Tungabhadra Dam: ರಾಜ್ಯದ ಎಲ್ಲ ಡ್ಯಾಮ್‌ಗಳ ಪರಿಶೀಲನೆಗೆ ಸಮಿತಿ ರಚನೆ: ಡಿ.ಕೆ. ಶಿವಕುಮಾರ್ ಸುಳಿವು - Vistara News

ಬೆಂಗಳೂರು

Tungabhadra Dam: ರಾಜ್ಯದ ಎಲ್ಲ ಡ್ಯಾಮ್‌ಗಳ ಪರಿಶೀಲನೆಗೆ ಸಮಿತಿ ರಚನೆ: ಡಿ.ಕೆ. ಶಿವಕುಮಾರ್ ಸುಳಿವು

Tungabhadra Dam: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಘಟನೆಯ ಬಳಿಕ ಸರ್ಕಾರ ಎಚ್ಚೆತ್ತುಕೊಂಡಿದ್ದು, ಎಲ್ಲ ಡ್ಯಾಮ್‌ಗಳ ಗುಣಮಟ್ಟ ಪರಿಶೀಲನೆಗೆ ಸಮಿತಿ ರಚಿಸಲು ಮುಂದಾಗಿದೆ. ತಜ್ಞರ ನೇತೃತ್ವದಲ್ಲಿ ಪರಿಶೀಲನೆ ಸಮಿತಿ ರಚಿಸುವ ಸಾಧ್ಯತೆ ಇದೆ. ಸಮಿತಿ ಅಣೆಕಟ್ಟುಗಳನ್ನು ಪರಿಶೀಲಿಸಿದ ಬಳಿಕ ವಾಸ್ತವಾಂಶವನ್ನು ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುಳಿವು ನೀಡಿದ್ದಾರೆ.

VISTARANEWS.COM


on

Tungabhadra Dam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು, ಅಪಾರ ಪ್ರಮಾಣದ ನೀರು ವ್ಯರ್ಥವಾಗುತ್ತಿದೆ. ಜತೆಗೆ ನದಿಪಾತ್ರಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಇದೀಗ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಎಲ್ಲ ಡ್ಯಾಮ್‌ಗಳ ಗುಣಮಟ್ಟ ಪರಿಶೀಲನೆಗೆ ಸಮಿತಿ ರಚಿಸಲು ಮುಂದಾಗಿದೆ. ತಜ್ಞರ ನೇತೃತ್ವದಲ್ಲಿ ಪರಿಶೀಲನೆ ಸಮಿತಿ ರಚಿಸುವ ಸಾಧ್ಯತೆ ಇದೆ. ಸಮಿತಿ ಅಣೆಕಟ್ಟುಗಳನ್ನು ಪರಿಶೀಲಿಸಿದ ಬಳಿಕ ವಾಸ್ತವಾಂಶವನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಈ ಬಗ್ಗೆ ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸುಳಿವು ನೀಡಿದ್ದಾರೆ.

ಕ್ರಮ ಕೈಗೊಂಡಿದ್ದೇವೆ

ತುಂಗಭದ್ರಾ ಡ್ಯಾಮ್‌ಗೆ ಭೇಟಿ ನೀಡಿರುವ ವಿಚಾರದ ಬಗ್ಗೆ ಮಾತನಾಡಿದ ಡಿಕೆಶಿ, ʼʼಟಿಬಿ ಡ್ಯಾಮ್‌ಗೆ ಹೋಗಿದ್ದೆ. ದುರಸ್ತಿಗೆ ಕ್ರಮ ತೆಗೆದುಕೊಂಡಿದ್ದೇವೆ. ಜತೆಗೆ ಯಾರಿಗೂ ತೊಂದರೆಯಾಗದಂತೆ ತಕ್ಷಣವೇ ಮುಂಜಾಗ್ರತೆ ವಹಿಸಲಾಗಿದೆ. ದುರಸ್ತಿ ಕುರಿತು ಎಲ್ಲ ಗುತ್ತಿಗೆದಾರರ ಜತೆ ಮಾತಾಡಿದ್ದೇನೆ. ಡ್ಯಾಮ್‌ನ ಸ್ಕೆಚ್‌ ಕಳಿಸಿಕೊಟ್ಟಿದ್ದೇವೆ. ನಾಲ್ಕೈದು ದಿನಗಳಲ್ಲಿ ದುರಸ್ತಿಯಾಗಲಿದೆʼʼ ಎಂದು ತಿಳಿಸಿದ್ದಾರೆ.

ನಾಳೆ ಸಿಎಂ ಭೇಟಿ

ʼʼನಾಳೆ (ಆಗಸ್ಟ್‌ 13) ಮುಖ್ಯಮಂತ್ರಿ ಸಿದ್ದರಾಮಯ್ಯ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ. ನಾನು ತಂತ್ರಜ್ಞರೊಂದಿಗೆ ಚರ್ಚೆ ನಡೆಸಿದ್ದೇನೆ. ಯಾರು ಗಾಬರಿ ಪಡಬೇಕಿಲ್ಲ. ಬಹಳ ಅಪಾಯಕಾರಿ ಪರಿಸ್ಥಿತಿ ಇದ್ದಿದ್ದಂತೂ ಹೌದು. ಡ್ಯಾಂನ 70 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹೀಗೆ ಆಗಿದೆ. ಸುರಕ್ಷತೆ ಖಚಿತಪಡಿಸಲು ಒಂದು ತಂಡ ಮಾಡಿ ಎಲ್ಲ ಡ್ಯಾಮ್‌ಗಳಿಗೂ ಕಳಿಸಿ ಕೊಡುತ್ತಿದ್ದೇವೆʼʼ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ʼʼನಾಳೆ ಅಥವಾ ನಾಡಿದ್ದು ತಜ್ಞರ ಸಮಿತಿ ರಚನೆ ಮಾಡುತ್ತೇವೆ. ಆ ಸಮಿತಿ ಎಲ್ಲ ಡ್ಯಾಮ್‌ಗಳಿಗೂ ತೆರಳಲಿದೆ. ಬೇರೆ ಕಡೆ ಎರಡೆರಡು ಆಯ್ಕೆ ಇದೆ. ಅಂದರೆ ಒಂದು ಗೇಟ್‌ಗೆ ಎರಡು ಲಿಂಕ್ ಇದ್ದಾವೆ. ಆದರೆ ತುಂಗಭದ್ರಾ ಡ್ಯಾಮ್‌ನಲ್ಲಿ ಒಂದೇ ಚೈನ್‌ ಇತ್ತು. ಅದು ಈಗ ತುಂಡಾಗಿದೆ. 55-60 ಟಿಎಂಸಿ ನೀರು ಉಳಿಸುವ ವ್ಯವಸ್ಥೆ ಆಗುತ್ತಿದೆʼʼ ಎಂದು ಅವರು ವಿವರಿಸಿದ್ದಾರೆ.

ಆರೋಪಕ್ಕೆ ತಿರುಗೇಟು

ಡ್ಯಾಮ್‌ಗೆ ಸರ್ಕಾರ ತಕ್ಕ ಮಾನ್ಯತೆ ಕೊಟ್ಟಿಲ್ಲ ಎಂಬ ಆರೋಪಕ್ಕೆ ಉತ್ತರಿಸಿದ ಡಿಕೆಶಿ, ʼʼಆರೋಪಗಳನ್ನು ಮಾಡುವವರು,
ರಾಜಕೀಯ ಮಾತನಾಡುವವರು ಏನು ಬೇಕಾದರೂ ಹೇಳಲಿ. ವಾಸ್ತವಾಂಶ ಬೇರೆಯದೇ ಇದೆ. ತುಂಗಭದ್ರಾ ಡ್ಯಾಮ್ ಅನ್ನು ಸರ್ಕಾರ ಕಂಟ್ರೋಲ್ ಮಾಡಲ್ಲ. ಅದಕ್ಕೆ ಆದ ಸಮಿತಿ ಇದೆ. ನಾವು ಅದರ ಸದಸ್ಯರು ಅಷ್ಟೇʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

ಇನ್ನು ಇದೇ ವೇಳೆ ಬೆಂಗಳೂರು ನಗರದಲ್ಲಿ ಸುರಿದ ಭಾರಿ ಮಳೆಯಿಂದ ಆದ ಅವಾಂತರಗಳ ಬಗ್ಗೆ ಮಾತನಾಡಿದ ಅವರು, ʼʼಬೆಂಗಳೂರಿನಲ್ಲಿರುವ ಯಾವ ಕೆರೆಗಳೂ ತುಂಬಿಲ್ಲ. ಹೀಗಾಗಿ ಮಳೆ ಬರಬೇಕು. ಅಪಾರ್ಟ್‌ಮೆಂಟ್​​ಗಳಿಗೆ ನೀರು ನುಗ್ಗಿದ್ದರೆ ಅದನ್ನು ಸರಿ ಮಾಡೋಣ. ಕನಕಪುರ, ಮಾಗಡಿ, ಚನ್ನಪಟ್ಟಣ, ತುಮಕೂರು, ಕುಣಿಗಲ್, ಕೋಲಾರ ಸುತ್ತಮುತ್ತಲೂ ಮಳೆ ಬಂದಿಲ್ಲ. ಹೀಗಾಗಿ ಉತ್ತಮ ಮಳೆಯಾಗಬೇಕುʼʼ ಎಂದು ಹೇಳಿದ್ದಾರೆ.

ರೈತರ ಒಂದು ಬೆಳೆಗಾದರೂ ನೀರನ್ನು ಉಳಿಸುತ್ತೇವೆ

ಭಾನುವಾರ ಜಲಾಶಯಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದ್ದ ಡಿಕೆಶಿ, ʼʼಜಲಾಶಯದಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಿದೆ. ಗೇಟನ್ನು ಮತ್ತೆ ಹಾಕಬೇಕೆಂದರೆ ಒತ್ತಡ ಕಡಿಮೆ ಮಾಡಬೇಕಿದೆ. ಜಲಾಶಯದಲ್ಲಿ 150 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು. ಜಲಾಶಯಕ್ಕೆ ಒಳಹರಿವು 28,000 ಕ್ಯೂಸೆಕ್ ಇದೇ. ಕನಿಷ್ಠ ನಮ್ಮ ರೈತರಿಗೆ ಒಂದು ಬೆಳಗಾದರೂ ಒದಗಿಸುವಷ್ಟು ನೀರನ್ನು ಉಳಿಸಿಕೊಳ್ಳುತ್ತೇವೆ. ನಮ್ಮ ರೈತರು ಆತಂಕ ಪಡಬೇಕಾಗಿಲ್ಲ. ಸರ್ಕಾರ ನಿಮ್ಮ ಜತೆಗಿದೆ” ಎಂದು ತಿಳಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಆಗಸ್ಟ್‌ 31ರ ಒಳಗೆ GBA ಚುನಾವಣೆ ನಡೆಸಿ- ಸುಪ್ರೀಂ ಕೋರ್ಟ್‌

VISTARANEWS.COM


on

ಆಗಸ್ಟ್‌ 31ರ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌, ಆಗಸ್ಟ್‌ 31ರವರೆಗೆ ಕಾಲಾವಕಾಶ ನೀಡಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಮೂರು ತಿಂಗಳ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಈ ಹಿಂದೆ ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಆದರೆ ಇದೀಗ ಸರ್ಕಾರದ ಮನವಿ ಮೇರೆಗೆ ಚುನಾವಣಾ ಗಡುವನ್ನು ಆಗಸ್ಟ್‌ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಆಲಿಸಿದ ಸಿಜೆಐ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದವು.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌