BSF Soldier | ಪಶ್ಚಿಮ ಬಂಗಾಳದಲ್ಲಿ ಬೀದರ್ ಮೂಲದ ಬಿಎಸ್ಎಫ್ ಯೋಧ ಸಾವು Vistara News
Connect with us

ಕರ್ನಾಟಕ

BSF Soldier | ಪಶ್ಚಿಮ ಬಂಗಾಳದಲ್ಲಿ ಬೀದರ್ ಮೂಲದ ಬಿಎಸ್ಎಫ್ ಯೋಧ ಸಾವು

ಹಲವು ದಿನಗಳಿಂದ ಕಾಯಿಲೆಗೆ ತುತ್ತಾಗಿದ್ದ ಬೀದರ್‌ ಜಿಲ್ಲೆಯ ಬಿಎಸ್‌ಎಫ್‌ ಯೋಧರೊಬ್ಬರು (BSF Soldier) ಪಶ್ಚಿಮ ಬಂಗಾಳದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

VISTARANEWS.COM


on

BSF
Koo

ಬೀದರ್: ಕಾಯಿಲೆಯಿಂದ ಬಳಲುತ್ತಿದ್ದ ಬೀದರ್‌ನ ಬಿಎಸ್ಎಫ್ ಯೋಧ (BSF Soldier) ಮಹಾದೇವ ಅವರು ಶನಿವಾರ ನಿಧನರಾದ ಹಿನ್ನೆಲೆಯಲ್ಲಿ ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲಾಗಿದೆ.

ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಚಿಕ್ಕಮೂರ್ಗ ಗ್ರಾಮದವರಾದ ಮಹಾದೇವ್‌ ಕೆಲವು ದಿನಗಳಿಂದ ಕಾಮಾಲೆ ರೋಗದಿಂದ ಬಳಲುತ್ತಿದ್ದರು. ಇವರಿಗೆ ಪಶ್ಚಿಮ ಬಂಗಾಳದ ಸಿಲಿಗುರಿ ಜಿಲ್ಲೆಯ ದೇಶನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಯೋಧ ಮಹಾದೇವ್‌ ಮೃತಪಟ್ಟಿದ್ದಾರೆ.

BSF Soldier
<strong>ಯೋಧ ಮಹಾದೇವ<strong>

ಹುಟ್ಟೂರು ಚಿಕ್ಕಮೂರ್ಗಕ್ಕೆ ಯೋಧ ಮಹಾದೇವ ಅವರ ಪಾರ್ಥಿವ ಶರೀರ ಆಗಮಿಸಿದ್ದು, ಮಗನನ್ನು ಕಳೆದುಕೊಂಡ ಕುಟುಂಬ ಸದಸ್ಯರ ರೋದನ ಮುಗಿಲು ಮುಟ್ಟಿದೆ. ಗ್ರಾಮಸ್ಥರು ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.

ಇದನ್ನೂ ಓದಿ | CISF ಯೋಧನಿಂದ ಗುಂಡಿನ ದಾಳಿ, ಮೇಲಧಿಕಾರಿ ಸಾವು, ಹಲವರಿಗೆ ಗಾಯ

Bidar based BSF Soldier dies in West Bengal

ಕರ್ನಾಟಕ

Basavaraj Bommai: ವಿಜಯಪುರದಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ; ಬೊಮ್ಮಾಯಿ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳತ್ತ ರಾಜ್ಯ ಸರ್ಕಾರ ಮುಂದಾಗುತ್ತಿದೆ. ಮಂಗಳವಾರ ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.

VISTARANEWS.COM


on

Edited by

Koo

ವಿಜಯಪುರ: ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿಯಿದ್ದು, ಈಗಾಗಲೇ 2.87 ಸಾವಿರ ಮನೆಗಳಿಗೆ ನೀರು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಜಿಲ್ಲಾಡಳಿತ ವಿಜಯಪುರ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮುದ್ದೇಬಿಹಾಳದ ನಾಲತಾವಾಡ ಪಟ್ಟಣದಲ್ಲಿ ಆಯೋಜಿಸಿದ್ದ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯವನ್ನು ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ನೆರವೇರಿಸಿ ಮಾತನಾಡಿದರು.

ಜಲ ಜೀವನ್ ಮಿಷನ್ ಅಡಿಯಲ್ಲಿ ದೇಶದಲ್ಲಿ 12 ಕೋಟಿ ಮನೆಗಳಿಗೆ ನೀರು ಒದಗಿಸಲಾಗಿದೆ. ಮೂರು ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸಲಾಗಿದೆ. ಮುಂದಿನ ವರ್ಷ 25 ಲಕ್ಷ ಮನೆಗಳಿಗೆ ನೀರು ಒದಗಿಸಲಾಗುತ್ತಿದೆ. ಜಲಧಾರೆಯಲ್ಲಿ ನಗರ ಪ್ರದೇಶಗಳಲ್ಲಿ3000 ಕೋಟಿ ರೂ.ಗಳನ್ನು ಒದಗಿಸಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಪ್ರದೇಶಗಳಲ್ಲಿ ನೀರು ಒದಗಿಸುವ ಚಿಂತನೆ ಇದೆ ಎಂದರು.

4 ಸಾವಿರ ಕೋಟಿ ರೂ. ಗಳಿಂತ ಹೆಚ್ಚು ಮೌಲ್ಯದ ಅಭಿವೃದ್ಧಿ

1,600 ಕೋಟಿ ರೂ.ಗಳ ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿದೆ. ಈ ಮೊದಲು 2500 ಕೋಟಿ ರೂ.ಗಳ ವೆಚ್ಚದ ಅಭಿವೃದ್ಧಿಯನ್ನು ಶಾಸಕ ನಡಹಳ್ಳಿ ಮಾಡಿದ್ದಾರೆ. ಒಂದು ಅವಧಿಯಲ್ಲಿ ನಾಲ್ಕು ಸಾವಿರ ಕೋಟಿ ರೂ.ಗಳಿಂತ ಹೆಚ್ಚು ಮೌಲ್ಯದ ಅಭಿವೃದ್ಧಿ ಮಾಡಲಾಗಿರುವುದು ಒಂದು ದಾಖಲೆಯಾಗಿದೆ. ಉತ್ತರ ಕರ್ನಾಟಕದ, ಹಿಂದುಳಿದ ವರ್ಗಗಳ ಅಭಿವೃದ್ಧಿಯಾಗಬೇಕು ಎಂದು ಹೇಳಿದರು.

ನಂಜುಂಡಪ್ಪ ವರದಿಯಿಂದ ಹಿಡಿದು ಬಹಳಷ್ಟು ವರದಿಗಳಿವೆ. ನಂಜುಂಡಪ್ಪ ವರದಿಯ ಅನುಷ್ಠಾನವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಡಿದ್ದು. ಈ ಭಾಗದಲ್ಲಿ ವಿಶೇಷವಾಗಿ ನೀರಾವರಿಗೆ ಮೂಲಭೂತ ಸೌಕರ್ಯ, ಕುಡಿಯುವ ನೀರು, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ಪರಿಣಾಮ ಇಷ್ಟು ದೊಡ್ಡ ಪ್ರಮಾಣದಲ್ಲಿ ಈ ಕ್ಷೇತ್ರದ ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ ಎಂದರು.

ಕೆಲಸಗಳೇ ನಮ್ಮ ಗ್ಯಾರಂಟಿ, ಆಶ್ವಾಸನೆಗಳಲ್ಲ

ಕಿಸಾನ್ ಸಮ್ಮಾನ್ ಯೋಜನೆಯಡಿ 16 ಸಾವಿರ ಕೋಟಿ ವೆಚ್ಚದಲ್ಲಿ 54 ಲಕ್ಷ ರೈತರಿಗೆ ಅನುಕೂಲ ಕಲ್ಪಿಸಲಾಗಿದ್ದು ನಮ್ಮದು ರೈತಪರ ಸರ್ಕಾರ. ಮುಧೋಳದಲ್ಲಿ 975 ಕೋಟಿ ರೂ.ಗಳ ಅನುದಾನವನ್ನು 47 ಲಕ್ಷ ರೈತರಿಗೆ ಬಿಡುಗಡೆ ಮಾಡಲಾಗುತ್ತಿದೆ. ನಾವು ಮಾತಿಗಿಂತ ಮಾಡಿ ತೋರಿಸುತ್ತೇವೆ. ನಮ್ಮ ಕೆಲಸಗಳೇ ನಮ್ಮ ಗ್ಯಾರಂಟಿ. ಆಶ್ವಾಸನೆಗಳು ನಮ್ಮ ಗ್ಯಾರಂಟಿ ಅಲ್ಲ ಸಿಎಂ ಬೊಮ್ಮಾಯಿ ವಿರೋಧ ಪಕ್ಷಗಳಿಗೆ ತಿವಿದರು.

ರೈತ ವಿದ್ಯಾನಿಧಿ ಯೋಜನೆ, ರೈತಶಕ್ತಿ ಯೋಜನೆಯಡಿ 386 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ವರ್ಷ ಭೂ ಶಕ್ತಿ ಯೋಜನೆಯಡಿ ಬೀಜಗೊಬ್ಬರಕ್ಕೆ 10 ಸಾವಿರ ರೂ.ಗಳನ್ನು ನೀಡಲಾಗುವುದು. ರೈತರಿಗೆ ಜೀವ ವಿಮೆಗಾಗಿ 180 ಕೋಟಿ ಮೀಸಲಿಡಲಾಗಿದೆ. 53 ಲಕ್ಷ ಜನರಿಗೆ ಇದರ ಪ್ರಯೋಜನವಾಗಲಿದೆ. ಶೂನ್ಯ ಬಡ್ಡಿದರದಲ್ಲಿ 5 ಲಕ್ಷದವರೆಗೆ ಸಾಲದ ವ್ಯವಸ್ಥೆ, 3500 ಕೋಟಿ ರೂ.ಗಳ ಆವರ್ತ ನಿಧಿಯಡಿ ಮೀಸಲಿಡಲಾಗಿದೆ. ಸಿರಿಧಾನ್ಯ ಬೆಳೆದವರಿಗೆ 1 ಹೆಕ್ಟೇರ್‌ಗೆ 10 ಸಾವಿರ ರೂ.ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಸ್ವಯಂ ಉದ್ಯೋಗ ಮಹತ್ವ

ಸ್ತ್ರೀ ಶಕ್ತಿ ಸಂಘಗಳಿಗೆ ಸ್ವಯಂ ಉದ್ಯೋಗಕ್ಕಾಗಿ 20 ಸಾವಿರ ಹಣ ಬಿಡುಗಡೆ ಮಾಡಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯೋಜನೆಯನ್ನು 23 ರಂದು 13 ಸಾವಿರ ಯುವಶಕ್ತಿ ಕೇಂದ್ರಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು. ಈ ಮೂಲಕ ಕಾಯಕ ಕ್ರಾಂತಿ ಮಾಡಬೇಕು ಎಂದರು. ಎಸ್‌ಸಿ, ಎಸ್‌ಟಿಗಳಿಗೆ ಮೀಸಲಾತಿ ಹೆಚ್ಚಿಸಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ. ಎಲ್ಲ ವರ್ಗಕ್ಕೆ ನ್ಯಾಯ ನೀಡುವ ಕೆಲಸ ಮಾಡಿದ್ದೇವೆ. ಮುದ್ದೇಬಿಹಾಳ ಮಾದರಿಯಾಗುವಂತೆ ಕೆಲಸ ಮಾಡಲಾಗಿದೆ ಎಂದು ಸಿಎಂ ಹೇಳುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದರು.

ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕಟಿ ಬದ್ದ

ನಮ್ಮ ಸರ್ಕಾರ ಕೆರೆ ತುಂಬಿಸುವ ಯೋಜನೆಗಳನ್ನು ಸಂಪೂರ್ಣಗೊಳಿಸಲಾಗುತ್ತಿದೆ. ರೇವಣಸಿದ್ದೇಶ್ವರ ಏತ ನೀರಾವರಿಗೆ ಅಡಿಗಲ್ಲು ಹಾಕಲಾಗಿದೆ. ನಮ್ಮ ಪಾಲಿನ ನೀರನ್ನು ಸದ್ಬಳಕೆ ಮಾಡಲು ನಮ್ಮ ಸರ್ಕಾರ ಆದ್ಯತೆ ನೀಡಿದೆ. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಈ ಬಾರಿ ಕಿತ್ತೂರು ಅಭಿವೃದ್ಧಿ ಮಂಡಳಿ ರಚನೆ ಮಾಡಲಾಗಿದೆ. ಅದಕ್ಕೆ ಅನುದಾನ ನೀಡಿ, ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕಟಿಬದ್ಧರಾಗಿ ಕೆಲಸ ಮಾಡುವುದಾಗಿ ತಿಳಿಸಿದರು.

ಇದನ್ನೂ ಓದಿ: Murder Case: ಅವಳದ್ದು ಮೋಹ, ಇವನಿಗೆ ಮಧುಮೇಹ; ಕೊಲೆಯಲ್ಲಿ ಅಂತ್ಯವಾಯ್ತು ಕಾಳಜಿ ಕಲಹ

ವಿಜಯಪುರ ಜಿಲ್ಲೆಗೆ ಐದು ನದಿಗಳು ಹರಿದರೂ ಬರ ತಪ್ಪಲಿಲ್ಲ. ವಿಜಯಪುರ ಜಿಲ್ಲೆಯ ಎಲ್ಲ ಕ್ಷೇತ್ರಗಳ ನೀರಾವರಿಯಾಗುವವರೆಗೂ ಸುಮಾರು 5 ಲಕ್ಷ ಹೆಕ್ಟೇರ್‌ಗೆ ನೀರಾವರಿಯಾಗುವವರೆಗೂ ನಾವು ವಿಶ್ರಮಿಸುವುದಿಲ್ಲ. ಮುದ್ದೇಬಿಹಾಳ ಕ್ಷೇತ್ರ ಎಲ್ಲಾ ರೀತಿಯಲ್ಲೂ ಅಭಿವೃದ್ಧಿಯಾದಂತೆ ಕರ್ನಾಟಕದ ಎಲ್ಲ ಕ್ಷೇತ್ರಗಳೂ ಅಭಿವೃದ್ಧಿಪಡಿಸಲು ಶ್ರಮವಹಿಸುತ್ತಿವೆ. ಕಳೆದ 3 ವರ್ಷಗಳಲ್ಲಿ 2 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಮಾಡಲಾಗಿದೆ. ಇದೊಂದು ದಾಖಲೆ ಎಂದರು.

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್‌ ಸಿಗುವುದು ಡೌಟು ಎಂದ ಕಾಂಗ್ರೆಸ್‌

ನಿರುದ್ಯೋಗಿ ಯುವಕರಿಗೆ ಮಾಸಿಕೆ ಭತ್ಯೆ ನೀಡುವ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಯನ್ನು ಮೊದಲಿಗೆ ರಾಹುಲ್‌ ಗಾಂಧಿಯವರಿಂದಲೇ ಆರಂಭಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದರು.

VISTARANEWS.COM


on

Edited by

congress says cm basavraj bommai will not get chance to contest inkarnataka election
Koo

ಬೆಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಯುವಕರಿಗೆ ಮಾಸಿಕ ನುರುದ್ಯೋಗ ಭತ್ಯೆ ನೀಡುವ ಗ್ಯಾರಂಟಿ ಯೋಜನೆಯನ್ನು ಟೀಕಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೇ ಚುನಾವಣೆ ಟಿಕೆಟ್‌ ಸಿಗುವುದು ಅನುಮಾನ ಎಂದು ಕಾಂಗ್ರೆಸ್‌ ಹೇಳಿದೆ.

ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ಮೂರು ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ ಮಾಸಿಕ ಒಂದೂವರೆ ಸಾವಿರ ರೂ. ನೀಡುವುದಾಗಿ ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಘೋಷಣೆ ಮಾಡಿದ್ದರು. ಈ ಕುರಿತು ಬಾಗಲಕೋಟೆಯಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ್ದ ಬೊಮ್ಮಾಯಿ, ಈ ಯೋಜನೆಯನ್ನು ಮೊದಲಿಗೆ ರಾಹುಲ್‌ ಗಾಂಧಿಯವರಿಂದಲೇ ಆರಂಭಿಸಬೇಕು. ನಿರುದ್ಯೋಗಿಗಳಿಗೆ ಭತ್ಯೆ ಬಗ್ಗೆ ರಾಜಸ್ಥಾನ, ಛತ್ತೀಸ್‌ಗಢದಲ್ಲಿಯೂ ಹೇಳಿದ್ದರು. ಆದರೆ ಅನುಷ್ಠಾನವಾಗಿಲ್ಲ. ಅವರು ಹತಾಶರಾಗಿದ್ದಾರೆ. ಅವರಿಗೆ ಆಂತರಿಕ ಸಮೀಕ್ಷೆಯಲ್ಲಿ ಗೆಲ್ಲುವುದಿಲ್ಲ ಎಂದು ತಿಳಿದಿದೆ. ಶೇ 3-4 ರಷ್ಟು ಮತ ಗೆಲ್ಲಲು ಈ ರೀತಿಯ ಆಗಲಾರದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜಸ್ಥಾನ ಅಥವಾ ಛತ್ತೀಸ್‌ಗಢ ಅಲ್ಲ. ಕರ್ನಾಟಕದ ಜನ ಬಹಳ ಪ್ರಬುದ್ಧರಿದ್ದಾರೆ. ಯಾರು ಯಾಕೆ ಮಾತನಾಡುತ್ತಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದಿದ್ದರು.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಸ್ವತಃ ತಮಗೇ ಬಿಜೆಪಿಯ ಟಿಕೆಟ್ ಸಿಗುವ ಭರವಸೆ ಇಲ್ಲದ, ಟಿಕೆಟ್ ಸಿಕ್ಕರೂ ಗೆಲ್ಲುವ ಭರವಸೆ ಇಲ್ಲದ, ಗೆದ್ದರೂ ತಾವೇ ಸಿಎಂ ಹುರಿಯಾಳು ಎಂಬ ಭರವಸೆ ಇಲ್ಲದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನೀಡಿದ ಯುವನಿಧೀ ಯೋಜನೆಯ ಭರವಸೆಯನ್ನು ಟೀಕಿಸುವುದು ಹಾಸ್ಯಾಸ್ಪದ. ಬೊಮ್ಮಾಯಿಯವರೇ, ನೀವು ಕೈಲಾಗದವರಿರಬಹುದು, ಕಾಂಗ್ರೆಸ್‌ಗೆ ಎಲ್ಲವೂ ಸಾಧ್ಯ” ಎಂದಿದೆ.

Continue Reading

ಕರ್ನಾಟಕ

Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್‌ಗೆ ಈಗ ಖಾದ್ರಿ ಸಂಕಟ!

ಸಿಎಂ ಬೊಮ್ಮಾಯಿ ಅವರನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್‌ ರೂಪಿಸಿರುವ ಪ್ಲ್ಯಾನ್‌ ತಿರುಗುಬಾಣವಾಗುವ ಅಪಾಯವಿದೆ. ಅಜ್ಜಂಪೀರ್‌ ಖಾದ್ರಿ ಅವರೇ ಇಲ್ಲೀಗ ನಿರ್ಣಾಯಕ

VISTARANEWS.COM


on

Edited by

Azam peer Khadri
ರಣದೀಪ್‌ ಸುರ್ಜೇವಾಲ ಅವರ ಜತೆ ಅಜ್ಜಂ ಪೀರ್‌ ಖಾದ್ರಿ
Koo

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಮತ ಕ್ಷೇತ್ರದಲ್ಲಿ ಕಳೆದ ಮೂರು ಅವಧಿಗಳಿಂದ ಗೆಲ್ಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಅವರಿಗೆ ಚಮಕ್‌ ನೀಡಲು ಮುಂದಾಗಿರುವ ಪ್ಲ್ಯಾನ್‌ ಈಗ ಕಾಂಗ್ರೆಸ್‌ಗೇ ತಿರುಗುಬಾಣವಾಗುವ ಪರಿಸ್ಥಿತಿ ಎದುರಾಗಿದೆ.

ಶಿಗ್ಗಾಂವಿಯಲ್ಲಿ ಖಡಾಖಡಿ ಹೋರಾಟವನ್ನು ನೀಡುವ ಮೂಲಕ ಬೊಮ್ಮಾಯಿ ಅವರನ್ನು ಅವರ ಕ್ಷೇತ್ರದಿಂದ ಹೊರಬರದಂತೆ ಕಟ್ಟಿಹಾಕುವ ಪ್ರಯತ್ನವನ್ನು ಬಿಜೆಪಿ ನಡೆಸಿದೆ. ಬೊಮ್ಮಾಯಿಗೆ ಕಠಿಣ ಸ್ಪರ್ಧೆ ನೀಡಲು ಮಾಜಿ ಸಚಿವ ವಿನಯ ಕುಲಕರ್ಣಿ ಅವರೇ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿರುವ ನಾಯಕರು ಅವರನ್ನು ಹೇಗೋ ಮನವೊಲಿಸಿ ಒಪ್ಪಿಸಿದ್ದಾರೆ. ಆದರೆ, ಈಗ ಶಿಗ್ಗಾಂವಿಯಲ್ಲಿ ಇದುವರೆಗೂ ಕಾಂಗ್ರೆಸ್‌ ಅಭ್ಯರ್ಥಿಯಾಗುತ್ತಿರುವ ಮಾಜಿ ಶಾಸಕ ಅಜ್ಜಂಪೀರ್‌ ಖಾದ್ರಿ ಅವರು ತಿರುಗಿಬಿದ್ದಿದ್ದಾರೆ. ತನಗೆ ಟಿಕೆಟ್‌ ನೀಡದೆ ಹೋದರೆ ಪಕ್ಷೇತರನಾಗಿ ಕಣಕ್ಕಿಳಿಯುವುದಾಗಿ ಖಾದ್ರಿ ಹೇಳಿರುವುದು ಕಾಂಗ್ರೆಸ್‌ಗೆ ಬಿಸಿ ತುಪ್ಪವಾದಂತಾಗಿದೆ.

ಶಿಗ್ಗಾವಿ ಕ್ಷೇತ್ರದಿಂದ ಕಾಂಗ್ರೇಸ್ ಟಿಕೆಟ್ ಬಯಸಿ 14 ಜನರು ಅರ್ಜಿ ಸಲ್ಲಿಕೆ ಮಾಡಿದ್ದರು. ಅಲ್ಪಸಂಖ್ಯಾತ ಕೋಟಾದಡಿ ಸತತ ಮೂರು ಸಲ ಟಿಕೆಟ್ ಪಡೆದು ಬೊಮ್ಮಾಯಿ ವಿರುದ್ಧ ಸೋತಿದ್ದ ಮಾಜಿ ಶಾಸಕ ಅಜ್ಜಂ ಪೀರ್‌ ಖಾದ್ರಿ ಈ ಸಲವೂ ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದಾರೆ.

ಆದರೆ, ಈ ಬಾರಿ ಅಲ್ಪಸಂಖ್ಯಾತ ಅಸ್ತ್ರದ ಬದಲು ಪಂಚಮಸಾಲಿ ಅಸ್ತ್ರ ಪ್ರಯೋಗಕ್ಕೆ ಕಾಂಗ್ರೆಸ್‌ ಮುಂದಾಗಿದೆ. ಅಲ್ಪಸಂಖ್ಯಾತರು ಹೇಗಿದ್ದರೂ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ. ಅವರ ಜತೆ ಪಂಚಮಸಾಲಿಗಳ ಮತವೂ ಸೇರಿದರೆ ಬೊಮ್ಮಾಯಿ ಅವರನ್ನು ಸೋಲಿಸಬಹುದು ಎನ್ನುವುದು ಕಾಂಗ್ರೆಸ್‌ ಲೆಕ್ಕಾಚಾರ. ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಪ್ರಬಲ ನಾಯಕ ವಿನಯ ಕುಲಕರ್ಣಿ ಅವರನ್ನು ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಸಲು ಮನವಿ ಒಲಿಸಿದೆ. ಕೆಲವು ದಿನಗಲ ಹಿಂದೆ ದೆಹಲಿಯಲ್ಲಿ ನಡೆದ ಸಭೆಯಲ್ಲಿಯ ವಿನಯ ಕುಲಕರ್ನಿ ಜೊತೆ ಕೈ ನಾಯಕರು ಮಾತುಕತೆ ನಡೆಸಿದ್ದರು.

ಸಿದ್ದರಾಮಯ್ಯ ವಿನಯ ಕುಲಕರ್ಣಿ ಅವರ ಜತೆ ಅಜ್ಜಂ ಪೀರ್‌ ಖಾದ್ರಿ

ವಿನಯ ಕುಲಕರ್ಣಿ ಅವರ ಹೆಸರು ಮುನ್ನಲೆಗೆ ಬರುತ್ತಿದ್ದಂತೆ ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ ಕೈ ನಾಯಕರಿಗೆ ಶಾಕ್ ನೀಡಿದ್ದಾರೆ. ಶಿಗ್ಗಾಂವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.

ಈ ನಡುವೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ತಡರಾತ್ರಿಯವರೆಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಸಭೆ ನಡೆಸಿ ಮನ ಒಲಿಸಲು ಕಸರತ್ತು ನಡೆಸಿದರಾದರೂ ಅದರಲ್ಲಿ ಸಫಲರಾಗಿಲ್ಲ. ಖಾದ್ರಿ ಅವರು ಸಿದ್ದರಾಮಯ್ಯ ಬೆಂಬಲಿಗರಾಗಿರುವುದರಿಂದ ಜಮೀರ್‌ ಅಹ್ಮದ್‌ ಅವರಿಗೆ ಮನವೊಲಿಕೆ ಜವಾಬ್ದಾರಿಯನ್ನು ನೀಡಲಾಗಿದೆ.

ಖಾದ್ರಿ ಅವರು ಕಳೆದ ಮೂರು ಚುನಾವಣೆಗಳಲ್ಲಿ ಬೊಮ್ಮಾಯಿ ವಿರುದ್ಧ ಸೋಲು ಕಾಣುತ್ತಿದ್ದಾರೆ. ಇಲ್ಲಿ ಕಾಂಗ್ರೆಸ್‌ ಕೊನೆಯ ಬಾರಿಗೆ ಗೆದ್ದಿದ್ದು 1994ರಲ್ಲಿ. ಮಂಜುನಾಥ ಕೊನ್ನೂರು ಅವರು ಆಗ ಶಾಸಕರಾಗಿದ್ದರು.

ಖಾದ್ರಿ ಅವರು 1998ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಗೆದ್ದಿದ್ದರು. 2004ರಲ್ಲಿ ಸಿಂಧೂರ ರಾಜಶೇಖರ್‌ ಇಲ್ಲಿಗೆ ಪಕ್ಷೇತರರಾಗಿ ಗೆಲುವು ಪಡೆದಿದ್ದರು. ಬಳಿಕ ಗೆದ್ದಿದ್ದೆಲ್ಲ ಬೊಮ್ಮಾಯಿ ಅವರೇ.

ಇಲ್ಲಿನ ಒಟ್ಟಾರೆ ಲೆಕ್ಕಾಚಾರ ಗಮನಿಸಿದರೆ ಕಾಂಗ್ರೆಸ್‌ ಕೇವಲ ಮುಸ್ಲಿಂ ಮತಗಳನ್ನು ನೆಚ್ಚಿಕೊಂಡರೆ ಗೆಲ್ಲುವುದು ಕಷ್ಟ. ಹಾಗಾಗಿ ಅದು ಬೇರೆ ಲೆಕ್ಕಾಚಾರಕ್ಕೆ ಮುಂದಾಗಿದ್ದಾರೆ. ಆದರೆ, ಮುಸ್ಲಿಂ ಮತಗಳನ್ನು ಬಿಟ್ಟರೂ ಗೆಲುವು ಸುಲಭವಲ್ಲ. ಹೀಗಾಗಿ ಖಾದ್ರಿ ಅವರು ಪಕ್ಷೇತರರಾಗಿ ನಿಂತರೆ ಮುಸ್ಲಿಂ ಮತಗಳು ಒಡೆಯುವುದು ನಿಶ್ಚಿತ. ಹೀಗಾಗಿ ಅತ್ಯಂತ ಜಾಗರೂಕತೆಯಿಂದ ಪರಿಸ್ಥಿತಿ ನಿಭಾಯಿಸಬೇಕಾದ ಅಗತ್ಯ ಕಾಂಗ್ರೆಸ್‌ಗಿದೆ. ಖಾದ್ರಿ ಅವರು ಕಾಂಗ್ರೆಸ್‌ ಮನವೊಲಿಕೆಗೆ ಒಲಿಯುತ್ತಾರಾ ಎಂದು ಕಾದು ನೋಡಬೇಕು.

ಇದನ್ನೂ ಓದಿ : Basavaraj Bommai: ಎರಡು ತಿಂಗಳಲ್ಲಿ 13 ಬಾರಿ ತವರು ಕ್ಷೇತ್ರಕ್ಕೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ: ಶಿಗ್ಗಾಂವಿಯಲ್ಲಿ ಪ್ರಬಲ ಸ್ಪರ್ಧೆ

Continue Reading

ಕರ್ನಾಟಕ

Murder Case: ಅವಳದ್ದು ಮೋಹ, ಇವನಿಗೆ ಮಧುಮೇಹ; ಕೊಲೆಯಲ್ಲಿ ಅಂತ್ಯವಾಯ್ತು ಕಾಳಜಿ ಕಲಹ

ಈಗೀಗ ನೀನು ಸರಿಯಾಗಿ ನೋಡಿಕೊಂಡಿಲ್ಲ ಎಂದು ಕಿರಿಕಿರಿ ಮಾಡುತ್ತಿದ್ದವಳಿಗೆ ಪ್ರಿಯಕರ ಮಾರಕಾಸ್ತ್ರದಿಂದ ಹತ್ಯೆ (Murder Case) ಮಾಡಿ, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

VISTARANEWS.COM


on

Edited by

Koo

ಬೆಳಗಾವಿ: ಇಲ್ಲಿನ ರಾಮದುರ್ಗ ತಾಲೂಕಿನ ಸಾಲಾಪುರ ಗ್ರಾಮದಲ್ಲಿ ಮಧುಮೇಹಿಯೊಬ್ಬ ಮೋಹಿಸಿದವಳನ್ನೇ ಕೊಂದು (Murder Case) ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಜಾನವ್ವ ದ್ಯಾಮನ್ನವರ (50) ಹಾಗೂ ಬಸವಗೌಡ ಶಾಸಪ್ಪನವರ (55) ಎಂಬುವವರು ಮೃತಪಟ್ಟಿದ್ದಾರೆ.

ಇವರಿಬ್ಬರು ಕಳೆದ 28 ವರ್ಷಗಳಿಂದ ಅನೈತಿಕ ಸಂಬಂಧವನ್ನು ಹೊಂದಿದ್ದಾರೆ. ಇವರಿಗೆ ಮೂವರು ಮಕ್ಕಳಿದ್ದಾರೆ. ಇತ್ತೀಚೆಗೆ ಬಸವಗೌಡಗೆ ಮಧುಮೇಹ ಕಾಯಿಲೆ ಬಂದಿದೆ. ಇದು ವಿಪರೀತಕ್ಕೆ ಹೋಗಿ ಅನಾರೋಗ್ಯಕ್ಕೆ ತುತ್ತಾಗಿದ್ದ. ಹೀಗೆ ಅನಾರೋಗ್ಯಕ್ಕೆ ಬಿದ್ದಿದ್ದ ಬಸವಗೌಡನ ಬಳಿ ಜಾನವ್ವ ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ನಿತ್ಯ ಕಿರಿಕಿರಿ ಮಾಡುತ್ತಿದ್ದಳು ಎಂದು ಹೇಳಲಾಗಿದೆ.

ಈಕೆ ಪೀಡನೆ ತಾಳಲಾರದೆ ಅನಾರೋಗ್ಯದಿಂದ ಬಳಲುತ್ತಿದ್ದ ಬಸವಗೌಡ ಸಿಟ್ಟಿಗೆದ್ದವನೇ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಜಾನವ್ವಳನ್ನು ಹತ್ಯೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇತ್ತ ಹತ್ಯೆ ಮಾಡಿದ ಬಳಿಕ ಬಸವಗೌಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹಗಳನ್ನು ರಾಮದುರ್ಗ ತಾಲೂಕಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಜಾನವ್ವಳ ಪತಿ ತೀರಿ ಹೋದ ಬಳಿಕ ಈ ಬಸವಗೌಡ ಪತ್ನಿಯನ್ನು ತೊರೆದು ಈಕೆಯೊಂದಿಗೆ ಸಂಬಂಧ ಹೊಂದಿದ್ದ ಎಂದು ತಿಳಿದು ಬಂದಿದೆ.

ಸುಟ್ಟ ಸ್ಥಿತಿಯಲ್ಲಿ ಹಸಿ ಬಾಣಂತಿ ಶವ ಪತ್ತೆ

ಕೊಪ್ಪಳ: ಕೊಪ್ಪಳ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಹಸಿ ಬಾಣಂತಿಯೊಬ್ಬಳ ಶವ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, (Woman Murdered) ಇದರ ಬಗ್ಗೆ ನಾನಾ ಸಂಶಯಗಳು ವ್ಯಕ್ತವಾಗುತ್ತಿದೆ. ಇದು ಆತ್ಮಹತ್ಯೆಯಾಗಿರುವ ಸಾಧ್ಯತೆ ಇಲ್ಲ. ಬದಲಾಗಿ ನಿಧಿಗಾಗಿ ನಡೆದಿರುವ ಕೊಲೆ ಎಂದು ಸಂಶಯಿಸಲಾಗಿದೆ.

ನೇತ್ರಾವತಿ ಕುರಿ (26) ಕೊಲೆಯಾದ ಬಾಣಂತಿ. ಅವರಿಗೆ ಕೇವಲ ಒಂದೂವರೆ ತಿಂಗಳ ಪುಟ್ಟ ಮಗುವಿದ್ದು, ಅವರ ಶವ ಸಮೀಪದ ಹೊಲದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೇತ್ರಾವತಿಯನ್ನು ಸುಟ್ಟು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಪಾಟ್ನಾ ರೈಲ್ವೆ ಸ್ಟೇಶನ್​​ನಲ್ಲಿ ಅಶ್ಲೀಲ ವಿಡಿಯೊ ಪ್ರಸಾರ ಆಗಿದ್ದಕ್ಕೆ ಫುಲ್ ಖುಷಿಯಾದ ಪೋರ್ನ್​ ಸ್ಟಾರ್​; ಅದು ನಂದೇ ಎಂದ ಕೇಂದ್ರಾ ಲಸ್ಟ್​

ಸೋಮವಾರ ರಾತ್ರಿ ಅಮಾವಾಸ್ಯೆ ಇದ್ದು, ತಡರಾತ್ರಿ ನಿಧಿಗಾಗಿ ಕೊಲೆ‌ ಮಾಡಿರಬಹುದು ಎಂದು ಹೇಳಲಾಗುತ್ತಿದೆ. ಮನೆಯಿಂದ ಅನತಿ ದೂರದಲ್ಲಿ ಶವ ಸಿಕ್ಕಿದೆ. ಪರಿಸರದಲ್ಲಿ ವಾಮಾಚಾರ ಸಂಬಂಧಿತ ಕೆಲವು ವಸ್ತುಗಳು ಸಿಕ್ಕಿರುವುದು ಇದೊಂದು ನಿಧಿಗಾಗಿ ನಡೆಸಿದ ಕೊಲೆಯಾಗಿರಬಹುದು ಎಂಬ ಸಂಶಯಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಕೊಪ್ಪಳ‌ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
HP Pavilion Aero 13 Laptop Launched and Check details
ಗ್ಯಾಜೆಟ್ಸ್7 seconds ago

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

ಕರ್ನಾಟಕ2 mins ago

Basavaraj Bommai: ವಿಜಯಪುರದಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ; ಬೊಮ್ಮಾಯಿ

congress says cm basavraj bommai will not get chance to contest inkarnataka election
ಕರ್ನಾಟಕ13 mins ago

Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್‌ ಸಿಗುವುದು ಡೌಟು ಎಂದ ಕಾಂಗ್ರೆಸ್‌

Azam peer Khadri
ಕರ್ನಾಟಕ25 mins ago

Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್‌ಗೆ ಈಗ ಖಾದ್ರಿ ಸಂಕಟ!

ಕಿರುತೆರೆ27 mins ago

Kannada Serial: 900 ಸಂಚಿಕೆ ಪೂರೈಸಿದ ಜೊತೆ ಜೊತೆಯಲಿ ಧಾರಾವಾಹಿ; ಸಂಭ್ರಮದಲ್ಲಿ ತಂಡ

ಕರ್ನಾಟಕ30 mins ago

Murder Case: ಅವಳದ್ದು ಮೋಹ, ಇವನಿಗೆ ಮಧುಮೇಹ; ಕೊಲೆಯಲ್ಲಿ ಅಂತ್ಯವಾಯ್ತು ಕಾಳಜಿ ಕಲಹ

Tejasvi Surya says Rahul Gandhi is dependent on pocket money given by mother
ಕರ್ನಾಟಕ34 mins ago

BJP Yuva Morcha: ಅಮ್ಮ ನೀಡುವ ಪಾಕೆಟ್ ಮನಿ ಮೇಲೆಯೇ ರಾಹುಲ್ ಗಾಂಧಿ ಜೀವನ: ತೇಜಸ್ವಿ ಸೂರ್ಯ

WPL 2023: RCB ends campaign with defeat
ಕ್ರಿಕೆಟ್36 mins ago

WPL 2023: ಸೋಲಿನೊಂದಿಗೆ ಅಭಿಯಾನ ಮುಗಿಸಿದ ಆರ್​ಸಿಬಿ

Bike Rally yallapur ugadi
ಉತ್ತರ ಕನ್ನಡ38 mins ago

Bike Rally: ಯುಗಾದಿ ಪ್ರಯುಕ್ತ ಯಲ್ಲಾಪುರದಲ್ಲಿ ನಡೆದ ಬೈಕ್ ರ‍್ಯಾಲಿಗೆ ಅಭೂತಪೂರ್ವ ಬೆಂಬಲ

Shobha Karandlaje criticizes congress guarantee
ಕರ್ನಾಟಕ39 mins ago

Congress Guarantee:‌ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗೆ ಜಾರ್ಜ್‌ ಸೊರೊಸ್‌ ಹಣ ಕೊಡುತ್ತಾರೆಯೇ ಎಂದು ಪ್ರಶ್ನಿಸಿದ ಶೋಭಾ ಕರಂದ್ಲಾಜೆ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ14 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ2 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ6 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ7 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!