Site icon Vistara News

ICC World Cup 2023: ಜಿಲ್ಲಾ ಕ್ರೀಡಾಂಗಣಗಳಲ್ಲಿ ಫೈನಲ್‌ ಮ್ಯಾಚ್‌ ವೀಕ್ಷಿಸಲು ಬಿಗ್‌ ಸ್ಕ್ರೀನ್

Ind vs aus

ಬೆಂಗಳೂರು: ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ (ICC World Cup 2023) ಆಸ್ಟ್ರೇಲಿಯಾ ಮತ್ತು ಭಾರತ ತಂಡದ ನಡುವಿನ ಸೆಣಸಾಟ ನೋಡಲು ಅಭಿಮಾನಿಗಳು ಕಾತುರದಿಂದ ಇದ್ದಾರೆ. ಈ ನಡುವೆ ಕ್ರಿಕೆಟ್‌ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರದ ವತಿಯಿಂದ ಭಾನುವಾರದ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆ ವ್ಯವಸ್ಥೆ ಮಾಡಲಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದು, ನಾಡಿನ ಸಮಸ್ತ ಕ್ರಿಕೆಟ್ ಪ್ರಿಯರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ನಾಳಿನ ವಿಶ್ವಕಪ್ ಫೈನಲ್ ಪಂದ್ಯವನ್ನು ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಕ್ರಿಕೆಟ್ ಅಭಿಮಾನಿಗಳು‌ ಈ ಅವಕಾಶವನ್ನು ಬಳಸಿಕೊಂಡು ಫೈನಲ್ ಪಂದ್ಯದ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಬೇಕೆಂದು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆ ವ್ಯವಸ್ಥೆ ಮಾಡಲು ಸಿದ್ಧತೆ ಕೈಗೊಳ್ಳಲು, ಅಗತ್ಯ ಪ್ರಚಾರ ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಕೆಟ್‌ ಅಭಿಮಾನಿಗಳು ಪಂದ್ಯ ವೀಕ್ಷಿಸುವಂತೆ ಹಾಗೂ ಸೂಕ್ತ ಭದ್ರತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೂಚಿಸಿದೆ.

ಇದನ್ನೂ ಓದಿ | ICC World Cup 2023 : ಯಾರು ಗೆಲ್ತಾರೆ ವಿಶ್ವ ಕಪ್​? ಕ್ರಿಕೆಟ್ ಪಂಡಿತರು ಏನಂತಾರೆ?

ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳಿಂದ ಪೂಜೆ; ಶುಭ ಕೋರಿದ ಸಿಎಂ

ಬೆಂಗಳೂರು: ಅಹಮದಾಬಾದ್‌ನಲ್ಲಿ ಭಾನುವಾರ ನಡೆಯಲಿರುವ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ (ICC World Cup 2023) ಆಸ್ಟ್ರೇಲಿಯಾ ತಂಡದ ವಿರುದ್ಧ ಟೀಂ ಇಂಡಿಯಾ ಜಯಭೇರಿ ಬಾರಿಸಲಿ ಎಂದು ಪ್ರಾರ್ಥಿಸಿ ದೇವಾಲಯಗಳಲ್ಲಿ ಅಭಿಮಾನಿಗಳು ವಿಶೇಷ ಪೂಜೆ, ಹೋಮಗಳನ್ನು ನೆರವೇರಿಸುತ್ತಿದ್ದಾರೆ. ಅದೇ ರೀತಿ ರೋಹಿತ್‌ ಶರ್ಮಾ ಬಳಗ ಚಾಂಪಿಯನ್‌ ಆಗಲಿ ಎಂದು ಕ್ರೀಡಾಪಟುಗಳು, ರಾಜಕೀಯ ನಾಯಕರು ಸೇರಿ ಗಣ್ಯರು ಶುಭ ಕೋರುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಕೂಡ ಶುಭ ಹಾರೈಸಿದ್ದಾರೆ.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ.

ವಿಶ್ವಕಪ್‌-2023 ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿರುವ ಭಾರತೀಯ ಕ್ರಿಕೆಟ್‌ ತಂಡಕ್ಕೆ ಶುಭಹಾರೈಕೆಗಳು. ನನ್ನಂತಹ 140 ಕೋಟಿ ಭಾರತೀಯರ ಹರಕೆ, ಹಾರೈಕೆ ನಿಮ್ಮೊಂದಿಗಿದೆ. ಗೆಲುವಿನ ಅಭಿಯಾನ ಮುಂದುವರಿಯಲಿ ಎಂದು ಟೀಂ ಇಂಡಿಯಾಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ | IND vs AUS Final: ಇಂಡೋ-ಆಸೀಸ್​ ಫೈನಲ್​ ಪಂದ್ಯಕ್ಕೆ ಪ್ರಧಾನಿ ಮೋದಿ ಹಾಜರ್​

ಬೆಂಗಳೂರು: ಅಹಮದಾಬಾದ್‌ನಲ್ಲಿ ಭಾನುವಾರ ನಡೆಯಲಿರುವ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ (ICC World Cup 2023) ಆಸ್ಟ್ರೇಲಿಯಾ ತಂಡದ ವಿರುದ್ಧ ಟೀಂ ಇಂಡಿಯಾ ಜಯಭೇರಿ ಬಾರಿಸಲಿ ಎಂದು ಪ್ರಾರ್ಥಿಸಿ ದೇವಾಲಯಗಳಲ್ಲಿ ಅಭಿಮಾನಿಗಳು ವಿಶೇಷ ಪೂಜೆ, ಹೋಮಗಳನ್ನು ನೆರವೇರಿಸುತ್ತಿದ್ದಾರೆ. ಅದೇ ರೀತಿ ರೋಹಿತ್‌ ಶರ್ಮಾ ಬಳಗ ಚಾಂಪಿಯನ್‌ ಆಗಲಿ ಎಂದು ಕ್ರೀಡಾಪಟುಗಳು, ರಾಜಕೀಯ ನಾಯಕರು ಸೇರಿ ಗಣ್ಯರು ಶುಭ ಕೋರುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಕೂಡ ಶುಭ ಹಾರೈಸಿದ್ದಾರೆ.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ.

ವಿಶ್ವಕಪ್‌-2023 ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿರುವ ಭಾರತೀಯ ಕ್ರಿಕೆಟ್‌ ತಂಡಕ್ಕೆ ಶುಭಹಾರೈಕೆಗಳು. ನನ್ನಂತಹ 140 ಕೋಟಿ ಭಾರತೀಯರ ಹರಕೆ, ಹಾರೈಕೆ ನಿಮ್ಮೊಂದಿಗಿದೆ. ಗೆಲುವಿನ ಅಭಿಯಾನ ಮುಂದುವರಿಯಲಿ ಎಂದು ಟೀಂ ಇಂಡಿಯಾಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ | IND vs AUS Final: ಇಂಡೋ-ಆಸೀಸ್​ ಫೈನಲ್​ ಪಂದ್ಯಕ್ಕೆ ಪ್ರಧಾನಿ ಮೋದಿ ಹಾಜರ್​

ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್‌ ಫೈನಲ್‌ ಪಂದ್ಯಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. ಕಾಂಗರೂ ಪಡೆ ವಿರುದ್ಧ ಟೀಂ ಇಂಡಿಯಾ ರಣಕಲಿಗಳು ಅಖಾಡಕ್ಕಿಳಿಯಲು ಸಜ್ಜಾಗಿದ್ದು, ಟೀಂ ಇಂಡಿಯಾ ಆಟಗಾರರು ಈ ಬಾರೀ ಕಪ್‌ ಗೆಲ್ಲಲಿ ಅಂತ ಕ್ರಿಕೆಟ್‌ ಪ್ರೇಮಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಆರ್‌ಆರ್‌ ನಗರದ ನಿಮಿಷಾಂಬ ದೇಗುಲದಲ್ಲಿ ಚಂಡಿಕಾ ಹೋಮ ನಡೆಸೋ ಮೂಲಕ ಟೀಂ ಇಂಡಿಯಾಗೆ ಶುಭ ಹಾರೈಸಿದ್ದಾರೆ. 11 ಜನ ಆಟಗಾರರಿಗೆ 11 ಕಪ್‌ಗಳನ್ನು ಇಟ್ಟು ಪೂಜೆ ನಡೆಸಿದ 11 ಜನ ಅರ್ಚಕರು, ಕ್ರಿಕೆಟ್‌ ಅಖಾಡದಲ್ಲಿ ಜಯಶೀಲರಾಗಿ ಬರಲಿ ಎಂದು ಟೀಂ ಇಂಡಿಯಾಗೆ ಶುಭಕೋರಿದ್ದಾರೆ.

Exit mobile version