Site icon Vistara News

Yuva Nidhi Scheme: ಡಿ. 26ರಿಂದ ಯುವನಿಧಿ ನೋಂದಣಿ ಶುರು; ಜ. 12ರಂದು ಖಾತೆಗೆ ಹಣ ಜಮೆ

Yuva Nidhi Scheme

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ (Congress Guarantee) ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ (Yuva Nidhi Scheme) ಡಿ. 26ರಿಂದ ನೋಂದಣಿಗೆ ಚಾಲನೆ ನೀಡಲಾಗುತ್ತಿದ್ದು, ಜ. 12ರಂದು ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಯೋಗಿ ಸಚಿವ‌ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವ‌ ಡಾ. ಶರಣಪ್ರಕಾಶ್ ಪಾಟೀಲ್, ಡಿಸೆಂಬರ್ 26ಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಿದ್ದೇವೆ. ಅಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಲಾಂಚ್ ಮಾಡಲಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಯುವ ನಿಧಿ ಯೋಜನೆಗಾಗಿ ಈ ವರ್ಷ 1250 ಕೋಟಿ ಮೀಸಲಿಟ್ಟಿದ್ದೇವೆ. ಮುಂದಿನ ವರ್ಷ 2500 ಕೋಟಿ ಕೇಳಿದ್ದೇವೆ ಎಂದು ತಿಳಿಸಿದರು.

ವಂಚನೆ ಮಾಡಿದರೆ ಹಣ ರಿಕವರಿ, ಕಾನೂನು ಕ್ರಮ

ಉದ್ಯೋಗ ಸಿಕ್ಕ ಬಳಿಕ ಯುವನಿಧಿ ತೆಗೆದುಕೊಂಡರೆ ಹಣ ರಿಕವರಿ ಮಾಡುತ್ತೇವೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ. ಯುವನಿಧಿ ದುರುಪಯೋಗ ತಡೆಯುವ ಉದ್ದೇಶದಿಂದ ಈ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಪದವಿ ಮುಗಿಸಿ ಆರು ತಿಂಗಳ ಒಳಗೆ ಕೆಲಸ ಸಿಗದಿದ್ದರೆ ಅಂಥವರು ಅರ್ಜಿ ಸಲ್ಲಿಸಬಹುದು. ಡಿಗ್ರಿ ಪಾಸ್ ಆದವರಿಗೆ 3000 ರೂಪಾಯಿ, ಡಿಪ್ಲೊಮಾ ಪಾಸ್ ಆದವರಿಗೆ 1500 ರೂಪಾಯಿಯನ್ನು ಕೊಡಲಾಗುವುದು. ಎರಡು ವರ್ಷಗಳ ಕಾಲ ಅವರಿಗೆ ಈ ನಿಧಿ ಸಿಗಲಿದೆ. ಜನವರಿ 12ಕ್ಕೆ ಯುವನಿಧಿ ಹಣ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ.

ಶಿವಮೊಗ್ಗದಲ್ಲಿ ಜ.12ಕ್ಕೆ ಶಿವಮೊಗ್ಗದಲ್ಲಿ ಕಾರ್ಯಕ್ರಮ

ಜನವರಿ 12ರಂದು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಆಗಲಿದ್ದು, ಅಂದು ಶಿವಮೊಗ್ಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಿದ್ದೇವೆ. ಕೆಲಸ ಸಿಗದಿರುವ ಬಗ್ಗೆ ಫಲಾನುಭವಿ ಸ್ವಯಂ ಧೃಢೀಕರಣ ಮಾಡಿಕೊಳ್ಳಬೇಕು. ಈ ನಡುವೆ ಕೆಲಸ ಸಿಕ್ಕರೆ ಅವರಿಗೆ ನಿಧಿ ಹಣ ಸಿಗುವುದಿಲ್ಲ ಎಂದು ಸಚಿವರು ತಿಳಿಸಿದರು.

ಅರ್ಹತೆ ಏನು?

ಯಾರು ಫಲಾನುಭವಿಗಳು?

ಯಾರು ಅನರ್ಹರು?

ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?

ಇದನ್ನೂ ಓದಿ: Karnataka Weather: ಬೆಂಗಳೂರಿಗರ ಚಳಿ ಬಿಡಿಸಲಿದೆ ಡಿಸೆಂಬರ್‌ ಕೊನೇ ವಾರ! ರಾಜ್ಯ ಹವಾಮಾನ ಸ್ಥಿತಿ ಏನು?

ಯುವ ನಿಧಿ ಅರ್ಜಿ ಎಲ್ಲಿ ಸಲ್ಲಿಸಬೇಕು?

ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು.

Exit mobile version