ಮಲ್ಲೇಶ್ವರ ಮಾವು ಮೇಳಕ್ಕೆ ಚಾಲನೆ, ಹಣ್ಣು ಖರೀದಿಸಿ ಶಾಲೆ ಮಕ್ಕಳಿಗೆ ಕೊಟ್ಟ ಯದುಗಿರಿ ಶ್ರೀಗಳು - Vistara News

ಕೃಷಿ

ಮಲ್ಲೇಶ್ವರ ಮಾವು ಮೇಳಕ್ಕೆ ಚಾಲನೆ, ಹಣ್ಣು ಖರೀದಿಸಿ ಶಾಲೆ ಮಕ್ಕಳಿಗೆ ಕೊಟ್ಟ ಯದುಗಿರಿ ಶ್ರೀಗಳು

ಮಲ್ಲೇಶ್ವರದಲ್ಲಿ ಆಯೋಜಿಸಲಾಗಿರುವ ನೈಸರ್ಗಿಕ ಮಾವು ಮೇಳ ಜೂನ್‌ ಆರರವರೆಗೆ ನಡೆಯಲಿದೆ. ನೈಸರ್ಗಿಕವಾಗಿ ಬೆಳೆಸಿ ನೈಸರ್ಗಿಕವಾಗಿಯೇ ಹಣ್ಣು ಮಾಡಿದ ಮಾವಿನ ಮಾರಾಟ ಈ ಮೇಳದ ವಿಶೇಷ.

VISTARANEWS.COM


on

mango festival malleshwara
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರತಿಷ್ಠಾನವು ಮಲ್ಲೇಶ್ವರ ಸಮೀಪದ ಸರಕಾರಿ ಶಾಲಾ ಆವರಣದಲ್ಲಿ ಏರ್ಪಡಿಸಿರುವ ಮೂರು ದಿನಗಳ (ಜೂ 4ರಿಂದ 6) ನೈಸರ್ಗಿಕ ಮಾವು ಮೇಳಕ್ಕೆ ಯದುಗಿರಿ ಮಠದ ಶ್ರೀ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಅವರು ಶುಕ್ರವಾರ ಚಾಲನೆ ನೀಡಿದರು.

ಶ್ರೀಗಳು ಮೇಳದಲ್ಲಿ ಸ್ಥಾಪಿಸಲಾಗಿರುವ ಪ್ರತಿಯೊಂದು ಮಳಿಗೆಗೂ ತೆರಳಿ ತಲಾ 5 ಕೆ.ಜಿ. ಮಾವಿನ ಹಣ್ಣು ಖರೀದಿಸುವ ಮೂಲಕ ವಿನೂತನ ಉತ್ತೇಜನಾ ಮಾದರಿಯಲ್ಲಿ ಮೇಳವನ್ನು ಉದ್ಘಾಟಿಸಿದರು. ಬಳಿಕ ಪಕ್ಕದ ಸರಕಾರಿ ಶಾಲೆಯ ಮಕ್ಕಳಿಗೆ ತಲಾ ಒಂದು ಮಾವಿನ ಹಣ್ಣನ್ನು ವಿತರಿಸಿ, ಖುಷಿ ಪಟ್ಟರು. ಜೊತೆಗೆ, ಮಳಿಗೆ ಹಾಕಿರುವ ಹಲವು ಪದವೀಧರ ರೈತರೊಂದಿಗೆ ಮಾತನಾಡಿ, ಅವರೆಲ್ಲರ ಕುಶಲೋಪರಿಯನ್ನು ವಿಚಾರಿಸಿದರು.

ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರೈತರು ಬೆಳೆದು, ನೈಸರ್ಗಿಕವಾಗಿ ಹಣ್ಣು ಮಾಡಿರುವ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಇಲ್ಲಿ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ| ಬಿಸಿಯೂಟ ಯೋಜನೆಗೆ ಡಾ. ಶಿವಕುಮಾರ ಶ್ರೀಗಳ ಹೆಸರು: ಸಿಎಂ ಬೊಮ್ಮಾಯಿ ಘೋಷಣೆ

ಬಳಿಕ ಮಾತನಾಡಿದ ಶ್ರೀಗಳು, ‘ನಿಸರ್ಗಸಹಜ ಹಣ್ಣುಗಳನ್ನು ಹಾಗೆಯೇ ಆಸ್ವಾದಿಸುವ ಪದ್ಧತಿ ಹಿಂದೆಲ್ಲ ಇತ್ತು. ಕ್ರಿಮಿನಾಶಕ ಮತ್ತು ಕೀಟನಾಶಕಗಳ ಅಡ್ಡ ಪರಿಣಾಮಗಳನ್ನು ಈಗ ಅರಿಯಲಾಗುತ್ತಿದ್ದು, ಪುನಃ ಸಾವಯವ ಕೃಷಿ ಮತ್ತು ಆಹಾರ ಸೇವನೆಗೆ ಮರುಜೀವ ಬರುತ್ತಿದೆ,ʼ ಎಂದರು. ಮೇಳದ ಹಿನ್ನೆಲೆಯಲ್ಲಿ ಸರಕಾರಿ ಶಾಲಾ ಮೈದಾನದಲ್ಲಿ ಹಬ್ಬದ ಸಡಗರ ಮನೆಮಾಡಿತ್ತು.

ಕಾರ್ಯಕ್ರಮದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ತಂದೆ ಟಿ.ಕೆ. ನಾರಾಯಣಪ್ಪ, ಬಿಬಿಎಂಪಿ ಪಶ್ಚಿಮ ವಲಯದ ಆಯುಕ್ತ ದೀಪಕ್, ನಿವೃತ್ತ ಶಿಕ್ಷಕ ನಾರಾಯಣಪ್ಪ ಸಚಿವರ ಆಪ್ತ ಕಾರ್ಯದರ್ಶಿ ಮಾರುತಿ ಪ್ರಸನ್ನ, ಬಿಜೆಪಿ ಮಲ್ಲೇಶ್ವರಂ ಮಂಡಲದ ಅಧ್ಯಕ್ಷೆ ಕಾವೇರಿ ಕೇದಾರನಾಥ್, ಪಾಲಿಕೆ ಮಾಜಿ ಸದಸ್ಯ ಮಂಜುನಾಥ ರಾಜು, ಜಯಪ್ರಕಾಶ್, ರಾಮನಗರ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮುನೇಗೌಡ ಉಪಸ್ಥಿತರಿದ್ದರು.

ಇದನ್ನೂ ಓದಿ| ಭಾನುವಾರ ಶಿರಾಳಕೊಪ್ಪಕ್ಕೆ ಮಂತ್ರಾಲಯದ ಶ್ರೀಗಳು


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

ಧಾರವಾಡ ಮಾವಿನ ಮೇಳದಲ್ಲಿ 2.7 ಲಕ್ಷ ರೂ. ಮೌಲ್ಯದ ಮಾವು ಎಲ್ಲರ ಗಮನ ಸೆಳೆಯಿತು. ವಿಶ್ವದ ಮಾವಿನ ತಳಿಗಳಲ್ಲಿಯೇ ಅತೀ ದುಬಾರಿಯಾದ ಮೀಯಾಝಾಕಿ ತಳಿಯ ಮಾವು (Miyazaki Mango) ಅನ್ನು ಇಲ್ಲಿ ಪ್ರದರ್ಶನಕ್ಕಿಡಲಾಗಿದೆ. ಧಾರವಾಡದ ಪ್ರಮೋದ ಗಾಂವ್ಕರ್ ಎಂಬವರು ತಮ್ಮ ತೋಟದಲ್ಲಿ ಈ ಮಾವನ್ನು ಬೆಳೆದಿದ್ದಾರೆ.

VISTARANEWS.COM


on

Miyazaki Mango
Koo

ಧಾರವಾಡ: ಮಾವಿಗೆ ʼಹಣ್ಣುಗಳ ರಾಜʼ ಎನ್ನುವುದು ಸುಮ್ಮನೇ ಅಲ್ಲ. ಇದು ಯಾವತ್ತೂ ದುಬಾರಿಯೇ. ಆದರೆ ಧಾರವಾಡದಲ್ಲಿ (Dharwad news) ನಡೆಯುತ್ತಿರುವ ಮಾವು ಮೇಳದಲ್ಲಿ, ವಿಶ್ವದಲ್ಲಿಯೇ ಅತಿ ದುಬಾರಿಯಾದ ಮಾವಿನ ಹಣ್ಣು ಕಂಡುಬಂತು. ಜನ ಇದನ್ನು ನೋಡಿ (Miyazaki Mango) ನಿಬ್ಬೆರಗಾದರು.

ಧಾರವಾಡ ಮಾವಿನ ಮೇಳದಲ್ಲಿ 2.7 ಲಕ್ಷ ರೂ. ಮೌಲ್ಯದ ಮಾವು ಎಲ್ಲರ ಗಮನ ಸೆಳೆಯಿತು. ವಿಶ್ವದ ಮಾವಿನ ತಳಿಗಳಲ್ಲಿಯೇ ಅತೀ ದುಬಾರಿಯಾದ ಮೀಯಾಝಾಕಿ ತಳಿಯ ಮಾವು (Miyazaki Mango) ಅನ್ನು ಇಲ್ಲಿ ಪ್ರದರ್ಶನಕ್ಕಿಡಲಾಗಿದೆ. ಧಾರವಾಡದ ಪ್ರಮೋದ ಗಾಂವ್ಕರ್ ಎಂಬವರು ತಮ್ಮ ತೋಟದಲ್ಲಿ ಈ ಮಾವನ್ನು ಬೆಳೆದಿದ್ದಾರೆ.

ಧಾರವಾಡದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಾವಿನ ಮೇಳದಲ್ಲಿ ಜಪಾನ್ ಮೂಲದ ಈ ವಿಶೇಷ ಮಾವಿನ ತಳಿ ನೋಡಿ ಜನ ಚಕಿತರಾದರು. ಮೀಯಾಝಾಕಿ ಹಣ್ಣಿನ ಪ್ರತಿ ಕೆಜಿಗೆ ಸುಮಾರು 2.7 ಲಕ್ಷ ರೂಪಾಯಿ ಬೆಲೆ ಇದೆ. ಕೇವಲ ಒಂದೇ ಒಂದು ಹಣ್ಣಿಗೆ ಸುಮಾರು 10 ಸಾವಿರ ರೂಪಾಯಿ ಬೆಲೆಬಾಳುತ್ತದೆ. ಈ ಮಾವನ್ನು ನೋಡಲೆಂದೇ ಮೇಳಕ್ಕೆ ವಿದ್ಯಾರ್ಥಿಗಳು, ಸಾರ್ವಜನಿಕರು ಆಗಮಿಸುತ್ತಿದ್ದಾರೆ.

Miyazaki Mango

ಮೀಯಾಝಾಕಿ ಪ್ರಭೇದವು ಮೂಲತಃ ಜಪಾನಿನ ತಳಿಯಾಗಿದೆ. ಅದರ ವಿಶಿಷ್ಟ ಸುವಾಸನೆ ಮತ್ತು ಔಷಧೀಯ ಮೌಲ್ಯಕ್ಕಾಗಿ ಇದು ವಿದೇಶಗಳಲ್ಲಿ ಭಾರಿ ಬೇಡಿಕೆಯನ್ನು ಹೊಂದಿದೆ. ಇವು ಚೆನ್ನಾಗಿ ಹಣ್ಣಾದಾಗ ಗಾಢ ಕೆಂಪು ಬಣ್ಣಕ್ಕೆ ತಿರುಗುತ್ತವೆ. ಜಪಾನಿಯರ ಪ್ರಕಾರ, ವಿಶ್ವದ ಅತ್ಯಂತ ದುಬಾರಿ ಮಾವಿನ ಮೂಲ ಹೆಸರು “ತೈಯೊ ನೋ ತಮಾಗೊ” (Taiyo no Tamago) ಅಥವಾ ಸೂರ್ಯನ ಮೊಟ್ಟೆ (Egg of the Sun).

ಇದಕ್ಕೆ ಹೆಸರಾಂತ ಜಪಾನಿನ ವಿಜ್ಞಾನಿ ಯಮಶಿತಾ ಮೀಯಾಝಾಕಿ ಅವರ ಹೆಸರನ್ನು ಇಡಲಾಗಿದೆ. ಇದರ ಅಭಿವೃದ್ಧಿ ಮತ್ತು ಕೃಷಿಗೆ ಅವರು ಗಮನಾರ್ಹವಾಗಿ ಕೊಡುಗೆ ನೀಡಿದ್ದರು. ಮೀಯಾಝಾಕಿ ಪ್ರಿಫೆಕ್ಚರ್‌ನಲ್ಲಿ ಇದರ ಕೃಷಿ ಮಾಡಲಾಗುತ್ತಿದೆ. ಹೀಗಾಗಿ ಜಗತ್ತು ಈ ರುಚಿಕರವಾದ ಮಾವಿನಹಣ್ಣುಗಳನ್ನು “ಮೀಯಾಝಾಕಿ” ಎಂದು ಕರೆಯಲು ಪ್ರಾರಂಭಿಸಿತು.

70 ರ ದಶಕದ ಕೊನೆಯಲ್ಲಿ ಮತ್ತು 80 ರ ದಶಕದ ಆರಂಭದಲ್ಲಿ ಈ ಮಿಯಾಜಾಕಿ ಮಾವಿನ ಉತ್ಪಾದನೆಯು ಮಿಯಾಜಾಕಿಯಲ್ಲಿ ಆರಂಭಿಸಲಾಯಿತು. ಈ ನಗರದ ಬೆಚ್ಚನೆಯ ವಾತಾವರಣ, ಅದರ ದೀರ್ಘಾವಧಿಯ ಸೂರ್ಯನ ಬೆಳಕು ಮತ್ತು ಹೇರಳವಾದ ಮಳೆಯಿಂದಾಗಿ ರೈತರು ಮಾವು ಕೃಷಿಗೆ ಆಕರ್ಷಣೆಗೊಳ್ಳಲು ಕಾರಣವಾಯಿತು. ಏಪ್ರಿಲ್ ಮತ್ತು ಆಗಸ್ಟ್ ನಡುವೆ ಈ ಮಾವಿನ ಸುಗ್ಗಿ ನಡೆಯುತ್ತದೆ.

ಇತ್ತೀಚೆಗೆ ಭಾರತದಲ್ಲೂ ಕೆಲವರು ಕೃಷಿಕರು ಇದನ್ನು ಬೆಳೆಯಲು ಯತ್ನಿಸುತ್ತಿದ್ದಾರೆ. ಆದರೆ ಇದು ಅತ್ಯಂತ ದುಬಾರಿಯಾದ ಆರೈಕೆ, ಒಳಸುರಿಗಳ ಪೂರೈಕೆಯನ್ನು ಬೇಡುತ್ತದೆ. ಈ ಮಾವಿನಹಣ್ಣುಗಳು ವ್ಯಾಪಕ ರೋಗ ನಿರೋಧಕ ಶಕ್ತಿಯನ್ನು ಹೊಂದಿವೆ. ಬೀಟಾ-ಕ್ಯಾರೋಟಿನ್ ಮತ್ತು ಫೋಲಿಕ್ ಆಮ್ಲವನ್ನು ಒಳಗೊಂಡಿವೆ. ಇದು ಕಣ್ಣಿನ ಆರೋಗ್ಯಕ್ಕೆ ಹೆಚ್ಚು ಉಪಯೋಗಕಾರಿಯಾಗಿದೆ. ದೃಷ್ಟಿ ಹೀನತೆಯನ್ನು ತಪ್ಪಿಸುವಲ್ಲಿ ಈ ಮಾವು ಪರಿಣಾಮಕಾರಿಯಾಗಿದೆ ಎಂದು ಹೇಳಲಾಗುತ್ತಿದೆ. ಮಿಯಾಜಾಕಿ ಮಾವನ್ನು ಭಾರತ, ಬಾಂಗ್ಲಾದೇಶ, ಥಾಯ್ಲೆಂಡ್ ಮತ್ತು ಫಿಲಿಪ್ಪಿನ್ಸ್‌ ರಾಷ್ಟ್ರಗಳಲ್ಲಿ ಕೆಲವೆಡೆ ಬೆಳೆಯಲಾಗುತ್ತದೆ. ಭಾರತದಲ್ಲಿ ಪಶ್ಚಿಮ ಬಂಗಾಳ ಮಾತ್ರವಲ್ಲದೇ, ಮಧ್ಯಪ್ರದೇಶದ ಜಬಲ್ಪುರ ನಗರದಲ್ಲಿ ಬೆಳೆಯಲಾಗಿದೆ ಎಂದು ಮಾಧ್ಯಮಗಳ ವರದಿಗಳು ಹೇಳುತ್ತವೆ.

ಇದನ್ನೂ ಓದಿ: Mango Season: ಮಾರುಕಟ್ಟೆಗೆ ಬಂತು ಉತ್ತರ ಕನ್ನಡದ ಪ್ರಸಿದ್ಧ ಕರಿಈಶಾಡು ಮಾವು; ಡಜನ್‌ಗೆ 700 ರೂ.!

Continue Reading

ಉತ್ತರ ಕನ್ನಡ

Uttara Kannada News: ಯಲ್ಲಾಪುರ ಕ್ಷೇತ್ರದ ರೈತರಿಗೆ 35 ಕೋಟಿ ರೂ. ಬೆಳೆ ಹಾನಿ ವಿಮೆ ಜಮಾ: ಶಿವರಾಮ ಹೆಬ್ಬಾರ್‌

Uttara Kannada News: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ಗೆ (ಕೆ.ಡಿ.ಸಿ.ಸಿ. ಬ್ಯಾಂಕ್‌) 2023-24 ನೇ ಸಾಲಿನ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ ಸುಮಾರು 41 ಕೋಟಿ ರೂಪಾಯಿ ಜಮಾವಾಗಿದೆ. ವಿಶೇಷವಾಗಿ ಈ ಸಾಲಿನಲ್ಲಿ ಬಿಡುಗಡೆಯಾದ ಬೆಳೆ ಹಾನಿ ವಿಮೆಯಲ್ಲಿ ನನ್ನ ಮತ ಕ್ಷೇತ್ರದ ಯಲ್ಲಾಪುರ ತಾಲೂಕಿಗೆ 84,85,610 ರೂಪಾಯಿ, ಮುಂಡಗೋಡ ತಾಲೂಕಿಗೆ 18,41,53,186 ರೂಪಾಯಿ ಹಾಗೂ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ 15,90,59,753 ರೂಪಾಯಿ ಒಟ್ಟು 35 ಕೋಟಿ ರೂಪಾಯಿ ರೈತರಿಗೆ ಲಭಿಸಿರುವುದು ಅತ್ಯಂತ ಸಂತಸ ತಂದಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

VISTARANEWS.COM


on

35 crore crop damage insurance deposit for farmers of Yallapur constituency says MLA Shivaram Hebbar
Koo

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ (Uttara Kannada News) ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ಗೆ (ಕೆ.ಡಿ.ಸಿ.ಸಿ. ಬ್ಯಾಂಕ್‌) 2023-24 ನೇ ಸಾಲಿನ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ ಸುಮಾರು 35 ಕೋಟಿ ರೂಪಾಯಿ ಜಮೆಯಾಗಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕಳೆದ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಭತ್ತ, ಗೋವಿನ ಜೋಳದ ಬೆಳೆಗೆ ಹಾನಿಯಾಗಿ ರೈತ ಸಮುದಾಯಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಈಗ ಬೆಳೆ ವಿಮೆಯ ಬಿಡುಗಡೆಯಿಂದಾಗಿ ಭತ್ತ, ಗೋವಿನ ಜೋಳ ಬೆಳೆದು ಜೀವನ ಜೀವನ ಸಾಗಿಸುತ್ತಿದ್ದ ಹಲವಾರು ರೈತರಿಗೆ ಆರ್ಥಿಕ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru News: ಮಹಿಳೆಯರು ಸೋಷಿಯಲ್‌ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ

ವಿಶೇಷವಾಗಿ ಈ ಸಾಲಿನಲ್ಲಿ ಬಿಡುಗಡೆಯಾದ ಬೆಳೆ ಹಾನಿ ವಿಮೆಯಲ್ಲಿ ನನ್ನ ಮತ ಕ್ಷೇತ್ರದ ಯಲ್ಲಾಪುರ ತಾಲೂಕಿಗೆ 84,85,610 ರೂಪಾಯಿ, ಮುಂಡಗೋಡ ತಾಲೂಕಿಗೆ 18,41,53,186 ರೂಪಾಯಿ ಹಾಗೂ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ 15,90,59,753 ರೂಪಾಯಿ. ಹೀಗೆ ಒಟ್ಟು 35 ಕೋಟಿ ರೂಪಾಯಿ ರೈತರಿಗೆ ಲಭಿಸಿರುವುದು ಅತ್ಯಂತ ಸಂತಸ ತಂದಿದೆ. ನನ್ನ ಕ್ಷೇತ್ರಕ್ಕೆ ಹೆಚ್ಚಿನ ವಿಮೆ ಪರಿಹಾರವನ್ನು ನೀಡಲು ಸಹಕರಿಸಿದ ಕೃಷಿ ಇಲಾಖೆಯ ಅಧಿಕಾರಿಗೆ, ವಿಮೆ ಕಂಪನಿಯ ಸಿಬ್ಬಂದಿಗಳಿಗೆ ಹಾಗೂ ಸರ್ಕಾರಕ್ಕೆ ಕ್ಷೇತ್ರದ ರೈತರ ಪರವಾಗಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ: Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

ಸರ್ಕಾರದ ಮಟ್ಟದಲ್ಲಿ ವಿಶೇಷ ಪ್ರಯತ್ನವನ್ನು ನಡೆಸಿ ಈ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚಿನ ಪರಿಹಾರವನ್ನು ಒದಗಿಲಾಗಿದೆ. ವಿಮೆ ಕಂಪನಿಯ ಮಾನದಂಡದ ಅನ್ವಯವಾಗಿ ಉತ್ತರ ಕನ್ನಡ ಜಿಲ್ಲೆಯ ಭತ್ತ ಹಾಗೂ ಗೋವಿನ ಜೋಳವನ್ನು ಬೆಳೆದ ರೈತರಿಗೆ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ (ಕೆ.ಡಿ.ಸಿ.ಸಿ ಬ್ಯಾಂಕ್‌) ನ ಮೂಲಕವಾಗಿ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿಗಳ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾಯಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

Yadgiri News: ಬರಡು ಭೂಮಿಯಲ್ಲಿ ಈ ರೈತ ಬಂಪರ್ ಮಾವು ಬೆಳೆದಿದ್ದು ಹೇಗೆ?

Yadgiri News: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಿಳ್ಹಾರ ಗ್ರಾಮದ ರೈತ ಮಲ್ಲಿಕಾರ್ಜುನರೆಡ್ಡಿಗೌಡ ತಮ್ಮ ಐದು ಎಕರೆ ಭೂಮಿಯಲ್ಲಿ ಯಾವುದೇ ಕ್ರಿಮಿನಾಶಕ ಬಳಸದೇ ಸಾವಯವ ಕೃಷಿ ಮಾಡಿ ಮಾವು ಬೆಳೆದು ಯಶಸ್ವಿಯಾಗಿದ್ದಾರೆ. ಬರಡು ಭೂಮಿಯಲ್ಲಿ ಏನಾದರು ಕೃಷಿ ಮಾಡಿ ಯಶಸ್ಸು ಸಾಧಿಸಬೇಕೆಂದು ಕನಸು ಕಟ್ಟಿಕೊಂಡಿದ್ದ‌ ರೈತ, ಬಂಪರ್ ಮಾವು ಬೆಳೆದು ಇತರರಿಗೆ ಮಾದರಿಯಾಗಿದ್ದಾನೆ.

VISTARANEWS.COM


on

Bilhara village farmer grew bumper mango on barren land
Koo

ಯಾದಗಿರಿ: ಆ ಭೂಮಿ ಕೃಷಿ (Agriculture) ಮಾಡಲು ಯೋಗ್ಯವಿಲ್ಲದಂತಾಗಿತ್ತು. ಯಾವ ಬೆಳೆಯೂ ಬೆಳೆಯುತ್ತಿರಲಿಲ್ಲ. ಇಂತಹ ಭೂಮಿಯಲ್ಲಿ ಏನಾದರು ಕೃಷಿ ಮಾಡಿ ಯಶಸ್ಸು ಸಾಧಿಸಬೇಕೆಂದು ಕನಸು ಕಟ್ಟಿಕೊಂಡಿದ್ದ‌ ರೈತ, ಬರಡು ಭೂಮಿಯಲ್ಲಿ ಬಂಪರ್ ಮಾವು ಬೆಳೆದು ಇತರರಿಗೆ (Yadgiri News) ಮಾದರಿಯಾಗಿದ್ದಾನೆ.

ಹೌದು, ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಿಳ್ಹಾರ ಗ್ರಾಮದ ರೈತ ಮಲ್ಲಿಕಾರ್ಜುನರೆಡ್ಡಿ ಗೌಡ ತಮ್ಮ ಐದು ಎಕರೆ ಭೂಮಿಯಲ್ಲಿ ಯಾವುದೇ ಕ್ರಿಮಿನಾಶಕ ಬಳಸದೇ ಸಾವಯವ ಕೃಷಿ ಮಾಡಿ ಮಾವು ಬೆಳೆದು ಯಶಸ್ವಿಯಾಗಿದ್ದಾರೆ.

ರೈತ ಮಲ್ಲಿಕಾರ್ಜುನರೆಡ್ಡಿಗೌಡ ಅವರ ಐದು ಎಕರೆ ಭೂಮಿಯಲ್ಲಿ ಯಾವುದೇ ಬೇರೆ ಬೆಳೆ ಬೆಳೆಯುತ್ತಿರಲಿಲ್ಲ. ಹೀಗಾಗಿ ಮಾವು ಬೆಳೆಯಲು ಯೋಜನೆ ರೂಪಿಸಿ, 5 ಎಕರೆ ಭೂಮಿಯಲ್ಲಿ 2011ರಲ್ಲಿ 500 ಮಾವಿನ ಗಿಡಗಳನ್ನು ನಾಟಿ ಮಾಡಿದ್ದು, ಮೂರು ವರ್ಷಗಳ ನಂತರ ಮಾವು ಉತ್ತಮ ಫಲ ಕೊಡುತ್ತಿದೆ. ಇನ್ನು ನೀರಿಗಾಗಿ ಭೀಮಾನದಿ ಮೂಲಕ ಪೈಪ್ ಲೈನ್ ಹಾಕಿಕೊಂಡು ಹಾಗೂ ಜಮೀನಿನಲ್ಲಿ ಒಂದು ಬೋರ್‌ವೆಲ್ ಕೊರೆಸಿ ಮಾವಿನ ಗಿಡಕ್ಕೆ ನೀರು ಹರಿಸಲಾಗುತ್ತಿದೆ.

ಇದನ್ನೂ ಓದಿ: Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

ಸಾವಯವ ಗೊಬ್ಬರ ಬಳಕೆ

ಮಾವಿನ ಬೆಳೆಗೆ ಯಾವುದೇ ಕ್ರಿಮಿನಾಶಕ ಬಳಕೆ ಮಾಡಿಲ್ಲ. ಸಾವಯವ ಗೊಬ್ಬರ ಬಳಸಿ, ಮಾವು ಬೆಳೆದಿದ್ದಾರೆ. ಕೇಸರಿ, ರಸಪುರಿ, ಬೆನಿಶ್ಯಾನ್, ಮಲ್ಲಿಕಾ ಸೇರಿದಂತೆ ಹಲವು ತಳಿಯ ಮಾವು ಬೆಳೆದಿದ್ದು, ಉತ್ತಮ ಫಸಲು ಬಂದಿದೆ.

ಈ ಕುರಿತು ರೈತ ಮಲ್ಲಿಕಾರ್ಜುನರೆಡ್ಡಿ ಗೌಡ ಮಾತನಾಡಿ, ಬರಡುಭೂಮಿಯಲ್ಲಿ ಯಾವುದೇ ಬೆಳೆ ಬೆಳೆಯುತ್ತಿರಲಿಲ್ಲ. 5 ಎಕರೆ ಭೂಮಿಯಲ್ಲಿ 500 ಕ್ಕೂ ಹೆಚ್ಚು ಮಾವು ಬೆಳೆದಿದ್ದು, ಯಾವುದೇ ಕ್ರಿಮಿನಾಶಕ ಹಾಕುವುದಿಲ್ಲ. ಸಾವಯವ ಗೊಬ್ಬರ ಬಳಸಿ ಮಾವು ಬೆಳೆಯಲಾಗಿದೆ. ಈಗ ಹೆಚ್ಚು ಮಾವು ಫಸಲು ಬಂದಿದೆ ಎಂದು ತಿಳಿಸಿದ್ದಾರೆ.

ಮಾವಿನ ಹಣ್ಣುಗಳು ಪೌಷ್ಟಿಕಾಂಶವುಳ್ಳ ಹಣ್ಣು ಆಗಿದ್ದು, ಅದರಲ್ಲೂ ಸಾವಯವ ಮಾವಿನ ಹಣ್ಣಿಗೆ ಭಾರೀ ಬೇಡಿಕೆ ಇದೆ. ಇನ್ನು ಸಾವಯವ ಮಾವು ಬೆಳೆದ ಹಿನ್ನೆಲೆಯಲ್ಲಿ ರೈತ, ಮಾವು ಮಾರಾಟ ಮಾಡಲು ಯಾವುದೇ ಮಾರುಕಟ್ಟೆಗೆ ಅಲೆದಾಡುವುದು ತಪ್ಪಿದೆ. ಖರೀದಿದಾರರೇ ಖುದ್ದಾಗಿ ಜಮೀನಿಗೆ ಆಗಮಿಸಿ ಒಂದು ಸ್ಯಾಂಪಲ್ ಮಾವಿನ ಹಣ್ಣು ಸೇವಿಸಿ, ಮಾವು ಖರೀದಿ ಮಾಡುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿ ಮಾವಿನ ಹಣ್ಣುಗಳನ್ನು ಖರೀದಿ ಮಾಡಿ, ಬಳಿಕ ಅವುಗಳನ್ನು ಗುಜರಾತ್, ಮುಂಬೈ, ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಕಳುಹಿಸುತ್ತಾರೆ.

ಇದನ್ನೂ ಓದಿ: Moringa Leaves Health Benefits: ನುಗ್ಗೆ ಸೊಪ್ಪು ಏಕೆ ತಿನ್ನಬೇಕು? ಏನಿದೆ ಇದರಲ್ಲಿ ವಿಶೇಷ ಗುಣ?

ವಡಗೇರಾ ತಾಲೂಕಿನ ಬಿಳ್ಹಾರ ಗ್ರಾಮದ ಈ ಸಾವಯವ ಮಾವಿನ ಹಣ್ಣಿಗೆ ಭಾರೀ ಡಿಮ್ಯಾಂಡ್ ಇದ್ದು, ರೈತ ಮಲ್ಲಿಕಾರ್ಜುನರೆಡ್ಡಿಗೌಡ ಉತ್ತಮ ಆದಾಯ ಗಳಿಸಿದ್ದಾರೆ.

Continue Reading

ವಿಜಯನಗರ

Vijayanagara News: ವಿಜಯನಗರ ಜಿಲ್ಲೆಗೆ 130 ಕೋಟಿ ರೂ. ಬೆಳೆ ಪರಿಹಾರ: ಡಿಸಿ

Vijayanagara News: ಹೊಸಪೇಟೆ ತಾಲೂಕಿನ 3,880 ರೈತರಿಗೆ 3,45,51,946 ರೂ., ಹಗರಿಬೊಮ್ಮನಹಳ್ಳಿ ತಾಲೂಕಿನ 15,813 ರೈತರಿಗೆ 19,24,12,902 ರೂ., ಕೂಡ್ಲಿಗಿ ತಾಲೂಕಿನ 19,010 ರೈತರಿಗೆ 23,12,23,100 ರೂ., ಕೊಟ್ಟೂರು ತಾಲೂಕಿನ 12,833 ರೈತರಿಗೆ 14,04,56,255 ರೂ., ಹಡಗಲಿ ತಾಲೂಕಿನ 20,925 ರೈತರಿಗೆ 26,93,01,607 ರೂ. ಮತ್ತು ಹರಪನಹಳ್ಳಿ ತಾಲೂಕಿನ 37,082 ರೈತರಿಗೆ 42,28,62,000 ರೂ. ನಂತೆ ವಿಜಯನಗರ ಜಿಲ್ಲೆಯಲ್ಲಿ ತಾಲೂಕುವಾರು ಬೆಳೆ ಪರಿಹಾರ ಮೊತ್ತ ಸಂದಾಯವಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್‌ ತಿಳಿಸಿದ್ದಾರೆ.

VISTARANEWS.COM


on

130 crore crop compensation amount paid to Vijayanagara district says DC m S Diwakar
ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್‌.
Koo

ಹೊಸಪೇಟೆ: 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯನಗರ ಜಿಲ್ಲೆಯಲ್ಲಿ (Vijayanagara News) ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ 2000 ರೂ. ವರೆಗೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ, ಸರ್ಕಾರದಿಂದ ಆದೇಶಿಸಲಾಗಿದೆ.

ಅದರಂತೆ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಪ್ರೂಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದ್ದು, ವಿಜಯನಗರ ಜಿಲ್ಲೆಯಲ್ಲಿ ಈವರೆಗೂ ಹತ್ತು ಹಂತಗಳಲ್ಲಿ ಒಟ್ಟು 1,09,543 ರೈತರಿಗೆ 130,08,07,810 ರೂ. ಇನ್ಪುಟ್ ಸಬ್ಸಿಡಿಯನ್ನು ಜಮಾ ಮಾಡಲು ಅನುಮೋದನೆ ನೀಡಲಾಗಿದ್ದು, ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮಾ ಮಾಡಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

ಬಾಕಿ ಉಳಿದ ಅರ್ಹ ರೈತರಿಗೆ ಹಂತ-ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಜಮಾ ಮಾಡಲಾಗುವುದು. ಈಗಾಗಲೇ ಅನುಮೋದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯಿತಿಗಳು ಹಾಗೂ ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಸೀಲ್ದಾರರ ಕಚೇರಿಯ ಸೂಚನಾ ಫಲಕಗಳಲ್ಲಿ ಪ್ರಚುರಪಡಿಸಲಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ ತಾಲೂಕು ಕಚೇರಿ, ಹಗರಿಬೊಮ್ಮನಹಳ್ಳಿ ತಾಲೂಕು ಕಚೇರಿ, ಕೂಡ್ಲಿಗಿ ತಾಲೂಕು ಕಚೇರಿ, ಕೊಟ್ಟೂರು ತಾಲೂಕು ಕಚೇರಿ, ಹಡಗಲಿ ತಾಲೂಕು ಕಚೇರಿ ಮತ್ತು ಹರಪನಹಳ್ಳಿ ತಾಲೂಕು ಕಚೇರಿಗಳಲ್ಲಿನ ಸಹಾಯವಾಣಿಗಳಿಗೆ ಕಚೇರಿ ಸಮಯದಲ್ಲಿ ರೈತರು ಫ್ರೂಟ್ಸ್ ಐಡಿ ಸಂಖ್ಯೆಯೊಂದಿಗೆ ಸಂಬಂಧಪಟ್ಟ ತಾಲೂಕು ಕಚೇರಿಯ ಸಹಾಯವಾಣಿಗೆ ಭೇಟಿ ನೀಡಿ ಬೆಳೆ ಪರಿಹಾರ ಮಾಹಿತಿ ಪಡೆಯಬಹುದಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ಇದನ್ನೂ ಓದಿ: Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

ತಾಲೂಕುವಾರು ಮಾಹಿತಿ

ಹೊಸಪೇಟೆ ತಾಲೂಕಿನ 3,880 ರೈತರಿಗೆ 3,45,51,946 ರೂ., ಹಗರಿಬೊಮ್ಮನಹಳ್ಳಿ ತಾಲೂಕಿನ 15,813 ರೈತರಿಗೆ 19,24,12,902 ರೂ., ಕೂಡ್ಲಿಗಿ ತಾಲೂಕಿನ 19,010 ರೈತರಿಗೆ 23,12,23,100 ರೂ., ಕೊಟ್ಟೂರು ತಾಲೂಕಿನ 12,833 ರೈತರಿಗೆ 14,04,56,255 ರೂ., ಹಡಗಲಿ ತಾಲೂಕಿನ 20,925 ರೈತರಿಗೆ 26,93,01,607 ರೂ. ಮತ್ತು ಹರಪನಹಳ್ಳಿ ತಾಲೂಕಿನ 37,082 ರೈತರಿಗೆ 42,28,62,000 ರೂ. ನಂತೆ ವಿಜಯನಗರ ಜಿಲ್ಲೆಯಲ್ಲಿ ತಾಲೂಕುವಾರು ಬೆಳೆ ಪರಿಹಾರ ಮೊತ್ತ ಸಂದಾಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
House of the Dragon season 2 new trailer hints at a bloody
ಸಿನಿಮಾ6 mins ago

House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

Google Update
ತಂತ್ರಜ್ಞಾನ7 mins ago

Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

Seema Haider
ದೇಶ15 mins ago

Seema Haider: ಮತ್ತೆ ಸುದ್ದಿಯಾದ ಸೀಮಾ ಹೈದರ್‌; ಇದು ಗಡಿಯಾಚೆಗಿನ ಪ್ರೇಮ ಕಥೆಯೋ ಅಥವಾ ಪಾಕ್‌ ಗೂಢಾಚಾರಿಕೆಯೋ?

ICMR Dietary Guidelines
ಆರೋಗ್ಯ16 mins ago

ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

viral video shakti scheme women fight
ವೈರಲ್ ನ್ಯೂಸ್26 mins ago

Viral video: ಚಪ್ಪಲಿಯಲ್ಲಿ ಬಡಿದಾಡಿ ಬಟ್ಟೆ ಹರಿದುಕೊಂಡರು; ಪುಕ್ಕಟೆ ಬಸ್‌ನಲ್ಲಿ ಮಹಿಳೆಯರ ʼಶಕ್ತಿʼ ಪ್ರದರ್ಶನ!

Narendra Modi
ದೇಶ29 mins ago

ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

Rishabh Pant
ಕ್ರೀಡೆ43 mins ago

Rishabh Pant: ಬಿಸಿಸಿಐ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಭ್​ ಪಂತ್​

LIC
ವಾಣಿಜ್ಯ47 mins ago

LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Mobile Phone Recharges:
ದೇಶ1 hour ago

Mobile Phone Recharges: ಮೊಬೈಲ್‌ ಗ್ರಾಹಕರಿಗೆ ಬಿಗ್‌ ಶಾಕ್‌! ಮತ್ತೆ ರಿಚಾರ್ಜ್‌ ಮೊತ್ತ ಏರಿಕೆ

IPL 2024
ಕ್ರೀಡೆ1 hour ago

IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ11 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ21 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202423 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌