Vision Group : ಕೈಗಾರಿಕೆ ಬೆಳವಣಿಗೆಗೆ ಸಲಹೆ ನೀಡಲು 9 ವಿಷನ್‌ ಗ್ರೂಪ್‌ ರಚನೆ; ಗಣ್ಯ ಉದ್ಯಮಿಗಳ ನೇಮಕ - Vistara News

ಕರ್ನಾಟಕ

Vision Group : ಕೈಗಾರಿಕೆ ಬೆಳವಣಿಗೆಗೆ ಸಲಹೆ ನೀಡಲು 9 ವಿಷನ್‌ ಗ್ರೂಪ್‌ ರಚನೆ; ಗಣ್ಯ ಉದ್ಯಮಿಗಳ ನೇಮಕ

Vision Group : ರಾಜ್ಯದಲ್ಲಿ ನಾನಾ ಮಾದರಿಯ ಉದ್ಯಮಗಳ ಬೆಳವಣಿಗೆಗೆ ಸಲಹೆ ನೀಡಲು ಆಯಾ ಕ್ಷೇತ್ರದ ಗಣ್ಯರನ್ನು ಒಳಗೊಂಡ ಒಂಬತ್ತು ವಿಷನ್‌ ಗ್ರೂಪ್‌ಗಳನ್ನು ರಚಿಸಲಾಗಿದೆ.

VISTARANEWS.COM


on

Vision group
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ (Industrial development) ಒತ್ತು ನೀಡಿರುವ ಸರಕಾರವು ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ (MB Patil) ಅವರ ಅಧ್ಯಕ್ಷತೆಯಲ್ಲಿ ಒಂಬತ್ತು ಉದ್ಯಮ ವಲಯಗಳಿಗೆ (9 Industrial divisions) ವಿಷನ್ ಗ್ರೂಪ್‌ಗಳನ್ನು (Vision Group) ರಚಿಸಿ, ಆದೇಶ ಹೊರಡಿಸಿದೆ. ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ (Industry and Commerce department) ಪ್ರಧಾನ ಕಾರ್ಯದರ್ಶಿ ಇವುಗಳಿಗೆ ಉಪಾಧ್ಯಕ್ಷರಾಗಿದ್ದು, ಎಲ್ಲ ವಿಷನ್ ಗ್ರೂಪ್‌ಗಳಿಗೂ ಆಯಾ ವಲಯದ ಗಣ್ಯ ಉದ್ಯಮಿಗಳನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಸ್ಪಷ್ಟ ಗುರಿಗಳೊಂದಿಗೆ ವಿಷನ್ ಗ್ರೂಪ್ ಗಳನ್ನು ರಚಿಸಲಾಗುವುದು ಎಂದು ಹೇಳಿದ್ದ ಸರಕಾರವು ವೈಮಾಂತರಿಕ್ಷ ಮತ್ತು ರಕ್ಷಣೆ, ಮಶೀನ್ ಟೂಲ್ಸ್, ಎಲೆಕ್ಟ್ರಾನಿಕ್ಸ್ ಸಿಸ್ಟಂ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್, ಫಾರ್ಮಸುಟಿಕಲ್ಸ್, ಕೋರ್ ಮ್ಯಾನಫ್ಯಾಕ್ಚರಿಂಗ್, ಆಟೋಮೋಟೀವ್/ಎಲೆಕ್ಟ್ರಿಕ್ ವೆಹಿಕಲ್ಸ್, ಇಂಡಸ್ಟ್ರಿ 5.0, ಜವಳಿ ಮತ್ತು ಹಸಿರು ಇಂಧನ ವಲಯಗಳಿಗೆ ಈ ಉಪಕ್ರಮವನ್ನು ಕೈಗೊಂಡಿದೆ.

ಈ ವಿಷನ್ ಗ್ರೂಪ್ ಗಳು ಉದ್ಯಮಗಳ ಬೆಳವಣಿಗೆ ಸಾಧಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಗೆ ಅಗತ್ಯ ಮಾರ್ಗದರ್ಶನ ಮಾಡಲಿದ್ದು, ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳನ್ನು ಶೋಧಿಸಲಿವೆ.

ವಿಷನ್ ಗ್ರೂಪ್‌ಗಳಿಗೆ ನೇಮಕವಾಗಿರುವ ಸದಸ್ಯರ ವಿವರ ಹೀಗಿದೆ

1. ವೈಮಾಂತರಿಕ್ಷ ಮತ್ತು ರಕ್ಷಣೆ

ಅಪ್ಪಾರಾವ್ ವೆಂಕಟ ಮಲ್ಲವರಪು (ಸೆಂಟಮ್ ಎಲೆಕ್ಟ್ರಾನಿಕ್ಸ್)
ಉದಯಂತ್ ಮಲ್ಹೋತ್ರ (ಡೈನಾಮಿಕ್ ಟೆಕ್ನಾಲಜೀಸ್)
ಎಚ್ ಜಿ ಚಂದ್ರಶೇಖರ್ (ಸಾಸ್ಮೋಸ್)
ಅಶ್ವನಿ ಭಾರ್ಗವ (ಬೋಯಿಂಗ್)
ಕೃತ್ತಿವಾಸ ಮುಖರ್ಜಿ (ಏರ್ ಬಸ್)
ಸಮಿತ್ ರಾಯ್ (ರೇಥಿಯಾನ್)
ಸಿ ಬಿ ಅನಂತಕೃಷ್ಣನ್ (ಎಚ್ಎಎಲ್).

2.ಎಲೆಕ್ಟ್ರಾನಿಕ್ಸ್ ಸಿಸ್ಟಂ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್

ಜಿತೇಂದ್ರ ಛಡ್ಡಾ (ಗ್ಲೋಬಲ್ ಫೌಂಡ್ರೀಸ್)
ಸಂತೋಷ್ ಕುಮಾರ್ (ಟೆಕ್ಸಾಸ್ ಇನ್‌ಸ್ಟ್ರುಮೆಂಟ್ಸ್‌)
ರಮೇಶ್ ಕುನ್ಹಿಕಣ್ಣನ್ (ಕೇನ್ಸ್ ಟೆಕ್ನಾಲಜಿ)
ವಿನಯ್ ಶೆಣೈ (ಇನ್ಫೈನ್ ಆನ್)
ವೇಣು ನೂಗೂರಿ (ಹಿಟಾಚಿ ಎನರ್ಜಿ)
ಎಸ್ ಕೆ ಮೂರ್ತಿ (ಇಂಟೆಲ್)
ಚರಣ್ ಗುರುಮೂರ್ತಿ (ಟಾಟಾ ಸೆಮಿಕಂಡಕ್ಟರ್ಸ್)

3.ಆಟೋಮೋಟೀವ್/ಎಲೆಕ್ಟ್ರಿಕ್ ವೆಹಿಕಲ್ಸ್

ಗುರುಪ್ರಸಾದ್ ಮುದ್ಲಾಪುರ (ಬಾಶ್)
ಅರುಣ್ ಮಿತ್ತಲ್ (ಎಕ್ಸೈಡ್)
ಸುದೀಪ್ ದಳವಿ (ಟೊಯೋಟ)
ಕಮಲ್ ಬಾಲಿ (ವೋಲ್ವೊ)
ಸುಶಾಂತ್ ನಾಯಕ್ (ಟಾಟಾ ಮೋಟರ್ಸ್)

4.ಮಶೀನ್ ಟೂಲ್ಸ್ ಉದ್ಯಮ

ಸಂಜಯ್ ಕೌಲ್ (ಟಿಮ್ ಕೆನ್)
ಬಿ ಹರೀಶ್ (ಎಸಿಇ)
ಲಕ್ಷ್ಮೀಕಾಂತನ್ ಕೃಷ್ಣನ್ (ಟೇಗು ಟೆಕ್)
ಎ ವೆಂಕಟಕೃಷ್ಣನ್ (ಯೂಕೆನ್)
ತರಂಗ್ ವಿ ಪಾರೀಕ್ (ವೈಜಿ-1)

5.ಫಾರ್ಮಾಸುಟಿಕಲ್ಸ್ ಉದ್ಯಮ

ಜಿ ವಿ ಪ್ರಸಾದ್ (ರೆಡ್ಡಿ ಲ್ಯಾಬ್ಸ್)
ಸಿದ್ಧಾರ್ಥ ಮಿತ್ತಲ್ (ಬಯೋಕಾನ್)
ಸಮೀರ್ ಕೇತ್ರಪಾಲ್ (ಜ್ಯುಬಿಲಿಯೆಂಟ್ ಲೈಫ್ ಸೈನ್ಸಸ್)
ವಿಷ್ಣುಕಾಂತ ಭೂತದ (ಶಿಲ್ಪಾ)
ಉಮಾಂಗ್ ವೋಹ್ರ (ಸಿಪ್ಲಾ)
ದಿಲೀಪ್ ಸುರಾನ (ಮೈಕ್ರೋಲ್ಯಾಬ್ಸ್).

6.ಕೋರ್ ಮ್ಯಾನುಫ್ಯಾಕ್ಚರಿಂಗ್

ವಿನೋದ್ ನೋವಲ್ (ಜಿಂದಾಲ್)
ಕೆ.ಸಿ ಜಾನ್ವಾರ್ (ಅಲ್ಟ್ರಾ ಟೆಕ್)
ರಾಹುಲ್ ಕುಮಾರ್ (ಬಲ್ದೋಟ)
ಬಹಿರಜಿ ಘೋರ್ಪಡೆ (ಸ್ಮಿಯೋರ್)
ಆರ್‌ಬಿಎಂ ತ್ರಿಪಾಠಿ (ಜೆ ಕೆ ಸಿಮೆಂಟ್)

7.ಇಂಡಸ್ಟ್ರಿ 5.0

ಅಕ್ಷಯ್ ಸಿಂಘಾಲ್ (ಲಾಗ್ 9)
ಮಲ್ಲಿಕಾರ್ಜುನ್ ಸಂತಾನಕೃಷ್ಣನ್ (ಜಿ ಎಸ್ ಗ್ಲೋಬಲ್ ವೆಂಚರ್ಸ್)
ರೋಹನ್ ಗಣಪತಿ (ಬೆಲಾಟ್ರಿಕ್ಸ್)
ಅವೈಸ್ ಅಹಮದ್ (ಪಿಕ್ಸೆಲ್)
ಸೌವಿಕ್ ಸೇನಗುಪ್ತ (ಇನ್ಫ್ರಾ ಮಾರ್ಕೆಟ್)
ಗದಾಧರ ರೆಡ್ಡಿ (ನೋಪೋ ನ್ಯಾನೋ ಟೆಕ್ನಾಲಜೀಸ್)

8. ಜವಳಿ ಉದ್ಯಮ

ಪಂಕಜ್ ನಾರೂಲ (ಶಾಹಿ ಎಕ್ಸ್‌ಪೋರ್ಟ್‌)
ಗೌತಮ್ ಚಕ್ರವರ್ತಿ (ಗೋಕುಲ ದಾಸ್)
ವಿಶಾಖ್ ಕುಮಾರ್ (ಆದಿತ್ಯ ಬಿರ್ಲಾ ಮಧುರಾ ಎಫ್ & ಎಲ್)
ವಿ.ಎಸ್ ಗಣೇಶ್ (ಪೇಜ್ ಇಂಡಸ್ಟ್ರೀಸ್)
ಪುನೀತ್ ಲಾಲಭಾಯ್ (ಅರವಿಂದ್ ಮಿಲ್ಸ್)

9.ಹಸಿರು ಇಂಧನ ಉದ್ಯಮ

ಕಿಶೋರ್ ನಾಯರ್ (ಅವಾಡ ಎನರ್ಜಿ)
ವಿವೇಕ್ ಸಿಂಗ್ಲಾ (ರೆನ್ಯೂ ಪವರ್)
ಕೃಷ್ಣ ರೇವಂಕರ್ (ಎಂವೀ ಸೋಲಾರ್ ಸಿಸ್ಟಮ್ಸ್)
ಶರದ್ ಪುಂಗಾಲಿಯ (ಆ್ಯಮ್ ಪ್ಲಸ್ ಸೋಲಾರ್)
ಆಶಿಶ್ ಖನ್ನಾ (ಟಾಟಾ ಪವರ್ ಸೋಲಾರ್)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: 370 ನಿವೃತ್ತ ಅಧಿಕಾರಿಗಳಿಗೆ ಬಾಗಿಲು ತೋರಿಸಿದ ಸರಕಾರ

CM Siddaramaiah: ಸದ್ಯ 20 ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಈ ಬಗ್ಗೆ ಪತ್ರ ಬರೆದಿದ್ದಾರೆ. ವಿವಿಧ ಹುದ್ದೆಗಳಿಗೆ ನೇಮಕವಾಗಿದ್ದ ನಿವೃತ್ತ ಅಧಿಕಾರಿಗಳಿಗೆ ಶಾಕ್ ಆಗುವಂತೆ, ಸರಿಸುಮಾರು 370ಕ್ಕೂ ಹೆಚ್ಚು ನಿವೃತ್ತ ನೌಕರರಿಗೆ ಸರ್ಕಾರದಿಂದ ಖೊಕ್ ಸಿಗುತ್ತಿದೆ.

VISTARANEWS.COM


on

CM Siddaramaiah and Vidhanasoudha
Koo

ಬೆಂಗಳೂರು: ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಅಧಿಕಾರಿಗಳನ್ನು (retired employees) ಸೇವೆಯಿಂದ ಕೈ ಬಿಡುವಂತೆ ವಿವಿಧ ಇಲಾಖಾ ಮುಖ್ಯಸ್ಥರಿಗೆ ಮುಖ್ಯಮಂತ್ರಿಗಳ (CM Siddaramaiah) ಮುಖ್ಯ ಕಾರ್ಯದರ್ಶಿ (Chief Secretary) ಪತ್ರ ಬರೆದಿದ್ದಾರೆ. ಸರಕಾರದ (Karnataka Govt) ಮೇಲಿನ ಹಣದ ಹೊರೆ (Fiscal deficit) ತಪ್ಪಿಸಲು ಈ ನಡೆ ಕೈಗೊಳ್ಳಲಾಗಿದೆ.

ಆರ್ಥಿಕ ಶಿಸ್ತು ಜಾರಿ‌ ಮಾಡಲು ನಾನಾ ಕಸರತ್ತು ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ, ಈ ಹಿಂದೆಯೂ ಒಮ್ಮೆ ಈ ಕೆಲಸ ಮಾಡಲು ಸೂಚಿಸಿದ್ದರು. ಸದ್ಯ 20 ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಈ ಬಗ್ಗೆ ಪತ್ರ ಬರೆದಿದ್ದಾರೆ. ವಿವಿಧ ಹುದ್ದೆಗಳಿಗೆ ನೇಮಕವಾಗಿದ್ದ ನಿವೃತ್ತ ಅಧಿಕಾರಿಗಳಿಗೆ ಶಾಕ್ ಆಗುವಂತೆ, ಸರಿಸುಮಾರು 370ಕ್ಕೂ ಹೆಚ್ಚು ನಿವೃತ್ತ ನೌಕರರಿಗೆ ಸರ್ಕಾರದಿಂದ ಖೊಕ್ ಸಿಗುತ್ತಿದೆ.

ಆರ್ಥಿಕ ಹೊರೆ ತಪ್ಪಿಸಲು ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಜನವರಿ 9ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಹೊರಗುತ್ತಿಗೆಯಲ್ಲಿ ನೇಮಕವಾದ ನಿವೃತ್ತ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆ ಮಾಡಿ; ಆ ಹುದ್ದೆಯಲ್ಲಿ ಸೇವೆಯಲ್ಲಿರುವ ಅಧಿಕಾರಿಗಳನ್ನು ನಿಯೋಜನೆ ಮಾಡಿ ಎಂದು ಸೂಚನೆ ನೀಡಿದ್ದರು. ಸಿಎಂ ಸೂಚನೆ ಮೇರೆಗೆ ಜನವರಿ 23 ಮತ್ತು ಫೆಬ್ರವರಿ 22ರಂದು ಇಲಾಖೆಗಳಿಗೆ ಸಿಎಸ್ ಅವರಿಂದ ಟಿಪ್ಪಣಿ ರವಾನೆ ಆಗಿತ್ತು.

ಆದರೂ ನಿವೃತ್ತ ನೌಕರರನ್ನು ಕೈ ಬಿಡುವ ಪ್ರಕ್ರಿಯೆ ಯಾವುದೇ ಮುನ್ನಡೆ ಕಂಡಿರಲಿಲ್ಲ. ಹೀಗಾಗಿ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಸಿಎಂ ಸೂಚನೆ ಮೇರೆಗೆ ವಿವಿಧ ಇಲಾಖೆಗಳಿಗೆ ಸಿಎಸ್ ಪತ್ರ ಬರೆದಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನಿರ್ವಹಿಸಲಾಗುತ್ತಿರುವ ಈ ಕಾರ್ಯಗಳ ಹೆಚ್ಚಿನ ಹೊಣೆ ಈಗಿನ ಇಲಾಖಾ ಅಧಿಕಾರಿಗಳ ಮೇಲೆ ಬೀಳಲಿದೆ.

ಈ ಹಿಂದಿನ ಸಿಎಂ ಟಿಪ್ಪಣಿಯಲ್ಲೇನಿದೆ?

“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಿತ ಹಲವು ಇಲಾಖೆ- ಸಚಿವಾಲಯಗಳಲ್ಲಿ ಅನಗತ್ಯವಾಗಿ ಹುದ್ದೆಗಳನ್ನು ಸೃಷ್ಟಿಸಿ, ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ, ನೌಕರರನ್ನು ಸಮಾಲೋಚಕ, ವಿಶೇಷ ಸಂಪನ್ಮೂಲ ವ್ಯಕ್ತಿಗಳೆಂದು ಹಾಗೂ ಕೆಲವು ಗ್ರೂಪ್-ಎ ವೃಂದದ ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ನಿವೃತ್ತ ನೌಕರರಿಗೆ ವೇತನ, ವಾಹನ ಸೌಲಭ್ಯ ಇನ್ನಿತರ ಸೌಲಭ್ಯ ನೀಡಲಾಗುತ್ತಿದೆ. ಇದರಿಂದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗುವುದಲ್ಲದೆ, ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ. ಆದ್ದರಿಂದ, ಸದರಿ ಹುದ್ದೆಗಳಿಗೆ ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ, ನೌಕರರನ್ನು ನಿಯೋಜಿಸಲು ಸೂಚಿಸಲಾಗಿದೆ.”

“ಹಾಗೆಯೇ, ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿವೃತ್ತ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸೂಚನೆ ಆಧರಿಸಿ ಅಗತ್ಯ ಕ್ರಮ ಕೈಗೊಂಡು ವರದಿಯನ್ನು ತಮ್ಮ ಕಚೇರಿಗೆ ಸಲ್ಲಿಸುವಂತೆ” ಸಿಎಎಸ್ ನಿರ್ದೇಶನ ನೀಡಿದ್ದಾರೆ.

ನಿವೃತ್ತ ಅಧಿಕಾರಿಗಳನ್ನು ಹೀಗೆ ನೇಮಕ ಮಾಡಿಕೊಳ್ಳುವುದನ್ನು ವಿರೋಧಿಸಿ ಸಚಿವಾಲಯ ನೌಕರರ ಸಂಘವೂ ಹೋರಾಟ ಮಾಡಿತ್ತು. ಸಂಘದ ಹಿಂದಿನ ಅಧ್ಯಕ್ಷ ಪಿ. ಗುರುಸ್ವಾಮಿ, ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ಹಾಗೂ ಇತರ ಮುಖಂಡರು ಸಾಕಷ್ಟು ಬಾರಿ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ: NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Continue Reading

ಕ್ರೈಂ

Drowned: ಈಜಲು ಹೋಗಿ ಬಾಲಕರು ನೀರುಪಾಲು; ಕಮಲ ಕೊಯ್ಯಲು ಹೋಗಿ ಕೆಸರಿನಲ್ಲಿ ವ್ಯಕ್ತಿ ಸಮಾಧಿ

Drowned: ಮುಸ್ಸಂಜೆ ವೇಳೆ ಈಜಲು ತೆರಳಿದ್ದ ಈ ಯುವಕರು ಈಜುವ ವೇಳೆ ದುರ್ಘಟನೆ ನಡೆದಿದೆ. ನಡು ಕೆರೆಯಲ್ಲಿದ್ದಾಗ ಬಳಲಿ ತೀರಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ

VISTARANEWS.COM


on

Drowned in river
Koo

ಮೈಸೂರು: ಈಜಲು (Swimming) ಹೋಗಿ ಇಬ್ಬರು ಬಾಲಕರು ನೀರು ಪಾಲಾದ ಘಟನೆ (Drowned) ಮೈಸೂರಿನ ಸೌಕಾರಹುಂಡಿ ಕೆರೆಯಲ್ಲಿ (Lake) ನಡೆದಿದೆ. ಹೂಟಗಳ್ಳಿ ಹೌಸಿಂಗ್ ಬೋರ್ಡ್ ನಿವಾಸಿ ವರುಣ್ (16) ಹಾಗೂ ಬಸವನಪುರ ನಿವಾಸಿ ಜಸ್ವಂತ್ (14) ಮೃತ ದುರ್ದೈವಿಗಳು.

ಮುಸ್ಸಂಜೆ ವೇಳೆ ಈಜಲು ತೆರಳಿದ್ದ ಈ ಯುವಕರು ಈಜುವ ವೇಳೆ ದುರ್ಘಟನೆ ನಡೆದಿದೆ. ನಡು ಕೆರೆಯಲ್ಲಿದ್ದಾಗ ಬಳಲಿ ತೀರಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾವರೆ ಕೊಯ್ಯಲು ಹೋಗಿ ಹೂವಿನ ವ್ಯಾಪಾರಿ ಸಾವು

ತುಮಕೂರು: ಕೆರೆಯಲ್ಲಿದ್ದ ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಸಾವಿಗೀಡಾದ ಘಟನೆ ತುಮಕೂರು ತಾಲೂಕಿನ ಅರಕೆರೆ ಕೆರೆಯಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಮಧ್ಯವೆಂಕಟಪುರದ ನಿವಾಸಿ ಶ್ರೀನಿವಾಸ್ (35) ಮೃತ ದುರ್ದೈವಿ.

ಹೂವಿನ ವ್ಯಾಪಾರಿಯಾಗಿದ್ದ ಶ್ರೀನಿವಾಸ್ ಅವರು, ಅದೇ ಊರಿನ ಕೆಂಪರಾಮಯ್ಯ, ಚಿಕ್ಕಹನುಮಯ್ಯ ಜೊತೆ ಕಮಲದ ಹೂ ಕೀಳಲು ಹೋಗಿದ್ದರು. ಈ ವೇಳೆ ಕೆಸರಲ್ಲಿ ಸಿಲುಕಿ ಮೇಲೇಳಲಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ದುರ್ಘಟನೆ ನಡೆದಿದ್ದು, ಜೊತೆಗಿದ್ದವರು ಊರಿಗೆ ಹೋಗಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತ್ತಿಬೆಲಯಲ್ಲಿ ಬಾಲಕ ನೀರುಪಾಲು

ಆನೇಕಲ್: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲಾಗಿರುವ ಘಟನೆ (Drowns in lake) ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಬಳ್ಳೂರು ಅತ್ತಿಬೆಲೆ ಸಮೀಪದ ಬಳ್ಳೂರು ಕೆರೆಯಲ್ಲಿ ನಡೆದಿದೆ. ಅತ್ತಿಬೆಲೆ ವಾಸಿ ಧನುಷ್ (14) ಮೃತ ಬಾಲಕ.

ರೈನ್ ಬೋ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ, ಭಾನುವಾರ ಶಾಲೆಗೆ ರಜೆ ಇದಿದ್ದದ್ದರಿಂದ ಸ್ನೇಹಿತರ ಜತೆ ಈಜಲು ಕೆರೆಗೆ ಹೋಗಿದ್ದ. ಈ ವೇಳೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಾಲಕನ ಮೃತ ದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

ಕೊಡಗು: ಖಾಸಗಿ ಬಸ್ ಹಾಗೂ ದ್ವಿಚಕ್ರ ನಡುವೆ ಭೀಕರ ಅಪಘಾತ (Road Accident) ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ‌ ನಡೆದಿದೆ. ಸುಂಟಿಕೊಪ್ಪ‌ ನಿವಾಸಿ ಪಟ್ಟೆಮನೆ ಲೋಕೇಶ್ ಕುಮಾರ್ (59) ಮೃತ ದುರ್ದೈವಿ.

ಕಳೆದ ಹಲವು ವರ್ಷಗಳಿಂದ ಲೋಕೇಶ್‌ ವಾಹನ ಚಾಲಕರಾಗಿದ್ದರು. ಸುಂಟಿಕೊಪ್ಪದ ಗದ್ದೆಹಳ್ಳ ಬಳಿ‌ ತೆರಳುತ್ತಿದ್ದಾಗ ಖಾಸಗಿ ಬಸ್‌ನೊಂದಿಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

ವಿಜಯಪುರ: ಭೀಮಾ ತೀರದಲ್ಲಿ ಗುಂಡಿನ ದಾಳಿ ನಡೆದು, ರೌಡಿಶೀಟರ್‌ ಮೃತಪಟ್ಟಿದ್ದಾನೆ. ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ (Shootout Case) ನಡೆಸಿ ರೌಡಿಶೀಟರ್‌ನ ಕೊಲ್ಲಲಾಗಿದೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತ. ಮನೆಯಿಂದ ಚಡಚಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಅಶೋಕ ಹೊರಬಂದಿದ್ದ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಯನ್ನು ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ಮೂಡಿದೆ. ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Electric Shock: ಕುಷ್ಟಗಿಯಲ್ಲಿ ವಿದ್ಯುತ್ ತಂತಿ ತಗುಲಿ ರೈತ, 2 ಎತ್ತುಗಳ ಸಾವು

Continue Reading

ಕ್ರೈಂ

Actor Darshan: ಹತ್ಯೆಯಾದ ರೇಣುಕಾಸ್ವಾಮಿ ಮೊಬೈಲ್‌ ಹೋಯಿತೆಲ್ಲಿ?

Actor Darshan: ಜೂನ್‌ 8ರಂದು ಆರೋಪಿ ರಾಘವೇಂದ್ರ ಮತ್ತು ಸಹಚರರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದರು. ಜೂನ್ 8ರಂದು ಬೆಳಿಗ್ಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

VISTARANEWS.COM


on

Actor Darshan Renukaswamy Send His Photos To Pavitra Gowda
Koo

ಬೆಂಗಳೂರು: ನಟ ದರ್ಶನ್‌ (Actor Darshan) ಟೀಮ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Murder Case) ಮೊಬೈಲ್‌ಗಾಗಿ (mobile phone) ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾಗಿ ಹತ್ತು ದಿನ ಕಳೆಯುತ್ತಿದ್ದರೂ ಮೊಬೈಲ್ ಪತ್ತೆಯಾಗಿಲ್ಲ. ಕೊಲೆಗೆ ಸಂಬಂಧಿಸಿದ ಮಹತ್ವದ ಸಾಕ್ಷಿಗಳು (Evidence) ಇದರಲ್ಲಿವೆ.

ದರ್ಶನ್ ಮತ್ತು ಗ್ಯಾಂಗ್‌ನಿಂದ ಜೂನ್ 8ರ ಸಂಜೆ ರೇಣುಕಾಸ್ವಾಮಿ ಭೀಕರವಾಗಿ ಹತ್ಯೆಯಾಗಿದ್ದ. ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿ 17ಕ್ಕೂ ಹೆಚ್ಚು ಮಂದಿಯ ಬಂಧನವಾಗಿದೆ. ಪವಿತ್ರಾ ಗೌಡ (Pavithra Gowda) ಸಹ ಬಂಧನದಲ್ಲಿದ್ದಾಳೆ.

ಜೂನ್‌ 8ರಂದು ಆರೋಪಿ ರಾಘವೇಂದ್ರ ಮತ್ತು ಸಹಚರರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದರು. ಜೂನ್ 8ರಂದು ಬೆಳಿಗ್ಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮಧ್ಯಾಹ್ನದ ವೇಳೆ ಆರ್‌ಆರ್ ನಗರದಲ್ಲಿ ಸ್ವಿಚ್ ಆನ್ ಆಗಿತ್ತು. ಜೂನ್ 8ರ ಸಂಜೆ ವೇಳೆ ಆರ್‌ಆರ್ ನಗರದ ಪಟ್ಟಣಗೆರೆಯಲ್ಲಿ ಮತ್ತೆ ಸ್ವಿಚ್ ಆಫ್ ಆಗಿತ್ತು.

ಅದೇ ದಿನ ತಡರಾತ್ರಿ ರೇಣುಕಾಸ್ವಾಮಿ‌ ಮೃತದೇಹವನ್ನು ಕೇಶವ್, ಕಾರ್ತಿಕ್, ನಿಖಿಲ್ ನಾಯಕ್ ಬಿಸಾಡಿದ್ದರು. ಸುಮ್ಮನಹಳ್ಳಿಯ ಸತ್ವ ಅಪಾರ್ಟ್ಮೆಂಟ್ ಮುಂಭಾಗದ ರಾಜಕಾಲುವೆಯಲ್ಲಿ ಮೃತದೇಹ ಬಿಸಾಡಲಾಗಿತ್ತು. ನಂತರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕೇಶವ್, ಕಾರ್ತಿಕ್, ನಿಖಿಲ್ ನಾಯಕ್ ಮತ್ತು ರಾಘವೇಂದ್ರ ಶರಣಾಗಿದ್ದರು. ಪೊಲೀಸ್ ವಿಚಾರಣೆ ವೇಳೆ, ರೇಣುಕಾಸ್ವಾಮಿ ಮೊಬೈಲ್ ಅನ್ನು ಸುಮ್ಮನಹಳ್ಳಿ ರಾಜಕಾಲುವೆಗೆ ಬಿಸಾಡಿದ್ದಾಗಿ ಬಾಯ್ಬಿಟ್ಟಿದ್ದರು.

ಕಳೆದ ಹತ್ತು ದಿನಗಳಿಂದ ಹುಡುಕಾಡಿದರೂ ರೇಣುಕಾಸ್ವಾಮಿ ಮೊಬೈಲ್ ಪತ್ತೆಯಾಗಿಲ್ಲ. ರೇಣುಕಾಸ್ವಾಮಿ ಮೊಬೈಲ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದೆ. ಅಶ್ಲೀಲ ಕಮೆಂಟ್ ಸಂಬಂಧಪಟ್ಟಂತೆ ಇದರಿಂದ ಸಾಕ್ಷಿಗಳನ್ನು ರಿಟ್ರೀವ್‌ ಮಾಡಬೇಕಾಗಿದೆ. ಆರೋಪಿಗಳು ರೇಣುಕಾಸ್ವಾಮಿ ಮೊಬೈಲ್‌ನಲ್ಲೇ ಕ್ಷಮಾಪಣಾ ವಿಡಿಯೋ ಮಾಡಿಸಿದ್ದರು. ಆರ್‌ಆರ್ ನಗರ ಪಟ್ಟಣಗೆರೆ ಶೆಡ್, ಕಿಡ್ನಾಪ್ ಮಾಡಿದ ರವಿಯ ಈಟಿಯೋಸ್ ಕಾರು ಸೇರಿ ಹಲವು ಕಡೆ ಹುಡುಕಿದರೂ ಮೊಬೈಲ್ ಪತ್ತೆಯಾಗಿಲ್ಲ.

ಗ್ಯಾಂಗ್‌ನಿಂದ 10 ಮೊಬೈಲ್‌ ವಶ; ಪಾಸ್‌ವರ್ಡ್ ನೀಡಲು ನಖರಾ

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದರೆ, ವಿಚಾರಣೆ ವೇಳೆ ಮೊಬೈಲ್‌ ಪಾಸ್‌ವರ್ಡ್‌ (Mobile Password) ನೀಡಲು ದರ್ಶನ್‌ ಮತ್ತು ಆತನ ಗ್ಯಾಂಗ್‌ ನಿರಾಕರಿಸುತ್ತಿದೆ. ಇದರಿಂದ ಪೊಲೀಸರ ತನಿಖೆಗೆ ಅಡಚಣೆಯಾಗುತ್ತಿದೆ ಎಂದು ತಿಳಿದುಬಂದಿದೆ.

ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ಕೆಲವು ಮೊಬೈಲ್‌ಗಳಲ್ಲಿದ್ದ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಇನ್ನೂ ಕೆಲವು ಮೊಬೈಲ್‌ಗಳ ಪಾಸ್‌ವರ್ಡ್‌ ನೀಡುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇಷ್ಟಾದರೂ ಪಟ್ಟು ಬಿಡದ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Actor Darshan

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

ತನಿಖೆಯ ಟೀಮ್‌ಗೆ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಸೇರ್ಪಡೆ

ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿದೆ. ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.

ಗಿರೀಶ್‌ ನಾಯ್ಕ್‌ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಎಸಿಪಿ ಚಂದನ್‌ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಆರೋಪಿಗಳ ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಈಗ ಗಿರೀಶ್‌ ನಾಯ್ಕ್‌ ಅವರನ್ನು ಮತ್ತೆ ಸಹಾಯಕ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

Continue Reading

ಮಳೆ

Karnataka weather : ಇಂದು ಕರಾವಳಿ, ಮಲೆನಾಡಿನಲ್ಲಿ ಹಗುರ, ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲಗೊಂಡಿದೆ. ಇದರ ನಡುವೆಯೂ ಕರಾವಳಿ, ಮಲೆನಾಡು ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾದರೆ, ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

ಆರೋಗ್ಯಕರ ಆಗಿರಬೇಕಿದ್ದರೆ ನಮ್ಮ ಬೆಳಗಿನ ತಿಂಡಿ ಹೇಗಿರಬೇಕು?

ಹೆಚ್ಚಿನ ಜನಕ್ಕೆ ಬೆಳಗಿನ ತಿಂಡಿಯ ಮಹತ್ವವೇ ತಿಳಿದಿರುವುದಿಲ್ಲ. ಈ ಮಾತನ್ನು ಹೇಳುವುದಕ್ಕೂ ಕಾರಣವಿದೆ. ಬೆಳಗ್ಗೆ (Morning Nutrition) ತಿಂಡಿಯನ್ನು ಎದ್ದ ನಾಲ್ಕು ತಾಸುಗಳ ನಂತರ ತಿನ್ನುವುದು, ಕೆಲವೊಮ್ಮೆ ತಿಂಡಿಯನ್ನೇ ತಿನ್ನದಿರುವುದು, ದಿನದ ಪ್ರಾರಂಭಕ್ಕೆ ಸೂಕ್ತ ಅಲ್ಲದ್ದನ್ನು ತಿನ್ನುವುದು, ಕೇವಲ ಕಾಫಿ/ಟೀ ಕುಡಿದು ಮಧ್ಯಾಹ್ನ ಊಟ ಮಾಡುವುದು- ಇಂಥ ಉದಾಹರಣೆಗಳು ಕಡಿಮೆಯೇನಿಲ್ಲ. ಆದರೆ ಬೆಳಗಿನ ತಿಂಡಿಯನ್ನು ದಿನದ ಅತ್ಯಂತ ಆರೋಗ್ಯಕರ ಊಟವನ್ನಾಗಿ ಮಾಡುವುದು ಮಹತ್ವದ್ದು ಎನ್ನುತ್ತಾರೆ ಪೌಷ್ಟಿಕಾಂಶ ತಜ್ಞರು. ರಾತ್ರಿಡೀ ದೇಹಕ್ಕೆ ಅಗತ್ಯವಾದ ವಿಶ್ರಾಂತಿಯನ್ನು ನೀಡಿದ್ದಾಗಿದೆ. ಇನ್ನೀಗ ಮುಂಜಾನೆದ್ದು ದಿನವನ್ನು ಪ್ರಾರಂಭಿಸಬೇಕು ಎನ್ನುವಾಗ, ದೇಹಕ್ಕೆ ನೀಡುವಂಥ ಗ್ರಾಸ ಹೇಗಿರಬೇಕು? ಅಧಿಕ ಸತ್ವಗಳನ್ನು ಹೊಂದಿದ ಆಹಾರವನ್ನೇ ತಿನ್ನಬೇಕು ಎಂದಾದರೆ, ಏಕೆ ಹಾಗೆ? ಬೆಳಗ್ಗೆ ತಿಂಡಿ ತಿನ್ನದಿದ್ದರೆ ತೂಕ ಇಳಿಸುವುದು ಸಾಧ್ಯವಿಲ್ಲವೇ? ಇಂತಹ ಹಲವಾರು ಪ್ರಶ್ನೆಗಳು ಮನದಲ್ಲಿದ್ದರೆ, ಅವಕ್ಕೆಲ್ಲ ಉತ್ತರ ಹುಡುಕುವ ಪ್ರಯತ್ನ ಇಲ್ಲಿದೆ. ಬೆಳಗಿನ ತಿಂಡಿಗೆ ಆರೋಗ್ಯಕರ ಕೊಬ್ಬುಗಳು, ಸಂಕೀರ್ಣ ಪಿಷ್ಟ ಮತ್ತು ಪ್ರೊಟೀನ್‌ ಇರುವಂಥ ಆಹಾರ ಅಗತ್ಯ. ಈ ಸತ್ವಗಳ ಮಿಶ್ರಣವು ದೇಹವು ದೀರ್ಘಕಾಲದವರೆಗೆ ಬಳಲದಂತೆ ನೋಡಿಕೊಳ್ಳುತ್ತದೆ. ದಿನವಿಡೀ ಅಗತ್ಯವಾದ ಚೈತನ್ಯವನ್ನು ದೇಹಕ್ಕೆ ನೀಡುತ್ತದೆ ಮತ್ತು ಆಹಾರ ತಿಂದ ತೃಪ್ತಿಯನ್ನು ಒದಗಿಸುತ್ತದೆ. ಜೊತೆಗೆ, ಬೇಗ ಹಸಿವಾಗುವುದನ್ನು ತಡೆಯುತ್ತದೆ. ಇಂಥ ಆಹಾರವು ದೇಹಕ್ಕೆ ಮಾತ್ರವಲ್ಲ, ಮನಸ್ಸಿಗೂ ಬೇಕಾದ ಗ್ರಾಸವನ್ನು ಒದಗಿಸಿಕೊಡುತ್ತದೆ. ಈ ಬಗ್ಗೆ ವಿವರಣೆ ಇಲ್ಲಿದೆ.

South Indian breakfast

ಸಂಕೀರ್ಣ ಪಿಷ್ಟಗಳು

ನಮ್ಮೆಲ್ಲ ಚಟುವಟಿಕೆಗಳನ್ನು ಮಾಡುವುದಕ್ಕೆ ನಮಗೆ ಪಿಷ್ಟ ಅಥವಾ ಕಾರ್ಬೊಹೈಡ್ರೇಟ್‌ಗಳು ಬೇಕು. ಆದರೆ ಮೈದಾ ಅಥವಾ ಸಂಸ್ಕರಿತ ತಿನಿಸುಗಳಿಂದ ಬರುವಂಥ ಸರಳ ಪಿಷ್ಟವಲ್ಲ, ದೀರ್ಘ ಕಾಲದವರೆಗೆ ಶಕ್ತಿಯನ್ನು ಉಣಿಸುವಂಥ ಸಂಕೀರ್ಣವಾದ ಪಿಷ್ಟಗಳು ಬೇಕು. ಇದನ್ನು ಇಡೀ ಧಾನ್ಯಗಳು, ಓಟ್ಸ್‌, ಸಿರಿ ಧಾನ್ಯಗಳು, ಕಿನೊವಾ, ರಾಗಿ ಮುಂತಾದ ನಾರುಭರಿತ ಅಂದರೆ ತೌಡು ಸಹಿತವಾದ ಧಾನ್ಯಗಳಿಂದ ಪಡೆಯಬಹುದು. ಈ ಧಾನ್ಯಗಳಿಂದ ಉಪ್ಪಿಟ್ಟು, ಅವಲಕ್ಕಿ, ದೋಸೆ, ಇಡ್ಲಿ, ಚಿತ್ರಾನ್ನ… ನಿಮಗೆ ಇಷ್ಟವಾದ ಯಾವುದನ್ನಾದರೂ ಮಾಡಿ.

ಪ್ರೊಟೀನ್‌

ಬೆಳಗಿನ ತಿಂಡಿಗೆ ಹೆಚ್ಚಿನ ಪ್ರಮಾಣದ ಪ್ರೊಟೀನ್‌ ಅಗತ್ಯ. ಇದರಿಂದ ದೇಹದ ರಿಪೇರಿ ಕೆಲಸ, ಹಾರ್ಮೋನುಗಳ ಕ್ಷಮತೆ, ಕಿಣ್ವಗಳ ಉತ್ಪಾದನೆ ಮುಂತಾದ ಮಹತ್ವದ ಕೆಲಸಗಳೆಲ್ಲವೂ ಮಟ್ಟಸವಾಗಿ ಇರುತ್ತದೆ. ಇದಕ್ಕಾಗಿ ಹಾಲು, ಮೊಸರು, ಗ್ರೀಕ್‌ ಯೋಗರ್ಟ್‌, ಪನೀರ್‌, ತೋಫು, ಮೊಟ್ಟೆ, ಕಾಳುಗಳು, ಸೋಯಾ, ಕಾಯಿ ಮತ್ತು ಬೀಜಗಳು ಬೆಳಗಿನ ಆಹಾರದಲ್ಲಿ ಇರಬೇಕು. ಆಮ್ಲೆಟ್‌ ಜೊತೆಗೆ ಇಡೀಧಾನ್ಯದ ಬ್ರೆಡ್‌ ಅಥವಾ ಚಪಾತಿಯಂಥವು ಬೇಕು ಎನ್ನುವುದು ಸ್ಪಷ್ಟವಾಗಿದೆಯಲ್ಲವೇ?

ಆರೋಗ್ಯಕರ ಕೊಬ್ಬು

ಇದು ಸಹ ಅತಿ ಮುಖ್ಯವಾದ ಸತ್ವ. ದೇಹದ ತೂಕವನ್ನು ನಿಯಂತ್ರಿಸಲು, ಹೆಚ್ಚಿನ ಕೊಬ್ಬು ದೇಹದಲ್ಲಿ ಜಮೆಯಾಗದಂತೆ ಕಾಯ್ದುಕೊಳ್ಳಲು ಇದು ಅಗತ್ಯ. ದೇಹದ ಅಂಗಾಂಗಗಳೆಲ್ಲ ಸರಿಯಾಗಿ ಕೆಲಸ ಮಾಡಲು ಈ ಕೊಬ್ಬು ಬೇಕೇಬೇಕು. ಇದಕ್ಕಾಗಿ ಅವಕಾಡೊ, ಕಾಯಿ-ಬೀಜಗಳು, ತುಪ್ಪ, ಕೊಬ್ಬರಿ ಎಣ್ಣೆಯಂಥ ಆರೋಗ್ಯಕರ ತೈಲಗಳು, ಪೀನಟ್‌ಬಟರ್‌ ಅಥವಾ ಇನ್ನಾವುದಾದರೂ ಬೀಜಗಳ ತುಪ್ಪ- ಇವೆಲ್ಲ ಶರೀರಕ್ಕೆ ಬೇಕು. ಮೆದುಳಿನ ಆರೋಗ್ಯ ರಕ್ಷಣೆಗಂತೂ ಇವು ತೀರಾ ಅಗತ್ಯವಾದವು. ಇವುಗಳಲ್ಲಿರುವ ಒಮೇಗಾ ೩ ಕೊಬ್ಬಿನಾಮ್ಲವು ಇಡೀ ದೇಹದ ಸ್ವಾಸ್ಥ್ಯಕ್ಕೆ ಅಗತ್ಯವಾಗಿದ್ದು.

drinking water

ನೀರು

ಇದಿಷ್ಟರ ಜೊತೆಗೆ ದಿನಕ್ಕೆ ಮೂರು ಲೀ. ನೀರು ಕುಡಿಯುವುದು ಬಹುಮುಖ್ಯ. ರಾತ್ರಿಡೀ ನೀರಿಲ್ಲದೆ ಇರುವಂಥ ದೇಹಕ್ಕೆ ಬೆಳಗಿನ ಹೊತ್ತು ಒಂದೆರಡು ಗ್ಲಾಸ್‌ ನೀರು ಕುಡಿಸಿ. ಬರೀ ನೀರು ಕುಡಿಯುವುದು ಕಷ್ಟ ಎನಿಸಿದರೆ, ಸಕ್ಕರೆ ರಹಿತವಾದ ಯಾವುದೇ ರಸಗಳನ್ನು ಸೇರಿಸಿಕೊಳ್ಳಬಹುದು. ಜೊತೆಗೆ, ದಿನವಿಡೀ ಹರ್ಬಲ್‌ ಚಹಾಗಳು, ಎಳನೀರು, ರಸಭರಿತ ಹಣ್ಣು-ತರಕಾರಿಗಳು, ಮಜ್ಜಿಗೆ- ಇಂಥವೆಲ್ಲ ದಿನದ ಮೂರು ಲೀ. ನೀರು ಕುಡಿಯುವ ಗುರಿಯನ್ನು ಪೂರ್ಣಗೊಳಿಸಲು ನೆರವಾಗುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Flesh-Eating Bacteria
ಆರೋಗ್ಯ2 mins ago

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

CM Siddaramaiah and Vidhanasoudha
ಪ್ರಮುಖ ಸುದ್ದಿ10 mins ago

CM Siddaramaiah: 370 ನಿವೃತ್ತ ಅಧಿಕಾರಿಗಳಿಗೆ ಬಾಗಿಲು ತೋರಿಸಿದ ಸರಕಾರ

Euro 2024
ಕ್ರೀಡೆ17 mins ago

Euro 2024: ಗೆಲುವಿನ ಶುಭಾರಂಭ ಕಂಡ ಇಂಗ್ಲೆಂಡ್​; ರೋಚಕ ಗೆಲುವು ಸಾಧಿಸಿದ ನೆದರ್ಲೆಂಡ್ಸ್

Nayana Nagaraj ginirama serial fame got married with suhas
ಕಿರುತೆರೆ18 mins ago

Nayana Nagaraj: 10 ವರ್ಷದ ಪ್ರೀತಿ! ಮನಮೆಚ್ಚಿದ ಹುಡುಗನ ಜತೆ ಸಪ್ತಪದಿ ತುಳಿದ ʻಗಿಣಿರಾಮʼ ನಟಿ

Auto Launches
ಆಟೋಮೊಬೈಲ್22 mins ago

Auto Launches: ಸ್ಕೋಡಾ ಕುಶಾಕ್‌, ಬಿಎಂಡಬ್ಲ್ಯು ಆರ್ 1300 ಸೇರಿ ಇನ್ನೂ ಹಲವು ಹೊಸ ವಾಹನ ಮಾರುಕಟ್ಟೆಗೆ!

Irregular Periods problem Here are some simple home remedies
ಆರೋಗ್ಯ38 mins ago

Irregular Periods: ಏರುಪೇರಾದ ಋತುಚಕ್ರದ ಸಮಸ್ಯೆಯೇ? ಇಲ್ಲಿವೆ ಸರಳ ಮನೆಮದ್ದುಗಳು!

Drowned in river
ಕ್ರೈಂ56 mins ago

Drowned: ಈಜಲು ಹೋಗಿ ಬಾಲಕರು ನೀರುಪಾಲು; ಕಮಲ ಕೊಯ್ಯಲು ಹೋಗಿ ಕೆಸರಿನಲ್ಲಿ ವ್ಯಕ್ತಿ ಸಮಾಧಿ

Himanta Biswa Sarma
ದೇಶ1 hour ago

ಅಸ್ಸಾಂನಲ್ಲಿ ʼವಿಐಪಿ ಸಂಸ್ಕೃತಿʼಗೆ ಬ್ರೇಕ್‌ ಹಾಕಲು ಮುಂದಾದ ಸಿಎಂ ಹಿಮಂತ ಬಿಸ್ವಾ; ತಮ್ಮ ವಿದ್ಯುತ್‌ ಬಿಲ್‌ ತಾವೇ ಪಾವತಿಸುವುದಾಗಿ ಘೋಷಣೆ

Actor Darshan Renukaswamy Send His Photos To Pavitra Gowda
ಕ್ರೈಂ1 hour ago

Actor Darshan: ಹತ್ಯೆಯಾದ ರೇಣುಕಾಸ್ವಾಮಿ ಮೊಬೈಲ್‌ ಹೋಯಿತೆಲ್ಲಿ?

bakrid 2024
ಧಾರ್ಮಿಕ2 hours ago

Bakrid 2024: ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ15 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ16 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ21 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌