Self Harming : ನನ್ನಿಂದ ನನ್ನ ಹೆಂಡ್ತಿನಾ ದೂರ ಮಾಡಿದ್ರು ಅಂತ ಆತ್ಮಹತ್ಯೆಗೆ ಯತ್ನಿಸಿದ ಯುವಕ - Vistara News

ಬೆಂಗಳೂರು

Self Harming : ನನ್ನಿಂದ ನನ್ನ ಹೆಂಡ್ತಿನಾ ದೂರ ಮಾಡಿದ್ರು ಅಂತ ಆತ್ಮಹತ್ಯೆಗೆ ಯತ್ನಿಸಿದ ಯುವಕ

Self Harming: ಆಸ್ತಿಗಾಗಿ ಕಿರುಕುಳ ಕೊಟ್ಟಿದ್ದಲ್ಲದೇ, ನನ್ನನ್ನು ಮಾನಸಿಕ ಅಸ್ವಸ್ಥ ಎಂದು ಆಸ್ಪತ್ರೆಗೆ ಸೇರಿದ್ದಾರೆ ಎಂದು ಮನನೊಂದ ಯುವಕನೊರ್ವ ಕಟ್ಟಡವೇರಿ ಆತ್ಮಹತ್ಯೆಗೆ ಯತ್ನಿಸಿದ್ದ. ಸತತ ಮೂರು ಗಂಟೆಗಳ ಕಾರ್ಯಾಚರಣೆಯಲ್ಲಿ ಮನವೊಲಿಸಿ ಪೊಲೀಸರು ರಕ್ಷಿಸಿದ್ದಾರೆ.

VISTARANEWS.COM


on

Self harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೊಸದಾಗಿ ನಿರ್ಮಾಣವಾಗಿದ್ದ ನಾಲ್ಕಂತಸ್ತಿನ ಕಟ್ಟಡವೇರಿದ ಯುವಕನೊರ್ವ ಆತ್ಮಹತ್ಯೆಗೆ (Self Harming)‌ ಯತ್ನಿಸಲು ಮುಂದಾದ ಘಟನೆ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜು ಹಿಂಭಾಗದಲ್ಲಿ ನಡೆದಿದೆ.

ನಾನು ತುಂಬಾ ಚೆನ್ನಾಗಿ ಓದುತ್ತಿದ್ದೆ, ಆದರೆ ನನ್ನನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಿದ್ದಾರೆ. ನಾನು ಈಗ ಇಲ್ಲಿಂದ ಹಾರಿ ಸಾಯುತ್ತೇನೆ ಎಂದು ಬೆದರಿಕೆ ಹಾಕಿದ್ದ. ಜತೆಗೆ ನನ್ನ ತಾಯಿ ಬೈದರು, ಯಾವುದೇ ಕಾರಣಕ್ಕೂ ನಾನು ವಾಪಾಸ್ ಬರುವುದಿಲ್ಲ ಎಂದು ಹಠ ಹಿಡಿದಿದ್ದ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕನನ್ನು ಕೆಳಗೆ ಇಳಿಸಲು ಎಷ್ಟೇ ಮನವೊಲಿಸಿದರೂ ಸಾಧ್ಯವಾಗಲಿಲ್ಲ.

ಏಣಿ ಹಾಕಲು ಹೋದರೆ, ತಳ್ಳುವ ಕೆಲಸ ಮಾಡಿದ್ದ. ಈ ವೇಳೆ ನನ್ನ ಪತ್ನಿಯನ್ನು ಕರೆಸಿ ಎಂದು ಪಟ್ಟು ಹಿಡಿದಿದ್ದ. ಈ ವೇಳೆ ಮನೆಯಿಂದ ಪದೆಪದೇ ಫೋನ್‌ ಕಾಲ್‌ ಬಂತು ಅಂತ ಸಿಟ್ಟಾಗಿ ಮೊಬೈಲ್‌ ಅನ್ನೇ ಮುರಿದು ಬಿಸಾಕಿದ್ದಾನೆ. ಬಳಿಕ ಅಗ್ನಿಶಾಮಕ ವಾಹನ ಆಗಮಿಸಿ ಏಣಿ , ಬಲೆಗಳನ್ನು ತಂದು ಕಾರ್ಯಾಚರಣೆ ನಡೆಸಿದರು.

ಇದನ್ನೂ ಓದಿ:Chetan Ahimsa: ಭ್ರಷ್ಟಾಚಾರ ಆರಂಭವಾದದ್ದೇ ಕಾಂಗ್ರೆಸ್‌ನಿಂದ: ನಟ ಚೇತನ್‌ ಅಹಿಂಸಾ ಆರೋಪ

ಸತತ ಮೂರು ಗಂಟೆಗಳ ಕಾಲ ಸತಾಯಿಸಿದ್ದ ಯುವಕನನ್ನು ಪೊಲೀಸರು ಕಟ್ಟಡದಿಂದ ಇಳಿಸಿ ಹೊಯ್ಸಳದಲ್ಲಿ ಕರೆದುಹೋದರು. ಬಳಿಕ ಪೊಲೀಸರು ವಿಚಾರಣೆ ನಡೆಸಿದಾಗ, ನಾನು ಹೆಸರು ಮಂಜುನಾಥ್‌ ಎಂದು ಹುಣಸೆಮಾರನಹಳ್ಳಿಯವನು ಎಂದು ಯುವಕ ಮಾಹಿತಿ ನೀಡಿದ್ದಾನೆ.

ಆಸ್ತಿಯ ವಿಚಾರವಾಗಿ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇದಕ್ಕಾಗಿ ಗಾಂಜಾ ಸೇವಿಸುತ್ತೀಯಾ ಎಂದು ಚಿಕಿತ್ಸೆ ಕೊಡಿಸಲು ಕೆ.ಜಿ ಹಳ್ಳಿಯ ಜನರಲ್ ಆಸ್ಪತ್ರೆಗೆ ಸೇರಿಸಿದ್ದರು. ಕುಟುಂಬಸ್ಥರು ನನ್ನ ಹೆಂಡತಿಯನ್ನು ನನ್ನಿಂದ ದೂರು ಮಾಡಿದ್ದರು. ವಿಷವಿಟ್ಟು ಕೊಲ್ಲಲು ಪ್ರಯತ್ನ ಪಟ್ಟರು. ಈಗ ನಾನು ಆಸ್ಪತ್ರೆಯಿಂದ ತಪ್ಪಿಸಿಕೊಂಡು ಬಂದಿದ್ದೀನಿ. ನನಗೆ ನ್ಯಾಯ ಬೇಕು ನನ್ನ ಮೊಬೈಲ್‌ನಲ್ಲಿ ಎಲ್ಲ ರಹಸ್ಯ ಇದೆ. ನಾನು ಕೆಳಗೆ ಬಂದರೆ ಹುಚ್ಚ ಅನ್ನೋ ಪಟ್ಟ ಕಟ್ಟುತ್ತಾರೆ. ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದು ಆರೋಪಿಸುತ್ತಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Dog Bite : ಬೀದಿ ನಾಯಿಗಳ ಕಾಟಕ್ಕೆ ಮನೆ ಮಾರಾಟಕ್ಕೆ ಮುಂದಾದ ಜನ್ರು!

Dog Bite : ಬೀದಿ ನಾಯಿಗಳ ಕಾಟಕ್ಕೆ ಬೇಸತ್ತ ಓಎಂಬಿಆರ್‌ ಲೇಔಟ್‌ ಮಂದಿ ಮನೆ ಮಾರಾಟಕ್ಕೆ ಮುಂದಾಗಿದ್ದಾರೆ. ಸಂಜೆಯಾದರೆ ಮನೆಯಿಂದ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಜನರು ಕಂಗಲಾಗಿದ್ದಾರೆ.

VISTARANEWS.COM


on

By

Dog bite
Koo

ಬೆಂಗಳೂರು: ಬೆಂಗಳೂರಿನ ಆ ಏರಿಯಾ ನಿವಾಸಿಗಳು ಮನೆಯಿಂದ ಹೊರಬರಬೇಕಾದರೂ ಸಾವಿರ ಸಲ ಯೋಚನೆ ಮಾಡಬೇಕು. ಯಾಕೆಂದರೆ ರಸ್ತೆಯಲ್ಲಿ ಹೋಗುವಾಗ ಯಾವ ಬೀದಿ ನಾಯಿ (Dog Bite) ಎಲ್ಲಿಂದ ಬಂದು ಕಚ್ಚುತ್ತೋ ಅನ್ನೋ ಆತಂಕದಲ್ಲೇ ದಿನದೂಡುತ್ತಿದ್ದಾರೆ.

ಒಂದು ತಿಂಗಳಲ್ಲಿ 40ಕ್ಕೂ ಅಧಿಕ ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದೆ. ನಿತ್ಯ ನಾಯಿ ದಾಳಿಯಿಂದಾಗಿ ಜನರು ಆಸ್ಪತ್ರೆಪಾಲಾಗಿದ್ದಾರೆ. ಬೆಂಗಳೂರಿನ ಬಾಣಸವಾಡಿಯ ಓಎಂಬಿಆರ್ ಲೇಔಟ್ ಬರೋಬ್ಬರಿ 40 ಬೀದಿ ನಾಯಿಗಳು ಇವೆ. ಸ್ಥಳೀಯರು ಬೀದಿ ನಾಯಿಗಳಿಗೆ ಹೆದರಿ ಏರಿಯಾಗೆ ಹೋಗಲು ಭಯ ಪಡುವಂತಾಗಿದೆ.

ಬೀದಿ ನಾಯಿಗಳ ಹಾವಳಿಗೆ ಬೇಸತ್ತು ಮನೆ ಖಾಲಿ ಮಾಡಲು ಮುಂದಾಗಿದ್ದಾರೆ. ಸಂಜೆ 7 ಗಂಟೆ ಮೇಲೆ ಮನೆಯಿಂದ ಹೊರಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ. ಮನೆಗೆ ಸಂಬಂಧಿಕರು ಬರುತ್ತಿಲ್ಲ, ಮಕ್ಕಳು ಸ್ಕೂಲ್‌ಗೆ ಹೋಗುತ್ತಿಲ್ಲ. ವೃದ್ಧ ಹೊರಗೆ ಕಾಲಿಡುವಂತಿಲ್ಲ ಎಂದು ಗೋಳಾಡುತ್ತಿದ್ದಾರೆ. ದಿನಕ್ಕೆ‌ ಕನಿಷ್ಠ ಇಬ್ಬರ ಮೇಲೆ ನಾಯಿಗಳು ದಾಳಿ ನಡೆಸುತ್ತಿವೆ. ಬಿಬಿಎಂಪಿ ಅಧಿಕಾರಿಗಳಿಗೆ ದೂರು ಕೊಟ್ಟು ಕೊಟ್ಟು ಸುಸ್ತಾದ ಏರಿಯಾದ ಜನರು ಸ್ವಂತ ಮನೆಗಳನ್ನೇ ಮಾರಾಟಕ್ಕಿಟ್ಟಿದ್ದಾರೆ.

ಇದನ್ನೂ ಓದಿ: Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

ಬೈಕ್‌ ಸವಾರ ಪ್ರಾಣ ಕಸಿದ ಕಾರು

ಕಾರವಾರ : ಉತ್ತರಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಗಾಂವಗೇರಿ ಬಳಿ ಕಾರು -ಬೈಕ್ ನಡುವೆ (Road Accident) ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರವಾರದ ಕಾಜುಭಾಗದ ನಿವಾಸಿ ವಿನೋದ ನಾಯ್ಕ (30) ಮೃತ ದುರ್ದೈವಿ.

ಸ್ಥಳಕ್ಕೆ ಚಿತ್ತಾಕುಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಚಿತ್ತಾಕುಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೆಜಿಎಫ್‌ನಲ್ಲಿ ಏರ್ ಬ್ಲಾಸ್ಟ್‌

ಕೋಲಾರ ಕೆಜಿಎಫ್ ನಗರದಲ್ಲಿ ಭಯಾನಕ ಜೋರು ಶಬ್ಧ ಕೇಳಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ಏರ್ ಬ್ಲಾಸ್ಟ್ ಆಗಿದೆ. ಜೋರು ಶಬ್ದದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೆಜಿಎಫ್ ನಗರದ ಮಾರಿಕುಪ್ಪಂ ಹಾಗೂ ಅಂಡರ್ ಸನ್ ಪೇಟೆ ನಿವಾಸಿಗಳು ಮನೆಯಿಂದ ಹೊರ ಬಂದಿದ್ದರು. ಈ ಬಗ್ಗೆ ಬಿಜಿಎಂಎಲ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಮಾರಿಕುಪ್ಪಂನಲ್ಲಿರುವ ಮೈಸೂರ್ ಮಿಲ್ಸ್‌ನಲ್ಲಿ ಏರ್ ಬ್ಲಾಸ್ಟ್‌ನಿಂದಾಗಿ ಭಾರಿ ಭಯಾನಕ‌ ಶಬ್ಧ ಬಂದಿದೆ ಎಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Rave Party: ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ 85 ಜನರ ಮೇಲೆ ಚಾರ್ಜ್‌ಶೀಟ್, ಸುಳ್ಳು ಹೇಳಿದ ನಟಿ ಹೇಮಾ ಮೇಲೂ ಚಾರ್ಜ್

Rave Party: ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ್ದ ತೆಲುಗು ನಟಿ ಹೇಮಾ (Actress Hema) ಸೇರಿ ಒಟ್ಟು 85ಕ್ಕೂ ಹೆಚ್ಚು ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಗೆ ತಯಾರಿ ಮಾಡಿಕೊಳ್ಳಲಾಗಿದೆ. ಹೇಮಾ ವಿರುದ್ಧವೂ ಸಾಕ್ಷಿಗಳಿದ್ದು, ಸಿಸಿಬಿ ಚಾರ್ಜ್ ಫ್ರೇಮ್ ಮಾಡಿದೆ. ಈಕೆ ಡ್ರಗ್ಸ್ ಸೇವನೆ ಮಾಡಿದ್ದಕ್ಕೆ ಸಾಕ್ಷಿ ಲಭ್ಯವಾಗಿದೆ.

VISTARANEWS.COM


on

rave party telugu actress hema
Koo

ಬೆಂಗಳೂರು: ರಾಜಧಾನಿಯ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿ ರೇವ್ ಪಾರ್ಟಿ (Rave Party) ನಡೆಸಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರ (CCB Police) ತನಿಖೆ ಪೂರ್ಣಗೊಂಡಿದ್ದು, ಚಾರ್ಜ್‌ಶೀಟ್‌ (Charge Sheet) ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ್ದ ತೆಲುಗು ನಟಿ ಹೇಮಾ (Actress Hema) ಸೇರಿ ಒಟ್ಟು 85ಕ್ಕೂ ಹೆಚ್ಚು ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಗೆ ತಯಾರಿ ಮಾಡಿಕೊಳ್ಳಲಾಗಿದೆ. ಹೇಮಾ ವಿರುದ್ಧವೂ ಸಾಕ್ಷಿಗಳಿದ್ದು, ಸಿಸಿಬಿ ಚಾರ್ಜ್ ಫ್ರೇಮ್ ಮಾಡಿದೆ. ಈಕೆ ಡ್ರಗ್ಸ್ ಸೇವನೆ ಮಾಡಿದ್ದಕ್ಕೆ ಸಾಕ್ಷಿ ಲಭ್ಯವಾಗಿದೆ.

ಡ್ರಗ್ಸ್ ಸೇವನೆ ಮಾಡಿದ್ದೂ ಅಲ್ಲದೇ ಪೊಲೀಸರ ತನಿಖೆ ವೇಳೆ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾಳೆ. ಪೊಲೀಸರಿಗೆ ತನಿಖೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾಳೆ. ಪ್ರಭಾವ ಬಳಸಿ ತನಿಖೆಯಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿರುವ ಬಗ್ಗೆಯೂ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ತಾನು ರೇವ್‌ ಪಾರ್ಟಿಯಲ್ಲಿ ಭಾಗವಹಿಸಿಯೇ ಇಲ್ಲ ಎಂದು ಈಕೆ ಪಾರ್ಟಿಯ ಸ್ಥಳದಿಂದಲೇ ಮಾಧ್ಯಮಗಳಿಗೆ ವಿಡಿಯೋ ಕಳಿಸಿ ದಿಕ್ಕು ತಪ್ಪಿಸುವ ಯತ್ನ ಮಾಡಿದ್ದಳು.

ಪಾರ್ಟಿ ಆಯೋಜನೆ ಮಾಡಿದ್ದ ಐವರು ಸೇರಿ ಒಟ್ಟು 85ಕ್ಕೂ ಹೆಚ್ಚು ಜನರ ವಿರುದ್ಧ ಚಾರ್ಜ್‌ಶೀಟ್ ಮಂಡಿಸಲಾಗುತ್ತಿದೆ. ಇನ್ನೂ ಕೆಲವೇ ದಿನದಲ್ಲಿ ನ್ಯಾಯಾಲಯಕ್ಕೆ ಇದನ್ನು ಸಿಸಿಬಿ ಸಲ್ಲಿಕೆ ಮಾಡಲಿದೆ ಎಂದು ತಿಳಿದುಬಂದಿದೆ. ಪಾರ್ಟಿಯಲ್ಲಿ 85ಕ್ಕೂ ಹೆಚ್ಚು ಜನರು ಭಾಗವಹಿಸಿರುವುದು ಪತ್ತೆಯಾಗಿತ್ತು. ಪಕ್ಕದ ಆಂಧ್ರಪ್ರದೇಶದ ಅನೇಕ ಪ್ರಭಾವಿಗಳು, ಶ್ರೀಮಂತ ಉದ್ಯಮಿಗಳು ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.

ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ  ಅವರನ್ನು ಬಂಧಿಸಲಾಗಿತ್ತು. 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ಕೋರ್ಟ್‌ ಆಕೆಗೆ ವಿಧಿಸಿತ್ತು. ನಂತರ ಜಾಮೀನು ಮಂಜೂರಾಗಿತ್ತು. ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್‌, ನಟಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನಟಿ ಹೇಮಾಳಿಂದ ಯಾವುದೇ ಮಾದಕ ವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಅಲಿಯಾಸ್ ಕೊಲ್ಲ ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಹೀಗಾಗಿ ನಟಿ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ವಿಚಾರಣೆಗೆ ಆಗಮಿಸಿದ್ದ ತೆಲುಗು ನಟಿ ಹೇಮಾ ಅವರನ್ನು ಜೂನ್‌ 3ರಂದು ಬಂಧಿಸಲಾಗಿತ್ತು. ಬಳಿಕ ಪ್ರಕರಣದ ವಿಚಾರಣೆ ನಡೆಸಿದ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದರು.

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದಾಗ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

ಇದನ್ನೂ ಓದಿ | Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

Continue Reading

ಬೆಂಗಳೂರು

Detective Agency: ಡಿಟೆಕ್ಟಿವ್‌ ಏಜೆನ್ಸಿಗಳಿಗೆ ಅನಧಿಕೃತವಾಗಿ ಸಿಡಿಆರ್‌ ನೀಡುತ್ತಿದ್ದ ಕಾನ್ಸ್‌ಟೇಬಲ್‌ ಅರೆಸ್ಟ್‌

Detective Agency: ಅನಧಿಕೃತವಾಗಿ ಸಿಡಿಆರ್ ನೀಡುತ್ತಿದ್ದ ಕಾನ್ಸ್‌ಟೇಬಲ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಕೆಲವು ಪೊಲೀಸ್ ಅಧಿಕಾರಿಗಳ ಪತ್ನಿಯರು ಕೂಡ ಸಿಡಿಆರ್ ಪಡೆದಿರುವುದು ಪತ್ತೆಯಾಗಿದೆ.

VISTARANEWS.COM


on

By

Detective Agency
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಡಿಟೆಕ್ಟಿವ್‌ ಏಜೆನ್ಸಿಗಳಿಗೆ (Detective Agency) ಅನಧಿಕೃತವಾಗಿ ಸಿಡಿಆರ್ ನೀಡುತ್ತಿದ್ದ ಕಾನ್ಸ್‌ಟೇಬಲ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುನಿರತ್ನ ಬಂಧಿತ ಪೊಲೀಸ್‌ ಸಿಬ್ಬಂದಿ.

ಸಿಸಿಬಿ ಪೊಲೀಸರು ಕಳೆದ ಮೇ ತಿಂಗಳಲ್ಲಿ ಡಿಟೆಕ್ಟಿವ್‌ ಏಜೆನ್ಸಿಗಳ ಮೇಲೆ ದಾಳಿ ಮಾಡಿ ಕೆಲವರನ್ನು ಬಂಧನ ಮಾಡಿದ್ದರು. ಈ ಸಂಬಂಧ ಮೂರು ಪ್ರಕರಣಗಳು ದಾಖಲಿಸಿದ್ದರು. ಇದರ ಸಂಬಂಧ ತನಿಖೆ ಮುಂದುವರೆಸಿದ್ದ ಸಿಸಿಬಿ ಪೊಲೀಸರು, ಸಿಐಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾನ್ಸಟೇಬಲ್ ಮುನಿರತ್ನ ಈ ಡಿಟೆಕ್ವಿವ್‌ ಏಜೆನ್ಸಿಗಳಿಗೆ ಸಿಡಿಆರ್‌ ನೀಡುತ್ತಿದ್ದ.

ಅಕ್ರಮ ಸಿಡಿಆರ್ ಪಡೆಯುತ್ತಿದ್ದ ನಾಗೇಶ್ವರ್ ರೆಡ್ಡಿ ಹಾಗೂ ಮಾಹಿತಿ ಸೋರಿಕೆ ಮಾಡುತ್ತಿದ್ದ ಮುನಿರತ್ನ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮುನಿರತ್ನ ಅಧಿಕೃತ ಪ್ರಕರಣಗಳ ಜತೆ ಡಿಟೆಕ್ವಿವ್‌ ಏಜೆನ್ಸಿ ಅವರು ನೀಡುತ್ತಿದ್ದ ನಂಬರ್ ಸೇರಿಸಿ ಕೊಡುತ್ತಿದ್ದ.

Detective agence

ಮುನಿರತ್ನ ಸಿಐಡಿ ಟೆಕ್ನಿಕಲ್ ಸೆಲ್‌ನಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾನೆ. ಕೆಲವು ಪೊಲೀಸ್ ಅಧಿಕಾರಿಗಳ ಪತ್ನಿಯರು ಸಿಡಿಆರ್ ಪಡೆದಿರುವುದು ಪತ್ತೆಯಾಗಿದೆ. ತಮ್ಮ ಪತಿಯ ಸಿಡಿಆರ್‌ ಅನ್ನು ಡಿಟೆಕ್ಟಿವ್‌ ಏಜೆನ್ಸಿಗಳ ಮೂಲಕ ಪಡೆದಿದ್ದಾರೆ. ಸದ್ಯ ಸಿಸಿಬಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Assault Case : ಕಾರು ಚಾಲಕನ ಮುಖಕ್ಕೆ‌ ಉಗಿದು, ಗೂಂಡಾಗಿರಿ ಮಾಡಿದ ಆಟೋ ಡೈವರ್‌

ಸ್ಕೂಟರ್‌ನಲ್ಲಿ ಬರುತ್ತಿದ್ದ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸ್‌ ಪೇದೆ!

ತುಮಕೂರು: ಜಿಲ್ಲೆಯ ಪೊಲೀಸ್‌ ಪೇದೆಯೊಬ್ಬರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಸಿನೀಮಿಯ ಶೈಲಿಯಲ್ಲಿ ಕಳ್ಳನೊಬ್ಬನನ್ನು ಹಿಡಿದಿರುವ ಘಟನೆ (Police Raid) ನಡೆದಿದ್ದು, ಕಳ್ಳನನ್ನು ಹಿಡಿಯುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯ ನಿಷ್ಠೆಗೆ ಸಾರ್ವಜನಿಕ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಮಂಜೇಶ್@420 ಮಂಜ @ಹೊಟ್ಟೆ ಮಂಜ ಪೊಲೀಸ್ ಕೈಗೆ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ. ಕೊರಟಗೆರೆ ಪೊಲೀಸ್ ಠಾಣೆಯ ಪೇದೆ ದೊಡ್ಡಲಿಂಗಯ್ಯ ಕಳ್ಳನನ್ನು ಹಿಡಿದವರು. ಸುಮಾರು 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ 420 ಮಂಜನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯ ಸಿಗ್ನಲ್ ಬಳಿ ಪೇದೆ ಸೆರೆ ಹಿಡಿದಿದ್ದಾರೆ.

ಕಳ್ಳ ಮಂಜ ಮತ್ತು ಪೊಲೀಸ್‌ ಪೇದೆ ದೊಡ್ಡಲಿಂಗಯ್ಯ

ಸಿಗ್ನಲ್‌ನಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಕಳ್ಳನನ್ನು ಪೇದೆ ಅಡ್ಡಗಟ್ಟಿದ್ದಾರೆ. ಆದರೂ ಅವರನ್ನು ಎಳೆದುಕೊಂಡು ಕಳ್ಳ ಮುಂದೆ ಸಾಗಿದ್ದಾನೆ. ಪಟ್ಟು ಬಿಡದ ಪೊಲೀಸ್‌, ಕಳ್ಳನನ್ನು ಬೆನ್ನಟ್ಟಿ ಕಾಲನ್ನು ಹಿಡಿದು ನೆಲಕ್ಕೆ ಬೀಳಿಸಿದ್ದಾರೆ. ಬಳಿಕ ಅಲ್ಲಿದ್ದ ಟ್ರಾಫಿಕ್‌ ಪೊಲೀಸರು ಕಳ್ಳನನ್ನು ಹಿಡಿಯಲು ನೆರವಾಗಿದ್ದಾರೆ. ನಂತರ ಸ್ಥಳಕ್ಕೆ ಸಾರ್ವಜನಿಕರು ಆಗಮಿಸಿ ಕಳ್ಳನಿಗೆ ಹಿಗ್ಗಾಮುಗ್ಗಾ ಬಾರಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಖತರ್ನಾಕ್ ಕಳ್ಳನಿಗೆ ಚಿನ್ನದ ಸರ ಹಾಕಿರುವ ವೃದ್ಧೆಯರೇ ಟಾರ್ಗೆಟ್. ವೃದ್ಧೆಯರನ್ನೇ ಟಾರ್ಗೆಟ್ ಮಾಡಿ, ಪಿಂಚಣಿ, ಸರ್ಕಾರದ ಸವಲತ್ತು ಕೊಡಿಸುತ್ತೇನೆಂದು ನಂಬಿಸಿ, ಚಿನ್ನದ ಸರ ಕದ್ದು ಖತರ್ನಾಕ್ ಮಂಜ ಪರಾರಿಯಾಗುತ್ತಿದ್ದ. ಈತನ ವಿರುದ್ಧ ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ, ಹೆಬ್ಬೂರು ಪೊಲೀಸ್ ಠಾಣೆ ಸೇರಿ ಸುಮಾರು 10ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿದ್ದವು.

ಸುಮಾರು 1 ತಿಂಗಳಿಂದ ಪೊಲೀಸರ ಕೈಗೆ ಸಿಗದೇ ಕಣ್ತಪ್ಪಿಸಿ ಓಡಾಡುತ್ತಿದ್ದ 420 ಮಂಜ, ಬೆಂಗಳೂರಿನ ಮತ್ತಿಕೆರೆ ಕಡೆಯಿಂದ ಸದಾಶಿವನಗರ ಪೊಲೀಸ್ ಠಾಣೆ ಕಡೆಗೆ, ಬಿಳಿ ಬಣ್ಣದ ಹೋಂಡಾ ಆ್ಯಕ್ಟಿವಾ ಸ್ಕೂಟರ್‌ನಲ್ಲಿ ಬರುತ್ತಿರುವ ಮಾಹಿತಿಯನ್ನು ಪೊಲೀಸರು ಕಲೆಹಾಕಿದ್ದರು. ಸದಾಶಿವನಗರ ಠಾಣೆ ಸಿಗ್ನಲ್ ಬಳಿ 420 ಮಂಜನನ್ನು ಹಿಡಿಯಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ದೊಡ್ಡಲಿಂಗಯ್ಯ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕಳ್ಳನನ್ನ ಹಿಡಿದಿದ್ದಾರೆ.

ಸದ್ಯ ಖತರ್ನಾಕ್ ಕಳ್ಳ 420 ಮಂಜನನ್ನು ಬಂಧಿಸಿ ಕೊರಟಗೆರೆ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ತನಿಖೆ ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Pawan Kalyan: ವಿಧಾನಸೌಧದಲ್ಲಿ ಪವನ್‌ ಕಲ್ಯಾಣ್‌ ನೋಡಲು ಮುಗಿಬಿದ್ದ ಜನ, ಭದ್ರತಾ ಲೋಪ; ಆಂಧ್ರ ಡಿಸಿಎಂನಿಂದ ಸಿಎಂ, ಖಂಡ್ರೆ ಭೇಟಿ

Pawan Kalyan: ಮಧ್ಯಾಹ್ನ ವಿಧಾನಸೌಧಕ್ಕೆ ಆಗಮಿಸಿದ ಪವನ್ ಕಲ್ಯಾಣ್ ಅವರನ್ನು ನೋಡಲು ವಿಧಾನಸೌಧದ ಸಿಬ್ಬಂದಿ ಹಾಗೂ ಸಾರ್ವಜನಿಕರು ಮುಗಿಬಿದ್ದರು. ಮೂರನೇ ಮಹಡಿಯ ಕಾರಿಡಾರ್‌ನಲ್ಲಿ ಉದ್ದಕ್ಕೂ ನಿಂತು ಪವನ್ ಕಲ್ಯಾಣರನ್ನು ನೋಡಿದರು.

VISTARANEWS.COM


on

pawan kalyan
Koo

ಬೆಂಗಳೂರು: ರಾಜ್ಯ ರಾಜಧಾನಿಗೆ ಇಂದು ಆಂಧ್ರಪ್ರದೇಶ (Andhra Pradesh) ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ (Pawan Kalyan) ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇಂದು ಬೆಳಗ್ಗೆ ಸಿಎಂ ಅಧಿಕೃತ ನಿವಾಸ ಕಾವೇರಿಗೆ ತೆರಳಿ ಸಿದ್ದರಾಮಯ್ಯ ಅವರನ್ನು ಪವನ್‌ ಕಲ್ಯಾಣ್‌ ಭೇಟಿಯಾದರು. ಮಧ್ಯಾಹ್ನ ವಿಧಾನಸೌಧಕ್ಕೆ ಆಗಮಿಸಿದ ಪವನ್ ಕಲ್ಯಾಣ್ ಅವರನ್ನು ನೋಡಲು ವಿಧಾನಸೌಧದ ಸಿಬ್ಬಂದಿ ಹಾಗೂ ಸಾರ್ವಜನಿಕರು ಮುಗಿಬಿದ್ದರು. ಮೂರನೇ ಮಹಡಿಯ ಕಾರಿಡಾರ್‌ನಲ್ಲಿ ಉದ್ದಕ್ಕೂ ನಿಂತು ಪವನ್ ಕಲ್ಯಾಣರನ್ನು ನೋಡಿದರು. ಕಾರಿಡಾರ್ ಬದಿ ನಿಂತು ಫೋಟೋ ಹಾಗೂ ವಿಡಿಯೋ ಸೆರೆ ಹಿಡಿದುಕೊಂಡರು.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಜೊತೆಗೆ ಪವನ್ ಕಲ್ಯಾಣ್ ಮೀಟಿಂಗ್‌ ನಡೆಸಿದರು. ಈ ವೇಳೆ ಪವನ್ ಕಲ್ಯಾಣ್ ಅವರನ್ನು ಈಶ್ವರ್ ಖಂಡ್ರೆ ಶಾಲು ಹೊದಿಸಿ, ಗಣಪತಿ ಮೂರ್ತಿ ನೀಡಿ ಗೌರವಿಸಿದರು. ಈಶ್ವರ್ ಖಂಡ್ರೆಗೆ ಪವನ ಕಲ್ಯಾಣ್‌ ಶಾಲು ಹಾಕಿ ತಿರುಪತಿ ಮೂರ್ತಿ ನೀಡಿ ಗೌರವಿಸಿದರು. ಕರ್ನಾಟಕ ಹಾಗೂ ಆಂದ್ರ ಪ್ರದೇಶದ ಸಮಾನ ಆಸಕ್ತಿಯ ಹಲವು ವಿಚಾರಗಳ ಬಗ್ಗೆ ಉಭಯರು ಚರ್ಚೆ ನಡೆಸಿದ್ದಾರೆ.

ಭದ್ರತಾ ಲೋಪ

ಸಭೆಯಲ್ಲಿ ಪವನ್ ಕಲ್ಯಾಣ್ ಅವರನ್ನು ಗೌರವಿಸುವ ವೇಳೆ ಪ್ರೋಟೋಕಾಲ್‌ ಉಲ್ಲಂಘನೆ ಹಾಗೂ ಭದ್ರತಾ ಲೋಪ ಕಂಡುಬಂತು. ವಿಧಾನಸೌಧದ ಸಿಬ್ಬಂದಿಗಳು, ಅಭಿಮಾನಿಗಳು ಪವನ್‌ ಜೊತೆಗೆ ಫೋಟೋ ವಿಡಿಯೋ ತೆಗೆಸಿಕೊಳ್ಳಲು ನೂಕುನುಗ್ಗಲು ನಡೆಸಿದರು. ಸಭೆ ವೇಳೆಯೂ ನೂಕುನುಗ್ಗಲು ನಡೆಸಿ ಗೊಂದಲ ಸೃಷ್ಟಿಸಿದರು. ಸಭೆಯನ್ನು ಸರಿಯಾಗಿ ಆಯೋಜನೆ ಮಾಡದ ರಾಜ್ಯ ಸರ್ಕಾರ ಸ್ಟೇಟ್ ಪ್ರೋಟೋಕಾಲ್ ಮರೆತರೆ, ವಿಧಾನಸಭೆಯ ಸಚಿವಾಲಯದ ಸಿಬ್ಬಂದಿಗಳೇ ನೂಕುನುಗ್ಗಲು ಸೃಷ್ಟಿಸಿ ಸಭೆಯನ್ನು ಅವ್ಯವಸ್ಥೆಯ ಆಗರವಾಗಿಸಿದರು

ವೇತನವೇ ಬೇಡ ಎಂದ ಪವನ್‌ ಕಲ್ಯಾಣ್‌- ಮತ್ತೊಮ್ಮೆ ಗಮನ ಸೆಳೆದ ಆಂಧ್ರ ಡಿಸಿಎಂ

ಪೀಠಾಪುರ್: ಆಂಧ್ರಪ್ರದೇಶ(Andra Pradesh) ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಅಭೂತಪೂರ್ವ ಗೆಲುವಿನ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಪವನ್‌ ಕಲ್ಯಾಣ್‌(Pawan Kalyan) ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿರುವ ಹಿನ್ನೆಲೆ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ತಮ್ಮ ವೇತನ ಪಡೆಯಲು ನಿರಾಕರಿಸಿದ್ದಾರೆ.

ನಿನ್ನೆ ಕಾಕಿನಾಡ ಜಿಲ್ಲೆಯ ಗೋಲಾಪೊರ್ಲು ಗ್ರಾಮಕ್ಕೆ ಪವನ್ ಕಲ್ಯಾಣ್ ಭೇಟಿ ನೀಡಿ ಎನ್ ಟಿಆರ್ ಭರೋಸಾ ಪಿಂಚಣಿ ಪತ್ರಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ವೇತನ ಪಡೆಯುವುದಿಲ್ಲ ಎಂದರು. ಇದೇ ವೇಳೆ ಅವರು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಗನ್‌ ಅನಗತ್ಯವಾಗಿ ಅರಮನೆ ಕಟ್ಟಿಸಿಕೊಂಡು ರಾಜ್ಯವನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಇಲಾಖೆಗಳಲ್ಲಿ ಹಣದ ಕೊರತೆ ಇದ್ದರೂ ಬಂಗಲೆ ಕಟ್ಟಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

ಇಲಾಖೆಯಲ್ಲಿ ಹಣವಿಲ್ಲ,. ಇದಕ್ಕಾಗಿಯೇ ಕಳೆದ ತಿಂಗಳ ವೇತನಕ್ಕೆ ಸಂಬಂಧಿಸಿದ ಕಡತಕ್ಕೆ ಕೆಲ ದಿನ ಸಹಿ ಹಾಕುವುದನ್ನು ತಡೆದರು. ಸಂಬಳದ ಅಗತ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಹಿಂದಿನ ಸರ್ಕಾರ ಪಂಚಾಯಿತಿ ಹಣ ಎಲ್ಲಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಟೀಕಿಸಿದರು. ಇಲಾಖೆಯ ಹಣದ ಕೊರತೆಯ ನಡುವೆಯೂ ಅಂದಿನ ಮುಖ್ಯಮಂತ್ರಿ ರುಷಿಕೊಂಡನಲ್ಲಿ ಅರಮನೆ ನಿರ್ಮಿಸಿದ್ದರು ಎಂದು ಆರೋಪಿಸಿದರು. ಪಂಚಾಯತ್ ರಾಜ್ ಇಲಾಖೆಯಲ್ಲಿ ತಮ್ಮ ಕಡೆಯಿಂದ ಯಾವುದೇ ಭ್ರಷ್ಟಾಚಾರ ನಡೆಯುವುದಿಲ್ಲ ಎಂದು ಪವನ್ ಕಲ್ಯಾಣ್ ಸಾರ್ವಜನಿಕರಿಗೆ ಭರವಸೆ ನೀಡಿದರು.

ಇದನ್ನೂ ಓದಿ: Pawan Kalyan: ಸಿಂಗಾಪುರದಲ್ಲಿ ಪವನ್ ಕಲ್ಯಾಣ್ ಮೂರನೇ ಪತ್ನಿ ಪಡೆದ ಪದವಿ ಯಾವುದು?

Continue Reading
Advertisement
Shobha Karandlaje
ದೇಶ8 mins ago

Shobha Karandlaje: ತಮಿಳಿಗರಿಗೆ ಅವಮಾನ- ಕ್ಷಮೆಯಾಚಿಸಿದರೆ ಕೇಸ್‌ ರದ್ದು; ಹೈಕೋರ್ಟ್‌ನಲ್ಲಿ ಎಜಿ ಮಾಹಿತಿ

Dog bite
ಬೆಂಗಳೂರು10 mins ago

Dog Bite : ಬೀದಿ ನಾಯಿಗಳ ಕಾಟಕ್ಕೆ ಮನೆ ಮಾರಾಟಕ್ಕೆ ಮುಂದಾದ ಜನ್ರು!

International Cat Day
ಪರಿಸರ26 mins ago

International Cat Day: ಇಂದು ಬೆಕ್ಕಿನ ದಿನ; ಇದರ ಆಯುಷ್ಯ, ನಿದ್ದೆ, ಶೃಂಗಾರ ಇತ್ಯಾದಿ ಸಂಗತಿಗಳು ಕುತೂಹಲಕರ!

Gautam Gambhir
ಕ್ರೀಡೆ37 mins ago

Gautam Gambhir: 27 ವರ್ಷದ ಬಳಿಕ ಲಂಕಾ ವಿರುದ್ಧ ಸೋಲು; ಗಂಭೀರ್​ ಫುಲ್​ ಟ್ರೋಲ್​

rave party telugu actress hema
ಕ್ರೈಂ42 mins ago

Rave Party: ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ 85 ಜನರ ಮೇಲೆ ಚಾರ್ಜ್‌ಶೀಟ್, ಸುಳ್ಳು ಹೇಳಿದ ನಟಿ ಹೇಮಾ ಮೇಲೂ ಚಾರ್ಜ್

Divorce Case
Latest46 mins ago

Divorce Case: ಪ್ರತಿ ಬಾರಿ ʼಸರಸʼ ಆಡಿದಾಗಲೂ ಕಾಸು ಕೊಡಲೇಬೇಕು! ಹೆಂಡತಿಯ ಡಿಮ್ಯಾಂಡ್‌ ಕೇಳಿ ಡಿವೋರ್ಸ್‌ ಪಡೆದ ಗಂಡ!

Maravoor bridge in danger Vehicular traffic suspended
ದಕ್ಷಿಣ ಕನ್ನಡ50 mins ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Naga Chaitanya Sobhita Love Story REVEALED age gap
ಟಾಲಿವುಡ್56 mins ago

Naga Chaitanya: ನಾಗ ಚೈತನ್ಯ- ಶೋಭಿತಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ? ಇಬ್ಬರ ನಡುವಿನ ಏಜ್ ಗ್ಯಾಪ್ ಎಷ್ಟು?

Murder Case
Latest59 mins ago

Murder Case: ಒಂದೇ ಹುಡುಗಿಯನ್ನು ಪ್ರೀತಿಸಿದ ಸಹೋದರರು; ಈ ತ್ರಿಕೋನ ಪ್ರೇಮ ಕಥೆ ಕೊಲೆಯಲ್ಲಿ ಅಂತ್ಯ!

vinesh phogat
ದೇಶ1 hour ago

Vinesh Phogat: ವಿನೇಶ್‌ ಪೋಗಟ್‌ ಅನರ್ಹತೆ ಬಗ್ಗೆ ಹಗುರವಾಗಿ ಮಾತ್ನಾಡಿದ್ರಾ ಸುಧಾ ಮೂರ್ತಿ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌