Bike Accident: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಸಾವು, ಇಬ್ಬರಿಗೆ ಗಾಯ - Vistara News

ಕರ್ನಾಟಕ

Bike Accident: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಸಾವು, ಇಬ್ಬರಿಗೆ ಗಾಯ

Bike Accident: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಬಳಿ ಅಪಘಾತ ನಡೆದಿದೆ. ಟಿವಿಎಸ್‌ ಎಕ್ಸೆಲ್‌ ಹಾಗೂ ಹೀರೋ ಸ್ಪ್ಲೆಂಡರ್ ಪ್ಲಸ್‌ ಮುಖಾಮುಖಿ ಡಿಕ್ಕಿಯಾಗಿ ಸವಾರರೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Bike Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಾಯಗಳಾಗಿರುವ ಘಟನೆ (Bike Accident) ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಬಳಿ ನಡೆದಿದೆ. ಸಿದ್ದರಾಮಯ್ಯ ಸಂಗಯ್ಯ ಹಿಡಕಲ್ಲ (60) ಮೃತ ದುರ್ದೈವಿ.

ಟಿವಿಎಸ್‌ ಸೂಪರ್ ಎಕ್ಸೆಲ್‌ನಲ್ಲಿ ಜಮಖಂಡಿಯಿಂದ ಮಧುರಖಂಡಿಗೆ ಸಿದ್ದರಾಮಯ್ಯ ಹೊರಟಿದ್ದರು. ಈ ವೇಳೆ ತೇರದಾಳದಿಂದ ಜಮಖಂಡಿ ಕಡೆ ಬರುತ್ತಿದ್ದ ತಾಯಿ, ಮಗನಿದ್ದ ಹೀರೋ ಸ್ಪ್ಲೆಂಡರ್ ಪ್ಲಸ್‌ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಸ್ಥಳದಲ್ಲೇ ಎಕ್ಸೆಲ್‌ ಸವಾರ ಸಿದ್ದರಾಮಯ್ಯ ಹಿಡಕಲ್ಲ ಮೃತಪಟ್ಟಿದ್ದಾರೆ.

ಮತ್ತೊಂದು ಬೈಕ್‌‌‌ನಲ್ಲಿದ್ದ ಗಾಯಾಳುಗಳು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

Road Accident : ಹೆದ್ದಾರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ ‌ವೃದ್ಧ ಸಾವು; ಯುವಕನ ತಲೆ ಮೇಲೆ ಹರಿದ ಟ್ಯಾಂಕರ್‌

ಬೆಂಗಳೂರು: ವಾಟರ್ ಟ್ಯಾಂಕರ್ ವಾಹನಕ್ಕೆ ಯುವಕನೊರ್ವ (Road Accident) ಬಲಿಯಾಗಿದ್ದಾನೆ. ಕಿರಣ್ ಕುಮಾರ್ (21) ಮೃತಪಟ್ಟವನು. ಬೆಂಗಳೂರಿನ ಕೊತ್ತನೂರು ದಿಣ್ಣೆ ಆರ್‌ಬಿಐ ಲೇಔಟ್‌ನಲ್ಲಿ ಬೆಳಗ್ಗೆ 9.30ಕ್ಕೆ ಈ ಅಪಘಾತ ಸಂಭವಿಸಿದೆ.

ಬೇಕರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್‌ ಕುಮಾರ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ನಿಂದ ಕೆಳಗೆ ಬಿದ್ದ ಕಿರಣ್‌ ತಲೆ ಮೇಲೆ ಟ್ಯಾಂಕರ್‌ ಹರಿದಿದೆ. ಅಪಘಾತದಲ್ಲಿ ಕಿರಣ್‌ ಕುಮಾರ್‌ ತಲೆ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೆ.ಎಸ್.ಲೇಔಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಎಸ್‌ ಲೇಔಟ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಾಟರ್‌ ಟ್ಯಾಂಕರ್‌ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

ಸ್ಕೂಟರ್‌ಗೆ ಗುದ್ದಿದ ಕಾರು; ಹಾರಿ ಬಿದ್ದ ವೃದ್ಧ ಸ್ಪಾಟ್‌ ಡೆತ್‌

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೆ ವೃದ್ಧನೊರ್ವ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಡಿವೈಡರ್ ಬಳಿ ರಸ್ತೆ ದಾಟುವಾಗ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಾರಿ ಬಿದ್ದ ವೃದ್ಧ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು ಗ್ರಾಮಾಂತರದ ದಾಬಸ್ ಪೇಟೆ ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಮೇಶ್ವರ ಗೇಟ್ ಬಳಿ ಅಪಘಾತ ನಡೆದಿದೆ. ನಾರನಹಳ್ಳಿ ಗ್ರಾಮದ ಮಾಳಪ್ಪ (80) ಮೃತ ದುರ್ದೈವಿ. ರಾಮೇಶ್ವರ ಗೇಟ್‌ನಲ್ಲಿ ರಸ್ತೆ ದಾಟುವಾಗ ದಾಬಸ್ ಪೇಟೆ ಕಡೆಯಿಂದ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೆ ಮಾಳಪ್ಪ ಸಾವನ್ನಪ್ಪಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Wild Animal Attack : ಮತ್ತೆ ಕಾಡು ಪ್ರಾಣಿಗಳು ಹಾವಳಿ ನೀಡುತ್ತಿದ್ದು, ಗ್ರಾಮದೊಳಗೆ ಎಲ್ಲೆಂದರಲ್ಲಿ ಕಾಣಿಸಿಕೊಳ್ಳುತ್ತಿದೆ. ಮಾಗಡಿಯಲ್ಲಿ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿದ್ದರೆ, ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ಕಾಡಾನೆಗಳು ಪ್ರತ್ಯಕ್ಷಗೊಂಡಿವೆ.

VISTARANEWS.COM


on

By

wild animal attack
Koo

ಮಾಗಡಿ: ಇತ್ತೀಚೆಗೆ ರಾಜ್ಯದ ಹಲವೆಡೆ ಕರಡಿ ಹಾವಳಿ (Wild Animal Attack ) ಹೆಚ್ಚಾಗಿದೆ. ಆಹಾರ ಅರಸಿ ಕಾಡು ಬಿಟ್ಟು ನಾಡಿಗೆ ಬರುತ್ತಿರುವ ಕರಡಿ (Bear Attack) ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಚಿರತೆ, ಹುಲಿ, ಕಾಡಾನೆ ಬಳಿಕ ಕರಡಿ ಕಾಟಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಗುರುವಾರ ಬೆಳಗಿನ ಜಾವ ರೈತರೊಬ್ಬರು ಜಮೀನಿಗೆ ತೆರಳುವಾಗ ಕರಡಿ ದಾಳಿ ಮಾಡಿದ್ದು, ಗಂಭೀರ ಗಾಯಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರದ ಮಾಗಡಿ ತಾಲೂಕಿನ ಚಕ್ಕಳ್ಳಿ ಗ್ರಾಮದ ಟಿಎನ್‌ ಕೆರೆ ಬಳಿ ಘಟನೆ ನಡೆದಿದೆ. ಮಹೇಂದ್ರ (45) ಕರಡಿ ದಾಳಿಯಿಂದ ಗಾಯಗೊಂಡವರು. ಮಹೇಂದ್ರ ಅವರು ಬೆಳಗ್ಗೆ ಜಮೀನಿಗೆ ತೆರಳುವಾಗ ಏಕಾಏಕಿ ಹಿಂದಿನಿ ಬಂದು ದಾಳಿ ಮಾಡಿದೆ.

ಕರಡಿ ದಾಳಿಯಿಂದ ಮುಗ್ಗರಿಸಿ ಕೆಳಗೆ ಬಿದ್ದ ಮಹೇಂದ್ರ ಅವರ ತಲೆಗೆ ಬಾಯಿ ಹಾಕಿ ಗಾಯಗೊಳಿಸಿದೆ. ಜೋರಾಗಿ ಕಿರುಚಾಡಿದ ಕಾರಣಕ್ಕೆ ಕರಡಿ ಅಲ್ಲಿಂದ ಕಾಲ್ಕಿತ್ತಿದೆ. ಸದ್ಯ ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ತಾಲೂಕು ಅರಣ್ಯಾಧಿಕಾರಿ ಚೈತ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಡಿಯನ್ನು ಹಿಡಿದು ಕಾಡಿಗೆ ಸ್ಥಳಾಂತರ ಮಾಡುವಂತೆ ಗ್ರಾಮಾಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

wild animal attack

ಕೊಡಗಿನಲ್ಲಿ ಕಾಡಾನೆ ಪ್ರತ್ಯಕ್ಷ

ಕೊಡಗಿನ ಆನೆಕಾಡು ಬಳಿಯ ಮೆಟ್ನಳನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡಿತ್ತು. ಹೆದ್ದಾರಿಯಲ್ಲಿ ಸಾಗಿದ ಕಾಡಾನೆಯಿಂದ ಕೆಲಕಾಲ‌ ಆತಂಕ ಸೃಷ್ಟಿಯಾಗಿತ್ತು. ಆಹಾರ ಅರಸಿ ಕಾಡಿನಿಂದ ನಾಡಿಗೆ ಸಲಗವೊಂದು ಲಗ್ಗೆ ಇಟ್ಟಿತ್ತು. ಕಾಡಾನೆ ಓಡಾಟದ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಹಾಸನನಲ್ಲೂ ಕಾಡಾನೆಗಳ ಉಪಟಳ

ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದೆ. ಆನೆಗಳ ದಾಳಿಗೆ ಅಪಾರ ಪ್ರಮಾಣದ ಬಾಳೆ, ಕಾಫಿ ಬೆಳೆ ನಾಶವಾಗಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಂಗಡಹಳ್ಳ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ.

ಪರಮೇಶ್ ಎಂಬುವವರ ಮನೆಯ ಸಮೀಪವೇ ಬಂದಿದ್ದ ಕಾಡಾನೆಗಳು, ಬಾಳೆ ಮತ್ತು ಕಾಫಿ ತೋಟವನ್ನು ಸಂಪೂರ್ಣ ನಾಶಪಡಿಸಿವೆ. ಬೆಳೆ ಕಳೆದುಕೊಂಡು ಪರಮೇಶ್ ಕಂಗಾಲಾಗಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಗ್ರಾಮದ ಅನತಿ ದೂರದಲ್ಲೇ ಕಾಡಾನೆಗಳ ಹಿಂಡು ಬೀಡುಬಿಟ್ಟಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಸೂಕ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

wild animal attack

ಬಿಳಿಗಿರಿರಂಗನ ಬೆಟ್ಟಕ್ಕೆ ಕಾಡಾನೆ ಎಂಟ್ರಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡಿತ್ತು. ಪದೆ ಪದೇ ಬಿಳಿಗಿರಿರಂಗನ ಬೆಟ್ಟಕ್ಕೆ ಕಾಡಾನೆ ಬರುತ್ತಿದ್ದು, ಜನರು ಆತಂಕದಲ್ಲೇ ದಿನದೂಡುವಂತಾಗಿದೆ. ಬಿಳಿಗಿರಿರಂಗನ ಬೆಟ್ಟದ ಹಾಡಿಯಲ್ಲಿ ಕಾಡಾನೆ ಸಂಚಾರ ಮಾಡುತ್ತಿದ್ದು, ಸ್ಥಳೀಯರು ಸೈರನ್ ಹಾಕಿ ಓಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯೂ ಕೂಡ ಪೋಡಿಯಲ್ಲಿ ಆನೆಯೊಂದು ಕಾಣಿಸಿಕೊಂಡಿತ್ತು. ಇದೀಗ ಎಲ್ಲೆಂದರಲ್ಲಿ ಕಾಡಾನೆ ಸಂಚಾರದಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Actor Darshan: ದರ್ಶನ್‌ಗೆ ಮತ್ತೆ ಪರಪ್ಪನ ಅಗ್ರಹಾರವೇ ಗತಿ; ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Actor Darshan: ಪೊಲೀಸ್‌ ಕಸ್ಟಡಿ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ ಸೇರಿ ಹಲವು ಆರೋಪಿಗಳ ಅವಧಿಯು ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್‌ ಮೂಲಕ ಜಡ್ಜ್‌ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು. ಇದರಿಂದಾಗಿ ದರ್ಶನ್‌ ಹಾಗೂ ಗ್ಯಾಂಗ್‌ಗೆ ಹಿನ್ನಡೆಯಾದಂತಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧಿತನಾಗಿರುವ ನಟ ದರ್ಶನ್‌ಗೆ (Actor Darshan) ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಪೊಲೀಸ್‌ ಕಸ್ಟಡಿ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ ಸೇರಿ ಹಲವು ಆರೋಪಿಗಳ ಅವಧಿಯು ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್‌ ಮೂಲಕ ಜಡ್ಜ್‌ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು. ಇದರಿಂದಾಗಿ ದರ್ಶನ್‌ ಹಾಗೂ ಗ್ಯಾಂಗ್‌ಗೆ ಹಿನ್ನಡೆಯಾದಂತಾಗಿದೆ.

Actor Darshan Will Attend The Court Hearing From Online

ದರ್ಶನ್‌ ಪತ್ನಿ ನಾನು ಎಂದ ವಿಜಯಲಕ್ಷ್ಮೀ

ನಟ ದರ್ಶನ್ (Actor Darshan) ಹಾಗೂ ಪವಿತ್ರ ಗೌಡ (Pavitra Gowda) ಸಂಬಂಧದ ಕುರಿತು ಕಮಿಷನರ್‌ ಬಿ. ದಯಾನಂದ್‌ (Police commissioner B Dayanand) ಅವರು ನೀಡಿರುವ ಉಲ್ಲೇಖದ ಬಗ್ಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ (Vijayalakshmi) ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ʼಪವಿತ್ರ ಗೌಡ ಅವರು ದರ್ಶನ್‌ ಪತ್ನಿ ಅಲ್ಲ, ದರ್ಶನ್‌ ಪತ್ನಿ ನಾನುʼ ಎಂದು ಸ್ಪಷ್ಟಪಡಿಸಿದ್ದಾರೆ.

ದರ್ಶನ್ ಹಾಗೂ ಇತರೆ ಆರೋಪಿಗಳ ಬಂಧನದ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ.‌ದಯಾನಂದ್ ಸುದ್ದಿಗೋಷ್ಠಿ ಮಾಡಿದ್ದರು. ಆ ವೇಳೆ,‌‌ ʼದರ್ಶನ್ ಪತ್ನಿ ಪವಿತ್ರ ಗೌಡಗೆ ರೇಣುಕಾ ಸ್ವಾಮಿ ‌ಅಶ್ಲೀಲ‌ ಸಂದೇಶ ಕಳಿಸಿದ್ದʼ ಎಂದು ಉಲ್ಲೇಖ ಮಾಡಿದ್ದರು. ಆ ಸುದ್ದಿ ಎಲ್ಲಾ ಮಾಧ್ಯಮಗಳಲ್ಲಿ, ‌ಪತ್ರಿಕೆಗಳಲ್ಲಿ‌ ಪ್ರಸಾರವಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ‌ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

“ನೀವು ಸುದ್ದಿಗೋಷ್ಠಿಯಲ್ಲಿ ದರ್ಶನ್ ಪತ್ನಿ ಪವಿತ್ರ ಗೌಡ ಎಂದು ಹೇಳಿಕೆ‌ ನೀಡಿದ್ದೀರಿ. ದರ್ಶನ್‌ಗೆ ನಾನು ಕಾನೂನುಬದ್ಧವಾಗಿ ವಿವಾಹವಾದ ಏಕೈಕ ಪತ್ನಿ. ನಮ್ಮ ವಿವಾಹವು 19.05.2003ರಂದು ಧರ್ಮಸ್ಥಳದಲ್ಲಿ ಅದ್ಧೂರಿಯಾಗಿ ನೆರವೇರಿತು. ಪವಿತ್ರ ಗೌಡ ನನ್ನ ಪತಿ ದರ್ಶನ್ ಸ್ನೇಹಿತೆ ನಿಜ. ಆದರೆ ಅವರು ದರ್ಶನ್ ಅವರ ಹೆಂಡತಿಯಲ್ಲ ಎಂದು ದಯವಿಟ್ಟು ಗಮನಿಸಿ” ಎಂದು ವಿಜಯಲಕ್ಷ್ಮಿ ಬರೆದಿದ್ದಾರೆ.

ಇದನ್ನೂ ಓದಿ: Actor Darshan: ಪವಿತ್ರಾ ಗೌಡ ಮತ್ತು ದರ್ಶನ್‌ ಸಂಬಂಧ ಅದಲ್ಲ: ಕಮಿಷನರ್‌ಗೆ ಪತ್ರ ಬರೆದ ವಿಜಯಲಕ್ಷ್ಮಿ

Continue Reading

ಪ್ರಮುಖ ಸುದ್ದಿ

CM Siddaramaiah: ʼಮುಡಾದ ತಪ್ಪು, ನಾನು ಸಿಎಂ ಅಂತ ಸೈಟ್‌ ಬಿಡೋಕೆ ಆಗುತ್ತಾ?ʼ ಸಿಎಂ ಸಿದ್ದರಾಮಯ್ಯ

CM Siddaramaiah: ʼಬಿಜೆಪಿಯವರಿಗೆ ಏನೂ ವಿಷಯ ಇಲ್ಲ. ಅವರು ಆರ್. ಎಸ್.ಎಸ್ ಹೇಳಿದಂತೆ ಕೇಳ್ತಾರೆ. ಮುಡಾದಲ್ಲಿ ಏನು ವಿಷಯ ಇದೆ? ಬಿಜೆಪಿ ಅವರೇ ಕೊಟ್ಟು ಅವರೇ ಆರೋಪ ಮಾಡಿದರೆ, ಕಾನೂನು ಬಾಹಿರ ಎಂದು ಹೇಳಿದರೆ ಹೇಗೆ? ನಾನೇಕೆ ರಾಜೀನಾಮೆ ನೀಡಲಿ?’ ಎಂದು ಸಿಎಂ ಪ್ರಶ್ನಿಸಿದರು.

VISTARANEWS.COM


on

cm siddaramaiah MUDA scam
Koo

ಬೆಂಗಳೂರು: ಮುಡಾ (MUDA) ಸೈಟ್‌ ಪ್ರಕರಣದ ಬಗ್ಗೆ ಬಿಜೆಪಿ (BJP) ನಡೆಸುತ್ತಿರುವ ಆರೋಪಗಳ ಸುರಿಮಳೆ ಹಾಗೂ ಪ್ರತಿಭಟನೆಗೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಸಚಿವ ಸಂಪುಟ (Cabinet) ಸಭೆಯಲ್ಲಿ ಸ್ಪಷ್ಟನೆ ನೀಡಿದರು. ಮುಡಾ ಹಗರಣದ ಕುರಿತು ಕೇಳಿಬರುತ್ತಿರುವ ಆರೋಪಗಳೆಲ್ಲ ಊಹಾಪೋಹಗಳು ಎಂದು ಸ್ಪಷ್ಟನೆ ನೀಡಿದರಲ್ಲದೆ, ʼನಾನು ಸಿಎಂ ಅನ್ನುವ ಕಾರಣಕ್ಕೆ ನನ್ನ ಸೈಟ್‌ ಬಿಡೋಕೆ ಆಗುತ್ತಾ?ʼ ಎಂದು ಪ್ರಶ್ನಿಸಿದರು.

ʼಕಾನೂನಿನ ಅನ್ವಯ ಪರಿಹಾರ ರೂಪದ ನಿವೇಶನ ಪಡೆದಿರುವುದು ಸ್ಪಷ್ಟ. ಬಿಜೆಪಿ ಸರ್ಕಾರದ ಕಾಲದಲ್ಲೇ ಇದರ ನಡಾವಳಿ ಆಗಿದೆ, ಪರಿಹಾರಕ್ಕೆ ಒಪ್ಪಿಗೆ ಸಿಕ್ಕಿದೆ. ನಮ್ಮ ಸರ್ಕಾರ ಬಂದ ಮೇಲೆ ಅಂದರೆ 2023, ಅಕ್ಟೋಬರ್‌ನಲ್ಲೇ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದ್ದು, ಅದಕ್ಕೂ‌ ಮುನ್ನವೇ ಪರಿಹಾರ ರೂಪದ ನಿವೇಶನ ನೀಡಲಾಗಿದೆ. ಯಾವುದೇ ಕಾನೂನು ಮೀರಿಲ್ಲ. ನಮ್ಮ ಮೇಲೆ ಬರುತ್ತಿರುವ ಆರೋಪಗಳೆಲ್ಲವೂ ಸುಳ್ಳುʼ ಎಂದು ಕ್ಯಾಬಿನೆಟ್‌ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ನಂತರ ಅವರು ಮಾಧ್ಯಮಗಳ ಮುಂದೆ ಮಾತನಾಡಿದರು. ʼಬಿಜೆಪಿಯವರಿಗೆ ಏನೂ ವಿಷಯ ಇಲ್ಲ. ಅವರು ಆರ್. ಎಸ್.ಎಸ್ ಹೇಳಿದಂತೆ ಕೇಳ್ತಾರೆ. ಮುಡಾದಲ್ಲಿ ಏನು ವಿಷಯ ಇದೆ? ಬಿಜೆಪಿ ಅವರೇ ಕೊಟ್ಟು ಅವರೇ ಆರೋಪ ಮಾಡಿದರೆ, ಕಾನೂನು ಬಾಹಿರ ಎಂದು ಹೇಳಿದರೆ ಹೇಗೆ? ನಾನೇಕೆ ರಾಜೀನಾಮೆ ನೀಡಲಿ? ಎಂದು ಸಿಎಂ ಪ್ರಶ್ನಿಸಿದರು.

ನಾವೇನು ಇಂತಹ ಕಡೆ ಕೊಡಿ ಎಂದು ಕೇಳಿದ್ದೇವಾ? ನಾವು ಇಂತಹ ಕಡೆ ಎಂದು ಕೇಳಿಲ್ಲ. ಅದು ಕೊಟ್ಟಿರುವುವರ ತಪ್ಪು. ಹಾಗಾದರೆ ಪರಿಹಾರ ಕೊಟ್ಟು ಬಿಡಲಿ. 62 ಸಾವಿರ ಕೋಟಿ ಬೆಲೆ ಬಾಳುವ ಜಮೀನು ಹೋಗಿದೆ. ನಮ್ಮ ಕೇಸ್ ಪ್ರತ್ಯೇಕ. ನನಗೆ ಕಡಿಮೆ ಸಿಕ್ಕಿದೆ. ನಾನು ಸಿಎಂ ಅಂತ ಸುಮ್ಮನೆ ಬಿಡಲು ಆಗುತ್ತಾ?ʼ ಎಂದು ಪ್ರಶ್ನಿಸಿದರು.

ʼಮುಡಾದವರು ನಮ್ಮ 3 ಎಕರೆ 16 ಗುಂಟೆ ಜಮೀನು ಒತ್ತುವರಿ ಮಾಡಿದ್ದಾರೆ. ಕಾನೂನು ಬಾಹಿರವಾಗಿ ಒತ್ತುವರಿ ಮಾಡಿದ್ದಾರೆ ಅವರು. ನಮ್ಮ ಜಮೀನು ಸೈಟ್, ಪಾರ್ಕ್ ಮಾಡಿದ್ದಾರೆ. ಇದು ಮುಡಾದ ತಪ್ಪು. ಆ ತಪ್ಪನ್ನು ಮುಡಾದವರು ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ನಾನು ಸಿಎಂ ಅಂತ ಬಿಡಲು ಆಗುತ್ತಾ? ನಾವು 50:50 ನಿಯಮ ಒಪ್ಪಿಕೊಂಡಿದ್ದೇವೆ. ನಾವೇನು ಇಂತಹ ಕಡೆ ಕೊಡಿ ಎಂದು ಕೇಳಿಲ್ಲ. ನಾವೇನು ವಿಜಯನಗರದ 3-4ನೇ ಹಂತದಲ್ಲಿ ಕೊಡಿ ಎಂದು ಕೇಳಿಲ್ಲ. ಅಲ್ಲಿ ಜಾಗ ಇಲ್ಲ ಅಂತ ಇಲ್ಲಿ ಕೊಟ್ಟಿದ್ದಾರೆ. ಈಗ ಕೊಟ್ಟ ಸೈಟ್ ದರ ಎಷ್ಟಿದೆ ಎಂದು ಕೂಡ ನನಗೆ ಗೊತ್ತಿಲ್ಲ. ನಂತರ 50:50 ರದ್ದು ಮಾಡಿ ಎಂದು ಆದೇಶ ಮಾಡಿದ್ದಾರೆ. ಹಾಗಾದರೆ ಸೈಟ್ ವಾಪಸ್ ತೆಗೆದುಕೊಂಡು ಪರಿಹಾರ ನೀಡಲಿ. ನನಗೆ 62 ಕೋಟಿ ಪರಿಹಾರ ಕೊಟ್ಟು ಬಿಡಲಿ. ಒಂದು ಎಕರೆಗಿಂತ ಕಡಿಮೆ ಕೊಟ್ಟಿದ್ದಾರೆ. ಸಚಿವರು ಯಾವ ಫೈಲೂ ತಂದಿಲ್ಲ. ಇದೆಲ್ಲ ರಾಜಕೀಯ ಪ್ರೇರಿತ ಆರೋಪಗಳುʼ ಎಂದು ಸಿಎಂ ವಿವರಿಸಿದರು.

ಇದನ್ನೂ ಓದಿ: MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

Continue Reading

ಬೆಂಗಳೂರು

Bengaluru News: ಬೆಂಗಳೂರಿನಲ್ಲಿ ಜು.5ರಂದು ಸತ್ಸಂಗ ಕಾರ್ಯಕ್ರಮ

Bengaluru News: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಇದೇ ಜು.5 ರಂದು ಶುಕ್ರವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಬಸವೇಶ್ವರ ನಗರದ ಗಂಗಮ್ಮ ತಿಮ್ಮಯ್ಯ ಕನ್ವೆನ್‌ಷನ್‌ ಹಾಲ್‌ನಲ್ಲಿ ಸತ್ಸಂಗ (ಸದ್ವಿಚಾರಗಳ ಸಂಪ್ರೋಕ್ಷಣೆ) ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Satsang programme on 5th July in Bengaluru
Koo

ಬೆಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಜು.5ರಂದು ಶುಕ್ರವಾರ ಸಂಜೆ 5 ಗಂಟೆಗೆ ನಗರದ (Bengaluru News) ಬಸವೇಶ್ವರ ನಗರದ ಗಂಗಮ್ಮ ತಿಮ್ಮಯ್ಯ ಕನ್ವೆನ್‌ಷನ್‌ ಹಾಲ್‌ನಲ್ಲಿ ಸತ್ಸಂಗ (ಸದ್ವಿಚಾರಗಳ ಸಂಪ್ರೋಕ್ಷಣೆ) ಕಾರ್ಯಕ್ರಮ ಏರ್ಪಡಿಸಲಾಗಿದೆ.

ಇದನ್ನೂ ಓದಿ: Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಸೌಮ್ಯನಾಥ ಸ್ವಾಮೀಜಿ ಉಪಸ್ಥಿತರಿರುವರು.

ಇದನ್ನೂ ಓದಿ: Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

ಬ್ರಹ್ಮಚಾರಿ ಶ್ರೀ ಸಾಯಿ ಕೀರ್ತಿನಾಥ್‌ಜಿ ಮತ್ತು ತಂಡದವರಿಂದ ಭಜನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಕ್ರಮಣ ಗುರುವಂದನ ಬಳಗ ಕಾರ್ಯಕ್ರಮ ಆಯೋಜನೆ ಮತ್ತು ನಿರ್ವಹಿಸಲಿದ್ದಾರೆ.

Continue Reading
Advertisement
Kannada Serials TRP Gowri in trp puttakkana makkalu number 1
ಕಿರುತೆರೆ20 mins ago

Kannada Serials TRP: ಟ್ರ್ಯಾಕ್‌ಗೆ ಮರಳಿದ `ಶ್ರೀಗೌರಿ’; ಟಿಆರ್​ಪಿಯಲ್ಲಿ ‘ಪುಟ್ಟಕ್ಕನ ಮಕ್ಕಳು’ ನಂಬರ್‌ 1!

Arecanut Import
ಕೃಷಿ23 mins ago

Arecanut Import: ಅಕ್ರಮ ಅಡಿಕೆ ಆಮದು ರೋಗಕ್ಕೆ ಔಷಧವೇ ಇಲ್ಲವೇ?

Team India
ಕ್ರೀಡೆ33 mins ago

Team India: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ; ಮುಂಬೈ ತಲುಪಿದ ಆಟಗಾರರು

ಪ್ರಮುಖ ಸುದ್ದಿ37 mins ago

Virat kohli: ಏಕಾಂಗಿಯಾಗಿ ಎದುರಾಳಿಯನ್ನು ಧ್ವಂಸಗೊಳಿಸುವ ವೀರ ಹೋರಾಟಗಾರ ವಿರಾಟ್​​​

Om Birla
ದೇಶ46 mins ago

Om Birla: ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಸಂಸದರು ಘೋಷಣೆ ಕೂಗುವಂತಿಲ್ಲ; ಹೊಸ ನಿಯಮದಲ್ಲಿ ಏನಿದೆ?

Hathras Stampede
ದೇಶ48 mins ago

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ; 6 ಜನರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

wild animal attack
ಬೆಂಗಳೂರು ಗ್ರಾಮಾಂತರ56 mins ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Agnipath Scheme
ದೇಶ56 mins ago

Agnipath Scheme: ಅಗ್ನಿವೀರರಿಗೆ ಪರಿಹಾರ ಸಿಕ್ಕಿಲ್ಲ ಎಂದ ರಾಹುಲ್‌ ಗಾಂಧಿಗೆ ಭಾರತೀಯ ಸೇನೆ ತಿರುಗೇಟು

Robbery Video
Latest58 mins ago

Robbery Video: ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

Sumalatha Ambareesh Reaction about darshan
ಸ್ಯಾಂಡಲ್ ವುಡ್1 hour ago

Sumalatha Ambareesh: ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದ ಸುಮಲತಾ; ದೊಡ್ಡ ಮಗನ ಬಗ್ಗೆ ಹೇಳಿದಿಷ್ಟು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

wild animal attack
ಬೆಂಗಳೂರು ಗ್ರಾಮಾಂತರ56 mins ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ3 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ3 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ4 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ5 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

ಟ್ರೆಂಡಿಂಗ್‌