Site icon Vistara News

Bike Accident: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಸಾವು, ಇಬ್ಬರಿಗೆ ಗಾಯ

Bike Accident

ಬಾಗಲಕೋಟೆ: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಾಯಗಳಾಗಿರುವ ಘಟನೆ (Bike Accident) ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಬಳಿ ನಡೆದಿದೆ. ಸಿದ್ದರಾಮಯ್ಯ ಸಂಗಯ್ಯ ಹಿಡಕಲ್ಲ (60) ಮೃತ ದುರ್ದೈವಿ.

ಟಿವಿಎಸ್‌ ಸೂಪರ್ ಎಕ್ಸೆಲ್‌ನಲ್ಲಿ ಜಮಖಂಡಿಯಿಂದ ಮಧುರಖಂಡಿಗೆ ಸಿದ್ದರಾಮಯ್ಯ ಹೊರಟಿದ್ದರು. ಈ ವೇಳೆ ತೇರದಾಳದಿಂದ ಜಮಖಂಡಿ ಕಡೆ ಬರುತ್ತಿದ್ದ ತಾಯಿ, ಮಗನಿದ್ದ ಹೀರೋ ಸ್ಪ್ಲೆಂಡರ್ ಪ್ಲಸ್‌ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಸ್ಥಳದಲ್ಲೇ ಎಕ್ಸೆಲ್‌ ಸವಾರ ಸಿದ್ದರಾಮಯ್ಯ ಹಿಡಕಲ್ಲ ಮೃತಪಟ್ಟಿದ್ದಾರೆ.

ಮತ್ತೊಂದು ಬೈಕ್‌‌‌ನಲ್ಲಿದ್ದ ಗಾಯಾಳುಗಳು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

Road Accident : ಹೆದ್ದಾರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ ‌ವೃದ್ಧ ಸಾವು; ಯುವಕನ ತಲೆ ಮೇಲೆ ಹರಿದ ಟ್ಯಾಂಕರ್‌

ಬೆಂಗಳೂರು: ವಾಟರ್ ಟ್ಯಾಂಕರ್ ವಾಹನಕ್ಕೆ ಯುವಕನೊರ್ವ (Road Accident) ಬಲಿಯಾಗಿದ್ದಾನೆ. ಕಿರಣ್ ಕುಮಾರ್ (21) ಮೃತಪಟ್ಟವನು. ಬೆಂಗಳೂರಿನ ಕೊತ್ತನೂರು ದಿಣ್ಣೆ ಆರ್‌ಬಿಐ ಲೇಔಟ್‌ನಲ್ಲಿ ಬೆಳಗ್ಗೆ 9.30ಕ್ಕೆ ಈ ಅಪಘಾತ ಸಂಭವಿಸಿದೆ.

ಬೇಕರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್‌ ಕುಮಾರ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ನಿಂದ ಕೆಳಗೆ ಬಿದ್ದ ಕಿರಣ್‌ ತಲೆ ಮೇಲೆ ಟ್ಯಾಂಕರ್‌ ಹರಿದಿದೆ. ಅಪಘಾತದಲ್ಲಿ ಕಿರಣ್‌ ಕುಮಾರ್‌ ತಲೆ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೆ.ಎಸ್.ಲೇಔಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಎಸ್‌ ಲೇಔಟ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಾಟರ್‌ ಟ್ಯಾಂಕರ್‌ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

ಸ್ಕೂಟರ್‌ಗೆ ಗುದ್ದಿದ ಕಾರು; ಹಾರಿ ಬಿದ್ದ ವೃದ್ಧ ಸ್ಪಾಟ್‌ ಡೆತ್‌

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೆ ವೃದ್ಧನೊರ್ವ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಡಿವೈಡರ್ ಬಳಿ ರಸ್ತೆ ದಾಟುವಾಗ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಾರಿ ಬಿದ್ದ ವೃದ್ಧ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು ಗ್ರಾಮಾಂತರದ ದಾಬಸ್ ಪೇಟೆ ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಮೇಶ್ವರ ಗೇಟ್ ಬಳಿ ಅಪಘಾತ ನಡೆದಿದೆ. ನಾರನಹಳ್ಳಿ ಗ್ರಾಮದ ಮಾಳಪ್ಪ (80) ಮೃತ ದುರ್ದೈವಿ. ರಾಮೇಶ್ವರ ಗೇಟ್‌ನಲ್ಲಿ ರಸ್ತೆ ದಾಟುವಾಗ ದಾಬಸ್ ಪೇಟೆ ಕಡೆಯಿಂದ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೆ ಮಾಳಪ್ಪ ಸಾವನ್ನಪ್ಪಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

Exit mobile version