Self Harming: ಅಪಾರ್ಟ್‌ಮೆಂಟ್‌ನ ಬಾಲ್ಕನಿಯಲ್ಲಿ ನೇಣು ಬಿಗಿದುಕೊಂಡ ಅಪರಿಚಿತ ಮಹಿಳೆ - Vistara News

ಬೆಂಗಳೂರು

Self Harming: ಅಪಾರ್ಟ್‌ಮೆಂಟ್‌ನ ಬಾಲ್ಕನಿಯಲ್ಲಿ ನೇಣು ಬಿಗಿದುಕೊಂಡ ಅಪರಿಚಿತ ಮಹಿಳೆ

Self Harming : ಅಪರಿಚಿತ ಮಹಿಳೆಯೊಬ್ಬಳು ಅಪಾರ್ಟ್‌ಮೆಂಟ್‌ನ ಬಾಲ್ಕಿನಿಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

Self Harming
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನೇಣು ಬಿಗಿದುಕೊಂಡು (Self Harming) ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದ ಮಾರ್ಗೊಸಾ ರಸ್ತೆಯ ಸಾಯಿ ರೆಸಿಡೆನ್ಸಿ ಅಪಾರ್ಟ್ಮೆಂಟ್‌ನಲ್ಲಿ ಘಟನೆ ನಡೆದಿದೆ.

ಸುಮಾರು 45 ವರ್ಷದ ಮಹಿಳೆ ಅಪಾರ್ಟ್ಮೆಂಟ್‌ನ ಬಾಲ್ಕನಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಲ್ಲೇಶ್ವರ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಇನ್ನೂ ಮಹಿಳೆ ಯಾರು ಎಂಬುದು ಗೊತ್ತಿಲ್ಲ, ಬೆಳಗ್ಗೆ 7.30ಕ್ಕೆ ನೋಡಿದಾಗ ನೇಣು ಬಿಗಿದುಕೊಂಡಿರುವುದು ಗೊತ್ತಾಗಿದೆ. ಕೂಡಲೇ ನಾವು ಪೊಲೀಸರಿಗೆ ಕಾಲ್ ಮಾಡಿದ್ದವಿ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಹಿಳೆ ಫೋಟೊವನ್ನು ತೆಗೆದುಕೊಂಡಿದ್ದಾರೆ. 6.15ಕ್ಕೆ ಮೆಜೆಸ್ಟಿಕ್‌ನಿಂದ ಬಸ್ ಮೂಲಕ ಇಲ್ಲಿಗೆ ಬಂದಿದ್ದಾರೆ. ಒಂದು ಬ್ಯಾಗ್, ಬಸ್ ಟಿಕೆಟ್ ಇತ್ತು. ಇನ್ನೂ ನವರಂಗ್ ಥಿಯೇಟರ್‌ನಲ್ಲಿ ಸಿನಿಮಾ ನೋಡಿ ಬಂದಿದ್ದಾರೆ. ಸದ್ಯ ಪೊಲೀಸರು ಬಂದು ತನಿಖೆ ನಡೆಸುತ್ತಿದ್ದಾರೆ. ಯಾರು ಏನು ಎನ್ನುವುದು ತನಿಖೆ ನಂತರ ತಿಳಿಯಲಿದೆ. ನಮ್ಮ ಅಪಾರ್ಟ್ಮೆಂಟ್‌ಗೆ ಯಾಕೆ ಬಂದಿದ್ದರೂ ಎಂದು ಗೊತ್ತಿಲ್ಲ ಎಂದು ಅಪಾರ್ಟ್ಮೆಂಟ್ ನಿವಾಸಿ ಎನ್ ಕೆ ರಾವ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Sheikh Hasina : ಶೇಖ್ ಹಸೀನಾ ಸೀರೆಗಳ ಜತೆ ಬ್ರಾಗಳನ್ನೂ ಬಿಡದೆ ದೋಚಿದ ಬಾಂಗ್ಲಾ ಜನ!

ಕೊಲೆ ಶಂಕೆ

ಇನ್ನೂ ಮಹಿಳೆ ನವರಂಗ್ ಚಿತ್ರಮಂದಿರಲ್ಲಿ ರಾಯನ್ ಸಿನಿಮಾ ನೋಡಿ ಬಂದಿದ್ದಾರೆ. ಎರಡು ಸಿನಿಮಾ ಟಿಕೆಟ್ ಪೊಲೀಸರಿಗೆ ಲಭ್ಯವಾಗಿದೆ. ಸದ್ಯ ಮಹಿಳೆಯ ಜತೆ ಮತ್ತೊಬ್ಬ ವ್ಯಕ್ತಿ ಇರುವುದು ಖಚಿತವಾಗಿದೆ. ಹೀಗಾಗಿ ಇದು ಕೊಲೆ ಇರಬಹುದಾ ಎಂಬ ಶಂಕೆಯೂ ಇದೆ. ಮಹಿಳೆಯ ಯಾವುದೇ ಗುರುತು ಪತ್ತೆಗೆ ಬೇಕಾದ ಸಾಕ್ಷಿಗಳಿಲ್ಲ. ಮೊಬೈಲ್ ಸೇರಿ ಯಾವುದೇ ಕ್ಲೂ ಇಲ್ಲ. ಹೀಗಾಗಿ ಸುತ್ತಮುತ್ತಲ್ಲ ಸಿಸಿಟಿವಿ ಪರಿಶೀಲನೆಗೆ ಮುಂದಾಗಿದ್ದಾರೆ.

ಸಾಯಿ ರೆಸಿಡೆನ್ಸಿಯಲ್ಲಿ ಅಪರಿಚಿತ ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ನೈಟಿಯ ಜೇಬಿನಲ್ಲಿ ಬಸ್ ಟಿಕೆಟ್ ಮತ್ತು ಸಿನಿಮಾ ಟಿಕೆಟ್ ಪತ್ತೆಯಾಗಿದೆ. ನವರಂಗ್ ಥಿಯೇಟರ್‌ನಲ್ಲಿ ನಿನ್ನೆ ಸೋಮವಾರ ರಾಯನ್ ಸಿನಿಮಾ ನೋಡಿದ್ದಾರೆ. ಇಂದು ಮಂಗಳವಾರ ಮೆಜೆಸ್ಟಿಕ್‌ನಿಂದ ಮಲ್ಲೇಶ್ವರಂಗೆ ಬಿಎಂಟಿಸಿ ಬಸ್‌ನಲ್ಲಿ ಬಂದಿದ್ದಾರೆ. ಬೆಳಿಗ್ಗೆ 7:20ಕ್ಕೆ ಅಪಾರ್ಟ್ಮೆಂಟ್ ಬಳಿ ಬಂದಿದ್ದ ಮಹಿಳೆ‌ ನೇಣು ಹಾಕಿಕೊಳ್ಳಲು ಹೊಸ ಹಗ್ಗ ಖರೀದಿ ಮಾಡಿ ತಂದಿದ್ದಾರೆ. ಬಿಲ್ಡಿಂಗ್‌ನಲ್ಲಿ ಸಿಸಿ ಕ್ಯಾಮೆರಾ ಮತ್ತು ಸೆಕ್ಯೂರಿಟಿ ಇಲ್ಲದನ್ನು ಗಮನಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕೆಸಿ ಜನರಲ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಹಿಳೆ ಯಾರು, ಯಾರ ಜತೆಗೆ ಈ ಅಪಾರ್ಟ್‌ಮೆಂಟ್‌ಗೆ ಬಂದಿದ್ದಾರೆ ಎಂಬುದರ ಕುರಿತಾಗಿ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Sharan Prakash Patil: ಮೆಡಿಕಲ್‌ ಕಾಲೇಜುಗಳಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಪ್ರಾರಂಭ : ಸಚಿವ ಶರಣಪ್ರಕಾಶ್‌ ಪಾಟೀಲ್‌

Sharan Prakash Patil : ಈಗಾಗಲೇ ಬೆಂಗಳೂರು ಹಾಗೂ ಮೈಸೂರಿನಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಕಲುಬುರುಗಿ, ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿಯೂ ಆರಂಭವಾಗಲಿದ್ದು, ವಿಕ್ಟೋರಿಯಾ ಹಾಗೂ ಸಂಜಯ್‌ ಗಾಂಧೀ ಆಸ್ಪತ್ರೆಯಲ್ಲಿಯೂ ವಿಭಾಗ ತೆರೆಯುವ ಉದ್ದೇಶವಿಟ್ಟುಕೊಂಡಿದ್ದೇವೆ ಎಂದರು.

VISTARANEWS.COM


on

Sharan Prakash Patil
Koo

ಬೆಂಗಳೂರು: ವ್ಯಾಸ್ಕ್ಯುಲಾರ್‌ ಸಮಸ್ಯೆಗಳನ್ನು ಪತ್ತೆ ಹಚ್ಚಲು ಹಾಗೂ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಚಿಕಿತ್ಸೆ ನೀಡಲು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮೆಡಿಕಲ್‌ ಕಾಲೇಜುಗಳಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಪ್ರಾರಂಭ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ (Sharan Prakash Patil) ತಿಳಿಸಿದರು. ಅವರು ವ್ಯಾಸ್ಕ್ಯುಲಾರ್‌ ಸೊಸೈಟಿ ಆಫ್‌ ಇಂಡಿಯಾ ಹಾಗೂ ವ್ಯಾಸ್ಕಾರ್‌ ವತಿಯಿಂದ ನಗರದ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ವಾಕಥಾನ್‌ ಗೆ ಚಾಲನೆ ನೀಡಿ ಮಾತನಾದಡಿದರು.

ಈಗಾಗಲೇ ಬೆಂಗಳೂರು ಹಾಗೂ ಮೈಸೂರಿನಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಕಲುಬುರುಗಿ, ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿಯೂ ಆರಂಭವಾಗಲಿದ್ದು, ವಿಕ್ಟೋರಿಯಾ ಹಾಗೂ ಸಂಜಯ್‌ ಗಾಂಧೀ ಆಸ್ಪತ್ರೆಯಲ್ಲಿಯೂ ವಿಭಾಗ ತೆರೆಯುವ ಉದ್ದೇಶವಿಟ್ಟುಕೊಂಡಿದ್ದೇವೆ ಎಂದರು.

ಹಿರಿಯ ವ್ಯಾಸ್ಕ್ಯುಲಾರ್‌ ಸರ್ಜನ್‌ ಡಾ.ಕೆ.ಆರ್.ಸುರೇಶ್‌ ಮಾತನಾಡಿ ಹೃದಯಾಘಾತದಂತೆ(ಹಾರ್ಟ್‌ ಅಟ್ಯಾಕ್‌) ಲೆಗ್‌ ಅಟ್ಯಾಕ್‌ ಕೂಡ ಮನುಷ್ಯನಿಗೆ ಪ್ರಾಣಾಂತಿಕವಾಗಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಿದಿದ್ದರೆ ಕಾಲು ಕತ್ತರಿಸುವ ಸಂದರ್ಭ ಉಂಟಾಗಿ ಜೀವಕ್ಕೆ ಹಾನಿಯಾಗಲಿದೆ. ಧೂಮಪಾನ, ಮಧುಮೇಹ ನಿಯಂತ್ರಣದಲ್ಲಿಟ್ಟುಕೊಳ್ಳುವುದು ಉತ್ತಮ. ನಡೆಯುವಾಗ ಕಾಲಿನಲ್ಲಿ ನೋವು ಕಂಡು ಬಂದರೆ, ಕಾಲಿನಲ್ಲಿ ಜೋಮು ಹಾಗೂ ತಂಪಿನಂತಹ ಲಕ್ಷಣಗಳು ಕಂಡು ಬಂದಾಗ ಹತ್ತಿರದ ವ್ಯಾಸ್ಕ್ಯುಲಾರ್‌ ಸರ್ಜನ್‌ ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: Spandana Vijay Raghavendra: ಸ್ಪಂದನ ಅಗಲಿ ಒಂದು ವರ್ಷ, ಭಾವುಕ ಪೋಸ್ಟ್‌ ಮಾಡಿದ ವಿಜಯ್‌ ರಾಘವೇಂದ್ರ

ವ್ಯಾಸ್ಕಾರ್ ಅಧ್ಯಕ್ಷರಾದ ಡಾ.ವೆಂಕಟೇಶ್‌ ರೆಡ್ಡಿ ಮಾತನಾಡಿ ಕಳೆದ ಮೂರು ದಶಕಗಳಿಂದ ವ್ಯಾಸ್ಕ್ಯುಲರ್‌ ಸರ್ಜನ್ ಅಸೋಸಿಯೇಷನ್‌ ನಿರಂತರ ಸೇವೆ ಸಲ್ಲಿಸುತ್ತಾ ಬಂದಿದ್ದು, ದಿವಂಗತ ಡಾ.ಎನ್.ಕೆ ಭಗವಾನ್‌ ದೂರದೃಷ್ಠಿ ಹಾಗೂ ಪ್ರಸ್ತುತ ಡಾ.ಕೆ.ಆರ್.ಸುರೇಶ್‌ರವರ ಮಾರ್ಗದರ್ಶನದಲ್ಲಿ ಸಹಸ್ತ್ರಾರು ಶಸ್ತ್ರಚಿಕಿತ್ಸೆಗಳ ಮೂಲಕ ಸಾವಿರಾರು ರೋಗಿಗಳು ಶ್ವಾಶ್ವತ ಅಂಗವಿಕಲರಾಗುವುದನ್ನು ತಪ್ಪಿಸಿರುವುದು ಹೆಮ್ಮೆಯ ಸಂಗತಿಯಾಗಿದ್ದು ವ್ಯಾಸ್ಕಾರ್‌ ಅರಿವು ಕಾರ್ಯಕ್ರಮ ನಿರಂತರವಾಗಿರಲಿದೆ ಎಂದು ಎಂದರು.

ಕಂಠೀರವ ಸ್ಟೇಡಿಯಂನಿಂದ ಆರಂಭವಾದ ವಾಕಥಾನ್‌ ಕಸ್ತೂರ್ಬಾ ರಸ್ತೆ, ವಿಧಾನಸೌಧ, ನೃಪತುಂಗ ರಸ್ತೆ ಮುಖಾಂತರ ಕಂಠೀರವ ಸ್ಟೇಡಿಯಂನಲ್ಲಿ ಅಂತ್ಯಗೊಂಡಿತು. ರಾಜ್ಯದ ಸಾವಿರಕ್ಕೂ ಹೆಚ್ಚು ವೈದ್ಯರು, ವೈದ್ಯಕೀಯ ವಿದ್ಯಾರ್ಥಿ, ಶೂಶ್ರೂಷಕ ಸಿಬ್ಬಂಧಿ ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.

ರಾಜೀವ್‌ ಗಾಂಧೀ ಆರೋಗ್ಯ ವಿಶ್ವವಿದ್ಯಾಲಯ ಕುಲಪತಿ ರಮೇಶ್‌ ಎಂ.ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ,ಜಯದೇವ ಕಾರ್ಡಿಯಾಕ್‌ ಆಸ್ಪತ್ರೆಯ ವ್ಯಾಸ್ಕ್ಯುಲಾರ್‌ ಸರ್ಜನ್‌ ಡಾ.ಮುರುಳಿ ಕೃಷ್ಣ,ರಾಷ್ಟ್ರೀಯ ಭದ್ರತೆ ಮಾಜಿ ಸಲಹೆಗಾರರಾದ ಪದ್ಮವಿಭೂಷಣ ವಿ.ಕೆ.ಆತ್ರೆ, ವಿಎಸ್‌ಐನ ಅಧ್ಯಕ್ಷರಾದ ಡಾ.ವಿವೇಕಾನಂದ್‌, ರಾಜ್ಯ ವ್ಯಾಸ್ಕರ್‌ ಸೊಸೈಟಿ ಕಾರ್ಯದರ್ಶಿ ಡಾ.ವಿಷ್ಣು, ಚಿತ್ರನಟಿ ಸಂಜನಾ ಗಲ್ರಾನಿ ಮುಂತಾದವರಿದ್ದರು

Continue Reading

ಕರ್ನಾಟಕ

MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

MUDA scam: ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ.
ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

VISTARANEWS.COM


on

MUDA scam
Koo

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ (MUDA scam) ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.

ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ಸಿಎಂಗೆ ಪ್ರಾಸಿಕ್ಯೂಷನ್‌ ಭಯ

ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

thawar chand gehlot cm siddaramaiah Governor versus state
thawar chand gehlot cm siddaramaiah Governor versus state

ಬೆಂಗಳೂರು: ಬಹುಕೋಟಿ ಮುಡಾ ಹಗರಣ (MUDA Scam) ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಮೂರನೇ ನೋಟೀಸ್ (Notice) ಅನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governor Thawar Chand Gehlot) ಜಾರಿ ಮಾಡಿದ್ದಾರೆ.

ಮೊದಲ ನೋಟೀಸ್ ಅನ್ನು ಜುಲೈ ಮೂರನೇ ವಾರದಲ್ಲಿ ಜಾರಿ ಮಾಡಿದ್ದ ರಾಜ್ಯಪಾಲರು, ಬಂದು ಮಾಹಿತಿ ಕೊಡುವಂತೆ ಸೂಚಿಸಿದ್ದರು. ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕವಾಗಿ ಚರ್ಚೆ ಆಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕೊಡುವಂತೆ ಸೂಚಿಸಿದ್ದರು.

ಜುಲೈ 26ನೇ ತಾರೀಕು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿದ ದೂರು ಆಧರಿಸಿ ಎರಡನೇ ನೋಟೀಸ್ ಕಳಿಸಲಾಗಿತ್ತು. ಅಬ್ರಹಾಂ ಸಲ್ಲಿಸಿದ್ದ ದೂರಿನಲ್ಲಿ, ಈ ಪ್ರಕರಣವನ್ನು ಪ್ರಾಸಿಕ್ಯೂಶನ್‌ಗೆ ಯಾಕೆ ಕೊಡಬಾರದು ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್ ಶೋಕಾಸ್ ನೋಟೀಸ್ ನೀಡಿದ್ದರು.

ಆಗಸ್ಟ್ 5ನೇ ತಾರೀಕು ರಾಜ್ಯಪಾಲರು ಮೂರನೇ ನೋಟೀಸ್ ಜಾರಿ ಮಾಡಿದ್ದಾರೆ. ಕಳೆದ ವಾರ ಕ್ಯಾಬಿನೆಟ್‌ ಸಭೆಯಲ್ಲಿ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ್ದ ಸಂಪುಟ, ನೋಟೀಸ್‌ ಹಿಂಪಡೆಯುವಂತೆ ಹೇಳಿತ್ತು. ಹೀಗಾಗಿ ಮತ್ತೆ ಕೇಸ್‌ನಲ್ಲಿ ಕ್ಲಾರಿಫಿಕೇಷನ್ ಕೊಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.

ರಾಜ್ಯಪಾಲರು ಪದೇ ಪದೆ ನೋಟೀಸ್ ಕೊಡುತ್ತಿರುವುದೇಕೆ?

ಈ ಹಿಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪ್ರಕರಣದಲ್ಲಿ ಆದುದೇ ರಾಜ್ಯಪಾಲರ ಈಗಿನ ನಡೆಗೆ ಕಾರಣ ಎನ್ನಲಾಗಿದೆ. ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಆದೇಶವನ್ನು ಯಡಿಯೂರಪ್ಪ ಪ್ರಶ್ನೆ ಮಾಡಿದ್ದರು. ರಾಜ್ಯಪಾಲರು ಅನುಮತಿ ಕೊಡುವಾಗ ಆರೋಪದ ಬಗ್ಗೆ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯುವ ಪ್ರಕ್ರಿಯೆಯನ್ನು ಸರಿಯಾಗಿ ನಡೆಸಿಲ್ಲ. ಆತುರಾತುರವಾಗಿ ನಿರ್ಧಾರ ಮಾಡಿ ನೋಟೀಸ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರವನ್ನು ಅಭದ್ರ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಹೀಗಾಗಿ ಪೊಲಿಟಿಕಲ್ ಮೈಲೇಜ್ ಪಡೆಯಲು ಈ ನಿರ್ಧಾರ ಮಾಡಿದ್ದರು ಎಂದು ಯಡಿಯೂರಪ್ಪ ವಾದ ಮಾಡಿದ್ದರು. ಯಡಿಯೂರಪ್ಪ ವಾದವನ್ನು ಹೈಕೋರ್ಟ್ ಒಪ್ಪಿತ್ತು. ಜನಪ್ರತಿನಿಧಿಗಳ ಸರ್ಕಾರದ ನೇತೃತ್ವ ವಹಿಸಿರುವವರ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಡುವಾಗ ಮೂರು ಬಾರಿ ನೋಟೀಸ್ ಹಾಗೂ ಮೂರು ಬಾರಿ ಲೀಗಲ್ ಓಪಿನಿಯನ್ ಪಡೆದು ಮುಂದುವರಿಯಬೇಕು ಎಂದು ಹೈಕೋರ್ಟ್ ಆದೇಶ ಮಾಡಿತ್ತು. ನಂತರ ಯಡಿಯೂರಪ್ಪ ಈ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದರು.

ಇದನ್ನೂ ಓದಿ: CM Siddaramaiah: ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ; ಸಿದ್ದರಾಮಯ್ಯ ಸೂಚನೆ

ಹೀಗಾಗಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಆರೋಪ ಕೇಳಿ ಬಂದಿರುವುದರಿಂದ, ಕಾನೂನು ಪ್ರಕ್ರಿಯೆ ಮಾಡುವಾಗ ಯಾವುದೇ ಲೋಪ ಆಗದಂತೆ ರಾಜ್ಯಪಾಲರು ಪದೇ ಪದೆ ನೋಟೀಸ್ ನೀಡುತ್ತಿದ್ದಾರೆ. ನಿನ್ನೆ ದೆಹಲಿಯಿಂದ ರಾಜ್ಯಕ್ಕೆ ಮರಳಿರುವ ರಾಜ್ಯಪಾಲರು ಲೀಗಲ್‌ ಪ್ರಕ್ರಿಯೆ ಚುರುಕುಗೊಳಿಸಿದ್ದಾರೆ. ಇದಕ್ಕೆ ಕ್ಯಾಬಿನೆಟ್‌ ಹಾಗೂ ಮುಖ್ಯಮಂತ್ರಿಗಳ ಕಡೆಯಿಂದ ಪ್ರತಿಕ್ರಿಯೆ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ವಾರವಿಡೀ ಮುಖ್ಯಮಂತ್ರಿಗಳು ಕಾನೂನು ತಜ್ಞರು, ವಕೀಲರ ಜೊತೆಗೆ ಈ ವಿಚಾರವನ್ನು ಚರ್ಚಿಸಿದ್ದರು. ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್‌ಗೆ ತೆರಳುವ ಸಾಧ್ಯತೆ ಇದೆ.

Continue Reading

ಸಿನಿಮಾ

Actor Yash: ಧರ್ಮಸ್ಥಳದಲ್ಲಿ ರಾಕಿಂಗ್ ಸ್ಟಾರ್ ಯಶ್, ಟಾಕ್ಸಿಕ್‌ ಶೂಟಿಂಗ್‌ಗೂ ಮುನ್ನ ಟೆಂಪಲ್‌ ರನ್

Actor Yash: ʼಟಾಕ್ಸಿಕ್’ ಹೊಸಚಿತ್ರದ ಶೂಟಿಂಗ್ ಸದ್ಯದಲ್ಲೇ ಆರಂಭವಾಗುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಮಂಜುನಾಥನ ದರ್ಶನ ಪಡೆದಿದ್ದಾರೆ. ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Dr Veerendra Heggade) ಅವರನ್ನೂ ಭೇಟಿಯಾಗಿ ಆಶೀರ್ವಾದ ಪಡೆದರು.

VISTARANEWS.COM


on

actor yash 1
Koo

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ಇಂದು ರಾಕಿಂಗ್‌ ಸ್ಟಾರ್‌ ಯಶ್‌ (Rocking Star, Actor Yash) ಭೇಟಿ ನೀಡಿದರು. ಹೊಸ ಚಿತ್ರ ʼಟಾಕ್ಸಿಕ್ʼನ (Toxic) ಶೂಟಿಂಗ್‌ ಇನ್ನು ಮೇಲೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ದರ್ಶನ ಮಾಡಿದ್ದಾರೆ ಎನ್ನಲಾಗಿದೆ.

ಮಳೆಯಿಂದ ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತಾದಿಗಳ ಜನಸಂದಣಿ ಕಡಿಮೆಯಾಗಿರುವ ಸಮಯದಲ್ಲಿ ರಾಕಿಭಾಯ್ ಟೆಂಪಲ್ ರನ್ (Temple Run) ನಡೆಸಿದ್ದಾರೆ. ಇಂದು ಧರ್ಮಸ್ಥಳದ ಶ್ರೀ ಮಂಜುನಾಥ ದೇವರ ದರ್ಶನ ಮಾಡಿದ್ದು, ನಂತರ ಬೆಳ್ತಂಗಡಿಯ ಸೂರ್ಯ ದೇವಸ್ಥಾನಕ್ಕೆ ವಿಸಿಟ್ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.

ʼಟಾಕ್ಸಿಕ್ʼ ಹೊಸಚಿತ್ರದ ಶೂಟಿಂಗ್ ಸದ್ಯದಲ್ಲೇ ಆರಂಭವಾಗುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಮಂಜುನಾಥನ ದರ್ಶನ ಪಡೆದಿದ್ದಾರೆ. ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ (Dr Veerendra Heggade) ಅವರನ್ನೂ ಭೇಟಿಯಾಗಿ ಆಶೀರ್ವಾದ ಪಡೆದರು.

ಟಾಕ್ಸಿಕ್‌ ಸಿನಿಮಾ ತಂಡದ ವಿರುದ್ಧ ಪ್ರಕರಣ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ನಟನೆಯ ಟಾಕ್ಸಿಕ್‌ ಸಿನಿಮಾ ಆಗಾಗ ಸುದ್ದಿಯಾಗುತ್ತಲೇ ಇದೆ. ಇದೀಗ ಕಿ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ಬೃಹತ್ ಸೆಟ್ ನಿರ್ಮಿಸಲಾಗಿದೆ. ​ಅನಧಿಕೃತವಾಗಿ ಸಿನಿಮಾ ಸೆಟ್ ನಿರ್ಮಿಸಲಾಗಿದೆ ಎಂದು ನಿರ್ಮಾಪಕರ ವಿರುದ್ಧ ದೂರು ನೀಡಲಾಗಿದ್ದು, ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ ಶುರುವಾಗಿದೆ.

ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ ಸುಮಾರು 20 ಎಕರೆ ಜಾಗದಲ್ಲಿ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಬೃಹತ್ ಸೆಟ್ ಹಾಕಲಾಗಿದೆ. ಆದರೆ ಈ ಸೆಟ್ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಹಾಕಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಅವರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದಾರೆ.

ಅಕ್ರಮವಾಗಿ ನಿರ್ಮಿಸಲಾಗಿರುವ ಈ ಸೆಟ್​ ಅನ್ನು ಕೂಡಲೇ ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅರ್ಜಿ ವಿಚಾರಣೆಗೆ ಅರ್ಹವೆಂದು ಪರಿಗಣಿಸಿರುವ ಹೈಕೋರ್ಟ್ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಎಚ್​ಎಂಟಿ ಸಂಸ್ಥೆಗೆ ನೊಟೀಸ್ ನೀಡಿದೆ. ಕೆಲವು ದಾಖಲೆಗಳ ಪ್ರಕಾರ, ಎಚ್​ಎಂಟಿ ಸಂಸ್ಥೆಯು ಈ ಜಮೀನನ್ನು ಕೆನರಾ ಬ್ಯಾಂಕ್​ಗೆ ನೀಡಿತ್ತು. ಬಳಿಕ ಕೆನರಾ ಬ್ಯಾಂಕ್, ಕೆವಿಎನ್​ಗೆ ನೀಡಿತ್ತು. ಇದೀಗ ಕೆವಿಎನ್​ ನವರು 20.07 ಎಕರೆ ಜಾಗವನ್ನು ಸಿನಿಮಾ ಸೆಟ್ ನಿರ್ಮಾಣಕ್ಕೆ ಬಳಸಿಕೊಂಡಿದ್ದಾರೆ. ಆದರೆ ಇದು ಅರಣ್ಯ ಪ್ರದೇಶ ಎಂದು ಅರ್ಜಿದಾರರು ವಾದಿಸಿದ್ದಾರೆ. ವಿಚಾರಣೆ ಬಳಿಕವೇ ಸತ್ಯಾಂಶ ಹೊರಬರಲಿದೆ.

20 ಎಕರೆ ಜಾಗದಲ್ಲಿ ಕೋಟಿ ವೆಚ್ಚ ಮಾಡಿ ಸೆಟ್ ನಿರ್ಮಾಣ ಮಾಡಲಾಗಿದ್ದು, ಒಂದೊಮ್ಮೆ ಸೆಟ್ ತೆರವು ಮಾಡಬೇಕು ಎಂದರೆ ಟಾಕ್ಸಿಕ್​ ಚಿತ್ರತಂಡಕ್ಕೆ ಭಾರಿ ನಷ್ಟವಾಗಲಿದೆ. ಸಿನಿಮಾವು 70-80ರ ಕಾಲದಲ್ಲಿ ನಡೆಯಲಿದೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಇದೇ ಕಾರಣಕ್ಕೆ ಸಿನಿಮಾವನ್ನು ಸೆಟ್​ಗಳಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಹಾಗಾಗಿ ಸಿನಿಮಾಕ್ಕಾಗಿ ಬೃಹತ್ ಸೆಟ್ ಅನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ: Back Benchers Movie: ಬ್ಯಾಕ್ ಬೆಂಚರ್ಸ್‌ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ!

Continue Reading

ಬೆಂಗಳೂರು

Bengaluru News : ಪೊಲೀಸರಿಂದಲೇ ಹಣ ಸುಲಿಗೆ ಮಾಡುತ್ತಿದ್ದ ಚಾಲಾಕಿ ಕಳ್ಳ ಅರೆಸ್ಟ್‌

Bengaluru News : ಲಾಕ್ ಅಪ್ ಅಲ್ಲಿ ಇರುವ ಆರೋಪಿ ಬಗ್ಗೆ ಮತ್ತು ಕೇಸ್‌ನ ಪೂರ್ವಪರ ತಿಳಿದುಕೊಳ್ಳುತ್ತಿದ್ದ ಚಾಲಕಿ ಚೋರನೊಬ್ಬ ಪೊಲೀಸರನ್ನೇ ಹಿಂಡಿ ಹಿಪ್ಪೆ ಮಾಡುತ್ತಿದ್ದ. ಪೊಲೀಸರಿಗೆ ಯಾಮಾರಿಸಿ ನಾಪತ್ತೆ ಆಗಿದ್ದವನು ಇದೀಗ ಜೈಲು ಕಂಬಿ ಎಣಿಸುತ್ತಿದ್ದಾನೆ.

VISTARANEWS.COM


on

By

Bengaluru News
Koo

ಬೆಂಗಳೂರು: ಪೊಲೀಸರಿಂದಲೇ ಹಣ ಸುಲಿಗೆ ಮಾಡುತ್ತಿದ್ದ ಚಾಲಾಕಿ ಚೋರನಾ ಬಂಧನವಾಗಿದೆ. ನಗರದ ಪೂರ್ವ ವಿಭಾಗದ (Bengaluru News) ಹಲವು ಪೊಲೀಸರಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪಿ ಸೈಯದ್ ಸರ್ಫರಾಜ್ ಅಹಮದ್‌ನನ್ನು ಬಂಧಿಸಿದ್ದಾರೆ.

ಪ್ರತಿ ಪೊಲೀಸ್ ಠಾಣೆಗೆ ಹೋಗುತ್ತಿದ್ದ ಈ ಅಸಾಮಿ ಠಾಣೆಯ ಸಿಬ್ಬಂದಿ, ಅಧಿಕಾರಿಗಳ ಬಳಿ ಪುಸಲಾಯಿಸುತ್ತಿದ್ದ. ಹೀಗೆ ಠಾಣೆಗೆ ಹೋದಾಗ ಸೆಲ್‌ವೊಳಗೆ ಇರುವ ಆರೋಪಿಗಳನ್ನು ಟಾರ್ಗೆಟ್‌ ಮಾಡುತ್ತಿದ್ದ. ಸೆಲ್ ಒಳಗಿನ ಆರೋಪಿಗಳನ್ನು ಮಾತಾಡಿಸುತ್ತಾ, ಪರಿಚಯ ಮಾಡಿಕೊಂಡು ವಿಶ್ವಾಸ ಗಳಿಸುತ್ತಿದ್ದ.

ಲಾಕ್ ಅಪ್ ಅಲ್ಲಿ ಇರುವ ಆರೋಪಿ ಬಗ್ಗೆ ಮತ್ತು ಕೇಸ್‌ನ ಪೂರ್ವಪರ ತಿಳಿದುಕೊಳ್ಳುತ್ತಿದ್ದ. ಅಷ್ಟು ಮಾಹಿತಿ ಸಿಕ್ಕಿದ್ದರೆ ಸಾಕು, ಚಾಲಕಿ ಚೋರ ಪೊಲೀಸರನ್ನು ಹಿಂಡಿ ಹಿಪ್ಪೆ ಮಾಡುತ್ತಿದ್ದ. ಯಾಕೆಂದರೆ ನೇರವಾಗಿ ರಾಜ್ಯ ಮಾನವ ಹುಕ್ಕಗಳ ಆಯೋಗಕ್ಕೆ ದೂರು ಕೊಡುತ್ತಿದ್ದ.

ಕಾನೂನು‌ ಬಾಹಿರವಾಗಿ ಪೊಲೀಸರ ಅಭಿರಕ್ಷೆಯಲ್ಲಿ ಇಟ್ಟುಕೊಂಡಿರುವುದಾಗಿ ಹೇಳಿ ಪೊಲೀಸರ ವಿರುದ್ಧವೇ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಕೊಡುತ್ತಿದ್ದ. ಸೈಯದ್ ಸರ್ಫರಾಜ್ ಅಹಮದ್ ಎಂಬಾತ ಸುಳ್ಳು ದೂರು ದಾಖಲು ಮಾಡಿ ಬಂಧಿಯಾದವನು. ಜೈಲುಪಾಲಾದ ಆರೋಪಿಗಳಿಗೂ ಈ ಸೈಯದ್‌ಗೂ ಯಾವುದೇ ಸಂಬಂಧ ಇಲ್ಲ. ಹಣ ಸುಲಿಗೆ ಮಾಡುವ ಸಲುವಾಗಿ ಮಾನವ ಹಕ್ಕುಗಳಿಗೆ ದೂರು ಕೊಡುತ್ತಿದ್ದ. ಬಳಿಕ ದೂರು ಹಿಂಪಡೆಯುವ ಸಲುವಾಗಿ ಪೊಲೀಸರ ಬಳಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದ.

ಇದನ್ನೂ ಓದಿ: Physical Abuse: ತಾಯಿಯ ಮೇಲೆಯೇ ಅತ್ಯಾಚಾರ ಎಸಗಿ ಕೊಲೆಗೆ ಯತ್ನಿಸಿದ ಪಾಪಿ ಮಗ; ಇವನ ವಿಕೃತಿಗೆ ಪತ್ನಿಯೂ ದೂರ

ಹೀಗೆ ಶಿವಾಜಿನಗರ ಪೊಲೀಸ್ ಇನ್‌ಸ್ಪೆಕ್ಟರ್‌ ವಿರುದ್ಧ ಈ ಸೈಯದ್‌ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದ. ಕ್ರೈಂ ನಂಬರ್ 82ಗೆ ಸಂಬಂಧಿಸಿದ ಹಾಗೆ ಓರ್ವ ಆರೋಪಿಯ ಬಂಧನವಾಗಿತ್ತು. ಬಂಧನ ಮಾಡಿದ್ದ ಪೊಲೀಸರ ವಿರುದ್ಧ ದೂರು ನೀಡಿದ್ದ. ಬಳಿಕ ಸೈಯದ್ ಸರ್ಪರಾಜ್ ಶಿವಾಜಿನಗರ ಪೊಲೀಸ್ ಇನ್‌ಸ್ಪೆಕ್ಟರ್‌ಗೆ 50 ಸಾವಿರ ರೂ.ಗೆ ಡಿಮ್ಯಾಂಡ್ ಇಟ್ಟಿದ್ದ.

ಬಳಿಕ ನೆರವು ಪೊಲೀಸ್ ಚೌಕಿ ಬಳಿ 25 ಸಾವಿರ ಹಣ ಪಡೆದು ಎಸ್ಕೇಪ್ ಆಗಿದ್ದ. ಶಿವಾಜಿನಗರ ಪೊಲೀಸರು ಹಣ ಕೊಡುವ ನೆಪದಲ್ಲಿ ಬಂಧನಕ್ಕೆ ಮುಂದಾಗಿದ್ದರು. ಆದರೆ ಪೊಲೀಸರಿಗೆ ಯಾಮಾರಿಸಿ ಕಾಲ್ಕಿತ್ತಿದ್ದ. ಇದೀಗ ಬಂಧಿತ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಈ ಸೈಯದ್‌ ಸುಮಾರು 30ಕ್ಕೂ ಅಧಿಕ ಕಡೆ ಪೊಲೀಸರಿಗೆ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ. ಹಲವು ಪೊಲೀಸರ ವಿರುದ್ಧ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿರುವುದು ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಪಡೆದು ಶಿವಾಜಿನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka Trains
Latest2 mins ago

Konkan Railway: ಕಾರವಾರ – ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ಆ. 8ರವರೆಗೆ ರದ್ದು

Sharan Prakash Patil
ಬೆಂಗಳೂರು15 mins ago

Sharan Prakash Patil: ಮೆಡಿಕಲ್‌ ಕಾಲೇಜುಗಳಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಪ್ರಾರಂಭ : ಸಚಿವ ಶರಣಪ್ರಕಾಶ್‌ ಪಾಟೀಲ್‌

actor darshan photo with god
ರಾಯಚೂರು22 mins ago

Actor Darshan: ಆಂಜನೇಯನ ಮೂರ್ತಿ ಜೊತೆಗೆ ದರ್ಶನ್‌ ಫೋಟೋ ಇಟ್ಟು ಪೂಜೆ! ಕಿಡಿ ಕಾರಿದ ಭಕ್ತರು

MUDA scam
ಕರ್ನಾಟಕ32 mins ago

MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

PRO KABADDI LEAGUE
ಕ್ರೀಡೆ32 mins ago

PRO KABADDI LEAGUE : ಪ್ರೊ ಕಬಡ್ಡಿ ಲೀಗ್ ಉಳಿಸಿಕೊಂಡ ಆಟಗಾರರ ಪಟ್ಟಿ ಪ್ರಕಟ! ಪವನ್ ಸೆಹ್ರಾವತ್, ಪ್ರದೀಪ್ ನರ್ವಾಲ್ ಹರಾಜಿಗೆ

Road Accident
ವಿಜಯಪುರ56 mins ago

Road Accident : ಅಂಗನವಾಡಿಗೆ ಹೊರಟಿದ್ದ ಬಾಲಕನ ಬಲಿ ಪಡೆದ ಖಾಸಗಿ ಶಾಲಾ ವಾಹನ

Stock Market
ವಾಣಿಜ್ಯ59 mins ago

Stock Market: ಮಹಾ ಕುಸಿತದಿಂದ ಚೇತರಿಕೆಯ ಹಾದಿಯಲ್ಲಿ ಷೇರುಪೇಟೆ; ಸೆನ್ಸೆಕ್ಸ್‌ 921, ನಿಫ್ಟಿ 285 ಪಾಯಿಂಟ್‌ ಜಿಗಿತ

spandana vijay raghavendra
ಸಿನಿಮಾ1 hour ago

Spandana Vijay Raghavendra: ಸ್ಪಂದನ ಅಗಲಿ ಒಂದು ವರ್ಷ, ಭಾವುಕ ಪೋಸ್ಟ್‌ ಮಾಡಿದ ವಿಜಯ್‌ ರಾಘವೇಂದ್ರ

Muhammad Yunus
ಪ್ರಮುಖ ಸುದ್ದಿ1 hour ago

Muhammad Yunus : ನೊಬೆಲ್ ಪುರಸ್ಕೃತ ಮುಹಮ್ಮದ್ ಯೂನುಸ್​ ಬಾಂಗ್ಲಾ ಮಧ್ಯಂತರ ಸರ್ಕಾರದ ಸಲಹೆಗಾರ

murder case
ರಾಮನಗರ2 hours ago

Murder case : ರಾಮನಗರದಲ್ಲಿ ಸಂಬಂಧಿಕರಿಂದಲೇ ಯುವಕನ ಬರ್ಬರ ಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ7 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌