ಕರ್ನಾಟಕ
Bhagawan controversy | ರಾಮ ಸೀತೆಗೆ ಹೆಂಡ ಕುಡಿಸಿ ತಾನೂ ಕುಡೀತಿದ್ದ: ಮತ್ತೆ ನಾಲಿಗೆ ಹರಿಬಿಟ್ಟ ಭಗವಾನ್
ಪ್ರೊ. ಕೆ.ಎಸ್. ಭಗವಾನ್ ವಿವಾದಿತ ಹೇಳಿಕೆಗಳಿಗೆ ಹೆಸರು. ಅದರಲ್ಲೂ ರಾಮನ ವಿಚಾರದಲ್ಲಂತೂ ಅವರು ಮಾತನಾಡಿದ್ದೆಲ್ಲ ವಿವಾದ. ಈ ಬಾರಿ ರಾಮ ಮತ್ತು ಸೀತೆ ಹೆಂಡ ಕುಡಿಯುತ್ತಿದ್ದರು ಎಂದಿದ್ದಾರೆ.
ಮಂಡ್ಯ: ದೇವರು, ಧರ್ಮದ ವಿಚಾರದಲ್ಲಿ ಆಗಾಗ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೈಸೂರಿನ ಪ್ರೊ. ಕೆ.ಎಸ್. ಭಗವಾನ್ ಇನ್ನೊಂದು ವಿವಾದಿತ ಹೇಳಿಕೆ ನೀಡಿದ್ದಾರೆ. ರಾಮ ರಾಜ್ಯ ಎನ್ನುವುದೊಂದು ಕಥೆ. ರಾಮ ಬರೀ ಪುರೋಹಿತರ ಕಥೆ ಕೇಳಿಕೊಂಡು ಕೂತಿರುತ್ತಿದ್ದ. ಮಧ್ಯಾಹ್ನ ಆಯ್ತು ಅಂದ ಕೂಡಲೇ ಸೀತೆಗೆ ಹೆಂಡ ಕುಡಿಸಿ ತಾನೂ ಕುಡಿತಿದ್ದ ಎಂದೆಲ್ಲ ನಾಲಿಗೆ ಹರಿಬಿಟ್ಟಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಬೇಕಾಬಿಟ್ಟಿ ಮಾತನಾಡಿದ್ದಾರೆ.
ರಾಮರಾಜ್ಯ ಅನ್ನೋದೇ ಕಟ್ಟುಕಥೆ!
ʻʻದೇಶದಲ್ಲಿ ರಾಮರಾಜ್ಯ ಅನ್ನೋ ಪದವನ್ನ ಕಥೆ ಕಟ್ಟಿಬಿಟ್ಟಿದ್ದಾರೆ. ರಾಮರಾಜ್ಯ ಅನ್ನೋ ಮಾತು ಹೆಚ್ಚು ಹರಡಲು ಕಾರಣರಾದವ್ರು ಮಹಾತ್ಮ ಗಾಂಧಿ! ಆದರೆ ವಾಲ್ಮೀಕಿ ರಾಮಾಯಣ, ಉತ್ತರಖಾಂಡ ಓದಿದರೆ ಈ ಮಾತಿಗೆ ಯಾವುದೇ ಆಧಾರವಿಲ್ಲ. ರಾಮ 14 ವರ್ಷ ಕಾಡಿನಲ್ಲಿ ವನವಾಸವಿದ್ದ. ವನವಾಸ ಮುಗಿಸಿ ವಾಪಸ್ ಬಂದು 11 ವರ್ಷ ರಾಜ್ಯಭಾರ ಮಾಡಿದ. ಆದರೆ, ಅವನು ಆಡಳಿತ ಮಾಡಲೇ ಇಲ್ಲ. ಕೇವಲ ಕೆಲವು ಪುರೋಹಿತರ ಜೊತೆ ಆ ಕಥೆ ಈ ಕಥೆ ಹೇಳಿಕೊಂಡು ರಾಮ ಕಾಲ ಕಳೆಯುತ್ತಿದ್ದʼʼ ಎಂದಿದ್ದಾರೆ ಕೆ.ಎಸ್. ಭಗವಾನ್.
ಹೆಂಡತಿ ಜತೆ ಕುಳಿತು ಹೆಂಡ ಕುಡಿಯುತ್ತಿದ್ದ!
ಜಗತ್ತು ಶ್ರೀರಾಮ-ಸೀತೆಯರ ಸಂಬಂಧದ ಬಗ್ಗೆ ದೈವಿಕವಾದ ಕಥೆಗಳನ್ನು ಹೇಳುತ್ತಿದ್ದರೆ ಭಗವಾನ್ ಅವರ ಪ್ರಕಾರ, ಮಧ್ಯಾಹ್ನದ ಬಳಿಕ ರಾಮ ಸೀತೆಗೆ ಹೆಂಡವನ್ನು ಕುಡಿಸಿ ಅವನೂ ಕುಡಿಯುತ್ತಿದ್ದ! ಇದಕ್ಕೆಲ್ಲ ದಾಖಲೆಗಳಿವೆ. ಇವೆಲ್ಲ ನನ್ನ ಮಾತುಗಳಲ್ಲ, ವಾಲ್ಮೀಕಿ ರಾಮಾಯಣ, ಉತ್ತರಖಾಂಡದಲ್ಲಿ ಇರುವ ಮಾತುಗಳು ಎಂದಿದ್ದಾರೆ.
೧೧ ವರ್ಷದ ಆಡಳಿತದಲ್ಲಿ ಮೂರು ಪ್ರಮುಖ ಘಟನೆ
ʻʻರಾಮನ 11 ವರ್ಷದ ಆಡಳಿತದಲ್ಲಿ ಮೂರು ಪ್ರಮುಖ ಘಟನೆಗಳು ನಡೆದವುʼʼ ಎನ್ನುತ್ತಾರೆ ಭಗವಾನ್.
ʻʻಯಾರೋ ಸೀತೆ ಮೇಲೆ ಅಪವಾದ ಮಾಡಿದ ಅನ್ನೋ ಕಾರಣ ಇಟ್ಟುಕೊಂಡು ಗರ್ಭಿಣಿ ಸೀತೆಯನ್ನು ರಾಮ ಕಾಡಿಗೆ ಓಡಿಸಿಬಿಟ್ಟ. ಸೀತೆಗೆ ತನ್ನ ಬಗ್ಗೆ ಸಮರ್ಥಿಸಿಕೊಳ್ಳಲು ಒಂದು ಅವಕಾಶವನ್ನೂ ಕೊಡಲಿಲ್ಲ. ಯಾರಾದರೂ ಕೊಲೆ ಮಾಡಿದರೂ ಅವರ ಅಭಿಪ್ರಾಯ ಕೇಳಲು ಅವಕಾಶವಿರುತ್ತದೆʼʼ ಎಂದರು ಭಗವಾನ್.
ʻʻಒಂದು ವೇಳೆ ಕಾಡಿನಲ್ಲಿ ವಾಲ್ಮೀಕಿ ಸಿಗದೇ ಇದ್ದಿದ್ದರೆ ಗರ್ಭಿಣಿ ಸೀತೆ ಕಥೆ ಏನಾಗ್ತಿತ್ತು? ಮುಂದೆ 16-17 ವರ್ಷ ಸೀತೆ ಏನಾದಳು ಅನ್ನೋದನ್ನೇ ರಾಮ ಕೇಳಲಿಲ್ಲʼʼ ಎನ್ನುವುದು ಭಗವಾನ್ ಅವರ ಮತ್ತೊಂದು ಆರೋಪ.
ʻʻದುರ್ವಾಸ ಮುನಿಗಳಿಗೆ ಊಟ ಕೊಟ್ಟು ಗೌಪ್ಯ ಸಭೆ ವೇಳೆ ಒಳಗೆ ಬಿಟ್ಟಿದ್ದಕ್ಕೆ ಲಕ್ಷಣನನ್ನೇ ರಾಮ ಗಡಿಪಾರು ಮಾಡಿದ. ಕೊನೆಗೆ ಲಕ್ಷಣ, ನದಿ ದಡದ ಮೇಲೆ ಅತ್ಕೊಂಡು ಸತ್ತೋದಾʼʼ ಎನ್ನುವುದು ಭಗವಾನ್ ವಿವರಣೆ.
ರಾಮ ಆದರ್ಶ ಹೇಗಾಗುತ್ತಾನೆ?
ಇದಷ್ಟೇ ಅಲ್ಲ ತಪಸ್ಸು ಮಾಡ್ತಿದ್ದ ಶೂದ್ರ ಶಂಭುಕನನ್ನು ರಾಮ ಕತ್ತಿಯಲ್ಲೆ ಕಡಿದು ಹಾಕಿದ್ದಾನೆ. ಇವೆಲ್ಲವೂ ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಾಗಿದೆ. ಇದನ್ನು ಮುಂದಿಟ್ಟುಕೊಂಡು ನೀವು ಹೇಗೆ ರಾಮನನ್ನು ಆದರ್ಶ ವ್ಯಕ್ತಿ ಅಂತ ಕರೆಯುತ್ತೀರಿ? ನಿಮಗೆ ರಾಮನ ಬಗ್ಗೆ ಗೊತ್ತಿಲ್ಲದೆ ಮಕ್ಕಳಿಗೆಲ್ಲ ರಾಮ ಅಂತ ಹೆಸರಿಟ್ಟಿದ್ದೀರಿ. ಜಯರಾಮ, ಅಭಿರಾಮ ಅಂತೆಲ್ಲ ಹೆಸರಿಟ್ಟಿದ್ದೀರಿ. ಹೆಂಗಸರು ಅಯ್ಯೋ ರಾಮ ರಾಮ ಅಂತೆಲ್ಲ ಬೈಯುತ್ತಾರೆʼʼ ಎಂದು ಹೇಳಿದರು ಭಗವಾನ್.
ಇದನ್ನೂ ಓದಿ | Grant of bail | ರಾಮಮಂದಿರ ಏಕೆ ಬೇಡ ಕೃತಿ ವಿವಾದ; ಸಾಹಿತಿ ಕೆ.ಎಸ್. ಭಗವಾನ್ಗೆ ಜಾಮೀನು ಮಂಜೂರು
ಉಡುಪಿ
Weather Report : ನಾಳೆವರೆಗೂ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ
Rain News : ಉತ್ತರ ಕರ್ನಾಟಕಕ್ಕೆ ಭಾರಿ ಮಳೆ ಮುನ್ಸೂಚನೆ ಇದ್ದು, ಮುಂಗಾರು ಚುರುಕುಗೊಂಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಲ್ಲಿ (Weather report) ಸಾಮಾನ್ಯವಾಗಿರಲಿದೆ.
ಬೆಂಗಳೂರು: ಸೆ.23-24ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಲ್ಲಿ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
ಉತ್ತರ ಕರ್ನಾಟಕದಲ್ಲಿ ಬಿಡುವೇ ಇಲ್ಲ
ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚೆನಯನ್ನು (weather report) ನೀಡಲಾಗಿದೆ. ಎಡಬಿಡದೆ ಮಳೆ ಸುರಿಯಲಿದ್ದು, ಜತೆಗೆ ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.
ದಕ್ಷಿಣ ಒಳನಾಡಲ್ಲಿ ಲಘು ಮಳೆ
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯಲ್ಲಿ ತಗ್ಗಿದ ಅಬ್ಬರ
ಕರಾವಳಿಯಲ್ಲಿ ಮಳೆ ಅಬ್ಬರ ತಗ್ಗಿದೆ. ಆದಾಗ್ಯೂ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.
ಬೆಂಗಳೂರಲ್ಲಿ ಸಂಜೆಗೆ ಮಳೆ ಕಾಟ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಿಸಿಲಿನ ತಾಪ ಜಾಸ್ತಿ ಇದ್ದರೆ, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 31 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ಸೆಪ್ಟೆಂಬರ್ 23ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನ ಮಟ್ಟ (ಅಡಿಗಳಲ್ಲಿ) | ಒಳ ಹರಿವು (ಕ್ಯೂಸೆಕ್) | ಹೊರ ಹರಿವು (ಕ್ಯೂಸೆಕ್) |
ಕೆಆರ್ಎಸ್ ಜಲಾಶಯ (KRS Dam) | 38.04 | 20.61 | 6016 | 5735 |
ಆಲಮಟ್ಟಿ ಜಲಾಶಯ (Almatti Dam) | 519.6 | 114.73 | 405 | 405 |
ಮಲಪ್ರಭಾ ಜಲಾಶಯ (Malaprabha Dam) | 633.80 | 21.44 | 0 | 194 |
ಘಟಪ್ರಭಾ ಜಲಾಶಯ (Ghataprabha Dam) | 662.91 | 42.40 | 2311 | 181 |
ತುಂಗಾಭದ್ರಾ ಜಲಾಶಯ (Tungabhadra Dam) | 497.71 | 62.92 | 4378 | 10316 |
ಭದ್ರಾ ಜಲಾಶಯ (Bhadra Dam) | 657.73 | 43.23 | 290 | 290 |
ಕಬಿನಿ ಜಲಾಶಯ (Kabini Dam) | 696.13 | 14.80 | 3166 | 4390 |
ಹಾರಂಗಿ (Harangi Dam) | 871.38 | 8.06 | 1335 | 2791 |
ಲಿಂಗನಮಕ್ಕಿ (Linganamakki Dam) | 554.44 | 68.30 | 5493 | 5393 |
ಹೇಮಾವತಿ (Hemavathi Dam) | 890.58 | 17.66 | 4986 | 1300 |
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Ganesha Festival : ಹಿಂದು ಮಹಾಸಭಾ ಗಣೇಶೋತ್ಸವದಲ್ಲಿ ತುಂಡು ಬಟ್ಟೆ ತೊಟ್ಟು ಯುವತಿ ಪ್ರಚೋದಕ ಡ್ಯಾನ್ಸ್!
Ganesha Festival : ಕೊಪ್ಪಳದ ಹಗರಿಬೊಮ್ಮನಹಳ್ಳಿಯಲ್ಲಿ ಗಣೇಶೋತ್ಸವದ ವೇಳೆ ಯುವತಿಯೊಬ್ಬಳ ಪ್ರಚೋದಕ ಡ್ಯಾನ್ಸ್ ಸುದ್ದಿ ಮಾಡಿದೆ. ಕೆಲವರು ವಿರೋಧಿಸಿದರೆ ಇನ್ನು ಕೆಲವರು ಇದು ಕಾಮನ್ ಅಂದಿದ್ದಾರೆ.
ಕೊಪ್ಪಳ: ಹಿಂದು ಮಹಾಸಭಾ (Koppala Hindu Mahasabha) ಆಯೋಜಿಸಿರುವ ಕೊಪ್ಪಳ ಗಣೇಶೋತ್ಸವದಲ್ಲಿ (Koppala Ganeshothsava) ಯುವತಿಯೊಬ್ಬಳು ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ (Young lady dance in Half dress) ಮಾಡಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ. ಸಂಸ್ಕೃತಿ ಬಗ್ಗೆ ಮಾತನಾಡುವವರು ತುಂಡು ಬಟ್ಟೆ ಡ್ಯಾನ್ಸ್ಗೆ (Obscene dance) ಹೇಗೆ ಅನುಮತಿ ಕೊಟ್ಟರು (Ganesha festival) ಎಂಬ ಜನ ಪ್ರಶ್ನೆ ಮಾಡುತ್ತಿದ್ದಾರೆ.
ಕೊಪ್ಪಳದ ಕಾವ್ಯಾನಂದ ಪಾರ್ಕಿನಲ್ಲಿ ಪ್ರತಿಷ್ಠಾಪಿಸಿರುವ ಗಣೇಶನ ಉತ್ಸವದ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ಮನೋರಂಜನೆ ಕಾರ್ಯಕ್ರಮ (Entertainment Programme) ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಯುವತಿಯೊಬ್ಬಳು ತುಂಡು ಬಟ್ಟೆ ತೊಟ್ಟು ಹಿಂದಿ ಹಾಡಿಗೆ ಪ್ರಚೋದಕವಾಗಿ ಕುಣಿದಿದ್ದಳು (Provocative dance). ಸಂಸ್ಕೃತಿಯ ಬಗ್ಗೆ ಮಾತನಾಡುವವರು ತುಂಡು ಬಟ್ಟೆಯ ಡ್ಯಾನ್ಸ್ ಆಯೋಜನೆ ಮಾಡಿದ್ದು ಎಷ್ಟು ಸರಿ, ಇದಕ್ಕೆಲ್ಲ ಗಣೇಶನ ವೇದಿಕೆಯೇ ಬೇಕಾಗಿತ್ತಾ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಡ್ಯಾನ್ಸ್ ಆಯೋಜನೆ ಕುರಿತು ಅಸಮಾಧಾನ ವ್ಯಕ್ತವಾಗಿದೆ.
ಯುವತಿಯ ತಪ್ಪಿಲ್ಲ, ಆಯೋಜಕರದೇ ತಪ್ಪು
ಡ್ಯಾನ್ಸ್ ಮಾಡಿದ ಯುವತಿಯ ತಪ್ಪಿಲ್ಲ, ಈ ರೀತಿಯ ನೃತ್ಯಗಳು ಈಗ ಎಲ್ಲ ಕಡೆ ಸಾಮಾನ್ಯವಾಗಿದೆ. ಮಕ್ಕಳು ಇವುಗಳನ್ನು ಪ್ರದರ್ಶಿಸುತ್ತಾರೆ. ಆದರೆ, ಇದನ್ನು ಗಣೇಶೋತ್ಸವದ ವೇದಿಕೆಯಲ್ಲಿ ನಡೆಸಲು ಆಯೋಜಕರು ಹೇಗೆ ಪರ್ಮಿಷನ್ ಕೊಟ್ಟರು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ಆಯೋಜಕರಿಗೆ ಯಾವ ರೀತಿಯ ನೃತ್ಯ ಎನ್ನುವ ಬಗ್ಗೆ ಆರಂಭದಲ್ಲಿ ಮಾಹಿತಿ ಇರುವುದಿಲ್ಲ, ನೃತ್ಯ ಮಾಡುವವರು ವೇದಿಕೆ, ಸಮಯ, ಸಂದರ್ಭ ನೋಡಿಕೊಂಡು ತಮ್ಮ ಕಲೆಯನ್ನು ಪ್ರದರ್ಶನ ಮಾಡಬೇಕು ಎಂಬ ವಾದವನ್ನೂ ಮಂಡಿಸಿದ್ದಾರೆ. ಇದೇ ವೇಳೆ ಕೆಲವರು ಇಂಥದ್ದೆಲ್ಲ ನಡೀತದೆ, ಇದರಲ್ಲಿ ತಲೆ ಹೋಗುವಂತದ್ದು ಏನೂ ಇಲ್ಲ. ನಮ್ಮ ಮಕ್ಕಳೇ ಅಲ್ಲವೇ ಡ್ಯಾನ್ಸ್ ಮಾಡಿದ್ದು ಎಂದು ಸಮಾಧಾನ ಹೇಳಿದ್ದಾರೆ. ಒಟ್ಟಿನಲ್ಲಿ ಗಣೇಶನ ವೇದಿಕೆಯ ಮುಂದಿನ ಪ್ರಚೋದಕ ಡ್ಯಾನ್ಸ್ ಸುದ್ದಿ ಮಾಡಿದೆ.
ಇದನ್ನೂ ಓದಿ: Communal Harmony : ದರ್ಗಾದಲ್ಲೇ ಗಣಪತಿ ಪ್ರತಿಷ್ಠಾಪನೆ; ಘಂಟೆ ಬಡಿದು ಜೈ ಗಣೇಶ ಎಂದ ಮುಸ್ಲಿಮರು, ಎಂಥಾ ಸೌಹಾರ್ದ!
ಹಗರಿಬೊಮ್ಮನಹಳ್ಳಿಯಲ್ಲಿ ಡಿಜೆ ಸದ್ದಿಗೆ ಹಾರಿ ಹೋಯಿತು ಯುವಕನ ಪ್ರಾಣ
ಇದು ಕೊಪ್ಪಳದ ಕಥೆಯಾದರೆ ಅತ್ತ ವಿಜಯನಗರ ಜಿಲ್ಲೆ ಹಗರಿಬೊಮ್ಮನ ಹಳ್ಳಿ ಪಟ್ಟಣದ ಭೋವಿ ಕಾಲನಿಯಲ್ಲಿ ಗಣೇಶೋತ್ಸವದ ಶೋಭಾಯಾತ್ರೆ ಸಂದರ್ಭದಲ್ಲಿ ಡಿ.ಜೆ. ಸೌಂಡ್ಗೆ ಯುವಕನ ಪ್ರಾಣವೇ ಹಾರಿ ಹೋಗಿದೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬೋವಿ ಕಾಲೊನಿಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ಜಮೀರ್ ಪಿಂಜಾರ( 22) ಎಂಬ ಯುವಕ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿ ಅತಿಯಾಗಿ ಮದ್ಯ ಸೇವನೆ ಮಾಡಿದ್ದ ಎನ್ನಲಾಗಿದೆ. BSNL ಕಚೇರಿ ಬಳಿ ಮೆರವಣಿಗೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಯುವಕರು ತಾಲೂಕಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಮಾರ್ಗಮದ್ಯದಲ್ಲಿ ಮೃತಪಟ್ಟಿದ್ದಾನೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇತ್ತ ಹೊಸಪೇಟೆಯಲ್ಲಿ ಗಣೇಶೋತ್ಸವದ ವೇಳೆ ಯುವಕರ ರಣೋತ್ಸಾಹವನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಡಿಜೆ ಸೌಂಡ್ ಗೆ ಕುಣಿದು ಕುಪ್ಪಳಿಸಿದ ಯುವಕರನ್ನು ನಿಯಂತ್ರಿಸಲು ಸ್ವತಃ ವಿಜಯನಗರ ಎಸ್ಪಿ ಶ್ರೀ ಹರಿಬಾಬು ಬಿಎಲ್, ಡಿವೈಎಸ್ಪಿ ಮಂಜುನಾಥ್ ತಳವಾರ್, ಹೊಸಪೇಟೆ ಸಿಪಿಐ ಬಾಲನಗೌಡ ಅವರೇ ಕಣಕ್ಕೆ ಇಳಿಬೇಕಾಯಿತು. ಎಸ್ಪಿ ಶ್ರೀಹರಿಬಾಬು ಬಿಎಲ್ ಸ್ವತಃ ತಾವೇ ಯುವಕರನ್ನು ಹೊರದಬ್ಬಿದ ದೃಶ್ಯಗಳು ವೈರಲ್ ಆಗಿವೆ.
Live News
Karnataka live news: ರಾಜ್ಯದ ಇಂದಿನ ಮಹತ್ವದ ಸುದ್ದಿಗಳು: ವಿಸ್ತರಿಸುತ್ತಿದೆ ಕಾವೇರಿ ಹೋರಾಟ, ಮಂಡ್ಯ ಬಂದ್
ಇಂದು ಮಂಡ್ಯ ಬಂದ್ ನಡೆದಿದೆ. ರಾಜದಾನಿಯೂ ಸೇರಿದಂತೆ ಇಡೀ ರಾಜ್ಯಕ್ಕೆ ಹೋರಾಟ (Cauvery protest) ವಿಸ್ತರಿಸುತ್ತಿದೆ. ರಾಜ್ಯದ ಇಂದಿನ ಇನ್ನಷ್ಟು ಮಹತ್ವದ ಸುದ್ದಿಗಳನ್ನು (Karnataka live news) ಓದಲು ಇಲ್ಲಿ ಗಮನಿಸಿ.
ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಇಂದು ಮಂಡ್ಯ ಬಂದ್ ನಡೆದಿದೆ. ರಾಜದಾನಿಯೂ ಸೇರಿದಂತೆ ಇಡೀ ರಾಜ್ಯಕ್ಕೆ ಹೋರಾಟ (Cauvery protest) ವಿಸ್ತರಿಸುತ್ತಿದೆ. ರಾಜ್ಯದ ಇಂದಿನ ಇನ್ನಷ್ಟು ಮಹತ್ವದ ಸುದ್ದಿಗಳನ್ನು (Karnataka live news) ಓದಲು ಇಲ್ಲಿ ಗಮನಿಸಿ.
ಕರ್ನಾಟಕ
Cauvery Protest: ಸಿಲಿಕಾನ್ ಸಿಟಿಯಲ್ಲೂ ಕಾವೇರುತ್ತಿದೆ ಕಾವೇರಿ ಕಿಚ್ಚು; ಇಂದು ಬೆಂಗಳೂರು ಬಂದ್ ಫಿಕ್ಸ್?
ಕಳೆದ ಮೂರು ದಿನಗಳಿಂದ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ (Cauvery protest) ಮಾಡುತ್ತಿದ್ದಾರೆ. ಇಂದು ಬೆಂಗಳೂರು ಅಥವಾ ಕರ್ನಾಟಕ ಬಂದ್ (Karnataka bundh) ದಿನಾಂಕವೂ ಘೋಷಣೆ ಮಾಡುವ ಸಾಧ್ಯತೆ ಇದೆ.
ಬೆಂಗಳೂರು: ರಾಜಧಾನಿಯಲ್ಲಿ ಇಂದು ಕಾವೇರಿ ನೀರಿನ (Cauvery dispute) ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ (Supreme court) ಪ್ರತಿಭಟಿಸಿ ಸಾಲು ಸಾಲು ಪ್ರತಿಭಟನೆಗಳು (Cauvery Protest) ನಡೆಯಲಿವೆ. ಬೆಂಗಳೂರು ಮತ್ತು ಕರ್ನಾಟಕ ಬಂದ್ಗೂ ಇಂದೇ ದಿನ ಫಿಕ್ಸ್ ಆಗುವ ಸಾಧ್ಯತೆ ಇದೆ.
ಕಾವೇರಿಗಾಗಿ ಇಂದು ಕನ್ನಡಪರ ಹೋರಾಟಗಾರರು ರೋಡಿಗಿಳಿಯಲಿದ್ದು, ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಿದ್ದಾರೆ. ಕಳೆದ ಮೂರು ದಿನಗಳಿಂದ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಇಂದು ಬೆಂಗಳೂರು ಅಥವಾ ಕರ್ನಾಟಕ ಬಂದ್ ದಿನಾಂಕವೂ ಘೋಷಣೆ ಮಾಡುವ ಸಾಧ್ಯತೆ ಇದೆ.
ಕರ್ನಾಟಕ ಜಲಸಂರಕ್ಷಣಾ ಸಮಿತಿಯಿಂದ ಇಂದು ಬೆಳಗ್ಗೆ 11 ಗಂಟೆಗೆ ಫ್ರೀಡಂಪಾರ್ಕ್ನಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ 100ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಲಿವೆ. ಬೆಂಗಳೂರಿನ ಪ್ರಮುಖ ಅಪಾರ್ಟ್ಮೆಂಟ್ ಅಸೋಸಿಯೇಷನ್, ಲೇಔಟ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘ, ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಐಟಿ ಕಂಪನಿಗಳು ಭಾಗಿಯಾಗಲಿವೆ. ಸಭೆ ಬಳಿಕ ಹೋರಾಟದ ರೂಪುರೇಷೆಯ ಬಗ್ಗೆ ನಿರ್ಧಾರವಾಗಲಿದೆ.
ಹಲವು ಪ್ರತಿಭಟನೆಗಳು
ರಾಜಧಾನಿಯಲ್ಲಿ ಇಂದು ಹಲವು ಸಂಘಟನೆಗಳಿಂದ ಪ್ರಮುಖ ಪ್ರತಿಭಟನೆಗಳು ನಡೆಯಲಿವೆ.
1) ಬೆಳಿಗ್ಗೆ 10.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದಿಂದ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಕುವೆಂಪು ಪ್ರತಿಮೆ ಮುಂದೆ ಪ್ರತಿಭಟನೆ ನಡೆಯಲಿದ್ದು ಕರವೇಯ ನೂರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
2) ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದಿಂದ ಬೆಳಿಗ್ಗೆ 10 ಗಂಟೆಗೆ ಕರ್ನಾಟಕ- ತಮಿಳುನಾಡು ಅತ್ತಿಬೆಲೆ ಗಡಿ ಬಂದ್ ಆಗಲಿದ್ದು, ಕರವೇಯ ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
3) ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರಿನಿಂದ ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ನಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.
4) ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನಿಂದ ಬೆಳಿಗ್ಗೆ 11.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಪ್ರತಿಭಟನೆ ನಡೆಯಲಿದೆ.
5) ಮಧ್ಯಾಹ್ನ 1-30 ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸಾ.ರಾ ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರುಗಳಾದ ಪ್ರವೀಣ್ ಕುಮಾರ್ ಶೆಟ್ಟಿ, ಶಿವರಾಮೇಗೌಡ, ಕನ್ನಡಸೇನೆಯ ರಾಜ್ಯಾಧ್ಯಕ್ಷ ಕೆ.ಆರ್ ಕುಮಾರ್, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್, ಕನ್ನಡಪರ ಹೋರಾಟಗಾರ ಹೆಚ್.ವಿ ಗಿರೀಶ್ ಗೌಡ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್
-
ಪ್ರಮುಖ ಸುದ್ದಿ16 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ22 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಸುವಚನ6 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಗ್ಯಾಜೆಟ್ಸ್19 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ದೇಶ17 hours ago
Prisoners Escape: ವ್ಯಾನ್ನಿಂದ ಜಿಗಿದು ಇಬ್ಬರು ಕೈದಿಗಳು ಪರಾರಿ; ಕತ್ತೆ ಕಾಯುತ್ತಿದ್ದ ಪೊಲೀಸರು!
-
ಕ್ರೈಂ17 hours ago
Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್; ಖಾನಾಪುರದಲ್ಲಿ ಬಿಗುವಿನ ವಾತಾವರಣ
-
ಕರ್ನಾಟಕ12 hours ago
Heart Attack: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಹಾರಿಹೋಯ್ತು ಯುವಕನ ಪ್ರಾಣ!
-
ಉಡುಪಿ15 hours ago
Dr HS Shetty : ಯಶಸ್ವೀ ಉದ್ಯಮಿ ಡಾ. ಎಚ್.ಎಸ್ ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ; ಸಾಧನೆ, ಸೇವೆಯ ವಿಸ್ತಾರಕ್ಕೆ ನಮಿಸಿದ ಜನ