Sri Thyagaraja Co-operative Bank 'Salamela Maasa' till May 31 at thyagaraja nagarLoan Mela: ಮೇ 31ರವರೆಗೆ ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ 'ಸಾಲಮೇಳ ಮಾಸ' - Vistara News

ನೋಟಿಸ್ ಬೋರ್ಡ

Loan Mela: ಮೇ 31ರವರೆಗೆ ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ‘ಸಾಲಮೇಳ ಮಾಸ’

Sree Thyagaraja Co-operative Bank: ಬೆಂಗಳೂರಿನ ಎನ್‌.ಆರ್‌.ಕಾಲೋನಿಯ ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ʼಸಾಲಮೇಳ ಮಾಸʼವನ್ನಾಗಿ ಆಯೋಜಿಸಲಾಗಿದೆ.

VISTARANEWS.COM


on

Sree Thyagaraja Co-operative Bank Limited
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಎನ್‌.ಆರ್‌.ಕಾಲೋನಿಯ ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್‌ ವತಿಯಿಂದ ಸದಸ್ಯರು ಮತ್ತು ಗ್ರಾಹಕರ ಅನುಕೂಲಕ್ಕಾಗಿ ಮೇ 31 ರವರೆಗೆ ʼಸಾಲಮೇಳ ಮಾಸʼ (Loan Mela) ಆಯೋಜಿಸಲಾಗಿದೆ. ಈ ಅವಧಿಯಲ್ಲಿ ಸಾಲ ಕೋರಿ ಬರುವ ಅರ್ಜಿಗಳಿಗೆ ಯಾವುದೇ ಸೇವಾಶುಲ್ಕವಿಲ್ಲದೆ ಸಾಲ ಸಿಗಲಿದೆ.

ಬ್ಯಾಂಕಿನಲ್ಲಿ ವಿವಿಧ ರೀತಿಯ ಗೃಹ ಸಾಲ, ಅಡಮಾನ ಸಾಲ, ವ್ಯಾಪಾರಾಭಿವೃದ್ಧಿ ಸಾಲ, ಎಂಎಸ್‌ಎಂಇ ವಲಯ ಹಾಗೂ ಗುಡಿ ಕೈಗಾರಿಕೆಗಳಿಗೆ ನೆರವಾಗುವಂತಹ ಸಾಲಗಳನ್ನು ಆಕರ್ಷಕ ಬಡ್ಡಿದರಗಳಲ್ಲಿ ನೀಡಲಾಗುತ್ತದೆ. ಇನ್ನು ಸದಸ್ಯರು, ಗ್ರಾಹಕರ ದಿನ ನಿತ್ಯದ ನಗದುರಹಿತ ವ್ಯಾವಹಾರಿಕ ವಹಿವಾಟಿಗೆ ಅನುಕೂಲವಾಗುವಂತೆ QR Code Scanner ಗಳನ್ನೂ ಸಹ ಗ್ರಾಹಕರಿಗೆ ಒದಗಿಸಲಾಗುತ್ತಿದೆ ಎಂದು ಬ್ಯಾಂಕ್‌ ಅಧ್ಯಕ್ಷ ಎಂ.ಆರ್‌. ವೆಂಕಟೇಶ್‌ ತಿಳಿಸಿದ್ದಾರೆ.

ಇದನ್ನೂ ಓದಿ | Book Release: ಮೇ 21ರಂದು ಸಾವರ್ಕರ್‌ ಸಮಗ್ರ ಸಂಪುಟ 6 ಪುಸ್ತಕ ಲೋಕಾರ್ಪಣೆ; ಸಾತ್ಯಕಿ ಸಾವರ್ಕರ್‌ ಭಾಗಿ

ಅದೇ ರೀತಿ ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನೂ ಒದಗಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಸದಸ್ಯರ ಹಿತದೃಷ್ಟಿಯಿಂದ ಬ್ಯಾಂಕಿನ ಒಟ್ಟು ವಹಿವಾಟನ್ನು ವಿಸ್ತರಿಸುವ ಗುರಿಯೊಂದಿಗೆ ಬೆಂಗಳೂರು ಹೊರ ವಲಯದಲ್ಲಿ ಐದು ಹೊಸ ಶಾಖೆಗಳನ್ನು ಆದಷ್ಟು ಶೀಘ್ರವಾಗಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಆಕರ್ಷಕ ಬಡ್ಡಿದರಗಳಲ್ಲಿ ಚಿನ್ನಾಭರಣ ಸಾಲಗಳನ್ನೂ ಸಹ ವಿತರಿಸಲಾಗುತ್ತಿದೆ. ಬ್ಯಾಂಕಿನಲ್ಲಿ ಒದಗಿಸುತ್ತಿರುವ ಈ ಸೌಲಭ್ಯಗಳನ್ನು ಗ್ರಾಹಕರು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Govt Employees: ರೈತರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

VISTARANEWS.COM


on

Govt Employees
Koo

ಬೆಂಗಳೂರು: ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು (Govt Employees) ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಚೇರಿಗಳಿಗೆ ಆಗಮಿಸುವ ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಅವರು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಆದೇಶ ಹೊರಡಿಸಿದ್ದಾರೆ.

ಕರ್ನಾಟಕವು ಕೃಷಿ ಪ್ರಧಾನವಾದ ರಾಜ್ಯವಾಗಿದ್ದು, ಸಾಮಾನ್ಯವಾಗಿ ಕೃಷಿಕರು ಸೋಮವಾರದ ದಿನದಂದು ತುಸುಮಟ್ಟಿಗೆ ಕೃಷಿ ಚಟುವಟಿಕೆಗಳಿಗೆ ಬಿಡುವು ನೀಡಿ, ಸಂತೆ, ಪೇಟೆ ಕೆಲಸಗಳು ಹಾಗೂ ಕಚೇರಿಗಳಿಗೆ ತಮ್ಮ ಕೆಲಸಗಳಿಗಾಗಿ ಹೋಗುವುದು ಹಿಂದಿನಿಂದ ನಡೆದುಕೊಂಡು ಬಂದ ವಾಡಿಕೆಯಾಗಿದೆ.

ಈ ಹಿಂದೆ, ಪ್ರತಿ ಸೋಮವಾರಗಳಂದು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಾದಿಯಾಗಿ ಎಲ್ಲರೂ ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿದ್ದು, ಜನರ ಕೆಲಸಗಳನ್ನು ಮಾಡುತ್ತಿದ್ದರು. ಆದರೆ, ಕೃಷಿಯೇತರ ಹಿನ್ನೆಲೆಯಿಂದ ಅಧಿಕಾರಿಗಳು, ನೌಕರರು ಸರ್ಕಾರಿ ಸೇವೆಗೆ ಬರುವ ಪ್ರಮಾಣ ಹೆಚ್ಚಿದ ಮೇಲೆ ಈ ಪದ್ಧತಿಯಲ್ಲಿ ಸ್ವಲ್ಪ ಮಟ್ಟಿಗೆ ಏರು ಪೇರಾಗಿದೆ. ಆದ್ದರಿಂದ, ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಂಎಲ್‌ಸಿ ಅಡಗೂರು ಎಚ್.ವಿಶ್ವನಾಥ್ ಮನವಿ ಕೋರಿದ್ದರು. ಈ ಬಗ್ಗೆ ಸಕಾರಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ, ಅಗತ್ಯ ಕ್ರಮವಹಿಸಲು ಸೂಚನೆ ನೀಡಿದ್ದಾರೆ.

ಸಾರಿಗೆ ನಿಗಮಕ್ಕೂ ಅನ್ವಯ

ಪ್ರತಿ ಸೋಮವಾರಗಳಂದು ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂಬ ರಾಜ್ಯ ಸರ್ಕಾರ ಸೂಚನೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಕ್ಕೂ ಅನ್ವಯವಾಗಿದೆ. ನಿಗಮ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ತುರ್ತು ಕಾರ್ಯಗಳನ್ನು ಹೊರತುಪಡಿಸಿ. ಪ್ರತಿ ಸೋಮವಾರಗಳಂದು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಸೇವೆ ಒದಗಿಸಬೇಕು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಸುತ್ತೋಲೆ ಹೊರಡಿಸಿದ್ದಾರೆ.

Continue Reading

ಕರ್ನಾಟಕ

NEET UG 2024: ಯುಜಿ ನೀಟ್: ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಅವಕಾಶ

NEET UG 2024: ನೀಟ್ ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಆಧಾರದ ಮೇಲೆ ಅಭ್ಯರ್ಥಿಯ ಹೆಸರು, ರ‍್ಯಾಂಕ್, ಅಂಕ, ಅರ್ಹತೆಗಳ ಮಾಹಿತಿ ಪಡೆಯಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

VISTARANEWS.COM


on

UG Neet 2024
Koo

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳಿಗೆ ಪ್ರವೇಶ ಬಯಸಿ ಈಗಾಗಲೇ 2024ರ ಯುಜಿ ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡು, ಆನ್ ಲೈನ್ ಅರ್ಜಿ ಸಲ್ಲಿಸಿರುವವರು ಈಗ ಯುಜಿ-ನೀಟ್‌ನಲ್ಲಿ (NEET UG 2024) ಅರ್ಹತೆ ಪಡೆದಿದ್ದಲ್ಲಿ, ಅಂಥವರು ತಮ್ಮ ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಜಾಲತಾಣದಲ್ಲಿ ಪೋರ್ಟಲ್ ತೆರೆಯಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ತಿಳಿಸಿದೆ.

ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದು, ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಆಧಾರದ ಮೇಲೆ ಅಭ್ಯರ್ಥಿಯ ಹೆಸರು, ರ‍್ಯಾಂಕ್, ಅಂಕ, ಅರ್ಹತೆಗಳ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಈಗ ಯುಜಿ ನೀಟ್‌ನಲ್ಲಿ ಅರ್ಹತೆ ಪಡೆದುಕೊಂಡಿದ್ದು, ಈವರೆಗೂ ಯುಜಿ-ಸಿಇಟಿಗೆ ನೋಂದಣಿ ಮಾಡಿಕೊಳ್ಳದೆ ಇರುವವರಿಗೂ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಅವಕಾಶ ನೀಡಲಾಗುವುದು. ಅಭ್ಯರ್ಥಿಗಳು ದಾಖಲಿಸುವ ವಿವರಗಳನ್ನು ವೆಬ್-ಸರ್ವೀಸ್ ಮೂಲಕ ಆನ್‌ಲೈನ್ ಮೂಲಕವೇ ಪರಿಶೀಲಿಸಲಾಗುವುದು. ಹೀಗಾಗಿ ಭೌತಿಕ ಪರಿಶೀಲನೆ ಇರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

ರಾಜ್ಯದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಾಧಿಕಾರದಲ್ಲಿ ನೋಂದಣಿ ಮಾಡಿ, ಅರ್ಜಿ ಸಲ್ಲಿಸಿ, ಆನ್‌ಲೈನ್ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ. ನಮೂದಿಸುವ ಆಪ್ಶನ್ಸ್ (Options)ಪರಿಗಣಿಸಿ, ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು. ಎಂಜಿನಿಯರಿಂಗ್ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳಿಗೆ ಏಕಕಾಲದಲ್ಲೇ ಆಪ್ಶನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಮತ್ತು ಜತೆಯಲ್ಲೇ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ವಿವರಿಸಿದರು.

ಸಂಬಂಧ ವಿವಿಧ ಇಲಾಖೆಗಳು ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರಗಳನ್ನು ಕೆಇಎಗೆ ನೀಡಿದ ಬಳಿಕ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ | Job Alert: ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

Job News

ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂನ್ 14ರೊಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

Continue Reading

ಕರ್ನಾಟಕ

Job News: ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

Job News: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಯ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕೆಇಎ ಪ್ರಕಟಿಸಿದೆ.

VISTARANEWS.COM


on

Job News
Koo

ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂನ್ 14ರೊಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅದರಲ್ಲಿಯೂ ಹೆಚ್ಚಿನ ಯುವ ಜನತೆ ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಆಕಾಂಕ್ಷೆ ಹೊತ್ತಿರುತ್ತಾರೆ. ಅಂತಹವರಿಗೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಗ್ನೇಯ ರೈಲ್ವೆಯ ನೇಮಕಾತಿ ಕೋಶ (South Eastern Railway Recruitment Cell) ಖಾಲಿ ಇರುವ ಲೋಕೋ ಪೈಲಟ್‌ ಮತ್ತು ಟ್ರೈನ್ಸ್‌ ಮ್ಯಾನೇಜರ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಐಟಿಐ, ಪದವಿ ತೇರ್ಗಡೆಯಾದವರನ್ನು ನೇಮಿಸಿಕೊಳ್ಳುತ್ತಿದೆ (RRC SER Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್‌ 12 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಲೋಕೋ ಪೈಲಟ್‌ – 827 ಮತ್ತು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) – 375 ಹುದ್ದೆಗಳಿವೆ. ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಜತೆಗೆ ಐಟಿಐ ಪಾಸ್‌ ಮಾಡಿರಬೇಕು ಅಥವಾ ಅಂಗೀಕೃತ ಸಂಸ್ಥೆಯಿಂದ ಎಂಜಿನಿಯರಿಂಗ್‌ನಲ್ಲಿ 3 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಇನ್ನು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 42 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಯಾರಿಗೂ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 5,200 ರೂ. – 20,200 ರೂ. ಮಾಸಿಕ ವೇತನ ದೊರೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಅರ್ಜಿ ಸಲ್ಲಿಸಬೇಕಾದ ಹುದ್ದೆಯನ್ನು ಆಯ್ಕೆ ಮಾಡಿ ಅದರ ಮೇಲೆ ಕ್ಲಿಕ್‌ ಮಾಡಿ (South Eastern Railway Trains Manager (Goods Guard) ಅಥವಾ South Eastern Railway Assistant Loco Pilot (ALP))
  • ಪುಟದ ಕೆಳಗಡೆ ಕಾಣಿಸುವ Apply Now ಬಟನ್‌ ಆಯ್ಕೆ ಮಾಡಿ.
  • ನಿಮ್ಮ ಇಮೇಲ್‌ ಐಡಿ, ಫೋನ್‌ ನಂಬರ್‌ ಬಳಸಿ ಹೆಸರು ನೋಂದಾಯಿಸಿ.
  • ರಿಜಿಸ್ಟರ್‌ ನಂಬರ್‌, ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Sumbit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Continue Reading

ಕರ್ನಾಟಕ

Water Supply Cut: ಬೆಂಗಳೂರಿನಲ್ಲಿ ಇನ್ನೆರಡು ದಿನ ಕಾವೇರಿ ನೀರು ಪೂರೈಕೆಯಿಲ್ಲ!

Water Supply Cut: ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಕಾಮಗಾರಿ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಜೂನ್‌ 6 ಮತ್ತು 7ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

VISTARANEWS.COM


on

Water Supply Cut
Koo

ಬೆಂಗಳೂರು: ಕಾವೇರಿ ನೀರು ಸರಬರಾಜು ಯೋಜನೆಯ (Cauvery water) 5ನೇ ಹಂತದ ಅನುಷ್ಠಾನದ ಹಿನ್ನೆಲೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ವಿವಿಧ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ನಗರದ ಬಹುತೇಕ ಕಡೆ ಜೂನ್‌ 6 ಮತ್ತು 7ರಂದು ಕಾವೇರಿ ನೀರಿನ (Water Supply Cut) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಬಗ್ಗೆ ಬೆಂಗಳೂರು ಜಲಮಂಡಳಿ ಸುತ್ತೋಲೆ ಹೊರಡಿಸಿದ್ದು, ಕಾಮಗಾರಿ ಹಿನ್ನೆಲೆಯಲ್ಲಿ ಕಾವೇರಿ 1, 2 ಮತ್ತು 3 ನೇ ಹಂತಗಳ ನೀರು ಸರಬರಾಜು ಘಟಕಗಳನ್ನು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹಾಗೂ ಕಾವೇರಿ ನಾಲ್ಕನೇ ಹಂತ, 1 ಮತ್ತು 2ನೇ ಹಂತ ನೀರು ಸರಬರಾಜು ಘಟಕಗಳನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸ್ಥಗಿತಗೊಳಿಸಲಾಗುತ್ತದೆ. ಹೀಗಾಗಿ ಜೂನ್ 6 ಮತ್ತು ಜೂನ್ 7ರಂದು ಎರಡು ದಿನಗಳ ಕಾಲ ಬೆಂಗಳೂರು ನೀರು ನಗರದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ | Rain News: ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು; ಜೂನ್‌ 13ರವರೆಗೆ ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ!

ಈ ಮೊದಲು ಜೂನ್ 4 ರಂದು ಕಾಮಗಾರಿ ಕೈಗೊಳ್ಳಲು ಸಿದ್ಧತೆ ನಡೆಸಲಾಗಿತ್ತು, ಆದರೆ ಕಾರಣಾಂತರಗಳಿಂದ ಇದನ್ನು ಜೂನ್ 6ಕ್ಕೆ ಮುಂದೂಡಲಾಗಿದೆ. ಹೀಗಾಗಿ ಜೂನ್ 6 ಮತ್ತು 7ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವ ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಜಲಮಂಡಳಿ ಮಂಡಳಿ ಕೋರಿದೆ.

ನಾಳೆಯಿಂದ ದೇಶಾದ್ಯಂತ ಕೆಲ ರೈಲುಗಳ ಸಂಚಾರದಲ್ಲಿ ಮಾರ್ಗ, ಸಮಯ ಬದಲಾವಣೆ

Train services

ಬೆಂಗಳೂರು: ಸೇಲಂ ವಿಭಾಗದಲ್ಲಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವುದರಿಂದ ಕೆಲ ರೈಲುಗಳ ಮಾರ್ಗ ಬದಲಾವಣೆ (Train services) ಮಾಡಲು ದಕ್ಷಿಣ ರೈಲ್ವೆಯು ಸೂಚಿಸಿದೆ. ಹೀಗಾಗಿ ಜೂನ್ 05, 06 ಮತ್ತು 13 ರಂದು ಎರ್ನಾಕುಲಂನಿಂದ ಹೊರಡುವ ರೈಲು (ರೈಲು ಸಂಖ್ಯೆ 12678) ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಪೊದನೂರು, ಇರುಗೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಕೊಯಂಬತ್ತೂರ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಪೊದನೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯಾಗಲಿದೆ.

ಇನ್ನೂ ಜೂನ್ 05, 06 ಮತ್ತು 13 ರಂದು ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12677 ಕೆಎಸ್ಆರ್ ಬೆಂಗಳೂರು-ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು ಪೊದನೂರು, ಇರುಗೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಕೊಯಂಬತ್ತೂರ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ ಮತ್ತು ಪೊದನೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯಾಗಲಿದೆ.

ಜೂನ್ 05, 12 ಮತ್ತು 19 ರಂದು ಎಸ್ಎಂವಿಟಿ ಬೆಂಗಳೂರಿನಿಂದ ಸಂಚರಿಸುವ ರೈಲು ಸಂಖ್ಯೆ 06084 ಎಸ್ಎಂವಿಟಿ ಬೆಂಗಳೂರು-ಕೊಚುವೇಲಿ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 20 ನಿಮಿಷ ನಿಯಂತ್ರಿಸಲಾಗುತ್ತದೆ.

ಇದನ್ನೂ ಓದಿ: NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

ರೈಲುಗಳ ಮರು ವೇಳಾಪಟ್ಟಿ:

ಕನ ಸೊಲಿಮ್ – ಮಜೊರ್ಡಾ ನಿಲ್ದಾಣಗಳ ನಡುವೆ ಜೋಡಿ ಮಾರ್ಗ ಕಾಮಗಾರಿ ನಿಮಿತ್ತ ರೈಲುಗಳನ್ನು ಮರು ನಿಗದಿಪಡಿಸಲಾಗುವುದು.

1.ರೈಲು ಸಂಖ್ಯೆ 12779 ವಾಸ್ಕೋ-ಡ-ಗಾಮಾ – ಹಜರತ್ ನಿಜಾಮುದ್ದೀನ್ ಎಕ್‌ಪ್ರೆಸ್‌ ಜೂನ್ 10ರಂದು ವಾಸ್ಕೋ-ಡ-ಗಾಮಾದಿಂದ 2 ಗಂಟೆ (120 ನಿಮಿಷ) ತಡವಾಗಿ ಹೊರಡಲಿದೆ.

2.ರೈಲು ಸಂಖ್ಯೆ 18048 ವಾಸ್ಕೋ-ಡ-ಗಾಮಾ – ಹೌಸ್‌ನಗರ ಎಕ್ಸ್ ಪ್ರೆಸ್ ಜೂನ್ 09ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ವಾಸ್ಕೋ-ಡ-ಗಾಮಾದಲ್ಲಿ 1 ಗಂಟೆ 30 ನಿಮಿಷ (90 ನಿಮಿಷಗಳ) ತಡವಾಗಿ ಹೊರಡಲಿದೆ. ಜತೆಗೆ ಮಾರ್ಗದಲ್ಲಿ 1 ಗಂಟೆ 45 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Ind vs pak
ಪ್ರಮುಖ ಸುದ್ದಿ8 mins ago

IND VS PAK : ಭಾರತ- ಪಾಕಿಸ್ತಾನ ಪಂದ್ಯ ಅರ್ಧ ಗಂಟೆ ತಡ; ಟಾಸ್ ಗೆದ್ದ ಪಾಕ್​ನಿಂದ ಫೀಲ್ಡಿಂಗ್ ಆಯ್ಕೆ

Narendra Modi
ದೇಶ31 mins ago

Narendra Modi: ರಾಜಕೀಯದಾಚೆ ಕವಿ, ಗಾಳಿಪಟ ಪ್ರೇಮಿ; ಮೋದಿ ಬಗ್ಗೆ ನಿಮಗೆ ಗೊತ್ತಿರದ 20 ಸಂಗತಿ ಇಲ್ಲಿವೆ

Bus Accident
ಕ್ರೈಂ33 mins ago

Bus Accident: ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದು ವಿಡಿಯೊ ಮಾಡಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು!

HD Kumaraswamy
ಕರ್ನಾಟಕ37 mins ago

HD Kumaraswamy Profile: ಹರದನಹಳ್ಳಿಯಿಂದ ದೆಹಲಿವರೆಗೆ; ಕುಮಾರಸ್ವಾಮಿ ಸಾಗಿಬಂದ ದಾರಿ ಹೀಗಿದೆ

Narendra Modi
ದೇಶ1 hour ago

Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ; 3.0 ಯುಗಾರಂಭ!

Narendra Modi 3.0
ಪ್ರಮುಖ ಸುದ್ದಿ1 hour ago

Narendra Modi 3.0 : ಮೋದಿ ಪ್ರಮಾಣ ವಚನ; ಬಿರಿಯಾನಿ, ಹೋಳಿಗೆ ಹಂಚಿದ ಕರುನಾಡಿನ ಅಭಿಮಾನಿಗಳು

Farmer Death
ದಾವಣಗೆರೆ2 hours ago

Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

Modi 3.0 Cabinet BS Yediyurappa congratulates Pralhad Joshi
Lok Sabha Election 20242 hours ago

Modi 3.0 Cabinet: ಮತ್ತೆ ಮಂತ್ರಿಯಾಗಿ ದಾಖಲೆ ಬರೆದ ಪ್ರಲ್ಹಾದ್‌ ಜೋಶಿ; ಬೆನ್ನು ತಟ್ಟಿ ಆಶೀರ್ವದಿಸಿದ ಬಿಎಸ್‌ವೈ

Rishabh Pant
ಪ್ರಮುಖ ಸುದ್ದಿ2 hours ago

Rishbha Pant : ನನ್ನ ಕಾಲನ್ನು ತುಂಡರಿಬೇಕಿತ್ತು; ಅಪಘಾತದ ಭಯಾನಕ ಸಂಗತಿಗಳನ್ನು ಹೇಳಿದ ರಿಷಭ್ ಪಂತ್​

Health Tips
ಆರೋಗ್ಯ2 hours ago

Health Tips: ಆರೋಗ್ಯಕರ ಆಗಿರಬೇಕಿದ್ದರೆ ನಾವು ಪ್ರತಿದಿನ ಎಷ್ಟು ಪ್ರಮಾಣದಲ್ಲಿ ಆಹಾರ ಸೇವಿಸಬೇಕು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌