Srinivasa Kalyanotsava : ಬ್ಯಾಟರಾಯನಪುರದಲ್ಲಿ ಅದ್ಧೂರಿ ಶ್ರೀನಿವಾಸ ಕಲ್ಯಾಣೋತ್ಸವ; ತಮ್ಮೇಶ್ ಗೌಡ ನೇತೃತ್ವ - Vistara News

ಬೆಂಗಳೂರು

Srinivasa Kalyanotsava : ಬ್ಯಾಟರಾಯನಪುರದಲ್ಲಿ ಅದ್ಧೂರಿ ಶ್ರೀನಿವಾಸ ಕಲ್ಯಾಣೋತ್ಸವ; ತಮ್ಮೇಶ್ ಗೌಡ ನೇತೃತ್ವ

Srinivasa Kalyanotsava : ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಆಯೋಜಿಸಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿವಿಧ ಸ್ವಾಮೀಜಿಗಳು ಭಾಗವಹಿಸಿದ್ದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಬ್ಯಾಟರಾಯನಪುರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎಪಿಎಂಸಿ ಮಾರುಕಟ್ಟೆ ಮೈದಾನದಲ್ಲಿ ಕೇಸರಿ ಫೌಂಡೇಷನ್‌ ವತಿಯಿಂದ ಭಾನುವಾರ ಆಯೋಜಿಸಿದ್ದ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವವು (Srinivasa Kalyanotsava) ಅತ್ಯಂತ ಅದ್ಧೂರಿಯಾಗಿ ನಡೆಯಿತು. ಬಿಜೆಪಿ ಮುಖಂಡ ಎಚ್‌.ಸಿ.ತಮ್ಮೇಶ್ ಗೌಡ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸ್ಫಟಿಕಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿ, ಶ್ರೀವಚನಾನಂದ ಸ್ವಾಮೀಜಿ, ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಬಿಡಿಎ ಅಧ್ಯಕ್ಷ, ಶಾಸಕ ಎಸ್.ಆರ್.ವಿಶ್ವನಾಥ್, ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್‌ ಮತ್ತು ಅನೇಕ ಬಿಜೆಪಿಯ ಮುಖಂಡರು ಸೇರಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ತಿರುಮಲ ತಿರುಪತಿ ದೇವಸ್ಥಾನದ ರೀತಿಯಲ್ಲಿ ನಿರ್ಮಿಸಿದ ವೇದಿಕೆಯಲ್ಲಿ ಕಲ್ಯೋಣೋತ್ಸವ ನೆರವೇರಿತು. ಭಕ್ತರಿಗೆ ತಿರುಮಲ ತಿರುಪತಿ ದೇವಾಲಯದ ಲಡ್ಡು ಪ್ರಸಾದ ಮತ್ತು ಕ್ಯಾಲೆಂಡರ್‌ ಅನ್ನು ನೀಡಲಾಯಿತು ಹಾಗೂ ಊಟದ ವ್ಯವಸ್ಥೆ ಸಹ ಮಾಡಲಾಗಿತ್ತು. ಈ ವೇಳೆ ತಿರುಮಲ ತಿರುಪತಿ ದೇವಾಲಯದ ಆಸ್ಥಾನ ಗಾಯಕ ಶ್ರೀ ಕೃಷ್ಣ ಅವರಿಂದ ಸಂಗೀತೋತ್ಸವ ಕಾರ್ಯಕ್ರಮ ಅಯೋಜಿಸಲಾಗಿತ್ತು.

ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಮಾತನಾಡಿ, ತಮ್ಮೇಶ್ ಗೌಡರ ಸೇವೆ ಶ್ಲಾಘನೀಯ ಹಾಗೂ ಜಗತ್‌ಕಲ್ಯಾಣದ ಕಾರ್ಯವಾಗಿದೆ. ಎಲ್ಲಾ ಭಕ್ತರಿಗೂ ಭಗವಂತನ ಆಶೀರ್ವಾದ ಸಿಗಲಿ ಹಾಗೂ ತಮ್ಮೇಗೌಡ ಅವರಿಗೂ ಭಗವಂತ ಇನ್ನಷ್ಟು ಶಕ್ತಿ ಕೊಟ್ಟು ಹೆಚ್ಚು ಹೆಚ್ಚು ಜನಸೇವೆ ಮಾಡುವಂತಾಗಲಿ ಎಂದು ಹೇಳಿದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಶ್ರೀ ಶ್ರೀನಿವಾಸನ ಅನುಗ್ರಹ ಎಲ್ಲ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜನರ ಮೇಲಿರಲಿ. ತಮ್ಮೇಶ್ ಗೌಡರನ್ನು ಹಲವಾರು ವರ್ಷಗಳಿಂದ ಗಮನಿಸುತ್ತಿದ್ದೇನೆ, ಅವರು ಮಾಡುತ್ತಿರುವ ಜನಸೇವೆ ಅಸಾಮಾನ್ಯವಾದುದು. ಕೋವಿಡ್ ಸಮಯದಲ್ಲಿ ಅವರು ಕ್ಷೇತ್ರದ ಸಾವಿರಾರು ಕುಟುಂಬಗಳ ನೆರವಿಗೆ ನಿಂತರು. ಅವರು ನಡೆಸುತ್ತಿರುವ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಔಷಧ ಶಿಬಿರಗಳಲ್ಲಿ ಸಾವಿರಾರು ಜನರು ಫಲಾನುಭವಿಗಳಾಗಿದ್ದಾರೆ. ಅದೇ ರೀತಿ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ಅತ್ಯಂತ ವೈಭವದಿಂದ ನಡೆಸಿಕೊಂಡು ಬರುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ | BJP Karnataka : ಕಾಂಗ್ರೆಸ್‌ನಿಂದಲೇ ಭ್ರಷ್ಟಾಚಾರದ ಹುಟ್ಟು: ಸಚಿವ ಡಾ. ಕೆ. ಸುಧಾಕರ್‌ ಆರೋಪ

ತಮ್ಮೇಶ್ ಗೌಡರು ವಿದ್ಯಾರ್ಥಿಯಾಗಿರುವಾಗಲೇ ಎಬಿವಿಪಿ ಸಂಘಟನೆಯಲ್ಲಿ ಅನೇಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ನಮ್ಮ ಪಕ್ಷದಲ್ಲಿಯೂ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಪಕ್ಷದ ಸಂಘಟನೆ ಮಾಡಿದಂತಹ ಒಬ್ಬ ಸಮರ್ಥ ನಾಯಕರಾಗಿದ್ದಾರೆ. ಈ ಶ್ರೀನಿವಾಸ ಕಲ್ಯಾಣೋತ್ಸವವನ್ನು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜನರ ಒಳಿತಿಗಾಗಿ ಅದ್ಧೂರಿಯಾಗಿ ಆಯೋಜಿಸಿದ್ದಾರೆ. ತಮ್ಮೇಶ್ ಗೌಡರು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ಅವರ ಮೇಲಿರಲಿ ಎಂದು ಕೋರಿದರು.

ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ಬ್ಯಾಟರಾಯನಪುರದಲ್ಲಿ ತಮ್ಮೇಶ್‌ಗೌಡರು ಅನೇಕ ಜನಪರ ಕೆಲಸಗಳನ್ನು ಮಾಡುತ್ತಿದ್ದಾರೆ. ಅದೇ ರೀತಿ ಅನೇಕ ಧಾರ್ಮಿಕ ಕೆಲಸಗಳನ್ನು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಒಳ್ಳೆಯ ಕೆಲಸಗಳನ್ನು ಮಾಡಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಿ ಎಂದು ಹೇಳಿದರು.

ಕಾರ್ಯಕ್ರಮದ ರೂವಾರಿ ತಮ್ಮೇಶ್ ಗೌಡ ಮಾತನಾಡಿ, ನನಗೆ ಯಾವಾಗಲೂ ಬಿ.ಎಸ್.ಯಡಿಯೂರಪ್ಪ ಅವರು ಸ್ಫೂರ್ತಿದಾಯಕರಾಗಿದ್ದಾರೆ. ಕೋವಿಡ್ ಸಮಯದಲ್ಲಿ ಅವರಿಗೆ ಕೊರೊನಾ ಬಂದಿದ್ದರೂ ದಿನ ನಿತ್ಯ ಕರ್ತವ್ಯ ನಿರ್ವಹಿಸಿ ನಮ್ಮ ರಾಜ್ಯವನ್ನು ಕಾಪಾಡಿದರು. ಆ ಸಮಯದಲ್ಲಿ ನನಗೂ ಕೋವಿಡ್ ಬಂದಿತ್ತು. ಯಡಿಯೂರಪ್ಪನವರ ಕೆಲಸವನ್ನು ನೋಡಿ ನಾನು ಸಹ ಅನೇಕ ಕಾರ್ಯಗಳನ್ನು ಮಾಡಿದೆ. ಇಡೀ ರಾಜ್ಯದಲ್ಲಿ ಶಿಕಾರಿಪುರ ಒಂದು ಮಾದರಿ ವಿಧಾನಸಭಾ ಕ್ಷೇತ್ರವಾಗಿದೆ. ನಮ್ಮ ಬ್ಯಾಟರಾಯನಪುರವು ಮಾದರಿ ವಿಧಾನಸಭಾ ಕ್ಷೇತ್ರವಾಗಬೇಕೆಂಬ ಸಂಕಲ್ಪದೊಂದಿಗೆ ಅನೇಕ ಕೆಲಸಗಳನ್ನು ಮಾಡುತ್ತಿದ್ದೇನೆ. ಇದಕ್ಕೆ ಜನರ ಆಶೀರ್ವಾದ ಅಗತ್ಯ ಎಂದು ಮನವಿ ಮಾಡಿದರು.

ಇದನ್ನೂ ಓದಿ | Republic Day : ಒಂದೇ ವಾರಕ್ಕೆ ಸಿದ್ಧವಾಯಿತು ʼನಾರಿಶಕ್ತಿʼ ಸ್ತಬ್ಧ ಚಿತ್ರ: ಕರ್ತವ್ಯ ಪಥದಲ್ಲಿ ಪೂರ್ವಾಭ್ಯಾಸ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Valmiki Corporation Scam: ನಾಗೇಂದ್ರ ಕಸ್ಟಡಿ ಅಂತ್ಯ, ಇಂದು ಕೋರ್ಟ್‌ಗೆ ಹಾಜರು; ಪತ್ನಿಯೂ ಇಡಿ ವಶದಲ್ಲಿ

Valmiki Corporation Scam:
ನಾಗೇಂದ್ರರವರ ಇಬ್ಬರು ಪಿಎಗಳು, ನಾಗೇಂದ್ರರ ಪತ್ನಿ ಎಲ್ಲರ ಹೇಳಿಕೆಯನ್ನು ಪಡೆದಿರುವ ಇಡಿ, ಇನ್ನಷ್ಟು ವಿಚಾರಗಳನ್ನು ಹೊರತೆಗೆಯುವ ಅಗತ್ಯದಲ್ಲಿ ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆ ಹೆಚ್ಚಿದೆ. ಅಕೌಂಟ್ಸ್ ವ್ಯವಹಾರ, ಹಣ ಎಲ್ಲೆಲ್ಲಿ ವ್ಯವಹಾರವಾಗಿದೆ, ಇನ್ನೂ ಯಾರು ಯಾರು ಇದ್ದಾರೆ ಹೀಗೆ ಅನೇಕ ಮಾಹಿತಿಗಳು ಇಡಿಗೆ ಬೇಕಾಗಿವೆ.

VISTARANEWS.COM


on

b nagendra valmiki corporation scam
Koo

ಬೆಂಗಳೂರು: ವಾಲ್ಮಿಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ (Valmiki Corporation Scam) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (Enforcement Directorate) ಧಿತರಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ (Ex minister B Nagendra) ಕಸ್ಟಡಿ ಇಂದು ಅಂತ್ಯವಾಗುತ್ತಿದ್ದು, ಅವರನ್ನು ಮತ್ತೆ ಕೋರ್ಟ್ ಮುಂದೆ ಇಡಿ ಹಾಜರ್ (ED Raid) ಪಡಿಸಲಿದೆ. ತನಿಖೆ ಇನ್ನಷ್ಟು ನಡೆಯಬೇಕಿರುವುದರಿಂದ ಮತ್ತೆ ಕಸ್ಟಡಿಗೆ ಕೇಳಲಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಇಂದು ಮಧ್ಯಾಹ್ನ 2 ಗಂಟೆಗೆ ನಾಗೇಂದ್ರ ಅವರನ್ನು ಇಡಿ ಹಾಜರು ಪಡಿಸಲಿದೆ. ಮತ್ತೆ ಮೂರರಿಂದ ನಾಲ್ಕು ದಿನಗಳ ಕಾಲ ಕಸ್ಟಡಿಗೆ‌ ಕೇಳುವ ಸಾಧ್ಯತೆ ಇದೆ. ನಾಗೇಂದ್ರರವರ ಇಬ್ಬರು ಪಿಎಗಳು, ನಾಗೇಂದ್ರರ ಪತ್ನಿ ಎಲ್ಲರ ಹೇಳಿಕೆಯನ್ನು ಪಡೆದಿರುವ ಇಡಿ, ಇನ್ನಷ್ಟು ವಿಚಾರಗಳನ್ನು ಹೊರತೆಗೆಯುವ ಅಗತ್ಯದಲ್ಲಿ ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆ ಹೆಚ್ಚಿದೆ. ಅಕೌಂಟ್ಸ್ ವ್ಯವಹಾರ, ಹಣ ಎಲ್ಲೆಲ್ಲಿ ವ್ಯವಹಾರವಾಗಿದೆ, ಇನ್ನೂ ಯಾರು ಯಾರು ಇದ್ದಾರೆ ಹೀಗೆ ಅನೇಕ ಮಾಹಿತಿಗಳು ಇಡಿಗೆ ಬೇಕಾಗಿವೆ.

ನಿನ್ನೆ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ತೆಗೆದುಕೊಂಡು ಇಡಿ ವಿಚಾರಣೆ ಮಾಡಿತ್ತು. ಅಧಿಕಾರಿಗಳು 7ರಿಂದ 8 ಗಂಟೆಗಳ ಕಾಲ ಸುದೀರ್ಘ ವಿಚಾರಣೆ ಮಾಡಿದ್ದರು. ಸಾಕಷ್ಟು ವಿಚಾರಗಳನ್ನು ಹೊರ ತೆಗೆದಿದ್ದಾರೆ. ಪತಿ ಪತ್ನಿಯನ್ನು ಮುಖಾಮುಖಿ ಕೂರಿಸಿ ಪ್ರಶ್ನೆ ಮಾಡಲಾಗಿದೆ. ಮಂಜುಳಾ ಅವರ ಹೆಸರಲ್ಲಿ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ.

ಜುಲೈ 13ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ಯಲಹಂಕದಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು 5 ದಿನಗಳ ಕಾಲ ಕಸ್ಟಡಿಗೆ ನೀಡಿದ್ದರು. 18ನೇ ತಾರೀಖಿನಂದು ಬೆಳಿಗ್ಗೆ 11ಕ್ಕೆ ಮತ್ತೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದರು.

ಅವರ ಮನೆ ಸೇರಿ 23 ಕಡೆಗಳಲ್ಲಿ ಇಡಿ ಏಕಕಾಲಕ್ಕೆ ದಾಳಿ ಮಾಡಿತ್ತು. 6 ದಿನಗಳ ಕಾಲದ ಇಡಿ ವಿಚಾರಣೆ ವಿಚಾರಣೆಯಲ್ಲಿ ನಾಗೇಂದ್ರ ಸಮರ್ಪಕವಾಗಿ ಉತ್ತರ ನೀಡಿಲ್ಲ. ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿರುವ ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್‌ ಕೂಡ ಪ್ರಕರಣದಲ್ಲಿ ವಿಚಾರಣೆಗಾಗಿ ಇಡಿಗೆ ಬೇಕಾಗಿದ್ದಾರೆ. ಈಗಾಗಲೇ ಬಂದಿತ ಆರೋಪಿಗಳನ್ನು ಪ್ರಶ್ನಿಸಿದಾಗ ದದ್ದಲ್‌ ಪಿಎಯ ಕೈವಾಡ ಕೂಡ ಇದರಲ್ಲಿ ಕಂಡುಬಂದಿದೆ.

ಆದರೆ ಮನೆಗೆ ಇಡಿ ದಾಳಿಯ ಬಳಿಕ ಇಡಿ ಬಂಧನ ತಪ್ಪಿಸಿಕೊಳ್ಳಲು ದದ್ದಲ್‌ ಎಸ್‌ಐಟಿ ಮುಂದೆ ಹಾಜರಾಗ ಇಡೀ ದಿನ ಕೂತಿದ್ದರು. ನಂತರ ಅಲ್ಲಿಂದ ಹೊರಬಿದ್ದು ಮೂರು ದಿವಸ ಕಣ್ಮರೆಯಾಗಿದ್ದ ದದ್ದಲ್‌, ನಾಲ್ಕನೇ ದಿವಸ ವಿಧಾನಮಂಡಲ ಅಧಿವೇಶನ ಶುರುವಾದಾಗ ವಿಧಾನಸಭೆಯಲ್ಲಿ ಕಾಣಿಸಿಕೊಂಡಿದ್ದರು. ವಿಚಾರಣೆಗೆ ಬರುವಂತೆ ದದ್ದಲ್‌ ಅವರಿಗೆ ಇಡಿ ನೋಟೀಸ್‌ ನೀಡಿದೆ ಎನ್ನಲಾಗಿದೆ. ಆದರೆ ನನಗೆ ಯಾವುದೇ ನೋಟೀಸ್‌ ಬಂದಿಲ್ಲ ಎಂದಿದ್ದಾರೆ ದದ್ದಲ್.‌ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವಾಗ ಸ್ಪೀಕರ್‌ ಅನುಮತಿ ಇಲ್ಲದೆ ಶಾಸಕರನ್ನು ಇಡಿ ಬಂಧಿಸುವಂತಿಲ್ಲ.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

Continue Reading

ಕ್ರೀಡೆ

Paris Olympics: ಪ್ಯಾರಿಸ್‌ ಒಲಿಂಪಿಕ್ಸ್​ ಭದ್ರತಾ ಕಾರ್ಯದಲ್ಲಿ ಭಾರತದ ಶ್ವಾನದಳ; ಬೆಂಗಳೂರಿನಲ್ಲಿ ತರಬೇತಿ

Paris Olympics:ಸಿಎಪಿಎಫ್‌, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌), ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ), ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಪಡೆಗಳಿಂದ ಈ ಶ್ವಾನ ಮತ್ತು ನಿರ್ವಹಾಕರನ್ನು ಆಯ್ಕೆ ಮಾಡಲಾಗಿದೆ.

VISTARANEWS.COM


on

Paris Olympics
Koo

ಬೆಂಗಳೂರು: ಪ್ರತಿಷ್ಠಿತ ಪ್ಯಾರಿಸ್‌ ಒಲಿಂಪಿಕ್ಸ್‌(Paris Olympics) ಕ್ರೀಡಾಕೂಟ ಜುಲೈ 26ರಿಂದ ಆರಂಭಗೊಳ್ಳಲಿದೆ. ಈಗಾಗಲೇ ಕೂಟದ ಸಂಘಟಕರು ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ. ವಿಶೇಷವೆಂದರೆ ಭಯೋತ್ಪಾದನಾ ದಾಳಿ ತಡೆ ಭದ್ರತಾ ಕಾರ್ಯಕ್ಕಾಗಿ ಭಾರತೀಯ ಸೇನೆಯಲ್ಲಿ ತರಬೇತುಗೊಂಡ ಶ್ವಾನದಳವನ್ನು ನಿಯೋಜಿಸಲಾಗಿದೆ. ಈ ಶ್ವಾನಪಡೆಯ ಸಾಮರ್ಥ್ಯ ಪರೀಕ್ಷೆ ನಡೆದದ್ದು ಬೆಂಗಳೂರಿನಲ್ಲಿ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್‌) ಮತ್ತು ವಿಶೇಷ ಕಮಾಂಡೊ ಪಡೆಯ ಭಾರತೀಯ ಕೆ9 (ಕೆನೈನ್) ಹತ್ತು ಶ್ವಾನಗಳ ಪಡೆಯನ್ನು ಪ್ಯಾರಿಸ್‌ಗೆ ಕಳುಹಿಸಲಾಗಿದೆ. ಬೆಂಗಳೂರು ಸಮೀಪದ ತರಳುವಿನಲ್ಲಿರುವ ಸಿಆರ್‌ಪಿಎಫ್ ಶ್ವಾನ ತಳಿ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಈ ಶ್ವಾನಪಡೆಯ ಸಾಮರ್ಥ್ಯ ಪರೀಕ್ಷೆ ನಡೆಸಿದ ಬಳಿಕ ಪ್ಯಾರಿಸ್‌ಗೆ ಕಳುಹಿಸಲಾಗಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿರುವ ಭದ್ರತಾ ಪಡೆಗಳೊಂದಿಗೆ ಈ ಶ್ವಾನಪಡೆಯು ಕಾರ್ಯನಿರ್ವಹಿಸಲಿದೆ.

10 ವಾರ ತರಬೇತಿ


ಈ ಶ್ವಾನಗಳಿಗೆ ಹತ್ತು ವಾರಗಳ ಕಾಲ ವಿಶೇಷ ತರಬೇತಿ ನೀಡಲಾಗಿದೆ. ಸಿಎಪಿಎಫ್‌, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌), ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ), ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಪಡೆಗಳಿಂದ ಈ ಶ್ವಾನ ಮತ್ತು ನಿರ್ವಹಾಕರನ್ನು ಆಯ್ಕೆ ಮಾಡಲಾಗಿದೆ. ಈ ಶ್ವಾನಪಡೆಯಲ್ಲಿರುವ ಬೆಲ್ಜಿಯನ್ ಮೆಲಿನೊಸ್ ತಳಿಯು ಪ್ರಮುಖವಾಗಿದೆ. ಬಾಂಬ್‌ ಪತ್ತೆ ಕಾರ್ಯಾಚರಣೆಯಲ್ಲಿ ಅತ್ಯಂತ ಚುರುಕಾದ ತಳಿ ಇದಾಗಿದೆ.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ. 29 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಟೋಕಿಯೊ ಒಲಿಂಪಿಕ್​ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಾಯಕನಾಗಿದ್ದಾರೆ.

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಅಥ್ಲೀಟ್‌ಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ದೇಶಕ್ಕೆ ಹೆಮ್ಮೆ ತರುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Lalbagh Flower Show: ಈ ಬಾರಿಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಡಾ. ಅಂಬೇಡ್ಕರ್‌ ಜೀವನಗಾಥೆ!

Lalbagh Flower Show: ಆಂಥೋರಿಯಂ, ಲಿಲ್ಲಿ, ಆರ್ಕಿಡ್, ಜರ್‌ಬೆರಾ, ಸೇವಂತಿಗೆ, ನಂದಿ ಗಿರಿಧಾಮದ ಇಂಪೇಷನ್ಸ್‌ ಹೂಗಳು, ರೆಡ್‌ಹಾಟ್‌ ಪೋಕರ್‌, ಆಲ್‌ಸ್ಟೋಮೇರಿಯನ್‌ ಲಿಲ್ಲಿ, ಪೂಷಿಯಾ, ಅಗಪಾಂಥಸ್‌, ಸೈಕ್ಲೋಮನ್‌, ಕ್ಯಾಲಾಲಿಲ್ಲಿ, ಸುಗಂಧ ರಾಜ ಮುಂತಾದ ಹೂಗಳಿಂದ ಅಂಬೇಡ್ಕರ್ ಅರಳಲಿದ್ದಾರೆ. 10-12 ದೇಶಗಳಿಂದ ಹೂಗಳನ್ನು ತರಿಸಿಕೊಳ್ಳಲಾಗುತ್ತದೆ.

VISTARANEWS.COM


on

Lalbagh Flower Show 2024
Koo

ಬೆಂಗಳೂರು: ಈ ಬಾರಿ ರಾಜಧಾನಿಯ ಲಾಲ್‌ಬಾಗ್‌ನಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ (Independence Day) ಫಲಪುಷ್ಪ ಪ್ರದರ್ಶನ (Lalbagh Flower Show) ಹಲವು ವಿಶೇಷತೆಗಳನ್ನು ಹೊಂದಿದೆ. ಮುಖ್ಯವಾಗಿ ಈ ಬಾರಿಯ ಥೀಮ್‌ ಹಾಗೂ ವಿಶೇಷ ಆಕರ್ಷಣೆ, ಸಂವಿಧಾನ ಶಿಲ್ಪಿ ಡಾ. ಬಿಆರ್‌ ಅಂಬೇಡ್ಕರ್‌ (Dr BR Ambedkar) ಅವರ ಜೀವನಗಾಥೆ ನೋಡುಗರನ್ನು ರಂಜಿಸಲಿದೆ. ಆಗಸ್ಟ್ 8ರಿಂದ 19 ರವರೆಗೆ ಫಲಪುಷ್ಪ ಪ್ರದರ್ಶನ ಜನರನ್ನು ಸೆಳೆಯಲಿದೆ.

ಬೆಂಗಳೂರಿನ ಲಾಲ್‌ಬಾಗ್​​ನಲ್ಲಿ ಆಗಸ್ಟ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ (Lalbagh Flower Show) ವೀಕ್ಷಿಸಲು ಜನ ಕಾತರದಿಂದ ಕಾಯುತ್ತಾರೆ. ಪ್ರತಿ ವರ್ಷ ವಿಭಿನ್ನ ಥೀಮ್​​ನಲ್ಲಿ ಫ್ಲವರ್ ಶೋ ಆಯೋಜಿಸುವ ಮೂಲಕ ಲಾಲ್‌ಬಾಗ್‌ಗೆ ಅಸಂಖ್ಯಾತ ಜನರನ್ನು ಆಕರ್ಷಿಸಲಾಗುತ್ತದೆ. ಈ ವರ್ಷ ಕೂಡ ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಲಾಲ್‌ಬಾಗ್​​ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಜೀವನ ಗಾಥೆಯನ್ನು ಬಿಂಬಿಸುವ ಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದ್ದು, ವಿದೇಶಿ ಹಾಗೂ ಸ್ವದೇಶಿ ಹೂಗಳಿಂದ ಈ ಬಾರಿಯ ಫ್ಲವರ್ ಶೋ ಕಂಗೊಳಿಸಲಿದೆ.

ಈ ಸಲ ಲಾಲ್‌ಬಾಗ್‌ನಲ್ಲಿ ನಡೆಯಲಿರುವ ಫ್ಲವರ್‌ ಶೋಗೆ (Lalbagh Flower Show) ಸುಮಾರು 3 ಕೋಟಿ ರೂಪಾಯಿ ವೆಚ್ಚವಾಗಲಿದೆ. ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದ್ದು, ಹೂಗಳ ಆಯ್ಕೆ ನಡೆಯುತ್ತಿದೆ. ಎಂದಿನಂತೆ ಆಂಥೋರಿಯಂ, ಲಿಲ್ಲಿ, ಆರ್ಕಿಡ್, ಜರ್‌ಬೆರಾ, ಸೇವಂತಿಗೆ, ನಂದಿ ಗಿರಿಧಾಮದ ಇಂಪೇಷನ್ಸ್‌ ಹೂಗಳು, ರೆಡ್‌ಹಾಟ್‌ ಪೋಕರ್‌, ಆಲ್‌ಸ್ಟೋಮೇರಿಯನ್‌ ಲಿಲ್ಲಿ, ಪೂಷಿಯಾ, ಅಗಪಾಂಥಸ್‌, ಸೈಕ್ಲೋಮನ್‌, ಕ್ಯಾಲಾಲಿಲ್ಲಿ, ಸುಗಂಧ ರಾಜ ಮುಂತಾದ ಹೂಗಳಿಂದ ಅಂಬೇಡ್ಕರ್ ಅರಳಲಿದ್ದಾರೆ. 10-12 ದೇಶಗಳಿಂದ ಹೂಗಳನ್ನು ತರಿಸಿಕೊಳ್ಳಲಾಗುತ್ತದೆ. ಕೊಲಂಬಿಯಾ, ನೆದರ್ ಲ್ಯಾಂಡ್ಸ್, ಬೆಲ್ಜಿಯಂ, ಕೀನ್ಯಾ, ಆಸ್ಟ್ರೇಲಿಯಾದಿಂದ ಹೂಗಳು ಲಾಲ್‌ಬಾಗ್‌ಗೆ ಆಗಮಿಸಲಿವೆ. ಫ್ಲವರ್ ಶೋನಲ್ಲಿ 60ಕ್ಕೂ ಹೆಚ್ಚು ಜಾತಿಯ ಹೂಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದು, ಒಟ್ಟು 15 ಲಕ್ಷದಷ್ಟು ಹೂಗಳನ್ನು ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಸದ್ಯ ಲಾಲ್ ಬಾಗ್ ಗಾರ್ಡನ್​ನಲ್ಲಿ 4 ಸಾವಿರಕ್ಕೂ ಹೆಚ್ಚು ವಿವಿಧ ಬಗೆಯ ಹೂಗಳನ್ನು ಸಿದ್ಧಮಾಡಿಕೊಳ್ಳಲಾಗುತ್ತಿದೆ.

ಇದಲ್ಲದೇ ವಿವಿಧ ಬಗೆಯ ಆಕರ್ಷಕ ಬೋನ್ಸಾಯ್, ಇಕೆಬಾನ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಗಳ ಪ್ರದರ್ಶನವೂ ಇರಲಿದೆ. ಸಧ್ಯ ಒಂದೊಂದೇ ವಿದೇಶಿ ಹೂಗಳನ್ನು ತರಿಸಿಕೊಳ್ಳಲಾಗುತ್ತಿದೆ ಎಂದು ‌ಲಾಲ್‌ಬಾಗ್ ನಿರ್ದೇಶಕ ರಮೇಶ್ ತಿಳಿಸಿದ್ದಾರೆ. ಈ ವರ್ಷ ಸುಮಾರು 50 ಮಾದರಿಯ ಪ್ರದರ್ಶನಕ್ಕೆ ಸಲಹೆಗಳು ಬಂದಿದ್ದು ಅಂತಿಮವಾಗಿ ಅಂಬೇಡ್ಕರ್ ಅವರ ಥೀಮ್ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಹಿಂದೆ ಭಕ್ತಿ ಭಂಡಾರಿ ಬಸವಣ್ಣ ಮತ್ತು ಹೆಮ್ಮೆಯ ನಟ ಪುನೀತ್ ರಾಜ್ ಕುಮಾರ್ ಅವರ ಫಲಪುಷ್ಪ ಪ್ರದರ್ಶನ ನಡೆದಿತ್ತು.

ಟಿಕೆಟ್ ದರ ಎಷ್ಟು?

ಫ್ಲವರ್ ಶೋ ವೀಕ್ಷಿಸಲು ವಯಸ್ಕರಿಗೆ 80 ರೂ. ಪ್ರವೇಶ ದರ ನಿಗದಿಯಾಗಿದ್ದು, ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಇದು 214ನೇ ಫಲಪುಷ್ಪ ಪ್ರದರ್ಶನವಾಗಿರಲಿದ್ದು, ಹಲವು ವಿಶೇಷತೆಗಳನ್ನು ಒಳಗೊಂಡಿರುತ್ತದೆ. ಪ್ರದರ್ಶನ ಆಗಸ್ಟ್ 8ರಿಂದ 19 ರವರೆಗೆ ನಡೆಯಲಿದೆ.

ಇದನ್ನೂ ಓದಿ: Weather Report : ಬೆಂಗಳೂರಲ್ಲಿ ಗುಡುಗು, ಮಳೆ; ಫ್ಲವರ್‌ ಶೋಗೆ ವರುಣ ಅಡ್ಡಿ?

Continue Reading

ಪ್ರಮುಖ ಸುದ್ದಿ

Karnataka Jobs Reservation: ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ವಿಜಯೇಂದ್ರ ಆಕ್ರೋಶ

Karnataka Jobs Reservation: “ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

VISTARANEWS.COM


on

karnataka jobs reservation Siddaramaiah and BY Vijayendra
Koo

ಬೆಂಗಳೂರು: ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು (Karnataka Jobs Reservation) ಒದಗಿಸುವ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ (Karnataka Congress government) ಕನ್ನಡಿಗರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BJP President BY Vijayendra) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ (jobs for kannadigas) ಉದ್ಯೋಗ ಮೀಸಲು (jobs reservation in private sector) ಬಗ್ಗೆ ವಿಧೇಯಕ (karnataka jobs for locals bill) ತಡೆಹಿಡಿದ ಸರಕಾರದ ಕ್ರಮವನ್ನು ಅವರು ಟೀಕಿಸಿದ್ದಾರೆ. ಈ ಬಗ್ಗೆ ಅವರು ʼಎಕ್ಸ್‌ʼನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?” ಎಂದು ಅವರು ಪ್ರಶ್ನಿಸಿದ್ದಾರೆ. “ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ” ಎಂದಿದ್ದಾರೆ.

“ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ? ಮುಖ್ಯಮಂತ್ರಿಗಳು ಈ ಕುರಿತು ತಮ್ಮ X ಖಾತೆಯಲ್ಲಿ ಮೂರು ಬಾರಿ ‘ಯೂ ಟರ್ನ್ ಹೊಡೆದು’ ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ”

“ಇಂಡಿ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ? ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸರು.”

“ವಿಧೇಯಕದ ಕುರಿತು ಮಾಧ್ಯಮಗಳಲ್ಲಿ ಹೆಮ್ಮೆಯಿಂದ ಬೀಗಿದ್ದ ಸಚಿವರುಗಳು ಹಾಗೂ ಕಾಂಗ್ರೆಸ್ ಮುಖಂಡರು ಕೆಲವೇ ಸಮಯದ ಅಂತರದಲ್ಲಿ ನಾಡ ಜನರ ಬಗೆಗಿನ ಐತಿಹಾಸಿಕ ವಿಧೇಯಕ ಹಿಂತೆಗೆದುಕೊಂಡ ಬಗ್ಗೆ ಸಮಸ್ತ ಕನ್ನಡ ಜನತೆಯ ಮುಂದೆ ತಲೆ ಎತ್ತಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ದವಾಗಲಿ” ಎಂದು ಅವರು ಬರೆದಿದ್ದಾರೆ.

Uಯೂ ಟರ್ನ್‌ ಹೊಡೆದ ಸರಕಾರ

ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ನಿನ್ನೆ ತಾತ್ಕಾಲಿಕ ತಡೆ ನೀಡಿದೆ. ಸಂಪುಟ ಅನುಮೋದನೆ ನೀಡಲಾಗಿದ್ದ ಮಸೂದೆ ಕುರಿತು ಮುಂದಿನ ದಿನಗಳಲ್ಲಿ ಮತ್ತೊಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಗೊಂಡಿತ್ತು. ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈ,ಕಿರಣ್ ಮಜುಂದಾರ್ ಅವರು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ನೆರೆ ರಾಜ್ಯದ ಸರ್ಕಾರಗಳೂ ಇದರ ಬಗ್ಗೆ ತಕರಾರು ಎತ್ತಿದ್ದವು. ಈ ಒತ್ತಡಕ್ಕೆ ಬಗ್ಗಿರುವ ಸರ್ಕಾರ ಮಸೂದಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Karnataka Jobs Reservation: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲು ಸಾಧ್ಯವೆ? ತೊಡಕುಗಳು ಏನೇನು?

Continue Reading
Advertisement
b nagendra valmiki corporation scam
ಪ್ರಮುಖ ಸುದ್ದಿ1 min ago

Valmiki Corporation Scam: ನಾಗೇಂದ್ರ ಕಸ್ಟಡಿ ಅಂತ್ಯ, ಇಂದು ಕೋರ್ಟ್‌ಗೆ ಹಾಜರು; ಪತ್ನಿಯೂ ಇಡಿ ವಶದಲ್ಲಿ

Actor  Karthi Stuntman falls 20 ft to his death
ಕಾಲಿವುಡ್18 mins ago

Actor  Karthi: ನಟ ಕಾರ್ತಿ ಸಿನಿಮಾ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

Paris Olympics
ಕ್ರೀಡೆ23 mins ago

Paris Olympics: ಪ್ಯಾರಿಸ್‌ ಒಲಿಂಪಿಕ್ಸ್​ ಭದ್ರತಾ ಕಾರ್ಯದಲ್ಲಿ ಭಾರತದ ಶ್ವಾನದಳ; ಬೆಂಗಳೂರಿನಲ್ಲಿ ತರಬೇತಿ

Anant Radhika Wedding
ವಾಣಿಜ್ಯ41 mins ago

Anant Radhika Wedding: ಅನಂತ್ ಅಂಬಾನಿ ಮದುವೆ ಊಟಕ್ಕೆ 2500 ಬಗೆಯ ಖಾದ್ಯಗಳು! ಏನ್ ತಿಂದ್ರೋ ಏನ್ ಬಿಟ್ರೋ!

Lalbagh Flower Show 2024
ಪ್ರಮುಖ ಸುದ್ದಿ53 mins ago

Lalbagh Flower Show: ಈ ಬಾರಿಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಡಾ. ಅಂಬೇಡ್ಕರ್‌ ಜೀವನಗಾಥೆ!

Bhole Baba
ದೇಶ1 hour ago

Bhole Baba: ʼʼಏನಾಗಬೇಕೋ ಅದೇ ಆಗುತ್ತೆʼʼ- 121 ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಉವಾಚ

karnataka jobs reservation Siddaramaiah and BY Vijayendra
ಪ್ರಮುಖ ಸುದ್ದಿ1 hour ago

Karnataka Jobs Reservation: ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ವಿಜಯೇಂದ್ರ ಆಕ್ರೋಶ

gt world mall haveri farmer
ಪ್ರಮುಖ ಸುದ್ದಿ2 hours ago

GT World Mall: ಪಂಚೆ ಧರಿಸಿದ ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ ವಿರುದ್ಧ ದೂರು ದಾಖಲು

Curd Rice Recipe
ಆಹಾರ/ಅಡುಗೆ2 hours ago

Curd Rice Recipe: ಮೊಸರನ್ನ ರುಚಿಕರವಾಗಿರಲು ಹೀಗೆ ಮಾಡಿ!

ಪ್ರಮುಖ ಸುದ್ದಿ2 hours ago

Karnataka Weather: ಇಂದು ಕರಾವಳಿ, ಮಲೆನಾಡು ಸೇರಿ ವಿವಿಧೆಡೆ ಭಾರಿ ಮಳೆ; ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಎಚ್ಚರಿಕೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌