ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ವಿಶ್ವಕೌಶಲ್ಯ ಸ್ಪರ್ಧೆ ವಿಜೇತರಿಗೆ ಸನ್ಮಾನ - Vistara News

ಬೆಂಗಳೂರು

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ವಿಶ್ವಕೌಶಲ್ಯ ಸ್ಪರ್ಧೆ ವಿಜೇತರಿಗೆ ಸನ್ಮಾನ

ಟೊಯೋಟಾ ತಾಂತ್ರಿಕ ತರಬೇತಿ ಸಂಸ್ಥೆ(ಟಿಟಿಟಿಐ)ಯ ಮೂವರು ಸದಸ್ಯರು 2022ರ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಗೆದ್ದಿದ್ದು, ಅವರನ್ನು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸನ್ಮಾನಿಸಿದರು. ಈ ವೇಳೆ ಕಂಪನಿಯ ಹಿರಿಯ ಅಧಿಕಾರಿಗಳಿದ್ದರು.

VISTARANEWS.COM


on

Toyota Kirloskar Motor World Skills Competition Winners felicitated
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಕಿಲ್ ಇಂಡಿಯಾ ಮಿಷನ್‌ಗೆ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ನೀಡಿದ ಕೊಡುಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಟೊಯೊಟಾ ಕಿರ್ಲೋಸ್ಕರ್ ರಚಿಸಿದ ಸಂಸ್ಥೆಯಾದ ಟೊಯೋಟಾ ತಾಂತ್ರಿಕ ತರಬೇತಿ ಸಂಸ್ಥೆಯ (ಟಿಟಿಟಿಐ) ಮೂವರು ಟೀಮ್ ಮೆಂಬರ್‌‌ಗಳನ್ನು 2022ರ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಮಾಡಿದ ಸಾಧನೆ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದು ಸನ್ಮಾನಿಸಿತು.

ಇತ್ತೀಚೆಗೆ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ, ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು; ಕರ್ನಾಟಕ ಸರ್ಕಾರದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಟೊಯೋಟಾದ ಹಿರಿಯ ಉಪಾಧ್ಯಕ್ಷ ಮತ್ತು ಮುಖ್ಯ ಸಂವಹನ ಅಧಿಕಾರಿ ಸುದೀಪ್ ದಳವಿ, ಕಾರ್ಯನಿರ್ವಾಹಕ ಉಪಾಧ್ಯಕ್ಷ ಶ್ರೀ ಸ್ವಪ್ನೇಶ್ ಆರ್. ಮರು, ಉಪಾಧ್ಯಕ್ಷರಾದ ಜಿ ಶಂಕರ ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಹಣಕಾಸು ಮತ್ತು ಆಡಳಿತದ ತಾಂತ್ರಿಕ ಸಲಹೆಗಾರ ಹಿರೋಕಿ ಆಂಡೋ ಅವರ ಉಪಸ್ಥಿತಿಯಲ್ಲಿ ವಿಜೇತರಿಗೆ ಸನ್ಮಾನಿಸಿದರು.

ಭಾರತೀಯ ವಾಹನ ಉದ್ಯಮಕ್ಕಾಗಿ ವಿಶ್ವದರ್ಜೆಯ ನುರಿತ ಕೆಲಸಗಾರರನ್ನು ಅಭಿವೃದ್ಧಿಪಡಿಸುವ ಕಂಪನಿಯ ಬದ್ಧತೆಯನ್ನು ಟಿಟಿಟಿಐ ಸಂಕೇತಿಸುತ್ತದೆ. ಟೀಮ್ ಮೆಂಬರ್‍‌ಗಳಾದ ಶ್ರೀ ಲಿಖಿತ್ ಕುಮಾರ್ ಯೆಮ್ಮೋಡಿ ಪ್ರಕಾಶ್, ಶ್ರೀ ಕಾರ್ತಿಕ್ ಗೌಡ ಸೀಹಳ್ಳಿ ನಾಗರಾಜು ಮತ್ತು ಶ್ರೀ ಅಖಿಲೇಶ್ ನರಸಿಂಹಮೂರ್ತಿ ಅವರು 2022 ರ ವಿಶ್ವ ಕೌಶಲ್ಯ ಸ್ಪರ್ಧೆಯಿಂದ ಪದಕಗಳನ್ನು ಗೆಲ್ಲುವ ಮೂಲಕ ಭಾರತ ದೇಶಕ್ಕೆ ಹೆಮ್ಮೆ ತಂದಿದ್ದಾರೆ.

ಅಖಿಲೇಶ್ ಮತ್ತು ಕಾರ್ತಿಕ್ ಜರ್ಮನಿಯಲ್ಲಿ ಮೆಕಾಟ್ರಾನಿಕ್ಸ್ ಕೌಶಲ್ಯಕ್ಕಾಗಿ ಕಂಚಿನ ಪದಕ ಗೆದ್ದಿದ್ದರು. ಲಿಖಿತ್ ಸ್ವಿಟ್ಜರ್ಲೆಂಡ್ ನಲ್ಲಿ ಪ್ರೊಟೋಟೈಪ್ ಮಾಡೆಲಿಂಗ್ ಕೌಶಲ್ಯಕ್ಕಾಗಿ ಕಂಚಿನ ಪದಕ ಗೆದ್ದಿದ್ದಾರೆ.

ತಂಡದ ಸಾಧನೆಗಳ ಬಗ್ಗೆ ಮಾತನಾಡಿದ ಹಿರಿಯ ಉಪಾಧ್ಯಕ್ಷ ಮತ್ತು ಮುಖ್ಯ ಸಂವಹನ ಅಧಿಕಾರಿ ಸುದೀಪ್ ದಳವಿ ಮಾತನಾಡಿ, ವಿಶ್ವ ಕೌಶಲ್ಯ ಸ್ಪರ್ಧೆಯಂತಹ ಮಹತ್ವಾಕಾಂಕ್ಷೆಯ ವೇದಿಕೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದಕ್ಕಾಗಿ ಲಿಖಿತ್, ಕಾರ್ತಿಕ್ ಮತ್ತು ಅಖಿಲೇಶ್ ಅವರ ಬಗ್ಗೆ ನಮಗೆ ಅಪಾರ ಹೆಮ್ಮೆ ಇದೆ ಎಂದುರ.

ಕಾರ್ಯನಿರ್ವಾಹಕ ಉಪಾಧ್ಯಕ್ಷ ಸ್ವಪ್ನೇಶ್ ಆರ್ ಮರು ಅವರು ಮಾತನಾಡಿ, ವಿಜೇತರ ಸಾಧನೆಯ ಬಗ್ಗೆ ನಾವು ವಿನಮ್ರರಾಗಿದ್ದೇವೆ, ಏಕೆಂದರೆ ಅವರ ಯಶಸ್ಸು ಟಿಟಿಟಿಐನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಮತ್ತು ನಾವು ತಲುಪಿಸುವ ತಾಂತ್ರಿಕ ಕೌಶಲ್ಯಗಳು ಮತ್ತು ಉತ್ಪನ್ನಗಳ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ ಎಂದರು.

ಇದನ್ನೂ ಓದಿ: Karnataka Election: `ಸಿದ್ದರಾಮಯ್ಯರನ್ನು ಹೊಡೆದು ಹಾಕಿ’ ಹೇಳಿಕೆ ವಿರುದ್ಧ ಅಶ್ವತ್ಥನಾರಾಯಣ ಮೇಲೆ 2 ಕೇಸ್‌; ಪ್ರತಿಭಟನೆ

ಸಚಿವ ಅಶ್ವತ್ಥ ನಾರಾಯಣ ಅವರು ಮಾತನಾಡಿ, ನಾವು ಯಾವಾಗಲೂ ಯುವಕರ ಶಕ್ತಿ ಮತ್ತು ಆರಂಭಿಕ ಹಂತದಲ್ಲಿ ಅವರನ್ನು ಕೌಶಲ್ಯಗೊಳಿಸುವ ಪ್ರಾಮುಖ್ಯತೆಯನ್ನು ನಂಬುತ್ತೇವೆ. ಇದನ್ನು ಗಮನದಲ್ಲಿಟ್ಟುಕೊಂಡು, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆಯಂತಹ ಉಪಕ್ರಮಗಳ ಮೂಲಕ ಕರ್ನಾಟಕದಾದ್ಯಂತ ಯುವಕರಿಗೆ ಕೌಶಲ್ಯ ಒದಗಿಸಲು ಪ್ರೋತ್ಸಾಹ ನೀಡುತ್ತೇವೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kabini Dam: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆತಂಕ ಬೇಡ; ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Kabini Dam: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸುದ್ದಿಯಿಂದ ನದಿ ಪಾತ್ರದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕಬಿನಿ ಅಣೆಕಟ್ಟು ಸುರಕ್ಷಿತವಾಗಿದೆ. ನದಿ ಪಾತ್ರದ ಜನರು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ. ಅಣೆಕಟ್ಟು ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಾಳಜಿಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

Kabini dam not cracked no need to worry says DCM DK Shivakumar
Koo

ಬೆಂಗಳೂರು: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ನೀರು (Kabini Dam) ಸೋರಿಕೆಯಾಗುತ್ತಿಲ್ಲ. ಅಣೆಕಟ್ಟಿಗೆ ಯಾವುದೇ ತರಹದ ಅಪಾಯವಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸುದ್ದಿಯಿಂದ ನದಿ ಪಾತ್ರದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕಬಿನಿ ಅಣೆಕಟ್ಟು ಸುರಕ್ಷಿತವಾಗಿದೆ. ನದಿ ಪಾತ್ರದ ಜನರು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ. ಅಣೆಕಟ್ಟು ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಾಳಜಿಯಿದೆ ಎಂದು ಹೇಳಿದರು.

ಇದನ್ನೂ ಓದಿ: kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

ನೀರಿನ ಹರಿವು ಹೆಚ್ಚಿದ್ದು, ನದಿ ಪಾತ್ರಗಳಲ್ಲಿ ಜನರು ಅನಗತ್ಯವಾಗಿ ಓಡಾಡದೆ ಸುರಕ್ಷಿತವಾಗಿ ಇರಬೇಕು. ಗುರುವಾರ ಸಂಜೆ ವೇಳೆಗೆ ತಮಿಳುನಾಡಿಗೆ 100 ಟಿಎಂಸಿಗೂ ಹೆಚ್ಚು ನೀರು ಹರಿದು ಹೋಗಿದೆ ಎಂದು ಹೇಳಿದರು.

ಇದನ್ನೂ ಓದಿ: Utthana Katha Spardhe 2024: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ; ಕಥೆ ತಲುಪಿಸಲು ಅ.10 ಕೊನೆಯ ದಿನ

ಕೇರಳ ರಾಜ್ಯ ಸಂಕಷ್ಟದಲ್ಲಿದ್ದು, ನಮ್ಮ ರಾಜ್ಯದ ಸಂಪೂರ್ಣ ಸಹಕಾರ ಅವರಿಗಿದೆ. ನಾವು ಕೇರಳ ಹಾಗೂ ಕೇರಳಿಗರ ಜತೆಗಿದ್ದೇವೆ. ಯಾವುದೇ ರೀತಿಯ ಸಹಾಯ ಮಾಡಲೂ ತಯಾರಿದ್ದೇವೆ. ಮೃತರ ಆತ್ಮಗಳಿಗೆ ಶಾಂತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ತಿಳಿಸಿದರು.

Continue Reading

ಕರ್ನಾಟಕ

DK Shivakumar: ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಪ್ರಶ್ನೆಗಳ ಸವಾಲು, ಹೆಜ್ಜೆಗೆ ಒಂದು ಪ್ರಶ್ನೆ ಎಂದ ಡಿಕೆಶಿ

DK Shivakumar: ಬಿಜೆಪಿ ಹಾಗೂ ಜೆಡಿಎಸ್‌ ವಿರುದ್ಧ ಪ್ರಶ್ನೆ ಕೇಳುವ ಅಭಿಯಾನವನ್ನು ಶುಕ್ರವಾರದಿಂದಲೇ (ಆಗಸ್ಟ್‌ 2) ಆರಂಭಿಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ಬಿಡದಿಯಲ್ಲಿ ಸಭೆ ಮಾಡುವ ಮೂಲಕ ಪ್ರಶ್ನೆಗಳನ್ನು ಕೇಳುತ್ತೇವೆ. ಎಲ್ಲ ಪ್ರಮುಖ ಪಟ್ಟಣಗಳಲ್ಲೂ ಸಭೆ ನಡೆಸಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಪ್ರಶ್ನೆ ಕೇಳುತ್ತೇವೆ ಎಂಬುದಾಗಿ ಡಿ.ಕೆ.ಶಿವಕುಮಾರ್‌ ಹೇಳಿದರು.

VISTARANEWS.COM


on

DK Shivakumar
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೂಡಾ ನಿವೇಶನ ಹಂಚಿಕೆ ಹಗರಣ ಸೇರಿ ರಾಜ್ಯ ಸರ್ಕಾರದ ಹಲವು ಭ್ರಷ್ಟಾಚಾರಗಳ ವಿರುದ್ಧ ಆಗಸ್ಟ್‌ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ (BJP Padayatra) ನಡೆಸಲು ಬಿಜೆಪಿ ಹಾಗೂ ಜೆಡಿಎಸ್‌ ತೀರ್ಮಾನಿಸಿವೆ. ಇದರ ಬೆನ್ನಲ್ಲೇ, ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು ದಿಢೀರನೆ ಸುದ್ದಿಗೋಷ್ಠಿ ನಡೆಸಿದ್ದು, “ಪಾದಯಾತ್ರೆ ನಡೆಸಲು ಮುಂದಾಗಿರುವ ಬಿಜೆಪಿ ಹಾಗೂ ಜೆಡಿಎಸ್‌ಗೆ ಕಾಂಗ್ರೆಸ್‌ ಸರಣಿ ಪ್ರಶ್ನೆಗಳ ಸವಾಲು ಒಡ್ಡುತ್ತಿದೆ. ಪ್ರತಿ ಹೆಜ್ಜೆಗೂ ಬಿಜೆಪಿ ಹಾಗೂ ಜೆಡಿಎಸ್‌ ಉತ್ತರಿಸಿ ಮುಂದೆ ಹೋಗಬೇಕು” ಎಂದು ಹೇಳಿದ್ದಾರೆ.

“ಬಿಜೆಪಿ ಹಾಗೂ ಜೆಡಿಎಸ್‌ ಒಗ್ಗೂಡಿ ಪಾದಯಾತ್ರೆ ನಡೆಸಲು ತೀರ್ಮಾನಿಸಿವೆ. ಇಷ್ಟು ದಿನ ಪಾದಯಾತ್ರೆಗೆ ಬೆಂಬಲ ನೀಡಲ್ಲ ಎಂದು ಜೆಡಿಎಸ್‌ ಹೇಳುತ್ತಿತ್ತು. ಈಗ ಎರಡೂ ಪಕ್ಷಗಳು ಒಗ್ಗೂಡಿ ಪಾದಯಾತ್ರೆ ಮಾಡುತ್ತಿವೆ. ಅವರ ಪಾದಯಾತ್ರೆಗೆ ನಮ್ಮ ಅಭ್ಯಂತರ ಇಲ್ಲ. ಆದರೆ, ನಗರದಲ್ಲಿ ಟ್ರಾಫಿಕ್‌ ಜಾಮ್‌ ದೃಷ್ಟಿಯಿಂದ ಅವರು ಪಾದಯಾತ್ರೆ ಮಾಡುವಂತಿಲ್ಲ. ಇನ್ನು, ಬಿಜೆಪಿ ಹಾಗೂ ಜೆಡಿಎಸ್‌ ಹಗರಣಗಳ ಕುರಿತು ನಾಳೆಯಿಂದ ನಮ್ಮ ಸಚಿವರು, ಶಾಸಕರು ಪ್ರಶ್ನೆ ಕೇಳುತ್ತಾರೆ. ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಹೆಜ್ಜೆ ಇಟ್ಟಲ್ಲೆಲ್ಲ ಪ್ರಶ್ನೆ ಕೇಳುತ್ತೇವೆ. ಅವುಗಳಿಗೆ ಅವರು ಉತ್ತರಿಸಿಯೇ ಮುಂದೆ ಹೋಗಬೇಕು” ಎಂದು ಡಿಸಿಎಂ ಹೇಳಿದರು.

ಪ್ರತಿ ಊರಿನಲ್ಲೂ ಸಭೆ

“ಬಿಜೆಪಿ ಹಾಗೂ ಜೆಡಿಎಸ್‌ ವಿರುದ್ಧ ಪ್ರಶ್ನೆ ಕೇಳುವ ಅಭಿಯಾನವನ್ನು ಶುಕ್ರವಾರದಿಂದಲೇ (ಆಗಸ್ಟ್‌ 2) ಆರಂಭಿಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ಬಿಡದಿಯಲ್ಲಿ ಸಭೆ ಮಾಡುವ ಮೂಲಕ ಪ್ರಶ್ನೆಗಳನ್ನು ಕೇಳುತ್ತೇವೆ. ಇನ್ನು ಆಗಸ್ಟ್‌ 3ರಂದು ರಾಮನಗರ, 4ರಂದು ಚನ್ನಪಟ್ಟಣ, 5ರಂದು ಮದ್ದೂರು, 6ಕ್ಕೆ ಮಂಡ್ಯ, 7 ಹಾಗೂ 9ರಂದು ಮೈಸೂರಿನಲ್ಲಿ ಸಭೆ ನಡೆಸಿ, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಅವರ ಹಗರಣಗಳ ಕುರಿತು ಪ್ರಶ್ನೆ ಕೇಳುತ್ತೇವೆ. ಅವುಗಳಿಗೆ ಅವರು ಉತ್ತರಿಸಬೇಕು” ಎಂದು ತಿಳಿಸಿದರು.

ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ?

“ಬಿಜೆಪಿ ಅಧಿಕಾರದಲ್ಲಿದ್ದಾಗ ಏನೆಲ್ಲ ಹಗರಣ ಮಾಡಿದರು ಎಂಬುದರ ಕುರಿತು ಪ್ರತಿಯೊಂದು ಸಭೆಯಲ್ಲೂ ಪ್ರಶ್ನೆಗಳನ್ನು ಕೇಳುತ್ತೇವೆ. ಅವರ ಹಗರಣಗಳ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ. ಪ್ರತಿಯೊಂದು ಸಭೆಯಲ್ಲೂ ಕಾಂಗ್ರೆಸ್‌ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ನಮ್ಮ ಪ್ರತಿ ಪ್ರಶ್ನೆಗಳಿಗೆ ಅವರು ಉತ್ತರಿಸಿಯೇ ಮುಂದೆ ಹೆಜ್ಜೆ ಇಡಬೇಕು. ಬಿಜೆಪಿಯವರು ಏನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ” ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು.

ಆಗಸ್ಟ್‌ 3ಕ್ಕೆ ಪಾದಯಾತ್ರೆ ಆರಂಭ

ಪಾದಯಾತ್ರೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದ್ದಾರೆ. “ಆಗಸ್ಟ್‌ 3ರ ಶನಿವಾರ ಬೆಳಗ್ಗೆ 8.30ಕ್ಕೆ ನೈಸ್ ರೋಡ್ ಜಂಕ್ಷನ್‌ನಿಂದ ಪಾದಯಾತ್ರೆ ಪ್ರಾರಂಭ ಆಗುತ್ತದೆ. ರಾಜ್ಯದ ಎಲ್ಲ ಬಿಜೆಪಿ ಹಾಗೂ ಜೆಡಿಎಸ್ ಸಂಸದರು, ಶಾಸಕರು ಇರುತ್ತಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಕುಮಾರಸ್ವಾಮಿ ಅವರು ಕೂಡ ಬಂದು ಕಾರ್ಯಕ್ರಮ ಉದ್ಘಾಟನೆ ಮಾಡುತ್ತಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ ಮಾಡುತ್ತಿದ್ದೇವೆ. ಇದನ್ನು ಯಶಸ್ವಿಗೊಳಿಸುತ್ತೇವೆ” ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ: BJP Padayatra: ಬಿಜೆಪಿ ಪಾದಯಾತ್ರೆಗೆ ಎಚ್‌ಡಿಕೆ ಸಾಥ್;‌ ಪ್ರೀತಂ ಗೌಡ ಭಾಗಿ ಆಗ್ತಾರಾ? ವಿಜಯೇಂದ್ರ ಹೇಳಿದ್ದಿಷ್ಟು

Continue Reading

ಬೆಂಗಳೂರು

Utthana Katha Spardhe 2024: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ; ಕಥೆ ತಲುಪಿಸಲು ಅ.10 ಕೊನೆಯ ದಿನ

Utthana Katha Spardhe 2024: ಸದಭಿರುಚಿಯ ಮಾಸಪತ್ರಿಕೆ ʼಉತ್ಥಾನʼ ವತಿಯಿಂದ ʼಉತ್ಥಾನ ವಾರ್ಷಿಕ ಕಥಾಸ್ಪರ್ಧೆ 2024ʼ ಆಯೋಜಿಸಲಾಗಿದ್ದು, ಕಥೆಗಳನ್ನು ತಲುಪಿಸಲು ಅಕ್ಟೋಬರ್‌ 10 ಕೊನೆಯ ದಿನವಾಗಿದೆ. ಕಥಾಸ್ಪರ್ಧೆಯಲ್ಲಿ ಮೊದಲ ಬಹುಮಾನ 15 ಸಾವಿರ ರೂ., 2ನೇ ಬಹುಮಾನ 12 ಸಾವಿರ ರೂ., ತೃತೀಯ ಬಹುಮಾನ 10 ಸಾವಿರ ರೂ. ಹಾಗೂ ಐದು ಮೆಚ್ಚುಗೆಯ ಬಹುಮಾನಗಳು ತಲಾ 2 ಸಾವಿರ ರೂ. ಇರಲಿದೆ.

VISTARANEWS.COM


on

utthana vaarshika katha spardhe the last date for submission of the story is october 10
Koo

ಬೆಂಗಳೂರು: ಸದಭಿರುಚಿಯ ಮಾಸ ಪತ್ರಿಕೆ ʼಉತ್ಥಾನʼ ವತಿಯಿಂದ ʼಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ 2024ʼ ಆಯೋಜಿಸಲಾಗಿದ್ದು, ಕಥೆಗಳನ್ನು ತಲುಪಿಸಲು ಅಕ್ಟೋಬರ್‌ 10 ಕೊನೆಯ ದಿನವಾಗಿದೆ. ಕಥಾ ಸ್ಪರ್ಧೆಯಲ್ಲಿ (Utthana Katha Spardhe 2024) ಮೊದಲ ಬಹುಮಾನ 15 ಸಾವಿರ ರೂ., ಎರಡನೇ ಬಹುಮಾನ 12 ಸಾವಿರ ರೂ., ತೃತೀಯ ಬಹುಮಾನ 10 ಸಾವಿರ ರೂ. ಹಾಗೂ ಐದು ಮೆಚ್ಚುಗೆಯ ಬಹುಮಾನಗಳು ತಲಾ 2 ಸಾವಿರ ರೂ. ಇರಲಿದೆ.

ಕಥಾ ಸ್ಪರ್ಧೆಯ ನಿಯಮಗಳು

ಕಥೆಗಳು ಸ್ವತಂತ್ರವಾಗಿರಬೇಕು. ಭಾಷಾಂತರವಾಗಲಿ, ಅನುಕರಣೆಯಾಗಲಿ ಆಗಿರಕೂಡದು. ಎಲ್ಲೂ ಸ್ವೀಕೃತವಾಗಿರಬಾರದು; ಪರಿಶೀಲನೆಗಾಗಿಯೂ ಯಾವುದೇ ಅನ್ಯ ಪತ್ರಿಕೆ, ಸಂಸ್ಥೆಗೆ ಕಳುಹಿಸಿರಬಾರದು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಕಟವಾಗಿರಬಾರದು. ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು.

ಬಹುಮಾನಿತ ಕಥೆ ‘ಉತ್ಥಾನ’ದಲ್ಲಿ ಪ್ರಕಟವಾಗುವವರೆಗೂ ಬೇರೆ ಎಲ್ಲೂ ಗ್ರಂಥರೂಪದಲ್ಲಾಗಲಿ, ಸಾಮಾಜಿಕ ಜಾಲತಾಣಗಳಲ್ಲಾಗಲಿ, ಪತ್ರಿಕೆ, ಆಕಾಶವಾಣಿ ಅಥವಾ ದೂರದರ್ಶನದಲ್ಲಾಗಲಿ ಪ್ರಕಟಣೆಗೆ, ಪ್ರಸಾರಕ್ಕೆ ಅವಕಾಶವಿಲ್ಲ.

ಪೋಸ್ಟ್‌ ಮೂಲಕ ಕಳುಹಿಸುವವರು: ಕಾಗದದ ಒಂದೇ ಮಗ್ಗುಲಲ್ಲಿ ಸ್ಪುಟವಾಗಿ ಬರೆದಿರಬೇಕು ಅಥವಾ ವಿರಳವಾಗಿ ಬೆರಳಚ್ಚು ಮಾಡಿರಬೇಕು. ಕಾರ್ಬನ್/ಜೆರಾಕ್ಸ್ ಪ್ರತಿಗಳನ್ನು ಪರಿಶೀಲಿಸಲಾಗುವುದಿಲ್ಲ.

ಇಮೇಲ್‌ ಮೂಲಕ ಕಳುಹಿಸುವವರು: ಕಥೆಯನ್ನು ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ಧಪಡಿಸಿ (ವರ್ಡ್ ಮತ್ತು ಪಿಡಿಎಫ್ 2 ರೂಪದಲ್ಲಿ) ಇ-ಮೇಲ್ ಮೂಲಕವೂ ಕಳುಹಿಸಬಹುದು. ಇ-ಮೇಲ್ ವಿಳಾಸ: utthanakathaspardhe@gmail.com

ಕಥೆ 3,000 ಪದಗಳ ಮಿತಿಯಲ್ಲಿ ಇರಬೇಕು.

ಹಸ್ತಪ್ರತಿಯನ್ನು ಹಿಂದಕ್ಕೆ ಕಳುಹಿಸುವ ಯಾವುದೇ ವ್ಯವಸ್ಥೆ ಇರುವುದಿಲ್ಲ

ಲೇಖಕರು ತಮ್ಮ ಹೆಸರು, ವಿಳಾಸ, ದೂರವಾಣಿ, ಕಿರುಪರಿಚಯ ಮುಂತಾದ ವಿವರಗಳನ್ನು ಕಥೆಯ ಜತೆಯಲ್ಲಿ ಬರೆಯದೆ, ಪ್ರತ್ಯೇಕ ಪುಟದಲ್ಲಿ ಬರೆದು ಕಳುಹಿಸಬೇಕು. ಜತೆಗೆ ಲೇಖಕರ ಭಾವಚಿತ್ರವೂ ಇರಬೇಕು.
ಬಹುಮಾನಿತ ಕಥೆಗಳನ್ನು ಯಾವುದೇ ರೂಪದಲ್ಲಿ, ಯಾವಾಗ ಬೇಕಾದರೂ ಬಳಸುವ ಸಂಪೂರ್ಣ ಹಕ್ಕು ‘ಉತ್ಥಾನ’ದ್ದು.

ತೀರ್ಪುಗಾರರ ಮೌಲ್ಯನಿರ್ಣಯಾನಂತರ ಫಲಿತಾಂಶವನ್ನು ‘ಉತ್ಥಾನ’ದಲ್ಲಿ ಪ್ರಕಟಿಸಲಾಗುವುದು. ವಿಜೇತರಿಗೆ ಮಾತ್ರ ಪತ್ರ ಬರೆದು ತಿಳಿಸಲಾಗುವುದು. ಅದಕ್ಕೆ ಪೂರ್ವದಲ್ಲಿ ಯಾವುದೇ ಪತ್ರ ವ್ಯವಹಾರ ಸಾಧ್ಯವಾಗದು. ಸ್ಪರ್ಧೆಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂ ವ್ಯವಸ್ಥಾಪಕರದ್ದೇ ಅಂತಿಮ ತೀರ್ಮಾನ.

ಇದನ್ನೂ ಓದಿ: Pralhad Joshi: ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲು; ಪ್ರಲ್ಹಾದ್‌ ಜೋಶಿ

ಕಥೆ ತಲುಪಿಸುವ ವಿಳಾಸ

ಕಥೆಗಳನ್ನು ಅಕ್ಟೋಬರ್‌ 10ರೊಳಗೆ ವಿಳಾಸ: ಸಂಪಾದಕರು, ʼಉತ್ಥಾನ ವಾರ್ಷಿಕ ಕಥಾಸ್ಪರ್ಧೆ 2024ʼ ಕೇಶವ ಶಿಲ್ಪ, ಕೆಂಪೇಗೌಡನಗರ, ಬೆಂಗಳೂರು-560004 ಇಲ್ಲಿಗೆ ತಲುಪಿಸಬೇಕು. ಮೊಬೈಲ್‌ 77954 41894, ದೂರವಾಣಿ: 080-26604673 ಇ-ಮೇಲ್: utthanakathaspardhe@gmail.com

Continue Reading

ವಾಣಿಜ್ಯ

kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

kotak bank smart watch: ಕೋಟಕ್ ಮಹೀಂದ್ರಾ ಬ್ಯಾಂಕ್ ಲಿಮಿಟೆಡ್ (ಕೆಎಂಬಿಎಲ್/ಕೋಟಕ್) ಮತ್ತು ಜಿಓಕ್ಯೂಐಐ ಸಹಯೋಗದಲ್ಲಿ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವೈಟಲ್ ಪ್ಲಸ್ ಸ್ಮಾರ್ಟ್‌ವಾಚ್ ಬಿಡುಗಡೆ ಮಾಡಲಾಗಿದೆ. ರುಪೇ ಆನ್-ದ-ಗೋ ಮೂಲಕ ಕಾರ್ಯನಿರ್ವಹಿಸುವ ಈ ಸ್ಮಾರ್ಟ್ ವಾಚ್ ಮೂಲಕ ಪಿನ್ ಹಾಕದೆಯೇ ರೂ. 5000ವರೆಗಿನ ಕಾಂಟಾಕ್ಟ್ ಲೆಸ್ ಪೇಮೆಂಟ್‌ಗಳನ್ನು ಮಾಡಬಹುದು ಅನ್ನುವುದು ವಿಶೇಷ. ಈ ವಿಶಿಷ್ಟವಾದ ಸ್ಮಾರ್ಟ್ ವಾಚ್‌ನ ಬೆಲೆ 3499 ರೂ. ಆಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

kotak bank smart watch
Koo

ಬೆಂಗಳೂರು: ಡಿಜಿಟಲ್ ಪೇಮೆಂಟ್ ಕ್ಷೇತ್ರದಲ್ಲಿ ಕ್ರಾಂತಿ (kotak bank smart watch) ಮಾಡುವ ನಿಟ್ಟಿನಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ಲಿಮಿಟೆಡ್ (ಕೆಎಂಬಿಎಲ್/ಕೋಟಕ್) ಮತ್ತು ಜಿಓಕ್ಯೂಐಐ ಸಹಯೋಗದಲ್ಲಿ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವೈಟಲ್ ಪ್ಲಸ್ ಸ್ಮಾರ್ಟ್‌ವಾಚ್ (Smart Watch) ಬಿಡುಗಡೆ ಮಾಡಲಾಗಿದೆ. ರುಪೇ ಆನ್-ದ-ಗೋ ಮೂಲಕ ಕಾರ್ಯನಿರ್ವಹಿಸುವ ಈ ಸ್ಮಾರ್ಟ್ ವಾಚ್ ಮೂಲಕ ಪಿನ್ ಹಾಕದೆಯೇ ರೂ. 5000ವರೆಗಿನ ಕಾಂಟಾಕ್ಟ್ ಲೆಸ್ ಪೇಮೆಂಟ್‌ಗಳನ್ನು ಮಾಡಬಹುದು ಅನ್ನುವುದು ವಿಶೇಷ. ಈ ವಿಶಿಷ್ಟವಾದ ಸ್ಮಾರ್ಟ್ ವಾಚ್‌ನ ಬೆಲೆ 3499 ರೂ. ಆಗಿದೆ.

ಕೋಟಕ್ ಮಹೀಂದ್ರಾ ಬ್ಯಾಂಕ್‌ನ ರಿಟೇಲ್ ಲಯಬಿಲಿಟೀಸ್ ಪ್ರೊಡಕ್ಟ್ ಹೆಡ್ ಆಂಡ್ ಚೀಫ್ ಮಾರ್ಕೆಟಿಂಗ್ ಆಫೀಸರ್ ರೋಹಿತ್ ಭಾಸಿನ್, ಈ ಸ್ಮಾರ್ಟ್ ವಾಚ್ ಉತ್ಪನ್ನವನ್ನು ಬಿಡುಗಡೆ ಮಾಡಿ ಮಾತನಾಡಿ, “ಡಿಜಿಟಲ್ ಪೇಮೆಂಟ್ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ ಉಂಟಾಗಿದೆ. ಗ್ರಾಹಕರು ಪದೇಪದೇ ಕಡಿಮೆ ಮೊತ್ತಗಳನ್ನು ಪಾವತಿ ಮಾಡಲು ನಗದು ರಹಿತ ಪೇಮೆಂಟ್ ವಿಧಾನವನ್ನೇ ಇಷ್ಟ ಪಡುತ್ತಾರೆ. ಅದಕ್ಕಾಗಿಯೇ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವೈಟಲ್ ಪ್ಲಸ್ ಸ್ಮಾರ್ಟ್‌ ವಾಚ್ ಅನ್ನು ಬಿಡುಗಡೆ ಮಾಡಿದ್ದು, ಈ ಸಾಧನ ಇದ್ದರೆ ನಗದು, ಕಾರ್ಡ್‌ಗಳು ಅಥವಾ ಸ್ಮಾರ್ಟ್‌ಫೋನ್‌ಗಳು ಬೇಕಾಗಿಯೇ ಇಲ್ಲ. ಈ ಮೂಲಕ ಸುರಕ್ಷಿತ ಮತ್ತು ಸುಲಭ ಬ್ಯಾಂಕಿಂಗ್ ವ್ಯವಸ್ಥೆಯನ್ನು ಒದಗಿಸುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: Pralhad Joshi: ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲು; ಪ್ರಲ್ಹಾದ್‌ ಜೋಶಿ

ಕೋಟಕ್–ಜಿಓಕ್ಯೂಐಐ ಸ್ಮಾರ್ಟ್ ವೈಟಲ್ ಪ್ಲಸ್ ವಾಚ್ ಅನ್ನು ಬಳಸುವ ಬಳಕೆದಾರರು ತಮ್ಮ ರಕ್ತದೊತ್ತಡ, ದೇಹದ ಉಷ್ಣತೆ ಮತ್ತು ಎಸ್ ಪಿ ಓ2 ಮಟ್ಟವನ್ನು ತಮ್ಮ ಮಣಿಕಟ್ಟಿನಲ್ಲಿಯೇ ಚೆಕ್ ಮಾಡಬಹುದು. ಜತೆಗೆ ಈ ಸ್ಮಾರ್ಟ್ ವಾಚ್ ಬಳಕೆದಾರ ಸ್ನೇಹಿ ಇಂಟರ್ಫೇಸ್ ಹೊಂದಿದ್ದು, ಸುಲಭವಾಗಿ ಪಾವತಿ ಮಾಡಲು ಅನುವು ಮಾಡಿಕೊಡುತ್ತದೆ. ಗ್ರಾಹಕರು ತಮ್ಮ ಕೋಟಕ್ ಖಾತೆಗಳಿಗೆ ಸುಲಭವಾಗಿ ಸೈನ್ ಇನ್ ಆಗಬಹುದು ಮತ್ತು ಸ್ಮಾರ್ಟ್ ವಾಚ್ ಅನ್ನು ಬಳಸಿಕೊಂಡು ಕಾಂಟಾಕ್ಟ್ ಲೆಸ್ ಪೇಮೆಂಟ್ ಅನ್ನು ಮಾಡಬಹುದು. ಈ ವಿಧಾನವು ಸಾಂಪ್ರದಾಯಿಕ ಕಾಂಟಾಕ್ಟ್ ಲೆಸ್ ಕಾರ್ಡ್‌ಗಳು ಮತ್ತು ಮೊಬೈಲ್ ಸಾಧನಗಳಂತೆಯೇ ಅದೇ ಮಟ್ಟದ ಸುರಕ್ಷತೆ ಮತ್ತು ಭದ್ರತೆಯನ್ನು ನೀಡುತ್ತದೆ.

ಈ ಕುರಿತು ಜಿಓಕ್ಯೂಐಐ ಸಂಸ್ಥಾಪಕ ಮತ್ತು ಸಿಇಓ ವಿಶಾಲ್ ಗೊಂಡಲ್ ಮಾತನಾಡಿ, “ಆರೋಗ್ಯವೇ ಭಾಗ್ಯ ಎಂಬುದು ಎಲ್ಲಾ ಕಾಲದಲ್ಲೂ ಪ್ರಸ್ತುತ ಅನ್ನಿಸುವ ಒಂದು ಗಾದೆ. ಮೊದಲೇ ರೋಗ ತಡೆಗಟ್ಟುವ ಪ್ರಕ್ರಿಯೆ ಮತ್ತು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವ ಪ್ರಾಮುಖ್ಯತೆಯನ್ನು ಜಿಓಕ್ಯೂಐಐ ಯಾವಾಗಲೂ ನಂಬುತ್ತದೆ. ಅದಕ್ಕೆ ಪೂರಕವಾಗಿರುವ ಜಿಓಕ್ಯೂಐಐನ ಅತ್ಯಾಧುನಿಕ ಆರೋಗ್ಯ ಫೀಚರ್‌ಗಳ ಜತೆಗೆ ಕೋಟಕ್ ಬ್ಯಾಂಕ್‌ನ ಕಾಂಟಾಕ್ಟ್ ಲೆಸ್ ಪೇಮೆಂಟ್ ಫೀಚರ್ ಅನ್ನು ಸಂಯೋಜಿತಗೊಳಿಸಿರುವ ಸ್ಮಾರ್ಟ್ ವಾಚ್ ಅನ್ನು ಗ್ರಾಹಕರಿಗೆ ಒದಗಿಸುತ್ತಿರುವುದು ಮಹತ್ವದ ಹೆಜ್ಜೆಯಾಗಿದೆ.

ಇದನ್ನೂ ಓದಿ: Hosanagara News: ಹಡ್ಲುಬೈಲು ಸರ್ಕಾರಿ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

ಈ ಒಟ್ಟುಗೂಡುವಿಕೆ ಬಹಳ ಮುಖ್ಯವಾಗಿದೆ. ಯಾಕೆಂದರೆ ಈ ಸಹಯೋಗವು ಗ್ರಾಹಕರ ಅನುಕೂಲತೆಯನ್ನು ಹೆಚ್ಚಿಸುತ್ತದೆ, ಆರೋಗ್ಯ ಮತ್ತು ಸುರಕ್ಷತೆ ಕಾಪಾಡಿಕೊಳ್ಳಲು ಪ್ರೇರೇಪಿಸುತ್ತದೆ, ಸುರಕ್ಷಿತ ವಹಿವಾಟು ಮಾಡುವ ಸೌಲಭ್ಯಗಳನ್ನು ನೀಡುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಾಧನವು ಈ ಕಾಲಕ್ಕೆ ಅವಶ್ಯವಾಗಿ ಬೇಕಾದ ಆರೋಗ್ಯಕರ ಮತ್ತು ಪರಿಣಾಮಕಾರಿ ಜೀವನಶೈಲಿ ಕಾಪಾಡಿಕೊಳ್ಳಲು ಬೆಂಬಲ ಒದಗಿಸುತ್ತದೆ”ಎಂದು ಹೇಳಿದರು.

ಎನ್‌ಪಿಸಿಐನ ಚೀಫ್ ರಿಲೇಷನ್ ಶಿಪ್ ಮ್ಯಾನೇಜ್ಮೆಂಟ್ ರಾಜೀತ್ ಪಿಳ್ಳೈ ಮಾತನಾಡಿ, “ಎನ್‌ಪಿಸಿಐ ಪರಿಚಯಿಸಿರುವ ಹೊಸ ರುಪೇ ಆನ್-ದ-ಗೋ ಅನ್ನು ಬಳಸಿಕೊಂಡು ಕಾಂಟಾಕ್ಟ್ ಲೆಸ್ ಪೇಮೆಂಟ್ ಸೌಲಭ್ಯ ಒದಗಿಸುವ ಸ್ಮಾರ್ಟ್ ವೈಟಲ್ ಪ್ಲಸ್ ಸ್ಮಾರ್ಟ್ ವಾಚ್ ಅನ್ನು ಬಿಡುಗಡೆ ಮಾಡಿರುವುದು ನಮಗೆ ಸಂತೋಷದ ವಿಚಾರವಾಗಿದೆ. ಈ ಸಹಯೋಗವು ಬಳಕೆದಾರರಿಗೆ ತಮ್ಮ ದೈನಂದಿನ ವಹಿವಾಟುಗಳನ್ನು ಸುಲಭವಾಗಿ ಮತ್ತು ಸುರಕ್ಷಿತವಾಗಿ ಮಾಡಲು ಅನುವು ಮಾಡಿಕೊಡುತ್ತದೆ. ಈ ಹೊಸ ವೈಶಿಷ್ಟ್ಯಗಳು ಕಾಂಟಾಕ್ಟ್ ಲೆಸ್ ಪೇಮೆಂಟ್ ಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲಿದೆ. ಜತೆಗೆ ವಹಿವಾಟು ಮಾಡಲು ಸುಲಭವಾಗುವುದರಿಂದ ಬಳಕೆದಾರರ ಅನುಭವವನ್ನು ಉತ್ತಮಗೊಳಿಸುತ್ತದೆ. ಟೆಕ್ ಸ್ಯಾವಿ ಗ್ರಾಹಕರ ಕಾರಣದಿಂದ ಕಾಂಟಾಕ್ಟ್ ಲೆಸ್ ಪೇಮೆಂಟ್ ಉತ್ಪನ್ನಗಳಿಗೆ ಹೆಚ್ಚು ಬೇಡಿಕೆ ಉಂಟಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

ಕೋಟಕ್ ಬ್ಯಾಂಕ್ ಗ್ರಾಹಕರು ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಮೂಲಕ ಸ್ಮಾರ್ಟ್ ವಾಚ್ ಅನ್ನು ಖರೀದಿಸಬಹುದು. ಕೋಟಕ್ ಗ್ರಾಹಕರಲ್ಲದವರು ಈ ಸೌಲಭ್ಯವನ್ನು ಪಡೆಯಲು ಕೋಟಕ್‌ನಲ್ಲಿ ಖಾತೆಯನ್ನು ತೆರೆಯಬೇಕಾಗುತ್ತದೆ.

Continue Reading
Advertisement
Rahul Gandhi
ದೇಶ2 mins ago

Rahul Gandhi: ರಾಹುಲ್‌ ಗಾಂಧಿ ಹೊಲಿದ ಚಪ್ಪಲಿಗೆ 10 ಲಕ್ಷ ರೂ. ಆಫರ್;‌ ಆದರೂ ಮಾರದ ಚಮ್ಮಾರ!

Kupwara Encounter
ದೇಶ13 mins ago

ಕಾಶ್ಮೀರದಲ್ಲಿ ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ ಆಪ್ತನ ಹತ್ಯೆ; ಈತ ಪಾಕ್‌ ಕಮಾಂಡೋ ಕೂಡ ಹೌದು!

PV Sindhu
ಪ್ರಮುಖ ಸುದ್ದಿ24 mins ago

PV Sindhu : ಪಿವಿ ಸಿಂಧು ಹ್ಯಾಟ್ರಿಕ್​ ಒಲಿಂಪಿಕ್ಸ್​ ಪದಕದ ಕನಸು ಭಗ್ನ, 16ನೇ ಸುತ್ತಿನಲ್ಲಿ ಸೋಲು

Prajwal Revanna
ಕರ್ನಾಟಕ35 mins ago

Prajwal Revanna: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಅಸಲಿ; ಎಫ್‌ಎಸ್‌ಎಲ್‌ ವರದಿ ಬಹಿರಂಗ, ಎಸ್‌ಐಟಿ ತನಿಖೆಗೆ ಬಲ!

MS Dhoni
ಪ್ರಮುಖ ಸುದ್ದಿ43 mins ago

MS Dhoni : ಧೋನಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ನಿಯಮವನ್ನೇ ಬದಲಾಯಿಸಲು ಕೋರಿದ ಚೆನ್ನೈ ಸೂಪರ್ ಕಿಂಗ್ಸ್​

Kabini dam not cracked no need to worry says DCM DK Shivakumar
ಕರ್ನಾಟಕ2 hours ago

Kabini Dam: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆತಂಕ ಬೇಡ; ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Blood Cancer
ಆರೋಗ್ಯ2 hours ago

Blood Cancer: ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್‌ರನ್ನು ಬಲಿ ಪಡೆದ ರಕ್ತದ ಕ್ಯಾನ್ಸರ್‌ಗೆ ಏನು ಕಾರಣ? ಇದರ ಲಕ್ಷಣಗಳೇನು?

Kerala Floods
ಪ್ರಮುಖ ಸುದ್ದಿ2 hours ago

Kerala Floods : ಬಾನೆಟ್​ ಎತ್ತರಕ್ಕೆ ತುಂಬಿದ್ದ ಪ್ರವಾಹದ ನೀರಿನಲ್ಲಿ ಸಾಗಿ ಕುಟುಂಬವೊಂದನ್ನು ರಕ್ಷಿಸಿದ ಮಹೀಂದ್ರಾ ಬೊಲೆರೊ! video ಇದೆ

DK Shivakumar
ಕರ್ನಾಟಕ2 hours ago

DK Shivakumar: ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಪ್ರಶ್ನೆಗಳ ಸವಾಲು, ಹೆಜ್ಜೆಗೆ ಒಂದು ಪ್ರಶ್ನೆ ಎಂದ ಡಿಕೆಶಿ

Paris Olympics 202
ಪ್ರಮುಖ ಸುದ್ದಿ2 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಆಗಸ್ಟ್​​ 2ರಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಯ ವಿವರ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ11 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ11 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ11 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌