Site icon Vistara News

Body Found: ದೇವರ ದರ್ಶನಕ್ಕೆ ಹೊರಟ ವ್ಯಕ್ತಿ ಶವವಾಗಿ ಪತ್ತೆ, ಚಿನ್ನಾಭರಣ ನಾಪತ್ತೆ

Body Found

ಬೆಂಗಳೂರು: ದೇವರ ದರ್ಶನಕ್ಕೆಂದು ಹೊರಟ ಹಿರಿಯ ನಾಗರಿಕರೊಬ್ಬರು ಬೆಂಗಳೂರಿನ ಮೆಜೆಸ್ಟಿಕ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶವವಾಗಿ (Body Found) ಪತ್ತೆಯಾಗಿದ್ದಾರೆ.

ದೊಡ್ಡಬಳ್ಳಾಪುರ ಮದುರನ ಹೊಸಹಳ್ಳಿ ನಿವಾಸಿ ಮುನಿ ಆಂಜನೇಯ (೬೫) ಮೃತ ವ್ಯಕ್ತಿ. ಗೆಳೆಯರ ಜೊತೆ ಧರ್ಮಸ್ಥಳಕ್ಕೆ ತೆರಳುವುದಾಗಿ ನಿನ್ನೆ 2 ಗಂಟೆಗೆ ಮನೆಯಿಂದ ಹೊರಟಿದ್ದರು.

ಬಸ್‌ ನಿಲ್ದಾಣದಲ್ಲಿ ಗೆಳೆಯರಿಗಾಗಿ ಕಾದು ಕುಳಿತಿದ್ದಾಗ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಶವ ಪತ್ತೆಯಾಗಿದೆ. ಮೃತರ ಬಳಿ ಇದ್ದ ಚಿನ್ನಾಭರಣ ಹಾಗೂ ಹಣ ನಾಪತ್ತೆಯಾಗಿದೆ. ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version