Stabbing Case: ದೈಹಿಕ ಸಂಬಂಧ ನಿಲ್ಲಿಸಿದ್ದಕ್ಕೆ ವಿವಾಹಿತೆಗೆ ಚೂರಿಯಿಂದ ಇರಿದ! - Vistara News

ಕ್ರೈಂ

Stabbing Case: ದೈಹಿಕ ಸಂಬಂಧ ನಿಲ್ಲಿಸಿದ್ದಕ್ಕೆ ವಿವಾಹಿತೆಗೆ ಚೂರಿಯಿಂದ ಇರಿದ!

ಈತ ವಿವಾಹಿತೆಯೊಬ್ಬಳ ಜೊತೆಗೆ ನಾಲ್ಕು ವರ್ಷದಿಂದ ದೈಹಿಕ ಸಂಬಂಧ ಹೊಂದಿದ್ದ. ಆದರೆ ಮಕ್ಕಳು ದೊಡ್ಡವರಾದರು ಎಂದು ಈ ಸಂಬಂಧಕ್ಕೆ ಮಹಿಳೆ ಫುಲ್‌ಸ್ಟಾಪ್‌ ಹಾಕಿದ್ದರು.

VISTARANEWS.COM


on

stabbing rajanna
ಹಲ್ಲೆ ಆರೋಪಿ ರಾಜಣ್ಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಲ್ಕು ವರ್ಷಗಳಿಂದ ನಡೆಯುತ್ತಿದ್ದ ದೈಹಿಕ ಸಂಬಂಧವನ್ನು ನಿಲ್ಲಿಸಿದ್ದಕ್ಕೆ ವಿವಾಹಿತ ಮಹಿಳೆಗೆ ಚೂರಿಯಿಂದ ಇರಿದ ವ್ಯಕ್ತಿಯೊಬ್ಬ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಘಟನೆ ಯಲಚೇನಹಳ್ಳಿ‌ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ. ರಾಜಣ್ಣ ಎಂಬಾತ ಹಲ್ಲೆ ಆರೋಪಿ. ಈತ ವಿವಾಹಿತೆಯೊಬ್ಬಳ ಜೊತೆಗೆ ನಾಲ್ಕು ವರ್ಷದಿಂದ ದೈಹಿಕ ಸಂಬಂಧ ಹೊಂದಿದ್ದ. ಆದರೆ ಮಕ್ಕಳು ದೊಡ್ಡವರಾದರು ಎಂದು ಈ ಸಂಬಂಧಕ್ಕೆ ಮಹಿಳೆ ಫುಲ್‌ಸ್ಟಾಪ್‌ ಹಾಕಿದ್ದರು. ಆದರೆ ಈತ ನಿನ್ನ ಬಿಟ್ಟು ನಾನು ಬದುಕುವುದಿಲ್ಲ, ನೀನು‌ ನನಗೆ ಬೇಕೇ ಬೇಕು ಎಂದು ಮಹಿಳೆಯನ್ನು ಬೆಂಬಿಡದೆ ಕಾಡುತ್ತಿದ್ದ.

ಯಲಚೇನಹಳ್ಳಿ ಮೆಟ್ರೋ ಬಳಿ ಈಕೆಯ ಹಿಂದೆ ಹೋಗಿ ಕಾಡಿದ್ದ ಆರೋಪಿ, ಆಕೆ ನಿರಾಕರಿಸಿದಾಗ ಚೂರಿಯಿಂದ ಇರಿದಿದ್ದ. ಜೊತೆಗೆ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ಕೋಣನಕುಂಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಗಾಯಾಳು ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Assault Case: ಯುವಕನಿಗೆ ಚಾಕು ಇರಿದು ಮಾರಣಾಂತಿಕ ಹಲ್ಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಾವಣಗೆರೆ

Murder Case : ಮನೆ ಹಾಳು ಮಾಡಿದ ಕುಡಿತ; ತಾಯಿ ಸಾವಿಗೆ, ತಂದೆಯ ಕೊಂದ ಮಗ!

Murder Case : ಚೆನ್ನಾಗಿದ್ದ ಕುಟುಂಬವೊಂದು ಒಂದೇ ಗಂಟೆಯಲ್ಲಿ ಸರ್ವನಾಶವಾಗಿದೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಸಾವಿಗೆ, ತಂದೆಯೇ ಕಾರಣವೆಂದು ಸಿಟ್ಟಾದ ಮಗನೊಬ್ಬ ತಂದೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈದಿದ್ದಾನೆ.

VISTARANEWS.COM


on

By

Murder case In davanagere
Koo

ದಾವಣಗೆರೆ: ಕುಡಿತದ ಚಟವೊಂದು ಮನೆಯನ್ನೆ ಹಾಳು ಮಾಡಿದೆ. ಕುಡುಕ ಪತಿಯ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು (Self Harming) ಮೃತಪಟ್ಟಿದ್ದರು. ತಾಯಿ ಸಾವಿಗೆ ತಂದೆಯೇ ಕಾರಣವೆಂದು ಸಿಟ್ಟಾದ ಮಗ ಕಲ್ಲು ಎತ್ತಿ ಹಾಕಿ ತಂದೆಯನ್ನೇ (Murder Case) ಕೊಂದಿದ್ದಾನೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ‌ ಲಕ್ಕಿಂಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಕೇವಲ ಒಂದು ಗಂಟೆಯಲ್ಲಿ ಇಡೀ ಕುಟುಂಬವೇ ಸರ್ವ ನಾಶವಾಗಿದೆ. ತಿಪ್ಪಮ್ಮ (52) ಎಂಬಾಕೆ ಆತ್ಮಹತ್ಯೆಗೆ ಶರಣಾದರೆ, ಅಂಜನಪ್ಪ (60) ಪುತ್ರನಿಂದಲೇ ಕೊಲೆಯಾಗಿದ್ದಾರೆ. ರಮೇಶ್‌ (30) ಕೊಲೆ ಮಾಡಿ ಜೈಲು ಸೇರಿದ್ದಾನೆ.

ರಮೇಶ್‌ ತಂದೆ ಅಂಜನಪ್ಪ ಕಟ್ಟಡ ಕೆಲಸ ಮಾಡುತ್ತಿದ್ದರು. ಕುಡಿತದ ದಾಸರಾಗಿದ್ದ ಅಂಜನಪ್ಪ, ನಿತ್ಯ ಕುಡಿದು ಬಂದು ಮನೆಯಲ್ಲಿ ಜಗಳವಾಡುತ್ತಿದ್ದರು. ದಿನ ಬೆಳಗಾದರೆ ಪತ್ನಿಯೊಂದಿಗೆ ಜಗಳಕ್ಕಿಳಿಯುತ್ತಿದ್ದರು. ಪತಿ ಕಿರುಕುಳ ತಾಳಲಾರದೆ ಬುಧವಾರ ತಡರಾತ್ರಿ ತಿಪ್ಪಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಇದನ್ನೂ ಓದಿ: Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ತಾಯಿ ಸಾವಿನ ಸುದ್ದಿ ಕೇಳಿ ಆಘಾತಕ್ಕೆ ಒಳಗಾದ ರಮೇಶ್‌, ತಂದೆ ಕಿರುಕುಳಕ್ಕೆ ತಾಯಿ ಮೃತಪಟ್ಟಿದ್ದಾಳೆಂದು ಸಿಟ್ಟಾಗಿದ್ದ. ನೇರವಾಗಿ ಮನೆಗೆ ಬಂದವನೇ ತಂದೆಯ‌ ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ಕೊಲೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ‌ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿ ರಮೇಶ್‌ನನ್ನು ವಶಕ್ಕೆ ಪಡೆದು ತನಿಖೆಯನ್ನು ಮುಂದುವರಿಸಿದ್ದಾರೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ತಂದೆಯ ಕುಡುತದ ಚಟ, ತಾಯಿಯ ದುಡುಕುತನ, ಕೋಪದ ಕೈಗೆ ಬುದ್ಧಿ ಕೊಟ್ಟ ಮಗನಿಂದ ಇಡೀ ಕುಟುಂಬವು ಸರ್ವನಾಶವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Neha Murder Case : ರಾಜ್ಯ ಸರ್ಕಾರವು ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿದ್ದು, ಅಧಿಕಾರಿಗಳು ತನಿಖೆಯನ್ನು ಚುರುಕುಗೊಳ್ಳಿಸಿದ್ದಾರೆ. ಕಾರಾಗೃಹದಲ್ಲಿದ್ದ ಆರೋಪಿ ಫಯಾಜ್‌ ಕರೆತಂದು ನಿನ್ನೆ ಸ್ಥಳ ಮಹಜರು ಮಾಡಲಾಗಿದೆ. ಇಂದು ಗುರುವಾರ ಸಿಐಡಿ ಅಧಿಕಾರಿಗಳು ನೇಹಾ ತಂದೆ-ತಾಯಿಗಳ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದಾರೆ.

VISTARANEWS.COM


on

By

Neha Murder case CID Officer
Koo

ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ (Neha Murder Case) ಸಂಬಂಧ ಸಿಐಡಿ ಅಧಿಕಾರಿಗಳ ತನಿಖೆ ಮುಂದುವರಿದಿದ್ದು, ಗುರುವಾರ (ಏ.25) ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದರು. ಸಿಐಡಿ ಎಡಿಜಿಪಿ ಬಿಕೆ‌ ಸಿಂಗ್, ಎಸ್‌ಪಿ ವೆಂಕಟೇಶ ನೇತೃತ್ವದ ತಂಡ ಸುಮಾರು ಒಂದು ಗಂಟೆಗಳ ಸುದೀರ್ಘ ವಿಚಾರಣೆಯನ್ನು ನಡೆಸಿದರು. ನಂತರ ನೇಹಾ ತಂದೆ ನಿರಂಜನ್‌ ಹಿರೇಮಠ್‌, ತಾಯಿ ಗೀತಾರಿಂದ ಹೇಳಿಕೆಯನ್ನು ಪಡೆದರು.

ಇನ್ನೂ ನೇಹಾ ಹತ್ಯೆ ಪ್ರಕರಣ (Neha Murder Case) ಸಂಬಂಧ ಹುಬ್ಬಳ್ಳಿಯ ಬಿವಿಬಿ ಕಾಲೇಜಿಗೆ ಆರೋಪಿ ಫಯಾಜ್‌ನನ್ನು ಸಿಐಡಿ ಅಧಿಕಾರಿಗಳು ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದರು. ಆರು ದಿನಗಳ‌ ಕಾಲ‌ ಕಸ್ಟಡಿಗೆ ನೀಡಿದ ಹಿನ್ನೆಲೆ ಆರೋಪಿಯನ್ನು ಧಾರವಾಡದ ಕಾರಾಗೃಹದಿಂದ ಕರೆದೊಯ್ದು ಸ್ಥಳ ಮಹಜರು ನಡೆಸಲಾಗಿತ್ತು. ಇದೀಗ ನೇಹಾ ತಂದೆ- ತಾಯಿಯಿಂದ ಮತ್ತಷ್ಟು ಮಾಹಿತಿಯನ್ನು ಕಲೆಹಾಕಿರುವ ಸಿಐಡಿ ಅಧಿಕಾರಿಗಳು 1 ಗಂಟೆಯ ವಿಚಾರಣೆ ನಡೆಸಿ ವಾಪಸ್‌ ಆದರು.

ರಹಸ್ಯ ಸ್ಥಳದಲ್ಲಿ ಆರೋಪಿ ಫಯಾಜ್‌ ವಿಚಾರಣೆ

ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಧಾರವಾಡದಲ್ಲಿ ಬೀಡು ಬಿಟ್ಟಿದೆ. ಆರೋಪಿ ಫಯಾಜ್‌ನನ್ನು ಧಾರವಾಡದ ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಸಿಐಡಿ ಅಧಿಕಾರಿಗಳು ನಿನ್ನೆ ಬುಧವಾರ ಸ್ಥಳ ಮಹಜರು ಜತೆಗೆ ಪ್ರಾಥಮಿಕ ಹಂತದ ವಿಚಾರಣೆ ಪೂರ್ಣಗೊಳಿಸಿದ್ದಾರೆ.

ಸ್ಥಳ ಮಹಜರು ವೇಳೆ ಕಾಲೇಜು ಬಳಿ ಎವಿಬಿಪಿ ಪ್ರತಿಭಟನೆ ನಡೆಸಿತ್ತು. ಇದೀಗ ಧಾರವಾಡದಲ್ಲಿಯೂ ಪ್ರತಿಭಟನೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಫಯಾಜ್‌ನನ್ನು ರಹಸ್ಯ ಸ್ಥಳದಲ್ಲಿಟ್ಟಿದ್ದಾರೆ. ಫಯಾಜ್‌ ನೇಹಾಳನ್ನು ಹತ್ಯೆ ಮಾಡಲು ಧಾರವಾಡದಲ್ಲೇ ಚಾಕು ಖರೀದಿ ಮಾಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚಾಕು ಖರೀದಿಸಿದ ಸ್ಥಳ, ಸ್ನೇಹಿತರ ಭೇಟಿಯಾದ ಸ್ಥಳಗಳಿಗೆ ಸಿಐಡಿ ಟೀಂ ಭೇಟಿ ನೀಡುವ ಸಾಧ್ಯತೆ ಇದೆ.

ಏನಿದು ನೇಹಾ ಹತ್ಯೆ ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌ ಎಂಬಾತ ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದು ಎಸ್ಕೇಪ್‌ ಆಗಲು ಯತ್ನಿಸಿದ್ದ. ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಈ ಹತ್ಯೆ ನಡೆದಿತ್ತು. ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ ಕೊಲೆಯಾಗಿದ್ದಳು.

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಳು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಆತ ಏ.18ರ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ, ಆದರೆ ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ.

ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿ ಫಯಾಜ್‌ ಏಕಾಏಕಿ ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದ. ಆತನಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ನೇಹಾಳನ್ನು ಹಿಡಿದುಕೊಂಡ ಪಾಗಲ್‌ ಪ್ರೇಮಿ, ಮನಬಂದಂತೆ ಚಾಕುವಿನಿಂದ ಇರಿದಿದ್ದ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದರಿಂದ ನೇಹಾಳಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಅಲ್ಲಿದ್ದವರು ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದರು. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದರು. ಇತ್ತ ಹತ್ಯೆ ಮಾಡಿ ಎಸ್ಕೇಪ್‌ ಆಗುತ್ತಿದ್ದ ಫಯಾಜ್‌ನನ್ನು ವಿದ್ಯಾರ್ಥಿಗಳೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bank fraud: ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

Bank fraud: ಎಸ್‌ಐಟಿ ತನಿಖೆ ನಡೆಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಠೇವಣಿದಾರರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ತಮಗೆ ಸಾಕಷ್ಟು ಅನ್ಯಾಯ ಆಗಿದೆ. ಕೋಟಿ ಕೋಟಿ ಕಳೆದುಕೊಂಡಿದ್ದೇವೆ. ನ್ಯಾಯ ಕೇಳೋಕೆ ಹೋದರೆ ಯಾವುದೇ ಪರಿಹಾರ ಇಲ್ಲ. ಮೂರು ವರ್ಷದಿಂದ ಒಂದು ದೂರು ಕೂಡ ದಾಖಲಾಗಿಲ್ಲ. ಕಾಂಗ್ರೆಸ್‌ ಮುಖಂಡ ಶಂಕರ್ ಗುಹಾ ಅವರು ಬಂದ ಮೇಲೆ ದೂರು ದಾಖಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

VISTARANEWS.COM


on

Guru Raghavendra and Vasishta Co operative Bank fraud handed over to SIT says DK Shivakumar
Koo

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಹಗರಣದ (Bank fraud) ತನಿಖೆ ಹೊಣೆಯನ್ನು ಎಸ್‌ಐಟಿಗೆ (SIT Investigation) ವಹಿಸುವಂತೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬಳಿ ಚರ್ಚೆ ನಡೆಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಭರವಸೆ ನೀಡಿದ್ದಾರೆ.

ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ಗುರುವಾರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿದ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಈ ಭರವಸೆ ನೀಡಿದರು.

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ (Priyanka Gandhi) ಆಗಮಿಸಿದ್ದ ವೇಳೆ ಅವರನ್ನು ಭೇಟಿ ಮಾಡಿದ್ದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದರು. ಈ ಬ್ಯಾಂಕ್‌ಗಳಲ್ಲಿ ಲಕ್ಷಾಂತರ ರೂಪಾಯಿಯನ್ನು ಹೂಡಿಕೆ ಮಾಡಿದ್ದೇವೆ. ಈಗ ಹಗರಣದಿಂದಾಗಿ ನಮಗೆ ನಯಾ ಪೈಸೆ ಸಿಗುತ್ತಿಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕಷ್ಟಪಟ್ಟು ನಾವು ದುಡಿದಿದ್ದ ಹಣವನ್ನೆಲ್ಲ ಈ ಸಂಸ್ಥೆಯಲ್ಲಿ ಹೂಡಿಕೆ ಮಾಡಿಟ್ಟಿದ್ದೇವೆ. ಇದರಿಂದ ನಮಗೆ ತೀವ್ರ ಸಮಸ್ಯೆಯಾಗುತ್ತಿದೆ. ಈವರೆಗೆ ಯಾವ ಸರ್ಕಾರಗಳೂ ಈ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ. ನಮಗೆ ದಿಕ್ಕೇ ತೋಚದಂತಾಗಿದೆ. ಹೀಗಾಗಿ ಕೂಡಲೇ ಕ್ರಮವಹಿಸುವಂತೆ ಮನವಿ ಮಾಡಿದ್ದರು. ‌

ಎಸ್‌ಐಟಿ ತನಿಖೆಯ ಭರವಸೆ ನೀಡಿದ್ದ ಪ್ರಿಯಾಂಕಾ ಗಾಂಧಿ

ಠೇವಣಿದಾರರ ಮನವಿ ಸ್ವೀಕಾರ ಮಾಡಿದ್ದ ಪ್ರಿಯಾಂಕಾ ಗಾಂದಿ, ರಾಜ್ಯ ಸರ್ಕಾರದಿಂದ ಎಸ್‌ಐಟಿ ತನಿಖೆ ನಡೆಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಠೇವಣಿದಾರರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ತಮಗೆ ಸಾಕಷ್ಟು ಅನ್ಯಾಯ ಆಗಿದೆ. ಕೋಟಿ ಕೋಟಿ ಕಳೆದುಕೊಂಡಿದ್ದೇವೆ. ನ್ಯಾಯ ಕೇಳೋಕೆ ಹೋದರೆ ಯಾವುದೇ ಪರಿಹಾರ ಇಲ್ಲ. ಮೂರು ವರ್ಷದಿಂದ ಒಂದು ದೂರು ಕೂಡ ದಾಖಲಾಗಿಲ್ಲ. ಕಾಂಗ್ರೆಸ್‌ ಮುಖಂಡ ಶಂಕರ್ ಗುಹಾ ಅವರು ಬಂದ ಮೇಲೆ ದೂರು ದಾಖಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಸಿಎಂಗೆ ಪತ್ರ ಬರೆಯಲು ಮುಂದಾದ ಡಿ.ಕೆ. ಶಿವಕುಮಾರ್

ಮನವಿ ಸ್ವೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಈ ಸಂಬಂಧ ಮಾತನಾಡುತ್ತೇನೆ. ಶೀಘ್ರವೇ ಎಸ್‌ಐಟಿ ರಚನೆ ಮಾಡಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ, ಕೂಡಲೇ ಈ ಸಂಬಂಧ ಸಿಎಂಗೆ ಪತ್ರವನ್ನು ಸಿದ್ಧಪಡಿಸಲು ಸಿಬ್ಬಂದಿಗೆ ಸೂಚನೆ ನೀಡಿದರು.

ಗುರು ರಾಘವೇಂದ್ರ ಬ್ಯಾಂಕ್ ಹಗರಣದ​ ಹಿನ್ನೆಲೆ

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಆದರೆ ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರೆದು ಈ ಹಣವನ್ನು ಲಾಂಡರಿಂಗ್​ ಮಾಡಿದೆ.

ಇದನ್ನೂ ಓದಿ: Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

ಫೆಬ್ರವರಿ 2022 ರಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಮನಿ ಲಾಂಡರಿಂಗ್ ಆರೋಪದ ಮೇಲೆ ಇಡಿ ಬಂಧಿಸಿತು. ಈವರೆಗೆ ಸಂಸ್ಥೆಯ ಅಧ್ಯಕ್ಷ ಸೇರಿ 4 ಮಂದಿಯನ್ನು ಬಂಧಿಸಲಾಗಿದೆ. ಬ್ಯಾಂಕ್‌​ನಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನವರಾಗಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ನಲ್ಲಿ ಠೇವಣಿ ಇಟ್ಟಿದ್ದರು.

ಗುರು ರಾಘವೇಂದ್ರ ಬ್ಯಾಂಕ್‌ ಹಾಗೂ ಗುರು ಸಾರ್ವಭೌಮ ಬ್ಯಾಂಕ್‌ನಲ್ಲಿ 1,500 ಕೋಟಿ ರೂ. ಅಕ್ರಮ, ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿರುವ ಆರೋಪವಿದೆ.

Continue Reading

ಚಾಮರಾಜನಗರ

Road Accident : ಶಾಸಕ ಎಆರ್ ಕೃಷ್ಣಮೂರ್ತಿ ಕಾರು ಅಪಘಾತ; ಚಲಿಸುತ್ತಿದ್ದಾಗಲೇ ಕಾರ್‌ ಟೈರ್‌ ಸ್ಫೋಟ

Road Accident : ಬುಧವಾರ ತಡರಾತ್ರಿ ಚಾಮರಾಜನಗರದಿಂದ ಮೈಸೂರಿನ ಮನೆಗೆ ಹೋಗುವಾಗ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಕಾರು ಅಪಘಾತವಾಗಿದೆ. ಚಲಿಸುತ್ತಿದ್ದಾಗಲೇ ಕಾರಿನ ಟೈರ್‌ ಸ್ಫೋಟಗೊಂಡು ಕಾರು ಅಪಘಾತಕ್ಕೀಡಾಗಿದೆ. ಇತ್ತ ತುಮಕೂರಿನಲ್ಲಿ ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.

VISTARANEWS.COM


on

By

Road Accident in Chamarajanagar
Koo

ಚಾಮರಾಜನಗರ/ತುಮಕೂರು: ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು (Road Accident) ಸಂಭವಿಸಿವೆ. ಮೈಸೂರಿನ ಹೊರವಲಯದ ನಾಡನಹಳ್ಳಿಯಲ್ಲಿ ಶಾಸಕ ಎಆರ್ ಕೃಷ್ಣಮೂರ್ತಿ (MLA A R Krishnamurthy) ಅವರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Road Accident

ಕೊಳ್ಳೆಗಾಲದ ಕಾಂಗ್ರೆಸ್ ಶಾಸಕ ಎಆರ್ ಕೃಷ್ಣಮೂರ್ತಿ ಬುಧವಾರ ತಡರಾತ್ರಿ ಚಾಮರಾಜನಗರದಿಂದ ಮೈಸೂರಿನ ಮನೆಗೆ ಹೋಗುವ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದಾಗಲೇ ಕಾರಿನ ಟೈರ್ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣಕ್ಕೆ ಸಿಗದೇ ಕಾರು ರಸ್ತೆ ಬಿಟ್ಟು ಪಕ್ಕಕ್ಕೆ ಇಳಿದಿದೆ.

Road Accident in Chamarajnagar

ಇದನ್ನೂ ಓದಿ: IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿ, ಇಬ್ಬರು ಸಾವು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಪರಿಣಾಮ ಬೊಲೆರೋ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತ ದುರ್ದೈವಿ. ಮೃತರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎನ್ನಲಾಗಿದೆ.

Road Accident in Tumkur

ದ್ರಾಕ್ಷಿ ತುಂಬಿಸಿಕೊಂಡು ಬೆಂಗಳೂರು ಕಡೆ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಬೊಲೆರೋ ವಾಹನ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Anant-Radhika wedding
ವಾಣಿಜ್ಯ1 min ago

Anant- Radhika  wedding: 1,500 ಕೋಟಿ ರೂ. ದಾಟಲಿದೆ ಅಂಬಾನಿ ಮಗನ ಮದುವೆ ಖರ್ಚು!

Ballari Lok Sabha constituency Congress candidate e Tukaram election campaign at apmc market
ಬಳ್ಳಾರಿ8 mins ago

Lok Sabha Election 2024: ತಾಯಿ ನಾನು ನಿಮ್ಮ ಮಗನಂತೆ, ಮತ ನೀಡಿ ಗೆಲ್ಲಿಸಿ ಎಂದ ಈ. ತುಕಾರಾಂ

Rahul Gandhi
ದೇಶ24 mins ago

Rahul Gandhi: ಅಮೇಥಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಖಚಿತ; ಸ್ಮೃತಿ ಇರಾನಿಗೆ ಕೈ ನಾಯಕ ಸವಾಲು!

DC vs GT
ಕ್ರೀಡೆ32 mins ago

DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

Heeramandi Premiere Farida Jalal rare public appearance
ಬಾಲಿವುಡ್32 mins ago

Heeramandi Premiere: ʻಹೀರಾಮಂಡಿʼ ಪ್ರೀಮಿಯರ್‌ನಲ್ಲಿ ಅಪರೂಪವಾಗಿ ಕಂಡ ʻಕಭಿ ಖುಷಿ ಕಭಿ ಗಮ್ʼ ಸಿನಿಮಾ ನಟಿ!

Murder case In davanagere
ದಾವಣಗೆರೆ32 mins ago

Murder Case : ಮನೆ ಹಾಳು ಮಾಡಿದ ಕುಡಿತ; ತಾಯಿ ಸಾವಿಗೆ, ತಂದೆಯ ಕೊಂದ ಮಗ!

Election Commission
ದೇಶ50 mins ago

ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

arunachal pradesh landslide
ವೈರಲ್ ನ್ಯೂಸ್1 hour ago

Arunachal Pradesh landslide: ಅರುಣಾಚಲದಲ್ಲಿ ಭೂಕುಸಿತ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್‌

Neha Murder case CID Officer
ಹುಬ್ಬಳ್ಳಿ1 hour ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Virender Sehwag
ಕ್ರೀಡೆ1 hour ago

Virender Sehwag: ಬಡ ದೇಶದ ಕ್ರಿಕೆಟ್​ ಲೀಗ್​ ಆಡಲ್ಲ ಎಂದ ವೀರೇಂದ್ರ ಸೆಹವಾಗ್; ಕಾರಣವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ1 hour ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20243 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌