Site icon Vistara News

Bike accident | ಬೈಕ್‌ಗಳ ನಡುವೆ ಡಿಕ್ಕಿ: ಇಬ್ಬರು ಸವಾರರೂ ಸ್ಥಳದಲ್ಲೇ ಮೃತ್ಯು

accident davanagere jagaluru Prof Vasudevan passes away

ತುಮಕೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ (Bike accident) ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮಾಗೋಡು ಗೇಟ್ ಬಳಿ ನಡೆದಿದೆ. ಓರ್ವನಿಗೆ ಗಂಭೀರ ಗಾಯವಾಗಿದೆ.

ರಾಕೇಶ್ (22), ನಾಗರಾಜ್ (21) ಮೃತ ದುರ್ದೈವಿಗಳು. ಮೃತರಿಬ್ಬರೂ ಶಿರಾ ತಾಲ್ಲೂಕಿನ ಕೊಂಡಮ್ಮನಹಳ್ಳಿ ಹಾಗೂ ಗುಳಿಗೆನಹಳ್ಳಿ ನಿವಾಸಿಗಳು. ಪೃಥ್ವಿರಂಗ ಎನ್ನುವರಿಗೆ ಗಾಯವಾಗಿದ್ದು ಅವರನ್ನು ಶಿರಾ ಸಾರ್ವಜನಿಕ ಆಸ್ಪತ್ರೆಗೆ ಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿರಾ ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಬೈಕ್‌ ಮತ್ತು ಎದುರಿನಿಂದ ಬಂದ ಬೈಕ್‌ ಡಿಕ್ಕಿ ಹೊಡೆದುಕೊಂಡಿವೆ. ಶಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Accident case | ಅಪರಿಚಿತ ವಾಹನ ಡಿಕ್ಕಿ; ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಪ್ರೊ. ವಾಸುದೇವನ್ ಸಾವು

Exit mobile version