Greenpeace India: ಸಂಚಾರ ದಟ್ಟಣೆ ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆ ಬಳಸಿ: ಗ್ರೀನ್‌ಪೀಸ್‌ - Vistara News

ಬೆಂಗಳೂರು

Greenpeace India: ಸಂಚಾರ ದಟ್ಟಣೆ ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆ ಬಳಸಿ: ಗ್ರೀನ್‌ಪೀಸ್‌

Greenpeace India: ಗ್ರೀನ್‌ಪೀಸ್ ಇಂಡಿಯಾ ವತಿಯಿಂದ ಆಯೋಜಿಸಿದ್ದ ‘ಲೆಟ್ಸ್ ಮೂವ್ ಬೆಂಗಳೂರು’ ನಾಗರಿಕರ ಸಮಾವೇಶದಲ್ಲಿ ಶಕ್ತಿಯೋಜನೆ ಸಮರ್ಪಕ ಅನುಷ್ಠಾನ, ಬಸ್‌ ಸೌಕರ್ಯ, ಸಂಚಾರ ದಟ್ಟಣೆ ಸಮಸ್ಯೆ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

VISTARANEWS.COM


on

lets move bengaluru programee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಪ್ರೆಸ್‌ಕ್ಲಬ್‌ನಲ್ಲಿ ಗ್ರೀನ್‌ಪೀಸ್ ಇಂಡಿಯಾ (Greenpeace India) ವತಿಯಿಂದ ‘ಲೆಟ್ಸ್ ಮೂವ್ ಬೆಂಗಳೂರು’ ನಾಗರಿಕರ ಸಮಾವೇಶ ಆಯೋಜಿಸಲಾಗಿತ್ತು. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ʻಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ’ ಯೋಜನೆಯ ಸಮರ್ಪಕ ಅನುಷ್ಠಾನ, ಬಸ್‌ ಸೌಕರ್ಯ, ಸಂಚಾರ ದಟ್ಟಣೆ ಸಮಸ್ಯೆ ಮತ್ತಿತರರ ವಿಷಯಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆದಿದ್ದು, ಜತೆಗೆ ನಗರದಲ್ಲಿ ಜಾರಿಗೆ ತರಬಹುದಾದ ಪ್ರಾಯೋಗಿಕ ಪರಿಹಾರಗಳ ಕುರಿತು ನೀತಿನಿರೂಪಕರ ಗಮನ ಸೆಳೆಯಲಾಯಿತು.

ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್, ಸ್ಲಂ ನಿವಾಸಿಗಳ ಒಕ್ಕೂಟ, ಪವರ್ ದಿ ಪೆಡಲ್ ಗಾರ್ಮೆಂಟ್ ಫ್ಯಾಕ್ಟರಿ ಕಾರ್ಮಿಕರ ಸಮುದಾಯ, ಸಂಗಮ, ಕೌನ್ಸಿಲ್ ಫಾರ್ ಆಕ್ಟಿವ್ ಮೊಬಿಲಿಟಿ ಮತ್ತು ಸಿಟಿಜನ್ಸ್ ಫಾರ್ ಸ್ಯಾಂಕಿ ಸೇರಿ ಸಿವಿಲ್ ಸೊಸೈಟಿ ಗುಂಪುಗಳು, ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಂದರ್ಭದಲ್ಲಿ ಗ್ರೀನ್‌ಪೀಸ್‌ ಇಂಡಿಯಾ ಜನರ ಪ್ರಣಾಳಿಕೆಯಲ್ಲಿ ಸಲ್ಲಿಸಿದ್ದ ಸಾರ್ವಜನಿಕರ ಸಂಚಾರ ಸಾರಿಗೆಗೆ ಸಂಬಂಧಿಸಿದ ಬೇಡಿಕೆಗಳು ಮತ್ತು ಸರ್ಕಾರವು ಈಡೇರಿಸಿರುವ ಭರವಸೆಗಳ ಕುರಿತು ಚರ್ಚಿಸಲು ಈ ನಾಗರಿಕ ಸಮಾವೇಶವನ್ನು ಆಯೋಜಿಸಲಾಗಿತ್ತು.

ನಾಗರಿಕರು ವೈಯಕ್ತಿಕ ವಾಹನಗಳ ಬದಲಾಗಿ ಸಾರ್ವಜನಿಕ ಸಾರಿಗೆ, ಸೈಕಲ್‌ ಸವಾರಿ ಮತ್ತು ವಾಕಿಂಗ್‌ನಂತಹ ಮೋಟಾರುರಹಿತ ಸಾರಿಗೆ (ಎನ್‌ಎಂಟಿ) ಗೆ ಆದ್ಯತೆ ನೀಡಲು ಮತ್ತು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ತಮ್ಮ ಕಚೇರಿಗಳಲ್ಲಿ ಹೈಬ್ರಿಡ್ ಮಾದರಿಯ ಕೆಲಸದ ವ್ಯವಸ್ಥೆಯನ್ನು ಅನುಸರಿಸುವಂತೆ ಪ್ಯಾನೆಲಿಸ್ಟ್‌ಗಳು ಸಾರ್ವಜನಿಕರಿಗೆ ಸೂಚಿಸಿದರು. ಜತೆಗೆ ಕೊನೆಯ ನಿಲ್ದಾಣದ ಸಂಪರ್ಕ ಒದಗಿಸುವುದು, ಬಿಎಂಟಿಸಿ ಬಸ್‌ಗಳ ಸಂಖ್ಯೆ ಹೆಚ್ಚಿಸುವುದು, ಪ್ರತ್ಯೇಕ ಬಸ್ ಲೇನ್‌ಗಳು ಮತ್ತು ನಗರದ ಹೊರವಲಯಕ್ಕೆ ಹೆಚ್ಚಿನ ಬಸ್‌ಗಳನ್ನು ಪರಿಚಯಿಸಲು ಸರ್ಕಾರವನ್ನು ಆಗ್ರಹಿಸಲಾಯಿತು.

Lets Move Bengaluru Citizens Conference at press club in bangalore

ಇದನ್ನೂ ಓದಿ | Free Bus Pass: ಕೇವಲ 6 ತಿಂಗಳಲ್ಲಿ ಶ್ರಮಿಕ ವರ್ಗದ ಉಚಿತ ಬಸ್‌ ಪಾಸ್‌ ಯೋಜನೆಗೆ ತಿಲಾಂಜಲಿ

ಜನಸಂಖ್ಯೆ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಹೆಚ್ಚಳದ ಹೊರತಾಗಿಯೂ, ಬೆಂಗಳೂರಿನಲ್ಲಿ ಸಾರಿಗೆ ಸಂಚಾರದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಾರ್ವಜನಿಕ ಸಾರಿಗೆಯ ಪಾತ್ರವು ಸೀಮಿತವಾಗಿದೆ. ನಗರವು ಖಾಸಗಿ ವಾಹನಗಳ ಸಂಖ್ಯೆಯಲ್ಲಿ ನಗರದ ಸಾಮರ್ಥ್ಯವನ್ನೂ ಮೀರಿ ಬೆಳವಣಿಗೆಯನ್ನು ಕಂಡಿದೆ. ಇವುಗಳ ಸಂಖ್ಯೆ ಒಂದು ಕೋಟಿಯನ್ನೂ ದಾಟಿದ್ದು, ಇದು ಆಗಾಗ್ಗೆ ಸುದೀರ್ಘ ಟ್ರಾಫಿಕ್ ಜಾಮ್ ಸೃಷ್ಟಿಸುತ್ತಿದೆ. ಮೂಲಸೌಕರ್ಯ ಹೂಡಿಕೆಯ ವಿಚಾರದಲ್ಲಿ ಸರ್ಕಾರದ ತಪ್ಪಿದ ಲೆಕ್ಕಾಚಾರವು ಈ ಬೆಳವಣಿಗೆಯನ್ನು ಇನ್ನಷ್ಟು ಹೆಚ್ಚಿಸಿದೆ.

ಭಾರತೀಯ ವಿಜ್ಞಾನ ಸಂಸ್ಥೆಯ ಸಸ್ಟೈನೇಬಲ್ ಟ್ರಾನ್ಸ್‌ಪೋರ್ಟೇಶನ್ ಲ್ಯಾಬ್‌ನ ಪ್ರೊಫೆಸರ್ ಆಶಿಶ್ ವರ್ಮಾ, “ಕಳೆದ 25 ವರ್ಷಗಳಲ್ಲಿ ಸರ್ಕಾರವು, ಫ್ಲೈಓವರ್‌ಗಳು ಮತ್ತು ಎಲಿವೇಟೆಡ್ ರಸ್ತೆಗಳಂತಹ ಕಾಂಕ್ರೀಟ್ ಆಧಾರಿತ ಮೂಲಸೌಕರ್ಯಗಳ ನಿರ್ಮಾಣದಲ್ಲಿ ಹೆಚ್ಚಿನ ಹೂಡಿಕೆ ಮಾಡಿದೆ ಮತ್ತು ಹೆಚ್ಚಿನ ಖಾಸಗಿ ವಾಹನಗಳ ಖರೀದಿಯನ್ನು ಉತ್ತೇಜಿಸುತ್ತಿದೆ. ಇವು ತಾತ್ಕಾಲಿಕ ಪರಿಹಾರವನ್ನು ಮಾತ್ರ ನೀಡುತ್ತವೆ. ಆದರೆ. ಸಂಚಾರ ದಟ್ಟಣೆಯ ಮೂಲ ಕಾರಣವನ್ನು ಪರಿಹರಿಸುವುದಿಲ್ಲ. ಇದಲ್ಲದೆ, ಈ ಯೋಜನೆಗಳಿಂದಾಗಿ ಸಾಮಾನ್ಯವಾಗಿ ಪರಿಸರ ನಾಶ, ಜನರ ಸ್ಥಳಾಂತರ ಮತ್ತು ಹಸಿರು ಸ್ಥಳಗಳ ನಾಶ ಉಂಟಾಗುತ್ತದೆʼ ಎಂದು ಅಭಿಪ್ರಾಯಪಟ್ಟರು.

ಗ್ರೀನ್‌ಪೀಸ್ ಪ್ರಚಾರಕಿ ಅಮೃತಾ ನಾಯರ್ ಮಾತನಾಡಿ, ಕಾರು-ಕೇಂದ್ರಿತ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ನೀಡುತ್ತಿರುವ ಆದ್ಯತೆಯ ಕುರಿತು ಕಳವಳ ವ್ಯಕ್ತಪಡಿಸಿದರು. ಇದು ಸಂಚಾರ ವ್ಯವಸ್ಥೆಯನ್ನು ಪ್ರತ್ಯೇಕಿಸುತ್ತದೆ ಮತ್ತು ಖಾಸಗಿ ಸಾರಿಗೆಯನ್ನು ಪಡೆಯಲು ಸಾಧ್ಯವಾಗದ ಜನರ ಗುಂಪುಗಳಿಗೆ, ವಿಶೇಷವಾಗಿ ಮಹಿಳೆಯರಿಗೆ ಈ ಸಂಚಾರ ವ್ಯವಸ್ಥೆ ಪಡೆಯಲು ಸಾಧ್ಯವಾಗುವುದಿಲ್ಲ. ಸಮಗ್ರ ಮಹಾನಗರ ಯೋಜನೆಯಡಿ ಡಲ್ಟ್‌ (DULT) ಕಲ್ಪಿಸಿರುವ 11 ಬಸ್ ಆದ್ಯತಾ ಲೇನ್‌ಗಳ ಮರುಸ್ಥಾಪಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

People who participated in the Greenpeace Indias event

ಗಾರ್ಮೆಂಟ್ಸ್ ಉದ್ಯೋಗಿ ಯಮುನಾ ಗಣೇಶ್ ಮಾತನಾಡಿ, ಶಕ್ತಿ ಯೋಜನೆಯು ಸಾಕಷ್ಟು ಮೆಚ್ಚುಗೆ ಪಡೆದಿದೆ. ಆದರೆ ನಗರದಲ್ಲಿ ಬಸ್‌ಗಳ ಕೊರತೆಯಿಂದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಯೋಜನೆ ಉಪಯೋಗಕ್ಕೆ ಬಾರದಂತಾಗಿದೆ. ಹೆಚ್ಚಿನ ಬಸ್ ಬಳಕೆದಾರರು ಮತ್ತು ಕಾರ್ಖಾನೆಗಳು ನಗರದ ಹೊರವಲಯದಲ್ಲಿದ್ದರೆ, ಬಿಎಂಟಿಸಿ ಬಸ್ ಸೇವೆಗಳು ನಗರ ಕೇಂದ್ರೀಕೃತವಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ | Free Bus Service: ಹೆಚ್ಚಿದ ನಾರಿ ಶಕ್ತಿ! 166 ಕೋಟಿ ರೂಪಾಯಿ ಮೀರಿ ಮುನ್ನುಗ್ಗುತ್ತಿರುವ ಶಕ್ತಿ ಸ್ಕೀಂ!

ನಾಗರಿಕ ಹಕ್ಕುಗಳ ಹೋರಾಟಗಾರ ಶ್ರೀನಿವಾಸ ಅಲವಿಲ್ಲಿ ಮಾತನಾಡಿ, ನಗರದ ಸುಮಾರು ಒಂದು ಕೋಟಿ ವಾಹನಗಳ ಸಂಖ್ಯೆಗೆ ಹೋಲಿಸಿದಾಗ ಬಿಎಂಟಿಸಿಯಲ್ಲಿರುವ 6700 ಬಸ್‌ಗಳ ಪಾಲು ಶೇ.1 ಕ್ಕಿಂತ ಕಡಿಮೆಯಿದೆ. ಇದು ಬಸ್‌ಗಳ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳದ ಅಗತ್ಯವನ್ನು ಸೂಚಿಸುತ್ತದೆ. ಉತ್ತಮ ಬಸ್ ಸೇವೆ ಪಡೆಯಲು ಪ್ರತಿ ಲಕ್ಷ ಜನಸಂಖ್ಯೆಗೆ ಕನಿಷ್ಠ 120 ಬಸ್‌ಗಳ ಅಗತ್ಯವಿದೆ. ಬಸ್‌ಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲು ಇದು ಸಕಾಲ ಎಂದು ಹೇಳಿದರು.

ಉಚಿತ ಬಸ್‌ಗಳ ಹೊರತಾಗಿ ಸಾರ್ವಜನಿಕ ಸಾರಿಗೆಯನ್ನು ಇನ್ನಷ್ಟು ಸಮರ್ಥವಾಗಿ ಕಾರ್ಯನಿರ್ವಹಿಸುವಂತೆ ಹಾಗೂ ಎಲ್ಲರಿಗೂ ಪ್ರವೇಶ ಸಿಗುವಂತೆ ಮಾಡುವುದು ಹೇಗೆ ಎಂದು ತಿಳಿಯಲು ಗ್ರೀನ್‌ಪೀಸ್‌ ಕಾರ್ಯಕ್ರಮಕ್ಕೆ ಆಗಮಿಸಿದ ಸಾರ್ವಜನಿಕರಲ್ಲಿ ಒಂದು ಸರ್ವೇ ನಡೆಸಿತು. ಅದರ ಫಲಿತಾಂಶ ಹೀಗಿದೆ.

  • ಸರ್ವೇಯಲ್ಲಿ ಪಾಲ್ಗೊಂಡಿದ್ದವರು- 162 ಜನ
  • ಮಹಿಳೆಯರಿಗಾಗಿ ವಿಶೇಷ ಬಸ್‌ಗಳು ಬೇಕು – ಶೇ.15 (24 ಜನ)
  • ಕೊನೆಯ ನಿಲ್ದಾಣದವರೆಗೆ ಸಂಪರ್ಕ ಕಲ್ಪಿಸಲು ಮಿನಿ ಬಸ್‌ಗಳನ್ನು ಒದಗಿಸಿ- ಶೇ.25 (40)
  • ಪ್ರತ್ಯೇಕ ಬಸ್‌ ಲೇನ್‌ಗಳನ್ನು ಒದಗಿಸುವ ಹಾಗೂ ಹೆಚ್ಚು ಬಸ್‌ಗಳನ್ನು ಒದಗಿಸುವ ಮೂಲಕ ಬಸ್‌ಗಾಗಿ ಕಾಯುವ ಸಮಯವನ್ನು ಕಡಿಮೆಗೊಳಿಸಿ- ಶೇ.59 (98)
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Suspicious Death: ಸಿಸಿಬಿ ತೆಕ್ಕೆಗೆ ವಕೀಲೆ ಚೈತ್ರಾ ಡೆತ್ ಕೇಸ್; 15 ದಿನಗಳ ಸಿಸಿಟಿವಿ ಪರಿಶೀಲನೆ

Advocate Chaitra Gowda Case : ಕಳೆದ ಮೇ 11ರಂದು ಹೈಕೋರ್ಟ್‌ ವಕೀಲೆ ಚೈತ್ರಾ ಅವರ ಮೃತದೇಹವು ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೋಸ್ಟ್‌ ಮಾರ್ಟಮ್‌ ರಿಪೋರ್ಟ್‌ನಲ್ಲಿ ಚೈತ್ರಾ ಸಾವು ಆತ್ಮಹತ್ಯೆಯಿಂದಲೇ (Self Harming) ಆಗಿದೆ ಎಂಬುದು ದೃಢಪಟ್ಟಿತ್ತು. ಆದರೆ ಇದೀಗ ಅವರ ಸಾವಿನ ಕುರಿತು ಆಪ್ತರು ಅನುಮಾನ ವ್ಯಕ್ತಪಡಿಸಿದ ಕಾರಣಕ್ಕೆ ಸಿಸಿಬಿ ವರ್ಗಾವಣೆ ಮಾಡಲಾಗಿದೆ.

VISTARANEWS.COM


on

By

Suspicious Death Advocate Chaitra Gowda Case
Koo

ಬೆಂಗಳೂರು: ವಕೀಲೆ ಚೈತ್ರಾ ಅವರ (Advocate Chaitra Gowda Case) ಸಾವು ಅವರ ಆಪ್ತರಿಗೆ ಇನ್ನೂ ಕೂಡ ನಿಗೂಢವಾಗಿಯೇ ಇದೆ. ಪೊಲೀಸರ ವರದಿಯಲ್ಲಿ ಇದೊಂದು ಆತ್ಮಹತ್ಯೆ ಎಂದರೂ ಕೂಡ ಅದನ್ನು ಚೈತ್ರಾ ಆಪ್ತರು ಒಪ್ಪುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಈ ಪ್ರಕರಣವನ್ನು ಸಿಸಿಬಿ ತೆಕ್ಕೆಗೆ (Suspicious Death) ವಹಿಸಲಾಗಿದೆ.

ಇದೇ ತಿಂಗಳ ಮೇ 11ರಂದು ಚೈತ್ರಾ ಗೌಡ ಅವರ ಮೃತದೇಹ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದೊಂದದು ಆತ್ಮಹತ್ಯೆ ಎಂದು ಹೇಳಲಾಗಿತ್ತು. ಪೋಸ್ಟ್‌ ಮಾರ್ಟಮ್‌ ರಿಪೋರ್ಟ್‌ನಲ್ಲಿ ಚೈತ್ರಾ ಸಾವು ಆತ್ಮಹತ್ಯೆಯಿಂದಲೇ (Self Harming) ಆಗಿದೆ ಎಂಬುದು ದೃಢಪಟ್ಟಿತ್ತು. ಆದರೆ ಅವರ ಆಪ್ತ ವಲಯ ಚೈತ್ರಾಗೌಡ ಅವರ ಸಾವು ಸಹಜವಲ್ಲ ಎಂದು ಇಂದಿಗೂ ಕೂಡ ವಾದಿಸುತ್ತಲೆ ಇದೆ. ಹೀಗಾಗಿ ವಕೀಲರ ಸಂಘದವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಈ ಸಾವಿನ ಬಗ್ಗೆ ತನಿಖೆ ನಡೆಸಿ ಎಂದಿದ್ದರು. ಇದರ ಫಲವಾಗಿ ಪ್ರಕರಣದ ಹೆಚ್ಚಿನ ತನಿಖೆಗೆ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ ಪೊಲೀಸರು ಮೊದಲು ಆಕೆಯ ಸಾವಿನ 15 ದಿನಗಳ ಹಿಂದಿನ ಸಿಸಿಟಿವಿಗಳನ್ನು ಕಲೆ ಹಾಕುವ ಕೆಲಸ ಶುರು ಮಾಡಿದೆ. ಜತೆಗೆ ಚೈತ್ರಾರ ಮೊಬೈಲ್‌ಗೆ ಬಂದ ಕರೆಗಳ ಸಿಡಿಆರ್‌ಗಳನ್ನು ಸಂಗ್ರಹಿಸಿದೆ. ಚೈತ್ರಾರಿಗೆ ಯಾರಾದರೂ ತೊಂದರೆ ಕೊಟ್ಟಿರುವುದು ಅಥವಾ ಬೆದರಿಕೆ ಹಾಕಿದ್ದರಾ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹೀಗಾಗಿ ಚೈತ್ರ ಗೌಡ ಅವರ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: BMTC Driver : ಬಿಎಂಟಿಸಿ ಎಲೆಕ್ಟ್ರಿಕಲ್‌ ಬಸ್‌ಗೆ ಪರಭಾಷಿಕರ ನೇಮಕ; ಡಿಸಿ ಕಚೇರಿಗೆ ನುಗ್ಗಿ ಕನ್ನಡಿಗರ ಆಕ್ರೋಶ

ಏನಿದು ಪ್ರಕರಣ?

2016ರಲ್ಲಿ ಮದುವೆ ಆಗಿದ್ದ ಶಿವಕುಮಾರ್ ಹಾಗೂ ಚೈತ್ರಾ ದಂಪತಿಗೆ 5 ವರ್ಷದ ಒಂದು ಮಗು ಇದೆ. ಈ ದಂಪತಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಚೈತ್ರಾ ಹೈಕೋರ್ಟ್ ವಕೀಲೆ ಆಗಿದ್ದರೆ, ಶಿವಕುಮಾರ್ ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿ ಆಗಿದ್ದರು. ಸಂಜಯನಗರದ ಅಣ್ಣಯ್ಯಪ್ಪ ಲೇಔಟ್‌ನ ಅಪಾರ್ಟ್‌ಮೆಂಟ್‌ನ ಮೂರು ಫ್ಲಾಟ್‌ನಲ್ಲಿ ಒಂದರಲ್ಲಿ ಚೈತ್ರಾ ಕುಟುಂಬ ಹಾಗೂ ಇನ್ನೊಂದು ಫ್ಲಾಟ್‌ನಲ್ಲಿ ಮೃತಳ ತಮ್ಮ ವಾಸವಾಗಿದ್ದರು. ಮೇ 11ರ ಶನಿವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಪತಿ ಶಿವಕುಮಾರ್ ಜತೆ ನಂತರ ತಮ್ಮನನೊಟ್ಟಿಗೂ ಚೈತ್ರಾ ಮಾತನಾಡಿದ್ದ ಚೈತ್ರಾ 11 ಗಂಟೆ ಯಾರ ಫೋನ್‌ ಕರೆಗೂ ಸ್ಪಂದಿಸಿರಲಿಲ್ಲ. ಹೀಗಾಗಿ ಕಿಟಕಿಯಲ್ಲಿ ನೋಡಿದಾಗ ಫ್ಯಾನ್‌ಗೆ ವೇಲ್‌ನಿಂದ ನೇಣು ಬಿಗಿದುಕೊಂಡಿರುವುದು ಕಂಡು ಬಂದಿತ್ತು. ಕೂಡಲೇ ಚೈತ್ರಾಳ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಚೈತ್ರಾರ ಬೆಡ್‌ ರೂಮಿನಲ್ಲಿ ಒಂದು ಪುಟದ ಡೆತ್ ನೋಟ್ ಪತ್ತೆಯಾಗಿತ್ತು. ಆದರೆ ಅದು ಮೂರು ತಿಂಗಳ ಹಿಂದೆ ಅಂದರೆ ಮಾರ್ಚ್ 11ರಂದು ಬರೆಯಲಾಗಿತ್ತು. ಡೆತ್‌ನೋಟ್‌ನಲ್ಲಿ, ನನ್ನ ಪತಿ ತುಂಬಾ ಒಳ್ಳೆಯವರು. ನೀವೂ ಜೀವನವನ್ನು ಎಂಜಾಯ್ ಮಾಡಿ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಡಿಪ್ರೆಶನ್‌ನಿಂದ ಬಳಲುತ್ತಿದ್ದೇನೆ. ಅದರಿಂದ ಹೊರ ಬರಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ. ಆದರೆ ಆಗುತ್ತಿಲ್ಲ, ನಾನು ನನ್ನ ಜೀವನವನ್ನು ಇಲ್ಲಿಗೆ ಕೊನೆಗೊಳಿಸುತ್ತಿದ್ದೆನೆ. ಮಗುವನ್ನು ಚೆನ್ನಾಗಿ ನೋಡಿಕೊಂಡು ಲೈಫ್ ಎಂಜಾಯ್ ಮಾಡಿ. ಸೂಸೈಡ್ ಮಾಡಿಕೊಳ್ಳುವುದು ತಪ್ಪು ಎಂದು ಗೊತ್ತಿದೆ. ಆದರೂ ಸಹ ಆತ್ಮಹತ್ಯೆಯನ್ನು ಮಾಡಿಕೊಂಡು ನನ್ನ ಜೀವನಕ್ಕೆ ಅಂತ್ಯವಾಡಿದ್ದೇನೆ ಎಂದು ಬರೆದಿದ್ದರು.

ಇತ್ತ ಚೈತ್ರಾ ಕುಟುಂಬಸ್ಥರು ಇದು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಚೈತ್ರಾ ಪತಿ,‌ ಕೆಎಎಸ್ ಅಧಿಕಾರಿ ಶಿವಕುಮಾರ್ ಅವರನ್ನು ಪೊಲೀಸರು ವಿಚಾರಣೆ ಮಾಡಿದ್ದರು. ವಿಚಾರಣೆ ವೇಳೆ, ಪತ್ನಿಯೊಂದಿಗೆ ಯಾವುದೇ ವೈಷಮ್ಯ ಇರಲಿಲ್ಲ. ಜತೆಗೆ ಯಾವುದೇ ಹಣಕಾಸಿನ ಸಮಸ್ಯೆ ಕೂಡ ಇರಲಿಲ್ಲ ಎಂದು ಶಿವಕುಮಾರ್‌ ತಿಳಿಸಿದ್ದರು. ಆದರೆ ಪ್ರಾಪರ್ಟಿ ವಿಚಾರವಾಗಿ ಆಗಾಗ್ಗೆ ಸ್ವಲ್ಪ ಜಗಳ ನಡೀತಾ ಇತ್ತು. ಇದರಿಂದ ಖಿನ್ನತೆಗೊಳಗಾಗಿದ್ದಳು ಎಂದು ಮಾಹಿತಿ ನೀಡಿದ್ದರು.

ಇದರೊಟ್ಟಿಗೆ ಮರಣೋತ್ತರ ಪರೀಕ್ಷೆಯಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬಂದಿತ್ತು. ಜತೆಗೆ ಮನೆಯಲ್ಲಿ ಸಿಕ್ಕ ಡೆತ್ ನೋಟ್ ಕೂಡ ಚೈತ್ರಾ ಬರೆದಿರುವುದು ಖಚಿತವಾಗಿತ್ತು. ಚೈತ್ರಾ, ತಮ್ಮ ಕುಟುಂಬಸ್ಥರ ಬಳಿ ಮೂರು ತಿಂಗಳ ಹಿಂದೆಯೇ ತಾವು ಸಾಯುವುದಾಗಿ ಮಾತಾಡಿದ್ದರು. ಈ ಮಾತಾಡಿದ ಬಳಿಕವೇ ಡೆತ್‌ ನೋಟ್‌ ಬರೆದಿಟ್ಟಿರುವುದು ಗೊತ್ತಾಗಿತ್ತು. ಆದರೂ ಈಕೆಯ ಸಾವಿನ ಕುರಿತು ಆಪ್ತರು, ವಕೀಲ ಸಂಘದವರು ಅನುಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ನಗರ ಪೊಲೀಸ್‌ ಆಯುಕ್ತರು ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

Fortis Hospital: ರಾಜ್ಯದಲ್ಲಿ ಮೊದಲ ಬಾರಿಗೆ ಫೋರ್ಟಿಸ್‌ ಆಸ್ಪತ್ರೆಯು ಮಿಜೋರಾಂ ರಾಜ್ಯದ 75 ವರ್ಷದ ವನ್ಲಾಲಸಂಗ ಎಂಬ ರೋಗಿಗೆ ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ ವಾಲ್ವ್ ರಿಪ್ಲೇಸ್‌ಮೆಂಟ್ (TAVR) ನಡೆಸುವ ಮೂಲಕ ಅತ್ಯಾಧುನಿಕ ಎಡ್ವರ್ಡ್ಸ್ ಸೇಪಿಯನ್ 3 ಅಲ್ಟ್ರಾ ವಾಲ್ವ್ ಅನ್ನು ಯಶಸ್ವಿಯಾಗಿ ನಿರ್ವಹಿಸಿದೆ.

VISTARANEWS.COM


on

First successful TAVR surgery in the state at Fortis Hospital
Koo

ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಫೋರ್ಟಿಸ್‌ ಆಸ್ಪತ್ರೆಯು (Fortis Hospital) 75 ವರ್ಷದ ರೋಗಿಗೆ ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ ವಾಲ್ವ್ ರಿಪ್ಲೇಸ್‌ಮೆಂಟ್ (TAVR) ನಡೆಸುವ ಮೂಲಕ ಅತ್ಯಾಧುನಿಕ ಎಡ್ವರ್ಡ್ಸ್ ಸೇಪಿಯನ್ 3 ಅಲ್ಟ್ರಾ ವಾಲ್ವ್ ಅನ್ನು ಯಶಸ್ವಿಯಾಗಿ ನಿರ್ವಹಿಸಿದೆ.

ನಗರದ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿ ಹಿರಿಯ ಸಲಹೆಗಾರ ಡಾ. ಬಿ.ವಿ. ಶ್ರೀನಿವಾಸ್ ಪ್ರಸಾದ್ ಅವರ ಆರೈಕೆ ಮತ್ತು ಮೇಲ್ವಿಚಾರಣೆಯಲ್ಲಿ ಕೇವಲ 45 ನಿಮಿಷಗಳಲ್ಲಿ ಈ ಶಸ್ತ್ರಚಿಕಿತ್ಸೆಯನ್ನು ಪೂರ್ಣಗೊಳಿಸಲಾಗಿದೆ.

ಇದನ್ನೂ ಓದಿ: Uttara Kannada News: ಸಂಸ್ಕಾರಯುತ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮುಂಚೂಣಿ: ಹರಿಪ್ರಕಾಶ್‌ ಕೋಣೆಮನೆ

ಈ ಕುರಿತು ಡಾ. ಬಿ.ವಿ. ಶ್ರೀನಿವಾಸ್ ಪ್ರಸಾದ್ ಮಾತನಾಡಿ, ಮಿಜೋರಾಂ ರಾಜ್ಯದ 75 ವರ್ಷದ ವನ್ಲಾಲಸಂಗ ಎಂಬ ರೋಗಿಯು ಈ ಮೊದಲು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದಾದ ಬಳಿಕ ಅವರಿಗೆ ಹೃದಯದ ಮಹಾಪಧಮನಿಯ ಕವಾಟವು ಚಿಕ್ಕದಾಗುತ್ತಾ ಸಾಗಿದೆ. ಇದರಿಂದ ಇವರ ಹೃದಯಕ್ಕೆ ಸೂಕ್ತ ರೀತಿಯಲ್ಲಿ ರಕ್ತ ಪರಿಚಲನೆ ಸಾಧ್ಯವಾಗುತ್ತಿರಲಿಲ್ಲ. ಕಾಲಕ್ರಮೇಣ ಇದು ವಿಕೋಪಕ್ಕೆ ತಿರುಗಿ, ಅವರು ಎಂದಿನಂತೆ ನಡೆಯಲು ಸಹ ಸಾಧ್ಯವಾಗದೇ ಗಾಲಿಕುರ್ಚಿಯಲ್ಲಿ ಓಡಾಡುವಂತಾಯಿತು.

ಇದಕ್ಕೆ ಸೂಕ್ತ ಚಿಕಿತ್ಸೆಗಾಗಿ ಸಾಕಷ್ಟು ಆಸ್ಪತ್ರೆಗೆ ತೆರಳಿದರೂ ಸಾಧ್ಯವಾಗಲಿಲ್ಲ. ಬಳಿಕ ಬನ್ನೇರುಘಟ್ಟದಲ್ಲಿರುವ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಇವರ ಪರಿಸ್ಥಿತಿಯನ್ನು ಅವಲೋಕಿಸಿ ಇವರಿಗೆ ಟಿಎವಿಆರ್‌ (TAVR) ಶಸ್ತ್ರಚಿಕಿತ್ಸೆಗೆ ಒಳಗಾಗಲು ಸಲಹೆ ನೀಡಿದೆವು. ಸಾಂಪ್ರದಾಯಿಕ ಹೃದಯ ಕವಾಟ ಬದಲಿ ಶಸ್ತ್ರಚಿಕಿತ್ಸೆಯಿಂದ ಹೆಚ್ಚಿನ ಅಪಾಯದ ಜತೆಗೆ, ಚೇತರಿಕೆಯ ಅವಧಿಯೂ ದೀರ್ಘವಾಗಿದೆ. ಹೀಗಾಗಿ ನೂತನ ಚಿಕಿತ್ಸೆಯಾದ ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ ಕವಾಟ ರಿಪ್ಲೇಸ್‌ಮೆಂಟ್ (TAVR) ಮೂಲಕ ಶಸ್ತ್ರಚಿಕಿತ್ಸೆ ನಡೆಸಿದೆವು. ಇದು ಕಡಿಮೆ ಅಪಾಯ ನೀಡಲಿದ್ದು, ವೇಗವಾಗಿ ಚೇತರಿಸಿಕೊಳ್ಳಬಹುದಾಗಿದೆ ಎಂದವರು ತಿಳಿಸಿದರು.

ಇದನ್ನೂ ಓದಿ: Karnataka Weather : ರಾಜ್ಯಾದ್ಯಂತ ಜೂನ್‌ ಮೊದಲ ವಾರ ಅಬ್ಬರಿಸಲಿದ್ಯಾ ಮಳೆ; ಕುಸಿಯಲಿದೆ ತಾಪಮಾನ

ಈ ನೂತನ ಶಸ್ತ್ರಚಿಕಿತ್ಸೆಯು ರಾಜ್ಯದಲ್ಲೇ ಮೊದಲ ಬಾರಿಗೆ ನಡೆದಿರುವುದು ವಿಶೇಷ. 45 ನಿಮಿಷಗಳ ಈ ಶಸ್ತ್ರಚಿಕಿತ್ಸೆಯ ಬಳಿಕ ರೋಗಿಯು ಕೆಲವೇ ಗಂಟೆಗಳಲ್ಲಿ ಸ್ವತಂತ್ರವಾಗಿ ನಡೆಯಲು ಪ್ರಾರಂಭಿಸಿದರು ಎಂದು ಅವರು ವಿವರಿಸಿದರು.

Continue Reading

ಮಳೆ

Karnataka Weather : ರಾಜ್ಯಾದ್ಯಂತ ಜೂನ್‌ ಮೊದಲ ವಾರ ಅಬ್ಬರಿಸಲಿದ್ಯಾ ಮಳೆ; ಕುಸಿಯಲಿದೆ ತಾಪಮಾನ

Karnataka Weather Forecast : ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯು (rain News) ತಗ್ಗಿದ್ದು, ಜೂನ್‌ ಮೊದಲ ವಾರದಿಂದ ಮಳೆಯು ಅಬ್ಬರಿಸುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಇನ್ನೊಂದು ವಾರ ಕಾಲ ಮಳೆಯು (Rain News) ಆರ್ಭಟಿಸಲಿದೆ. ಮೇ 31ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಇನ್ನೂ ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗಾಳಿ ವೇಗವು 30-40 kmph ಬೀಸಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಮೇಲ್ಮೈ ಮಾರುತಗಳು 40-50 ಕಿ.ಮೀ ವರೆಗೆ ಎಲ್ಲಾ ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ತಾಪಮಾನದ ಮುನ್ಸೂಚನೆ

ಮುಂದಿನ 72 ಗಂಟೆಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ. ಆದರೆ ಆ ನಂತರ ರಾಜ್ಯಾದ್ಯಂತ 2-3 ಡಿ.ಸೆ ನಷ್ಟು ಕ್ರಮೇಣ ಕುಸಿಯಲಿದೆ.

ಬೆಂಗಳೂರಲ್ಲಿ ಪ್ರಬಲ ಗಾಳಿ

ಬೆಂಗಳೂರು ನಗರ ಮತ್ತು ಸುತ್ತಮುತ್ತದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಮೇಲ್ಮೈ ಗಾಳಿಯು ಪ್ರಬಲವಾಗಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Love Case : ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕೇಸ್‌; ಯುವತಿ ತಂದೆ ಅರೆಸ್ಟ್‌

ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

ಚಳಿಗಾಲದಲ್ಲಿ ಮಾತ್ರವಲ್ಲ, ಬೇಸಿಗೆಯಲ್ಲೂ ಮೂಗಿನಲ್ಲಿ ರಕ್ತಸ್ರಾವ ಆಗುವುದು ಸಾಮಾನ್ಯ. ಆದರೆ ಹಾಗೇಕಾಗುತ್ತದೆ? ಹಾಗೆ ಆಗದಂತೆ ತಡೆಯುವುದಕ್ಕೆ ಸಾಧ್ಯವಿಲ್ಲವೇ- ಈ ಎಲ್ಲ ಮಾಹಿತಿಗಳ ಜೊತೆಗೆ ಅದನ್ನು ತಡೆಯುವ ಸರಳ (Nosebleeds In Summer) ಉಪಾಯಗಳು ಇಲ್ಲಿವೆ. ಬೇಸಿಗೆಯಲ್ಲಿ ಕಾಡುವ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಪೈಕಿ ಮೂಗಿನಲ್ಲಿ ರಕ್ತ ಸೋರುವುದೂ ಒಂದು. ಅತಿ ಬಿಸಿಯಾದ ಮತ್ತು ಶುಷ್ಕ ವಾತಾವರಣವಿದ್ದಾಗ ಈ ಸಮಸ್ಯೆ ಕಾಡುವುದು ಹೆಚ್ಚು. ಅತಿಯಾದ ಚಳಿಯ ಜೊತೆಗಿನ ಒಣ ಹವೆ ಇದ್ದರೂ ಈ ತೊಂದರೆ ಕಾಡಬಹುದು. ಆದರೆ ಹೆಚ್ಚಿನ ಜನ ಬೇಸಿಗೆಯಲ್ಲಿ ಈ ಸಮಸ್ಯೆಯನ್ನು ಎದುರಿಸುತ್ತಾರೆ. ಅಲ್ಪಸ್ವಲ್ಪ ರಕ್ತ ಸೋರುತ್ತಿದ್ದರೆ ಇದನ್ನು ತಡೆಯುವುದಕ್ಕೆ ಕೆಲವು ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ಮೂಗಿನಲ್ಲಿ ಹೆಚ್ಚು ರಕ್ತಸ್ರಾವ ಆಗುತ್ತಿದ್ದರೆ ವೈದ್ಯರನ್ನು ಕಾಣಬೇಕಾದೀತು. ಮೂಗಿನಲ್ಲಿ ರಕ್ತ ಸೋರುವುದಕ್ಕೆ ಕಾರಣಗಳನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ಒಣಗಿದ ಬಿಸಿ ಹವೆಯಿಂದಾಗಿ ಮೂಗಿನ ಒಳ ಭಾಗದಲ್ಲಿರುವ ಸೂಕ್ಷ್ಮ ರಕ್ತನಾಳಗಳು ಒಡೆದಾಗ ಉಂಟಾಗುವ ಸಮಸ್ಯೆಯಿದು. ಕೆಲವೊಮ್ಮೆ ಸೋಂಕಿನಿಂದಲೂ ಈ ಸಮಸ್ಯೆ ಕಾಣಬಹುದು. ಅತಿಯಾಗಿ ರಕ್ತಸ್ರಾವ ಆಗುತ್ತಿದ್ದರೆ, ಬೇರೆಯದೇ ಸಮಸ್ಯೆಯನ್ನಿದು ಸೂಚಿಸಬಹುದು. ಆದರೆ ಬೇಸಿಗೆಯ ಕಾರಣದಿಂದಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ, ಕೆಲವು ಮನೆಮದ್ದುಗಳು ಇದಕ್ಕೆ ಉಪಶಮನ ನೀಡುತ್ತವೆ.

drink Water night

ನೀರು ಕುಡಿಯಿರಿ

ಇದಕ್ಕಿರುವ ಅತ್ಯಂತ ಸರಳವಾದ ಮದ್ದೆಂದರೆ ನೀರು ಕುಡಿಯುವುದು. ಹೆಚ್ಚಿನ ನೀರು ದೇಹ ಸೇರಿದಂತೆ ಕೋಶಗಳಲ್ಲಿರುವ ಶುಷ್ಕತೆ ಕಡಿಮೆಯಾಗುತ್ತದೆ. ಇದರಿಂದ ಮೂಗಿನಲ್ಲಿರುವ ಮ್ಯೂಕಸ್‌ ಕೋಶಗಳು ಸಹ ತಮ್ಮ ತೇವವನ್ನು ಕಾಪಿಟ್ಟುಕೊಳ್ಳುವುದಕ್ಕೆ ಸಹಾಯವಾಗುತ್ತದೆ. ಅಂದರೆ, ಒಣ ಹವೆಯ ಪ್ರತಿಕೂಲ ಪರಿಣಾಮ ಬೀರದಂತೆ ತಡೆಯುವುದಕ್ಕೆ ಇದು ಸುಲಭದ ಉಪಾಯ.

ಹ್ಯುಮಿಡಿಫಯರ್‌

ಬೇಸಿಗೆಯ ನೆವದಿಂದ ಎಷ್ಟೋ ಬಾರಿ ಅತಿಯಾಗಿ ಫ್ಯಾನ್‌ ಅಥವಾ ಎಸಿ ಬಳಸುತ್ತೇವೆ. ಇದರಿಂದ ಮನೆಯ ಅಥವಾ ಕಚೇರಿಯ ವಾತಾವರಣದಲ್ಲಿ ಶುಷ್ಕತೆ ಹೆಚ್ಚಾಗುತ್ತದೆ. ನೈಸರ್ಗಿಕವಾದ ಬಿಸಿ ಗಾಳಿಯ ಜೊತೆಗೆ ಇದೂ ಸಹ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಾಗಾಗಿ ವಾತಾವರಣದ ತೇವಾಂಶವನ್ನು ಹೆಚ್ಚಿಸುವಂಥ ಹ್ಯುಮಿಡಿಫಯರ್‌ ಬಳಸುವುದು ಇನ್ನೊಂದು ಮಾರ್ಗ. ಇದರಿಂದ ಮೂಗಿನ ಅಂಗಾಂಶಗಳು ಹಾನಿಗೊಳ್ಳುವುದನ್ನು ತಡೆಯಬಹುದು.

Moisturizer

ಮಾಯಿಶ್ಚರೈಸರ್‌ ಬಳಕೆ

ಮೂಗಿನ ಒಳ ಭಾಗ ಒಣಗಿ ಬಿರಿಯದಂತೆ ತಡೆಯಲು ಮಾಯಿಶ್ಚರೈಸರ್‌ ಬಳಕೆ ಮಾಡುವುದು ಉಪಯುಕ್ತ. ಇದಕ್ಕಾಗಿ ಇರುವ ಜೆಲ್‌ ಇಲ್ಲವೇ ಸ್ಟ್ರೇ ಬಳಸಬಹುದು. ಸಾಲೈನ್‌ ಸ್ಪ್ರೇ ಬಳಕೆಯೂ ಉಪಯುಕ್ತವಾದೀತು. ಇವನ್ನೆಲ್ಲ ಹೊಸದಾಗಿ ಖರೀದಿಸಿ ತರುವಷ್ಟು ವ್ಯವಧಾನ ಇಲ್ಲದಿದ್ದರೆ, ಸರಳವಾಗಿ ಕೊಬ್ಬರಿ ಎಣ್ಣೆಯನ್ನು ಮೂಗಿನ ಒಳಭಾಗದ ಅಂಗಾಂಶಗಳಿಗೆ ಹೆಚ್ಚಿ. ಇದು ಪರಿಣಾಮಕಾರಿಯಾಗಿ ತೇವವನ್ನು ಹಿಡಿದಿಡುತ್ತದೆ.

ಮುಚ್ಚಿಕೊಳ್ಳಿ

ತೀವ್ರ ತಾಪದ ಹೊತ್ತಿನಲ್ಲಿ ಮನೆಯಿಂದ ಹೊರಗೆ ಹೋಗುವಾಗ ಮುಖಕ್ಕೆ ಮಾಸ್ಕ್‌ ಹಾಕುವುದು ಸಹಾಯಕ. ಇದರಿಂದ ಒಣ ಹವೆಯನ್ನು ಉಸಿರಾಡುವುದು ಸ್ವಲ್ಪ ಮಟ್ಟಿಗಾದರೂ ತಪ್ಪಿಸಬಹುದು. ತಿಳಿ ಬಣ್ಣದ ದೊಡ್ಡ ಹ್ಯಾಟ್‌ ಧರಿಸುವುದರಿಂದ ಮುಖದ ಮೇಲೆ ಬಿಸಿಲು ನೇರವಾಗಿ ಬೀಳದಂತೆ ಮಾಡಬಹುದು. ಈ ಕ್ರಮಗಳೆಲ್ಲ ಸಣ್ಣವೇ ಆದರೂ, ಒಟ್ಟಾರೆಯಾಗಿ ಸಮಸ್ಯೆಯನ್ನು ದೂರ ಮಾಡುವಲ್ಲಿ ನೆರವಾಗುತ್ತವೆ.

ಇದನ್ನೂ ಓದಿ: Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

ಮಾಡಬೇಡಿ

ಮೂಗನ್ನು ಶುಚಿಗೊಳಿಸುವ ನೆವದಲ್ಲಿ ನಾಸಿಕದ ಮೇಲೆ ಯಾವುದೇ ರೀತಿಯಲ್ಲೂ ತೀರಾ ಒತ್ತಡ ಹಾಕಬೇಡಿ. ಈಗಾಗಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರಂತೂ ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಿ. ಮೂಗಿನ ಮೇಲೆ ಒತ್ತಡ ಹಾಕಿದರೆ ಬಿರಿದ ಕೋಶಗಳು ದುರಸ್ತಿಯಾಗುವುದು ನಿಧಾನವಾಗುತ್ತದೆ ಅಥವಾ ಇನ್ನಷ್ಟು ಬಿರಿದು ಸಮಸ್ಯೆಯನ್ನೇ ಸೃಷ್ಟಿಸುತ್ತವೆ. ಅಲರ್ಜಿಗಳನ್ನು ಹತ್ತಿಕ್ಕಿ. ದಿನವಿಡೀ ಜೋರಾಗಿ ಸೀನುತ್ತಲೇ ಇದ್ದರೆ, ಮೂಗು ಸೋರುವಾಗ ರಕ್ತಸ್ರಾವ ಆಗುವುದು ಖಚಿತ.

Winter transitions to summer

ಆಹಾರ

ಆರೋಗ್ಯಕರವಾದ ಆಹಾರವನ್ನು ಕಡ್ಡಾಯವಾಗಿ ಪಾಲಿಸಿ. ಸೆಕೆಯ ನೆವವೊಡ್ಡಿ ಅತಿಯಾದ ತಣ್ಣಗಿನ ಪೇಯಗಳನ್ನು ಕುಡಿಯುವುದು, ಐಸ್‌ಕ್ರೀಮ್‌ ಮೆಲ್ಲುವುದು- ಇವೆಲ್ಲ ಮೂಗಿನ ಸಮಸ್ಯೆಗಳನ್ನು ಹೆಚ್ಚಿಸಬಹುದು; ಗಂಟಲಿನ ಸೋಂಕಿಗೆ, ಶೀತ-ನೆಗಡಿಗೆ ಕಾರಣವಾಗಬಹುದು. ವಿಟಮಿನ್‌ ಸಿ ಹೆಚ್ಚಿರುವ ಆಹಾರವನ್ನು ವಿಫುಲವಾಗಿ ಸೇವಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

BMTC Driver : ಬಿಎಂಟಿಸಿ ಎಲೆಕ್ಟ್ರಿಕಲ್‌ ಬಸ್‌ಗೆ ಪರಭಾಷಿಕರ ನೇಮಕ; ಡಿಸಿ ಕಚೇರಿಗೆ ನುಗ್ಗಿ ಕನ್ನಡಿಗರ ಆಕ್ರೋಶ

BMTC Driver : ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬಿಎಂಟಿಸಿ ಕಛೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಎಲೆಕ್ಟ್ರಿಕಲ್‌ ಬಸ್ಸಿಗೆ ಪರಭಾಷಿಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಕನ್ನಡ ಪರ ಸಂಘಟನೆ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.

VISTARANEWS.COM


on

By

BMTC Bus
Koo

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್‌ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕನ್ನಡ ಬಾರದ ಚಾಲಕರನ್ನು ನೇಮಕ (BMTC Driver) ಮಾಡಿಕೊಳ್ಳಲಾಗುತ್ತಿದೆ ಎಂದು ಪರಭಾಷಿಕರ ನೇಮಕದ ವಿರುದ್ಧ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಕಡಿಮೆ ವೇತನಕ್ಕೆ ನೆರೆಯ ಕೇರಳ, ಮಹಾರಾಷ್ಟ್ರ ಚಾಲಕರನ್ನು ನೇಮಕ ಮಾಡಲಾಗುತ್ತಿದೆ. ಇದರಿಂದಾಗಿ ಕರ್ನಾಟಕ ಚಾಲಕರನ್ನು ಕರೆತರಲು ಎಲೆಕ್ಟ್ರಿಕ್ ಕಂಪನಿಗಳ ಹಿಂದೇಟು‌ ಹಾಕುತ್ತಿವೆ ಎಂದು ಕಿಡಿಕಾರಿದ್ದಾರೆ.

ವಿವಿಧ ಕಂಪನಿಗಳು ಕಡಿಮೆ ವೇತನಕ್ಕೆ ಪರಭಾಷಿಕರ ಕರೆತರುತ್ತಿರುವುದಕ್ಕೆ ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಕನ್ನಡ ಪರ ಸಂಘಟನೆ ಮುಖಂಡ ರೂಪೇಶ್ ರಾಜಣ್ಣ ನೇತೃತ್ವದಲ್ಲಿ ಬಿಎಂಟಿಸಿಗೆ ಮುತ್ತಿಗೆ ಹಾಕಲಾಯಿತು. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ ತೆರಳಿ ಆಕ್ರೋಶ ಹೊರಹಾಕಿದರು.

ಕೇರಳದ ಬಹುತೇಕ ಚಾಲಕರಿಗೆ ಕನ್ನಡ ಬರಲ್ಲ. ಇದರಿಂದ ನಿರ್ವಾಹಕರು, ಚಾಲಕರ ಮಧ್ಯೆ ಸಂವಹನ ಸಮಸ್ಯೆ ಉಂಟಾಗುತ್ತದೆ. ನಗರದ ರೂಟ್ ಗೊತ್ತಿಲ್ಲ, ಭಾಷೆ ತಿಳಿಯದೆ, ಅರ್ಥವಾಗದೇ ತೊಂದರೆಯಾಗುತ್ತಿದೆ. ಹೊರ ರಾಜ್ಯದವರನ್ನು ನೇಮಕ‌ ಮಾಡಿಕೊಳ್ಳದಂತೆ ಕನ್ನಡ ಪರ ಸಂಘಟನೆಗಳು ಒತ್ತಾಯ ಮಾಡಿವೆ.

ಬಿಎಂಟಿಸಿಯಲ್ಲಿ ಮೂರು ಕಂಪನಿಯಗಳ 648 ಎಲೆಕ್ಟ್ರಿಕ್ ಬಸ್‌ಗಳಿವೆ. ಎಲೆಕ್ಟ್ರಿಕ್ ಬಸ್‌ಗಳಲ್ಲಿ ಚಾಲಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ. ನಿರ್ವಾಹಕ ಮಾತ್ರ ಬಿಎಂಟಿಸಿ ಸಿಬ್ಬಂದಿ ಆಗಿರುತ್ತಾರೆ. ಆದರೆ ಬಸ್‌ ಚಾಲಕರನ್ನು ಕಂಪನಿಯೇ ನೇಮಕ ಮಾಡಬೇಕು. ಹೀಗಾಗಿ ಕಂಪನಿಗಳು ಇಲ್ಲಿನವರನ್ನು ಬಿಟ್ಟು ಹೊರ ರಾಜ್ಯದ ಕೆಲ ಚಾಲಕರನ್ನು ನೇಮಕ ಮಾಡಿಕೊಂಡಿದೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ. ಕೂಡಲೇ ಹೊರ ರಾಜ್ಯದ ಚಾಲಕರನ್ನು ಕರ್ತವ್ಯದಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Food Poisoning : ಜಾತ್ರೆಲಿ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Fake CBI Officer : ಸಿಬಿಐ ಪೊಲೀಸರೆಂದು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿದ ನಾಲ್ವರು ಅರೆಸ್ಟ್‌

ಬೆಂಗಳೂರು: ಸಿಬಿಐ ಪೊಲೀಸರೆಂದು (Fake CBI Officer ) ವಿದ್ಯಾರ್ಥಿಗಳಿಂದ ಹಣ ವಸೂಲಿ‌ ಮಾಡುತ್ತಿದ್ದ ಕೇರಳ ಮೂಲದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂವರು ವಿದ್ಯಾರ್ಥಿಗಳಿದ್ದ ಮನೆಗೆ ಸಿಬಿಐ ಅಧಿಕಾರಿಗೆಳೆಂದು ದಾಳಿ ಮಾಡಿದ್ದರು. ಈ ವೇಳೆ ತಾವೇ ತಂದಿದ್ದ ಗಾಂಜಾವನ್ನು ವಿದ್ಯಾರ್ಥಿಗಳ ಕೈಯಲ್ಲಿ ಇಟ್ಟು ವಿಡಿಯೊ ಮಾಡಿಕೊಂಡು ಬ್ಲ್ಯಾಕ್‌ ಮೇಲ್‌ ಮಾಡಿದ್ದರು. ಕೈಯಲ್ಲಿದ್ದ ಪಿಸ್ತೂಲ್, ಐಡಿ ಕಾರ್ಡ್, ಲಾಟಿಯಿಂದ ಹಲ್ಲೆ ಮಾಡಿದ್ದರು.

ಆರೋಪಿಗಳ ನಡವಳಿಕೆಯಿಂದ ಅನುಮಾನಗೊಂಡ ಯುವಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ತನಿಖೆ ನಡೆಸಿದ ಸೋಲದೇವನಹಳ್ಳಿ ಪೊಲೀಸರು ದೂರು ದಾಖಲಾಗಿ 12 ಗಂಟೆಯೊಳಗೆ ಕೇರಳ‌ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅನಂತಕೃಷ್ಣ(23), ಪ್ರಮೋದ (42), ಆದರ್ಶ್(22) ಮತ್ತು ದೀಪಕ್ ಆರ್ ಚಂದ್ರ (37) ಬಂಧಿತ ಆರೋಪಿಗಳಾಗಿದ್ದಾರೆ.

ಕೃತ್ಯಕ್ಕೆ ಬಳಸಿದ್ದ ಹಲವು ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 1- ಮಹೀಂದ್ರ ಎಕ್ಸ್ ಯು ವಿ, 1 ಹ್ಯೂಂಡೈ ಐ 20 ಕಾರು, 1 ಏರ್ ಪಿಸ್ತೂಲ್, ಕೈ ಕೋಳ, ಐಡಿ ಕಾರ್ಡ್, ಬ್ಯಾಟನ್ ಮತ್ತು 4 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

Fake CBI Officer

ಇದನ್ನೂ ಓದಿ: Love Case : ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕೇಸ್‌; ಯುವತಿ ತಂದೆ ಅರೆಸ್ಟ್‌

ಇನ್ನೂ ಆರೋಪಿ ಪ್ರಮೋದ್ ತಿರುವನಂತಪುರಂನಲ್ಲಿ ಹೋಟೆಲ್ ಬಿಸಿನೆಸ್ ನಡೆಸುತ್ತಿದ್ದ. ತನ್ನ ತಂಗಿಯನ್ನು ಬೆಂಗಳೂರಿನ ಯುವಕನಿಗೆ ಮದುವೆ ಮಾಡಿಕೊಟ್ಟಿದ್ದ. ಈ ಹಿನ್ನೆಲೆಯಲ್ಲಿ ಆಗಾಗ ಬೆಂಗಳೂರಿಗೆ ಬಂದು ಹೋಗುತ್ತಿದ್ದ. ಪ್ರಮೋದ್‌ನ ಪಕ್ಕದ ಊರಿನವರಾದ ಅನಂತಕೃಷ್ಣ ಮತ್ತು ಆದರ್ಶ್‌ ಬೆಂಗಳೂರಿನಲ್ಲಿ ಓದುತ್ತಿದ್ದರು. ಇವರನ್ನು ಪ್ರಮೋದ್‌ ಪರಿಚಯ‌ ಮಾಡಿಕೊಂಡಿದ್ದ. ಜತೆಗೆ ಕೇರಳದಿಂದ ದೀಪಕ್ ಎಂಬಾತನನ್ನು ಕರೆಸಿಕೊಂಡು ಪ್ಲ್ಯಾನ್‌ ಮಾಡಿದ್ದ. ಸಿಬಿಐ ಅಧಿಕಾರಿಗಳೆಂದು ಹೇಳಿದರೆ ಸುಲಭವಾಗಿ ಹಣ ವಸೂಲಿ ಮಾಡಬಹುದೆಂದು ಈ ರೀತಿಯ ಕೃತ್ಯ ಮಾಡಿದ್ದರು.

ಬ್ಲ್ಯಾಕ್ ಮೇಲ್ ವೇಳೆ 3 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದಲ್ಲಿ ಗಾಂಜಾ ಕೈಯಲ್ಲಿರುವ ವಿಡಿಯೋ ರಿಲೀಸ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಆ ಸಮಯದಲ್ಲಿ ಯುಪಿಐ ಐಡಿಗೆ ವಿದ್ಯಾರ್ಥಿಗಳಿಂದ 90,000 ಹಣ ವರ್ಗಾವಣೆ ಮಾಡಿಕೊಂಡಿದ್ದರು. ಇನ್ನುಳಿದ ಹಣವನ್ನು ಮುಂದಿನ ದಿನ ನೀಡಬೇಕೆಂದು ಹೇಳಿ ಹೋಗಿದ್ದರು. ಸದ್ಯ ನಾಲ್ವರನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Cow Smugling
ಪ್ರಮುಖ ಸುದ್ದಿ15 mins ago

Cow Smugling : ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

Modi Meditation
ದೇಶ31 mins ago

Modi Meditation: ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಧ್ಯಾನ ಆರಂಭಿಸಿದ ಮೋದಿ; ಹಗಲು-ರಾತ್ರಿ ಪ್ರಧಾನಿ ಮೆಡಿಟೇಷನ್

Mumbai Satta Bazar
ದೇಶ1 hour ago

Mumbai Satta Bazar: ಮೋದಿ ಹ್ಯಾಟ್ರಿಕ್‌ ಗ್ಯಾರಂಟಿ ಎಂದ ಮುಂಬೈ ಸಟ್ಟಾ ಬಜಾರ್;‌ ಕಾಂಗ್ರೆಸ್‌ಗೆ ಎಷ್ಟು ಕ್ಷೇತ್ರ?

Radhika Merchant
ಪ್ರಮುಖ ಸುದ್ದಿ1 hour ago

Radhika Merchant : ಅನಂತ್​​ ಅಂಬಾನಿ- ರಾಧಿಕಾ ಮರ್ಚೆಂಟ್​ ವಿವಾಹದ ಸ್ಥಳ ಬಹಿರಂಗ; ಇಲ್ಲಿದೆ ವಿವರ

Suspicious Death Advocate Chaitra Gowda Case
ಬೆಂಗಳೂರು2 hours ago

Suspicious Death: ಸಿಸಿಬಿ ತೆಕ್ಕೆಗೆ ವಕೀಲೆ ಚೈತ್ರಾ ಡೆತ್ ಕೇಸ್; 15 ದಿನಗಳ ಸಿಸಿಟಿವಿ ಪರಿಶೀಲನೆ

Star Fashion
ಫ್ಯಾಷನ್2 hours ago

Star Fashion: ಪಂಚೆ ಜೊತೆ ಟ್ರೋಫಿ ಜಾಕೆಟ್‌ ಧರಿಸಿದ ನಟಿ ತಮನ್ನಾಳ ಯೂನಿಕ್‌ ಫ್ಯಾಷನ್‌!

Health Insurance
ಮನಿ-ಗೈಡ್2 hours ago

Health Insurance: ಕ್ಯಾಶ್​ಲೆಸ್​ ಕ್ಲೈಮ್‌ ಗಳಿಗೆ ಆಸ್ಪತ್ರೆಯಲ್ಲಿ ಇನ್ನು ಹೆಚ್ಚು ಹೊತ್ತು ಕಾಯಬೇಕಿಲ್ಲ; ಇಲ್ಲಿದೆ ಹೊಸ ನಿಯಮ

First successful TAVR surgery in the state at Fortis Hospital
ಬೆಂಗಳೂರು2 hours ago

Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

MLA Belur Gopalakrishna election campaign for Congress candidates at ripponpete
ರಾಜಕೀಯ2 hours ago

MLC Election: ವಿಧಾನಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಾಸಕ ಬೇಳೂರು ಗೋಪಾಲಕೃಷ್ಣ ಮತಯಾಚನೆ

Vijayanagara News Distribute good quality sowing seeds and fertilizers says Tehsildar Amaresh G K
ವಿಜಯನಗರ2 hours ago

Vijayanagara News: ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಿ: ತಹಸೀಲ್ದಾರ್‌ ಅಮರೇಶ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ7 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌