Train services: ವಿವಿಧ ಕಾಮಗಾರಿ ಹಿನ್ನೆಲೆ ಈ ಮಾರ್ಗದ ರೈಲುಗಳು ಸಂಚಾರ ಭಾಗಶಃ ರದ್ದು - Vistara News

ಬೆಂಗಳೂರು

Train services: ವಿವಿಧ ಕಾಮಗಾರಿ ಹಿನ್ನೆಲೆ ಈ ಮಾರ್ಗದ ರೈಲುಗಳು ಸಂಚಾರ ಭಾಗಶಃ ರದ್ದು

Train services: ವಿವಿಧ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ರೈಲು ಸೇವೆಗಳಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಕೆಲವು ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ಸ್ಥಗಿತಗೊಂಡರೆ, ಮೈಸೂರು-ಮೈಲಾಡುತುರೈ ಎಕ್ಸ್ ಪ್ರೆಸ್ ರೈಲು ವಿಸ್ತರಣೆ ಮಾಡಲಾಗಿದೆ.

VISTARANEWS.COM


on

Train services
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ಯಾರ್ಡ್ ಸೇತುವೆ ಸಂಖ್ಯೆ 867 ಮತ್ತು ಬೆಂಗಳೂರು ಕಂಟೋನ್ಮೆಂಟ್-ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆ ಸಂಖ್ಯೆ 857ರಲ್ಲಿ ವಿವಿಧ ಕಾಮಗಾರಿಯನ್ನು ಇಲಾಖೆಯು ಕೈಗೊಳ್ಳುತ್ತಿದೆ. ಇದರ ಸಲುವಾಗಿ ಕೆಲವು ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ ಮತ್ತು ನಿಯಂತ್ರಣ (Train services) ಮಾಡಲಾಗುತ್ತಿದೆ.

ಈ ರೈಲುಗಳ ಸಂಚಾರ ರದ್ದು

ಜುಲೈ 30, ಆಗಸ್ಟ್ 6 ಮತ್ತು 13ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12658 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಮತ್ತು ಜುಲೈ 31, ಆಗಸ್ಟ್ 7 ಮತ್ತು 14 ರಂದು ಚೆನ್ನೈನಿಂದ ಹೊರಡುವ ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ತಾತ್ಕಾಲಿಕ ರದ್ದಾಗಲಿದೆ.

ಈ ಮಾರ್ಗದ ರೈಲುಗಳು ಭಾಗಶಃ ರದ್ದು

ಜುಲೈ 30, ಆಗಸ್ಟ್ 6 ಮತ್ತು 13ರಂದು ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು, ವೈಟ್ ಫೀಲ್ಡ್-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ನಾಂದೇಡ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16594 ನಾಂದೇಡ್-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲು ಯಲಹಂಕ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 17392 ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲು ಯಶವಂತಪುರ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ & ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ 06244 ಹೊಸಪೇಟೆ-ಕೆಎಸ್ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಯಶವಂತಪುರ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ.

ಇನ್ನೂ ಜುಲೈ 31, ಆಗಸ್ಟ್ 7 ಮತ್ತು 14ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು-ಯಶವಂತಪುರ ನಿಲ್ದಾಣಗಳ ನಡುವೆ & ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ 06243 ಕೆಎಸ್ಆರ್ ಬೆಂಗಳೂರು-ಹೊಸಪೇಟೆ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್ಆರ್ ಬೆಂಗಳೂರು-ಯಶವಂತಪುರನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ. ಈ ರೈಲುಗಳು ಯಶವಂತಪುರ ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಪ್ರಾರಂಭವಾಗಲಿವೆ.

ಮಾರ್ಗ ಬದಲಾವಣೆ

-ಜುಲೈ 29, ಆಗಸ್ಟ್ 5 ಮತ್ತು 12 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11013 ಲೋಕಮಾನ್ಯ ತಿಲಕ್ ಟರ್ಮಿನಸ್-ಕೊಯಮತ್ತೂರು ಡೈಲಿ ಎಕ್ಸ್ ಪ್ರೆಸ್ ರೈಲು ಗೌರಿಬಿದನೂರು, ಬೈಯಪ್ಪನಹಳ್ಳಿ, ಎಸ್ಎಂವಿಟಿ ಬೆಂಗಳೂರು, ಬೈಯಪ್ಪನಹಳ್ಳಿ, ಹೊಸೂರು ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಪೂರ್ವ, ಬೆಂಗಳೂರು ಕಂಟೋನ್ಮೆಂಟ್, ಕೆಎಸ್ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ಬೆಂಗಳೂರಿನ ಎಸ್ಎಂವಿಟಿಯಲ್ಲಿ ಹೆಚ್ಚುವರಿ ನಿಲುಗಡೆ ಇರಲಿದೆ.

-ಜುಲೈ 30, ಆಗಸ್ಟ್ 6 ಮತ್ತು 13 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಎಸ್ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಕ್ಯಾಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ರೈಲು ಸಂಖ್ಯೆ 06269 ಮೈಸೂರು-ಎಸ್ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಎಸ್ಎಂವಿಟಿ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

-ರೈಲು ಸಂಖ್ಯೆ 16593 ಕೆಎಸ್ಆರ್ ಬೆಂಗಳೂರು-ನಾಂದೇಡ್ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ 00:45 ಗಂಟೆಗೆ ಪ್ರಾರಂಭಿಸಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಯಲಹಂಕ ಮಾರ್ಗದ ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

-ರೈಲು ಸಂಖ್ಯೆ 16521 ಬಂಗಾರಪೇಟೆ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಕೃಷ್ಣರಾಜಪುರಂ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

-ರೈಲು ಸಂಖ್ಯೆ 16022 ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಕಾವೇರಿ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಬೈಯಪ್ಪನಹಳ್ಳಿ, ಕೃಷ್ಣರಾಜಪುರಂ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

-ರೈಲು ಸಂಖ್ಯೆ 16021 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ಕಾವೇರಿ ಡೈಲಿ ಎಕ್ಸ್ ಪ್ರೆಸ್ ರೈಲು ಕೃಷ್ಣರಾಜಪುರಂ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕ್ಯಾಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ಇದನ್ನೂ ಓದಿ: Road Accident: ನಿರ್ಲಕ್ಷ್ಯದಿಂದ ಓಡಿಸಿ ಎಂಬಿಬಿಎಸ್‌ ವಿದ್ಯಾರ್ಥಿಯ ಜೀವ ತೆಗೆದ ಟ್ಯಾಂಕರ್ ಚಾಲಕ

ರೈಲುಗಳ ನಿಯಂತ್ರಣ

ಜುಲೈ 30, ಆಗಸ್ಟ್ 6 ಮತ್ತು 13, 2024 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11301 ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸ್ ಪ್ರೆಸ್ ರೈಲನ್ನು ಮಾರ್ಗದಲ್ಲಿ 5 ನಿಮಿಷ, ರೈಲು ಸಂಖ್ಯೆ 16231 ಮೈಲಾಡುತುರೈ-ಮೈಸೂರು ಎಕ್ಸ್ ಪ್ರೆಸ್ ರೈಲನ್ನು ಮಾರ್ಗದಲ್ಲಿ 45 ನಿಮಿಷ & ರೈಲು ಸಂಖ್ಯೆ 16220 ತಿರುಪತಿ-ಚಾಮರಾಜನಗರ ಎಕ್ಸ್ ಪ್ರೆಸ್ ರೈಲನ್ನು 100 ನಿಮಿಷ ಮಾರ್ಗದಲ್ಲಿ ನಿಯಂತ್ರಿಸಲಾಗುತ್ತದೆ.

ಮೈಸೂರು-ಮೈಲಾಡುತುರೈ ಎಕ್ಸ್ ಪ್ರೆಸ್ ರೈಲು ವಿಸ್ತರಣೆ

ಮಯಿಲಾಡುತುರೈ-ಮೈಸೂರು ನಿಲ್ದಾಣಗಳ ನಡುವೆ ಪ್ರತಿದಿನ ಚಲಿಸುವ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಕಡಲೂರು ಪೋರ್ಟ್ವರೆಗೆ ವಿಸ್ತರಿಸಲು ದಕ್ಷಿಣ ರೈಲ್ವೆಯು ಸೂಚಿಸಿದೆ. ಹೀಗಾಗಿ ವಿಸ್ತೃತ ರೈಲು ಸೇವೆಯು ಎರಡೂ ಕಡೆಯಿಂದ ಜುಲೈ 19 ರಿಂದ ಪ್ರಾರಂಭವಾಗಲಿದೆ. ವಿಸ್ತರಣೆಗೊಂಡ ಭಾಗದ ರೈಲಿನ ನಿಲುಗಡೆ ಮತ್ತು ಸಮಯ ಹೀಗಿವೆ..

1) ರೈಲು ಸಂಖ್ಯೆ 16232 ಮೈಸೂರು-ಕಡಲೂರು ಪೋರ್ಟ್ ಡೈಲಿ ಎಕ್ಸ್‌ಪ್ರೆಸ್: ಮಯಿಲಾಡುತುರೈಗೆ 06:45 ಗಂಟೆಗೆ ಆಗಮಿಸಿ, 07:00 ಗಂಟೆಗೆ ನಿರ್ಗಮಿಸಲಿದೆ.
ಸಿರ್ಕಾಝಿಗೆ 07:23 ಗಂಟೆಗೆ ಆಗಮಿಸಿ, 07:24 ಗಂಟೆಗೆ ನಿರ್ಗಮಿಸಲಿದೆ.
ಚಿದಂಬರಂಗೆ 07:41 ಗಂಟೆಗೆ ಆಗಮಿಸಿ, 07:42 ಗಂಟೆಗೆ ನಿರ್ಗಮಿಸಲಿದೆ.
ಕಡಲೂರು ಪೋರ್ಟ್‌ಗೆ 08:35 ಗಂಟೆಗೆ ಆಗಮಿಸಲಿದೆ.

2) ರೈಲು ಸಂಖ್ಯೆ 16231 ಕಡಲೂರು ಪೋರ್ಟ್-ಮೈಸೂರು ಡೈಲಿ ಎಕ್ಸ್‌ಪ್ರೆಸ್ :
ಕಡಲೂರು ಪೋರ್ಟ್ ನಿಲ್ದಾಣದಿಂದ 15:40 ಗಂಟೆಗೆ ನಿರ್ಗಮಿಸಲಿದೆ.
ಚಿದಂಬರಂಗೆ 16:07 ಗಂಟೆಗೆ ಆಗಮಿಸಿ, 16:08 ಗಂಟೆಗೆ ನಿರ್ಗಮಿಸಲಿದೆ.
ಸಿರ್ಕಾಝಿಗೆ 16:23 ಗಂಟೆಗೆ ಆಗಮಿಸಿ,16:24 ಗಂಟೆಗೆ ನಿರ್ಗಮಿಸಲಿದೆ.
ಮಯಿಲಾಡುತುರೈಗೆ 17:30 ಗಂಟೆಗೆ ಆಗಮಿಸಿ,17:55 ಗಂಟೆಗೆ ನಿರ್ಗಮಿಸಲಿದೆ.

ಮೈಸೂರು-ಮೈಲಾಡುತುರೈ ನಿಲ್ದಾಣಗಳ ನಡುವಿನ ನಿಲುಗಡೆ ಮತ್ತು ವೇಳಾಪಟ್ಟಿಯಲ್ಲಿ ಬದಲಾಣೆ ಇರುವುದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

Karnataka Assembly Live: “ಸದ್ಯ ಪೈಲಟ್‌ ಪ್ರಾಜೆಕ್ಟ್‌ ಆಗಿ ಇದನ್ನು ಅಳವಡಿಸಿದ್ದೇವೆ. ಪರಿಣಾಮ ನೋಡಿಕೊಂಡು ನಿಮ್ಮ ಅಭಿಪ್ರಾಯ ತಿಳಿಸಿ. ಸಕಾರಾತ್ಮಕ ಅಭಿಪ್ರಾಯ ಬಂದರೆ ಮುಂದಿನ ಅಧಿವೇಶನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಳವಡಿಸುತ್ತೇವೆ” ಎಂದು ಖಾದರ್‌ ತಿಳಿಸಿದರು. ಸ್ಪೀಕರ್‌ ಕ್ರಮಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ʼಇನ್ನೂ ಎರಡು ವರ್ಷದಲ್ಲಿ ಏನೇನು ಮಾಡಿಸ್ತೀರೋ ನೀವುʼ ಎಂಬ ಉದ್ಗಾರವೂ ಶಾಸಕರ ಕಡೆಯಿಂದ ಕೇಳಿಬಂತು.

VISTARANEWS.COM


on

UT Khader karnataka assembly live
Koo

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ (Vidhan sabha Session) ಶಾಸಕರ ಹಾಜರಾತಿ ಕೊರತೆ ತುಂಬುವ ವಿಶಿಷ್ಟ ಪ್ರಯತ್ನವೊಂದನ್ನು ಸ್ಪೀಕರ್‌ ಯ.ಟಿ ಖಾದರ್‌ (Speaker UT Khader) ಕೈಗೊಂಡಿದ್ದಾರೆ. ಮಧ್ಯಾಹ್ನ ಭೋಜನದ ಬಳಿಕ ಶಾಸಕರು ವಿಶ್ರಾಂತಿ ಪಡೆಯಲು ಸುಖಾಸನಗಳನ್ನು (ರಿಕ್ಲೈನರ್ಸ್)‌ ಹಾಕಿಸಿದ್ದು, ಇಲ್ಲಿ ಶಾಸಕರು ವಿಶ್ರಾಂತಿ ಪಡೆಯಬಹುದಾಗಿದೆ. ಈ ವಿಚಾರವನ್ನು ಸ್ಪೀಕರ್‌ ಇಂದು ಕಲಾಪದಲ್ಲಿ (karnataka assembly live) ತಿಳಿಸಿದರು.

ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಲೇ ಸ್ಪೀಕರ್‌ ಈ ವಿಚಾರವನ್ನು ಪ್ರಸ್ತಾವಿಸಿದರು. ಹಾಜರಾತಿಯ ಕೊರತೆಯ ಬಗ್ಗೆ ಉಲ್ಲೇಖಿಸಿದರು. ಹಾಜರಾತಿ ಹೆಚ್ಚಿಸಲು ತಾವು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದರು. “ಶಾಸಕರು ಬೆಳಗ್ಗೆ ಬೇಗ ಬರಲಿ ಅನ್ನುವ ಉದ್ದೇಶದಿಂದ ಬೆಳಗ್ಗೆ ತಿಂಡಿಯ ವ್ಯವಸ್ಥೆ ಮಾಡಿಸಿದೆ. ಆಮೇಲೆ ಮಧ್ಯಾಹ್ನ ಊಟಕ್ಕಾಗಿ ದೂರ ಹೋಗಿ ಬರುವುದಕ್ಕೆ ತಡವಾಗುತ್ತದೆ ಎಂಬ ಕಾರಣಕ್ಕಾಗಿ ಉತ್ತಮವಾದ ಊಟದ ವ್ಯವಸ್ಥೆ ಮಾಡಿಸಲಾಗಿದೆ. ಕೆಲವರು ಊಟ ಚೆನ್ನಾಗಿತ್ತು, ಶಾಸಕರ ಭವನಕ್ಕೆ ಹೋಗಿ ನಿದ್ದೆ ಮಾಡಿ ಬರುತ್ತೇನೆ ಎಂದವನು ಬಳಿಕ ಬರುವುದೇ ಇಲ್ಲ. ಇದನ್ನು ತಡೆಯಲು ಇಲ್ಲೇ ಸುಖಾಸನಗಳನ್ನು (ರಿಕ್ಲೈನರ್ಸ್)‌ ಹಾಕಿಸಿದ್ದೇನೆ. ನಿದ್ರೆ ಬಂದರೆ ಇಲ್ಲೇ ಮಾಡಿ. ದೂರ ಹೋಗಬೇಡಿ. ನಿಮ್ಮ ಅಗತ್ಯ ಬಿದ್ದರೆ ಕೂಡಲೇ ಕರೆಸಿಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ” ಎಂದು ಸ್ಪೀಕರ್‌ ವಿವರಿಸಿದರು.

“ಸದ್ಯ ಪೈಲಟ್‌ ಪ್ರಾಜೆಕ್ಟ್‌ ಆಗಿ ಇದನ್ನು ಅಳವಡಿಸಿದ್ದೇವೆ. ಪರಿಣಾಮ ನೋಡಿಕೊಂಡು ನಿಮ್ಮ ಅಭಿಪ್ರಾಯ ತಿಳಿಸಿ. ಸಕಾರಾತ್ಮಕ ಅಭಿಪ್ರಾಯ ಬಂದರೆ ಮುಂದಿನ ಅಧಿವೇಶನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಳವಡಿಸುತ್ತೇವೆ” ಎಂದು ಖಾದರ್‌ ತಿಳಿಸಿದರು. ಸ್ಪೀಕರ್‌ ಕ್ರಮಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ʼಇನ್ನೂ ಎರಡು ವರ್ಷದಲ್ಲಿ ಏನೇನು ಮಾಡಿಸ್ತೀರೋ ನೀವುʼ ಎಂಬ ಉದ್ಗಾರವೂ ಶಾಸಕರ ಕಡೆಯಿಂದ ಕೇಳಿಬಂತು.

ʼಲಾಂಜ್‌ನಲ್ಲಿ ಶಿಸ್ತು ಕಾಪಾಡಿ. ಪಿಎಗಳನ್ನು ಮತ್ತಿತರರನ್ನು ಕರೆದುಕೊಂಡು ಸ್ಪೀಕರ್‌ ಕೊಠಡಿಗೆ ನುಗ್ಗಬೇಡಿ. ಮಾರ್ಷಲ್‌ಗಳ ಜೊತೆಗೆ ಗುದ್ದಾಡಬೇಡಿ. ಇದರಿಂದ ನಿಮ್ಮ ಘನತೆ ಹೆಚ್ಚುವುದಿಲ್ಲ. ಅವರು ನಮ್ಮ ಆದೇಶ ಪಾಲಿಸುತ್ತಾರೆ ಅಷ್ಟೇʼʼ ಎಂದು ಸ್ಪೀಕರ್‌ ಶಾಸಕರಿಗೆ ಕಿವಿಮಾತು ಹೇಳಿದರು.

ಕಲಾಪ ಮುಂದೂಡಿಕೆ

ಇಂದು ಕಲಾಪ ಆರಂಭವಾಗುತ್ತಿದ್ದಂತೆ ಗದ್ದಲ ಶುರುವಾಯಿತು. ವಾಲ್ಮೀಕಿ ಹಗರಣದಲ್ಲಿ (Valmiki corporation Scam) ದುಡ್ಡು ಹೊಡೆದ ಸರ್ಕಾರಕ್ಕೆ ಧಿಕ್ಕಾರ ಎಂದು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಕೂಗಿದರು. ಸದನದಲ್ಲಿ ಮತ್ತೆ ಹೋರಾಟ ಮಾಡಲು ಮುಂದಾದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ನಿಂತರು. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸದಸ್ಯರು ಕೂಡ ಎದ್ದುನಿಂತು ಕೂಗಾಡಿದರು. ಉಭಯ ಪಕ್ಷಗಳ ಸದಸ್ಯರನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಗದೆ ಸದನವನ್ನು ಸ್ಪೀಕರ್‌ ಹತ್ತು ನಿಮಿಷಗಳ ಕಾಲ ಮುಂದೂಡಿದರು.

ಇದನ್ನೂ ಓದಿ: Karnataka Assembly Live: 4ನೇ ದಿನದ ವಿಧಾನಮಂಡಲ ಕಲಾಪದಲ್ಲೂ ವಾಲ್ಮೀಕಿ ಹಗರಣದ ಕರಿನೆರಳು ನಿರೀಕ್ಷೆ; ಅಸೆಂಬ್ಲಿ ಲೈವ್‌ ಇಲ್ಲಿದೆ ನೋಡಿ

Continue Reading

ಬೆಂಗಳೂರು

Road Accident: ನಿರ್ಲಕ್ಷ್ಯದಿಂದ ಓಡಿಸಿ ಎಂಬಿಬಿಎಸ್‌ ವಿದ್ಯಾರ್ಥಿಯ ಜೀವ ತೆಗೆದ ಟ್ಯಾಂಕರ್ ಚಾಲಕ

Road Accident: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 23 ವರ್ಷದ ಇಶಾನ್ ಎಂಬ ಎಂಬಿಬಿಎಸ್‌ ವಿದ್ಯಾರ್ಥಿಗೆ. ಎದುರುಗಡೆಯಿಂದ ಯಮನಂತೆ ಬಂದ ವಾಟರ್ ಟ್ಯಾಂಕರ್‌ ಅಪ್ಪಳಿಸಿದೆ. ವಿದ್ಯಾರ್ಥಿಗೆ ಗುದ್ದಿ, ಇಶಾನ್ ಮೇಲೆಯೇ ಹರಿದಿದೆ.

VISTARANEWS.COM


on

road accident mbbs student death
Koo

ಬೆಂಗಳೂರು: ವಾಟರ್‌ ಟ್ಯಾಂಕರ್‌ (Water Tanker) ಚಾಲಕನೊಬ್ಬನ (Tanker Driver) ನಿರ್ಲಕ್ಷ್ಯ ಹಾಗೂ ವೇಗದ ಚಾಲನೆಗೆ ಎಂಬಿಬಿಎಸ್‌ ವಿದ್ಯಾರ್ಥಿಯೊಬ್ಬ (MBBS Student) ಬಲಿಯಾಗಿದ್ದಾನೆ. ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಈ ರಸ್ತೆ ಅಪಘಾತ (Road Accident) ನಡೆದಿದೆ.

ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 23 ವರ್ಷದ ಇಶಾನ್ ಎಂಬ ಎಂಬಿಬಿಎಸ್‌ ವಿದ್ಯಾರ್ಥಿಗೆ. ಎದುರುಗಡೆಯಿಂದ ಯಮನಂತೆ ಬಂದ ವಾಟರ್ ಟ್ಯಾಂಕರ್‌ ಅಪ್ಪಳಿಸಿದೆ. ವಿದ್ಯಾರ್ಥಿಗೆ ಗುದ್ದಿ, ಇಶಾನ್ ಮೇಲೆಯೇ ಹರಿದಿದೆ. ಇಷ್ಟಾದರೂ ಚಾಲಕ ತಕ್ಷಣ ನಿಲ್ಲಿಸದೆ ಮುಂದೆ (Hit and Run) ಸಾಗಿದ್ದಾನೆ. ಚಲಿಸುತ್ತಿದ್ದ ಟ್ಯಾಂಕರ್ ಅನ್ನು ದ್ವಿಚಕ್ರ ವಾಹನ ಸವಾರರು ತಡೆದು ನಿಲ್ಲಿಸಿ ಚಾಲಕನನ್ನು ಹಿಡಿದಿದ್ದಾರೆ.

ಸ್ಥಳಕ್ಕೆ ಬಂದು ಮಗನ ಮೃತ ದೇಹ ನೋಡಿದ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಬಿಕ್ಕಿ ಬಿಕ್ಕಿ ಅತ್ತ ತಾಯಿ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಶಾನ್ ಎಂಬಿಬಿಎಸ್ ಫೈನಲ್ ಇಯರ್ ಸ್ಟೂಡೆಂಟ್ ಆಗಿದ್ದು, ಇವರ ಕುಟುಂಬ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ವಾಸವಿತ್ತು. ನಿನ್ನೆ ಸಂಜೆ ಸ್ನೇಹಿತನನ್ನು ಮೀಟ್ ಆಗಲು ಥಣಿಸಂದ್ರ ಬಳಿ ಈತ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ.

ಮದ್ಯ ಸೇವಿಸಿ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, ಮೂವರು ಯುವಕರ ಸಾವು

ಕೊಪ್ಪಳ: ರೇಲ್ವೆ ಟ್ರ್ಯಾಕ್ (Railway Track) ಮೇಲೆ ಮದ್ಯ ಸೇವಿಸಿ (Liquor) ಅಲ್ಲೇ ಮಲಗಿದ್ದ ಯುವಕರ‌ ಮೇಲೆ ರೈಲು (Train Accident) ಹರಿದಿದ್ದು, ಸ್ಥಳದಲ್ಲಿಯೇ ಮೂರು ಜನ ಯುವಕರು ಸಾವಿಗೀಡಾಗಿದ್ದಾರೆ. ಈ ಘೋರ ದುರಂತ (Horrible Accident) ಕೊಪ್ಪಳ ಜಿಲ್ಲೆ (Koppala news) ಗಂಗಾವತಿ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಮೃತ ಯುವಕರನ್ನು ಮೌನೇಶ್ ಪತ್ತಾರ(23), ಸುನೀಲ್ (23), ವೆಂಕಟ ಭೀಮನಾಯ್ಕ (20) ಎಂದು ಗುರುತಿಸಲಾಗಿದೆ. ಮೂವರೂ ಗಂಗಾವತಿಯವರಾಗಿದ್ದಾರೆ. ಇವರು ಕುಡಿದ ಮತ್ತಿನಲ್ಲಿ ರೇಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು ಎಂಬುದಕ್ಕೆ ಸ್ಥಳದಲ್ಲಿದ್ದ ಮದ್ಯದ ಬಾಟಲಿಗಳು ಸಾಕ್ಷಿಯಾಗಿವೆ. ರೈಲು ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುತ್ತಿತ್ತು. ಮದ್ಯದ ಅಮಲಿನಲ್ಲಿ ರೈಲಿನ ಆಗಮನ ಯುವಕರಿಗೆ ಗೊತ್ತಾಗಿರಲಿಕ್ಕಿಲ್ಲ ಎನ್ನಲಾಗಿದೆ. ಗದಗ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆ ಅನಾಹುತ; ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು

ಹಾವೇರಿ: ರಾಜ್ಯದಲ್ಲಿ ಮಳೆ ಅನಾಹುತ ಸೃಷ್ಟಿಸುತ್ತಿದೆ. ಹಾವೇರಿಯಲ್ಲಿ ಮಳೆಗೆ ಒದ್ದೆಯಾದ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಹಾಗೂ ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ದುರಂತ ಸಂಭವಿಸಿದೆ.

ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇವರ ತಾಯಿ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ರಕ್ಷಣೆಗೆ ಧಾವಿಸಿದ್ದು, ಮೃತ ದೇಹಗಳನ್ನ ಹೊರ ತೆಗೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Illicit relationship : ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

Continue Reading

ಪ್ರಮುಖ ಸುದ್ದಿ

Karnataka Assembly Live: 4ನೇ ದಿನದ ವಿಧಾನಮಂಡಲ ಕಲಾಪದಲ್ಲೂ ವಾಲ್ಮೀಕಿ ಹಗರಣದ ಕರಿನೆರಳು ನಿರೀಕ್ಷೆ; ಅಸೆಂಬ್ಲಿ ಲೈವ್‌ ಇಲ್ಲಿದೆ ನೋಡಿ

Karnataka Assembly Live: ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲು ಕಡ್ಡಾಯ ವಿಧೇಯಕದ ಕುರಿತ ಚರ್ಚೆಯೂ ಭುಗಿಲೆದ್ದಿದೆ. ವಾಲ್ಮೀಕಿ, ಮುಡಾ ಹಗರಣಗಳಿಂದ ಗಮನವನ್ನು ಬೇರೆಡೆಗೆ ಹರಿಸಲು ಸಿದ್ದರಾಮಯ್ಯ ಸರಕಾರ ಈ ಭಾವನಾತ್ಮಕ ವಿಷಯ ಎತ್ತಿಹಾಕಿದೆ ಎಂಬ ಆರೋಪ ಪ್ರತಿಪಕ್ಷಗಳದ್ದಾಗಿದೆ. ಪ್ರತಿಪಕ್ಷಗಳ ಆ ಆರೋಪದ ಬಿಸಿ ಕಲಾಪದಲ್ಲೂ ಪ್ರತಿಧ್ವನಿಸಬಹುದು.

VISTARANEWS.COM


on

CM Siddaramaiah and R Ashok karnataka assembly live
Koo

ಬೆಂಗಳೂರು: ವಿಧಾನ ಮಂಡಲದ ಮೂರನೇ ದಿನದ ಕಲಾಪ (Karnataka Assembly Live) ಗದ್ದಲದಲ್ಲೇ ಮುಗಿದಿದ್ದು, ನಾಲ್ಕನೇ ದಿನವೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಲು ಪ್ರತಿಪಕ್ಷಗಳು (Opposition parties) ಮುಂದಾಗಿವೆ. ವಾಲ್ಮೀಕಿ ನಿಗಮ ಹಗರಣದ (Valmiki Corporation Scam) ಕುರಿತ ವಿಪಕ್ಷಗಳ ಆರೋಪಗಳಿಗೆ ನಿನ್ನೆ ಉತ್ತರ ನೀಡಲು ಸಿಎಂ ಸಿದ್ದರಾಮಯ್ಯ (CM Siddaramaiah) ಆರಂಭಿಸಿದ್ದು, ಇಂದು ಕೂಡ ಮುಂದುವರಿಸಲಿದ್ದಾರೆ.

ನಿನ್ನೆ ಸಿಎಂ ವಿಧಾನಸಭೆ (Vidhan Sabha) ಕಲಾಪದಲ್ಲಿ ಉತ್ತರ ನೀಡಲು ಆರಂಭಿಸುತ್ತಿದ್ದಂತೆ ಆಕ್ಷೇಪ ತೆಗೆದಿದ್ದ ಪ್ರತಿಪಕ್ಷ ಬಿಜೆಪಿ ಸದಸ್ಯರು ಗದ್ದಲ ಆರಂಭಿಸಿದ್ದರು. ವಾಲ್ಮಿಕಿ ನಿಗಮದ ಹಗರಣ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್​ ಎಂಬವರ ಡೆತ್ ನೋಟ್​ ಓದುವಾಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನೇ ಬಿಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ (R Ashok) ಆರೋಪಿಸಿದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಸದನದ ಬಾವಿಗೆ ಇಳಿದ ಪ್ರತಿಭಟನೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕೊಡುವಾಗ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿರುವ ಹಿನ್ನೆಲೆಯಲ್ಲಿಯ ಸ್ಪೀಕರ್​ ಯುಟಿ ಖಾದರ್ (Speaker UT Khader) ಸಂಧಾನ ಸಭೆ ಕರೆದರು. ಆಡಳಿತ ಪಕ್ಷದ ಕಡೆಯಿಂದ ಸಿದ್ದರಾಮಯ್ಯ, ಎಚ್ ಕೆ ಪಾಟೀಲ್, ಜಾರ್ಜ್ ಹಾಗೂ ವಿಪಕ್ಷಗಳಿಂದ ಆರ್ ಆಶೋಕ್, ವಿಜೇಯೇಂದ್ರ, ಸುರೇಶ್ ಬಾಬು ಇದ್ದರು. ಸಂಧಾನ ಸಭೆ ನಡೆಸಿದ ಬಳಿಕವೂ ವಿಪಕ್ಷಗಳ ಸದಸ್ಯರು ತಮ್ಮ ಹೋರಾಟ ಮುಂದುವರಿಸಿದ ಕಾರಣ ಕಲಾಪ ಬಹುತೇಕ ಗದ್ದಲದಲ್ಲಿಯೇ ಅಂತ್ಯಗೊಂಡಿತು.

ನಿಯಮ‌ 69ರ ಅಡಿಯಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮ ಕುರಿತಾದ ಚರ್ಚೆಗೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ನೀಡಿದ್ದಾರೆ. ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ದರು. ನಿಮ್ಮಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ಇದಕ್ಕೂ ಹಿಂದಿನ ದಿನ ಮಾತನಾಡಿದ್ದ ಪ್ರತಿಪಕ್ಷ ನಾಯಕ ಅಶೋಕ್‌, ಸರ್ಕಾರದ ತಪ್ಪು ನಡೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ಹೈಕಮಾಂಡ್‌ಗೆ ಕಪ್ಪಕಾಣಿಕೆ ಸಲ್ಲಿಸಲು ನಿಗಮದ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದಿದ್ದ ಅಶೋಕ್‌, 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದರು. ಈ ಹಣ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಹೇಗೆ ವಿನಿಯೋಗವಾಗಬೇಕಿತ್ತು, ಹೇಗೆ ಅಕ್ರಮವಾಗಿದೆ ಎಂಬುದನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದರು. ಆ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.

ಈ ನಡುವೆ, ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲು ಕಡ್ಡಾಯ ವಿಧೇಯಕದ ಕುರಿತ ಚರ್ಚೆಯೂ ಭುಗಿಲೆದ್ದಿದೆ. ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆಗೆ ಇನ್ನೂ ಪ್ರತಿಪಕ್ಷ ಅವಕಾಶ ಕೇಳಿಲ್ಲ ಹಾಗೂ ಸರಕಾರವೂ ಅದನ್ನು ಪ್ರಸ್ತಾಪಿಸಿಲ್ಲ. ಆದರೆ ವಾಲ್ಮೀಕಿ, ಮುಡಾ ಹಗರಣಗಳಿಂದ ಗಮನವನ್ನು ಬೇರೆಡೆಗೆ ಹರಿಸಲು ಸಿದ್ದರಾಮಯ್ಯ ಸರಕಾರ ಈ ಭಾವನಾತ್ಮಕ ವಿಷಯ ಎತ್ತಿಹಾಕಿದೆ ಎಂಬ ಆರೋಪ ಪ್ರತಿಪಕ್ಷಗಳದ್ದಾಗಿದೆ. ಪ್ರತಿಪಕ್ಷಗಳ ಆ ಆರೋಪದ ಬಿಸಿ ಕಲಾಪದಲ್ಲೂ ಪ್ರತಿಧ್ವನಿಸಬಹುದು.

ಇದಕ್ಕೂ ಮುನ್ನ, ಜಿಟಿ ಮಾಲ್‌ನಲ್ಲಿ ನಡೆದ ರೈತನಿಗೆ ಅವಮಾನ ಸಂಗತಿಯೂ ಸದನದಲ್ಲಿ ಪ್ರಸ್ತಾವವಾಗಿತ್ತು. ಈ ಘಟನೆಯ ಕುರಿತು ಸರ್ಕಾರದ ನಿಲುವು ಏನು ಎಂದು ಸ್ಪೀಕರ್‌ ಪ್ರಶ್ನಿಸಿದ್ದರು. ಮಾಲ್‌ ಅನ್ನು ಏಳು ದಿನ ಮುಚ್ಚಿಸಲಾಗುವುದು ಎಂದು ನಗರಾಭೀವೃದ್ಧಿ ಸಚಿವ ಬೈರತಿ ಸುರೇಶ್‌ ಹೇಳಿದ್ದರು. ಅದರಂತೆ ಇಂದಿನಿಂದ ಜಿಟಿ ಮಾಲ್‌ ಮುಚ್ಚಿ ಸೀಲ್‌ ಮಾಡಲಾಗಿದೆ.

ಇದನ್ನೂ ಓದಿ: Karnataka Assembly Live: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ 7 ದಿನ ಬಂದ್: ವಿಧಾನಸಭೆಯಲ್ಲಿ ಘೋಷಣೆ, ವಿಸ್ತಾರ್‌ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್

Continue Reading

ಕ್ರೈಂ

Horrible Accident: ಮದ್ಯ ಸೇವಿಸಿ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, ಮೂವರು ಯುವಕರ ಸಾವು

Horrible Accident: ಮೃತ ಯುವಕರನ್ನು ಮೌನೇಶ್ ಪತ್ತಾರ(23), ಸುನೀಲ್ (23), ವೆಂಕಟ ಭೀಮನಾಯ್ಕ (20) ಎಂದು ಗುರುತಿಸಲಾಗಿದೆ. ಮೂವರೂ ಗಂಗಾವತಿಯವರಾಗಿದ್ದಾರೆ. ಇವರು ಕುಡಿದ ಮತ್ತಿನಲ್ಲಿ ರೇಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು ಎಂಬುದಕ್ಕೆ ಸ್ಥಳದಲ್ಲಿದ್ದ ಮದ್ಯದ ಬಾಟಲಿಗಳು ಸಾಕ್ಷಿಯಾಗಿವೆ.

VISTARANEWS.COM


on

railway track horrible accident
Koo

ಕೊಪ್ಪಳ: ರೇಲ್ವೆ ಟ್ರ್ಯಾಕ್ (Railway Track) ಮೇಲೆ ಮದ್ಯ ಸೇವಿಸಿ (Liquor) ಅಲ್ಲೇ ಮಲಗಿದ್ದ ಯುವಕರ‌ ಮೇಲೆ ರೈಲು (Train Accident) ಹರಿದಿದ್ದು, ಸ್ಥಳದಲ್ಲಿಯೇ ಮೂರು ಜನ ಯುವಕರು ಸಾವಿಗೀಡಾಗಿದ್ದಾರೆ. ಈ ಘೋರ ದುರಂತ (Horrible Accident) ಕೊಪ್ಪಳ ಜಿಲ್ಲೆ (Koppala news) ಗಂಗಾವತಿ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಮೃತ ಯುವಕರನ್ನು ಮೌನೇಶ್ ಪತ್ತಾರ(23), ಸುನೀಲ್ (23), ವೆಂಕಟ ಭೀಮನಾಯ್ಕ (20) ಎಂದು ಗುರುತಿಸಲಾಗಿದೆ. ಮೂವರೂ ಗಂಗಾವತಿಯವರಾಗಿದ್ದಾರೆ. ಇವರು ಕುಡಿದ ಮತ್ತಿನಲ್ಲಿ ರೇಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು ಎಂಬುದಕ್ಕೆ ಸ್ಥಳದಲ್ಲಿದ್ದ ಮದ್ಯದ ಬಾಟಲಿಗಳು ಸಾಕ್ಷಿಯಾಗಿವೆ. ರೈಲು ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುತ್ತಿತ್ತು. ಮದ್ಯದ ಅಮಲಿನಲ್ಲಿ ರೈಲಿನ ಆಗಮನ ಯುವಕರಿಗೆ ಗೊತ್ತಾಗಿರಲಿಕ್ಕಿಲ್ಲ ಎನ್ನಲಾಗಿದೆ. ದೇಹಗಳು ಛಿದ್ರಛಿದ್ರವಾಗಿವೆ. ಗದಗ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆ ಅನಾಹುತ; ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು

ಹಾವೇರಿ: ರಾಜ್ಯದಲ್ಲಿ ಮಳೆ ಅನಾಹುತ ಸೃಷ್ಟಿಸುತ್ತಿದೆ. ಹಾವೇರಿಯಲ್ಲಿ (Haveri news) ಮಳೆಗೆ ಒದ್ದೆಯಾದ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಹಾಗೂ ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ದುರಂತ ಸಂಭವಿಸಿದೆ.

ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇವರ ತಾಯಿ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ರಕ್ಷಣೆಗೆ ಧಾವಿಸಿದ್ದು, ಮೃತ ದೇಹಗಳನ್ನ ಹೊರ ತೆಗೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಾಂಜಾ ನಶೆಯಲ್ಲಿ ಬಾಲಕಿಯರನ್ನು ಬೆದರಿಸಿದ ಪುಂಡರು

ಬೆಂಗಳೂರು: ಕಾರಿನಲ್ಲಿ ಬಂದ ಮದ್ಯ ಹಾಗೂ ಗಾಂಜಾ ಮತ್ತಿನಲ್ಲಿ ಬಂದ ಪುಂಡರ ಗುಂಪೊಂದು, ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕಿಯರಿಗೆ ಕಿರುಕುಳ ನೀಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ (Bangalore News). ಇನ್ನೋವಾ ಕಾರಿನಲ್ಲಿ ಬಂದಿದ್ದ ಪುಂಡರು ಕೃತ್ಯ ಎಸಗಿದ್ದು ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀರ ಮೇಲೂ ದಾಳಿ ಮಾಡಿದ್ದಾರೆ. ಬೆಂಗಳೂರಿನ ಎಚ್​ಎಎಲ್ ಬಳಿಯಿರುವ ಇರುವ ಖಾಸಗಿ ಶಾಲೆಯ ಮಕ್ಕಳ ಜೊತೆ ಅಸಭ್ಯ ವರ್ತನೆ ತೋರಲಾಗಿದೆ.

ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರನ್ನು ಫುಟ್​ಪಾತ್ ಮೇಲೆ ಹತ್ತಿಸಿದ್ದರು. ಬಳಿಕ ಮಕ್ಕಳಿಗೆ ಹೆದರಿಸಲು ಯತ್ನಿಸಿದ್ದ. ಈ ವೇಳೆ ಕಾರಿನಲ್ಲಿದ್ದ ಒಬ್ಬ ನಶೆಯಲ್ಲಿ ತೂರಾಡಿ ಕೆಳಗೆ ಬಿದ್ದಿದ್ದಾನೆ. ಅಲ್ಲದೆ ಮಕ್ಕಳ ಮುಂದೆಯೇ ಅಸಭ್ಯ ವರ್ತನೆ ತೋರಿದ್ದಾನೆ. ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಅವರ ಮೇಲೆ ದರ್ಪ ತೋರಿದ್ದಾರೆ. ಪ್ರಶ್ನೆ ಮಾಡಿದ ಸಾರ್ವಜನಿಕನ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದರು. ತಕ್ಷಣ ಪೊಲೀಸ್​ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೊಯ್ಸಳ ವಾಹನ ಬರುವಷ್ಟರಲ್ಲಿ ಕಾರಿನಲ್ಲಿದ್ದವು ಪರಾರಿಯಾಗಿದ್ದಾರೆ. ಗಾಂಜಾ ನಶೆ ಹಾಗು ಕುಡಿತದ ಅಮಲಿನಲ್ಲಿ ಕೃತ್ಯ ಎಸಗಿರುವ ಸಾಧ್ಯತೆ ಎಂದು ಸ್ಥಳೀಯರ ಶಂಕಿಸಿದ್ದಾರೆ. ಎಚ್​​ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ: GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

Continue Reading
Advertisement
Kannada Actress Many opportunities for this actress before the release Back Benchers'!
ಸ್ಯಾಂಡಲ್ ವುಡ್16 mins ago

Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

Donald Trump
ವಿದೇಶ23 mins ago

Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

ಪ್ರಮುಖ ಸುದ್ದಿ38 mins ago

Olympic Games: ಒಲಿಂಪಿಕ್ಸ್​ನಲ್ಲಿ ಮಹಿಳೆಯರು ಮೊದಲ ಬಾರಿಗೆ ಸ್ಪರ್ಧಿಸಿದ್ದು ಯಾವಾಗ?

Ram Pothineni double ismart second song out
ಟಾಲಿವುಡ್1 hour ago

Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

UT Khader karnataka assembly live
ಪ್ರಮುಖ ಸುದ್ದಿ1 hour ago

Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

Sri Lanka Tour
ಕ್ರೀಡೆ1 hour ago

Sri Lanka Tour: ಸಂಜು, ಅಭಿಷೇಕ್​ಗೆ ಅವಕಾಶ ನೀಡದಕ್ಕೆ ಬಿಸಿಸಿಐ ವಿರುದ್ಧ ಕಿಡಿಕಾರಿದ ಸಂಸದ ​ತರೂರ್

Gold Rate Today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬಂಗಾರ ಇಂದು ಇಷ್ಟು ಅಗ್ಗ

Tharun Sudhir gives Darshan a wedding invitation card and visits Jail
ಟಾಲಿವುಡ್1 hour ago

Tharun Sudhir: ದರ್ಶನ್‌ಗೆ ಮದುವೆ ಇನ್ವಿಟೇಶನ್‌ ಕಾರ್ಡ್‌ ಕೊಟ್ಟು, ಆಶೀರ್ವಾದ ಪಡೆಯಲು ಜೈಲಿಗೆ ಭೇಟಿ ಕೊಡಲಿದ್ದಾರಂತೆ ತರುಣ್ ಸುಧೀರ್

Train services
ಬೆಂಗಳೂರು2 hours ago

Train services: ವಿವಿಧ ಕಾಮಗಾರಿ ಹಿನ್ನೆಲೆ ಈ ಮಾರ್ಗದ ರೈಲುಗಳು ಸಂಚಾರ ಭಾಗಶಃ ರದ್ದು

road accident mbbs student death
ಬೆಂಗಳೂರು2 hours ago

Road Accident: ನಿರ್ಲಕ್ಷ್ಯದಿಂದ ಓಡಿಸಿ ಎಂಬಿಬಿಎಸ್‌ ವಿದ್ಯಾರ್ಥಿಯ ಜೀವ ತೆಗೆದ ಟ್ಯಾಂಕರ್ ಚಾಲಕ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ21 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ5 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ5 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌