Temple Economics: ದೇವಾಲಯಗಳಿಂದ ನಮ್ಮ ಯುವ ಉದ್ಯಮಿಗಳು ಯಾವ ಪಾಠಗಳನ್ನು ಕಲಿಯಬಹುದು? - Vistara News

ಪ್ರಮುಖ ಸುದ್ದಿ

Temple Economics: ದೇವಾಲಯಗಳಿಂದ ನಮ್ಮ ಯುವ ಉದ್ಯಮಿಗಳು ಯಾವ ಪಾಠಗಳನ್ನು ಕಲಿಯಬಹುದು?

ಪ್ರಾಚೀನತೆ, ಸಂಪ್ರದಾಯಗಳನ್ನು ಉಳಿಸಿಕೊಳ್ಳುತ್ತಲೇ ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಬದಲಾಗುತ್ತ, ಪ್ರಸ್ತುತತೆಯನ್ನು ನಮ್ಮ ದೇವಾಲಯಗಳು ಕಾಪಾಡಿಕೊಂಡು ಬರುತ್ತಿವೆ.

VISTARANEWS.COM


on

What can our young entrepreneurs learn from temples?
ಕೇರಳದ ಮುತ್ತಪ್ಪನ್ ದೇವಾಲಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಸುರೇಶ್ ನರಸಿಂಹ
ಕೆಲವೇ  ವರ್ಷಗಳ ಹಿಂದಿನ ಮಾತು. ಬೆಂಗಳೂರಿನ ಹನುಮಂತ ನಗರದ ಬಳಿಯ ಆಂಜನೇಯನ ದೇವಸ್ಥಾನದ ಮುಂದೆ ಅಂದು ಸಾಮಾನ್ಯಕ್ಕಿಂತ ಹೆಚ್ಚಿನ ಜನ ಅದರಲ್ಲೂ ವಿಶೇಷವಾಗಿ  ಬಹಳಷ್ಟು ಯುವಕ ಯುವತಿಯರು ಸೇರಿದ್ದರು.  ಆಗ ನೆನಪಾಯ್ತು ಅಂದು ಫೆಬ್ರವರಿ 14 ಎಂದು. ಅರ್ಚಕರನ್ನು ವಿಚಾರಿಸಲಾಗಿ ಆ ದಿನ ಯುವಪ್ರೇಮಿಗಳಿಗೆ ವಿಶೇಷ ಪೂಜೆಯ ಅವಕಾಶವಿದೆ ಎಂದು ತಿಳಿಯಿತು. ಹುಡುಗರು ಹುಡುಗಿಗೆ ದೇವರ ಹೂವನ್ನು ಕೊಟ್ಟು ಕುಂಕುಮ ಹಚ್ಚುವ ಕಾರ್ಯಕ್ರಮ ವಿಶೇಷ ಪೂಜೆಯ ಭಾಗ. ಆದರೆ ಹನುಮಂತನಿಗೂ ಪ್ರೇಮಿಗಳ ದಿನಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಮೂಡುವುದು ಸಹಜ. ಸೌಗಂಧಿಕಾ ಪುಷ್ಪವನ್ನು ಪಡೆಯುವ ದಾರಿಯಲ್ಲಿ ಭೀಮನಿಗೆ ಸಿಕ್ಕ ಆಂಜನೇಯನ ಆಶೀರ್ವಾದ ಹಾಗೂ ರಾಮ ಮತ್ತು ಸೀತೆಯರು ಒಂದಾಗಲು ಹನುಮಂತ ಮಾಡಿದ ಸಾಹಸದ ವಿಷಯ ಇದರ ಹಿನ್ನಲೆ. ಒಂದು ಪಾಶ್ಚಾತ್ಯ ಆಚರಣೆ, ಬ್ರಹ್ಮಚಾರಿ ಹನುಮಂತ ಮತ್ತು ನಮಗೆ ತಿಳಿದಿರುವ ಅದ್ಭುತ ಪ್ರೇಮ ದಂಪತಿಗಳ ನಡುವಿನ ಆಕರ್ಷಕ ಸಂಪರ್ಕದ ಕೊಂಡಿ ತಾನಾಗಿ ತೆರೆದುಕೊಂದಿದ್ದು ಹೀಗೆ!

ಇಂದು ಮೊದಲಿಗಿಂತ ಹೆಚ್ಚು ಜನರು ಹೊಸ ವರ್ಷ ಅಥವಾ ರಾಷ್ಟ್ರೀಯ ರಜಾದಿನಗಳಲ್ಲಿ (ಅಂತರರಾಷ್ಟ್ರೀಯ ಸಂಸ್ಥೆಗಳು ರಜಾ  ಕೊಡುವುದೇ ಆಗ) ಪ್ರವಾಸ ಕೈಗೊಳ್ಳುತ್ತಾರೆ . ಆ ದಿನಗಳಲ್ಲಿ ಭಾರತೀಯ ದೇವಾಲಯಗಳು ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವುದು ಸಾಮಾನ್ಯ.  ದೇವಾಲಯಗಳಲ್ಲಿ ಅಂದು ವಿಶೇಷ ಆಚರಣೆಗಳು, ಪೂಜೆ ಮತ್ತು ಕಾರ್ಯಕ್ರಮಗಳು ಅಷ್ಟೇ ಸಹಜವೆಂಬಂತೆ ಆಯೋಜಿಸಲಾಗುತ್ತಿದೆ. ಕಳೆದ ವರ್ಷ ಹೊಸ ವರ್ಷದ ಮೊದಲ ದಿನ ಕಾಶಿ ವಿಶ್ವನಾಥ ಧಾಮಕ್ಕೆ ಐದು ಲಕ್ಷಕ್ಕೂ ಅಧಿಕ ಭಕ್ತರು ಸೇರಿದ್ದರು ಎಂದು ವರದಿಯಾಗಿತ್ತು.  ದೇವಾಲಯಗಳು ಯುಗಾದಿಯನ್ನುಆಚಾರಿಸುವಷ್ಟೆ ಸಂಭ್ರಮದಿಂದ ಕ್ರಿಶ್ಚಿಯನ್ ಹೊಸ ವರ್ಷವನ್ನು ಆಚರಿಸುತ್ತಿವೆ. ಹಬ್ಬ ಯಾರದಾದರೇನು? ಆಚರಣೆಗೆ, ಸಂಭ್ರಮಕ್ಕೆ ಒಂದು  ನೆಪವಷ್ಟೆ!

ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ನಮ್ಮ ದೇವಾಲಯಗಳು ಬದಲಾವಣೆಗೆ ಹೊಂದಿಕೊಳ್ಳುವ ಸಾಮರ್ಥ್ಯ. ಭಾರತೀಯ ದೇವಾಲಯಗಳು ಬದಲಾದ ಕಾಲ ಮತ್ತು ಪರಿಕಲ್ಪನೆಗಳಿಗೆ ಹೊಂದಿಕೊಳ್ಳುವ ಸುದೀರ್ಘ ಇತಿಹಾಸವನ್ನು ಹೊಂದಿವೆ. ಸನಾತನ ಧರ್ಮವನ್ನು ಒಂದು ಸಂಸ್ಕೃತಿ ಮತ್ತು ಜೀವನ ವಿಧಾನವೆಂದು ಪರಿಗಣಿಸಿದರೆ ಇದರ ಅರ್ಥ ಮತ್ತಷ್ಟು ಸ್ಫುಟಗೊಳ್ಳುತ್ತದೆ. ಅಷ್ಟೇ ಅಲ್ಲ ಒಂದು ಸಂಸ್ಥೆ ಹೇಗೆ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡು, ಹೊಸ ಪರಿಕಲ್ಪನೆಗಳಿಗೆ ಹೊಂದಿಕೊಂಡು ತನ್ನ ಪ್ರಸ್ತುತತೆಯನ್ನು ವೃದ್ದಿಸಿಕೊಳ್ಳಬಹುದು ಎಂಬುದಕ್ಕೆ ಇದು ಅತ್ಯುತ್ತಮ ಉದಾಹರಣೆ. ಒಂದು ಸಾಮಾಜಿಕ ಒಕ್ಕೂಟವನ್ನಾಗಲಿ, ಉದ್ಯಮ  ಸಂಸ್ಥೆಯನ್ನಾಗಲಿ, ಸ್ತಾಪಿಸುತ್ತಿರುವ ಉದ್ಯಮಿ, ಕಾರ್ಯಕರ್ತರಿಗೆ ಮಾರ್ಗದರ್ಶಿಯೂ ಹೌದು.  

ಜಗತ್ತಿನ ಅನೇಕ ಸಂಶೋಧಕರು ಭಾರತೀಯ ದೇವಾಲಯಗಳನ್ನು  ಆರ್ಥಿಕ ಪ್ರಭಾವದ ದೃಷ್ಟಿಕೋನದಿಂದ, ವಾಸ್ತುಶಿಲ್ಪದ ದೃಷ್ಟಿಯಿಂದ ವಿಶ್ಲೇಷಿಸಿದ್ದಾರೆ. ಆದರೆ ಉದ್ಯಮಶೀಲತೆಯ, ಆವಿಷ್ಕಾರಗಳ ಮತ್ತು ಹೊಂದಿಕೊಳ್ಳುವಿಕೆಯ ದೃಷ್ಟಿಯಿಂದ ಇನ್ನೂ ಹೆಚ್ಚಿನ ಆಧ್ಯಯನದ  ಅವಕಾಶವಿದೆ. ಈ ಆದ್ಯಯನ ಇಂದಿನ ಉದ್ಯಮಿಗಳಿಗೆ ದೀರ್ಘಕಾಲೀನ ಧೃಡತೆ ಮತ್ತು ಜಾಗತಿಕವಾಗಿ ಹೊಂದಿಕೊಳ್ಳುವ ವಿಷಯಗಳಲ್ಲಿ ಉತ್ತಮ ಮೇಲ್ಪಂಕ್ತಿ ನೀಡಬಲ್ಲದು.  

ಐತಿಹಾಸಿಕವಾಗಿ ಭಾರತದಲ್ಲಿ, ಹೆಚ್ಚಿನ ದೇವಾಲಯದ ಉತ್ಸವಗಳು ಕೃಷಿ ಆಧಾರಿತ ಸಂಕ್ರಾಂತಿ, ಉಗಾದಿ, ದೀಪಾವಳಿಯಂತಹ ಹಬ್ಬಗಳ ಜೊತೆ ಹೊಂದಿಕೊಂಡಿರುವುದು ಸತ್ಯ.  ಆದರೆ ಬೇರೆ ಸ್ಥಳಗಳಿಂದ ಜನರ ವಲಸೆ ಹೆಚ್ಚಾದಂತೆ , ದೇವಾಲಯಗಳು ವಲಸಿಗರ ಆಚರಣೆಗಳನ್ನು ಪ್ರತಿಬಿಂಬಿಸಲು ಪ್ರಾರಂಭಿಸಿದವು. ಇಂದು ಉತ್ತರದ ಅನೇಕ ದೇವಾಲಯಗಳು ಓಣಂ ಅಥವಾ ಪೊಂಗಲ್ ಅನ್ನು ಆಚರಿಸುವುದು, ದಕ್ಷಿಣದ ದೇವಾಲಯಗಳು ಹೋಳಿ ಮತ್ತು ರಕ್ಷಾ ಬಂಧನವನ್ನು ಆಚರಿಸುವುದು ಸಾಮಾನ್ಯ.

ಭಾರತೀಯ ದೇವಾಲಯಗಳಲ್ಲಿ  ಸ್ಥಳೀಯ ಸಂಪ್ರದಾಯ ಅಥವಾ ಜಾನಪದ ದೇವರುಗಳಿಗೆ ಸ್ಥಾನವಿರುವುದು ವಿಶೇಷ. ಬದರಿಯ ಚಿಂಚು ಲಕ್ಷ್ಮಿಯಾಗಲಿ, ಕುಕ್ಕೆಯ ಹೊಸಲಿಗಮ್ಮನಾಗಲಿ, ಧರ್ಮಸ್ಥಳದ ಅಪ್ಪಣ್ಣನಾಗಲಿ, ನಮಗೆ ಮೂಲ ದೇವರಷ್ಟೇ ಪವಿತ್ರ. ದೇವಾಲಯಗಳು ಜನಪದ ನಂಬಿಕೆಗಳೊಂದಿಗೆ ಹೇಗೆ ಬೆಸೆದುಕೊಂಡಿವೆ ಎಂಬುದಕ್ಕೆ ಇವು ಅದ್ಭುತ ಉದಾಹರಣೆಗಳು . ಮೇಲುಕೋಟೆಯಲ್ಲಿ ಚೆಲುವನಾರಾಯಣ  ಸಂಗಾತಿ ಎಂದು ಬೀಬಿ ನಾಚಿಯಾರ್ ಅವರನ್ನು ಇಂದಿಗೂ ಪೂಜಿಸುತ್ತೇವೆ. ಈ ವಿಷಯ ಭಾರತದ ಸರ್ವಧರ್ಮ ಸಮಭಾವದ ಬಗ್ಗೆ ಹೆಮ್ಮೆಪಡುವವರಿಗೆ ಸ್ಫೂರ್ತಿದಾಯಕವಷ್ಟೆ. 

ಕೇವಲ ಸ್ಥಳೀಯ ದೇವರುಗಳಿಗೆ ಹೊಂದಿಕೊಳ್ಳುವುದಷ್ಟೇ ಅಲ್ಲ ಸ್ಥಳೀಯ ಸಾಮಾಜಿಕ ಅಗತ್ಯಗಳಿಗೆ ಹೊಂದಿಕೊಳ್ಳುವಲ್ಲಿ ದೇವಾಲಯಗಳು ನಮ್ಮಲ್ಲಿವೆ . ಕೇರಳದಲ್ಲಿ ಮುತ್ತಪ್ಪನ್ ದೇವಾಲಯದಲ್ಲಿ, ಮೀನು, ಮಾಂಸ ಮತ್ತು ಹೆಂಡ ಸಾಂಪ್ರದಾಯಿಕ ನೈವೇದ್ಯಗಳಾಗಿವೆ. ದಲಿತರ ಅಥವಾ ಅಲ್ಪಸಂಖ್ಯಾತರು ಮಾಡುವ ಯಾವುದಾದರೂ ಆಚರಣೆಯ ನಂತರವೇ ಮೆರವಣಿಗೆ ಪ್ರಾರಂಭಿಸುವ ದೇವಾಲಯಗಳು ಹಲವು, ಹೈದರಾಬಾದ್‌ನಲ್ಲಿರುವ ವೀಸಾ ಪೆರುಮಾಳ್ ದೇವಸ್ಥಾನವು H1B ವೀಸಾಗಳನ್ನು ಪಡೆಯಲು ಬರುವ ಜನರಿಗೆ ಆಗರ. ಪರೀಕ್ಷೆಗಳನ್ನು ಎದುರಿಸಲು ತಮ್ಮ ಸಮೀಪವಿರುವ ಗಣೇಶನ ದೇವಸ್ಥಾನವನ್ನು ಎಂದಿಗೂ ವಿದ್ಯಾರ್ಥಿಗಳು ನಂಬುತ್ತಾರೆ. ಒಟ್ಟಿನಲ್ಲಿ, ನಮ್ಮ ದೇವಾಲಯಗಳು ಆ ಕಾಲದ ಸಾಮಾಜಿಕ ಸ್ಥಿತಿ, ವ್ಯಾವಹಾರಿಕ ಅಗತ್ಯ, ಜನ ಜೀವನದ ನಂಬಿಕೆಯ ಜೊತೆ ಹೊಂದಿಕೊಳ್ಳುವ, ಬೆಸೆದುಕೊಳ್ಳುವ ಪರಂಪರೆಯ ಜ್ವಲಂತ ಸಾಕ್ಷಿಯಾಗಿ ನಿಲ್ಲುತ್ತವೆ.

ಭಾರತದಲ್ಲಿನ ದೇವಾಲಯಗಳು ಈ ಬದಲಾವಣೆ ಮತ್ತು ಹೊಂದಾಣಿಕೆಗಳೊಂದಿಗೆ  ಉಳಿದುಕೊಂಡಿವೆ, ವಿಸ್ತರಿಸಿವೆ ಮತ್ತು ಪ್ರಸ್ತುತವಾಗಿವೆ. ಸನ್ನಿವೇಶಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯ ಆಗಾಧವಾದದ್ದು. ಆಕರ್ಷಕವಾದ ಸಂಗತಿಯೆಂದರೆ, ಈ ಹಲವು ರೂಪಾಂತರಗಳು ಮೊದಲಿಂದಲೂ ಇದ್ದ ಸಂಪ್ರದಾಯ ,ಆಚರಣೆ, ಆಡಳಿತ, ನಿಯಮಗಳು ಮತ್ತು ಪದ್ಧತಿಗಳೊಂದಿಗೆ ಹೊಂದಿಕೊಂಡಿರುವುದು. ಹಾಗಾಗಿಯೇ ಇಂದಿಗೂ ಅನೇಕ ಜನರಿಗೆ ದೇವಾಲಯಗಳು ನೆಮ್ಮದಿ,  ಭರವಸೆ, ಶಾಂತಿ ಮತ್ತು ಮೌಲ್ಯಗಳ ಆಗರ.

ಆದರೆ ಈ ವಿಚಾರ ನಮ್ಮ ಉದ್ಯಮಿಗಳಿಗೆ ನೀಡುವ ತಿಳುವಳಿಕೆ ಇನ್ನೂ ವಿಶೇಷವಾದ್ದದು.  ಗ್ರಾಹಕರು, ನಿಯಮಗಳು ಮತ್ತು ಮಾರುಕಟ್ಟೆಯ ಬದಲಾಗುತ್ತಿರುವ ಅಗತ್ಯಗಳಿಗೆ ಹೊಂದಿಕೊಳ್ಳುವ platformಗಳನ್ನು ರಚಿಸುವಾಗ ನಮ್ಮ ಯುವ ಉದ್ಯಮಿಗಳು ದೇವಸ್ಥಾನಗಳಿಂದ ಕಲಿಯುವುದು ಬಹಳಷ್ಟಿದೆ. 

ಇಂದು ಯಾವುದೇ ಸಂಸ್ಥೆ ಬೆಳೆಯಲು ಹಲವು ಸ್ಥಳಗಳಲ್ಲಿ ವಿಸ್ತಾರಗೊಳ್ಳುವುದು ಅನಿವಾರ್ಯ, ಹಾಗೆಯೇ ಜಗತ್ತಿನ ಎಲ್ಲ ಕಡೆಯಿಂದ ಬೇಕಾದ ಪ್ರತಿಭಾವಂತಾರನ್ನು ಆಕರ್ಷಿಸುವುದು ಅಗತ್ಯ. ಹೀಗೆ ವಿಸ್ತಾರಗೊಂಡಾಗ, ಆ ಜನರಿಗೆ, ಆ ಸ್ಥಳಕ್ಕೆ ಹೊಂದಿಕೊಂಡು ಆ ಸಮಾಜಕ್ಕೆ, ಪರಿಸರಕ್ಕೆ ಉಪಯೋಗವಾಗುವಂತಹ, ಇಷ್ಟವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುಕೊಳ್ಳುವುದು ಜಾಣತನ. 

ನಮ್ಮ ದೇಗುಲಗಳು ಆ ರೀತಿಯ ಧನಾತ್ಮಕ ಯೋಚನೆಗೆ, ಯೋಜನೆಗೆ ಮೇಲ್ಪಂಕ್ತಿ. ಈ ಹೊಂದಿಕೊಳ್ಳುವ, ವಿಕಾಸನಗೊಳ್ಳುವ ಸಂಸ್ಕೃತಿ ನಮ್ಮ ದೇವಾಲಯಗಳನ್ನು ಮೀರಿ ನಮ್ಮ ಸ್ವಭಾವವನ್ನು ವ್ಯಾಪಿಸಿದೆ, ಈ ಸ್ವಭಾವವೇ ಭಾರತೀಯ ವಾಣಿಜ್ಯೋದ್ಯಮವನ್ನು ಪ್ರವರ್ಧಮಾನಕ್ಕೆ ತರುತ್ತಿದೆ.

ಲೇಖಕರು: ಮ್ಯಾನೇಜಿಂಗ್ ಪಾರ್ಟ್ನರ್, ಕೋ ಕ್ರೀಯೆಟ್ ವೆಂಚರ್ಸ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

VISTARANEWS.COM


on

ಪಶ್ಚಿಮ ಬಂಗಾಳದ ಚುನಾವಣೋತ್ತರ ಸಮೀಕ್ಷೆಯ ಟ್ರೆಂಡ್‌ ಪಕ್ಕದ ಬಾಂಗ್ಲಾದೇಶಕ್ಕೆ ಆತಂಕ ಉಂಟುಮಾಡಿದೆ. ಎಂಟು ಎಕ್ಸಿಟ್‌ ಪೋಲ್‌ಗಳ ಪೈಕಿ ಆರು ಸಮೀಕ್ಷೆಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮುನ್ಸೂಚನೆ ನೀಡಿವೆ. ಈ ಮುನ್ಸೂಚನೆಯೇ ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಸಂಸದ ಆಖ್ತರ್‌ ಹೊಸೈನ್‌ ಈ ವಿಷಯವನ್ನು ಅಲ್ಲಿನ ಸಂಸತ್ತಿನಲ್ಲಿ ಎತ್ತಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಅದು ಅಲ್ಲಿನ ಎಲ್ಲಾ ಬಾಂಗ್ಲಾದೇಶಿ ನುಸುಳುಕೋರರನ್ನು ಹೊರಗಟ್ಟುತ್ತದೆ. ಇದು ಬಾಂಗ್ಲಾದೇಶದಲ್ಲಿ ಅತಿದೊಡ್ಡ ಮಾನವೀಯ, ಅರ್ಥಿಕ ಹಾಗೂ ನಿರಾಶ್ರಿತರ ಬಿಕ್ಕಟ್ಟನ್ನು ಸೃಷ್ಟಿಸಲಿದೆ. ಇದು ನಮ್ಮ ಅತಿದೊಡ್ಡ ಆತಂಕಕ್ಕೆ ಕಾರಣವಾಗಿದೆʼʼ ಎಂದು ಹೇಳಿದ್ದಾರೆ.
ಗಡಿದಾಟಿ ಭಾರತಕ್ಕೆ ಬಂದಿರುವ ಅಕ್ರಮ ಬಾಂಗ್ಲಾ ದೇಶಿ ನುಸುಳುಕೋರರನ್ನು ಬಿಜೆಪಿ ಹೊರಗಟ್ಟಿದರೆ ಅವರಿಗೆ ಹೊಸ ನೆಲೆ ಕಲ್ಪಿಸುವುದು ಹೇಗೆ ಎಂಬ ಚಿಂತೆ ಬಾಂಗ್ಲಾದೇಶವನ್ನು ಕಾಡುತ್ತಿದೆ. ಬಾಂಗ್ಲಾದೇಶದ ಅಕ್ರಮ ನುಸುಳುಕೋರರ ಸಮಸ್ಯೆಯೇ ಪಶ್ಚಿಮ ಬಂಗಾಳದ ಅತಿದೊಡ್ಡ ಚುನಾವಣಾ ವಿಷಯವಾಗಿತ್ತು. ಅಧಿಕಾರಕ್ಕೇರಿದ ತಕ್ಷಣವೇ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವುದಾಗಿ ಬಿಜೆಪಿ ಹೇಳಿತ್ತು.

Continue Reading

Latest

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

VISTARANEWS.COM


on

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌
ಐದು ರಾಜ್ಯಗಳ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರಬಿದ್ದಿದೆ. ಅಸ್ಸಾಂನಲ್ಲಿ ಬಿಜೆಪಿ, ಕೇರಳದಲ್ಲಿ ಯುಡಿಎಫ್‌, ಪುದುಚೇರಿಯಲ್ಲಿ ಎನ್‌ಡಿಎ ಜಯಭೇರಿ ಬಾರಿಸಲಿದೆ ಎಂದು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಆದರೆ, ಪ.ಬಂಗಾಳ ಮತ್ತು ತಮಿಳುನಾಡು ಮತದಾನೋತ್ತರ ಸಮೀಕ್ಷೆಗಳು ಮಾತ್ರ ಭಿನ್ನ ಫಲಿತಾಂಶ ನೀಡಿವೆ.
ಅಸ್ಸಾಂನಲ್ಲಿ ಕಮಲ ಕಿಲಕಿಲ:
126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಸಾಧ್ಯತೆಯನ್ನು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಹಿಮಂತ ಬಿಸ್ವ ಶರ್ಮಾ ಎರಡನೇ ಅವಧಿಗೆ ಸಿಎಂ ಆಗುವ ಸಾಧ್ಯತೆ ಹೆಚ್ಚಿವೆ. ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ ಮತ್ತು ಚಾಣಕ್ಯ ಸ್ಟ್ರಾಟಜಿಸ್‌ ಬಿಜೆಪಿ ಭಾರೀ ಬಹುಮತ ದಾಖಲಿಸಲಿದೆ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್‌ ಪ್ರತಿಪಕ್ಷಕ್ಕೆ ಸೀಮಿತಗೊಳ್ಳಲಿದೆ.
ಕೇರಳಂನಲ್ಲಿ ಯುಡಿಎಫ್‌ಗೆ ಅಧಿಕಾರ?:
ಕೇರಳಂ ವಿಧಾನಸಭೆಯ ಬಲ 140. ಬಹುಮತಕ್ಕೆ 71 ಸೀಟುಗಳು ಬೇಕು. ಕೇರಳಂನಲ್ಲಿ ಹ್ಯಾಟ್ರಿಕ್‌ ದಾಖಲಿಸುವ ಎಲ್‌ಡಿಎಫ್‌ ಕನಸು ನುಚ್ಚುನೂರಾಗುವ ಸಾಧ್ಯತೆಗಳಿವೆ. ಈ ಸಲ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಾಟಿಕ್‌ ಫ್ರಂಟ್‌ – ಯುಡಿಎಫ್‌, ಜಯಭೇರಿ ಬಾರಿಸಲಿದೆ ಎಂದು ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಮನೋರಮಾ ನ್ಯೂಸ್‌ ಸಿವೋಟರ್ಸ್‌ ಮತ್ತು ಜೆವಿಸಿ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಕೇರಳಂನಲ್ಲಿ ಮೂರರಿಂದ ಏಳು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ.
ಪುದುಚೇರಿಯಲ್ಲಿ ಎನ್‌ಡಿಎ?:
ಪುದುಚೇರಿ ವಿಚಾರದಲ್ಲಿ ಎಕ್ಸಿಟ್‌ ಪೋಲ್‌ ಏಜೆನ್ಸಿಗಳಿಗೆ ಯಾವುದೇ ಅನುಮಾನ ಇಲ್ಲ. 30 ಸದಸ್ಯಬಲದ ಪುದುಚೇರಿ ಅಸೆಂಬ್ಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ದಿಗ್ವಿಜಯ ಬಾರಿಸಲಿದೆ ಎಂದು ಎಲ್ಲಾ ಚುನಾವಣೋತ್ತರ ಭವಿಷ್ಯ ನುಡಿದಿವೆ.
ಪ. ಬಂಗಾಳದಲ್ಲಿ ದೀದಿಯೋ, ಮೋದಿಯೋ?
ಪಶ್ಚಿಮ ಬಂಗಾಳದ ಎಕ್ಸಿಟ್‌ ಪೋಲ್‌ನಲ್ಲಿ ಏಕಮತ ಇಲ್ಲ. 6 ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, 4 ಸಮೀಕ್ಷೆಗಳು ಬಿಜೆಪಿ ಗೆಲುವಿನ ಭವಿಷ್ಯ ನುಡಿದಿವೆ. 2 ಸಮೀಕ್ಷೆಗಳು ಟಿಎಂಸಿಯೇ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿವೆ. ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ, ಚಾಣಕ್ಯ ಈ ನಾಲ್ಕು ಸಮೀಕ್ಷೆಗಳಲ್ಲಿ ಬಿಜೆಪಿ ಸರಿಸುಮಾರು 150ಕ್ಕೂ ಅಧಿಕ ಸೀಟು ಗಳಿಸುವ ಸಾಧ್ಯತೆಗಳಿವೆ ಎಂದು ಹೇಳಿವೆ. ಪೀಪಲ್ಸ್‌ ಪಲ್ಸ್‌, ಜನಮತ ಪೋಲ್ಸ್‌ ಈ ಎರಡೂ ಸಮೀಕ್ಷೆಗಳ ಪ್ರಕಾರ ಟಿಎಂಸಿ 170ರಿಂದ 200 ಸೀಟು ಗೆದ್ದು ಅಧಿಕಾರದಲ್ಲಿ ಮುಂದುವರಿಯಲಿದೆ. ಅಂದ ಹಾಗೆ, 294 ಸದಸ್ಯ ಬಲದ ಪ.ಬಂಗಾಳ ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 147 ಸೀಟುಗಳನ್ನು ಗೆಲ್ಲಲೇ ಬೇಕು.
ದ್ರಾವಿಡ ದಂಗಲ್‌ನಲ್ಲಿ ಅಚ್ಚರಿ ಫಲಿತಾಂಶ?:
ತಮಿಳುನಾಡಿನಲ್ಲಿ ಬಹುತೇಕ ಎಲ್ಲಾ ಎಕ್ಸಿಟ್‌ ಪೋಲ್‌ಗಳು ಡಿಎಂಕೆ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಭವಿಷ್ಯ ನುಡಿದಿವೆ. ಎಐಎಡಿಎಂಕೆ ನೇತೃತ್ವದ ಎನ್‌ಡಿಎ 50 ರಿಂದ 80 ಸ್ಥಾನಗಳನ್ನು ಗಳಿಸುವ ಸಾಧ್ಯತೆಗಳಿವೆ. ಆದರೆ, ಇಲ್ಲೊಂದು ಟ್ವಿಸ್ಟ್‌ ಇದೆ. ಆಕ್ಸಿಸ್‌ ಮೈ ಇಂಡಿಯಾ ಮಾತ್ರ ವಿಜಯ್‌ ನೇತೃತ್ವದ ಟಿವಿಕೆಗೆ ಬಹುಮತ ಸಿಗಲಿದೆ ಎಂದು ಹೇಳಿದೆ. ದಳಪತಿ ವಿಜಯ್‌ ನೇತೃತ್ವದ ಟಿವಿಕೆ ತನ್ನ ಚೊಚ್ಚಲ ಯತ್ನದಲ್ಲೇ 98ರಿಂದ 120 ಸ್ಥಾನ ಗಳಿಸುವ ಸಾಧ್ಯತೆಗಳಿವೆ ಎಂದು ಆಕ್ಸಿಸ್‌ ಮೈ ಇಂಡಿಯಾ ಹೇಳಿವೆ. 234 ಸದಸ್ಯಬಲದ ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 117 ಸೀಟುಗಳು ಬೇಕು.

Continue Reading

Latest

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

VISTARANEWS.COM


on

ದ್ರಾವಿಡ ದಂಗಲ್‌ನಲ್ಲಿ ಅಚ್ಚರಿಯ ಫಲಿತಾಂಶದ ಸಾಧ್ಯತೆಯೊಂದನ್ನು ಎಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಟಿಸಿದೆ. ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಟಿವಿಕೆ ನಾಯಕ ವಿಜಯ್‌ ಮೊದಲ ಪ್ರಯತ್ನದಲ್ಲೇ ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ. ತಮಿಳುನಾಡಿನ ಎಲ್ಲಾ ಸಮೀಕ್ಷೆಗಳು ಡಿಎಂಕೆ ಅಧಿಕಾರಕ್ಕೇರಲಿದೆ ಎಂದು ಹೇಳುತ್ತಿರುವಾಗಲೇ, ಆಕ್ಸಿಸ್‌ ಮೈ ಇಂಡಿಯಾ ಮಾತ್ರ ಈ ಸಲ ವಿಜಯ್‌ ನಿಜವಾದ ಜನನಾಯಗನ್‌ ಎಂದಿದೆ.
ತಮಿಳುನಾಡಿನ ಸಾರಥ್ಯ ವಿಜಯ್‌ಗೆ?
ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಟಿವಿಕೆಗೆ 98 ರಿಂದ 120 ಸೀಟುಗಳು ಸಿಗಲಿವೆ. ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟಕ್ಕೆ 92ರಿಂದ 110 ಹಾಗೂ 22ರಿಂದ 32 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲ್ಲುವ ಸಾಧ್ಯತೆಗಳಿವೆ. 234 ಸದಸ್ಯಬಲದ ತಮಿಳುನಾಡು ಅಸೆಂಬ್ಲಿಯಲ್ಲಿ 117 ಸೀಟು ಗೆಲ್ಲುವ ಪಕ್ಷದ ನಾಯಕ ಮುಖ್ಯಮಂತ್ರಿ ಆಗ್ತಾರೆ. ಸಮೀಕ್ಷೆ ಪ್ರಕಾರ ಟಿವಿಕೆ ಗರಿಷ್ಠ 120 ಸೀಟು ಗೆಲ್ಲುವ ಸಾಧ್ಯತೆಗಳಿವೆ.̇̇̇
ವೋಟ್‌ ಶೇರ್‌ನಲ್ಲೂ ಟಿವಿಕೆ ದಿಗ್ವಿಜಯ?
ಆಕ್ಸಿಸ್‌ ಮೈ ಇಂಡಿಯಾ ವೋಟ್‌ ಶೇರ್‌ ಸಮೀಕ್ಷೆಯನ್ನೂ ಪ್ರಕಟಿಸಿದೆ. ಅದರ ಪ್ರಕಾರ ಟಿವಿಕೆಗೆ ಶೇಕಡಾ 35ರಷ್ಟು ಮತ ಸಿಗಲಿದೆ. ಸ್ಟಾಲಿನ್‌ ನೇತೃತ್ವದ ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟಕ್ಕೂ ಶೇ. 35ರಷ್ಟು ವೋಟ್‌ ಶೇರ್‌ ಸಿಗಲಿದೆ. ಎನ್‌ಡಿಎಗೆ 23 ಶೇಕಡಾ ಮತ ಸಿಗುವ ಸಾಧ್ಯತೆಗಳಿವೆ.
ಸಿಎಂ ಸ್ಥಾನಕ್ಕೆ ವಿಜಯ್‌ ಬೆಸ್ಟ್‌?
ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಉತ್ತಮ ಅಭ್ಯರ್ಥಿ ಎಂಬ ಪ್ರಶ್ನೆಯನ್ನೂ ಆಕ್ಸಿಸ್‌ ಮೈ ಇಂಡಿಯಾ ಜನರ ಮುಂದಿಟ್ಟಿದೆ. ಅದರ ಪ್ರಕಾರ ಶೇ. 37ರಷ್ಟು ಮತದಾರರು ವಿಜಯ್‌ ಪರ ಒಲವು ತೋರಿದ್ದಾರೆ. ಶೇ. 35ರಷ್ಟು ಮಂದಿ ಮಾತ್ರ ಸ್ಟಾಲಿನ್‌ ಬೆಸ್ಟ್‌ ಅಂದಿದ್ದಾರೆ.
ವಿಜಯ್‌ಗೆ ಯುವ ಸಮೂಹದ ಬೆಂಬಲ
ಸರ್ವೇ ಪ್ರಕಾರ ಶೇ. 68ರಷ್ಟು ಹೊಸ ವೋಟರ್ಸ್‌ ವಿಜಯ್‌ಗೆ ಬೆಂಬಲ ನೀಡಿದ್ದಾರೆ. 20ರಿಂದ 29 ವಯೋಮಾನದ ಶೇ. 59ರಷ್ಟು ಯುವಕರು ಟಿವಿಕೆಗೆ ಜೈ ಎಂದಿದ್ದಾರೆ. 30-39 ವಯೋಮಾನದ ಶೇ. 45 ಮಂದಿ ದಳಪತಿಯನ್ನು ದಡಮುಟ್ಟಿಸಿದ್ದಾರೆ ಎನ್ನುತ್ತಿದೆ ಸಮೀಕ್ಷೆ.

Continue Reading

Latest

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

VISTARANEWS.COM


on

ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳುವ ಮೂಲಕ ನಾಯಕತ್ವ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಕಲಬುರಗಿಯಲ್ಲಿ ಇಂದು ಮಾತನಾಡಿದ ಅವರು ಈಗಾಗಲೇ ರಾಜ್ಯದಲ್ಲಿ ಸಿಎಂ ಇದ್ದಾರೆ. ಹೀಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಭವಿಷ್ಯದಲ್ಲಿ ಅಂಥ ಪರಿಸ್ಥಿತಿ ಬಂದರೆ ನಾವು ಎಲ್ಲರೂ ಕೂಡಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ಏನು ಹೇಳುತ್ತಾರೆ ಎನ್ನುವುದಕ್ಕಿಂತ ಪಕ್ಷದ ಐಡಿಯಾಲಜಿ ಮತ್ತು ಹಲವು ವರ್ಷಗಳ ಪರಿಶ್ರಮ ಮುಖ್ಯ ಎಂದು ಹೇಳಿಕೆ ನೀಡಿದ್ದಾರೆ. ಪಕ್ಷದ ಮಹತ್ವದ ನಿರ್ಧಾರಗಳನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

Continue Reading
Advertisement
Latest5 hours ago

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

Latest10 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest11 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest2 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest2 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest2 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest2 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest2 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest2 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌