Site icon Vistara News

Crime news: ಹಳೆ ದ್ವೇಷ, ಹಾಡಹಗಲೇ ಯುವಕನ ಬರ್ಬರ ಹತ್ಯೆ

crime news

ಬೀದರ್: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತ್ರಿಪುರಾಂತ ಬಳಿ ಘಟನೆ ನಡೆದಿದೆ. 26 ವರ್ಷದ ಆನಂದ ಫುಲೆ ಕೊಲೆಯಾದ ಯುವಕ. ಕ್ಷುಲ್ಲಕ ಕಾರಣಕ್ಕೆ ಆನಂದ ಹಾಗೂ ದಿಗಂಬರ ದಾಸೊರೆ ಎಂಬ ಇಬ್ಬರ ನಡುವೆ ಹಳೆಯ ದ್ವೇಷದಿಂದ ಮಾರಾಮಾರಿ ನಡೆದಿದೆ. ದ್ವೇಷ ಅತಿರೇಕಕ್ಕೆ ತಿರುಗಿ ಇಬ್ಬರೂ ತ್ರಿಪುರಾಂತ ಮುಖ್ಯ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಆನಂದ ಪುಲೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಸೊಲ್ಲಾಪುರದ ಉಮ್ಮರಗಾ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾನೆ. ಬಸವಕಲ್ಯಾಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಿವಮೊಗ್ಗದಲ್ಲಿ ಮಹಿಳೆ ನೇಣಿಗೆ ಶರಣು

ಶಿವಮೊಗ್ಗ: ಶಿವಮೊಗ್ಗದಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಶಿವಮೊಗ್ಗದ ಗಾಂಧಿನಗರ ನಿವಾಸಿ ಶ್ವೇತಾ ಪ್ರಶಾಂತ ಮೃತ ಮಹಿಳೆ. ಅಡಕೆ ವ್ಯವಹಾರ ನಡೆಸುವ ಪ್ರತಿಷ್ಠಿತ ಮನೆತನದ ಇವರು, ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.

ಇದನ್ನೂ ಓದಿ: Porcupine: ಮುಳ್ಳುಹಂದಿ ಗುಹೆಯಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು

Exit mobile version