Bharat Jodo | ನಮ್ಮಪ್ಪ ಸಾಯಲು ಡಾಕ್ಟರ್ಸೇ ಕಾರಣ: ಚಿಕ್ಕ ಬಾಲಕಿಯ ಮಾತಿಗೆ ಡಿಕೆಶಿ ಕಣ್ಣೀರು Vistara News

ಕರ್ನಾಟಕ

Bharat Jodo | ನಮ್ಮಪ್ಪ ಸಾಯಲು ಡಾಕ್ಟರ್ಸೇ ಕಾರಣ: ಚಿಕ್ಕ ಬಾಲಕಿಯ ಮಾತಿಗೆ ಡಿಕೆಶಿ ಕಣ್ಣೀರು

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ತಮ್ಮ ತಂದೆ ಸಾವಿಗೇ ವೈದ್ಯರೇ ಕಾರಣ ಎಂಬ ಬಾಲಕಿ ಮಾತು ಕೇಳಿ ಕಣ್ಣೀರಾದ ಡಿ.ಕೆ.ಶಿವಕುಮಾರ್(Bharat Jodo).

VISTARANEWS.COM


on

D K Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಕೋವಿಡ್ ಸಾಂಕ್ರಾಮಿಕ ವೇಳೆ ಸಂಭವಿಸಿದ ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬಗಳ ಸದಸ್ಯರ ಜತೆ ಭಾರತ್ ಜೋಡೋ (Bharat Jodo) ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ ಮಾತುಕತೆ ನಡೆಸಿದರು. ಈ ವೇಳೆ, ಚಿಕ್ಕ ಬಾಲಕಿಯೊಬ್ಬಳು ಆಕ್ಸಿಜನ್ ದುರಂತದಲ್ಲಿ ತಮ್ಮ ತಂದೆ ಮೃತಪಟ್ಟಿದ್ದರಿಂದ ಅನುಭವಿಸುತ್ತಿರುವ ದುಃಖ ಮತ್ತು ಕಷ್ಟವನ್ನು ಹೇಳಿಕೊಂಡಳು. ಈ ನೋವಿನ ಮಾತುಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿ ರಾಹುಲ್ ಗಾಂಧಿ ಅವರಿಗೆ ಹೇಳುವಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೂ ಕಣ್ಣೀರು ಹಾಕಿದ ಘಟನೆ ಶನಿವಾರ ನಡೆಯಿತು.

ಭಾರತ್ ಜೋಡೋ ಯಾತ್ರೆ ಶನಿವಾರ ಗುಂಡ್ಲುಪೇಟೆಯ ಮೂಲಕ ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಿತು. ತಮ್ಮ ಯಾತ್ರೆಯ ಉದ್ದಕ್ಕೂ ಜನರರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸುತ್ತಾರೆ. ಅದೇ ರೀತಿ, ರಾಹುಲ್ ಅವರು ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರ ಸಂಕಟಗಳಿಗೆ ಕಿವಿಯಾದರು.

ಬಾಲಕಿ ಹೇಳಿದ್ದೇನು?
ನಮ್ಮಪ್ಪ ಬದುಕಿದ್ದಾಗ ನನಗೆ ಎಲ್ಲವನ್ನೂ ತಂದುಕೊಡುತ್ತಿದ್ದರು. ಪೆನ್ಸಿಲ್ ಕೇಳಿದ ತಕ್ಷಣ ತಂದುಕೊಡುತ್ತಿದ್ದರು. ಆದರೆ, ನಮ್ಮ ಅಮ್ಮ ಏನೂ ತಂದುಕೊಡಲ್ಲ. ಅವಳಿಗೆ ಸರ್ಕಾರಿ ಕೆಲ್ಸಾ ಕೊಡ್ಸಿ. ನಮ್ಮಪ್ಪ ಸತ್ತಿದ್ದು ಡಾಕ್ಟರ್‌ಗಳಿಂದಾಗಿಯೇ. ಆದರೆ, ನಾನು ಕೂಡ ಓದಿ ಡಾಕ್ಟರ್ ಆಗುತ್ತೇನೆ ಮತ್ತು ಜನರನ್ನು ಬದುಕಿಸುತ್ತೇನೆ ಎಂದು ಕಣ್ಣೀರು ಸುರಿಸುತ್ತಾ ಬಾಲಕಿ ಹೇಳುತ್ತಾಳೆ.

ಈ ವೇಳೆ, ಬಾಲಕಿಯ ದುಃಖದ ಮಾತುಗಳು ರಾಹುಲ್ ಗಾಂಧಿ ಅವರಿಗೆ ಅರ್ಥವಾಗಲಿ ಎಂದು ಡಿ ಕೆ ಶಿವಕುಮಾರ್ ಅವರು, ಆಕೆಯ ಮಾತುಗಳನ್ನುಇಂಗ್ಲಿಷ್ ಅನುವಾದ ಮಾಡಲು ಮುಂದಾಗುತ್ತಾರೆ. ಆದರೆ, ಹಾಗೆ ಅನುವಾದ ಮಾಡುತ್ತಿರುವಾಗಲೇ ದುಃಖ ತಡೆಯಲಾರದೇ ಕಣ್ಣೀರು ಹಾಕುತ್ತಾರೆ. ಈ ವಿಡಿಯೋ ವೈರಲ್ ಆಗಿದೆ.

ರಾಹುಲ್ ಭರವಸೆ
ಬಾಲಕಿಯ ದುಃಖದ ಮಾತುಗಳಿಗೆ ಕಿವಿಯಾದ ರಾಹುಲ್ ಗಾಂಧಿ, ನೊಂದ ಕುಟುಂಬಕ್ಕೆ ಪಕ್ಷದ ಕಡೆಯಿಂದ ಏನೇನು ಸಹಾಯ ಮಾಡುವುದಕ್ಕೆ ಸಾಧ್ಯವೋ ಅದನ್ನು ಮಾಡುವುದಾಗಿ ಭರವಸೆ ನೀಡುತ್ತಾರೆ.

ಇದನ್ನೂ ಓದಿ | Bharat Jodo | ಸಿದ್ದು-ಡಿಕೆಶಿ ಜೋಡೋ ಮಾಡಲು ಮತ್ತೊಮ್ಮೆ ಪ್ರಯತ್ನಿಸಿದ ರಾಹುಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assembly Session : ಬರ ಸಂತ್ರಸ್ತ ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ; HDK ಆಗ್ರಹ

Assembly Session : ರಾಜ್ಯ ಸರ್ಕಾರ ಬರದಿಂದ ಕಂಗೆಟ್ಟಿರುವ ರೈತರ 2 ಲಕ್ಷ ರೂವರೆಗಿನ ಸಾಲವನ್ನು ರಕ್ಷಣವೇ ಮನ್ನಾ ಮಾಡಬೇಕು ಎಂದು ವಿಧಾನಸಭೆಯಲ್ಲಿ ಆಗ್ರಹಿಸಿದರು.

VISTARANEWS.COM


on

Assembly session Drought HD Kumaraswamy
Koo

ಬೆಳಗಾವಿ: ತೀವ್ರ ಬರದಿಂದ ಕಂಗೆಟ್ಟಿರುವ ರೈತರ 2 ಲಕ್ಷ ರೂಪಾಯಿ ವರೆಗಿನ ಕೃಷಿ ಸಾಲ ಮನ್ನಾ (Agriculture loan wiver) ಮಾಡಬೇಕು ಹಾಗೂ ರಾಜ್ಯ ಕೃಷಿ ವಲಯವನ್ನು ಬರದ ಸಂಕಷ್ಟದಿಂದ (Drought problem) ಪಾರು ಮಾಡಲು ತಕ್ಷಣವೇ 10,000 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ (Assembly session) ಬರದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಸರಕಾರಕ್ಕೆ ಪ್ರಚಾರದ ಮೇಲೆ ಇರುವ ಹುಚ್ಚು ರೈತರ ಬಗ್ಗೆ ಇಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಸರಕಾರದ ಅಸಡ್ಡೆ, ನಿರ್ಲಕ್ಷ್ಯ ನನಗೆ ಅಚ್ಚರಿ, ಕಳವಳ ತಂದಿದೆ. ಕಳೆದ ಆರು ತಿಂಗಳಿನಿಂದ ಕೇವಲ ಗ್ಯಾರಂಟಿಗಳ ಬಗ್ಗೆಯೇ ಕೆಲಸ ಮಾಡುತ್ತಿರುವ ಈ ಸರಕಾರ, ಆರ್ಥಿಕ ಹೊರೆಯನ್ನು ತನ್ನ ಮೇಲೆ ಎಳೆದುಕೊಂಡು ರೈತರಿಗೆ ಪ್ರತಿಯೊಂದಕ್ಕೂ ಬರೆ ಎಳೆಯುತ್ತದೆ. ಬೆಳೆನಾಶದಿಂದ ಅತೀವ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರಕಾರ ಸಾಲಮನ್ನಾ ಮೂಲಕ ಸಹಾಯಕ್ಕೆ ಬರಬೇಕು ಎಂದು ಅವರು ಒತ್ತಾಯ ಮಾಡಿದರು.

2001ರಿಂದ ಇಲ್ಲಿಯ ತನಕ ರಾಜ್ಯದಲ್ಲಿ ಬರಗಾಲ ಎದುರಿಸಿದ್ದೇವೆ. ಭಾರೀ ಪ್ರವಾಹ ಸಮಸ್ಯೆಯನ್ನು ಎದುರಿಸಿದ್ದೇವೆ. ಹೊಸ ಸರಕಾರ ಕಾಂಗ್ರೆಸ್ ನಾಯಕತ್ವದಲ್ಲಿ ಬಂದಿದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ತರುವ ಭರದಲ್ಲಿ ಉಳಿದ ಕಾರ್ಯಗಳ ಕಡಗಣನೆ ಮಾಡಲಾಗಿದೆ. ಗ್ಯಾರಂಟಿಗಳ ಜಾರಿಗೆ ಹೆಚ್ಚು ಸಮಯ ಕೊಟ್ಟು ಆರ್ಥಿಕ ಹೊರೆ ಅವರೇ ತಂದು ಕೊಂಡಿದ್ದಾರೆ. ಮುಂಗಾರು ಪ್ರಾರಂಭ ಆಗಿದೆ ಅಂತ ರೈತರು ಬಿತ್ತನೆ ಮಾಡಿದ್ದರು. ನಂತರ ಮಳೆ ಕೈ ಕೊಟ್ಟಿದೆ. ಆಗಸ್ಟ್ ತಿಂಗಳಿನಿಂದಲೇ ಈ ವರ್ಷ ಬರಗಾಲದ ಛಾಯೆ ಮೂಡಿದೆ ಎಂದು ಅವರು ಇಡೀ ಬರದ ಚಿತ್ರಣವನ್ನು ಬಿಡಿಸಿಟ್ಟರು.

ಹಣ ಸಾಲದು ಎಂದ ಮಾಜಿ ಸಿಎಂ ಕುಮಾರಸ್ವಾಮಿ

ಜಿಲ್ಲಾಧಿಕಾರಿಗಳ ಪಿಡಿಓ ಅಕೌಂಟ್ ನಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 800 ಕೋಟಿ ರೂಪಾಯಿ ಇಡಲಾಗಿದೆ. ಕೇಂದ್ರ ಸರಕಾರಕ್ಕೆ ಬರಪೀಡಿತ 216 ತಾಲೂಕುಗಳ ನಷ್ಟದ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೊಟ್ಟಿದೆ ಸರಕಾರ. ಸರಕಾರ ಕೊಟ್ಟಿರುವ ಅಂದಾಜಿನ ಪ್ರಕಾರ ರೈತರು ಅನುಭವಿಸಿರುವ ಬೆಳೆ ನಷ್ಟದ 10% ಬೆಳೆ ನಷ್ಟಕ್ಕೂ ಪರಿಹಾರ ಕೊಡಲು ಆಗುವುದಿಲ್ಲ. ಹೀಗಾಗಿ ರೈತರು ಸರಕಾರದಿಂದ ನೆರವು ಬಯಸುತ್ತಿದ್ದಾರೆ ಎಂದರು ಮಾಜಿ ಮುಖ್ಯಮಂತ್ರಿಗಳು.

ಇವರು ಹಣಕಾಸು ತಜ್ಞರು. ಸಾಕಷ್ಟು ಅನುಭವ ಇರುವವರು. ಹದಿನಾಲ್ಕು ಬಜೆಟ್ ಮಂಡಿಸಿರುವವರು ಎಂದು ಮಾತಿನಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರನ್ನು ಕುಟುಕಿದ ಅವರು; ಇನ್ನೊಬ್ಬರು ಇದ್ದಾರೆ. ‘ಬೈ ಬರ್ತ್ ಫಾರ್ಮರ್, ಬೈ ಪ್ರೊಫೆಷನ್ ಬಿಸ್ನೆಸ್ ಮ್ಯಾನ್, ಬೈ ಪ್ಯಾಷನ್ ಪೊಲಿಟಿಷಿಯನ್ ‘ ಎಂದು ಅನೇಕ ಬಾರಿ ಹೇಳಿದ್ದಾರೆ. ಇಷ್ಟೊಂದು ಅನುಭವ ಇರುವವರು ಇದ್ದರೂ ಹೀಗ್ಯಾಕೆ ಆಗುತ್ತಿದೆ ಎಂದು ಅವರು ಸಿಎಂ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದರು.

‌ ಕೊಬ್ಬರಿ ಖರೀದಿ ಕೇಂದ್ರ ಪುನಾರಂಭ ಮಾಡಲು ಆಗ್ರಹ

ಕೊಬ್ಬರಿ ಬೆಳೆಗಾರರ ಸಂಕಷ್ಟವನ್ನು ಸದನದಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟ ಕುಮಾರಸ್ವಾಮಿ ಅವರು; ರೈತರನ್ನು ಉಳಿಸಲು ಕೂಡಲೇ ಕೊಬರಿ ಖರೀದಿ ಕೇಂದ್ರಗಳನ್ನು ಮರು ಆರಂಭ ಮಾಡಬೇಕು ಎಂದು ಆಗ್ರಹಪಡಿಸಿದರು.

ಕೊಬ್ಬರಿ ಬೆಲೆ ಹಿಂದೆ ಕ್ವಿಂಟಾಲ್ ಗೆ 18,000 ರೂಪಾಯಿ ಬೆಲೆ ಇತ್ತು, ಈಗ 7,500 ರೂಪಾಯಿಗೆ ಬಂದಿದೆ, ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ, ನಾಫೆಡ್ ಗೆ ಎಷ್ಟ್ ಪತ್ರ ಬರೆದರೂ ಉಪಯೋಗ ಇಲ್ಲದಾಗಿದೆ. ಕೇಂದ್ರದ ಅಧಿಕಾರಿಗಳ ಜತೆ ಕೂಡ ಮಾತನಾಡಿದ್ದೇನೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಹಿಂದೆ ಖರೀದಿ ಕೇಂದ್ರಗಳ ಮೂಲಕ ನಾಫೆಡ್ ಪ್ರತಿ ಕ್ವಿಂಟಲ್ ಗೆ 11,750 ರೂಪಾಯಿ ಕೊಟ್ಟು ಕೊಬರಿ ಖರೀದಿ ಮಾಡಿತ್ತು. ಅಂದಾಜು ಒಟ್ಟು 50,000 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಗೆ 580 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಕೆಲ ದಿನಗಳ ನಂತರ ಖರೀದಿ ಕೇಂದ್ರಗಳು ಸ್ಥಗಿತವಾದವು. ಕೊಬ್ಬರಿ ದರವೂ 7500 ರೂಪಾಯಿಗೆ ಕುಸಿಯಿತು. ನಾಫೆಡ್ ಅಂದು ಕ್ವಿಂಟಾಲ್ ಕೊಬ್ಬರಿಯನ್ನು 11,750 ರೂಪಾಯಿಗೆ ಖರೀದಿ ಮಾಡಿದ್ದು, ಈಗ ಅದನ್ನು ಖಾಸಗಿ ಎಣ್ಣೆ ಕಂಪನಿಗಳಿಗೆ 7,500 ರೂಪಾಯಿಗೆ ಮಾರಾಟ ಮಾಡುತ್ತಿದೆ. ಅವರಿಗೆ 200 ಕೋಟಿ ನಷ್ಟ ಆಗುತ್ತಿದೆ, ಅದೇನು ದೊಡ್ಡ ವಿಷಯ ಅಲ್ಲ, ಭರಿಸಬಹುದು ಎಂದು ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.

ನಾನು ಕೂಡ ತೆಂಗು ಬೆಳೆಗಾರ. ಸುಮಾರು ಒಂದೂವರೆ ಲಕ್ಷದಷ್ಟು ಕೊಬ್ಬರಿಯನ್ನು ಒಂದೂವರೆ ವರ್ಷದಿಂದ ಮಾರಾಟ ಮಾಡಲಾಗದೆ ಹಾಗೆಯೇ ಇಟ್ಟಿದ್ದೇನೆ. ಬೆಳೆಗಾರನಿಗೆ ಎಷ್ಟು ಕಷ್ಟ ಇದೆ ಎಂದು ನನಗೆ ಸ್ವತಃ ಗೊತ್ತು. ಆದರೆ, ಸರಕಾರಗಳ ಚೌಕಾಸಿ ನೋಡಿದರೆ ಬಹಳ ನೋವಾಗುತ್ತದೆ. ಈ ಖರೀದಿ ಯಾವ ಲೆಕ್ಕ? ಇಷ್ಟು ಲಕ್ಷದ ಕೋಟಿ ಬಜೆಟ್ ಮಂಡನೆ ಮಾಡುತ್ತವೆ ಸರಕಾರಗಳು. ರೈತನಿಗೆ ಸಣ್ಣ ಪ್ರಮಾಣದ ಬೆಂಬಲ ಬೆಲೆ ನೀಡುವುದಕ್ಕೆ ಇಷ್ಟು ಮೀನಾಮೇಷ ಏಕೆ? ಎಂದು ಅವರು ಅತೃಪ್ತಿ ವ್ಯಕ್ತಪಡಿಸಿದರು.

ಪ್ರಚಾರದ ಮೇಲೆ ಅಕ್ಕರೆ, ರೈತರ ಬಗ್ಗೆ ಅಸಡ್ಡೆ

ರಾಜ್ಯ ಕಾಂಗ್ರೆಸ್ ಸರಕಾರ ಪ್ರಚಾರಕ್ಕೆ ಕೊಡುವಷ್ಟು ಮಹತ್ವ ರೈತರ ಬಗ್ಗೆ ನೀಡುತ್ತಿಲ್ಲ. ಸಚಿವರೊಬ್ಬರು ಸಿಎಂಗೆ ಪತ್ರ ಬರೆದಿದ್ದಾರೆ, ಪ್ರಚಾರಕ್ಕೆ ಕೊಟ್ಟ ಜಾಹೀರಾತಿನ ಮೊತ್ತ 140 ಕೋಟಿ ರೂಪಾಯಿ ಕೂಡಲೇ ಬಿಡುಗಡೆ ಮಾಡಿ ಎಂದು ಅವರು ಪತ್ರ ಬರೆದಿದ್ದಾರೆ. ಅವರು ರೈತರ ಬಗ್ಗೆ ಇಂಥ ಪತ್ರಗಳನ್ನು ಬರೆದಿದ್ದಾರೆಯೇ? ಎಂದು ಪ್ರಶ್ನಿಸಿದರು ಮಾಜಿ ಮುಖ್ಯಮಂತ್ರಿಗಳು.

ಸಚಿವರಿಗೆ ನಾನು ದೋಷ ಕೊಡುವ ಉದ್ದೇಶದಿಂದ ನಾನು ಈ ಮಾತು ಹೇಳುತ್ತಿಲ್ಲ. ಆದರೆ, ಅವರಿಗೆ ರೈತರಿಗಿಂತ ಪ್ರಚಾರದ ಮೇಲೆ ಮಹತ್ವ ಜಾಸ್ತಿ ಇದ್ದಂತೆ ಕಾಣುತ್ತಿದೆ, ಯಾಕೆ ಹೀಗೆ? ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ಯಾರಂಟಿ ಕಾರ್ಯಕ್ರಮಗಳಿಗೆ ಕೊಟ್ಟ ಮಹತ್ವ ರೈತರ ನಷ್ಟಗಳಿಗೆ ಯಾಕೆ ಕೊಡಲು ಆಗ್ತಾ ಇಲ್ಲ. ಕೇಂದ್ರದ ವರದಿ ಬಳಿಕ ಬೆಳೆ ಹಾನಿ ಪರಿಹಾರ ಅಂತ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಕಲಬುರಗಿ, ರಾಯಚೂರು ಎಲ್ಲಾ ಕಡೆ ಕೈಗೆ ಬರಬೇಕಿದ್ದ ಬೆಳೆ ಹಾಳಾಗಿದೆ. ಪದೇ ಪದೇ ಕೇಂದ್ರದ ಕಡೆ ಬೆರಳು ತೋರಿಸಲಾಗ್ತಿದೆ. ಕೇಂದ್ರದಿಂದ ಮೊದಲನೆ ಕಂತಿನ ಹಣ ಬಂದಿರಬಹುದು. ಕೇಂದ್ರದ ತಂಡ ಬರ ಅಧ್ಯಯನ ಮಾಡುತ್ತಿದ್ದಾಗ ಗದಗ ಜಿಲ್ಲೆಯ ಅಧಿಕಾರಿಗಳು ನಿದ್ದೆ ಮಾಡ್ತಾ ಇದ್ದರು ಎನ್ನುವ ವಿಚಾರ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಆಡಳಿತ ಇಷ್ಟೊಂದು ಜಿಡ್ಡುಗಟ್ಟಿದೆಯೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು.

Continue Reading

ಕರ್ನಾಟಕ

Assembly Session : ಕೇಂದ್ರ ಅನುದಾನ ವರ್ಷದಿಂದ ವರ್ಷಕ್ಕೆ ಇಳಿಕೆ; ಪೈಸೆ ಪೈಸೆ ಲೆಕ್ಕ ಕೊಟ್ಟ ಕೃಷ್ಣ ಬೈರೇಗೌಡ

Assembly Session : ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿರುವ ಬಾಕಿಯ ಜತೆಗೆ ಕೇಂದ್ರದ ಬಜೆಟ್‌ ಅನುದಾನವೂ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ ಎಂದು ಲೆಕ್ಕ ನೀಡಿದ್ದಾರೆ ಕಂದಾಯ ಸಚಿವ ಕೃಷ್ಣ ಬೈರೇಗೌಡ.

VISTARANEWS.COM


on

Krishna Byregowda Central assistance
Koo

ಬೆಳಗಾವಿ: ಕೇಂದ್ರ ಸರ್ಕಾರದಿಂದ ಬರುವ ಒಟ್ಟು ತೆರಿಗೆಯ ರಾಜ್ಯದ ಪಾಲು (States part in total tax) ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳಿಗೆ (Central project) ಬರಬೇಕಾದ ಅನುದಾನ 40,000 ಕೋಟಿ ರೂ. ಕಡಿತವಾಗಿದೆ. ಪರಿಣಾಮ ರಾಜ್ಯ ಹಣಕಾಸು ಪರಿಸ್ಥಿತಿ (Financial status) ಮೇಲೆ ಒತ್ತಡ ಹೆಚ್ಚಿದ್ದು, ನಾವು ನಮ್ಮ ಸಂಪನ್ಮೂಲದ ಮೇಲೆಯೇ ಹೆಚ್ಚು ಅವಲಂಬಿಸಬೇಕಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byregowda) ಅವರು ತಿಳಿಸಿದರು. ರಾಜ್ಯ ಬಜೆಟ್‌ನಲ್ಲಿ ಕೇಂದ್ರದ ಪಾಲು ವರ್ಷದಿಂದ ವರ್ಷಕ್ಕೆ ಇಳಿಯುತ್ತಿರುವುದನ್ನು ಅವರು ಅಂಕಿ ಅಂಶಗಳ ಮೂಲಕ ತೆರೆದಿಟ್ಟರು.

ಗುರುವಾರ ವಿಧಾನ ಪರಿಷತ್ (Assembly Session) ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ ವೆಂಕಟೇಶ್, “2018-19ನೇ ಸಾಲಿನಿಂದ 2022-23ರ ಸಾಲಿನವರೆಗಿನ ಅವಧಿಯಲ್ಲಿ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳಿಗಾಗಿ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳಿಗಾಗಿ ಬಿಡುಗಡೆಯಾದ ಅನುದಾನ ಎಷ್ಟು? ಈ ಅನುದಾನದಲ್ಲಿ ಖರ್ಚಾದ ಹಣ ಎಷ್ಟು?” ಎಂದು ಪ್ರಶ್ನಿಸಿದ್ದರು.

ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, “ನಮ್ಮ ರಾಜ್ಯದ ಬಜೆಟ್ ಗಾತ್ರ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ನಾವು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ತೆರಿಗೆ ಪಾಲು ಹೆಚ್ಚಳವಾಗಿದೆ. ಆದರೆ, ಬಜೆಟ್ ಗಾತ್ರಕ್ಕೆ ಹೋಲಿಕೆ ಮಾಡಿದರೆ, ಕೇಂದ್ರದಿಂದ 5 ವರ್ಷಗಳಲ್ಲಿ ಸುಮಾರು 40,000 ಕೋಟಿ ರೂ. ಅನುದಾನ ಕಡಿತವಾಗಿದೆ. ಇದರಿಂದ ನಮ್ಮ ಸಂಪನ್ಮೂಲ ಕ್ರೋಡೀಕರಣಕ್ಕೆ ಹೆಚ್ಚಿನ ಹೊಡೆತ ಬಿದ್ದಿದೆ” ಎಂದು ಬೇಸರ ವ್ಯಕ್ತಪಡಿಸಿದರು.

2017-18ನೇ ಸಾಲಿನಲ್ಲಿ ಅಂದಿನ ಸರ್ಕಾರ 2.37 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದಾಗ ಕೇಂದ್ರ ಸರ್ಕಾರ 43,369 ಕೋಟಿ ರೂ. (ಶೇ.23.3) ಅನುದಾನ ನೀಡಿತ್ತು. ಪ್ರಸ್ತುತ 3.25 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಲಾಗಿದ್ದು, ಕೇಂದ್ರದಿಂದ ನಮಗೆ ಸಿಗುವುದು ಕೇವಲ 56,000 ಕೋಟಿ ರೂ. ಅಂದರೆ ಕೇವಲ ಶೇ. 17.5 ಮಾತ್ರ. ನಮ್ಮ ಬಜೆಟ್ ಗಾತ್ರ ಹೆಚ್ಚುತ್ತಿದೆಯೇ ಹೊರತು, ಕೇಂದ್ರದ ಪಾಲು ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಿದೆ. ಬಜೆಟ್ ಗಾತ್ರಕ್ಕೆ ತಕ್ಕಂತೆ ಅನುದಾನ ನೀಡಬೇಕಲ್ಲವೇ? ಎಂದು ಅವರು ಪ್ರಶ್ನಿಸಿದರು.

ಕೇಂದ್ರ ಪುರಸ್ಕೃತ ಯೋಜನೆಯಿಂದ 20,000 ಕೋಟಿ ರೂ. ಹಾಗೂ ಜಿಎಸ್‍ಟಿ ಪರಿಹಾರವಾಗಿ 20,000 ಕೋಟಿ ರೂ. ರಾಜ್ಯಕ್ಕೆ ಬರಬೇಕು. ವರ್ಷದಿಂದ ವರ್ಷಕ್ಕೆ ಕೇಂದ್ರದ ತೆರಿಗೆ ಪಾಲು ಕಡಿಮೆಯಾಗುತ್ತಿದೆಯೇ ಹೊರತು, ಹೆಚ್ಚಳವಾಗುತ್ತಿಲ್ಲ. ನಮ್ಮ ಪಾಲು ಮಾತ್ರ ಹೆಚ್ಚಾಗುತ್ತಲೇ ಇದೆ. ಕೇಂದ್ರ ಸರ್ಕಾರ ನಮಗೆ ಆರ್ಥಿಕ ವರ್ಷದ ಅವಯೊಳಗೆ ನಮ್ಮ ಪಾಲಿನ ಹಣವನ್ನು ಕೊಡಬಹುದು ಎಂದು ಸಚಿವ ಕೃಷ್ಣಬೈರೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಜಿಎಸ್‌ಟಿ ಪರಿಹಾರ 11,495 ಕೋಟಿ ರೂ. ಬರಬೇಕು

14 ಮತ್ತು 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕೇಂದ್ರಕ್ಕೆ 5495 ಕೋಟಿ ರೂ. ವಿಶೇಷ ಅನುದಾನ ಹಾಗೂ 6,000 ಕೋಟಿ ರೂ. ಜಿಎಸ್‍ಟಿ ಪರಿಹಾರ ಸೇರಿದಂತೆ ರಾಜ್ಯಕ್ಕೆ 11,495 ಕೋಟಿ ರೂ. ಅನುದಾನ ಬರಬೇಕು. ಕಳೆದ ಆ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ಪತ್ರ ಬರೆದು ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು. ಆದರೂ ಹಣ ಬಿಡುಗಡೆ ಮಾಡಿಲ್ಲ. ಖಂಡಿತವಾಗಿಯೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Belagavi Winter Session : ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

ಜಿಎಸ್‍ಟಿ ಪರಿಹಾರವಾಗಿ 2339 ಕೋಟಿ ರೂ. ಹಾಗೂ ಕೇಂದ್ರ ಪುರಸ್ಕೃತ ಯೋಜನೆಗೆ 1,191 ಕೋಟಿ ರೂ. ಬಾಕಿ ಇದ್ದು, ಇದನ್ನು ಬಿಡುಗಡೆ ಮಾಡುವಂತೆ ಕೋರಿ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ನಮ್ಮ ಪ್ರಯತ್ನವನ್ನು ನಾವು ಮುಂದುವರೆಸಿದ್ದೇವೆ. ಕೇಂದ್ರ ಸರ್ಕಾರ ನಮಗೆ ಅನುದಾನವನ್ನು ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದರು.

ಈ ವರ್ಷ 76 ಸಾವಿರ ಕೋಟಿ ರೂ. ಅನುದಾನ ದೊರೆಯಬೇಕಿತ್ತು

ಒಂದು ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದಾಗ, ಶೇ. 23ರಷ್ಟು ಕೇಂದ್ರದ ಅನುದಾನ ದೊರೆಯುತ್ತಿತ್ತು. ಈಗ ಮೂರು ಲಕ್ಷ ಕೋಟಿ ರೂ. ಗೂ ಹೆಚ್ಚು ಬಜೆಟ್ ಮಂಡಿಸಿರುವಾಗ 76 ಸಾವಿರ ಕೋಟಿ ರೂ. ಅನುದಾನ ದೊರೆಯಬೇಕು. ದುರ್ದೈವವೆಂದರೆ, ಬಜೆಟ್ ಗಾತ್ರವನ್ನೇ ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. ನಮ್ಮ ಸಂಪತ್ತಿನ ಮೇಲೆ ನಾವು ಅವಲಂಬಿತವಾಗಿರುವುದರಿಂದ ನಮಗೆ ಹೆಚ್ಚಿನ ಆರ್ಥಿಕ ಹೊರೆಯಾಗುತ್ತದೆ. ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಅವರು ಮನವಿ ಮಾಡಿದರು.

Continue Reading

ಕರ್ನಾಟಕ

Karnataka Drought: ಮುಂದಿನ ವಾರ ಡಿಬಿಟಿ ಮೂಲಕ ರೈತರಿಗೆ ಬರ ಪರಿಹಾರ; 2 ಸಾವಿರ ರೂ.ವರೆಗೆ ಜಮೆ

Karnataka Drought : ಡಿಬಿಟಿ ಮೂಲಕ ಮುಂದಿನ ವಾರ ಭಾಗಶಃ ಪರಿಹಾರದ ಮೊದಲ ಕಂತನ್ನು ಹಾಕಲಿದ್ದೇವೆ. ಕೇಂದ್ರ ಸರ್ಕಾರದಿಂದ ಪರಿಹಾರದ ಹಣ ಬರುತ್ತಿದ್ದಂತೆ ಬಾಕಿ ಪರಿಹಾರದ ಹಣವು ರೈತರ ಖಾತೆಗೆ ಜಮೆ ಆಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

VISTARANEWS.COM


on

Karnataka Drought
Koo

ಬೆಳಗಾವಿ: ಭೀಕರ ಬರಕ್ಕೆ ರಾಜ್ಯದ ಬಹುತೇಕ ಭಾಗ (Karnataka Drought) ತುತ್ತಾಗಿದೆ. ಅಲ್ಲದೆ, 236 ತಾಲೂಕುಗಳಲ್ಲಿ 223 ತಾಲೂಕುಗಳನ್ನು ಈಗಾಗಲೇ ಬರಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ. ಮಳೆ ಇಲ್ಲದೆ ಬೆಳೆದ ಬೆಳೆ ಕೈಗೆ ಸಿಗದೆ ರೈತ ಕಂಗಾಲಾಗಿದ್ದಾನೆ. ಈ ಹಿನ್ನೆಲೆಯಲ್ಲಿ ರೈತರಿಗೆ ಅವರ ಜಮೀನಿಗೆ ಅನುಗುಣವಾಗಿ 2 ಸಾವಿರ ರೂಪಾಯಿವರೆಗೆ ಬೆಳೆ ಪರಿಹಾರ ಹಣವನ್ನು (Crop Compensation Money) ಡಿಬಿಟಿ ಮೂಲಕ ನೇರವಾಗಿ ಜಮೆ ಮಾಡುವುದಾಗಿ ಈಚೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದರು. ಈಗ ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ (Revenue Minister Krishna Byre Gowda) ಸ್ಪಷ್ಟನೆ ನೀಡಿದ್ದು, ಮುಂದಿನ ವಾರದಲ್ಲಿ ಭಾಗಶಃ ರೈತರಿಗೆ ನೇರವಾಗಿ 2 ಸಾವಿರ ರೂಪಾಯಿ ವರೆಗೆ ಪರಿಹಾರದ ಹಣವನ್ನು ವರ್ಗಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎನ್‌. ರವಿಕಮಾರ್ ಅವರು ಬರದ ಪರಿಹಾರದ ಬಗ್ಗೆ ಪ್ರಶ್ನೆ ಕೇಳಿದ್ದರು. ರೈತರಿಗೆ ಯಾವಾಗ ಬರ ಪರಿಹಾರ ನೀಡಲಾಗುತ್ತದೆ ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ಈ ವರ್ಷ ಬರದಿಂದ ಜನರು ಸಾಕಷ್ಟು ಸಮಸ್ಯೆಯನ್ನು ಎದುರಿಸಿದ್ದಾರೆ. ಇದು ನಮ್ಮ ಗಮನಕ್ಕೆ ಬಂದಿದೆ. ರೈತರಿಗೆ ಅನುಕೂಲವಾಗುವಂತೆ ಸರ್ಕಾರ ಏನೆಲ್ಲ ಮಾಡಬೇಕೋ? ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೋ? ಅದನ್ನು ನಾವು ನಿರಂತರವಾಗಿ ಮಾಡುತ್ತಾ ಬಂದಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ವಿಪತ್ತು ಪ್ರಾಧಿಕಾರ ಮೂರು ಸಭೆಯನ್ನು ನಡೆಸಿದೆ. ಸಂಪುಟ ಉಪ ಸಮಿತಿ ಸಹ ಇದಕ್ಕಾಗಿ ಕೆಲಸ ಮಾಡಿದೆ. ಈಗಾಗಲೇ 10 ಸಭೆಗಳನ್ನು ಬರದ ಸಲುವಾಗಿ ಮಾಡಿದ್ದೇವೆ. ದೇಶದ 12 ರಾಜ್ಯಗಳಲ್ಲಿ ಮುಂಗಾರು ಅವಧಿಯ ಬರಗಾಲ ಇದೆ. 18 ರಾಜ್ಯಗಳಲ್ಲಿ ಹಿಂಗಾರು ಅವಧಿಯಲ್ಲಿ ಬರಗಾಲ ಆವರಿಸಿದೆ. ಮುಂಗಾರು ಅವಧಿಯಲ್ಲಿ ಸೆಪ್ಟೆಂಬರ್ 13 ರಂದೇ ರಾಜ್ಯದಲ್ಲಿ ಬರಗಾಲ ಘೋಷಣೆ ಆಗಿತ್ತು. ಬೇರೆ ರಾಜ್ಯಗಳು ನಾವು ಘೋಷಿಸಿದ 2 ತಿಂಗಳ ನಂತರ ಘೋಷಣೆ ಮಾಡಿವೆ. ನಾವು ಎಲ್ಲರಿಗಿಂತ ಮೊದಲೇ ಬರವನ್ನು ಘೋಷಣೆ ಮಾಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಗೋಶಾಲೆ ಆರಂಭಕ್ಕೆ ಸೂಚಿಸಲಾಗಿದೆ

ಸೆಪ್ಟೆಂಬರ್ 22 ರಂದು ಮೊದಲ ಮನವಿಯನ್ನು ಕೇಂದ್ರಕ್ಕೆ ಮಾಡಿದ್ದೇವೆ. ಮೇವಿನ ಕೊರತೆ ಬರಬಹುದು ಎಂದು 7 ಲಕ್ಷ ಬಿತ್ತನೆ ಬೀಜದ ಕಿಟ್‌ಗಳನ್ನು ಬರಪೀಡಿತ ತಾಲೂಕುಗಳಲ್ಲಿ ರೈತರಿಗೆ ಕೊಟ್ಟಿದ್ದೇವೆ. 90 ವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಅದರಲ್ಲಿ 60 ಕಡೆ ಖಾಸಗಿ ಬೋರ್​ವೆಲ್​ ಬಾಡಿಗೆ ಪಡೆದಿದ್ದು, 25 ಕಡೆ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ. ಚಿತ್ರದುರ್ಗ ಸೇರಿ ಕೆಲವಡೆ ಹೆಚ್ಚಿನ ಸಮಸ್ಯೆ ಇದೆ, ಅಲ್ಲಿ ಗೋಶಾಲೆ ಆರಂಭಕ್ಕೆ ಸೂಚಿಸಲಾಗಿದೆ. ಜಿಲ್ಲಾಡಳಿತಗಳ ಬಳಿ 894 ಕೋಟಿ ಹಣವನ್ನು ಸಿದ್ಧವಿಟ್ಟಿದ್ದೇವೆ. ಕುಡಿಯುವ ನೀರಿನ ಸಮಸ್ಯೆ ಆದ 24 ಗಂಟೆಯ ಒಳಗೆ ಟ್ಯಾಂಕರ್ ಮೂಲಕವಾದರೂ ಪೂರೈಸಿ ಸಮಸ್ಯೆ ಪರಿಹಾರಕ್ಕೆ ಸೂಚಿಸಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಇದನ್ನೂ ಓದಿ: Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಕೇಂದ್ರದಿಂದ ನಮಗೆ ಹಣ ಬರಬೇಕು

ರಾಜ್ಯದ ರೈತರ ಸ್ಥಿತಿಗತಿ ಕಷ್ಟವಿದೆ. ಈ ಬಗ್ಗೆ ನಾವು ಬರ ಅಧ್ಯಯನಕ್ಕೆ ಬಂದ ತಂಡಕ್ಕೂ ಮನವರಿಕೆ ಮಾಡಿದ್ದೇವೆ. ರಾಜ್ಯಕ್ಕೆ ಬರಬೇಕಾದ ಹಣವನ್ನು ಬೇಗ ಬಿಡುಗಡೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆವು, ಅವರು ಇನ್ನೂ ಈ ಬಗ್ಗೆ ಯಾವುದೇ ತೀರ್ಮಾನವನ್ನು ಮಾಡಿಲ್ಲ. ಹೀಗಾಗಿ ಭಾಗಶಃ ಪರಿಹಾರವಾಗಿ 2 ಸಾವಿರ ರೂಪಾಯಿವರೆಗೆ ಕೊಡಲು ಸಿಎಂ ಸಿದ್ದರಾಮಯ್ಯ ಅವರು ತೀರ್ಮಾನಿಸಿದ್ದಾರೆ. ಡಿಬಿಟಿ ಮೂಲಕ ಮುಂದಿನ ವಾರ ಭಾಗಶಃ ಪರಿಹಾರದ ಮೊದಲ ಕಂತನ್ನು ಹಾಕಲಿದ್ದೇವೆ. ಕೇಂದ್ರ ಸರ್ಕಾರದಿಂದ ಪರಿಹಾರದ ಹಣ ಬರುತ್ತಿದ್ದಂತೆ ಬಾಕಿ ಪರಿಹಾರದ ಹಣವು ರೈತರ ಖಾತೆಗೆ ಜಮೆ ಆಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

Continue Reading

ಕರ್ನಾಟಕ

Belagavi Winter Session : ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Belagavi Winter Session : ವಿಧಾನಸಭೆ ಕಲಾಪಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗುವ ಶಾಸಕರ ಹೆಸರು ಓದಿ ಹೇಳುವ ಸ್ಪೀಕರ್‌ ಯು.ಟಿ. ಖಾದರ್‌ ಅವರ ನಡೆ ಭಾರಿ ಕುತೂಹಲಹಕಾರಿಯಾಗಿ ಸಾಗಿದೆ.

VISTARANEWS.COM


on

Attendance Araga Jnanendra UT Khader Araga jnanendra
Koo

ಬೆಳಗಾವಿ: ಯು.ಟಿ. ಖಾದರ್‌ ಅವರು ವಿಧಾನಸಭೆಯ ಸ್ಪೀಕರ್‌ (Speaker UT Khader) ಆದ ಬಳಿಕ ಹೊಸ ಪದ್ಧತಿ ಶುರು ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಅಧಿವೇಶನಕ್ಕೆ ಶಾಸಕರು ತಡವಾಗಿ (Attendance Issue) ಬರುವುದನ್ನು ತಡೆಯಲು ಮೊದಲು ಬಂದವರಿಗೆ ಟೀ ಕಪ್‌ ಕೊಡುವುದು, ಹೆಸರು ಹೇಳುವುದು ಮೊದಲಾದ ಕ್ರಮಗಳಿಂದ ಸದನಕ್ಕೆ ಬೇಗ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಹೇಗಿದೆ ಎಂದರೆ ಶಾಸಕರು ನಾ ಮುಂದು ತಾ ಮುಂದು ಎಂಬಂತೆ ಬೇಗ ಬೇಗನೆ ಬರುತ್ತಿದ್ದಾರೆ, ಮಾತ್ರವಲ್ಲ, ನಾನು ಬೇಗ ಬಂದಿದ್ದೀನಿ, ನನ್ನ ಹೆಸರು ಹೇಳಿಲ್ಲ ಎಂದು ಮಕ್ಕಳಂತೆ ವರಾತ ತೆಗೆಯಲು ಶುರು ಮಾಡಿದ್ದಾರೆ!

ಗುರುವಾರ ಕಲಾಪ ಆರಂಭದಲ್ಲೂ ಹೀಗೇ ಆಯಿತು. ಸ್ಪೀಕರ್‌ ಯು.ಟಿ. ಖಾದರ್‌ ಅವರು ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ ಸದನಕ್ಕೆ ಸಮಯಕ್ಕೆ ಸರಿಯಾಗಿ ಬಂದ ಸದಸ್ಯರ ಹೆಸರನ್ನು ಅವರು ಓದಿ ಹೇಳಿದರು. ಆದರೆ, ಇದನ್ನು ಕೇಳಿದ ಶಾಸಕರು ನಾನೂ ಟೈಮಿಗೆ ಸರಿಯಾಗಿ ಬಂದಿದ್ದೇನೆ, ನನ್ನ ಹೆಸರು ಯಾಕೆ ಹೇಳ್ತಿಲ್ಲ ಎಂದು ಜಗಳ ಶುರು ಮಾಡಿದರು.

ಹೀಗೆ ವರಾತ ತೆಗೆದವರು ಸಣ್ಣ ಸಣ್ಣ ನಾಯಕರೇನೂ ಅಲ್ಲ. ಹಿಂದೆ ಗೃಹ ಸಚಿವರಾಗಿದ್ದ ಆರಗ ಜ್ಞಾನೇಂದ್ರ ಅವರು ಕೂಡಾ ಇದ್ದಾರೆ. ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ್ದನ್ನು ನೋಡಿದ ಅವರು, ನಾನು ಸಮಯಕ್ಕೆ ಸರಿಯಾಗಿ ಬಂದಿದ್ದೇನೆ, ನನ್ನನ್ನು ಯಾಕೆ ಗುರುತಿಸಿಲ್ಲ ಎಂದು ಸ್ಪೀಕರ್‌ ಅವರನ್ನು ಕೇಳಿದ್ದಾರೆ. ಅವರಲ್ಲದೆ ಇನ್ನೂ ಹಲವರು ಇದೇ ವಾದ ಮಾಡಿದರು.

ಆಗ ಯು.ಟಿ. ಖಾದರ್‌ ಅವರು, ಸದನ ಆರಂಭಕ್ಕೆ ಕೋರಂ ಬೇಕು ಅಲ್ವಾ? ಕೋರಂ ಭರ್ತಿಗೆ ಮೊದಲ 25 ಸದಸ್ಯರನ್ನು ಅಧಿಕಾರಿಗಳು ನೋಟ್‌ ಮಾಡಿ ಪಟ್ಟಿ ಕೊಡ್ತಾರೆ. ಸಿಸಿ ಕ್ಯಾಮೆರಾದಲ್ಲಿ ಎಲ್ಲವೂ ನೋಟ್‌ ಆಗಿರುತ್ತದೆ. ಏನಾದರೂ ಸಂಶಯ ಇದ್ದರೆ ನಿಮ್ಮನ್ನು ಕರೆಸಿ ಚೆಕ್ ಮಾಡ್ತೇವೆ, ಅನ್ಯಾಯ ಆದರೆ ನ್ಯಾಯ ಕೊಡ್ತೇವೆ ಎಂದು ಹೇಳಿದರು.

ಸಮಯಕ್ಕೆ ಮೊದಲು ಬರುವ ಎಲ್ಲರನ್ನೂ ಪರಿಗಣಿಸಿ

ಈ ವೇಳೆ ಮಧ್ಯ ಪ್ರವೇಶ ಮಾಡಿದ ವಿರೋಧ ಪಕ್ಷದ ನಾಯಕ ಆರ್.‌ಅಶೋಕ್ ಮಧ್ಯಪ್ರವೇಶ ಮಾಡಿದರು. ಈಗ ಕೋರಂ ಆಗುವವರೆಗೆ ಬರುವ ಸದಸ್ಯರನ್ನು ಮಾತ್ರ ಲೆಕ್ಕ ಹಾಕಲಾಗುತ್ತದೆ. ನಂತರ ಬರುವವರನ್ನೂ ಪರಿಗಣಿಸುತ್ತಿಲ್ಲ. ಆದರೆ ಕೋರಂ ಬಿಟ್ಟು ತಾವು ಸದನ ಆರಂಭಕ್ಕೆ ಮೊದಲು ಯಾರೇ ಬಂದರು ಪರಿಗಣಿಸಿ ಎಂದು ಮನವಿ ಮಾಡಿದರು.

ಆಗ ತಮಾಷೆಯಾಗಿ ಕಾಳೆದ ಯು.ಟಿ. ಖಾದರ್‌ ಅವರು, ಅಶೋಕ್‌ ಅವರೇ ಇದನ್ನು ನೀವು ಸ್ಪೀಕರ್ ಆದಾಗ ಅದನ್ನೂ ಮಾಡಿ ಎಂದು ಹೇಳಿದರು. ಇಷ್ಟು ಹೊತ್ತಿಗೆ ಮಧ್ಯ ಪ್ರವೇಶ ಮಾಡಿದ ಸುನಿಲ್‌ ಕುಮಾರ್‌ ಅವರು, ನಿಮ್ಮ ಹಾಗೂ ಅಶೋಕ್ ಗೆಳೆತನ ಚೆನ್ನಾಗಿದೆ ಎಂದು ಬಹಿರಂಗವಾಯಿತು. ಅಶೋಕ್ ಸ್ಪೀಕರ್ ಆಗಬೇಕು ಎಂದು ನೀವು ಹೇಳಿದ್ದನ್ನು ಅನುಮೋದಿಸುತ್ತೇನೆ ಎಂದರು.

ಯು.ಟಿ. ಖಾದರ್‌ ಅವರು ಯಾರೆಲ್ಲ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದಾರೆ ಎಂದು ಪಟ್ಟಿ ಓದಿ ಹೇಳುವುದರಿಂದ ಉಳಿದವರು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂಬ ಸಂದೇಶ ಕ್ಷೇತ್ರಕ್ಕೆ ರವಾನೆಯಾದರೆ ತಮ್ಮ ಕಥೆ ಏನು ಎನ್ನುವುದು ಎಲ್ಲ ಶಾಸಕರಿಗೂ ಆತಂಕ ಮೂಡಿಸಿದೆ. ಹೀಗಾಗಿ ಎಲ್ಲರೂ ತಾಮುಂದು, ನಾ ಮುಂದು ಎಂಬಂತೆ ಬರುತ್ತಿದ್ದಾರೆ!

ಇದನ್ನೂ ಓದಿ: UT Khader: ಉಡುಪಿ ಶ್ರೀಕೃಷ್ಣನಲ್ಲಿಗೆ ಸ್ಪೀಕರ್‌ ಖಾದರ್‌ ಭೇಟಿ; ಪ್ರಾರ್ಥಿಸಿದ್ದೇನು?

ವಿಧಾನಸಭೆಗೆ ಶಾಸಕರ ಹಾಜರಾತಿ ಕೊರತೆ

ಅಂದ ಹಾಗೆ ಕಲಾಪ ಆರಂಭದ ಹೊತ್ತಿನಲ್ಲಿ ಕಾಂಗ್ರೆಸ್ ನಿಂದ 55, ಬಿಜೆಪಿಯಿಂದ 40 ಮತ್ತು ಜೆಡಿಎಸ್‌ನಿಂದ 10 ಶಾಸಕರು ಹಾಜರಾಗಿದ್ದರು. ಉಳಿದವರು ಗೈರು ಹಾಜರಾಗಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್‌ ಜನಪ್ರತಿನಿಧಿಗಳು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹೋಗಿದ್ದರು.

Continue Reading
Advertisement
IPL 2024 Auction
ಐಪಿಎಲ್ 20239 mins ago

IPL 2024: ಹರಾಜಿನಲ್ಲಿ ಯಾವ ತಂಡಕ್ಕೆ ಎಷ್ಟು ಆಟಗಾರರನ್ನು ಖರೀದಿಸಬಹುದು? ಇಲ್ಲಿದೆ ಮಾಹಿತಿ

Assembly session Drought HD Kumaraswamy
ಕರ್ನಾಟಕ14 mins ago

Assembly Session : ಬರ ಸಂತ್ರಸ್ತ ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ; HDK ಆಗ್ರಹ

waiter beaten to death, tray of used plates touched guests in marriage
ಕ್ರೈಂ16 mins ago

ಬಳಸಿದ ಪ್ಲೇಟ್‌ಗಳಿದ್ದ ಟ್ರೆ ತಾಗಿದ್ದಕ್ಕೆ ವೇಟರ್‌ನನ್ನು ಹೊಡೆದು ಕೊಂದೇ ಬಿಟ್ರು!

Krishna Byregowda Central assistance
ಕರ್ನಾಟಕ44 mins ago

Assembly Session : ಕೇಂದ್ರ ಅನುದಾನ ವರ್ಷದಿಂದ ವರ್ಷಕ್ಕೆ ಇಳಿಕೆ; ಪೈಸೆ ಪೈಸೆ ಲೆಕ್ಕ ಕೊಟ್ಟ ಕೃಷ್ಣ ಬೈರೇಗೌಡ

Karnataka Drought
ಕರ್ನಾಟಕ54 mins ago

Karnataka Drought: ಮುಂದಿನ ವಾರ ಡಿಬಿಟಿ ಮೂಲಕ ರೈತರಿಗೆ ಬರ ಪರಿಹಾರ; 2 ಸಾವಿರ ರೂ.ವರೆಗೆ ಜಮೆ

IT raids on liquor traders across Odisha and Jharkhand
ದೇಶ56 mins ago

ತೆರಿಗೆಗಳ್ಳರ ಮೇಲೆ ಐಟಿ ದಾಳಿ; ನೋಟು ಎಣಿಸಿ ಎಣಿಸಿ ಕೌಂಟಿಂಗ್ ಮೆಷಿನ್‌ಗೆ ಸುಸ್ತು!

Attendance Araga Jnanendra UT Khader Araga jnanendra
ಕರ್ನಾಟಕ1 hour ago

Belagavi Winter Session : ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Madhu Bangarappa in Belagavi Winter Session
ಕರ್ನಾಟಕ2 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Pressmeet for Demand for construction of bypass road in Yallapur
ಉತ್ತರ ಕನ್ನಡ2 hours ago

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯ

Israel
ಪ್ರಮುಖ ಸುದ್ದಿ2 hours ago

Israel Palestine War: ಅರ್ಧದಷ್ಟು ಹಮಾಸ್ ಕಮಾಂಡರ್‌ಗಳು ಫಿನಿಷ್! ಇಸ್ರೇಲ್ ಹೇಳಿಕೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Madhu Bangarappa in Belagavi Winter Session
ಕರ್ನಾಟಕ2 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ2 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ8 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ15 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ23 hours ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ1 day ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ1 day ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ1 day ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 day ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 day ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

ಟ್ರೆಂಡಿಂಗ್‌