Site icon Vistara News

Republic Day: ಸಚಿವ ದಿನೇಶ್ ಗುಂಡೂರಾವ್ ಕಚೇರಿಯಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

Republic day in bng 2

ಬೆಂಗಳೂರು: 75ನೇ ಗಣರಾಜ್ಯೋತ್ಸವ (Republic Day) ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಗೆ ಧ್ವಜಾರೋಹಣ ಮಾಡಲು ಅವಕಾಶ ಕಲ್ಪಿಸಿಕೊಡುವ ಮೂಲಕ ಪೌರ ಕಾರ್ಮಿಕರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.

ಪೌರ ಕಾರ್ಮಿಕರು ನಗರದ ಸ್ವಚ್ಛತೆಗಾಗಿ ಸದಾ ಶ್ರಮಿಸುವ ಶ್ರಮಿಕ ವರ್ಗದವರು. ಅಂಥವರನ್ನು ಗುರುತಿಸಿ, ಕಚೇರಿಯಲ್ಲಿ‌ ಗಣರಾಜ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಲು ಸಚಿವರು ಸೂಚನೆ ನೀಡಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದ ಸಚಿವರು, ತಮ್ಮ ಸ್ವ ಕ್ಷೇತ್ರದಲ್ಲಿ ತಮ್ಮ ಅನುಪಸ್ಥಿತಿಯಲ್ಲಿ ಪೌರ ಕಾರ್ಮಿಕರಿಂದ ಧ್ವಜರೋಹಣ ಕಾರ್ಯ ನೆರವೇರಿಸಲು ಅವಕಾಶ ಮಾಡಿಕೊಟ್ಟಿದ್ದರು.

ಇದನ್ನೂ ಓದಿ | Republic Day: ಸಂವಿಧಾನ ಬದಲಾವಣೆ ಕೂಗನ್ನು ಖಂಡಿಸಿ, ನಾನೂ ಧ್ವನಿಗೂಡಿಸುವೆ: ಸಿದ್ದರಾಮಯ್ಯ ಕರೆ

ಸಮಾರಂಭದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರ ಪುತ್ರಿ ಅನನ್ಯ ರಾವ್ ಅವರು ಪಾಲ್ಗೊಂಡು ಧ್ವಜವಂದನೆ ಸಲ್ಲಿಸಿದರು. ಧ್ವಜಾರೋಹಣದ ಬಳಿಕ ಪೌರ ಕಾರ್ಮಿಕರನ್ನ ಸನ್ಮಾನಿಸಿ, ಗೌರವಿಸಲಾಯಿತು.

Exit mobile version