Bhalki Election Results: ಭಾಲ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಈಶ್ವರ ಖಂಡ್ರೆಗೆ ಗೆಲುವು - Vistara News

Latest

Bhalki Election Results: ಭಾಲ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಈಶ್ವರ ಖಂಡ್ರೆಗೆ ಗೆಲುವು

2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ 84,673 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು.

VISTARANEWS.COM


on

bhalki winner congress eshwar khandre
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೀದರ್: ಬೀದರ್‌ ಜಿಲ್ಲೆಯ ಭಾಲ್ಕಿ ವಿಧಾನಸಭೆ ಕ್ಷೇತ್ರದಲ್ಲಿ (Bhalki Election results) ಕಾಂಗ್ರೆಸ್‌ ಪಕ್ಷದ ಈಶ್ವರ ಖಂಡ್ರೆ ಅವರು ಗೆಲುವು ದಾಖಲಿಸಿದ್ದಾರೆ.

ಇಲ್ಲಿ ಜೆಡಿಎಸ್‌ನಿಂದ ರೌಫ್‌ ಪಟೇಲ್‌, ಬಿಜೆಪಿಯಿಂದ ಪ್ರಕಾಶ್‌ ಖಂಡ್ರೆ, ಕಾಂಗ್ರೆಸ್‌ನಿಂದ ಈಶ್ವರ ಬಿ. ಖಂಡ್ರೆ, ಆಪ್‌ನಿಂದ ತುಕಾರಾಮ ಹಜಾರೆ ಸ್ಪರ್ಧಿಸಿದ್ದರು.

2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ 84,673 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಡಿ.ಕೆ ಸಿದ್ರಾಮ 63,235 ಮತಗಳನ್ನು ಪಡೆದು 21438 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಈ ಕ್ಷೇತ್ರದಲ್ಲಿರುವ ಒಟ್ಟು ಮತಗಳು 222,472. ಪುರುಷರ ಸಂಖ್ಯೆ 116,904 ಹಾಗೂ 105,560 ಮಹಿಳೆಯರು.

ಅಭ್ಯರ್ಥಿಗಳು ಗಳಿಸಿದ ಮತಗಳು:

ಈಶ್ವರ ಖಂಡ್ರೆ (ಕಾಂಗ್ರೆಸ್)-‌ 99,451
ಪ್ರಕಾಶ್‌ ಖಂಡ್ರೆ (ಬಿಜೆಪಿ)- 71,745
ರೌಫ್‌ ಪಟೇಲ್‌ (ಜೆಡಿಎಸ್)-‌ 636

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

ಆಸ್ತಿಯನ್ನು ವಶಪಡಿಕೊಳ್ಳಲು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ವಯಸ್ಸಿನ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸಿರುವ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿ ಜನಾಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

By

Viral Video
Koo

ನವದೆಹಲಿ: ಅಪ್ರಾಪ್ತ ವಯಸ್ಸಿನ ಬಾಲಕಿಗೆ (minor girl) ದುಷ್ಕರ್ಮಿಯೊಬ್ಬ ಅಮಾನುಷವಾಗಿ ಥಳಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸುವ ವ್ಯಕ್ತಿಯೊಬ್ಬ ಹುಡುಗಿ ಮೇಲೆ ಹಲ್ಲೆ ಮಾಡಿರುವುದನ್ನು ಈ ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ.

ಲಕ್ನೋದ ಬಿ-376 ವಿಶಾಲ್ ಖಂಡ್‌ನ ಗೋಮತಿ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ವಿಡಿಯೋವನ್ನು ಆದಿತ್ಯ ಕಮಲ್ ಪಾಂಡೆ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸುತ್ತಾನೆ. ಫೋನ್‌ನಲ್ಲಿ ಯಾರೊಂದಿಗಾದರೂ ಮಾತನಾಡುವಂತೆ ಮಾಡುತ್ತಾನೆ. ಈ ಅಪ್ರಾಪ್ತ ಬಾಲಕಿ ಯಾಕೆ ಹಾಗೆ ಹೇಳುತ್ತೀರಿ ಎಂದು ಪ್ರಶ್ನಿಸಿದಾಗ ಆತ ಬಾಲಕಿಗೆ ಕಪಾಳಮೋಕ್ಷ ಮಾಡಿದ್ದಾನೆ. ಬಾಲಕಿಯ ಫೋನ್‌ಗಳನ್ನು ಒಡೆಯಲಾಗಿದೆ, ಬಟ್ಟೆ ಹರಿದು ಹಾಕಲಾಗಿದೆ. ಆಕೆಗೆ ಸಾಕಷ್ಟು ಹಿಂಸೆ ನೀಡಲಾಗಿದೆ. ವ್ಯಕ್ತಿಯು ರಿವಾಲ್ವರ್ ಕೂಡ ಹೊಂದಿದ್ದ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: MS Dhoni Birthday: ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಪತ್ನಿ; ವಿಡಿಯೊ ವೈರಲ್​

ಆರೋಪಿಯನ್ನು ಬಂಧಿಸಿರುವ ಕುರಿತು ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋದಲ್ಲಿರುವ ಬಾಲಕಿಯನ್ನು ದೀಪಶಿಖಾ ತಿವಾರಿ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿ ಅವರ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದಾರೆ ಎನ್ನಲಾಗಿದೆ.

ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ

ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎಂದು ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳ ಶಾಲೆಗಳಲ್ಲಿ ಜಾರಿಗೆ ತಂದಿರುವ ಮಧ್ಯಾಹ್ನ ಬಿಸಿಯೂಟದ ಯೋಜನೆಗಳಲ್ಲೂ ಅಧಿಕಾರಿಗಳು ಕಳ್ಳಾಟ ಆಡುತ್ತಿದ್ದಾರೆ. ಕೆಲವೆಡೆ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬಿಸಿಯೂಟ ನೀಡುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ ಛತ್ತೀಸ್‌ಗಢದ ಶಾಲೆಯೊಂದರಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ಅನ್ವಯ ಬರೀ ಅನ್ನ ಹಾಗೂ ಅರಿಶಿಣ ಮಿಶ್ರಣ ಮಾಡಿ ಅದನ್ನೇ ನೀಡಲಾಗಿದೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯ ಬಿಜಾಕುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಇಷ್ಟೊಂದು ಕಳಪೆ ಆಹಾರವನ್ನು ನೀಡಲಾಗುತ್ತಿದೆ. ಮಕ್ಕಳು ಅರಿಶಿಣ ಮಿಕ್ಸ್‌ ಆಗಿರುವ ಅನ್ನವನ್ನು ಸೇವಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 43 ವಿದ್ಯಾರ್ಥಿಗಳು ಓದುತ್ತಿದ್ದು, ಬಹುತೇಕರು ಬಡವರ ಮಕ್ಕಳಾಗಿದ್ದಾರೆ. ಆದರೆ, ಇವರಿಗೆ ಕಳೆದ ಒಂದು ವಾರದಿಂದ ಬಿಸಿಯೂಟದಲ್ಲಿ ತರಕಾರಿ ನೀಡದೆ, ಬರೀ ಅರಿಶಿಣ ಮಿಶ್ರಣ ಆಗಿರುವ ಅನ್ನ ನೀಡಲಾಗುತ್ತಿದೆ. ಇದನ್ನು ಶಾಲೆಯ ಅಧಿಕಾರಿಗಳೇ ದೃಢಪಡಿಸಿದ್ದಾರೆ.

ಒಂದು ವಾರದಿಂದ ತರಕಾರಿ ಪೂರೈಸುವವರು ಶಾಲೆಗೆ ತರಕಾರಿ ಪೂರೈಸುತ್ತಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ತರಕಾರಿ ವ್ಯವಸ್ಥೆ ಆಗಿಲ್ಲ. ಹಾಗಾಗಿ, ಮಕ್ಕಳಿಗೆ ಅನ್ನ-ಸಾರು ಇಲ್ಲವೇ ಅರಿಶಿಣ ಮಿಶ್ರಿತ ಅನ್ನ ನೀಡುತ್ತಿದ್ದೇವೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ.

ಇವರ ಆರೋಪಗಳಿಗೆ ತರಕಾರಿ ಪೂರೈಸುವವರು ಪ್ರತಿಕ್ರಿಯಿಸಿದ್ದು, ಶಾಲೆಗೆ ತರಕಾರಿ ಪೂರೈಸಿದ್ದಕ್ಕೆ ಹಲವು ತಿಂಗಳಿಂದ ಹಣ ನೀಡಿಲ್ಲ. ಇದರಿಂದಾಗಿ ನಾವು ತರಕಾರಿ ಪೂರೈಸುತ್ತಿಲ್ಲ ಎಂದು ಹೇಳಿದ್ದಾರೆ.

Continue Reading

ಧಾರ್ಮಿಕ

Vastu Tips: ಆರ್ಥಿಕ ಸಂಕಷ್ಟ ದೂರವಾಗಿ ಶ್ರೀಮಂತರಾಗಬೇಕೆ? ಈ ವಾಸ್ತು ನಿಯಮ ಪಾಲಿಸಿ

ಜೀವನವು ಸುಗಮವಾಗಿ ಮುಂದುವರಿಯಲು ಮತ್ತು ಬೆಳೆಯಲು ಕೆಲವೊಂದು ತತ್ತ್ವಗಳಿಗೆ ಬದ್ಧವಾಗಿರಬೇಕಾಗುತ್ತದೆ. ಅದರಲ್ಲಿ ಆರ್ಥಿಕ ತತ್ತ್ವವೂ ಒಂದು. ಕೆಲವೊಂದು ವಾಸ್ತು ನಿಯಮಗಳನ್ನು (Vastu Tips) ನಾವು ನಿರ್ಲಕ್ಷಿಸುವುದರಿಂದ ಜೀವನದಲ್ಲಿ ಆರ್ಥಿಕ ಸಮಸ್ಯೆಗಳು ಬಾಧಿಸುತ್ತವೆ. ಹಾಗಾದರೆ ಆರ್ಥಿಕ ಸಂಕಷ್ಟ ದೂರವಾಗಿ ಆರ್ಥಿಕ ಸಶಕ್ತರಾಗುವುದು ಹೇಗೆ? ಈ ಸರಳ ವಾಸ್ತು ನಿಯಮಗಳನ್ನು ಪಾಲಿಸಿ.

VISTARANEWS.COM


on

By

Vastu Tips
Koo

ಬದುಕು (life) ಚೆನ್ನಾಗಿ ಇರಬೇಕಾದರೆ ಸುಖ, ಶಾಂತಿ, ನೆಮ್ಮದಿ ಇರಬೇಕು. ಅದಕ್ಕೆ ನಮ್ಮ ಜೀವನದಲ್ಲಿ ಪ್ರತಿಯೊಂದು ಅಂಶವೂ (Vastu Tips) ಪ್ರಭಾವ ಬೀರುತ್ತದೆ. ಸುಖ, ಶಾಂತಿ, ನೆಮ್ಮದಿಯನ್ನು ಕೊಡುವ ಬದುಕಿನ ಪ್ರಮುಖ ಅಂಶಗಳಲ್ಲಿ ನಮ್ಮ ಹಣಕಾಸು (Finance) ಕೂಡ ಒಂದು.

ಜೀವನವು ಸುಗಮವಾಗಿ ಮುಂದುವರಿಯಲು ಮತ್ತು ಬೆಳೆಯಲು ಕೆಲವೊಂದು ತತ್ತ್ವಗಳಿಗೆ ಬದ್ಧವಾಗಿರಬೇಕಾಗುತ್ತದೆ. ಅದರಲ್ಲಿ ಆರ್ಥಿಕ ತತ್ತ್ವವೂ ಒಂದು. ಕೆಲವೊಂದು ವಾಸ್ತು ನಿಯಮಗಳನ್ನು ನಾವು ನಿರ್ಲಕ್ಷಿಸುವುದರಿಂದ ಜೀವನದಲ್ಲಿ ಆರ್ಥಿಕ ಸಮಸ್ಯೆಗಳು ಬಾಧಿಸುತ್ತವೆ.

ವಾಸ್ತು ಪರಿಹಾರಗಳನ್ನು ಮಾಡಿಕೊಂಡರೆ ನಾವು ಆರ್ಥಿಕ ತೊಂದರೆಯಿಂದ ಪಾರಾಗಬಹುದು. ಮನೆಯಲ್ಲಿ ವಾಸ್ತು ನಿಯಮಗಳನ್ನು ಅನುಸರಿಸಿದರೆ ಎಂದಿಗೂ ಹಣದ ಕೊರತೆ ಉಂಟಾಗುವುದಿಲ್ಲ. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸಂತೋಷದಿಂದ ಎದುರಿಸಬಹುದು.


ಸೂರ್ಯ ಕಿರಣ ಮನೆಯೊಳಗೆ ಬರಲಿ

ಬೆಳಗ್ಗೆ ಎದ್ದ ಕೂಡಲೇ ಮನೆಯ ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಬೇಕು. ಸೂರ್ಯನ ಕಿರಣಗಳು ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ವೃದ್ಧಿಸುತ್ತದೆ. ಇದರಿಂದ ಮನೆಗೆ ಸಂಪತ್ತಿನ ಹರಿವು ಸರಾಗವಾಗುತ್ತದೆ.

ಶಂಖ ಪೂಜಾ ಸ್ಥಳದಲ್ಲಿ ಇರಿಸಿ

ಮನೆಯ ಪೂಜಾ ಸ್ಥಳದಲ್ಲಿ ಶಂಖವನ್ನು ಇಟ್ಟುಕೊಂಡರೆ ಶ್ರೀಮಂತರಾಗಬೇಕು ಎನ್ನುವ ಕನಸು ಬಹುಬೇಗನೆ ನನಸಾಗುತ್ತದೆ.

ಸ್ವಚ್ಛತೆ

ಮನೆಯ ವಾತಾವರಣ ಸ್ವಚ್ಛ, ಸುಂದರ, ಸುರಕ್ಷಿತವಾಗಿದ್ದಾರೆ ಅದು ಶ್ರೀಮಂತರಾಗಲು ಸಹಾಯ ಮಾಡುತ್ತದೆ. ಮನೆಯಲ್ಲಿ ಸಮತೋಲಿತ ಶಕ್ತಿಗಾಗಿ ಸ್ವಚ್ಛಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ.


ನೀರು

ಮನೆಯಲ್ಲಿ ಟ್ಯಾಪ್ ನೀರು ಅನಗತ್ಯವಾಗಿ ಹರಿಯುತ್ತಿದ್ದರೆ ಸಾಧ್ಯವಾದಷ್ಟು ಬೇಗ ಅದನ್ನು ಸರಿಪಡಿಸಿ. ನೀರು ಸಂಪತ್ತಿನ ಮೂಲ ಎಂದು ನಂಬಲಾಗಿದೆ. ವಾಸ್ತು ಪ್ರಕಾರ ಟ್ಯಾಪ್‌ನಿಂದ ನೀರು ಹನಿ ಹನಿಯಾಗಿ ಹರಿದು ಹೋಗುವುದು ದುರದೃಷ್ಟಕರವೆಂದು ಪರಿಗಣಿಸಲಾಗುತ್ತದೆ.

ಪ್ರವೇಶ ದ್ವಾರ

ಮನೆಯಲ್ಲಿ ದಕ್ಷಿಣ ಗೋಡೆಯ ಪಕ್ಕದಲ್ಲಿ ಪ್ರವೇಶದ್ವಾರ ಉತ್ತರಕ್ಕೆ ಎದುರಾಗಿರು ಇರಬೇಕು. ಇದು ವಾಸ್ತು ಶಾಸ್ತ್ರದಲ್ಲಿ ಅದೃಷ್ಟವನ್ನು ತರುತ್ತದೆ ಎಂದು ನಂಬಲಾಗಿದೆ.

ಇದನ್ನೂ ಓದಿ: Vastu Tips: ಮನೆಯೊಳಗೆ ಎಲ್ಲೆಂದರಲ್ಲಿ ಕನ್ನಡಿ ಇಟ್ಟು ಕುಟುಂಬದ ನೆಮ್ಮದಿ ಹಾಳು ಮಾಡಬೇಡಿ!


ತುಳಸಿ

ಮನೆಯ ಮುಖ್ಯ ದ್ವಾರದಲ್ಲಿ ತುಳಸಿ ಗಿಡವನ್ನು ಇಡಬೇಕು. ಹೀಗೆ ಮಾಡುವುದರಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಇದಲ್ಲದೆ ಮನೆಯಲ್ಲಿ ತುಳಸಿ ಗಿಡಗಳಿದ್ದರೆ ಮನೆಯಲ್ಲಿ ಸಂಪತ್ತು ವೃದ್ಧಿಯಾಗುತ್ತದೆ ಎನ್ನಲಾಗುತ್ತದೆ.

ಮುಳ್ಳು, ಹಾಲಿನ ಗಿಡಗಳು

ಮನೆಯಲ್ಲಿ ಕಳೆಗುಂದಿದ, ಮುಳ್ಳು ಅಥವಾ ಹಾಲು ಬರುವಂತ ಯಾವುದೇ ಸಸ್ಯಗಳಿದ್ದರೆ ತಕ್ಷಣವೇ ಅದನ್ನು ತೆಗೆದು ಹಾಕಿ. ಇವುಗಳು ಮನೆಯಲ್ಲಿ ಒತ್ತಡ ಮತ್ತು ಅಸ್ಥಿರ ಹಣಕಾಸು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಕಾರಣವಾಗಬಹುದು.

Continue Reading

ಬಜೆಟ್ 2024

Union Budget 2024: ಘೋಷಣೆ ಸೋರಿಕೆಯಿಂದ ಹಲ್ವಾ ತಿನ್ನುವವರೆಗೆ; ಕೇಂದ್ರ ಬಜೆಟ್‌ನ 10 ಆಸಕ್ತಿದಾಯಕ ಸಂಗತಿಗಳಿವು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜುಲೈ 15ರಿಂದ 22ರ ಅವಧಿಯ ನಡುವೆ ಬಜೆಟ್‌ (Union Budget 2024) ಮಂಡಿಸಲು ಸಿದ್ಧತೆ ನಡೆಸಿದ್ದು, ಈ ಸಂದರ್ಭದಲ್ಲಿ ಭಾರತದ ಕೇಂದ್ರ ಬಜೆಟ್ ಬಗ್ಗೆ ತಿಳಿದುಕೊಳ್ಳಬೇಕಾದ ಹತ್ತು ಪ್ರಮುಖ ಆಸಕ್ತಿದಾಯಕ ಸಂಗತಿಗಳಿವೆ. ಅವುಗಳ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Union Budget 2024
Koo

ಲೋಕಸಭೆ ಚುನಾವಣೆ (lok sabha election) ಬಳಿಕ ಮೊದಲ ಬಾರಿಗೆ ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟವು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನೇತೃತ್ವದಲ್ಲಿ ಮೊದಲ ಬಜೆಟ್ (Union Budget 2024) ಮಂಡಿಸಲಿದೆ. ಜುಲೈ 15ರಿಂದ 22ರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಕೇಂದ್ರ ಬಜೆಟ್ ಮಂಡನೆಯಾಗಲಿರುವ ಈ ಸಂದರ್ಭದಲ್ಲಿ ತಿಳಿದುಕೊಳ್ಳಬೇಕಾದ 10 ಆಸಕ್ತಿದಾಯಕ ಸಂಗತಿಗಳಿವೆ.

ಬಜೆಟ್ ಎಂಬ ಪದವು ಫ್ರೆಂಚ್ ಪದ ‘ಬೌಗೆಟ್’ನಿಂದ ಬಂದಿದೆ. ಇದರ ಅರ್ಥ ಸಣ್ಣ ಚೀಲ ಅಥವಾ ಚೀಲ ಎಂಬುದಾಗಿದೆ. ಸ್ವತಂತ್ರ ಪೂರ್ವ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಜೆಟ್ ಮಂಡಿಸಿದ್ದು ಜೇಮ್ಸ್ ವಿಲ್ಸನ್. ಭಾರತೀಯ ಕೌನ್ಸಿಲ್‌ನ ಹಣಕಾಸು ಸಚಿವರಾಗಿ ನೇಮಕಗೊಂಡ ಅವರು ಭಾರತೀಯ ವೈಸ್‌ರಾಯ್‌ಗೆ ಬಜೆಟ್ ಕುರಿತು ಸಲಹೆ ನೀಡಿದರು.

1860ರಲ್ಲಿ ಭಾರತದ ಮೊದಲ ಬಜೆಟ್ ಮಂಡನೆಯಾಗಿತ್ತು. ಸ್ಕಾಟಿಷ್ ಉದ್ಯಮಿಯಾಗಿದ್ದ ಜೇಮ್ಸ್ ವಿಲ್ಸನ್ ವ್ಯಾಪಾರ ಮತ್ತು ಹಣಕಾಸಿನ ಬಗ್ಗೆ ಅಪಾರ ತಿಳಿವಳಿಕೆ ಹೊಂದಿದ್ದರು. ಪ್ರಸಿದ್ಧ ಪತ್ರಿಕೆಯಾದ ದಿ ಎಕನಾಮಿಸ್ಟ್ ಮತ್ತು ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್‌ನ ಸಂಸ್ಥಾಪಕರಾಗಿದ್ದ ಅವರು ಬ್ರಿಟಿಷ್ ಸಂಸತ್ತಿನ ಸದಸ್ಯರಾಗಿದ್ದರು ಮತ್ತು ಯುಕೆ ಖಜಾನೆಯ ಹಣಕಾಸು ಕಾರ್ಯದರ್ಶಿ ಮತ್ತು ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿದ್ದರು.


ಕೇಂದ್ರ ಬಜೆಟ್‌ನ 10 ಪ್ರಮುಖ ಸಂಗತಿಗಳು

1. ಮೊದಲ ಬಜೆಟ್‌ ಮಂಡಿಸಿದ್ದು ಯಾರು?

ಸ್ವತಂತ್ರ ಭಾರತದ ಮೊದಲ ವಾರ್ಷಿಕ ಬಜೆಟ್ ಅನ್ನು ಆರ್.ಕೆ. ಷಣ್ಮುಖಂ ಚೆಟ್ಟಿಯವರು 1948ರ ಫೆಬ್ರವರಿ 28ರಂದು ಮಂಡಿಸಿದರು. ದೇಶ ಸ್ವತಂತ್ರಗೊಂಡ ಮೂರು ತಿಂಗಳ ಅನಂತರ ದೇಶದ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ 1947ರ ನವೆಂಬರ್ 26ರಂದು ಮಧ್ಯಂತರ ಬಜೆಟ್ ಮಂಡಿಸಲಾಯಿತು. ಇದು ಕೇವಲ ನಾಲ್ಕು ತಿಂಗಳವರೆಗೆ ಊರ್ಜಿತವಾಗಿತ್ತು.
ಪ್ರಧಾನಿಯೊಬ್ಬರು ಇದುವರೆಗೆ ಮೂರು ಬಾರಿ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಪಂಡಿತ್ ಜವಾಹರಲಾಲ್ ನೆಹರು ಅವರು 1958ರಲ್ಲಿ, ಪ್ರಧಾನಿ ಇಂದಿರಾ ಗಾಂಧಿ ಅವರು 1970ರಲ್ಲಿ ಬಜೆಟ್ ಮಂಡಿಸಿದರು. ಅನಂತರ ರಾಜೀವ್ ಗಾಂಧಿ ಅವರು 1987ರಲ್ಲಿ ಬಜೆಟ್ ಮಂಡಿಸಿದ್ದಾರೆ.

2. ಅತಿ ಉದ್ದದ ಬಜೆಟ್ ಭಾಷಣ ಯಾರದ್ದು?

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2020ರಲ್ಲಿ ಅತಿ ಉದ್ದದ ಬಜೆಟ್ ಭಾಷಣ ಮಾಡಿದ ದಾಖಲೆಯನ್ನು ಹೊಂದಿದ್ದಾರೆ. ಇದು 2 ಗಂಟೆ 42 ನಿಮಿಷಗಳು. ಅವರು ಭಾರತದ ಮೊದಲ ಪೂರ್ಣ ಸಮಯದ ಮಹಿಳಾ ಹಣಕಾಸು ಮಂತ್ರಿಯೂ ಆಗಿದ್ದಾರೆ.


3. ಕಾಗದ ರಹಿತ ಬಜೆಟ್‌

ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ 2021ರಲ್ಲಿ ಬಜೆಟ್ ಕಾಗದರಹಿತವಾಯಿತು.

4. ಗರಿಷ್ಠ ಬಜೆಟ್‌ ಯಾರದ್ದು?

ಗರಿಷ್ಠ ಸಂಖ್ಯೆಯ ಬಜೆಟ್‌ಗಳನ್ನು ಮಂಡಿಸಿದ ಕೀರ್ತಿ ಮಾಜಿ ವಿತ್ತ ಸಚಿವ ಮೊರಾಜಿ ದೇಸಾಯಿ ಅವರಿಗೆ ಸಲ್ಲುತ್ತದೆ. ಅವರು ಒಟ್ಟು 10 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಅನಂತರ ಪಿ. ಚಿದಂಬರಂ ಅವರು 9 ಬಾರಿ, ಪ್ರಣಬ್ ಮುಖರ್ಜಿ ಮತ್ತು ಯಶವಂತ್ ಸಿನ್ಹಾ ಅವರು ತಲಾ 8 ಬಾರಿ ಮತ್ತು ಮನಮೋಹನ್ ಸಿಂಗ್ ಅವರು 6 ಬಾರಿ ಬಜೆಟ್ ಮಂಡಿಸಿದ್ದಾರೆ.

5. ಬಜೆಟ್‌ ಮಂಡನೆ ಸಮಯ ಬದಲಾವಣೆ

ಭಾರತದಲ್ಲಿ ಯಾವಾಗಲೂ ಸಂಜೆ 5 ಗಂಟೆಗೆ ಬಜೆಟ್ ಮಂಡಿಸಲಾಗುತ್ತಿತ್ತು. ಆಯವ್ಯಯ ಪತ್ರಗಳನ್ನು ಬ್ರಿಟಿಷ್ ಪಾರ್ಲಿಮೆಂಟ್‌ನಲ್ಲಿ ಮತ್ತು ಲಂಡನ್‌ನಲ್ಲಿ ಮಂಡನೆ ಮಾಡುವಂತೆ ಈ ಅಭ್ಯಾಸವು ಮೊದಲು ಪ್ರಾರಂಭವಾಯಿತು. 1999ರವರೆಗೂ ಇದು ಪಾಲನೆಯಾಗುತ್ತಿತ್ತು. ಆದರೆ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದರು. ಆ ಬಳಿಕ ಈಗ ಮಧ್ಯಾಹ್ನವೇ ಬಜೆಟ್‌ ಮಂಡಿಸಲಾಗುತ್ತದೆ.

6. ಬಜೆಟ್‌ ದಿನ ಬದಲಾವಣೆ

2017ನೇ ವರ್ಷವು ಕೇಂದ್ರ ಬಜೆಟ್‌ಗೆ ಸಂಬಂಧಿಸಿದ ಎರಡು ಪ್ರಮುಖ ಬದಲಾವಣೆಗಳನ್ನು ಗುರುತಿಸಿದೆ. ವಾರ್ಷಿಕ ಬಜೆಟ್ ಮಂಡನೆ ದಿನಾಂಕವನ್ನು ಫೆಬ್ರವರಿ 28ರಿಂದ ಫೆಬ್ರವರಿ 1ಕ್ಕೆ ಬದಲಾಯಿಸಲಾಯಿತು. ಏಪ್ರಿಲ್ 1ರಿಂದ ಪ್ರಾರಂಭವಾಗುವ ಹಣಕಾಸು ವರ್ಷದ ಆರಂಭದ ಮೊದಲು ಸರ್ಕಾರದ ವಿವಿಧ ಯೋಜನೆಗಳಿಗೆ ಹಣ ಹಂಚಿಕೆಗೆ ಎಲ್ಲಾ ಸಂಸತ್ತಿನ ಅನುಮೋದನೆಗಳು ಜಾರಿಯಲ್ಲಿವೆ ಎಂದು ಖಚಿತಪಡಿಸಿಕೊಳ್ಳಲು ಇದನ್ನು ಮಾಡಲಾಗಿದೆ. ಈ ಮೊದಲು ಫೆಬ್ರವರಿ 28 ಮತ್ತು ಹೊಸ ಹಣಕಾಸು ವರ್ಷ ಪ್ರಾರಂಭವಾಗಲು ಕೇವಲ ಒಂದು ತಿಂಗಳು ಬಾಕಿಯಿರುತ್ತಿತ್ತು. ಆಗ ಕೆಲವು ಅನುಮೋದನೆಗಳಿಗೆ ತೊಂದರೆಯಾಗುತ್ತಿತ್ತು. ರೈಲ್ವೆ ಬಜೆಟ್ ಅನ್ನು ಕೇಂದ್ರ ಬಜೆಟ್‌ನಲ್ಲಿ ವಿಲೀನಗೊಳಿಸಿದ ವರ್ಷವೂ ಇದೇ ಆಗಿತ್ತು.

7. ಮೊದಲ ಬಾರಿ ವೈಯಕ್ತಿಕ ತೆರಿಗೆ ಇಳಿಕೆ

ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ಮಂಡಿಸಿದ 1997-98ರ ಬಜೆಟ್ ವೈಯಕ್ತಿಕ ಆದಾಯ ತೆರಿಗೆ ದರಗಳನ್ನು ಕಡಿಮೆ ಮಾಡಿದ ಮೊದಲ ಬಜೆಟ್ ಆಗಿದೆ. ಅಂದಿನಿಂದ ಸಣ್ಣಪುಟ್ಟ ಬದಲಾವಣೆಗಳನ್ನು ಹೊರತುಪಡಿಸಿ ಆ ದರಗಳು ಇನ್ನೂ ಬದಲಾಗದೆ ಹಾಗೇ ಉಳಿದಿವೆ.

8. ಮನಮೋಹನ್‌ ಸಿಂಗ್‌ ಐತಿಹಾಸಿಕ ಬಜೆಟ್‌

ಮನಮೋಹನ್ ಸಿಂಗ್ ಅವರ 1991ರ ಬಜೆಟ್ ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಂತ ಐತಿಹಾಸಿಕ ಬಜೆಟ್ ಆಗಿದೆ. ಇದು ಭಾರತೀಯ ಆರ್ಥಿಕತೆಯನ್ನು ಉದಾರೀಕರಣಗೊಳಿಸಿತು. ಇದು ಭಾರತವನ್ನು ಉನ್ನತ ಬೆಳವಣಿಗೆಯ ಹಾದಿಯಲ್ಲಿ ಕೊಂಡೊಯ್ಯಲು ಪ್ರೇರಣೆಯಾಯಿತು ಮತ್ತು ವಿದೇಶಿ ಸ್ಪರ್ಧೆಗೆ ಭಾರತೀಯ ಕಂಪನಿಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟಿತು.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್


9. ಹಲ್ವಾ ಸಮಾರಂಭ

ಪ್ರತಿ ವರ್ಷ ಹಣಕಾಸು ಸಚಿವರು ಬಜೆಟ್ ಮಂಡಿಸುವ ಒಂದು ವಾರದ ಮೊದಲು ‘ಹಲ್ವಾ ಸಮಾರಂಭ’ ನಡೆಯುತ್ತದೆ. ಬಜೆಟ್ ಮುದ್ರಿಸಿದ ಸ್ಥಳದಲ್ಲಿ ‘ಹಲ್ವಾ’ ತಯಾರಿಸಿ ಎಲ್ಲರಿಗೂ ಬಡಿಸಲಾಗುತ್ತದೆ. ವಿತ್ತ ಸಚಿವರು ಮತ್ತು ವಿತ್ತ ಸಚಿವಾಲಯದ ಎಲ್ಲಾ ಪ್ರಮುಖ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದು, ಶುಭ ಕಾರ್ಯದ ಆರಂಭವನ್ನು ಸೂಚಿಸುತ್ತಾರೆ. ಬಜೆಟ್ ಪೇಪರ್‌ಗಳ ಮುದ್ರಣಕ್ಕೆ ಹೋಗುವ ಮೊದಲು ಅಧಿಕಾರಿಗಳನ್ನು ಲಾಕ್ ಮಾಡಲಾಗುತ್ತದೆ. ಬಜೆಟ್ ಮಂಡನೆಯಾಗುವವರೆಗೆ ಬಜೆಟ್‌ನ ಮುದ್ರಣದಲ್ಲಿ ತೊಡಗಿರುವ ಎಲ್ಲ ಅಧಿಕಾರಿಗಳು ಹೊರ ಜಗತ್ತಿನೊಂದಿಗೆ ಯಾವುದೇ ಸಂವಹನವಿಲ್ಲದೆ ಹಣಕಾಸು ಸಚಿವಾಲಯದೊಳಗೆ ಬಂಧಿಯಾಗುತ್ತಾರೆ.

10. ಸೋರಿಕೆಯಾಗಿತ್ತು ಬಜೆಟ್‌ ಸಾರ

1950ರಲ್ಲಿ ಬಜೆಟ್ ಸೋರಿಕೆಯಾಯಿತು. ಅದರ ಅನಂತರ ಸರ್ಕಾರವು ಬಜೆಟ್‌ನ ಮುದ್ರಣವನ್ನು ರಾಷ್ಟ್ರಪತಿ ಭವನದಿಂದ ಮಿಂಟೋ ರಸ್ತೆಯಲ್ಲಿರುವ ಮುದ್ರಣಾಲಯಕ್ಕೆ ವರ್ಗಾಯಿಸಿತು. 1980ರಲ್ಲಿ ಇದನ್ನು ದೆಹಲಿಯ ರೈಸಿನಾ ರಸ್ತೆಯಲ್ಲಿರುವ ನಾರ್ತ್ ಬ್ಲಾಕ್‌ನಲ್ಲಿರುವ ಹಣಕಾಸು ಸಚಿವಾಲಯದ ನೆಲಮಾಳಿಗೆಯಲ್ಲಿರುವ ಸರ್ಕಾರಿ ಮುದ್ರಣಾಲಯಕ್ಕೆ ಸ್ಥಳಾಂತರಿಸಲಾಯಿತು.

Continue Reading

ವೈರಲ್ ನ್ಯೂಸ್

Viral Video: ದುಬೈ ಮಾಲ್‌ನಲ್ಲಿ ಬೊಂಬೆಗಳೊಂದಿಗೆ ಬೊಂಬೆಯಾದ ಮಾಡೆಲ್‌! ಗ್ರಾಹಕರು ಕಕ್ಕಾಬಿಕ್ಕಿ

Viral Video: ದುಬೈ ಫೆಸ್ಟಿವಲ್ ಸಿಟಿ ಮಾಲ್‌ನಲ್ಲಿರುವ ಮಾಂಟೊ ಬ್ರೈಡ್ ಸ್ಟೋರ್‌ನಲ್ಲಿ ರೂಪದರ್ಶಿ ಬೊಂಬೆಗಳ ನಡುವೆ ನಿಂತು ಫೋಟೋ ತೆಗೆಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಮಂದಿಯ ಗಮನ ಸೆಳೆಯಿತು. ಇದು ಸಾಕಷ್ಟು ವೈರಲ್ ಆಗಿದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದಿದೆ.

VISTARANEWS.COM


on

By

Viral Video
Koo

ದುಬೈ: ಅಸಾಂಪ್ರದಾಯಿಕ ಮಾರ್ಕೆಟಿಂಗ್ ತಂತ್ರವನ್ನು ಮಾಡಿರುವ ದುಬೈ ಮಾಲ್ (dubai mall) ಕುರಿತು ವೈರಲ್ ಆದ ವಿಡಿಯೋ (Viral Video) ಸಾಮಾಜಿಕ ಜಾಲತಾಣ (social media) ಬಳಕೆದಾರರಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ದುಬೈ ಮಾಲ್‌ನಲ್ಲಿ ಬಟ್ಟೆ ಮಳಿಗೆಯಲ್ಲಿ ರೂಪದರ್ಶಿಯೊಬ್ಬರು (model) ಮನುಷ್ಯಾಕೃತಿ ಬೊಂಬೆಗಳ ನಡುವೆ ನಿಂತು ವಿವಿಧ ಭಂಗಿಯನ್ನು ಪ್ರದರ್ಶಿಸಿದ್ದು ಇದಕ್ಕೆ ಕಾರಣ.

ದುಬೈ ಫೆಸ್ಟಿವಲ್ ಸಿಟಿ ಮಾಲ್‌ನಲ್ಲಿರುವ ಮಾಂಟೊ ಬ್ರೈಡ್ ಸ್ಟೋರ್‌ನಲ್ಲಿ ರೂಪದರ್ಶಿ ಬೊಂಬೆಗಳ ನಡುವೆ ನಿಂತು ಫೋಟೋ ತೆಗೆಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಮಂದಿಯ ಗಮನ ಸೆಳೆಯಿತು. ಇದು ಸಾಕಷ್ಟು ವೈರಲ್ ಆಗಿದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದಿದೆ.

ಮಾಡೆಲ್ ಏಂಜಲೀನಾ ಅವರು ಇನ್ ಸ್ಟಾ ಗ್ರಾಮ್ ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಸಾಮಾನ್ಯವಾಗಿ ಮನುಷ್ಯಾಕೃತಿ ಬೊಂಬೆಗಳಿಗಾಗಿ ಕಾಯ್ದಿರಿಸಿದ ಜಾಗದಲ್ಲಿ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಬ್ರ್ಯಾಂಡ್‌ನ ಬಾಡಿಕಾನ್ ಶಾರ್ಟ್ ಡ್ರೆಸ್ ಮತ್ತು ಸ್ಟಿಲೆಟ್ಟೊ ಹೀಲ್ಸ್‌ನೊಂದಿಗೆ ಅವರು ತಮ್ಮ ಕೂದಲನ್ನು ಪೋನಿಟೇಲ್‌ನಲ್ಲಿ ಕಟ್ಟಿಕೊಂಡಿದ್ದರು. ಏಂಜಲೀನಾ ಅವರು ವಿವಿಧ ರೀತಿಯ ಭಂಗಿಗಳನ್ನು ಪ್ರದರ್ಶಿಸುತ್ತಿದ್ದರು. ಇದು ದಾರಿಹೋಕರ ಗಮನವನ್ನು ಸೆಳೆಯಿತು.

“ಪೋವ್: ದುಬೈನಲ್ಲಿ ಮಾರ್ಕೆಟಿಂಗ್” ಎನ್ನುವ ಶೀರ್ಷಿಕೆಯಡಿ ಸಾಮಾಜಿಕ ಜಾಲತಾಣದಲ್ಲಿ ಇದು ವೈರಲ್ ಆಯಿತು. ದುಬೈ ಮಾಲ್‌ನಲ್ಲಿ ಬಟ್ಟೆ ಬ್ರ್ಯಾಂಡ್ ಅವರ ಅಸಾಂಪ್ರದಾಯಿಕ ಮಾರ್ಕೆಟಿಂಗ್ ತಂತ್ರವು ಪಟ್ಟಣದಲ್ಲಿ ಚರ್ಚೆಗೆ ಕಾರಣವಾಗಿದ್ದು ಮಾತ್ರವಲ್ಲ ಸಾಮಾಜಿಕ ಜಾಲತಾಣದಲ್ಲೂ ಚರ್ಚೆಯನ್ನು ಹುಟ್ಟು ಹಾಕಿತು. ತ್ವರಿತವಾಗಿ ವೈರಲ್ ಆದ ಈ ವಿಡಿಯೋ ಬಳಕೆದಾರರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದಿದೆ.

ಒಬ್ಬ ಬಳಕೆದಾರನು ಆ ಅಂಗಡಿಯಿಂದ ಏನನ್ನೂ ಖರೀದಿಸಲು ಬಯಸುವುದಿಲ್ಲ ಎಂದು ನೇರವಾಗಿ ಹೇಳಿದ್ದರೆ ಇನ್ನೊಬ್ಬರು ಗುಲಾಮಗಿರಿಯು ಅತ್ಯುತ್ತಮವಾಗಿದೆ! ಬಹಳ ಗಂಟೆಗಳ ಕಾಲ ನೆರಳಿನಲ್ಲೇ ನಿಂತಿರುವುದು ಹುಚ್ಚುತನ ಎಂದಿದ್ದಾರೆ.


ಮತ್ತೊಬ್ಬರು, ನಾವು ಮಾನವರು ಭವಿಷ್ಯದಲ್ಲಿ ಹಣ ಪಡೆಯಲು ಇಂತಹ ಕೆಲಸಗಳನ್ನು ಮಾಡಬೇಕಾಗಬಹುದು ಎಂದು ಹೇಳಿದ್ದಾರೆ. ಇನ್ನೊಬ್ಬರು ರೋಬೋಟ್‌ಗಳು ಮನುಷ್ಯರ ಉದ್ಯೋಗಗಳನ್ನು ಕಸಿದುಕೊಳ್ಳುತ್ತಿವೆ ಮತ್ತು ಈಗ ಮನುಷ್ಯಾಕೃತಿಗಳ ಸ್ಥಾನವನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಿಎಂ ಆವಾಸ್‌ ಯೋಜನೆಯ 40 ಸಾವಿರ ರೂ. ಪಡೆದು 11 ಸ್ತ್ರೀಯರು ಗೆಳೆಯರೊಂದಿಗೆ ಪರಾರಿ; ಕಂಗಾಲಾದ ಪತಿಯರು!

ಟೀಕೆಗಳ ಹೊರತಾಗಿಯೂ, ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಮಾದರಿಯ ಪ್ರಯತ್ನಗಳನ್ನು ಸಮರ್ಥಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿ ಉದ್ಯೋಗ ಒಂದು ಕೆಲಸ! ಅವಳು ಮಾಡೆಲ್ ಆಗಿದ್ದಾಳೆ. ಕೆಂಡಾಲ್ ಜೆನ್ನರ್ ಮಾಡುವಂತೆ ಅವಳು ಜನರಿಗೆ ಬಟ್ಟೆಗಳನ್ನು ಮಾಡೆಲಿಂಗ್ ಮಾಡುತ್ತಿದ್ದಾಳೆ. ಸಮಸ್ಯೆ ಏನು? ಅಂಗಡಿಯು ಬಹುಶಃ ಗ್ರಾಹಕರನ್ನು ಸೆಳೆಯುತ್ತಿಲ್ಲ ಆದ್ದರಿಂದ ಬಹುಶಃ ನೌಕರರು ಹೆಚ್ಚಿನ ಗ್ರಾಹಕರನ್ನು ಸೆಳೆಯಲು ಪ್ರಯತ್ನಿಸಿದೆ ಎಂದು ಹೇಳಿದ್ದಾರೆ.

Continue Reading
Advertisement
Viral Video
ವೈರಲ್ ನ್ಯೂಸ್2 mins ago

Viral Video: ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

Mobile Tariffs
ದೇಶ8 mins ago

Mobile Tariffs: ಜಿಯೋ, ಏರ್‌ಟೆಲ್‌, VI ರಿಚಾರ್ಜ್‌ ಶುಲ್ಕ ಕಡಿಮೆ ಮಾಡಲಿದ್ದಾರಾ ಮೋದಿ? ಇಲ್ಲಿದೆ ಕೇಂದ್ರದ ಸ್ಪಷ್ಟನೆ

karnataka weather Forecast
ಮಳೆ9 mins ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Puri Jagannath Yatra
ದೇಶ22 mins ago

Puri Jagannath Yatra: ಪುರಿ ಜಗನ್ನಾಥನ ಅದ್ದೂರಿ ರಥಯಾತ್ರೆ; ರಾಷ್ಟ್ರಪತಿ ಮುರ್ಮು ಉಪಸ್ಥಿತಿ

Rahul Dravid
ಪ್ರಮುಖ ಸುದ್ದಿ27 mins ago

Rahul Dravid : ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ; ಕೇಂದ್ರ ಸರ್ಕಾರಕ್ಕೆ ಗವಾಸ್ಕರ್ ಮನವಿ

Abhishek Sharma
ಪ್ರಮುಖ ಸುದ್ದಿ55 mins ago

Abhishek Sharma : ಜಿಂಬಾಬ್ವೆ ವಿರುದ್ಧ ಶತಕ ಬಾರಿಸಿ ಅಪರೂಪದ ದಾಖಲೆ ಬರೆದ ಅಭಿಷೇಕ್ ಶರ್ಮಾ

Bengaluru's Second Airport
ಕರ್ನಾಟಕ58 mins ago

Bengaluru’s Second Airport: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ? ಸಚಿವ ಎಂ.ಬಿ. ಪಾಟೀಲ್ ಸುಳಿವು

Mahua Moitra
ದೇಶ1 hour ago

Mahua Moitra: ಹೊಸ ಕಾನೂನಿನಂತೆ ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್;‌ ಕಾರಣ ಇಲ್ಲಿದೆ

Self harming
ವಿಜಯನಗರ1 hour ago

Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

Land Dispute
ಕರ್ನಾಟಕ2 hours ago

Land Dispute: ಬೆಂಗಳೂರಿನ 93 ವರ್ಷದ ಹಳೇ ಶಾಲೆಯ ಕಾಂಪೌಂಡ್‌ ಧ್ವಂಸ; ಮೂವರ ವಿರುದ್ಧ ಕೇಸ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ9 mins ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ3 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ3 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ14 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌