90 ದಿನಗಳ ಕಾಲ ಕೆಂಗೇರಿ ವಿದ್ಯುತ್‌ ಚಿತಾಗಾರ ಸ್ಥಗಿತ - Vistara News

ಬೆಂಗಳೂರು

90 ದಿನಗಳ ಕಾಲ ಕೆಂಗೇರಿ ವಿದ್ಯುತ್‌ ಚಿತಾಗಾರ ಸ್ಥಗಿತ

ಕೆಂಗೇರಿ ವಿದ್ಯುತ್‌ ಚಿತಾಗಾರವನ್ನು ತಾತ್ಕಾಲಿಕವಾಗಿ 90 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಇದರ ಮಾಹಿತಿ ಇಲ್ಲಿದೆ.

VISTARANEWS.COM


on

ವಿದ್ಯುತ್‌ ಚಿತಾಗಾರ ತಾತ್ಕಾಲಿಕ ಸ್ಥಗಿತ
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉನ್ನತೀಕರಣ ಕಾಮಗಾರಿ ಕೈಗೊಂಡಿರುವುದರಿಂದ ನಗರದ ಕೆಂಗೇರಿ ವಿದ್ಯುತ್ ಚಿತಾಗಾರವನ್ನು ಜುಲೈ 16ರಿಂದ ಅಕ್ಟೋಬರ್‌14ರವರೆಗೆ (90 ದಿನಗಳು) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಕೆಂಗೇರಿ ವಿದ್ಯುತ್ ಚಿತಾಗಾರಲ್ಲಿರುವ ಹಾರಿಜಾಂಟಲ್‌ ಕಾಯಿಲ್‌ ಮೌಂಟಿಂಗ್‌ (Horizontal Coil Mounting) ವಿನ್ಯಾಸದಿಂದ ವರ್ಟಿಕಲ್‌ ಕಾಯಿಲ್‌ ಮೌಂಟಿಂಗ್‌ (Vertical Coil Mounting) ವಿನ್ಯಾಸಕ್ಕೆ ಬದಲಿಸುವ ಕಾಮಗಾರಿ ನಡೆಯುತ್ತಿದೆ.

ಹೀಗಾಗಿ ಸಾರ್ವಜನಿಕರು ಈ ಚಿತಾಗಾರಕ್ಕೆ ಮೃತ ದೇಹಗಳನ್ನು ತರುವ ಬದಲು ಪೀಣ್ಯ ಅಥವಾ ಸುಮ್ಮ‌ನಹಳ್ಳಿ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ವಿದ್ಯುತ್‌ ಬಿಲ್ ಪಾವತಿಗೆ 6 ತಿಂಗಳ ಕಾಲಾವಕಾಶ ಇಲ್ಲ: ಬೆಸ್ಕಾಂ ಸ್ಪಷ್ಟನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Swiggy fined: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲ; ಸ್ವಿಗ್ಗಿಗೆ 5000 ರೂ. ದಂಡ ವಿಧಿಸಿದ ಕೋರ್ಟ್!

Swiggy fined: ಸೇವೆಯಲ್ಲಿ ನ್ಯೂನ್ಯತೆ ಮತ್ತು ಮೋಸದ ವ್ಯಾಪಾರ ಮಾಡಿದ ಕಾರಣ ಗ್ರಾಹಕನಿಗೆ 5000 ರೂ ಪರಿಹಾರ ನೀಡಲು ಸ್ವಿಗ್ಗಿ ಸಂಸ್ಥೆಗೆ ಗ್ರಾಹಕ ನ್ಯಾಯಾಲಯ ಸೂಚಿಸಿದೆ.

VISTARANEWS.COM


on

Swiggy fined
Koo

ಬೆಂಗಳೂರು: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲವಾದ ಸ್ವಿಗ್ಗಿ ಸಂಸ್ಥೆಗೆ (Swiggy fined), ಗ್ರಾಹಕ ನ್ಯಾಯಾಲಯವು ವ್ಯಾಜ್ಯ ವೆಚ್ಚ ಸೇರಿ 5000 ರೂ. ದಂಡ ವಿಧಿಸಿದೆ. 2023ರಲ್ಲಿ ಗ್ರಾಹಕರೊಬ್ಬರು ಸ್ವಿಗ್ಗಿ ಆ್ಯಪ್‌ ಮೂಲಕ ಐಸ್‌ ಕ್ರೀಂ ಬುಕ್‌ ಮಾಡಿದ್ದರು. ಅದರೆ, ಐಸ್‌ ಕ್ರೀಂ ಡೆಲಿವರಿ ಮಾಡುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಗ್ರಾಹಕರೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಆರ್ಡರ್ ಮಾಡಿದ ಉತ್ಪನ್ನವನ್ನು ದೂರುದಾರರಿಗೆ ತಲುಪಿಸದಿದ್ದರೂ ಹಣ ಮರುಪಾವತಿ ಮಾಡಿರಲಿಲ್ಲ. ಸ್ವಿಗ್ಗಿ ಕಡೆಯಿಂದ ತಪ್ಪು ನಡೆದಿದೆ ಎಂದು ದೂರುದಾರರು ಸಾಬೀತುಪಡಿಸಿದ್ದಾರೆ. ಇದು ಮೋಸದ ವ್ಯಾಪಾರವಾಗಿದ್ದು, ಗ್ರಾಹಕನಿಗೆ ವ್ಯಾಜ್ಯ ಶುಲ್ಕ 2000 ರೂ. ಹಾಗೂ ಪರಿಹಾರ 3000 ರೂ. ನೀಡಬೇಕು ಎಂದು ಸ್ವಿಗ್ಗಿ ಸಂಸ್ಥೆಗೆ ಕೋರ್ಟ್‌ ಸೂಚನೆ ನೀಡಿದೆ.

2023ರ ಜನವರಿಯಲ್ಲಿ ನಗರದಲ್ಲಿ ಗ್ರಾಹಕರೊಬ್ಬರು, ಸ್ವಿಗ್ಗಿ ಆ್ಯಪ್‌ ಮೂಲಕ ಚಾಕೋಲೆಟ್‌ ಐಸ್‌ ಕ್ರೀಂ ಅನ್ನು ಆರ್ಡರ್‌ ಮಾಡಿದ್ದರು. ಆದರೆ, ಐಸ್‌ ಕ್ರೀಂ ಡೆಲಿವರಿ ಆಗದಿದ್ದರೂ, ತಲುಪಿದೆ ಎಂದು ಸಂದೇಶ ಬಂದಿತ್ತು. ಇದರಿಂದ ಗ್ರಾಹಕ, ನ್ಯಾಯಾಲಯದ ಮೊರೆ ಹೋಗಿದ್ದರು.

ಸ್ವಿಗ್ಗಿ ಸಂಸ್ಥೆಯು, ತಾವು ಗ್ರಾಹಕರು ಮತ್ತು ಥರ್ಡ್-ಪಾರ್ಟಿ ರೆಸ್ಟೋರೆಂಟ್‌ ಅಥವಾ ವ್ಯಾಪಾರಿಗಳ ನಡುವಿನ ಮಧ್ಯವರ್ತಿಯಾಗಿದ್ದೇವೆ. ಡೆಲಿವರಿ ಬಾಯ್‌ ತಪ್ಪಿಗೆ ತಮ್ಮನ್ನು ಹೊಣೆಗಾರನನ್ನಾಗಿ ಮಾಡಲು ಸಾಧ್ಯವಿಲ್ಲ ಮತ್ತು ಆ ಸಮಯದಲ್ಲಿ ಆರ್ಡರ್ ಅನ್ನು ತಲುಪಿಸಲಾಗಿದೆಯೇ ಎಂದು ಪರಿಶೀಲಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿತ್ತು.

ಇದನ್ನೂ ಓದಿ | MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ವಿಜಯಕುಮಾರ್ ಎಂ ಪಾವಲೆ, ವಿ ಅನುರಾಧಾ ಮತ್ತು ರೇಣುಕಾದೇವಿ ದೇಶಪಾಂಡೆ ಅವರನ್ನೊಳಗೊಂಡ ನ್ಯಾಯಪೀಠ, ಹಣ ಮರುಪಾವತಿಗಾಗಿ ಗ್ರಾಹಕ ನೀಡಿದ ಕಾನೂನು ನೋಟಿಸ್‌ಗೆ ಪ್ರತಿಕ್ರಿಯಿಸುವಲ್ಲಿ ಸ್ವಿಗ್ಗಿ ವಿಫಲವಾಗಿದೆ ಎಂದು ಕೋರ್ಟ್‌ ಗಮನಿಸಿದೆ. ಇನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಹೊಣೆಗಾರಿಕೆಯಿಂದ ಮಧ್ಯವರ್ತಿಗಳನ್ನು ರಕ್ಷಿಸಲಾಗಿದೆ ಎಂಬ ಸ್ವಿಗ್ಗಿಯ ವಾದವನ್ನು ತಿರಸ್ಕರಿಸಿರುವ ಕೋರ್ಟ್, ಈ ವಿನಾಯಿತಿ ಕೇವಲ ಮಾಹಿತಿಯ ಪ್ರಸಾರಕ್ಕೆ ಸೀಮಿತವಾಗಿದ್ದು, ಸರಕು ಮತ್ತು ಸೇವೆಗಳ ಮಾರಾಟಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ಸೇವೆಯಲ್ಲಿ ನ್ಯೂನ್ಯತೆ ಮತ್ತು ಮೋಸದ ವ್ಯಾಪಾರ ಮಾಡಿದ ಕಾರಣ ಐಸ್‌ ಕ್ರೀಂಗೆ ನೀಡಿದ್ದ 187 ರೂ. ಮಾತ್ರವಲ್ಲದೇ ವ್ಯಾಜ್ಯ ವೆಚ್ಚ ಹಾಗೂ ಪರಿಹಾರ ಸೇರಿ 5000 ರೂ.ಗಳನ್ನು ಗ್ರಾಹಕನಿಗೆ ನೀಡಲು ಸ್ವಿಗ್ಗಿ ಸಂಸ್ಥೆಗೆ ಸೂಚಿಸಲಾಗಿದೆ.

Continue Reading

ಪ್ರಮುಖ ಸುದ್ದಿ

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

Hassan Pen Drive Case: ಹಾಸನದ ಅಶ್ಲೀಲ ವಿಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆಗೆ ಆದೇಶ ಹೊರಡಿಸಿದೆ. ಇದಕ್ಕೂ ಮೊದಲೇ ಸಂಸದ ವಿದೇಶಕ್ಕೆ ಹೋಗಿದ್ದಾರೆ.

VISTARANEWS.COM


on

Hassan Pen Drive Case
Koo

ದೇವನಹಳ್ಳಿ: ಹಾಸನದ ಅಶ್ಲೀಲ ವಿಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ ರಾತ್ರಿ ಎಸ್‌ಐಟಿ ರಚನೆಗೆ ಆದೇಶ ಹೊರಡಿಸಿದೆ. ಆದರೆ, ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan Pen Drive Case) ಅವರು ವಿದೇಶಕ್ಕೆ ಹೋಗಿರುವುದು ಕಂಡುಬಂದಿದೆ. ಶನಿವಾರ ಮುಂಜಾನೆ ಮೂರು ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ.

LH 755 ಲುಫ್ತಾನ್ಸಾ (Lufthansa airlines) ಏರ್‌ಲೈನ್ಸ್ ಮೂಲಕ ಕೆಐಎಎಲ್‌ನಿಂದ ಜರ್ಮನಿಯ ಫ್ರಾಂಕ್ ಫರ್ಟ್‌ಗೆ ಪ್ರಜ್ವಲ್‌ ರೇವಣ್ಣ ಅವರು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಸರ್ಕಾರವು ಎಸ್‌ಐಟಿ ತನಿಖೆಗೆ ಆದೇಶ ಮಾಡುವ ಮುಂಚೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ.

ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಸ್ಪರ್ಧಿಸಿರುವ ಹಾಸನ ಸೇರಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿತ್ತು. ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಅವರು ವಿದೇಶಕ್ಕೆ ಹೋಗಿರಬಹುದು ಎನ್ನಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hasan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ. ಈ ಕುರಿತು ಸಿಎಂ ಶನಿವಾರ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಮಹಿಳಾ ಆಯೋಗದ ಪತ್ರ ಇಲ್ಲಿದೆ

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೋಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Continue Reading

ಬೆಂಗಳೂರು

TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

TCS World 10K: ಕರ್ನಾಟಕದ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಮತ್ತು ಕೆಎಎ ಅಧ್ಯಕ್ಷ ಮತ್ತು ಬ್ಯಾಸ್ಕೆಟ್ ಬಾಲ್ ಫೆಡರೇಶನ್ ಅಧ್ಯಕ್ಷ ಕೆ.ಗೋವಿಂದರಾಜ್ ಸೇರಿದಂತೆ ಗಣ್ಯರು ರೇಸ್ ಗೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಮಾಣೆಕ್ ಶಾ ಪರೇಡ್​ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಪರೇಡ್ ಮೈದಾನದ ಪ್ರವೇಶದ್ವಾರದ ಮುಂಭಾಗದ ರಸ್ತೆಯಲ್ಲಿ ಎಲ್ಲಾ ವಿಭಾಗಗಳ ಓಟಕ್ಕೆ ಹಸಿರು ನಿಶಾನೆ ತೋರಲಾಗುತ್ತದೆ. ಪದಕ ಪ್ರದಾನ ಸಮಾರಂಭವು ಮೈದಾನದ ಒಳಗೆ ನಡೆಯಲಿದೆ.

VISTARANEWS.COM


on

TCS World 10K
Koo

ಬೆಂಗಳೂರು: ಏಪ್ರಿಲ್ 28ರಂದು (ಭಾನುವಾರ) ಟಿಸಿಎಸ್ ವರ್ಲ್ಡ್ 10ಕೆ (TCS World 10K) ಬೆಂಗಳೂರು ಟೂರ್ನಿಯಲ್ಲಿ ಭಾರತದ ಸ್ಟಾರ್ ಅಥ್ಲೀಟ್​​ಗಳು ಓಟದ ಕಣಕ್ಕೆ ಇಳಿಯಲಿದ್ದಾರೆ. ಬೆಂಗಳೂರಿನ ಬೀದಿಗಳಲ್ಲಿ ಆಯೋಜಿಸಲಾದ ಈ ಓಟವು ಒಟ್ಟು 1.75 ಕೋಟಿ ರೂಪಾಯಿ (2,10000 ಯುಎಸ್ ಡಾಲರ್) ಬಹುಮಾನವನ್ನು ಹೊಂದಿದೆ. 67 ಅಥ್ಲೀಟ್​ಗಳನ್ನು ಒಳಗೊಂಡಿರುವ ಭಾರತೀಯ ಎಲೈಟ್ ಶ್ರೇಣಿಯಲ್ಲಿ ಪುರುಷರ ಮತ್ತು ಮಹಿಳಾ ವಿಜೇತರಿಗೆ ತಲಾ 2,75,000 ರೂ.ಗಳ ನಗದು ನಗದು ಬಹುಮಾನ ಮತ್ತು ಕೋರ್ಸ್ ದಾಖಲೆಯನ್ನು ಮುರಿದರೆ ಇನ್ನೂ 1,00,000 ರೂ.ಗಳ ಬೋನಸ್ ದೊರೆಯಲಿದೆ.

ಕರ್ನಾಟಕದ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಮತ್ತು ಕೆಎಎ ಅಧ್ಯಕ್ಷ ಮತ್ತು ಬ್ಯಾಸ್ಕೆಟ್ ಬಾಲ್ ಫೆಡರೇಶನ್ ಅಧ್ಯಕ್ಷ ಕೆ.ಗೋವಿಂದರಾಜ್ ಸೇರಿದಂತೆ ಗಣ್ಯರು ರೇಸ್ ಗೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಮಾಣೆಕ್ ಶಾ ಪರೇಡ್​ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ.

ರೇಸ್​ ಸಮಯ ಈ ರೀತಿ ಇದೆ

  • ಓಪನ್ 10K ಮತ್ತು ಪೊಲೀಸ್ ಕಪ್ – ಬೆಳಿಗ್ಗೆ 5:10
  • ವಿಶ್ವ 10K ಮಹಿಳೆಯರು – ಬೆಳಿಗ್ಗೆ 6:40
  • ವಿಶ್ವ 10K ಪುರುಷರು – ಬೆಳಿಗ್ಗೆ 7:30
  • ಮಜ್ಜಾ ರನ್ – ಬೆಳಿಗ್ಗೆ 8:15
  • ಚಾಂಪಿಯನ್ಸ್ ವಿತ್ ಡಿಸೆಬಿಲಿಟಿಸ್ ಮತ್ತು ಸಿಲ್ವರ್ ರನ್ – ಬೆಳಿಗ್ಗೆ 8:40

ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಪರೇಡ್ ಮೈದಾನದ ಪ್ರವೇಶದ್ವಾರದ ಮುಂಭಾಗದ ರಸ್ತೆಯಲ್ಲಿ ಎಲ್ಲಾ ವಿಭಾಗಗಳ ಓಟಕ್ಕೆ ಹಸಿರು ನಿಶಾನೆ ತೋರಲಾಗುತ್ತದೆ. ಪದಕ ಪ್ರದಾನ ಸಮಾರಂಭವು ಮೈದಾನದ ಒಳಗೆ ನಡೆಯಲಿದೆ.

ಹಾಲಿ ಚಾಂಪಿಯನ್ ತಮ್ಶಿ ಸಿಂಗ್ ಮತ್ತು ನ್ಯಾಷನಲ್ ಕೋರ್ಸ್ ರೆಕಾರ್ಡ್ ಹೋಲ್ಡರ್ ಸಂಜೀವಿನಿ ಜಾಧವ್ ಅವರು ಭಾರತದ ಮಹಿಳಾ ಓಟಗಾರರನ್ನು ಮುನ್ನಡೆಸಲಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಗೋಲ್ಡ್ ಲೇಬಲ್ ರೋಡ್ ರೇಸ್​​ ಮುಂಚಿತವಾಗಿ ಮಾತನಾಡಿದ ಸಂಜೀವಿನಿ ಜಾಧವ್, “ನನ್ನ ತರಬೇತಿ ಉತ್ತಮವಾಗಿ ನಡೆಯುತ್ತಿದೆ. ನಾನು ಭಾನುವಾರ ಸ್ಪರ್ಧೆಯನ್ನು ಎದುರು ನೋಡುತ್ತಿದ್ದೇನೆ. ನನ್ನ ಅತ್ಯುತ್ತಮ ಪ್ರದರ್ಶನ ನೀಡುವುದು ನನ್ನ ಗುರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

ಭಾರತೀಯ ಎಲೈಟ್​ ಮಹಿಳಾ ಓಟಗಾರರಲ್ಲಿ ಸಂಘಮಿತ್ರ ಮಹತಾ, ಪೂನಂ ದಿನಕರ್ ಸೋನುನೆ, ಏಕ್ತಾ ರಾವತ್, ಉಜಾಲಾ, ಪ್ರೀನು ಯಾದವ್, ಫೂಲನ್ ಪಾಲ್, ಭಾರತಿ ನೈನ್, ಚಾವಿ ಯಾದವ್ ಮತ್ತು ಸೀಮಾ ಕೂಡ ಮುಂಚೂಣಿಯಲ್ಲಿದ್ದಾರೆ.

ಪುರುಷರ ಸಾಲಿನಲ್ಲಿ ಯಾರ್ಯಾರು?

ಭಾರತೀಯ ಪುರುಷರ ಸಾಲಿನಲ್ಲಿ ಕಳೆದ ವರ್ಷದ ರನ್ನರ್ ಅಪ್ ಹರ್ಮನ್​ಜೋತ್​ ಸಿಂಗ್ 30:00 ನಿಮಿಷಗಳ ತಮ್ಮ ವೈಯಕ್ತಿಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರು ಈ ಬಾರಿ ಭರವಸೆ ಮೂಡಿಸಿದ್ದಾರೆ.

30 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ

ಟಿಸಿಎಸ್ ವರ್ಲ್ಡ್ 10 ಕೆಯಲ್ಲಿ ಈ ಬಾರಿ ಬೆಂಗಳೂರಿನ ಗ್ರೌಂಡ್ ಮತ್ತು ವರ್ಚುವಲ್ ವಿಭಾಗಗಳಲ್ಲಿ 30,000 ಕ್ಕೂ ಹೆಚ್ಚು ಭಾಗವಹಿಸಲಿದ್ದಾರೆ. ಉತ್ತಮ್ ಚಂದ್, ನಿತೇಂದ್ರ ಸಿಂಗ್ ರಾವತ್, ಧರ್ಮೇಂದ್ರ, ವಿವೇಕ್ ಸಿಂಗ್ ಮೋರೆ, ಸಂದೀಪ್ ಸಿಂಗ್, ದಿನೇಶ್, ದೀಪಕ್ ಭಟ್, ಮೋಹನ್ ಸೈನಿ, ಅಮೃತ್ ಸಿಂಗ್ ಬೋಹ್ರಾ ಮತ್ತು ಸಂದೀಪ್ ದೇವ್ರಾರಿ ರೇಸ್ನಲ್ಲಿ ಸ್ಪರ್ಧಿಸುತ್ತಿರುವ ಇತರ ಭಾರತೀಯ ಪುರುಷ ಕ್ರೀಡಾಪಟುಗಳು.

Continue Reading

ಕರ್ನಾಟಕ

Assault Case: ಬೆಂಗಳೂರಲ್ಲಿ ಟೀ ಶಾಪ್ ಯುವಕನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಯುವಕರು

Assault Case: ಟೀ‌, ಸಿಗರೇಟ್‌ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಎಂದಿದ್ದಕ್ಕೆ ಟೀ ಶಾಪ್‌ ಯುವಕನಿಗೆ, ಮುಸ್ಲಿಂ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ.

VISTARANEWS.COM


on

Assault Case
Koo

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಟೀ‌, ಸಿಗರೇಟ್‌ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಅಂದಿದ್ದಕ್ಕೆ ಅನ್ಯ ಧರ್ಮೀಯ ಯುವಕರು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರಿಂದ ಟೀ ಶಾಪ್ ಯುವಕನ ತಲೆಗೆ ಗಂಭೀರ ಗಾಯವಾಗಿದೆ.

ಚೇತನ್‌ ಹಲ್ಲೆಗೊಳಗಾದ ಯುವಕ. ಟೀ‌, ಸಿಗರೇಟ್‌ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಎಂದಿದ್ದಕ್ಕೆ ಮುಸ್ಲಿಂ ಯುವಕರು, ಟೀ ಶಾಪ್‌ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕೆಟ್ಟ ಪದ ಬಳಸಿದಕ್ಕೆ ಟೀ ಶಾಪ್ ಯುವಕ ಪ್ರಶ್ನಿಸಿದ್ದಾನೆ. ಈ ವೇಳೆ ಇಬ್ಬರು ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ನಂತರ ಬಿಯರ್ ಬಾಟಲಿನಿಂದ ಟೀ ಶಾಪ್ ಯುವಕನ ಮೇಲೆ ಅನ್ಯಧರ್ಮೀಯ ಯುವಕರು ಹಲ್ಲೆ ನಡೆಸಿದ್ದಾರೆ.

ಗಲಾಟೆಯಲ್ಲಿ ಟೀ ಶಾಪ್‌ ಯುವಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಅನ್ಯಧರ್ಮಿಯ ಯುವಕರಿಗೂ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

ಅವಾಚ್ಯ ಪದಗಳ ಬಳಕೆ ಮಾಡಿ ಬಿಯರ್ ಬಾಟಲ್‌ನಿಂದ ಹಲ್ಲೆ ಮಾಡಿದ್ದಲ್ಲದೆ ಆಸ್ಪತ್ರೆಯಲ್ಲಿ ಮುಸ್ಲಿಂ ಯುವಕರು ಮತ್ತೆ ಧಮ್ಕಿ‌ ಹಾಕಿದ್ದಾರೆ. ಹಲ್ಲೆ ಮಾಡುವ ವೇಳೆ ತಡೆಯಲು ಬಂದ ಸ್ಥಳೀಯ ಯುವಕನ ಮೇಲೂ ಹಲ್ಲೆ ನಡೆಸಲಾಗಿದೆ. ಗಲಾಟೆ ನಂತರ ಎರಡು ಕಡೆಯಿಂದ ಕಾಟನ್ ಪೇಟೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಪೊಲೀಸರು ಸದ್ಯ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

Murder case in Belgavi

ಬೆಳಗಾವಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು (murder Case) ಬಲಿಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ದುರ್ದೈವಿ. ಜೋತಿಭಾ ತುಕಾರಾಮ ಬಾಬಾಬರ ಕೊಲೆ ಆರೋಪಿ.

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾರೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading
Advertisement
Swiggy fined
ಬೆಂಗಳೂರು2 hours ago

Swiggy fined: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲ; ಸ್ವಿಗ್ಗಿಗೆ 5000 ರೂ. ದಂಡ ವಿಧಿಸಿದ ಕೋರ್ಟ್!

Vistara Editorial
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕರ್ನಾಟಕ3 hours ago

Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

IPL 2024
ಪ್ರಮುಖ ಸುದ್ದಿ3 hours ago

IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

CBI Raid
ದೇಶ3 hours ago

CBI Raid: ಸಂದೇಶ್‌ಖಾಲಿ ಟಿಎಂಸಿ ನಾಯಕನ ಆಪ್ತನ ಮನೆಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರದ ಮೂಲ ಪತ್ತೆ

Hassan Pen Drive Case
ಪ್ರಮುಖ ಸುದ್ದಿ3 hours ago

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

KL Rahul
ಕ್ರಿಕೆಟ್3 hours ago

KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

Modi in Karnataka
ಪ್ರಮುಖ ಸುದ್ದಿ4 hours ago

Modi in Karnataka: ಬೆಳಗಾವಿಗೆ ಆಗಮಿಸಿದ ಪ್ರಧಾನಿ‌ ಮೋದಿ; ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ

Hasan pen drive case
ಹಾಸನ4 hours ago

Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Air Force Chopper
ದೇಶ5 hours ago

Air Force Chopper: ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 202410 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ14 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ21 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ3 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌