Site icon Vistara News

ಬೆಂಗಳೂರು | ಗಣ್ಯರ ಭೇಟಿ ಹಿನ್ನೆಲೆಯಲ್ಲಿ ಸೆ.26ರಿಂದ ಕೆಲ ಮಾರ್ಗಗಳ ಸಂಚಾರ ವ್ಯವಸ್ಥೆ ಬದಲು

ಸಂಚಾರ ವ್ಯವಸ್ಥೆ

ಬೆಂಗಳೂರು: ನಗರಕ್ಕೆ ಸೆ.26ರಿಂದ ಸೆ.28ರವರೆಗೆ ವಿವಿಧ ಗಣ್ಯರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಕಬ್ಬನ್‌ಪಾರ್ಕ್‌ ಮತ್ತು ಅಶೋಕನಗರ ಸಂಚಾರ ಪೊಲೀಸ್‌ ವ್ಯಾಪ್ತಿಯಲ್ಲಿನ ಕೆಲ ಮಾರ್ಗಗಳ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಈ ಕೆಳಕಂಡ ಏಕಮುಖ ಸಂಚಾರ ರಸ್ತೆಗಳನ್ನು ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಗಳನ್ನಾಗಿ ಮಾರ್ಪಡಿಸಲಾಗಿದೆ.

  1. ಸೆ.25ರಿಂದ 27ರವರೆಗೆ ಕಬ್ಬನ್‌ಪಾರ್ಕ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ರಾಜಭವನ ರಸ್ತೆಯನ್ನು ರಾಜಭವನ ಮುಖ್ಯದ್ವಾರದಿಂದ ಪೊಲೀಸ್ ತಿಮ್ಮಯ್ಯ ವೃತ್ತದವರೆಗೆ ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಮಾರ್ಪಡಿಸಿದ್ದು, ಗಣ್ಯ ವ್ಯಕ್ತಿಗಳ ಕಾನ್ವಾಯ್ ಸಂಚರಿಸುವ ಸಮಯದಲ್ಲಿ ಮಾತ್ರ ಅನುವು ಮಾಡಿಕೊಡಲಾಗಿದೆ ಮತ್ತು ವಿಧಾನ ಸೌಧದ ನಿರ್ಗಮನ ಗೇಟ್‌ ನಂ-4ರಲ್ಲಿ ಹಾಲಿ ಪ್ರವೇಶ ನಿಷೇಧವಿದ್ದು, ಕಾನ್ವಾಯ್ ಸಂಚರಿಸುವ ಸಮಯದಲ್ಲಿ ಮುಕ್ತ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ.
  2. ಅಶೋಕ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ರಿಚ್ಮಂಡ್‌ ರಸ್ತೆಯಲ್ಲಿ ರಿಚ್ಮಂಡ್‌ ವೃತ್ತದಿಂದ ಬಾಲ್ಡ್‌ವಿನ್‌ ಬಾಲಕಿಯರ ಶಾಲೆಯ ವೃತ್ತದವರೆಗೆ ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಮಾರ್ಪಡಿಸಿ ಗೌರವಾನ್ವಿತ ಗಣ್ಯ ವ್ಯಕ್ತಿಗಳ ಕಾನ್ವಾಯ್ ಸಂಚರಿಸುವ ಸಮಯದಲ್ಲಿ ಮಾತ್ರ ಅನುವು ಮಾಡಿಕೊಡಲಾಗಿದೆ.

ಸಾರ್ವಜನಿಕರು ಈ ಕೆಳಕಂಡ ರಸ್ತೆಗಳನ್ನು ಬಳಸದೆ ಪರ್ಯಾಯ ರಸ್ತೆಗಳಲ್ಲಿ ಸಂಚರಿಸಬೇಕು:

ಇದನ್ನೂ ಓದಿ | ರಾಜ್ಯದಲ್ಲಿ ಮತ್ತೊಮ್ಮೆ ಜನಪರ ಸರ್ಕಾರ ಮರು ಸ್ಥಾಪನೆ ಎಂದ ಸಿಎಂ ಬೊಮ್ಮಾಯಿ‌

Exit mobile version