Walkathon : ನವೆಂಬರ್​ 8ರಂದು ಬಿಜಿಎಸ್​ ವಾಕಥಾನ್​ - Vistara News

ಕರ್ನಾಟಕ

Walkathon : ನವೆಂಬರ್​ 8ರಂದು ಬಿಜಿಎಸ್​ ವಾಕಥಾನ್​

ಹೃದಯ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಉತ್ತೇಜಿಸುವ ಉದ್ದೇಶದಿಂದ ವಾಕಾಥಾನ್​ (Walkathon) ಅನ್ನು ಆಯೋಜಿಸಿದೆ.

VISTARANEWS.COM


on

BGS Run
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಂಡ್ಯ ಜಿಲ್ಲೆಯ ಬೆಳ್ಳೂರಿನಲ್ಲಿರುವ ಆದಿಚುಂಚನಗಿರಿ ವಿಶ್ವ ವಿದ್ಯಾಲಯದ ಕಾರ್ಡಿಯಾಲಜಿ ವಿಭಾಗವು ನವೆಂಬರ್​ 8ರಂದು ಹೃದಯದ ಅರೋಗ್ಯ ಹಾಗೂ ಫಿಟ್ನೆಸ್​ ಕುರಿತು ಜಾಗೃತಿ ಮೂಡಿಸಲು ಬೃಹತ್​ ವಾಕಥಾನ್​ (ನಡಿಗೆ) ಆಯೋಜಿಸಿದೆ. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುವ ಈ ಬೃಹತ್​ ನಡಿಗೆಯಲ್ಲಿ 10 ಸಾವಿರಕ್ಕೂ ಅಧಿಕ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ವಿಶ್ವ ವಿದ್ಯಾಲಯವು ತಿಳಿಸಿದೆ.

ಫಿಟ್ನೆಸ್ ಹಾಗೂ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಆಯೋಜಿಸಲಾಗಿರುವ ಈ ವಾಕಥಾನ್​ 5 ಕಿಲೋಮೀಟರ್​ ಪೂರ್ಣಗೊಳಿಸಲಿದೆ. ಆದಿಚುಂಚನಗಿರಿ ಆಸ್ಪತ್ರೆ ಯಿಂದ ಬೆಳಗ್ಗೆ 7 ಗಂಟೆಗೆ ಚಾಲನೆ ಪಡೆಯುವ ವಾಕಾಥಾನ್​ ಬೆಳ್ಳೂರು ಕ್ರಾಸ್ ತನಕ ತಲುಪಿ ಅಲ್ಲಿಂದ ಆಸ್ಪತ್ರೆಗೆ ವಾಪಸ್​ ಬರಲಿದೆ. ಕೃಷಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಎಸ್ಪಿ ಯತೀಶ್​ ಮತ್ತಿತರರು ಈ ವಾಕಥಾನ್​ನಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಹೆಚ್ಚುತ್ತಿರುವ ಮಧುಮೇಹ; ಬಿಜಿಎಸ್‌ ಆಸ್ಪತ್ರೆಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ

ನಡಿಯಿರಿ, ಆರೋಗ್ಯವಾಗಿರಿ ಎಂಬ ಧ್ಯೇಯದೊಂದಿಗೆ ವಾಕಥಾನ್ನ್ ಅನ್ನು ಆಯೋಜಿಸಲಾಗಿದೆ. ನಾಳೆಯ ಒಳಿತಾಗಿ ಇಂದು ನಡಿಯಿರಿ ಎಂದು ವಾಕಾಥಾನ್​ನಲ್ಲಿ ಭಾಗವಹಿಸುವರು ಸಾರ್ವಜನಿಕರಿಗೆ ಕರೆ ಕೊಡಲಿದ್ದಾರೆ.

ಬೆಳಗ್ಗೆದ್ದು ಓಡುವುದರಿಂದ ಏನು ಲಾಭ?

ಬೆಳ್‌ಬೆಳಗ್ಗೆ ಏಳೋದು ಕೆಲವರಿಗೆ ಖುಷಿ, ಆದರೆ ಬಹುತೇಕರಿಗೆ ಅದೊಂದು ದೊಡ್ಡ ಟಾಸ್ಕ್‌. ಮುನ್ನಾದಿನದ ಸುಸ್ತಿನಿಂದಲೋ, ಏಳಲು ಸಾಧ್ಯವಾಗದ ಜಡತ್ವದಿಂದಲೋ, ಹಾಸಿಗೆಗೆ ಅಂಟಿಕೊಂಡು ಬೆಳಗ್ಗಿನ ನಿದ್ದೆಯನ್ನು ಸವಿಯುವ ಮನಸ್ಥಿತಿಯುಳ್ಳ ಒಂದಿಷ್ಟು ಮಂದಿ ನಿಧಾನಕ್ಕೆದ್ದು, ಚಹಾ ಹೀರಿ ಎಂದಿನಂತೆ ಭಾನುವಾರಕ್ಕೆ ಕಾಯುತ್ತಾ ಆಫೀಸಿಗೆ ಹೋಗುತ್ತಾರೆ. ಇನ್ನೂ ಕೆಲವರು, ಆರೋಗ್ಯದ ಕಾಳಜಿಯಿಂದ (health awareness) ಏಳುವ ಅಭ್ಯಾಸವನ್ನು ಪ್ರಯತ್ನಪೂರ್ವಕವಾಗಿ ಮಾಡಿಕೊಂಡಿರುತ್ತಾರೆ. ಬೆಳಗ್ಗೆ ಬೇಗನೆದ್ದು ಜಾಗಿಂಗೋ, ವಾಕಿಂಗೋ, ಜಿಮ್ಮೋ, ಯೋಗವೋ, ಸೈಕ್ಲಿಂಗೋ ಹೀಗೆ ಏನಾದರೊಂದು ಚಟುವಟಿಕೆಯಿಂದ ಶರೀರವನ್ನೂ, ಮನಸ್ಸನ್ನೂ ಉಲ್ಲಾಸಗೊಳಿಸಿ, ಇಡೀ ದಿನಕ್ಕೆ ಬೇಕಾದಷ್ಟು ಶಕ್ತಿಯನ್ನೂ, ಮುಖ್ಯವಾಗಿ ಪಾಸಿಟಿವಿಟಿಯನ್ನೋ ತುಂಬಿಸಿಕೊಂಡು ಜೀವನೋತ್ಸಾಹ ಬೆಳೆಸಿಕೊಳ್ಳುತ್ತಾರೆ. ಇಂಥ ಗುಂಪಿನಲ್ಲಿ ಒಂದಿಷ್ಟು ಮಂದಿ ದಿನವೂ ಬೆಳಗ್ಗೆದ್ದು ಓಡುವ (morning jogging) ಹುಮ್ಮಸ್ಸಿನವರು. ಚುರುಕಾಗಿ ಎದ್ದು, ಶೂ ಮೆಟ್ಟಿಕೊಂಡು ಇವರು ಓಡಲು ಹೊರಟರೆ ನೋಡುವವರಿಗೂ ಉತ್ಸಾಹ ಚಿಮ್ಮುತ್ತದೆ. ಎಲ್ಲರಿಗೂ ಓಡಲು ಸಾಧ್ಯವಾಗುವುದಿಲ್ಲ ಎಂಬುದು ನಿಜವಾದರೂ, ಓಡುವುದರಿಂದ ಸಿಗುವ ಆರೋಗ್ಯ ಲಾಭಗಳು (running health Benefits) ಅನೇಕ. ಹಾಗಾದರೆ ಬನ್ನಿ, ಬೆಳಗ್ಗೆದ್ದು ಓಡುವುದರಿಂದ ಆಗುವ ಲಾಭಗಳೇನು (runniing Benefits) ಎಂಬುದನ್ನು ನೋಡೋಣ.

  1. ಬೆಳಗ್ಗೆ ಎದ್ದು ಓಡುವುದರಿಂದ ದೇಹದ ಚಯಾಪಚಯ ಕ್ರಿಯೆ ಚುರುಕಾಗುವುದೂ ಅಲ್ಲದೆ, ಇದು ನಿತ್ಯವೂ ಕರಗಿಸಬಲ್ಲ ಕ್ಯಾಲರಿಗಳ ಪ್ರಮಾಣವನ್ನು ಏರಿಸುತ್ತದೆ. ಮುಖ್ಯವಾಗಿ ನೀವು ತೂಕ ಇಳಿಸುವ ಇರಾದೆಯನ್ನು ಹೊಂದಿರುವವರಾದರೆ ಇದು ಬಹಳ ಸಹಾಯ ಮಾಡುತ್ತದೆ.
  2. ಓಡುವುದು ದೇಹದಲ್ಲಿ ಎಂಡೋರ್ಫಿನ್‌ ಹಾರ್ಮೋನನ್ನು ಬಿಡುಗಡೆ ಮಾಡುವಂತೆ ಮಾಡುವ ವ್ಯಾಯಾಮಗಳಲ್ಲಿ ಒಂದು. ಈ ಹಾರ್ಮೋನು ಸಹಜವಾಗಿಯೇ ನಮ್ಮ ಮೂಡನ್ನು ಉತ್ತಮವಾಗಿಸಿ, ಸಂತೋಷವಾಗಿಯೂ, ಉಲ್ಲಾಸದಾಯಕವನ್ನಾಗಿಯೂ ಮಾಡುತ್ತದೆ. ಬೆಳಗ್ಗೆ ಎದ್ದ ಕೂಡಲೇ ಓಡುವುದರಿಂದ ಒತ್ತಡವು ಕಡಿಮೆಯಾಗಿ ದಿನವಿಡೀ ನಿಮ್ಮನ್ನು ಹೆಚ್ಚು ಖುಷಿಯಿಂದ ಇರಿಸುತ್ತದೆ.
  3. ಬೆಳಗ್ಗೆ ಎದ್ದ ಕೂಡಲೇ ಓಡುವುದು ಇತ್ಯಾದಿ ವರ್ಕೌಟ್‌ ಮುಗಿಸಿಬಿಟ್ಟರೆ ನಿಮ್ಮ ಫಿಟ್‌ನೆಸ್‌ ಗುರಿಯನ್ನು ಬೇಗ ತಲುಪಲು ನಿಮಗೆ ಸಾಧ್ಯವಾಗುತ್ತದೆ. ಸಂಜೆಯ ವೇಳೆಗೋ ಅಥವಾ ದಿನದ ಬೇರೆ ಹೊತ್ತಿನಲ್ಲಿ ಯಾವುದೇ ವ್ಯಾಯಾಮ ಮಾಡುವ ಅಭ್ಯಾಸ ನಿಮಗಿದ್ದರೆ ಬಹಳ ಸಾರಿ ಯಾವುದೋ ಕೆಲಸದೊತ್ತಡದಿಂದಲೋ, ಅಥವಾ ಇನ್ಯಾವುದೋ ದಿಢೀರ್‌ ಯೋಜನೆಯಿಂದಲೋ ನಿಮಗೆ ಆ ದಿನದ ವರ್ಕೌಟ್‌ ಸಾಧ್ಯವಾಗುವುದಿಲ್ಲ. ಇದರಿಂದ ಶಿಸ್ತು ಸಾಧ್ಯವಾಗದೆ, ನಿಗದಿತ ಗುರಿ ತಲುಪಲಾಗುವುದಿಲ್ಲ.
  4. ಬೆಳಗ್ಗೆ ಎದ್ದ ಕೂಡಲೇ ಓಡುವುದರಿಂದ ಸಿಗುವ ಇನ್ನೊಂದು ಬಹುದೊಡ್ಡ ಲಾಭವೆಂದರೆ ಅದು ರಾತ್ರಿಯ ಚಂದದ ನಿದ್ದೆ. ಬೆಳಗ್ಗಿನ ಚಂದನೆಯ ಬಿಸಿಲು ದೇಹಕ್ಕೆ ಸಿಗುವುದಲ್ಲದೆ, ಇದರಿಂದ ದೇಹಕ್ಕೆ ಅಗತ್ಯವಿರುವ ಎಲ್ಲವೂ ಪೂರೈಕೆಯಾಗಿ ರಾತ್ರಿ ಬಹುಬೇಗನೆ ಸೊಂಪಾದ ನಿದ್ದೆ ಬರುತ್ತದೆ. ಬೆಳಗ್ಗೆ ಮತ್ತೆ ಉಲ್ಲಸಿತವಾಗಿ ಸರಿಯಾದ ಸಮಯಕ್ಕೆ ಏಳಲು ಸಾಧ್ಯವಾಗುತ್ತದೆ. ಆರೋಗ್ಯವಾಗಿರಲು ಇದಕ್ಕಿಂತ ಹೆಚ್ಚೇನು ಬೇಕು ಹೇಳಿ!
  5. ಬೆಳಗ್ಗಿನ ತಾಜಾ ಗಾಳಿಯನ್ನು ಉಸಿರಾಡಲು ಸಿಗುವುದಲ್ಲದೆ, ಹಕ್ಕಿಗಳಿಂಚರ, ಮುಂಜಾನೆಯ ಮಂಜು, ಸೂರ್ಯನ ಮಂದ ಬಿಸಿಲು ಎಲ್ಲದರ ಲಾಭವನ್ನೂ ಇಲ್ಲಿ ಪಡೆಯಬಹುದು. ಪ್ರಕೃತಿಯೊಳಗೊಂದಾಗುವ ಎಲ್ಲ ಅವಕಾಶ ಇದರಲ್ಲಿದೆ.
  6. ಬೆಳಗ್ಗೆ ಚೆನ್ನಾಗಿ ಓಡಿ ಬಂದ ದೇಹಕ್ಕೆ ಒಳ್ಳೆಯ ಉಪಾಹಾರ ಸಿಕ್ಕರೆ, ದೇಹವು ಉಲ್ಲಸಿತಗೊಂಡು ಇಡೀ ದಿನದ ಕೆಲಸಗಗಳಿಗೆ ಪಾಸಿಟಿವಿಟಿಯಿಂದ ತಯಾರಾಗುತ್ತದೆ. ಕೆಲಸದಲ್ಲಿ ಶ್ರದ್ಧೆ, ಏಕಾಗ್ರತೆ ಹೆಚ್ಚುತ್ತದೆ.
  7. ಬೆಳಗ್ಗೆದ್ದು ಓಡುವುದರಿಂದ ದೊರಕುವ ಇನ್ನೊಂದು ದೊಡ್ಡ ಲಾಭ ಎಂದರೆ, ನೀವು ಸಮಯ ಉಳಿಸಬಹುದು. ಬೆಳಗ್ಗೆ, ಯಾರ ತೊಂದರೆಯೂ ಇಲ್ಲದೆ, ಕೆಲಸದ ಒತ್ತಡವಿಲ್ಲದೆ ನೀವು ಈ ವ್ಯಾಯಾಮ ಮುಗಿಸಬಹುದು. ದಿನವಿಡೀ, ನಿಮ್ಮ ಇತರ ಕೆಲಸಗಳಿಗೆ ಸಮಯ ಹೊಂದಿಸಬಹುದು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Wild Elephant : ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚರಿಸುವವರಿಗೆ ಎಚ್ಚರಿಕೆ; ಆಗಾಗ ಕಾಣಿಸಿಕೊಳ್ಳುತ್ತಿದೆ ಒಂಟಿ ಸಲಗ

Wild Elephant:ಬುಧವಾರ ರಾತ್ರಿ ಒಂಟಿ ಸಲಹ ಸರ್ಕಾರಿ ಬಸ್​ ಒಂದಕ್ಕೆ ಅಡ್ಡ ಬಂದಿತ್ತು. ಸುಮಾರು ಅರ್ಧ ಗಂಟೆ ಅಲ್ಲೇ ನಿಂತ ಕಾರಣ ವಾಹನ ದಟ್ಟಣೆ ಉಂಟಾಗಿತ್ತು. ಘಾಟಿ ರಸ್ತೆಯಲ್ಲಿ ಸುಮಾರು 2 ಕಿಲೋಮೀಟರ್​ನಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಂತೆಯೇ ಶುಕ್ರವಾರ ಮುಂಜಾನೆ ಒಂಟಿ ಸಲಗದ ದರ್ಶನ ಕೊಟ್ಟಿದೆ..

VISTARANEWS.COM


on

Wild Elephant
Koo

ಚಿಕ್ಕಮಗಳೂರು:ದಕ್ಷಿಣ ಕನ್ನಡದ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಪದೇ ಪದೆ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ. ಇದು ಈ ರಸ್ತೆಯ ಮೂಲಕ ಸಾಗುವ ಮಂದಿಗೆ ಆತಂಕ ತಂದಿದೆ. ಬುಧವಾರ ರಾತ್ರಿ ಆನೆ ಕಾಣಿಸಿಕೊಂಡು ಯಾವುದೇ ಹಾನಿ ಮಾಡದೇ ಹೊರಟು ಹೋಗಿತ್ತು. ಅಂತೆಯೇ ಗುರುವಾರ ರಾತ್ರಿ ಮತ್ತೆ ಅನೆ ಕಾಣಿಸಿಕೊಂಡಿದೆ. ರಸ್ತೆ ಮಧ್ಯೆ ಒಂಟಿ ಸಲಗ ಕಾಣಿಸಿಕೊಂಡ ಕಾರಣ ಸವಾರರು ಹೆದರಿಕೊಂಡಿದ್ದರು.

ಬುಧವಾರ ರಾತ್ರಿ ಒಂಟಿ ಸಲಹ ಸರ್ಕಾರಿ ಬಸ್​ ಒಂದಕ್ಕೆ ಅಡ್ಡ ಬಂದಿತ್ತು. ಸುಮಾರು ಅರ್ಧ ಗಂಟೆ ಅಲ್ಲೇ ನಿಂತ ಕಾರಣ ವಾಹನ ದಟ್ಟಣೆ ಉಂಟಾಗಿತ್ತು. ಘಾಟಿ ರಸ್ತೆಯಲ್ಲಿ ಸುಮಾರು 2 ಕಿಲೋಮೀಟರ್​ನಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಂತೆಯೇ ಶುಕ್ರವಾರ ಮುಂಜಾನೆ ಒಂಟಿ ಸಲಗದ ದರ್ಶನ ಕೊಟ್ಟಿದೆ.

ಚಾರ್ಮಾಡಿ ಘಾಟ್ ಅತ್ಯಂತ ಕಿರಿದಾದ ಹಾಗೂ ತಿರುವುಗಳುಳ್ಳ ರಸ್ತೆಯನ್ನು ಹೊಂದಿದೆ. ಈ ಮಾರ್ಗದಲ್ಲಿ ಆನೆ ಎದುರಾದರೆ ತಪ್ಪಿಸಿಕೊಳ್ಳುವುದು ಕೂಡ ಕಷ್ಟ. ತಿರುವಿನಲ್ಲಿ ಬೈಕ್ ಸವಾರರು ಆನೆ ಕೈಗೆ ಸಿಕ್ಕರೆ ಅಪಾಯ ಕಟ್ಟಿಟ್ಟ ಬುತ್ತಿ.

ಚಾರ್ಮಾಡಿ ಘಾಟಿ ತಪ್ಪಲಿನ ಗ್ರಾಮಗಳಿಗೂ ಒಂಟಿ ಸಲಗ ಆಗಾಗ ಬರುತ್ತಿದೆ. ಹೀಗಾಗಿ ಈ ಆನೆಯನ್ನು ಸೆರೆ ಹಿಡಿದು ಆನೆಗಳಿರುವ ಪ್ರದೇಶಕ್ಕೆ ಬಿಡಬೇಕು ಎಂಬುದಾಗಿ ಸ್ಥಳೀಯರು ಒತ್ತಾಯಿಸಿದ್ದಾರೆ.

ಆನೆ ತುಳಿದು ಗಾಯಗೊಂಡಿದ್ದ ಕಾರ್ಮಿಕ

ಕೂಲಿ ಕೆಲಸಕ್ಕೆ ಹೋಗುತ್ತಿದ್ದವನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಾಟೆಹಳ್ಳ ಗ್ರಾಮದಲ್ಲಿ ಗುರುವಾರ ನಡೆದಿತ್ತು . ಆಘಾತಕ್ಕೆ ರೈತನ ಕಾಲು ಮುರಿತವಾಗಿದೆ. ಬೆಳಗ್ಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಆನೆ ದಾಳಿ (Wild Elephant Attack) ಮಾಡಿತ್ತು. 60 ವರ್ಷದ ದಿವಾಕರ್ ಶೆಟ್ಟಿ ಗಾಯಗೊಂಡವರು.

ಇದನ್ನೂ ಓದಿ: Dengue Fever : ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ

ದಿವಾಕರ್​ ಅವರು ಬೆಳಗ್ಗೆ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಡಿನಿಂದ ಬಂದಿದ್ದ ಒಂಟಿ ಸಲಗವು ದಾಳಿ ಮಾಡಿದೆ. ದಿವಾಕರ್ ಅವರನ್ನು ಅಟ್ಟಿಸಿಕೊಂಡು ಬಂದು ಕಾಲಿನ ಮೇಲೆ ತುಳಿದಿದೆ. ಅವರ ಬಲಗಾಲು ಮುರಿದಿದೆ. ಅವರ ಕಿರುಚಾಟಕ್ಕೆ ಹೆದರಿದ ಆನೆ ಕಾಫಿ ತೋಟದ ಮೂಲಕ ವಾಪಸ್​ ಹೋಗಿದೆ. ಹೀಗಾಗಿ ಅವರ ಪ್ರಾಣ ಉಳಿದಿದೆ. ಅವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಇಟಿಎಫ್ ತಂಡ ಭೇಟಿ, ಪರಿಶೀಲನೆ

ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ ಕಾಡಾನೆ

ಕಾಡಿನಿಂದ ನಾಡಿಗೆ ಮುಖ ಮಾಡಿರುವ ಆನೆಗಳು ಕಾಫಿ ತೋಟಗಳ ನಡುವೆ ನಿಂತಿವೆ. ಹೀಗಾಗಿ ಜೀವ ಭಯದಿಂದ ಕಾಫಿ ತೋಟದ ಕೆಲಸಕ್ಕೆ ಬರಲು ಕೂಲಿ ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಆನೆಗಳು ಮತ್ತು ಮಾನವನ ಸಂಘರ್ಷ ಹಲವಾರು ಸಮಯದಿಂದ ಈ ಪ್ರದೇಶದಲ್ಲಿ ನಡೆಯುತ್ತಿದೆ. ಅದಕ್ಕೊಂದು ಪರಿಹಾರ ಸಿಗುತ್ತಿಲ್ಲ. ಕಾಫಿ ತೋಟಗಳಿಗೆ ಆನೆಗಳು ಲಗ್ಗೆ ಇಡುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆನೆಗಳ ದಾಳಿಯಿಂದಾಗಿ ಹಲವಾರು ಕಾರ್ಮಿಕರು ಜರ್ಜರಿತರಾಗಿದ್ದಾರೆ. ಹೀಗಾಗಿ ಇದಕ್ಕೊಂದು ಪರಿಹಾರ ಇಲ್ಲ ಎನ್ನುವಂತಾಗಿದೆ.

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಮುಂದುವರಿಯಲಿದೆ ಭರ್ಜರಿ ಮಳೆ; ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಮಳೆ ಪ್ರಮಾಣ ತಗ್ಗಿದ್ದರೂ, ಮಲೆನಾಡು ಹಾಗೂ ಒಳನಾಡಿನ ಹಲವೆಡೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Karnataka Weather Forecast) ನಿರೀಕ್ಷೆ ಇದೆ. ಶುಕ್ರವಾರವೂ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡು ಮತ್ತು ಕರಾವಳಿಯ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಲವೆಡೆ ಚದುರಿದಂತೆ ಮಧ್ಯಮ ಮಳೆಯಾಗಲಿದೆ. ಬಾಗಲಕೋಟೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡದಲ್ಲಿ ಹಲವೆಡೆ ಭಾರೀ ಮಳೆಯಾಗಲಿದೆ. ಬೆಂಗಳೂರಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿ ಸೇರಿ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿಯು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Double Decker Flyover : ಬೆಂಗಳೂರಿನ ಮೊದಲ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಕೊನೆಗೂ ಸಿದ್ಧ; ಯಾವಾಗಿಂದ ಸಂಚಾರಕ್ಕೆ ಅವಕಾಶ

ರಾಯಚೂರಿನಲ್ಲಿ ಈಜುಕೊಳವಾದ ಶಾಲೆ ಆವರಣ

ಅಲ್ಪ ಮಳೆಗೆ ಸರಕಾರಿ‌ ಶಾಲೆ ಆವರಣವು ಈಜುಕೊಳವಾಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಶಾಲೆ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಜೀವ ಭಯದಲ್ಲೇ ಮಕ್ಕಳು ಮತ್ತು ಶಿಕ್ಷಕರು ಪಾಠ ಪ್ರವಚನ ಮಾಡಬೇಕಾದ ಪರಿಸ್ಥಿತಿ ನಿರ್ಮಾನವಾಗಿದೆ. ಜಿಟಿ ಜಿಟಿ ಮಳೆಯಿಂದ ಕೊಠಡಿಗಳು ಸೋರುತ್ತಿದೆ. ಜೋರಾಗಿ ಮಳೆ ಬಂದರೆ ನೀರು ನುಗ್ಗುವ ಭೀತಿ ಇದೆ. ಇತ್ತ ಸೋರುತ್ತಿರುವ ಕೊಠಡಿಯಲ್ಲೆ ಮಧ್ಯಾಹ್ನ ಬಿಸಿ ಊಟದ ಆಹಾರ ಧಾನ್ಯಗಳ ಸಂಗ್ರಹ ಮಾಡಲಾಗಿದೆ. ಪಿಡಿಒ, ಬಿಇಓ ಅವರ ಗಮನಕ್ಕೆ ತಂದರು ಪ್ರಯೋಜನೆಯಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರ

ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ಹಳ್ಳ, ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲೇ ಹಳ್ಳ ದಾಟಲು ಬೈಕ್‌ ಸವಾರ ಮುಂದಾಗಿದ್ದ. ಈ ವೇಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ, ಇದನ್ನೂ ಗಮನಿಸಿದ ಸ್ಥಳೀಯರು ಕೂಡಲೇ ಸವಾರನನ್ನು ರಕ್ಷಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

DK Shivakumar: ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟುಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿದೆ ಎಂದು ತಿಳಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಈ ಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500 ಎಕರೆ ಜಾಗ ನೀಡಲಿದೆ. ಈ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ. ಈ ಯೋಜನೆಗಳ ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಅಧಿಕಾರಿಗಳು ಗುರುತಿಸಿದ್ದು, ಅವುಗಳಿಗೆ ಪರಿಹಾರ ಹುಡುಕಲು ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ.

VISTARANEWS.COM


on

Forest department agrees to give 500 acres for yEttina hole project work says DCM DK Shivakumar
Koo

ಬೆಂಗಳೂರು: ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟುಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ಈ ಯೋಜನೆ ಸಂಬಂಧ ವಿಕಾಸಸೌಧದಲ್ಲಿ ಗುರುವಾರ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹಾಗೂ ಸಂಬಂಧಪಟ್ಟ ಇಲಾಖೆಗಳ ಪ್ರಮುಖ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಇದನ್ನೂ ಓದಿ: Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿ.ಕೆ. ಶಿವಕುಮಾರ್, ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಕೆಲಸ ತ್ವರಿತ ಗತಿಯಲ್ಲಿ ನಡೆಸಲು ಅರಣ್ಯ ಸಚಿವ ಈಶ್ವರ ಖಂಡ್ರೆ, ದೆಹಲಿ ಪ್ರತಿನಿಧಿ ಟಿ.ಬಿ ಜಯಚಂದ್ರ, ಕಂದಾಯ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಇಂದು ಚರ್ಚೆ ಮಾಡಿದ್ದೇವೆ ಎಂದರು.

ಈ ಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500 ಎಕರೆ ಜಾಗ ನೀಡಲಿದೆ. ಈ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ ಎಂದ ಅವರು, ಈ ಯೋಜನೆಗಳ ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಅಧಿಕಾರಿಗಳು ಗುರುತಿಸಿದ್ದು, ಅವುಗಳಿಗೆ ಪರಿಹಾರ ಹುಡುಕಲು ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ತಿಳಿಸಿದರು.

260 ಕಿ.ಮೀ ಉದ್ಧದ 20 ಸ್ಥಳಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಇವೆ. ಈ ಯೋಜನೆಗೆ ಅರಣ್ಯ ಇಲಾಖೆ ಅನುಮತಿ ಅಗತ್ಯವಿದ್ದ ಕಾರಣ ನಮ್ಮ ಅರಣ್ಯ ಸಚಿವರು ಹಾಗೂ ಇಲಾಖೆ ಸಚಿವರ ಜತೆ ಚರ್ಚೆ ಮಾಡಿದ್ದೇವೆ. ಈ ವಿಚಾರವಾಗಿ ಕಂದಾಯ, ನೀರಾವರಿ ಹಾಗೂ ಅರಣ್ಯ ಇಲಾಖೆ ಸೇರಿ ಒಟ್ಟಾಗಿ ಜಂಟಿ ಸರ್ವೇ ಮಾಡುತ್ತಿದ್ದೇವೆ. ಅರಣ್ಯ ಇಲಾಖೆಗೆ ಬದಲಿ ಜಮೀನು ನೀಡಲು ಕಂದಾಯ ಇಲಾಖೆ ಒಪ್ಪಿದೆ. ಕೂಡಲೇ ಈ ಕಾಮಗಾರಿ ನಡೆಸಲು ಮನವಿ ಮಾಡಿದ್ದೇವೆ ಎಂದು ಹೇಳಿದರು.

ಈ ಮಧ್ಯೆ ಕೆಲವು ಜಾಗದಲ್ಲಿ ರೈತರಿಗೆ 51 ಕೋಟಿ ನೀಡಬೇಕಾಗಿದೆ. ಈ ಪೈಕಿ 10 ಕೋಟಿ ಹಣ ನೀಡಲಾಗಿದ್ದು, 41 ಕೋಟಿ ಬಾಕಿ ಇದೆ. ಈ ಜಾಗದ ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ನಡುವೆ ಗೊಂದಲವಿದೆ. ಹೀಗಾಗಿ ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದರು.

ಇದನ್ನೂ ಓದಿ: Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

ಇನ್ನು ದೊಡ್ಡಬಳ್ಳಾಪುರದ ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾನಯನ ಯೋಜನೆ ಬಾಕಿ ಇದ್ದು ಇದರ ಕಾಮಗಾರಿ ಆರಂಭಿಸಲು ತಯಾರಿ ಮಾಡಲಾಗಿದೆ. ಮುಂದಿನ ತಿಂಗಳ ಒಳಗಾಗಿ ನೀರನ್ನು ಹೊರತರಲು ನಿರ್ದೇಶನ ನೀಡಲಾಗಿದೆ. ಮೊದಲ ಹಂತದಲ್ಲಿ 48 ಕಿ.ಮೀ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಈ ಯೋಜನೆಯಿಂದ ಮತ್ತಷ್ಟು ಪ್ರಯೋಜನ ಪಡೆಯುವ ಉದ್ದೇಶದೊಂದಿಗೆ ಇದರ ಜತೆಗೆ ಸಮುದ್ರಕ್ಕೆ ಸೇರುತ್ತಿರುವ ನೀರನ್ನು ಹೇಗೆ ಎಲ್ಲೆಲ್ಲಿ ನಾವು ಹಿಡಿದಿಟ್ಟು ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಅಧ್ಯಯನ ನಡೆಸಲು ಉನ್ನತ ಮಟ್ಟದ ತಾಂತ್ರಿಕ ಸಮಿತಿ ರಚಿಸಲಿದ್ದೇವೆ ಎಂದು ತಿಳಿಸಿದರು.

ಯಡಿಯೂರಪ್ಪ ಪ್ರಕರಣದ ಮಾಹಿತಿ ಇಲ್ಲ:

ಪೋಕ್ಸೋ ಪ್ರಕರಣದಡಿ ಮಾಜಿ ಸಿಎಂ ಯಡಿಯೂರಪ್ಪ ಅವರ ಬಂಧನಕ್ಕೆ ಕೋರ್ಟ್ ವಾರೆಂಟ್ ಜಾರಿ ಮಾಡಿರುವ ಬಗ್ಗೆ ಕೇಳಿದಾಗ, ನಾನು ಸಭೆಯಲ್ಲಿದ್ದ ಕಾರಣ, ನನಗೆ ಹೆಚ್ಚಿನ ಮಾಹಿತಿ ಇಲ್ಲ. ಗೃಹ ಸಚಿವಾಲಯ ಈ ವಿಚಾರವನ್ನು ನಿಭಾಯಿಸಲಿದೆ ಎಂದರು.

ದರ್ಶನ್‌ ಪ್ರಕರಣ ಮುಚ್ಚಿಹಾಕಲು ಯಾರೂ ಸಂಪರ್ಕಿಸಿಲ್ಲ:

ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯನ್ನು ಶಾಮಿಯಾನ ಮೂಲಕ ಮುಚ್ಚಲಾಗಿದೆ. ಈ ಪ್ರಕರಣದಲ್ಲಿ ಸತ್ಯಾಂಶ ಮರೆಮಾಚುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ, ನನ್ನ ಪ್ರಕರಣದ ಅನುಭವದಲ್ಲೇ ಹೇಳುವುದಾದರೆ, ಅಧಿಕಾರಿಗಳು ನನ್ನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವಾಗ ಜನರಿಗೆ ಮರೆಮಾಚಿ ಕರೆದುಕೊಂಡು ಹೋಗುವರು. ಕೆಲವು ಬಾರಿ ಅಭಿಮಾನಿಗಳು ಅಡ್ಡಬರುವುದು, ಜೈಕಾರ ಕೂಗುವುದು ಅಥವಾ ಯಾರಾದರೂ ಕಲ್ಲು ಎಸೆಯಬಹುದು ಎಂಬ ಕಾರಣಕ್ಕೆ ಪೊಲೀಸ್ ಅಧಿಕಾರಿಗಳು ಆ ರೀತಿ ಮಾಡುತ್ತಾರೆ. ಈ ಪ್ರಕರಣದಲ್ಲಿ ಪೊಲೀಸರು ಇದೇ ರೀತಿ ಮುನ್ನಚ್ಚರಿಕೆ ಕ್ರಮ ತೆಗೆದುಕೊಂಡಿರಬಹುದು. ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

ದರ್ಶನ್‌ ಪ್ರಕರಣ ಮುಚ್ಚಿಹಾಕಲು ನಿಮ್ಮ ಸಚಿವರು ಯಾರಾದರೂ ಒತ್ತಡ ಹಾಕಿದ್ದಾರಾ ಎಂಬ ಪ್ರಶ್ನೆಗೆ “ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ. ನನಗೆ ಅಷ್ಟಾಗಿ ಸಂಪರ್ಕವಿಲ್ಲ. ಸಚಿವರ ಪ್ರಯತ್ನದ ಬಗ್ಗೆ ನಿಮ್ಮಿಂದ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸುತ್ತೇನೆ ಎಂದರು.

ಇದನ್ನೂ ಓದಿ: ATM Cash Withdrawal Fee: ಎಟಿಎಂ ನಗದು ಹಿಂಪಡೆಯುವಿಕೆ ಶುಲ್ಕ 21 ರೂ.ಗೆ ಏರಿಕೆ?

ಈ ಪ್ರಕರಣ ರಾಜ್ಯ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸಿದರೆ ನಾನು ಮಧ್ಯಪ್ರವೇಶಿಸಬೇಕಾಗುತ್ತದೆ ಎಂಬ ಕುಮಾರಸ್ವಾಮಿ ಅವರ ಎಚ್ಚರಿಕೆ ಬಗ್ಗೆ ಮಾಧ್ಯಮದವರು ಕೇಳಿದಾಗ, ಈಗಲೂ ಅವರು ಮಧ್ಯಪ್ರವೇಶಿಸಲಿ. ಯಾರು ಬೇಕಾದರೂ ಮಧ್ಯಪ್ರವೇಶ ಮಾಡಲಿ ಎಂದರು.

Continue Reading

ಕರ್ನಾಟಕ

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

ಉಗ್ರರು 2025ರ ವೇಳೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸ್ಲೀಪರ್‌ಸೆಲ್‌ಗಳನ್ನು ನೇಮಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶ ಹೊಂದಿದ್ದರು. ಧಾರ್ಮಿಕ ಮುಖಂಡರು, ದೇಶದ ಯೋಧರು, ಪೊಲೀಸರು ಸೇರಿ ಹಲವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಎಲ್ಲ ಚಟುವಟಿಕೆಗಳಿಗೂ ಉಗ್ರರು ಬಳ್ಳಾರಿಯನ್ನೇ ಪ್ರಮುಖ ಕೇಂದ್ರವನ್ನಾಗಿಸಿಕೊಂಡಿದ್ದರು ಎಂದು ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

VISTARANEWS.COM


on

ISIS Terrorists
Koo

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕುಳಿತು ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಐಸಿಸ್‌ ಉಗ್ರರ ಜಾಲ (Bellary ISIS Module) ರೂಪಿಸಬೇಕು ಎಂದು ಸಂಚು ಹೆಣೆದಿದ್ದ ಏಳು ಶಂಕಿತ ಉಗ್ರರನ್ನು ಬಂಧಿಸಿದ ಎನ್‌ಐಎ ಅಧಿಕಾರಿಗಳು (NIA Officials) ಅವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಪ್ರಸ್ತಾಪವಾಗಿರುವ ವಿಷಯಗಳು ಜನರನ್ನು ಬೆಚ್ಚಿಬೀಳಿಸಿವೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಯುವಕರನ್ನು ಐಸಿಸ್‌ ಉಗ್ರ ಸಂಘಟನೆಗೆ ನೇಮಿಸಬೇಕು ಎಂಬುದು ಉಗ್ರರ ಉದ್ದೇಶವಾಗಿತ್ತು ಅಂಶವು ಚಾರ್ಜ್‌ಶೀಟ್‌ನಿಂದ (NIA Chargesheet) ಬಯಲಾಗಿದೆ.

ಕರ್ನಾಟಕದಲ್ಲಿ ಬಂಧಿತರಾಗಿದ್ದ ಮೊಹಮ್ಮದ್‌ ಮುನಿರುದ್ದೀನ್‌, ಸೈಯದ್‌ ಅಮೀರ್‌, ಎಂ.ಡಿ.ಮುಜಮಿಲ್‌ ಹಾಗೂ ಮಹಾರಾಷ್ಟ್ರದ ನಾಲ್ವರು ಉಗ್ರರ ವಿರುದ್ಧ ನ್ಯಾಯಾಲಯಕ್ಕೆ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಸಿದೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ 50 ಯುವಕರನ್ನು ಸ್ಲೀಪರ್‌ಸೆಲ್‌ಗಳನ್ನಾಗಿ ನೇಮಕ ಮಾಡಿಕೊಂಡು, ದೇಶಾದ್ಯಂತ ಐಸಿಸ್‌ ಉಗ್ರ ಸಂಘಟನೆಯ ಜಾಲವನ್ನು ವಿಸ್ತರಣೆ ಮಾಡಬೇಕು ಎಂಬುದು ಇವರ ಉದ್ದೇಶವಾಗಿತ್ತು. ಬಳ್ಳಾರಿಯ ಮೂವರು ಹಾಗೂ ಮಹಾರಾಷ್ಟ್ರದ ನಾಲ್ವರು ಶಂಕಿತರು ಇಂತಹ ಸಂಚು ರೂಪಿಸಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

Manipur violence

ಐಸಿಸ್‌ ಉಗ್ರ ಸಂಘಟನೆಯ ಸುಲೇಮಾನ್‌ ಅಲಿಯಾಸ್‌ ಮಿನಾಜ್‌ ಎಂಬಾತನಿಂದ ಏಳು ಉಗ್ರರು ಪ್ರತಿಜ್ಞೆ ಪಡೆದುಕೊಂಡಿದ್ದರು. ಭಾರತದಾದ್ಯಂತ ಐಸಿಸ್‌ ಜಾಲವನ್ನು ವಿಸ್ತರಿಸುವುದಾಗಿ ಇವರು ಪ್ರತಿಜ್ಞೆ ಸ್ವೀಕರಿಸಿದ್ದರು. ಐಸಿಸ್‌ ಉಗ್ರ ಸಂಘಟನೆಯ ಜತೆ ನಿರಂತರವಾಗಿ ಇವರು ಸಂಪರ್ಕದಲ್ಲಿದ್ದರು. ಜಿಲ್ಲೆಗಳಲ್ಲಿ ಸ್ಲೀಪರ್ ಸೆಲ್‌ಗಳನ್ನು ಬಳಸಿ ಗೆರಿಲ್ಲಾ ಮಾದರಿಯ ದಾಳಿಗೆ ಷಡ್ಯಂತ್ರ ಮಾಡಿದ್ದರು. ಸುಧಾರಿತ ಸ್ಫೋಟಕ ಸಾಧನಗಳ (IED) ಮೂಲಕ ದಾಳಿ ನಡೆಸುವುದು, ಬಳ್ಳಾರಿಯನ್ನು ಉಗ್ರ ಸಂಘಟನೆಯ ಜಾಲದ ಪ್ರಮುಖ ಕೇಂದ್ರವನ್ನಾಗಿ ರೂಪಿಸುವುದು, ಇಲ್ಲಿಯೇ ಪ್ರಾಯೋಗಿಕವಾಗಿ ಸ್ಫೋಟಿಸುವುದು ಸೇರಿ ಹಲವು ಕುತಂತ್ರಗಳನ್ನು ಹೆಣೆದಿದ್ದರು ಎಂದು ಎನ್‌ಐಎ ಅಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬಂಧಿತ ಉಗ್ರರು 2025ರ ವೇಳೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸ್ಲೀಪರ್‌ಸೆಲ್‌ಗಳನ್ನು ನೇಮಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶ ಹೊಂದಿದ್ದರು. ಧಾರ್ಮಿಕ ಮುಖಂಡರು, ದೇಶದ ಯೋಧರು, ಪೊಲೀಸರು ಸೇರಿ ಹಲವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಇವರ ಬಳಿಯಿಂದ ಹಲವು ಡಿವೈಸ್‌ಗಳ ಜತೆಗೆ ಜಿಹಾದ್‌ ಕುರಿತ ಪುಸ್ತಕಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: NIA Raid: ಮಧ್ಯಪ್ರದೇಶದಲ್ಲಿ ಐಸಿಸ್‌ ಉಗ್ರರ ಜಾಲ ಬಯಲು; ಮಸೀದಿಗಳಲ್ಲೇ ಸಂಚು ರೂಪಿಸುತ್ತಿದ್ದ ಮೂವರ ಬಂಧನ

Continue Reading
Advertisement
Tirupati Temple
ಪ್ರಮುಖ ಸುದ್ದಿ13 mins ago

Tirupati Temple : ತಿರುಪತಿ ದೇಗುಲವನ್ನು ಹಿಂದೂ ನಂಬಿಕೆಯಂತೆ ಪವಿತ್ರಗೊಳಿಸುವೆ; ಸಿಎಂ ಚಂದ್ರಬಾಬು ನಾಯ್ಡು ಶಪಥ

Rape Case
ಪ್ರಮುಖ ಸುದ್ದಿ29 mins ago

Rape Case: 14 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದ ಪ್ರೇಮಿ; 6 ಸ್ನೇಹಿತರಿಂದ ಅತ್ಯಾಚಾರ

Religious Conversion Case
Latest31 mins ago

Religious Conversion Case: ಹಿಂದೂ ಹುಡುಗಿಯ ಖಾಸಗಿ ಫೋಟೊ ತೆಗೆದು ಬ್ಲ್ಯಾಕ್‌ಮೇಲ್‌; ಮತಾಂತರಕ್ಕೆ ಒತ್ತಡ

Kuwait Fire
ವಿದೇಶ32 mins ago

Kuwait Fire: ಕುವೈತ್‌ ಅಗ್ನಿ ದುರಂತ; 45 ಭಾರತೀಯರ ಮೃತದೇಹ ಇಂದು ಸ್ವದೇಶಕ್ಕೆ

Wild Elephant
ಪ್ರಮುಖ ಸುದ್ದಿ40 mins ago

Wild Elephant : ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚರಿಸುವವರಿಗೆ ಎಚ್ಚರಿಕೆ; ಆಗಾಗ ಕಾಣಿಸಿಕೊಳ್ಳುತ್ತಿದೆ ಒಂಟಿ ಸಲಗ

Araku Valley Tour
ಪ್ರವಾಸ60 mins ago

Araku Valley Tour: ಆಂಧ್ರಪ್ರದೇಶದ ಅರಕು ವ್ಯಾಲಿ; ಹಲವು ಅದ್ಭುತಗಳ ಸಂಗಮ

T20 World Cup
ಪ್ರಮುಖ ಸುದ್ದಿ1 hour ago

T20 World Cup : ಒಮನ್ ವಿರುದ್ಧ 8 ವಿಕೆಟ್​ ಜಯ ಗಳಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್​

Junk Food Side Effects
ಆರೋಗ್ಯ1 hour ago

Junk Food Side Effects: ಗೇಮಿಂಗ್‌ ದಾಸರಾದ ಮಕ್ಕಳು ಜಂಕ್‌ ಫುಡ್‌ ವ್ಯಸನಿಗಳಾಗುವ ಸಂಭವ ಹೆಚ್ಚು!

Narendra Modi
ಪ್ರಮುಖ ಸುದ್ದಿ2 hours ago

Narendra Modi: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಯ ಅಪುಲಿಯಾಗೆ ತಲುಪಿದ ಪ್ರಧಾನಿ ಮೋದಿ

karnataka weather Forecast
ಮಳೆ2 hours ago

Karnataka Weather : ಬೆಂಗಳೂರಲ್ಲಿ ಮುಂದುವರಿಯಲಿದೆ ಭರ್ಜರಿ ಮಳೆ; ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌