Site icon Vistara News

V. Somanna: ಬಿ.ವೈ. ವಿಜಯೇಂದ್ರ ಹಾಗೂ ವಿ. ಸೋಮಣ್ಣ ಇಬ್ಬರೂ ಕೆಲಸ ಮಾಡಿದ್ದಾರೆ: ಯಾರನ್ನೂ ಕಡೆಗಣಿಸಿಲ್ಲ ಎಂದ ಬಿ.ಎಸ್‌. ಯಡಿಯೂರಪ್ಪ

v somanna and vijayendra both have done party work

#image_title

ಬೆಂಗಳೂರು: ಪಕ್ಷಕ್ಕೆ ಬಿ.ವೈ. ವಿಜಯೇಂದ್ರ ಹಾಗೂ ವಿ. ಸೋಮಣ್ಣ ಇಬ್ಬರೂ ಕೆಲಸ ಮಾಡಿದ್ದಾರೆ, ಯಾರನ್ನೂ ಕಡೆಗಣಿಸಿಲ್ಲ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ,

ತಮ್ಮ ನಿವಾಸ ಕಾವೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿ.ಎಸ್‌. ಯಡಿಯೂರಪ್ಪ, ದೆಹಲಿಯಲ್ಲಿ ಅವರನ್ನು ಕರೆಸಿ ಮಾತನಾಡಿದ್ದಾರೆ ಯಾವುದೇ ಅಸಮಾಧಾನ ಇಲ್ಲ. ನಾವು ಅವರನ್ನು ಭೇಟಿಯಾಗಿಯೇ ಮೂರು ತಿಂಗಳು ಆಯ್ತು.

ಯಾರನ್ನೂ ಕಡೆಗಣಿಸಿಲ್ಲ. ವಿಜಯೇಂದ್ರ ಕೂಡ ಕೆಲಸ ಮಾಡ್ತಿದ್ದಾರೆ. ಸೋಮಣ್ಣ ಕೂಡ ಕೆಲಸ ಮಾಡ್ತಿದ್ದಾರೆ. ಟಿಕೆಟ್ ವಿಚಾರ ಚರ್ಚೆ ಆಗೆ ಆಗುತ್ತೆ, ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ಸೋಮಣ್ಣ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಇಲ್ಲಿ ಯಾರು ಯಾರನ್ನೂ ಕಡೆಗಣಿಸುವ ಪ್ರಶ್ನೆ ಇಲ್ಲ. ಎಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡಬೇಕು. ಬೇರೆ ವಿಚಾರಕ್ಕೆ ನಾನು ತಲೆಕೆಡಿಸಿಕೊಂಡಿಲ್ಲ.

ಗೆಲ್ಲುವಂತಹ ಅವಕಾಶ ಜಾಸ್ತಿ ಇರುವುದರಿಂದ ಅಭ್ಯರ್ಥಿಗಳ ಸಂಖ್ಯೆ ಜಾಸ್ತಿ ಇದೆ ಹೀಗಾಗಿ ಟಿಕೆಟ್ ಬಗ್ಗೆ ಚರ್ಚೆ ಆಗುತ್ತೆ. ಎಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡಬೇಕು. ಬೇರೆ ವಿಚಾರಕ್ಕೆ ನಾನು ತಲೆಕೆಡಿಸಿಕೊಂಡಿಲ್ಲ ಎಂದಿದ್ದಾರೆ.

ಇದನ್ನೂ ಓದಿ: V. Somanna: ಎಲ್ಲವೂ ಅಂದುಕೊಂಡಂತೆ ಆಯಿತು: ನಗುಮೊಗದಲ್ಲಿ ಅಮಿತ್‌ ಶಾ ಮನೆಯಿಂದ ಹೊರಬಂದ ಸಚಿವ ವಿ. ಸೋಮಣ್ಣ

Exit mobile version