರೋಪಿ ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲು ಸಹಕಾರ ನೀಡಿದ್ದ. ಇದೇ ರೀತಿ ಈ ಹಿಂದೆಯೂ ಈ ಆರೋಪಿಗಳು ಕೃತ್ಯ ಎಸಗಿದ್ದರು.

VISTARANEWS.COM


on

valmiki corporation scam culprits
ಬಂಧಿತ ಆರೋಪಿಗಳು
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕೇಸ್‌ಗೆ (Valmiki Corporation Scam) ಸಂಬಂಧಿಸಿ ಮತ್ತೊಬ್ಬನನ್ನು ಎಸ್ಐಟಿ (SIT) ಬಂಧಿಸಿದೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ.

ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಜೊತೆ ಸತತ ಸಂಪರ್ಕದಲ್ಲಿದ್ದ ಈ ಆರೋಪಿ ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲು ಸಹಕಾರ ನೀಡಿದ್ದ. ಇದೇ ರೀತಿ ಈ ಹಿಂದೆಯೂ ಈ ಆರೋಪಿಗಳು ಕೃತ್ಯ ಎಸಗಿದ್ದರು. ಛತ್ತೀಸ್‌ಗಢದಲ್ಲಿ ಸತ್ಯನಾರಾಯಣ ವರ್ಮಾ ಹಾಗೂ ಶ್ರೀನಿವಾಸ ರಾವ್ ಸೇರಿ ಇಂಥದೇ ಕೃತ್ಯ ಎಸಗಿದ್ದಾರೆ. ಅದೇ ರೀತಿ ನಿಗಮದ ಅಕೌಂಟ್‌ನಿಂದ ಹಣ ಅಕ್ರಮ ವರ್ಗಾವಣೆ ಮಾಡಿದ್ದರು.

ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಶ್ರೀನಿವಾಸ ರಾವ್ ಎಸ್ಕೇಪ್ ಆಗಿದ್ದ. ಇದೀಗ ಎಸ್‌ಐಟಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದೆ. ಸದ್ಯ ಆರೋಪಿಯನ್ನು ಒಂಬತ್ತು ದಿನ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಈಗಾಗಲೇ ಮಹತ್ವದ ಬೆಳವಣಿಗೆಗಳು ನಡೆದಿವೆ. ಮೂವರನ್ನು ಬಂಧಿಸಲಾಗಿದೆ. ಇವರಲ್ಲಿ ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ, ಲೆಕ್ಕ ಪರಿಶೋಧಕ ಪರಶುರಾಮ್‌ ಸೇರಿದ್ದಾರೆ. ಪ್ರಕರಣದಲ್ಲಿ ಇಡಿ ಸಹ ತನಿಖೆಗೆ ಇಳಿದಿದೆ. ಒಂದು ವಾರದ ಹಿಂದೆ ಮಾಜಿ ಸಚಿವ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಬಿ. ನಾಗೇಂದ್ರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿದ್ದು, ಅವರನ್ನು ಬಂಧಿಸಿ ತನಿಖೆ ನಡೆಸುತ್ತಿದೆ. ಹಗರಣದಲ್ಲಿ ಪಾಲ್ಗೊಂಡಿರುವ ಯೂನಿಯನ್‌ ಬ್ಯಾಂಕ್‌ ಸಿಬ್ಬಂದಿಗಳಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನೂ ಆರು ಮಂದಿ ನಾಪತ್ತೆಯಾಗಿದ್ದಾರೆ.

ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಮನೆ ಹಾಗೂ ಕಚೇರಿಗಳ ಮೇಲೂ ಇಡಿ ದಾಳಿ ನಡೆಸಿತ್ತು. ಬೀಸುವ ದೊಣ್ಣೆಯಿಂದ ಪಾರಾಗಲು ಮೂರು ದಿನ ಕಣ್ಮರೆಯಾಗಿದ್ದ ದದ್ದಲ್‌, ಇದೀಗ ವಿಧಾನಸಭೆ ಕಲಾಪಕ್ಕೆ ಹಾಜರಾಗಿ ಬಂಧನ ಭೀತಿಯಿಂದ ತಪ್ಪಿಸಿಕೊಂಡಿದ್ದಾರೆ. ಅಧಿವೇಶನ ಮುಗಿಯುವವರೆಗೂ ಅವರಿಗೆ ಬಂಧನದ ಆತಂಕವಿಲ್ಲ.

ವಾಲ್ಮೀಕಿ ನಿಗಮ ಅಕ್ರಮದಲ್ಲಿ ನನ್ನ ಪಾತ್ರ ಇಲ್ಲ; ಸಿಎಂ ಮುಂದೆ ಶಾಸಕ ದದ್ದಲ್ ಕಣ್ಣೀರು

ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣ (Valmiki Corp scam) ಸಂಬಂಧ ಎಸ್‌ಐಟಿ ವಿಚಾರಣೆಗೆ ಹಾಜರಾದ ಬಳಿಕ ಮೂರು ದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ಶಾಸಕ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಸೋಮವಾರ ವಿಧಾನ ಮಂಡಲ ಅಧಿವೇಶನಕ್ಕೆ ಹಾಜರಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಶಾಸಕ ದದ್ದಲ್‌(Basanagouda Daddal), ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ, ಈ ಘಟನೆಯಿಂದ ನಮ್ಮ ಕುಟುಂಬದ ಸದಸ್ಯರು ಹೆದರಿಕೊಂಡಿದ್ದಾರೆ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ.

ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ದದ್ದಲ್, ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ದದ್ದಲ್ ನಾಪತ್ತೆ ಅಂತ ಬಿಜೆಪಿ‌ಯವರು ಸುಮ್ಮನೇ ಪೋಸ್ಟರ್ ವೈರಲ್ ಮಾಡುತ್ತಿದ್ದಾರೆ. ಯಾವ ಇಡಿಯವರೂ ನನ್ನ ಬೆನ್ನತ್ತಿಲ್ಲ. ಬಿಜೆಪಿ ನಾಯಕರು ಬೇಕು ಅಂತಲೇ ಸುದ್ದಿ ಹಬ್ಬಿಸುತ್ತಿದ್ದಾರೆ. ನಾನು ನಾಪತ್ತೆಯಾಗಿಲ್ಲ. ಈ ಘಟನೆಯಿಂದ ನಮ್ಮ ಕುಟುಂಬದ ಸದಸ್ಯರು ಹೆದರಿಕೊಂಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಅಂತ ಸಿಎಂ ಮುಂದೆ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!

Continue Reading
Advertisement
Karnataka Rain
ಮಳೆ8 mins ago

Karnataka Rain : ರಣಭೀಕರ ಮಳೆಗೆ ಶಿರೂರು ಬಳಿ ಗುಡ್ಡ ಕುಸಿತ; ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

Rishabh Pant
ಕ್ರೀಡೆ18 mins ago

Rishabh Pant: ಡೆಲ್ಲಿ ತೊರೆದು ಮುಂದಿನ ಐಪಿಎಲ್​ನಲ್ಲಿ ಈ ಫ್ರಾಂಚೈಸಿ ಪರ ಆಡಲಿದ್ದಾರೆ ರಿಷಭ್​ ಪಂತ್​

Job Alert
ಉದ್ಯೋಗ28 mins ago

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Viral Video
Latest43 mins ago

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Jitan Sahani
ದೇಶ51 mins ago

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

karnataka assembly live
ಪ್ರಮುಖ ಸುದ್ದಿ1 hour ago

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

David Warner
ಕ್ರೀಡೆ1 hour ago

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

Kannada New Movie
ಸ್ಯಾಂಡಲ್ ವುಡ್1 hour ago

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada In Madrasa
ಕರ್ನಾಟಕ2 hours ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

murder case set fire bagalakote
ಕ್ರೈಂ2 hours ago

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌