Vivekananda Jayanti | ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ವಿಸ್ತಾರ ನ್ಯೂಸ್‌ ಅಭಿಯಾನ ಶ್ಲಾಘನೀಯ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ - Vistara News

ಪ್ರಮುಖ ಸುದ್ದಿ

Vivekananda Jayanti | ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ವಿಸ್ತಾರ ನ್ಯೂಸ್‌ ಅಭಿಯಾನ ಶ್ಲಾಘನೀಯ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌

ದೇಶದಲ್ಲಿ ಮೌಲ್ಯಗಳು ಕುಸಿಯುತ್ತಿವೆ ಎನ್ನುವ ಆತಂಕ ಇದೆಯಾದರೂ, ಪರರಿಗಾಗಿ ಬದುಕುವ ಜನರು ಅನೇಕ ಇರುವುದು ಭರವಸೆಯನ್ನು ಜೀವಂತವಾಗಿಟ್ಟಿದೆ ಎಂದು ಬಿ.ಸಿ. ನಾಗೇಶ್‌ ಹೇಳಿದರು.

VISTARANEWS.COM


on

vivekananda-jayanti Education minister BC Nagesh speech
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಭಿನ್ನ ಪರಿಸ್ಥಿತಿಯ ಕಾರಣಕ್ಕೆ ಸಮಾಜದಲ್ಲಿ ಇಂದು ಮೌಲ್ಯಗಳು ಕುಸಿಯುತ್ತಿವೆ ಎಂಬ ಆತಂಕವಿದೆ ಎಂದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ವಿಸ್ತಾರ ನ್ಯೂಸ್‌ ಅಭಿಯಾನ ಅತ್ಯುತ್ತಮವಾದದ್ದು ಎಂದು ಶ್ಲಾಘಿಸಿದರು.

ವಿವೇಕಾನಂದ ಜಯಂತಿ (Vivekananda Jayanti) ಪ್ರಯುಕ್ತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ವಿಸ್ತಾರ ಮೀಡಿಯಾ ಪ್ರೈವೇಟ್‌ ಲಿಮಿಟ್‌ ವತಿಯಿಂದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ʼವಿವೇಕ ವಂದನೆʼ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಬೇಕು ಎಂದು ನಮ್ಮ ಸರ್ಕಾರ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ‌ ಅವರ ಆಶಯ. ನಮ್ಮ ದೇಶದ ಮೌಲ್ಯಗಳು, ಸಂಸ್ಕೃತಿಯನ್ನು ಹಾಳು ಮಾಡುವ ಉದ್ದೇಶದಿಂದ ಅನೇಕ ಆಕ್ರಮಣಗಳು ನಡೆದವು. ಆದರೆ ಅದೆಲ್ಲವನ್ನೂ ಎದುರಿಸಿ ಈ ದೇಶ ಬದುಕಿದ್ದು ಇಲ್ಲಿನ ಮೌಲ್ಯ ಹಾಗೂ ಸಂಸ್ಕೃತಿಯಿಂದಲೇ. ಆದರೆ ವಿವಿಧ ಪರಿಸ್ಥಿತಿಯಲ್ಲಿ ಇಂದು ಮೌಲ್ಯದ ಕುಸಿತ ಆಗುತ್ತಿದೆ ಎಂಬ ಆತಂಕ‌ ಇದೆ.
ಆದರೆ ಹಾಗೆ ಆಗುವುದಿಲ್ಲ ಎಂಬ ನಂಬಿಕೆಯೂ ಇದೆ. ತನಗಿಂತ ಸಮಾಜ, ಜನ ಮುಖ್ಯ ಎಂದು‌ ಬದುಕುವ ಅನೇಕ ಜನರು ಈ ದೇಶದಲ್ಲಿದ್ದಾರೆ. ಪ್ರತಿ ಹೋಬಳಿ ಮಟ್ಟದಲ್ಲಿ ವಿವೇಕಾನಂದರ ಸಂದೇಶವನ್ನು ಒಯ್ಯುವ ವಿಸ್ತಾರ ನ್ಯೂಸ್‌ ಅಭಿಯಾನ ಖಂಡಿತ ಸಫಲವಾಗುತ್ತದೆ ಎಂದು ಆಶಿಸಿದರು.

ಈ ನೆಲದಲ್ಲಿ ನರನೂ ನಾರಾಯಣ ಆಗಬಹುದು ಎನ್ನುವುದನ್ನು ನಾವು ನಂಬಿದ್ದೇವೆ. ಅದನ್ನು ವಿವೇಕಾನಂದರು ತೋರಿಸಿಕೊಟ್ಟರು. ಶಿಕ್ಷಣ ಇಲಾಖೆಯು ಅನೇಕ ಕಾರ್ಯಗಳನ್ನು ಮಾಡುತ್ತಿದೆ. ಈಗಾಗಲೆ 44ಶಾಲೆಗಳನ್ನು ದತ್ತು ಪಡೆದಿರುವುದಾಗಿ ಹರಿಪ್ರಕಾಶ್ ಕೋಣೆಮನೆಯವರು ಹೇಳಿದರು. ಬಡ ಮಕ್ಕಳ ಶಿಕ್ಷಣಕ್ಕೆ ಅಭಿಯಾನ ರೂಪಿಸಿರುವ ವಿಸ್ತಾರ ಸಂಸ್ಥೆ ಹಾಗೂ ಹರಿಪ್ರಕಾಶ್ ಕೋಣೆಮನೆಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಘನ ಉಪಸ್ಥಿತಿ:
ಕಾರ್ಯಕ್ರಮದಲ್ಲಿ ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರು ಸ್ವಾಮಿ ವೀರೇಶಾನಂದ ಸರಸ್ವತೀ, ಸಿಎಂ ಬಸವರಾಜ ಬೊಮ್ಮಾಯಿ, ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ವಿಸ್ತಾರ ಮೀಡಿಯಾ ಸಿಇಒ ಹಾಗೂ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ, ಚೇರ್ಮನ್‌ ಮತ್ತು ಎಮ್‌ಡಿ ಎಚ್‌.ವಿ. ಧರ್ಮೇಶ್‌, ಶಾಸಕ ಸಿದ್ದು ಸವದಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್, ಸಮಗ್ರ ಶಿಕ್ಷಣದ ರಾಜ್ಯ ಯೋಜನಾ ನಿರ್ದೇಶಕಿ ಬಿ.ಬಿ. ಕಾವೇರಿ, ಖ್ಯಾತ ನಟಿ ಪ್ರಣಿತಾ ಸುಭಾಷ್‌, ವಿವೇಕಯುಗ ಫೌಂಡೇಷನ್‌ ಅಧ್ಯಕ್ಷ ಡಾ. ಡಿ.ಎಂ. ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

ಖ್ಯಾತ ಗಾಯಕ ಕಿಕ್ಕೇರಿ ಕೃಷ್ಣ ಮೂರ್ತಿ ಹಾಗೂ ಭವಾನಿ ಹೆಗಡೆ ಅವರ ಗಾಯನ ಕಾರ್ಯಕ್ರಮವಿತ್ತು.

ಸಹಯೋಗ:
ಕಾರ್ಯಕ್ರಮಕ್ಕೆ ಪರಿಶ್ರಮ ನೀಟ್‌ ಅಕಾಡೆಮಿ, ಕೆಎಂಎಫ್‌ ನಂದಿನಿ, ಎಎಂಸಿ ಎಜುಕೇಷನ್‌, ವಿವೇಕಯುಗ ಫೌಂಡೇಷನ್‌, ಕ್ಯಾಮ್ಸ್‌ ಕರ್ನಾಟಕ, ರಾಷ್ಟ್ರೀಯ ಸೇವಾ ಯೋಜನೆ ಸಹಕಾರ ಒದಗಿಸಿದ್ದವು.

ಇದನ್ನೂ ಓದಿ | Vivekananda Jayanti 2023 | ವಿವೇಕ ವಂದನೆ ಕಾರ್ಯಕ್ರಮದಲ್ಲಿ ವಿವೇಕ ಶಪಥ ಬೋಧನೆ; ಏನಿದೆ ಶಪಥದಲ್ಲಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

Lok Sabha Election 2024: ನನಗೆ ಇರುವ ಮಾಹಿತಿ ಪ್ರಕಾರ 14 ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಒಳ್ಳೆಯ ರೀತಿ ಮತದಾನ ನಡೆಯುತ್ತಿದೆ. ಆದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಂದು ಕಪ್ಪು ಚುಕ್ಕೆ ರೀತಿ ಪ್ರಕ್ರಿಯೆಗಳು ನಡೆಯುತ್ತಿವೆ. ನಿನ್ನೆ ಸಹ ಕನಕಪುರದಲ್ಲೂ ಧೈರ್ಯದಿಂದ ಎದರಿಸುವ ವಾತಾವರಣ ನಿರ್ಮಾಣವಾಗಿದೆ. ಆದರೆ, ಕನಕಪುರದ ಸೊರಕಾಯಿ ದೊಡ್ಡಿ ಸೇರಿದಂತೆ ಹಲವು ಕಡೆ ಕಾಂಗ್ರೆಸ್ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ‌. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕುಣಿಗಲ್ ಸೇರಿದಂತೆ ಹಲವು ಭಾಗದಲ್ಲಿ ಬೆಳಗಿನ ಜಾವ ಐದು ಗಂಟೆಗೆ ಮನೆ ಮನೆಗೆ ಹೋಗಿ ಗ್ಯಾರಂಟಿ ಕಾರ್ಡ್ ಕೊಟ್ಟು 4 ರಿಂದ 5 ಸಾವಿರ ರೂಪಾಯಿಯ ಕೂಪನ್ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

VISTARANEWS.COM


on

Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations
Koo

ಬೆಂಗಳೂರು: ಈ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬೆಂಗಳೂರು ಗ್ರಾಮಾಂತರ ಕ್ಷೇತ್ರದ (Bangalore Rural Constituency) ಕನಕಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ ಮಾಡಲಾಗುತ್ತಿದೆ. ಈ ಬಗ್ಗೆ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಕಣ್ಣು ಮುಚ್ಚಿ ಕುಳಿತಿದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.

ಕೇತಗಾನಹಳ್ಳಿಯಲ್ಲಿ ಕುಟುಂಬ ಸಮೇತ ಬಂದು ಮತಚಲಾಯಿಸಿದ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ಇರುವ ಮಾಹಿತಿ ಪ್ರಕಾರ 14 ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಒಳ್ಳೆಯ ರೀತಿ ಮತದಾನ ನಡೆಯುತ್ತಿದೆ. ಆದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಂದು ಕಪ್ಪು ಚುಕ್ಕೆ ರೀತಿ ಪ್ರಕ್ರಿಯೆಗಳು ನಡೆಯುತ್ತಿವೆ. ನಿನ್ನೆ ಸಹ ಕನಕಪುರದಲ್ಲೂ ಧೈರ್ಯದಿಂದ ಎದರಿಸುವ ವಾತಾವರಣ ನಿರ್ಮಾಣವಾಗಿದೆ. ಆದರೆ, ಕನಕಪುರದ ಸೊರಕಾಯಿ ದೊಡ್ಡಿ ಸೇರಿದಂತೆ ಹಲವು ಕಡೆ ಕಾಂಗ್ರೆಸ್ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ‌. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕುಣಿಗಲ್ ಸೇರಿದಂತೆ ಹಲವು ಭಾಗದಲ್ಲಿ ಬೆಳಗಿನ ಜಾವ ಐದು ಗಂಟೆಗೆ ಮನೆ ಮನೆಗೆ ಹೋಗಿ ಗ್ಯಾರಂಟಿ ಕಾರ್ಡ್ ಕೊಟ್ಟು 4 ರಿಂದ 5 ಸಾವಿರ ರೂಪಾಯಿಯ ಕೂಪನ್ ಕೊಟ್ಟಿದ್ದಾರೆ. ಈ ಹಿಂದೆ ಕುಕ್ಕರ್ ಎಲ್ಲ ಕೊಟ್ಟಿದ್ದಾರೆ. ಈಗ ಕಾರ್ಡ್ ಮತ್ತು ಕೂಪನ್ ಕೊಟ್ಟಿದ್ದಾರೆ. ಈಗ ಎಲ್ಲ ಕಡೆ ಇದನ್ನು ಶುರು ಮಾಡಿದ್ದಾರೆ. ಹಾಲಿ ಶಾಸಕರ ಫೋಟೋ ಹಾಕಿ 10 ಸಾವಿರದ ರೂಪಾಯಿಯ ಕೂಪನ್ ಕೊಡುತ್ತಿದ್ದಾರೆ. ಕ್ಯೂ ಆರ್ ಕೋಡ್ ಕೊಡುವ ಚಾಳಿಯನ್ನು ಶುರು ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದರು.

ಚುನಾವಣಾ ಆಯೋಗದ ವಿರುದ್ಧ ಎಚ್‌ಡಿಕೆ ಗರಂ

ಚುನಾವಣಾ ಆಯೋಗವು ಈ ರೀತಿ ಚುನಾವಣೆಯನ್ನು ನಡೆಸುವ ಬದಲು ನೇರವಾಗಿ ಹಣ ಕೊಡುವ ವ್ಯವಸ್ಥೆಯನ್ನು ಜಾರಿಗೆ ತರಬಹುದು. ಆಯಾಯ ಅಭ್ಯರ್ಥಿಗಳು ತಮ್ಮ ಶಕ್ತಿ ಅನುಸಾರ ಹಣ ನೀಡುತ್ತಾರೆ. ದೇಶದಲ್ಲಿ ಈ ರೀತಿಯ ವ್ಯವಸ್ಥೆಯನ್ನು ತಂದರೆ ಒಳ್ಳೆಯದು ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಇದನ್ನು ಚುನಾವಣಾ ಅಂತ ಕರೆಯುತ್ತಾರಾ? ಪ್ರಜಾಪ್ರಭುತ್ವದ ಹಬ್ಬ ಎಂದು ಹೇಳಲಾಗುತ್ತದೆಯೇ? ದುಡ್ಡು ಇರುವವರಿಗೆ, ಲೂಟಿ ಮಾಡುವವರಿಗೆ ಮಾತ್ರ ಇದು ಹಬ್ಬ. ಜನಸಾಮಾನ್ಯರಿಗೆ ಅಲ್ಲ. ಈ ರೀತಿಯಾಗಿ ಮತ ಪಡೆಯೋದು ಅಂದರೆ ಹೇಗೆ? ಮಹಾನಭಾವರು ಬುದ್ಧಿ ಹೇಳಿದ್ದೇ ಹೇಳಿದ್ದು ಎಂದು ಡಿ.ಕೆ. ಸಹೋದರರ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಮತಗಟ್ಟೆ ಮುಂದೆ ಡಿಕೆ ಶಿವಕುಮಾರ್‌ ರಿಯಾಕ್ಷನ್;‌ ಇಲ್ಲಿದೆ ವಿಡಿಯೊ

ಜ್ಯೋತಿಷಿ ಹೇಳಿದಂತೆ ಹಣ ಹಂಚಿಕೆ

ಕನಕಪುರದಲ್ಲಿ ಜ್ಯೋತಿಷಿ ಹೇಳಿದಂತೆ ಹಣ ಹಂಚಿದ್ದಾರೆ. ಯಾರೋ ಶಾಸ್ತ್ರದವರು ಹೇಳಿದ್ದಾರೆ ಎಂದು 505 ರೂಪಾಯಿ, ಮಲೆ ಮಹದೇಶ್ವರ ದೇವರ ಲಾಡು ಮತ್ತು ಗ್ಯಾರಂಟಿ ಕಾರ್ಡ್‌ಗಳನ್ನು ರಾತ್ರಿಯಲ್ಲ ಹಂಚಿದ್ದಾರೆ. ಈ ಬಗ್ಗೆ ನಮ್ಮ ಡಿಸಿ ಮತ್ತು ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮುಕ್ತವಾದ ಚುನಾವಣೆ ನಡೆಯುತ್ತಿಲ್ಲ. ಇವತ್ತು ಸೋಲಿನ ಭೀತಿಯಿಂದ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ. ಚುನಾವಣಾ ಅಕ್ರಮಗಳ ಮೂಲಕ ಗೆಲ್ಲುತ್ತೇವೆ ಎಂದು ಹೋಗುತ್ತಿದ್ದಾರೆ. ಅಕ್ರಮ ಮಾಡಿದರೂ ಜನತೆ ಬಲಿಯಾಗಿದೆ ನ್ಯಾಯಯುತವಾಗಿ ಮತದಾನ ಮಾಡಿ ಎಂದು ಮನವಿ ಮಾಡುತ್ತೇನೆ. ಚುನಾವಣಾ ಆಯೋಗ ಬಾಗಿಲು ಹಾಕಿಕೊಳ್ಳೋದು ಒಳ್ಳೆಯದು. ಚುನಾವಣಾ ಆಯೋಗ ತನ್ನ ವ್ಯವಸ್ಥೆಯನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದರು.

Continue Reading

ಕರ್ನಾಟಕ

Narendra Modi: ಭ್ರಷ್ಟರ ಬೇಟೆಯಾಡಿದ, ಉಗ್ರರ ಓಡಿಸಿದ; ಮೋದಿಗಾಗಿ ಕನ್ನಡದಲ್ಲಿ ಹಾಡು ಹಾಡಿದ ಅಜ್ಜಿ!

Narendra Modi: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಜನ ಮತದಾನ ಮಾಡುತ್ತಿದ್ದಾರೆ. ಇದರ ಮಧ್ಯೆಯೇ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿ, ಅಜ್ಜಿಯೊಬ್ಬರು ಕನ್ನಡದಲ್ಲಿ ಹಾಡು ಬರೆದು, ಅದನ್ನು ರಾಗವಾಗಿ ಹಾಡಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Narendra Modi
Koo

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಭರಾಟೆ ಜೋರಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪರವಾದ ಅಲೆ ಇದೆ ಎಂದು ಹೇಳಲಾಗುತ್ತಿದೆ. ಚುನಾವಣೆ ಇರಲಿ, ಇಲ್ಲದಿರಲಿ, ಮಕ್ಕಳಿಂದ ಹಿಡಿದು ಹಿರಿಯರವರೆಗೆ ಮೋದಿ ಅವರು ಅಚ್ಚುಮೆಚ್ಚಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಕರ್ನಾಟಕದಲ್ಲಿ ಅಜ್ಜಿಯೊಬ್ಬರು ನರೇಂದ್ರ ಮೋದಿ ಅವರಿಗಾಗಿ ಹಾಡೊಂದನ್ನು ಬರೆದು, ಹಾಡಿದ್ದಾರೆ. ಕರ್ನಾಟಕ ಬಿಜೆಪಿ (Karnataka BJP) ಘಟಕವು ಅಜ್ಜಿಯ ಈ ವಿಡಿಯೊವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿಡಿಯೊ (Viral Video) ವೈರಲ್‌ ಆಗಿದೆ.

“ಮೋದಿಯ ನಿಂದಿಸದಿರೋ ಅಣ್ಣಗಳಿರಾ…” ಎಂಬುದಾಗಿ ಅಜ್ಜಿಯು ಹಾಡು ಬರೆದಿದ್ದು, ರಾಗವಾಗಿ ಮೋದಿ ಅವರನ್ನು ಮೆಚ್ಚಿ ಹಾಡು ಹಾಡಿದ್ದಾರೆ. ನರೇಂದ್ರ ಮೋದಿ ಅವರು ದೊರೆ, ಉತ್ತಮ ಆಡಳಿತಗಾರ, ಭ್ರಷ್ಟಾಚಾರವನ್ನು ನಿಗ್ರಹಿಸಿದವರು, ಭಯೋತ್ಪಾದಕರನ್ನು ಓಡಿಸಿದವರು, ವಿವೇಕಾನಂದರಿಗೆ ಸಮಾನವಾದವರು, ಭಾರತೀಯರ ಮೇಲೆ ಮೋದಿ ಹೊಂದಿರುವ ಪ್ರೇಮ, ದೇಶದ ಮೇಲೆ ಅಭಿಮಾನ ಸೇರಿ ಹಲವು ಅಂಶಗಳನ್ನು ಉಲ್ಲೇಖಿಸಿ ಅಜ್ಜಿಯೊಬ್ಬರು ಹಾಡು ಹಾಡಿದ್ದಾರೆ.

ಅಜ್ಜಿ ಹಾಡಿನ ಸ್ಯಾಂಪಲ್

ಮೋದಿಯ ನಿಂದಿಸದಿರೋ ಅಣ್ಣಗಳಿರಾ
ಸಂತಾನ ನಿಂತಿಸದಿರೋ
ಧರೆಯನುದ್ಧರಿಸಲು ಬಂದ
ದೊರೆಯ ನಿಂದಿಸದರಿ ಅಣ್ಣಗಳಿರಾ
ಮೋದಿಯ ನಿಂದಿಸದಿರೋ…

ಅಜ್ಜಿಯ ವಿಡಿಯೊವನ್ನು ಹಂಚಿಕೊಂಡಿರುವ ಬಿಜೆಪಿಯು, ಕಾಂಗ್ರೆಸ್‌ಗೆ ತಿರುಗೇಟು ನೀಡಿದೆ. “ಸ್ಟುಡಿಯೋದಲ್ಲಿ ರೆಕಾರ್ಡಿಂಗ್‌ ಮಾಡಿಸಿ ಪ್ರಚಾರ ಪಡೆದುಕೊಂಡು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುವುದಲ್ಲ ಸಿದ್ದರಾಮಯ್ಯನವರೇ, ಈ ಇಳಿ ವಯಸ್ಸಿನಲ್ಲೂ ತಂತ್ರ‌ಜ್ಞಾನ ಬಳಸದೆ ಮೋದಿಯವರ ಸಾಧನೆಯನ್ನು ವೃದ್ಧೆ ಓರ್ವರು ಹಾಡಿರುವ ಹಾಡನ್ನೊಮ್ಮೆ ಕೇಳಿ” ಎಂಬುದಾಗಿ ಸಿದ್ದರಾಮಯ್ಯ ಅವರು ಹಂಚಿಕೊಂಡ ವಿಡಿಯೊಗೆ ಬಿಜೆಪಿ ತಿರುಗೇಟು ನೀಡಿದೆ.

ಕಾಂಗ್ರೆಸ್‌ಅನ್ನು ಟೀಕಿಸಿದ ಅಜ್ಜಿ

ಅಜ್ಜಿಯು ಹಾಡು ಹಾಡುವ ಮುನ್ನ ಕಾಂಗ್ರೆಸ್ಸಿಗರನ್ನು ಟೀಕಿಸಿದ್ದಾರೆ. “500 ವರ್ಷದಿಂದ ದೇಶದಲ್ಲಿ ರಾಮಮಂದಿರ ನಿರ್ಮಾಣ ಆಗಿರಲಿಲ್ಲ. ಅದನ್ನು ನರೇಂದ್ರ ಮೋದಿ ಅವರು ಸಾಕಾರಗೊಳಿಸಿದ್ದಾರೆ. ಈಗ ಮೋದಿ ಬಗ್ಗೆ ಇಲ್ಲಸಲ್ಲದ ಮಾತನಾಡುತ್ತಾರೆ. ರಾಮ ಎದೆಯಲ್ಲಿದ್ದಾನೆ ಎಂದೆಲ್ಲ ಹೇಳುತ್ತಿದ್ದಾರೆ. ಇವರು ಇಷ್ಟು ದಿನ ಎಲ್ಲಿದ್ದರು” ಎಂಬುದಾಗಿ ಅಜ್ಜಿಯು ಟೀಕಿಸಿದ್ದಾರೆ. ಇದಾದ ಬಳಿಕ ಮೋದಿ ಕುರಿತು ಹಾಡುಹಾಡಿದ್ದಾರೆ.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

Continue Reading

Lok Sabha Election 2024

Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Lok Sabha Election 2024: ಬೆಂಗಳೂರು ದಕ್ಷಿಣ ಲೋಕಸಭೆ ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

VISTARANEWS.COM


on

Lok Sabha Election 2024 Woman casts her vote with the help of oxygen elderly woman dies after casting her vote
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್‌ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಇನ್ನು ಮೈಸೂರಿನ ಹುಣಸೂರಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿ ಮೃತಪಟ್ಟಿದ್ದಾರೆ.

ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore South Lok Sabha constituency) ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಕಲಾವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ಏಪ್ರಿಲ್‌ 23ರಂದು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರನ್ನು ಆಂಬ್ಯುಲೆನ್ಸ್‌ ಮೂಲಕ ವೈದ್ಯಕೀಯ ಸಿಬ್ಬಂದಿ ಜತೆ ಕರೆತರಲಾಗಿದ್ದು, ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಗೂ ಅವರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ವೋಟು ಹಾಕಿ ಬಂದು ವೃದ್ಧೆ ನಿಧನ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ (Mysore Lok Sabha constituency) ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ವೃದ್ಧೆಯೊಬ್ಬರು ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಹೊರ ಬರುತ್ತಿದ್ದಂತೆ ಅವರು ಕುಸಿದು ಮೃತಪಟ್ಟಿದ್ದಾರೆ.

Lok Sabha Election 2024 Woman casts her vote with the help of oxygen elderly woman dies after casting her vote

ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೊದಲೆರಡು ಗಂಟೆಗಳ ಮತದಾನ ಚುರುಕು, ಶೇ.9.21 ಚಲಾವಣೆ, ಕೆಲವೆಡೆ ಚಕಮಕಿ

ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ (lok sabha constituency) ನಡೆಯುತ್ತಿರುವ ಲೋಕಸಭೆ ಚುನಾವಣೆ (lok sabha election 2024) ಮತದಾನ (voting) ಬೆಳಗ್ಗಿನ ಹೊತ್ತಿನಲ್ಲಿ ಚುರುಕಾಗಿ ನೆರವೇರಿತು. 7 ಗಂಟೆಗೆ ಮತದಾನ ಆರಂಭವಾಗಿದ್ದು, ಮೊದಲ ಎರಡು ಗಂಟೆಗಳಲ್ಲಿ ಸರಾಸರಿ 10% ಮತದಾನ ಕಂಡುಬಂತು.

ಯಾವ ಕ್ಷೇತ್ರದಲ್ಲಿ ಎಷ್ಟೆಷ್ಟು ಮತ ಚಲಾವಣೆ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಗಂಟೆಯವರೆಗೆ 14.33% ಹಾಗೂ ಉಡುಪಿ ಜಿಲ್ಲೆಯಲ್ಲಿ 12.82% ಮತದಾನ ದಾಖಲಾಗಿದೆ. ತುಮಕೂರು 9.6%, ಚಾಮರಾಜನಗರ 7.7%, ಮಂಡ್ಯ 7.70%, ಚಿಕ್ಕಬಳ್ಳಾಪುರ 8.70%, ಹಾಸನ 8.2%, ಚಿಕ್ಕಮಗಳೂರು 11.02%, ಮೈಸೂರು 11.04% ಮತದಾನ ನಡೆದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈವರೆಗೆ 9.8%, ಬೆಂಗಳೂರು ಕೇಂದ್ರ 8.14%, ಬೆಂಗಳೂರು ಉತ್ತರ 8.64%, ಬೆಂಗಳೂರು ಗ್ರಾಮಾಂತರ 8.34% ಮತದಾನ ದಾಖಲಿಸಿವೆ.

ಹತ್ತು ಗಂಟೆಯ ಬಳಿಕ ಬಿಸಿಲು ಏರುವುದರಿಂದ, ಬಿಸಿಲಿನ ಹೊಡೆತ ತಪ್ಪಿಸಿಕೊಳ್ಳಲು ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿದರು. ಮಧ್ಯಾಹ್ನದ ಹೊತ್ತಿನಲ್ಲಿ ಮತದಾನ ಇಳಿಕೆಯಾಗಿ, ಸಂಜೆ ಮತ್ತೆ ಏರುವ ನಿರೀಕ್ಷೆ ಇದೆ. ರಾಜಧಾನಿಯಲ್ಲಿ ಹಲವಾರು ಗಣ್ಯರು ಮುಂಜಾನೆಯೇ ಮತ ಚಲಾಯಿಸಿದರು.

ಇನ್‌ಫೋಸಿಸ್‌ ಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಮುಂಜಾನೆ ಸರತಿ ಸಾಲಿನಲ್ಲಿ ನಿಂತು ಮತ ಹಾಕಿದರು. ನಾರಾಯಣ ಮೂರ್ತಿಯವರು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಿಸಿಕೊಂಡು ನೇರವಾಗಿ ಮತಗಟ್ಟೆಗೇ ಬಂದು ಮತ ಹಾಕಿ ತೆರಳಿದರು. ಕ್ರಿಕೆಟಿಗ ರಾಹುಲ್‌ ದ್ರಾವಿಡ್‌, ನಟ ನಟಿಯರಾದ ಸಪ್ತಮಿ ಗೌಡ, ಪ್ರಕಾಶ್‌ ರೈ, ಗೋಲ್ಡನ್‌ ಸ್ಟಾರ್‌ ಗಣೇಶ್, ಶರಣ್‌, ಧ್ರುವ ಸರ್ಜಾ, ಅಮೂಲ್ಯ ಮುಂತಾದವರು ಮತ ಹಾಕಿದರು. ಧಾರ್ಮಿಕ ಗಣ್ಯರಾದ ಉಡುಪಿಯ ಅಷ್ಟ ಮಠಾಧೀಶರು, ಸಿದ್ದಲಿಂಗ ಸ್ವಾಮಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ ಹಾಕಿದರು.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ರಾಜಕೀಯ ನಾಯಕರು ಹಾಗೂ ಅಭ್ಯರ್ಥಿಗಳಾದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಸದಾನಂದ ಗೌಡ, ಕೆಜೆ ಜಾರ್ಜ್‌, ಜಮೀರ್‌ ಅಹಮದ್‌ ಖಾನ್‌, ರಾಮಲಿಂಗಾರೆಡ್ಡಿ, ಸೌಮ್ಯ ರೆಡ್ಡಿ, ಸೋಮಣ್ಣ, ಪಿಸಿ ಮೋಹನ್‌ ಮೊದಲಾದವರು ಹಕ್ಕು ಚಲಾಯಿಸಿದರು. ಮತದಾನಕ್ಕೆ ಆಗಮಿಸುವ ಮುನ್ನ ಎಚ್‌ಡಿ ದೇವೇಗೌಡ, ಡಿ.ಕೆ. ಸುರೇಶ್‌, ಡಿ.ಕೆ. ಶಿವಕುಮಾರ್‌ ಮೊದಲಾದ ನಾಯಕರು ಟೆಂಪಲ್‌ ರನ್‌ ಮಾಡಿದರು.

ಇದನ್ನೂ ಓದಿ: Lok Sabha Election 2024: ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಗಣೇಶ್ ದಂಪತಿ: ಪ್ರಕಾಶ್‌ ರಾಜ್‌ ಮನವಿ ಏನು?

ಕೆಲವೆಡೆ ಸಣ್ಣ ಪ್ರಮಾಣದ ಚಕಮಕಿ ಕಂಡುಬಂತು. ಉಡುಪಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಮೋದ್‌ ಮತ ಹಾಕಲು ಸಂದರ್ಭ ಪ್ರಚಾರ ನಡೆಸಿದರು ಎಂದು ಬಿಜೆಪಿ ಕಾರ್ಯಕರ್ತರು ತಗಾದೆ ತೆಗೆದು ರಂಪಾಟ ನಡೆಸಿದರು. ಆನೇಕಲ್‌ನಲ್ಲಿ ಬಿಜೆಪಿ ಪೆಂಡಾಲ್‌ಗಳನ್ನು ತೆಗೆಸಿ ಕಾಂಗ್ರೆಸ್‌ ಪೆಂಡಾಲ್‌ ಹಾಕಿಸಿದ ಕುರಿತು ವಾಗ್ಯುದ್ಧ ನಡೆಯಿತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಕೆಲವೆಡೆ ಮತಯಂತ್ರ ಕೈಕೊಟ್ಟು ಮತದಾರರು ಗಂಟೆಗಟ್ಟಲೆ ಕಾಯುವಂತಾಯಿತು. ತಂತ್ರಜ್ಞರು ಆಗಮಿಸಿ ಸರಿಪಡಿಸಿದ ಬಳಿಕ ಮತ ಹಾಕಲಾಯಿತು. ಮಹಿಳೆಯರಿಗಾಗಿ ವ್ಯವಸ್ಥೆ ಮಾಡಲಾಗಿದ್ದ ಪಿಂಕ್‌ ಬೂತ್‌ಗಳಲ್ಲಿಯೂ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಕೆಲವೆಡೆ ಬಿಸಿಲಿನ ಝಳಕ್ಕೆ ಸರತಿಯಲ್ಲಿ ನಿಂತ ಮತದಾರರು ಅಸ್ವಸ್ಥಗೊಂಡರು. ಇವರಿಗೆ ಪ್ರಥಮ ಚಿಕಿತ್ಸೆ ಒದಗಿಸಲಾಯಿತು.

Continue Reading

ದೇಶ

WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

Whatsapp: ಎನ್‌ಕ್ರಿಪ್ಶನ್‌ ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತ ತೊರೆಯುತ್ತೇವೆ ಎಂಬುದಾಗಿ ದೆಹಲಿ ಹೈಕೋರ್ಟ್‌ಗೆ ವಾಟ್ಸ್‌ಆ್ಯಪ್‌ ಪರ ವಕೀಲರು ತಿಳಿಸಿದ್ದಾರೆ. ಜನರು ತಾವು ಕಳುಹಿಸುವ ಮೆಸೇಜ್‌ಗೆ ಸುರಕ್ಷತೆ ಇದೆ, ಬೇರೆ ಯಾರೂ ಓದುವುದಿಲ್ಲ ಎಂಬ ಕಾರಣಕ್ಕಾಗಿ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಅದಕ್ಕೆ ಧಕ್ಕೆಯಾದರೆ ಭಾರತದಲ್ಲಿ ಇರಲ್ಲ ಎಂದು ವಾಟ್ಸ್‌ಆ್ಯಪ್‌ ತಿಳಿಸಿದೆ.

VISTARANEWS.COM


on

Whatsapp
Koo

ನವದೆಹಲಿ: ಭಾರತದಲ್ಲಿ ಕೋಟ್ಯಂತರ ಜನ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಟೆಲಿಗ್ರಾಮ್ ಸೇರಿ ಹಲವು ಮೆಸೇಜಿಂಗ್‌ ಆ್ಯಪ್‌ಗಳು ಇದ್ದರೂ ವಾಟ್ಸ್‌ಆ್ಯಪ್‌‌ (WhatsApp) ಹೆಚ್ಚು ಜನಪ್ರಿಯವಾಗಿದೆ. ಮೆಸೇಜ್‌, ಫೋಟೊ, ವಿಡಿಯೊಗಳನ್ನು ಕಳುಹಿಸುವ ಜತೆಗೆ ವಾಟ್ಸ್‌ಆ್ಯಪ್‌ ಸ್ಟೇಟಸ್‌ ಕೂಡ ಜನರ ಮನಸೆಳೆದಿದೆ. ಆದರೆ, ಇಷ್ಟೊಂದು ಖ್ಯಾತಿ, ಜನಪ್ರಿಯತೆ ಗಳಿಸಿರುವ ವಾಟ್ಸ್‌ಆ್ಯಪ್‌, “ನಾವು ಭಾರತದಿಂದ ಹೊರಹೋಗುತ್ತೇವೆ” ಎಂದು ದೆಹಲಿ ಹೈಕೋರ್ಟ್‌ಗೆ (Delhi High Court) ತಿಳಿಸಿದೆ. ಇದು, ಕೇಂದ್ರ ಸರ್ಕಾರ ಹಾಗೂ ವಾಟ್ಸ್‌ಆ್ಯಪ್‌ ನಡುವಿನ ಬಿಕ್ಕಟ್ಟಿನಿಂದಾಗಿ ನೀಡಿದ ಎಚ್ಚರಿಕೆಯಾಗಿದೆ.

“ಮೆಟಾ ಒಡೆತನದ ವಾಟ್ಸ್‌ಆ್ಯಪ್‌ನ ಎನ್‌ಕ್ರಿಪ್ಶನ್‌ (ಎಂಡ್-ಟು-ಎಂಡ್‌ ಎನ್‌ಕ್ರಿಪ್ಶನ್‌- ಯಾವುದೇ ವ್ಯಕ್ತಿ ಇನ್ನೊಬ್ಬನಿಗೆ ಕಳುಹಿಸುವ ಮೆಸೇಜ್‌ಅನ್ನು ಬೇರೆಯವರು ನೋಡಲು ಆಗದಿರುವ ಸುರಕ್ಷತಾ ವ್ಯವಸ್ಥೆ) ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತದಿಂದಲೇ ಹೊರಹೋಗುತ್ತೇವೆ. ಜನರು ತಾವು ಕಳುಹಿಸಿದ ಮೆಸೇಜ್‌ಅನ್ನು ಬೇರೆಯವರು ಓದುವುದಿಲ್ಲ, ಖಾಸಗಿತನಕ್ಕೆ ಧಕ್ಕೆಯಾಗುವುದಿಲ್ಲ ಎಂಬ ಕಾರಣಕ್ಕಾಗಿಯೇ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಹಾಗಾಗಿ, ಎನ್‌ಕ್ರಿಪ್ಶನ್‌ಗೆ ಧಕ್ಕೆಯಾದರೆ ನಾವು ಭಾರತದಲ್ಲಿ ಮುಂದುವರಿಯುವುದಿಲ್ಲ” ಎಂಬುದಾಗಿ ವಾಟ್ಸ್‌ಆ್ಯಪ್‌ ಪರ ವಕೀಲರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಸಾಧಿಸುವ, ಅದರಲ್ಲೂ ವಾಟ್ಸ್‌ಆ್ಯಪ್‌ ಚಾಟ್‌ಗಳ ಮೇಲೆ ನಿಗಾ ಇರಿಸುವ ಕುರಿತು ಕೇಂದ್ರ ಸರ್ಕಾರ 2021ರಲ್ಲಿ ಜಾರಿಗೆ ತಂದ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ವಾಟ್ಸ್‌ಆ್ಯಪ್‌ ದೆಹಲಿ ಹೈಕೋರ್ಟ್‌ ಮೊರೆ ಹೋಗಿದೆ. ಅರ್ಜಿಯ ವಿಚಾರಣೆ ವೇಳೆ ವಾಟ್ಸ್‌ಆ್ಯಪ್‌ ಪರ ವಕೀಲ ತೇಜಸ್‌ ಕಾರಿಯಾ ವಾದ ಮಂಡಿಸಿದರು.

“ಸಾಮಾಜಿಕ ಜಾಲತಾಣವಾಗಿ ನಾವು ಹೇಳುತ್ತಿದ್ದೇವೆ. ಎನ್‌ಕ್ರಿಪ್ಶನ್‌ ಬೇಡ ಎಂದು ಹೇಳಿದರೆ, ಭಾರತದಲ್ಲಿ ವಾಟ್ಸ್‌ಆ್ಯಪ್‌ ಇರುವುದಿಲ್ಲ. ನಾವು ಒಂದು ಪ್ರಕ್ರಿಯೆಯನ್ನು ಪಾಲಿಸಬೇಕಾಗುತ್ತದೆ. ಯಾವ ಸಂದೇಶವನ್ನು ಬಹಿರಂಗಪಡಿಸಬೇಕು ಎಂದು ಹೇಳುತ್ತಾರೋ ಗೊತ್ತಾಗುವುದಿಲ್ಲ. ಇದಕ್ಕಾಗಿ ನಾವು ವರ್ಷಗಳವರೆಗೆ ಕೋಟ್ಯಂತರ ಮೆಸೇಜ್‌ಗಳನ್ನು ಸ್ಟೋರ್‌ ಮಾಡಿ ಇಡಬೇಕಾಗುತ್ತದೆ” ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ಹಾಗೂ ನ್ಯಾ.ಮನ್‌ಮೀತ್‌ ಪ್ರೀತಂ ಸಿಂಗ್‌ ಅರೋರಾ ಅವರಿದ್ದ ನ್ಯಾಯಪೀಠಕ್ಕೆ ತೇಜಸ್‌ ಕಾರಿಯಾ ತಿಳಿಸಿದರು.

ಮಾಹಿತಿ ತಂತ್ರಜ್ಞಾನ ನಿಯಮಗಳನ್ನು (2021) ಕೇಂದ್ರ ಸರ್ಕಾರವು 2021ರ ಫೆಬ್ರವರಿ 25ರಂದು ಜಾರಿಗೆ ತಂದಿದೆ. ಎಕ್ಸ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಹಾಗೂ ವಾಟ್ಸ್‌ಆ್ಯಪ್‌ನಂತಹ ಸಾಮಾಜಿಕ ಜಾಲತಾಣಗಳು ಹೊಸ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶಿಸಲಾಗಿದೆ. ಇದೇ ಕಾರಣಕ್ಕಾಗಿ, ಸಾಮಾಜಿಕ ಜಾಲತಾಣಗಳು ಪ್ರತಿ ತಿಂಗಳು, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಖಾತೆಗಳನ್ನು ರದ್ದುಗೊಳಿಸುತ್ತಿದೆ.

ಇದನ್ನೂ ಓದಿ: WhatsApp Update: ವಾಟ್ಸ್ ಆಪ್ ನಲ್ಲಿ ಮತ್ತೊಂದು ಹೊಸ ಫೀಚರ್! ಫೋಟೊ, ವಿಡಿಯೊ ಶೇರಿಂಗ್ ಇನ್ನೂ ಸುಲಭ

Continue Reading
Advertisement
Lok Sabha Election 2024 Kannada Celeb vote Pictures
ಸ್ಯಾಂಡಲ್ ವುಡ್19 mins ago

Lok Sabha Election 2024: ಹಳ್ಳಿ ಸ್ಟೈಲ್‌ನಲ್ಲಿ ಬಂದು ಮತ ಹಾಕಿದ ಡಾಲಿ! ವೋಟ್ ಮಾಡಿದ ಸೆಲೆಬ್ರಿಟಿಗಳಿವರು!

Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations
Lok Sabha Election 202423 mins ago

Lok Sabha Election 2024: ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

Lok sabha election 2024
Lok Sabha Election 202434 mins ago

Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

Narendra Modi
ಕರ್ನಾಟಕ52 mins ago

Narendra Modi: ಭ್ರಷ್ಟರ ಬೇಟೆಯಾಡಿದ, ಉಗ್ರರ ಓಡಿಸಿದ; ಮೋದಿಗಾಗಿ ಕನ್ನಡದಲ್ಲಿ ಹಾಡು ಹಾಡಿದ ಅಜ್ಜಿ!

Chocolate industry
ಪರಿಸರ53 mins ago

Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

ವೈರಲ್ ನ್ಯೂಸ್55 mins ago

Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

Lok Sabha Election 2024 Woman casts her vote with the help of oxygen elderly woman dies after casting her vote
Lok Sabha Election 20241 hour ago

Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Whatsapp
ದೇಶ1 hour ago

WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

Lok sabha election 2024
Lok Sabha Election 20241 hour ago

Lok Sabha Election 2024: ಆಪರೇಷನ್‌ಗೂ ಮುನ್ನ ಆಂಬ್ಯುಲೆನ್ಸ್‌ನಲ್ಲಿ ಬಂದು ವೋಟ್‌ ಮಾಡಿದ ಉತ್ಸಾಹಿ ಮತದಾರ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20243 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ9 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ22 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ22 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌