Bahuroopi Prakashana: ಮಕ್ಕಳಿಗೆ ನೀತಿ ಶಿಕ್ಷಣ ನೀಡುವ ಅರ್ಹತೆ ಕಳೆದುಕೊಂಡಿದ್ದೇವೆ: ಕೆ. ರಾಮಯ್ಯ ವಿಷಾದ Vistara News
Connect with us

ಕಲೆ/ಸಾಹಿತ್ಯ

Bahuroopi Prakashana: ಮಕ್ಕಳಿಗೆ ನೀತಿ ಶಿಕ್ಷಣ ನೀಡುವ ಅರ್ಹತೆ ಕಳೆದುಕೊಂಡಿದ್ದೇವೆ: ಕೆ. ರಾಮಯ್ಯ ವಿಷಾದ

Bahuroopi Prakashana: ಬೆಂಗಳೂರಿನಲ್ಲಿ ‘ಬಹುರೂಪಿ’ ಪ್ರಕಾಶನದಿಂದ 10 ಮಕ್ಕಳ ಕೃತಿಗಳನ್ನು ಶನಿವಾರ ಬಿಡುಗಡೆ ಮಾಡಲಾಯಿತು. ಈ ವೇಳೆ ಹಿರಿಯ ಲೇಖಕ, ‘ಆದಿಮ’ದ ಸಂಸ್ಥಾಪಕರಾದ ಕೋಟಗಾನಹಳ್ಳಿ ರಾಮಯ್ಯ ಅವರು ಮಾತನಾಡಿದ್ದಾರೆ.

VISTARANEWS.COM


on

Bahuroopi prakashana book Release Event
ಬೆಂಗಳೂರಿನಲ್ಲಿ ಬಹುರೂಪಿ ಪ್ರಕಾಶನದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಕ್ಕಳ 10 ಕೃತಿಗಳನ್ನು ಹಿರಿಯ ಸಾಹಿತಿ ಕೋಟಗಾನಹಳ್ಳಿ ರಾಮಯ್ಯ ಅವರು ಬಿಡುಗಡೆ ಮಾಡಿದರು. ಹಿರಿಯ ವಿಜ್ಞಾನ ಬರಹಗಾರ ನಾಗೇಶ ಹೆಗಡೆ, ಗಾಯಕಿ ಎಂ.ಡಿ. ಪಲ್ಲವಿ, ಸಾಹಿತಿ ವಿ.ಗಾಯತ್ರಿ, ಪರಾಗ್‌ನ ಲಕ್ಷ್ಮಿ ಕರುಣಾಕರನ್, ಬಹುರೂಪಿಯ ಜಿ.ಎನ್.ಮೋಹನ್, ಶ್ರೀಜಾ ವಿ.ಎನ್ ಉಪಸ್ಥಿತರಿದ್ದರು.
Koo

ಬೆಂಗಳೂರು: ಇಂದಿನ ಶಿಕ್ಷಣ ಪದ್ಧತಿಯಲ್ಲಿ ಅನ್ಯಾಯ ಮತ್ತು ತಾರತಮ್ಯಗಳು ಅಡಕವಾಗಿವೆ. ಮಕ್ಕಳಿಗೆ ಶಿಕ್ಷಣ ನೀಡುವ ನೈತಿಕತೆಯೇ ನಮಗೆ ಇಲ್ಲವಾಗಿದೆ. ಹೀಗಿರುವಾಗ ಮಕ್ಕಳಿಗೆ ಯಾವ ರೀತಿಯ ನೀತಿ ಶಿಕ್ಷಣ ನೀಡಲು ಸಾಧ್ಯವಿದೆ. ವಾಸ್ತವದಲ್ಲಿ ಮಕ್ಕಳಿಗೆ ನೀತಿ ಶಿಕ್ಷಣ ನೀಡುವ ಅರ್ಹತೆಯನ್ನೇ ನಾವು ಕಳೆದುಕೊಂಡಿದ್ದೇವೆ ಎಂದು ಹಿರಿಯ ಲೇಖಕ, ‘ಆದಿಮ’ದ ಸಂಸ್ಥಾಪಕರಾದ ಕೋಟಗಾನಹಳ್ಳಿ ರಾಮಯ್ಯ ವಿಷಾದಿಸಿದರು.

‘ಬಹುರೂಪಿ’ ಪ್ರಕಾಶನದಿಂದ ನಗರದ ಚಿತ್ರಕಲಾ ಪರಿಷತ್‌ನಲ್ಲಿ ಪರಾಗ್, ಪರಿ, ಕರಡಿ ಟೇಲ್ಸ್, ಕಲ್ಪವೃಕ್ಷ, ಏಕತಾರದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ 10 ಮಕ್ಕಳ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಪಠ್ಯ ಪುಸ್ತಕಗಳು, ಕಥೆ ಪುಸ್ತಕಗಳ ಮೂಲಕ ಬಹು ಹಿಂದಿನಿಂದಲೂ ಮೈಕ್ರೋ ಫ್ಯಾಸಿಸಂ ಅನ್ನು ಬಿತ್ತಲಾಗುತ್ತಿದೆ. ಆದನ್ನು ಇಂದಿಗೂ ಮುಂದುವರಿಸಿಕೊಂಡು ಹೋಗಲಾಗುತ್ತಿದೆ ಎಂದು ತಿಳಿಸಿದರು.

ಮಕ್ಕಳು ಏನು ಓದಬೇಕು, ಏನನ್ನು ಓದಬಾರದು ಎಂಬುದನ್ನು ತೀರ್ಮಾನಿಸುವವರು ಯಾರು? ಇಂಥ ತೀರ್ಮಾನ ಕೈಗೊಳ್ಳಲು ನಮಗೆ ಅರ್ಹತೆ ಇದೆಯೇ? ಈ ಬಗ್ಗೆ ಮಕ್ಕಳಿಂದ ಅಭಿಪ್ರಾಯಗಳನ್ನು ಪಡೆಯಲಾಗಿದೆಯೇ ಎಂಬ ಸಂಕೀರ್ಣ ಪ್ರಶ್ನೆಗಳಿಗೆ ತ್ವರಿತವಾಗಿ ಉತ್ತರ ಕಂಡುಕೊಳ್ಳುವ ಅನಿವಾರ್ಯತೆ ಇದೆ ಎಂದು ಹೇಳಿದರು.

ಇದನ್ನೂ ಓದಿ | Book Release : ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ರಚಿತ ‘ರಾಹುಲ್‌ ಗಾಂಧಿ’ ಕುರಿತ ಕೃತಿ ಸೆ.12ರಂದು ಬಿಡುಗಡೆ

ಖ್ಯಾತ ಗಾಯಕಿ ಎಂ.ಡಿ. ಪಲ್ಲವಿ ಅವರು ಮಾತನಾಡಿ, ಮಕ್ಕಳ ಎಳೆ ಮನಸ್ಸಿನಲ್ಲಿ ಜಾತಿ, ಬಡವ, ಶ್ರೀಮಂತ ಇತ್ಯಾದಿ ಭೇದಭಾವಗಳು ಯಾವುದೂ ಇರುವುದಿಲ್ಲ. ಆದರೆ, ಮಕ್ಕಳನ್ನು ಬೆಳೆಸುವ ಹಾದಿಯಲ್ಲಿ ಈ ರೀತಿಯ ತಾರತಮ್ಯ ಮೂಡಿಸುತ್ತಿದ್ದೇವೆ. ಅವರ ಮನಸ್ಸನ್ನು ಸಂಕೀರ್ಣಗೊಳಿಸುವ ಬದಲು ಹಿಗ್ಗಿಸಲು ಪ್ರಯತ್ನಿಸಿದಾಗ ಉತ್ತಮ ಹಾಗೂ ಸೌಹಾರ್ದಯುತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

10 books released by Bahuroopi Publications

ವಿಜ್ಞಾನ ಬರಹಗಾರರಾದ ನಾಗೇಶ ಹೆಗಡೆ ಅವರು ಮಾತನಾಡಿ, ಕನ್ನಡ ಭಾಷೆಯಲ್ಲಿ ಮಕ್ಕಳ ಪುಸ್ತಕಗಳು ತುಂಬಾ ಕಡಿಮೆ ಇವೆ. ಈ ವಿಷಯದಲ್ಲಿ ಸಾಕಷ್ಟು ಕೆಲಸಗಳು ಆಗಬೇಕಿದೆ. ಹಾಗಾಗಿ, ಬರವಣಿಗೆ ಕ್ಷೇತ್ರದಲ್ಲಿ ಹೆಚ್ಚಿನ ಕೊಡುಗೆ ನೀಡುವ ಆಸೆ ಇದೆ. ಮಕ್ಕಳ ಪುಸ್ತಕಗಳನ್ನು ಹೇಗೋ ರೂಪಿಸಬಹುದು. ಆದರೆ, ಅವುಗಳನ್ನು ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಹಲವಾರು ಅಡೆತಡೆಗಳು ಸೃಷ್ಟಿಯಾಗಿವೆ. ಒಂದೆಡೆ ಕನ್ನಡ ಶಾಲೆಗಳೇ ಕಣ್ಮರೆಯಾಗುತ್ತಿದ್ದರೆ, ಇನ್ನೊಂದೆಡೆ ಕನ್ನಡ ಮಕ್ಕಳೇ ಕಣ್ಮರೆಯಾಗುತ್ತಿದ್ದಾರೆ ಎಂದು ತಿಳಿಸಿದರು.

ಮಕ್ಕಳ ಪುಸ್ತಕಗಳನ್ನು ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಪುಸ್ತಕ ಪ್ರಾಧಿಕಾರ, ಭಾಷಾ ಪ್ರಾಧಿಕಾರ ಸೇರಿದಂತೆ ಸರ್ಕಾರದ ಸಂಸ್ಥೆಗಳು ಕೆಲಸ ಮಾಡಬೇಕಿತ್ತು. ಆದರೆ, ಈ ವಿಷಯದಲ್ಲಿ ಅವೆಲ್ಲವೂ ವಿಫಲವಾಗಿವೆ ಎಂದ ಅವರು, ಬಹುರೂಪಿ ಸಂಸ್ಥೆಯು ಹೊರತಂದಿರುವ 10 ಪುಸ್ತಕಗಳು ಮಕ್ಕಳಿಗೆ ವಾಸ್ತವತೆಯ ಕಥೆಯನ್ನು ಹೇಳುತ್ತಲೇ ಅವರಿಗೆ ಹೊಸ ಜಗತ್ತಿಗೆ ಪ್ರವೇಶ ಕಲ್ಪಿಸುತ್ತದೆ. ಸಾಮಾಜಿಕ ವರದಿಗಳಿಗೆ ಕಲ್ಪನೆ ಬೆರೆಸಿ ಕಥೆಗಳ ರೂಪವನ್ನು ನೀಡಲಾಗಿದೆ. ಇದೊಂದು ಮಹತ್ವದ ಕೆಲಸ ಎಂದು ಅಭಿಪ್ರಾಯಪಟ್ಟರು.

ಮಕ್ಕಳ ಸಾಹಿತ್ಯಕ್ಕೆ ಸಮಕಾಲೀನ ಸ್ಪರ್ಶ: ಅನುವಾದದ ಮಹತ್ವ ಕುರಿತು ಸಂವಾದ ಜರುಗಿತು. ಮಕ್ಕಳ ಹಕ್ಕುಗಳ ಟ್ರಸ್ಟ್‌ನ ವಾಸುದೇವ ಶರ್ಮಾ, ನಾಗೇಶ್ ಹೆಗಡೆ, ಕಲಾವಿದ ಗುಜ್ಜಾರ್, ಶಿಕ್ಷಣ ತಜ್ಞರಾದ ವೀಣಾ ಮೋಹನ್, ನವಕರ್ನಾಟಕ ಪ್ರಕಾಶನದ ರಮೇಶ್ ಉಡುಪ, ‘ಪರಿ’ಯ ಪ್ರೀತಿ ಡೇವಿಡ್ ಅವರು ಸಂವಾದದಲ್ಲಿದ್ದರು

ಇದನ್ನೂ ಓದಿ | Book Release : ಗೋವಾ ರಾಜ್ಯಪಾಲರ ಅನುವಾದಿತ ‘ಗಿಳಿಯು ಬಾರದೇ ಇರದು’ ಕೃತಿ ಸೆ. 10ರಂದು ಬಿಡುಗಡೆ

ಬಹುರೂಪಿಯ ಜಿ.ಎನ್. ಮೋಹನ್, ಶ್ರೀಜಾ ವಿ ಎನ್, ಪರಾಗ್ ನ ಲಕ್ಷ್ಮಿ ಕರುಣಾಕರನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬಿಡುಗಡೆಯಾದ ಕೃತಿಗಳು

ಈ ಪಿಕ್ ಯಾರ ಕ್ಲಿಕ್ (ಬೆಲೆ: ರೂ. 160)
ಸೀರೆ ಉಡುವ ರಾಕ್ ಸ್ಟಾರ್ (ಬೆಲೆ: ರೂ. 160)
ಲೇಡಿ ಟಾರ್ಜಾನ್ (ಬೆಲೆ: ರೂ. 120)
ಮರ ಏರಲಾಗದ ಗುಮ್ಮ (ಬೆಲೆ: ರೂ. 160)
ಸುಂದರಬಾಗ್ ಬೀದಿಯಲ್ಲಿ ನಡೆಯಿತೊಂದು ವಿಸ್ಮಯ (ಬೆಲೆ: ರೂ. 140)
ಮರಳಿ ಮನೆಗೆ (ಬೆಲೆ: ರೂ. 125)
ಟಿಕೆಟ್ ಇಲ್ಲ, ಪ್ರಯಾಣ ನಿಲ್ಲಲ್ಲ (ಬೆಲೆ: ರೂ. 125)
ಸ್ನೇಹಗ್ರಾಮದ ಸಂಸತ್ತು (ಬೆಲೆ: ರೂ. 150)
ನಂದಿನಿ ಎಂಬ ಜಾಣೆ (ಬೆಲೆ: ರೂ. 150)
ಗೆದ್ದೇ ಬಿಟ್ಟೆ! (ಬೆಲೆ: ರೂ. 125)

ಸಂಪರ್ಕ: 70191 82729

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕಲೆ/ಸಾಹಿತ್ಯ

Booker Prize 2023: ಭಾರತೀಯ ಮೂಲದ ಚೇತನಾ ಮಾರೂ ಕೃತಿ ʼವೆಸ್ಟರ್ನ್‌ ಲೇನ್‌ʼ ಬೂಕರ್‌ ಪ್ರಶಸ್ತಿಯ ಶಾರ್ಟ್‌ಲಿಸ್ಟ್‌ಗೆ

ಚೇತನಾ ಮಾರೂ ಅವರ ʼವೆಸ್ಟರ್ನ್ ಲೇನ್’ ಗೋಪಿ ಎಂಬ 11 ವರ್ಷದ ಬ್ರಿಟಿಷ್ ಗುಜರಾತಿ ಹುಡುಗಿ ಮತ್ತು ಅವಳ ಕುಟುಂಬದೊಂದಿಗೆ ಅವಳ ಸಂಬಂಧದ ಸುತ್ತಲಿನ ಕಥೆಯಾಗಿದೆ.

VISTARANEWS.COM


on

Edited by

chetna maroo writer
Koo

ಹೊಸದಿಲ್ಲಿ: ಭಾರತೀಯ ಮೂಲದ ಲೇಖಕಿ ಚೇತನಾ ಮಾರೂ (Chetna Maroo) ಅವರ ಕಾದಂಬರಿ ʼವೆಸ್ಟರ್ನ್‌ ಲೇನ್‌ʼ (Western lane) ಈ ವರ್ಷದ ಬೂಕರ್‌ ಪ್ರಶಸ್ತಿಯ (Booker Prize 2023) ಶಾರ್ಟ್‌ ಲಿಸ್ಟ್‌ನಲ್ಲಿ ಸ್ಥಾನ ಪಡೆದುಕೊಂಡಿದೆ.

ಬೂಕರ್ ಪ್ರಶಸ್ತಿ 2023ರ (Booker Award 2023) ತೀರ್ಪುಗಾರರ ಸಮಿತಿಯು 13 ಕೃತಿಗಳ ಲಾಂಗ್‌ಲಿಸ್ಟ್ ಮಾಡಿದ ಪಟ್ಟಿಯಿಂದ ಆರು ಕಾದಂಬರಿಗಳ ಅಂತಿಮ ಪಟ್ಟಿಯನ್ನು ಗುರುವಾರ ಪ್ರಕಟಿಸಿತು. ಬೂಕರ್‌ ಡಜನ್ ಎಂದು ಇದನ್ನು ಕರೆಯಲಾಗುತ್ತದೆ. ಇವುಗಳನ್ನು ಕಳೆದ ವರ್ಷ ಅಕ್ಟೋಬರ್ ಮತ್ತು ಈ ವರ್ಷದ ಸೆಪ್ಟೆಂಬರ್ ನಡುವೆ ಪ್ರಕಟಿಸಲಾದ 163 ಪುಸ್ತಕಗಳಿಂದ ಆಯ್ಕೆ ಮಾಡಲಾಗಿದೆ.

ಭಾರತೀಯ ಮೂಲದ ಲಂಡನ್‌ ನಿವಾಸಿ ಲೇಖಕಿ ಚೇತನಾ ಮಾರೂ ಅವರ ಚೊಚ್ಚಲ ಕಾದಂಬರಿ ʼವೆಸ್ಟರ್ನ್ ಲೇನ್’ ಪಟ್ಟಿಗೆ ಸೇರಿಕೊಂಡಿದೆ. ಪಟ್ಟಿಯಲ್ಲಿರುವ ಇತರ ಕೃತಿಗಳೆಂದರೆ ಪಾಲ್ ಲಿಂಚ್ (ಐರ್ಲೆಂಡ್) ಅವರ ಪ್ರಾಫೆಟ್ ಸಾಂಗ್, ಪಾಲ್ ಮುರ್ರೆ (ಐರ್ಲೆಂಡ್) ಅವರ ದಿ ಬೀ ಸ್ಟಿಂಗ್, ಸಾರಾ ಬರ್ನ್‌ಸ್ಟೈನ್ (ಕೆನಡಾ) ಅವರ ಸ್ಟಡಿ ಫಾರ್‌ ಒಬೀಡಿಯೆನ್ಸ್‌, ಜೊನಾಥನ್ ಎಸ್ಕೋಫರಿ (ಯುಎಸ್) ಅವರ ಇಫ್‌ ಐ ಸರ್ವೈವ್‌ ಯು, ಮತ್ತು ಪಾಲ್ ಹಾರ್ಡಿಂಗ್ (ಯುಎಸ್) ಅವರ ದಿಸ್‌ ಅದರ್ ಈಡನ್ (ಯುಎಸ್).

ಚೇತನಾ ಮಾರೂ ಅವರ ʼವೆಸ್ಟರ್ನ್ ಲೇನ್’ ಗೋಪಿ ಎಂಬ 11 ವರ್ಷದ ಬ್ರಿಟಿಷ್ ಗುಜರಾತಿ ಹುಡುಗಿ ಮತ್ತು ಅವಳ ಕುಟುಂಬದೊಂದಿಗೆ ಅವಳ ಸಂಬಂಧದ ಸುತ್ತಲಿನ ಕಥೆಯಾಗಿದೆ. ಈ ಕಾದಂಬರಿಯು ವಲಸಿಗ ತಂದೆ ತನ್ನ ಕುಟುಂಬವನ್ನು ಏಕಪೋಷಕನಾಗಿ ಬೆಳೆಸುವ ಕಥೆಯನ್ನು ವಿಸ್ತರಿಸುತ್ತದೆ. ಸ್ಕ್ವಾಷ್ ಕ್ರೀಡೆಯನ್ನು ಸಂಕೀರ್ಣ ಮಾನವ ಭಾವನೆಗಳಿಗೆ ರೂಪಕವಾಗಿ ಬಳಸಿದ್ದಕ್ಕಾಗಿ ಬೂಕರ್ ನ್ಯಾಯಾಧೀಶರು ಈ ಪುಸ್ತಕವನ್ನು ಶ್ಲಾಘಿಸಿದ್ದಾರೆ.

ಚೇತನಾ ಮಾರೂ ಅವರ ಪ್ರಕಾರ ʼʼಇದೊಂದು ಕ್ರೀಡಾ ಕಾದಂಬರಿ. ಇದು ಭವಿಷ್ಯದ ಕಾದಂಬರಿ, ಆಂತರಿಕ ಕಾದಂಬರಿ, ದುಃಖದ ಬಗೆಗಿನ ಕಾದಂಬರಿ, ವಲಸಿಗರ ಅನುಭವದ ಕಾದಂಬರಿ ಎಂದೂ ಕರೆಯಬಹುದು.ʼʼ

ಬೂಕರ್‌ ಪ್ರಶಸ್ತಿಯ ವಿಜೇತರನ್ನು ನವೆಂಬರ್ 26ರಂದು ಘೋಷಿಸಲಾಗುತ್ತದೆ. ಗೆದ್ದವರು £50,000 (50.92 ಲಕ್ಷ ರೂ.) ಬಹುಮಾನ ಪಡೆಯುತ್ತಾರೆ. ಶಾರ್ಟ್ ಲಿಸ್ಟ್‌ನಲ್ಲಿರುವ ಇತರರಿಗೆ £2,500 (2.54 ಲಕ್ಷ ರೂ.) ದೊರೆಯುತ್ತದೆ. ಈ ಪ್ರತಿಷ್ಠಿತ ಪ್ರಶಸ್ತಿಯು ಪ್ರಪಂಚದ ಯಾವುದೇ ಕಡೆ ಇಂಗ್ಲಿಷ್‌ನಲ್ಲಿ ಬರೆಯಲ್ಪಟ್ಟ ಕಾದಂಬರಿಗಳಿಗೆ ಮೀಸಲಾಗಿದೆ.

ಇದನ್ನೂ ಓದಿ: Booker award: ಭಾರತೀಯ ಲೇಖಕಿ ಗೀತಾಂಜಲಿ ಶ್ರೀ ಕಾದಂಬರಿಗೆ ಮನ್ನಣೆ

Continue Reading

ಕಲೆ/ಸಾಹಿತ್ಯ

Painting: ಕೇವಲ 328 ರೂ.ಗೆ ಖರೀದಿಸಿದ ಪೇಂಟಿಂಗ್ 1.5 ಕೋಟಿ ರೂಪಾಯಿಗೆ ಹರಾಜು!

Painting: ಬಹು ವರ್ಷಗಳಿಂದ ಕಳೆದು ಹೋಗಿದ್ದ ಖ್ಯಾತ ಕಲಾವಿದ ಎನ್ ಸಿ ವೈತ್ ಅವರ ಅಮೂಲ್ಯ ಪೇಂಟಿಂಗ್ ಸಿಕ್ಕಿದ್ದೇ ರೋಚಕವಾಗಿದೆ.

VISTARANEWS.COM


on

Edited by

Viral News and Painting bought for rs 328 and it sold for Rs 1.5 crore
Koo

ನವದೆಹಲಿ: ಕೇವಲ 4 ಡಾಲರ್‌ಗೆ ಖರೀದಿಸಿದ ಪೇಂಟಿಂಗ್‌ವೊಂದು (Painting) 1,91,000 ಡಾಲರ್‌ ರೂ.ಗೆ ಬಿಕರಿಯಾಗಿದೆ. ಹೌದು, ಖ್ಯಾತ ಚಿತ್ರಕಾರ ಎನ್ ಸಿ ವೈತ್ (N C Wyeth) ಅವರ ಚಿತ್ರಪಟವೊಂದನ್ನು ಇಂಗ್ಲೆಂಡ್‌ನ ನ್ಯೂ ಹ್ಯಾಂಪ್‌ಶೈರ್‌ನ (New Hampshire) ಅಂಗಡಿಯೊಂದರಿಂದ ಕೇವಲ 4 ಡಾಲರ್‌ಗೆ (ಅಂದಾಜು 328 ರೂ.) ಖರೀದಿಸಿಲಾಗಿತ್ತು. ಅದೇ ಪೇಂಟಿಂಗ್, ವೈತ್ ಅವರ ಕಳೆದು ಹೋದ ಅಮೂಲ್ಯ ಕೃತಿಯಾಗಿ ಭಾರೀ ಮೊತ್ತಕ್ಕೆ ಅಂದರೆ, 1.5 ಕೋಟಿ ರೂಪಾಯಿಗೆ ಮಾರಾಟವಾಗಿದೆ(Viral News).

2017ರಲ್ಲಿ ಮ್ಯಾಂಚೆಸ್ಟರ್‌ನ ಸೇವರ್ಸ್ ಸ್ಟೋರ್‌ನಲ್ಲಿ ಫ್ರೇಮ್‌ಗಳ ದಾಸ್ತಾನಗಳ ಮಧ್ಯದಲ್ಲಿ ಈ ಅಮೂಲ್ಯವಾದ ಕಲಾಕೃತಿಯನ್ನು ಮಹಿಳೆಯೊಬ್ಬರು ಹೆಕ್ಕಿ ತೆಗೆದಿದ್ದರು. ಆದರೆ, ಆಕೆ ಈ ಪೇಂಟಿಂಗ್ ನಿರ್ಮಾತೃ ನೀಧಮ್-ಸಂಜಾತ ಕಲಾವಿದ ಎನ್‌ ಸಿ ವೈತ್ ಎಂಬುದನ್ನು ತಿಳಿಯದೇ ಹೋದಳು. ವೈತ್ ಅವರ ಈ ವರ್ಣ ಚಿತ್ರವು ಅದ್ಭುತ ಕಲಾಕೃತಿಯಾಗಿದೆ ಎಂದು ಸಿಬಿಎಸ್ ನ್ಯೂಸ್ ವರದಿ ಮಾಡಿದೆ.

ರಮೋನಾ ಎಂಬ ಶೀರ್ಷಿಕೆಯ ಈ ಪೇಂಟಿಂಗ್, ಹೆಲೆನ್ ಹಂಟ್ ಜಾಕ್ಸನ್ ಅವರ ಕಾದಂಬರಿ ‘ರಮೋನಾ’ ದ 1939 ರ ಆವೃತ್ತಿಗಾಗಿ ಲಿಟಲ್, ಬ್ರೌನ್ ಮತ್ತು ಕಂಪನಿಯಿಂದ ರೂಪಿಸಲಾದ ನಾಲ್ಕು ಸೆಟ್‌ಗಳಲ್ಲಿ ಒಂದಾಗಿದೆ. ಪೇಂಟಿಂಗ್ ನಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡು ಸಾಕಿದ ತಾಯಿಯೊಂದಿಗೆ ಸಮಸ್ಯೆ ಎದುರಿಸುತ್ತಿರುವ ಯುವತಿಯನ್ನು ನೋಡಬಹುದು.

ಈ ಸುದ್ದಿಯನ್ನೂ ಓದಿ: Tiranga Nail Art: ಸೀಸನ್‌ ಟ್ರೆಂಡ್‌ಗೆ ಎಂಟ್ರಿ ನೀಡಿದ ಆಕರ್ಷಕ ತಿರಂಗಾ ನೇಲ್‌ ಆರ್ಟ್

ಹರಾಜು ಸಂಸ್ಥೆಯಾಗಿರುವ ಬೋನ್‌ಹ್ಯಾಮ್ಸ್ ಈ ರಮೋನಾ ಚಿತ್ರಕೃತಿಯ ಕುರಿತು ಇನ್ಸ್‌ಟಾಗ್ರಾಮ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ. ಈ ದೀರ್ಘಕಾಲದಿಂದ ಕಳೆದುಹೋಗಿದ್ದ ಎನ್‌ ಸಿ ವೈತ್ ಅವರ ಪೇಂಟಿಂಗ್ ಸೆಪ್ಟೆಂಬರ್ 19 ರಂದು ಬೊನ್‌ಹ್ಯಾಮ್ಸ್ ಸ್ಕಿನ್ನರ್‌ನಲ್ಲಿ ಹರಾಜಿಗೆ ಬರುತ್ತಿದೆ. 2017ರಲ್ಲಿ ಈ ಕಲಾಕೃತಿಯನ್ನು ಅಂಗಡಿಯೊಂದರಿಂದ ಕೇವಲ 4 ಡಾಲರ್‌ಗೆ ಖರೀದಿಸಲಾಗಿದೆ. ಬಳಿಕ, ಅಮೆರಿಕದ ಪ್ರಸಿದ್ಧ ಕಲಾವಿದರು ಈ ಅಮೂಲ್ಯ ಪೇಂಟಿಂಗ್‌ನ ಮಹತ್ವವನ್ನು ಬಹಿರಂಗಗೊಳಿಸಿದ್ದಾರೆ ಎಂದು ಬೋನ್‌ಹ್ಯಾಮ್ಸ್ ಬರೆದುಕೊಂಡಿದೆ.

ಇನ್ನಷ್ಟು ವೈರಲ್ ನ್ಯೂಸ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಕಲೆ/ಸಾಹಿತ್ಯ

UNESCO World Heritage List: ರವೀಂದ್ರನಾಥ ಠಾಗೋರ್‌ರ ‘ಶಾಂತಿನಿಕೇತನ’ ಈಗ ಯುನೆಸ್ಕೋ ವಿಶ್ವ ಪಾರಂಪರಿಕ ತಾಣ!

UNESCO World Heritage List: ಕವಿ, ತತ್ವಜ್ಞಾನಿ ಹಾಗೂ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ್ ಠಾಗೋರ್ ಅವರು 1901ರಲ್ಲಿ ಶಾಂತಿನಿಕೇತನ ಆರಂಭಿಸಿದ್ದರು.

VISTARANEWS.COM


on

Edited by

West Bengal
Koo

ನವದೆಹಲಿ: ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಠಾಗೋರ್ (Rabindranath Tagore) ಅವರು ತಮ್ಮ ಜೀವನದ ಬಹುಭಾಗವನ್ನು ಕಳೆದ ಪಶ್ಚಿಮ ಬಂಗಾಳದ (West Bengal) ಬಿರ್ಭುಮ್ ಜಿಲ್ಲೆಯ (Birbhum district) ಶಾಂತಿನಿಕೇತನ(Santiniketan) ಪಟ್ಟಣವನ್ನು ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಗೆ(UNESCO World Heritage List) ಸೇರಿಸಲಾಗಿದೆ. ಈ ಕುರಿತು ಎಕ್ಸ್ ವೇದಿಕೆಯಲ್ಲಿ ಟ್ವೀಟ್ ಮಾಡಿರುವ ಯುನೆಸ್ಕೋ, ಬ್ರೇಕಿಂಗ್ ನ್ಯೂಸ್. ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಶಾಂತಿನಿಕೇತನ ಸೇರ್ಪಡೆ. ಅಭಿನಂದನೆಗಳು ಎಂದು ಹೇಳಿದೆ.

ಕವಿ, ತತ್ವಜ್ಞಾನಿ ಠಾಗೋರ್ ಅವರು 1901ರಲ್ಲಿ ಶಾಂತಿನಿಕೇತನ ವಸತಿ ಶಾಲೆಯನ್ನು ಆರಂಭಿಸಿದ್ದರು. ಇದು ಪ್ರಾಚೀನ ಭಾರತೀಯ ಸಂಪ್ರದಾಯಗಳ ಆಧಾರದ ಮೇಲೆ ವಸತಿ ಶಾಲೆ ಮತ್ತು ಕಲೆಯ ಕೇಂದ್ರವಾಗಿತ್ತು. ಧಾರ್ಮಿಕ ಮತ್ತು ಸಾಂಸ್ಕೃತಿಕ ಗಡಿಗಳನ್ನು ಮೀರಿದ ಮಾನವೀಯತೆಯ ಏಕತೆಯನ್ನು ಇದು ಪ್ರತಿನಿಧಿಸುತ್ತದೆ.

ಈ ಸುದ್ದಿಯನ್ನೂ ಓದಿ: Beluru Temple : ಬೇಲೂರು ಚನ್ನಕೇಶವ ದೇಗುಲ ಶೀಘ್ರವೇ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಗೆ: ಬೊಮ್ಮಾಯಿ

1921ರಲ್ಲಿ ಶಾಂತಿನಿಕೇತನದಲ್ಲಿ ‘ವಿಶ್ವ ವಿಶ್ವವಿದ್ಯಾನಿಲಯ’ವನ್ನು ಸ್ಥಾಪಿಸಲಾಯಿತು, ಇದು ಮಾನವೀಯತೆಯ ಏಕತೆಯನ್ನು ಅಥವಾ “ವಿಶ್ವ ಭಾರತಿ” ತತ್ವವನ್ನು ಪ್ರತಿನಿಧಿಸುತ್ತದೆ. 20ನೇ ಶತಮಾನದ ಆರಂಭದಲ್ಲಿ ಚಾಲ್ತಿಯಲ್ಲಿರುವ ಬ್ರಿಟಿಷ್ ವಸಾಹತುಶಾಹಿ ವಾಸ್ತುಶಿಲ್ಪದ ದೃಷ್ಟಿಕೋನಗಳಿಂದ ಮತ್ತು ಯುರೋಪಿಯನ್ ಆಧುನಿಕತಾವಾದದಿಂದ ಭಿನ್ನವಾಗಿರುವ ಶಾಂತಿನಿಕೇತನವು ಆಧುನಿಕತೆಯ ಕಡೆಗೆ ವಿಧಾನಗಳನ್ನು ಪ್ರತಿನಿಧಿಸುತ್ತದೆ. ಇದು ಪ್ರದೇಶದಾದ್ಯಂತ ಪ್ರಾಚೀನ, ಮಧ್ಯಕಾಲೀನ ಮತ್ತು ಜಾನಪದ ಸಂಪ್ರದಾಯಗಳನ್ನು ಚಿತ್ರಿಸುತ್ತದೆ ಎಂದು ತಿಳಿಸಲಾಗಿದೆ.

ಶಾಂತಿನಿಕೇತನವನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆ ಮಾಡುವುದು ಭಾರತದ ಬಹುದಿನದ ಬೇಡಿಕೆಯಾಗಿತ್ತು. ಅದೀಗ ಈಡೇರಿದೆ. ಕೆಲವು ತಿಂಗಳ ಹಿಂದೆ, ಅಂತಾರಾಷ್ಟ್ರೀಯ ಸಲಹಾ ಸಂಸ್ಥೆ ICOMOS ಈ ಶಾಂತಿನಿಕೇತನ ಪಟ್ಟಣವನ್ನು ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಶಿಫಾರಸು ಮಾಡಿತ್ತು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಕಲೆ/ಸಾಹಿತ್ಯ

Sunday Read: ಹೊಸ ಪುಸ್ತಕ: ಪುನರ್ನವ: ಅಳಿದುಳಿದ ಕುರುಕ್ಷೇತ್ರದಲ್ಲಿ

ಸಚಿನ್‌ ನಾಯಕ್‌ ಅವರ ನೂತನ ಕೃತಿ ʼಪುನರ್ನವʼ ಮಹಾಭಾರತವನ್ನು, ಭೀಮನ ಬದುಕನ್ನುಆಧರಿಸಿದ ಕಾದಂಬರಿ. ಇದರಿಂದ ಆಯ್ದ ಭಾಗ (new kannada book extract) ಇಲ್ಲಿದೆ.

VISTARANEWS.COM


on

Edited by

punarnava book
Koo

:: ಸಚಿನ್‌ ನಾಯಕ್‌

“ದುರ್ಯೋಧನ ಹತನಾದ, ಭೀಮ ಕೊಂದು ಮುಗಿಸಿದ. ದುರ್ಯೋಧನನ ತೊಡೆ ಮುರಿದು, ಅವನನ್ನು, ತೊಟ್ಟ ಪ್ರತಿಜ್ಞೆಯಂತೆಯೇ ದ್ವಂದ್ವ ಯುದ್ಧದಲ್ಲಿ ಮಣ್ಣು ಮುಕ್ಕಿಸಿ, ದೌಪದಿಯ ಅವಮಾನದ ಸೇಡು ತೀರಿಸಿಕೊಂಡ… ಯುದ್ಧ ಮುಗಿಯಿತು….ಪಾಂಡವರಿಗೇ ಜಯ…!!”

ಹದಿನೆಂಟನೇ ದಿನ ಎರಡೂ ಕಡೆಯ ಕೆಲವು ಅಳಿದುಳಿದ ಸೈನಿಕರು ಅಕ್ಷರಶಃ ಅರೆಜೀವವಾಗಿದ್ದರೂ ಉತ್ಸಾಹದಿಂದ ಕುಣಿಯುತ್ತಾ ಕೇಕೆ ಹಾಕುತ್ತಿದ್ದರು!! ಎರಡೂ ಕಡೆಯ ಸೈನ್ಯಗಳೂ ಸಂಪೂರ್ಣವಾಗಿ ನಾಶವಾಗಿದ್ದವು. ಉಳಿದುಕೊಂಡವರಲ್ಲಿ ಇನ್ನೆಲ್ಲಿಯ ಶತ್ರುತ್ವ? ಪರಸ್ಪರ ಗುರುತು ಪರಿಚಯ ಕೂಡ ಇಲ್ಲದ ಈ ಸೈನಿಕರಿಗೆ ತಾವು ಯಾರ ಕೈ ಕೆಳಗೆ ಹೋರಾಡಿದ್ದರೋ ಇಲ್ಲವಾದ ಮೇಲೆ ತಮ್ಮತಮ್ಮಲ್ಲಿ ಇನ್ನೆಲ್ಲಿಯ ದ್ವೇಷ?? ಅವರೂ
ಒಟ್ಟಾಗಿಯೇ ಇದ್ದ ಬದ್ದ ಶಕ್ತಿಯನ್ನೆಲ್ಲಾ ಒಗ್ಗೂಡಿಸಿಕೊಂಡು ಕೇಕೆ ಹಾಕುತ್ತಿದ್ದರು.

ಅಲ್ಲಲ್ಲಿ ಬಿದ್ದಿದ್ದ ಸೇನಾನಿಗಳ, ರಥಿಕರ ಶವಗಳಿಂದ ಆಭರಣ, ಶಸ್ತ್ರಾಸ್ತ್ರ ಅಥವಾ ಬೆಲೆಬಾಳುವ ವಸ್ತುವೇನಾದರೂ ಸಿಕ್ಕರೆ ಕಿತ್ತು ಇಟ್ಟುಕೊಳ್ಳುತ್ತಿದ್ದರು. ಹದಿನೆಂಟು ದಿನಗಳ ಈ ಮಹಾಮಾರಿಯ ನರ್ತನದಲ್ಲಿ ಬದುಕುಳಿದಿದ್ದೇ ಹೆಚ್ಚು ಎಂದು ಸುಮ್ಮನೆ ಕೈ ಬೀಸಿಕೊಂಡು ಮನೆಗೆ ಹೋಗಲಾದೀತೇ? ತಮ್ಮ ಪರಾಕ್ರಮವನ್ನು ಹೇಳಿಕೊಳ್ಳಲು, ತೋರಿಸಿಕೊಳ್ಳಲು ಏನಾದರೂ ಬೇಕಲ್ಲವೇ?? ಹಾಗಾಗಿ ಕಿರೀಟ, ಕತ್ತಿ, ಕುದುರೆಯ ವಾಫೆಯ ತಾಮ್ರದಪಟ್ಟಿ, ಹೀಗೆ ಕೈಗೆ ಸಿಕ್ಕಿದ್ದನ್ನೆಲ್ಲ ಕಿತ್ತುಕೊಳ್ಳುತ್ತಿದ್ದರು ಈ ಅರೆಸತ್ತ ಮನುಷ್ಯರು. ಸತ್ತವನಾದರೂ ಸರಿ, ಕೊಳೆತು ನಾರುತ್ತಿರುವ ಹೆಣವಾದರೂ ಸರಿ, ಲೋಹ ಕೊಳೆಯುವುದೇ??

ಇವರ ನಡುವೆಯೇ ಕೊಳೆತ ಹೆಣಗಳನ್ನು ಕುಕ್ಕಿ ಕುಕ್ಕಿ ತಿನ್ನುತ್ತಾ, ಹದಿನೆಂಟು ದಿನಗಳಿಂದ ಸತತವಾಗಿ ತಿಂದು ಹೊಟ್ಟೆಯೆಂಬುದು ಭೂಮಿಭಾರವಾಗಿದ್ದರೂ ತಮ್ಮತಮ್ಮಲ್ಲೇ ಒಂದೊಂದು ತುಣುಕು ಮಾಂಸಕ್ಕಾಗಿಯೂ
ಕಚ್ಚಾಡುತ್ತಿರುವ ರಣಹದ್ದುಗಳು. ತಿಳಿಗುಲಾಬಿ ಬಣ್ಣದ ಅವುಗಳ ಮುಖಗಳು ಮಾಂಸ ಮಜ್ಜೆ, ನೆತ್ತರಿನಿಂದ ಮೆತ್ತಲ್ಪಟ್ಟು ಕಪ್ಪು ಮಿಶ್ರಿತ ಕೆಂಪುಬಣ್ಣಕ್ಕೆ ತಿರುಗಿದ್ದವು. ದಿನಗಟ್ಟಲೆ ಸ್ನಾನ, ನೀರನ್ನೇ ಕಾಣದ ಬೆವರು ರಕ್ತದಿಂದ ದುರ್ನಾತ ಬೀರುತ್ತಿದ್ದ ಆ ಸೈನಿಕರಿಗೂ, ಆ ರಣಹದ್ದುಗಳಿಗೂ ಯಾವ ವ್ಯತ್ಯಾಸವೂ ಕಾಣುತ್ತಿರಲಿಲ್ಲ.

ಯುದ್ಧವೇನೋ ಮುಗಿಯಿತು, ಗೆದ್ದವರು ಯಾರು? ಅದಕ್ಕಿಂತ ಮುಖ್ಯವಾಗಿ, ಗೆದ್ದಿದ್ದೇನನ್ನು? ಕೊಳೆತ ಹೆಣಗಳ ದುರ್ನಾತ ಬೀರುತ್ತಿರುವ ಈ ನೆಲವೇ? ವಿಧವೆ, ಅನಾಥರಿಂದ ತುಂಬಿ ಗೊಳೋ ಎನ್ನುತ್ತಿರುವ ಹಸ್ತಿನಾವತಿಯೇ? ಮೂಳೆ, ಬುರುಡೆಗಳ ಭವ ಸಿಂಹಾಸನವನ್ನೇರುವನೇ ಸಾಮ್ರಾಟ ಯುಧಿಷ್ಠಿರ, ಪಕ್ಕದಲ್ಲಿ ರಾರಾಜಿಸುವಳೇ ಸಾಮ್ರಾಜ್ಞಿ ದೌಪದಿ?

ಶೀಘ್ರವೇ ಇಲ್ಲಿಂದ ತೆರಳಬೇಕು, ಭೀಮನನ್ನೂ ಕರೆದುಕೊಂಡು. ಸಾಕು ಈ ಪರಾಕ್ರಮ, ಪೌರುಷ, ಸಾಹಸ ಎಲ್ಲವೂ, ಇನ್ನು ಬಾಹುಬಲದ ಅಗತ್ಯವಿಲ್ಲ. ಅರಮನೆ, ಬೆಡಗು, ಬಿನ್ನಾಣ ಇವ್ಯಾವುದರ ಅಗತ್ಯವೂ ಇಲ್ಲ. ನನ್ನಣ್ಣ ಮಹಾರಾಜ ಸೇನೇಶನನ್ನು ಕೋರಿ ಗಂಗೆಯ ತಟದಲ್ಲಿ ಭೂಮಿಯ ತುಣುಕೊಂದನ್ನು ಪಡೆದುಕೊಂಡು, ಅಲ್ಲೊಂದು ಚಿಕ್ಕ ಸೌಧವನ್ನು ಕಟ್ಟಿಕೊಂಡು ನಾನು, ಭೀಮ ಇಬ್ಬರೇ… ಅಕ್ಕಪಕ್ಕದಲ್ಲಿ ವಿಶೋಕ ಚಿತ್ರೆಯರ
ಸಂಸಾರವೂ, ಗೌರಾಂಗಿಯೂ, ನೆಮ್ಮದಿಯಿಂದ ಬದುಕಿನ ಉಳಿದ ದಿನಗಳನ್ನು ಸರಳ ರೀತಿಯಲ್ಲಿ ಎಲ್ಲರೂ ಒಟ್ಟಾಗಿ ಶಾಂತಿ ಕಳೆಯಬೇಕು. ಸಾಂಗತ್ಯ ಒಂದಿದ್ದರೆ ಸಾಕಲ್ಲವೇ, ಒಬ್ಬರಿಗೊಬ್ಬರು. ಅದೇ ಅಲ್ಲವೇ ನಿಜವಾದ ಸಂಪತ್ತು !

ಬಲಂಧರೆಯ ಸಾಮ್ರಾಜ್ಯ ಅದೇ.

ಯುವರಾಜನಾಗಿ ಸರ್ವಗನಿಗೆ ಕರ್ತವ್ಯಗಳಿರುತ್ತವೆ. ಈ ಯುದ್ಧ ಅನುಭವ ಹಾಗೂ ಪಾಠ. ಇನ್ನೆಂದೂ ಆತ ಬಯಸಲಾರ, ಜನಪರ ಕಾರ್ಯಗಳನ್ನು ಕೈಗೊಳ್ಳುತ್ತಾ ಉತ್ತಮ ಆಡಳಿತಗಾರ ಎನಿಸಿಕೊಂಡರೆ ಸಾಕಲ್ಲವೇ! ಹೌದು! ಇವನಲ್ಲಿ ನನ್ನ ಮಗ ಸರ್ವಗ, ಇನ್ನೂ ಬಂದಿಲ್ಲವಲ್ಲ ಭೇಟಿಯಾಗಲು?? ವಿಜಯೋತ್ಸವ ಆಚರಿಸುತ್ತಿರುವರೇ ಪಾಂಡವರು, ಏನಿದೆ ಆಚರಿಸಲು?? ಬರುತ್ತಾನೆ, ಪಾಪ ಆಯಾಸದಿಂದ ಮಲಗಿ ವಿಶ್ರಾಂತಿ ಪಡೆಯುತ್ತಿರಬೇಕು. ನಾಳೆ ಬೆಳಿಗ್ಗೆ ಎದ್ದು ಬರಲಿ, ವಯಸ್ಸಿಗೆ ಮೀರಿದ ಅನುಭವ, ಆಪ್ತರಾದ ಅಭಿಮನ್ಯು ಹಾಗು ಘಟೋತ್ಕಚರ ಸಾವನ್ನು ಕಣ್ಣೆದುರೇ ನೋಡಿದ ಆ ಎಳೆಯ ಹರೆಯದ ಹುಡುಗನ ಮನಃಸ್ಥಿತಿ ಹೇಗಿರಬಹುದು? ಅಲ್ಲಿ ಕಾಶಿಯಲ್ಲಿ
ಅವನ ಪತ್ನಿಗೆ ಬಹುಶಃ ಪ್ರಸವವಾಗಿರಲೂಬಹುದೇ? ಕೆಲ ದಿನಗಳಲ್ಲಿಯೇ ಇವೆಲ್ಲಾ ದುಃಸ್ವಪ್ನಗಳನ್ನೂ ಬದಿಗೊತ್ತಿ ಹೊಸ ಜೀವನಕ್ಕೆ ತನ್ನನ್ನು ತಾನು ತೆರೆದುಕೊಳ್ಳಬೇಕು ಆತ. ಅವನಿಗೆ ನನ್ನ ಭೀಮನ ಮಾರ್ಗದರ್ಶನದ ಅಗತ್ಯ ತುಂಬಾ ಇದೆಯಲ್ಲವೇ? ನಿರ್ವಹಿಸಬಲ್ಲ ನಮ್ಮ ಮಗ, ಅವನಲ್ಲಿ ಆ ಯೋಗ್ಯತೆ ಇದೆ. ವಿಶ್ರಾಂತಿ ತೆಗೆದುಕೋ ಕಂದ, ನಾಳೆಯಿಂದ ಹೊಸ ಜೀವನಕ್ಕೆ ಪಯಣಿಸುವ.


” ಅ….ಯ್ಯೋ…..!”

ಮುಗಿಲನ್ನೇ ಭೇದಿಸುವಂತಹ ಆರ್ತನಾದ!! ಹೆಣ್ಣಿನದೋ? ಗಂಡಿನದೋ? ಗುರುತಿಸಲಾಗದಷ್ಟು ಕರ್ಕಶವಾಗಿತ್ತು ಆ ಚೀತ್ಕಾರ! ಆ ಕಡೆಯ ಶಿಬಿರದತ್ತಣಿಂದ ಬಂತಲ್ಲವೇ ಕೂಗು? ಇನ್ನೊಮ್ಮೆ ಮತ್ತೊಮ್ಮೆ…. ಇತ್ತಲಿಂದ ಯಾರೋ ಆ ಕಡೆ ಓಡಿದರು. ಅವರ ಧ್ವನಿಯೂ ಆ ಚೀತ್ಕಾರದೊಂದಿಗೇ ಸೇರಿ…!!!! ತಟ್ಟನೆ ನನ್ನ ಶಿಬಿರದ ಪರದೆಯನ್ನು ಸರಿಸಿ ಒಳಗೆ ಬಂದ ಹೆಣ್ಣು ನನ್ನನ್ನು ಎಬ್ಬಿಸಿ ಕರೆದುಕೊಂಡು ಹೋಯಿತು. ‌

ಕೃತಿ: ಪುನರ್ನವ (ಕಾದಂಬರಿ)
ಲೇಖಕ: ಸಚಿನ್‌ ನಾಯಕ್‌
ಪ್ರಕಾಶನ: ಬಿಎಫ್‌ಸಿ ಪಬ್ಲಿಕೇಶನ್ಸ್‌
ಬೆಲೆ: 280 ರೂ.

ಇದನ್ನೂ ಓದಿ: Sunday Read: ಹೊಸ ಪುಸ್ತಕ: ನಾ.ಮೊಗಸಾಲೆ ಕಾದಂಬರಿ: ನೀರು

Continue Reading
Advertisement
Mohammed Shami finished with 5 for 51
ಕ್ರಿಕೆಟ್21 seconds ago

Mohammed Shami: 16 ವರ್ಷಗಳ ಬಳಿಕ ವಿಶೇಷ ದಾಖಲೆ ಬರೆದ ಮೊಹಮ್ಮದ್​ ಶಮಿ

MK Stalin
ದೇಶ4 mins ago

Organ Donation : ಅಂಗಾಂಗ ದಾನ ಮಾಡಿದವರ ಅಂತ್ಯ ಸಂಸ್ಕಾರಕ್ಕೆ ಸಕಲ ಸರ್ಕಾರಿ ಗೌರವ

Chaitra Kundapura
ಉಡುಪಿ25 mins ago

Chaitra Kundapura : ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ತಾತ್ಕಾಲಿಕ ನಿರ್ಬಂಧ ವಿಧಿಸಿದ ಕೋರ್ಟ್‌

women arrested
ದೇಶ57 mins ago

Illicit Affair : ಅಕ್ರಮ ಸಂಬಂಧ ನೋಡಿದ ಮಗನನ್ನೇ ಕೊಂದ ಹೆತ್ತಮ್ಮ; 2 ವರ್ಷದ ಬಳಿಕ ಪ್ರಿಯಕರನ ಜತೆ ಅರೆಸ್ಟ್​​

Kumaraswamys three suggestions to Government
ಕರ್ನಾಟಕ1 hour ago

HD Kumaraswamy : ನಾನು ಹೇಳಿದ ಹಾಗೆ ಮಾಡ್ತೀರಾ?; ಕಾವೇರಿ ಬಿಕ್ಕಟ್ಟು ಪರಿಹಾರಕ್ಕೆ ಕುಮಾರಸ್ವಾಮಿ ನೀಡಿದ 3 ಸಲಹೆಗಳು

CM Siddaramaiah
ಕರ್ನಾಟಕ1 hour ago

Women’s Reservation Bill: ಮೋದಿಯವರ ಮಹಿಳಾ ಮೀಸಲಾತಿ 2024, 2029, 2034ರಲ್ಲೂ ಜಾರಿಯಾಗಲ್ಲ: ಸಿದ್ದರಾಮಯ್ಯ

naveen ul haq and gautam gambhir
ಕ್ರಿಕೆಟ್1 hour ago

‘ಎಂದಿಗೂ ಬದಲಾಗಬೇಡ’ ನವೀನ್ ಉಲ್ ಹಕ್​ಗೆ ಜನ್ಮದಿನದ ಶುಭಾಶಯ ಕೋರಿದ ಗಂಭೀರ್; ಹಾರೈಕೆ ಹಿಂದಿದೆ ನರಿ ಬುದ್ಧಿ

Gautam Adani
ದೇಶ2 hours ago

Gautam Adani : ಅದಾನಿ ಭೇಟಿ ಮಾಡಿದ ಶರದ್​ ಪವಾರ್​; ರಾಹುಲ್​ ಮಾತಿಗೆ ಕಿಮ್ಮತ್ತಿಲ್ಲ ಎಂದ ಬಿಜೆಪಿ!

Cauvry protest in Bangalore
ಕರ್ನಾಟಕ2 hours ago

Cauvery Protest: ಬೆಂಗಳೂರು ಬಂದ್‌ ಮಾಡುವುದು ಬೇಡ ಎಂದ ಡಿಕೆಶಿ, ಪ್ರತಿಭಟನೆ ಹಕ್ಕಿಗೆ ವಿರೋಧವಿಲ್ಲ ಎಂದ ಸಿದ್ದರಾಮಯ್ಯ

karnataka film chamber
ಪ್ರಮುಖ ಸುದ್ದಿ2 hours ago

Sandalwood : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರ ಆಯ್ಕೆ; ಗೆದ್ದವರ ವಿವರ ಇಲ್ಲಿದೆ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ18 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ6 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ7 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ1 week ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ1 week ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌